Updated News From Kaup
ಉಡುಪಿ ಜಿಲ್ಲಾ ರಜತ ಮಹೋತ್ಸವ : ಮ್ಯಾರಥಾನ್ ಓಟಕ್ಕೆ ಬಂಟಕಲ್ಲ್ ನಲ್ಲಿ ಸ್ವಾಗತ
Posted On: 24 Aug 2022, 07:39 PM
ಬಂಟಕಲ್ಲು : ಉಡುಪಿ ಜಿಲ್ಲೆ ರಚನೆಯಾಗಿ ೨೫ ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಅದ್ದೂರಿ ಆಚರಣೆಯ ಅಂಗವಾಗಿ ಕಾರ್ಕಳದ ಭುವನೇಂದ್ರ ಕಾಲೇಜಿನಿಂದ ಬೆಳ್ಮಣ್ ವರೆಗೆ ಮ್ಯಾರಥಾನ್ ಓಟ ಪ್ರಾರಂಭಗೊಂಡಿದ್ದು, ಬುಧವಾರ ಸಂಜೆ ಬಂಟಕಲ್ಲು ಮಧ್ವ ವಾದಿರಾಜ ತಾಂತ್ರಿಕ ಕಾಲೇಜು ಎದುರು ಅದ್ದೂರಿಯಾಗಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಬಂಟಕಲ್ಲು ಮಧ್ವ ವಾದಿರಾಜ ತಾಂತ್ರಿಕ ಕಾಲೇಜು ಪ್ರಾಂಶುಪಾಲ ಡಾ. ತಿರುಮಲೇಶ್ವರ ಭಟ್, ಬಿಜೆಪಿ ನಾಯಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ವೀಣಾ ಶೆಟ್ಟಿ. ಗೀತಾಂಜಲಿ ಸುವರ್ಣ, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಗಿರೀಶ್ ಕಾಂಚನ್, ಅರುಣ್ ಶೆಟ್ಟಿ ಪಾದೂರು, ಶ್ರೀ ಕಾಂತ್ ನಾಯಕ್, ನವೀನ್ ಶೆಟ್ಟಿ ಕುತ್ಯಾರು, ಸಂಸ್ಥೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಳತ್ತೂರು : ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ ಸಭೆ
Posted On: 24 Aug 2022, 05:49 PM
ಕಳತ್ತೂರು : ಇಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿಯ ಸಭೆಯು ಗ್ರಾಮ ಆರೋಗ್ಯ ಸಮಿತಿ ಅಧ್ಯಕ್ಷ ಜನಾರ್ಧನ್ ಆಚಾರ್ಯರವರ ಅಧ್ಯಕ್ಷತೆಯಲ್ಲಿ ಜರಗಿತು. ಸಮಾಜಸೇವಾ ವೇದಿಕೆಯ ಅಧ್ಯಕ್ಷ ಫಾರೂಕ್ ಚಂದ್ರನಗರ ರವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭ ಅವರು ಮಾತನಾಡಿ ಕಳತ್ತೂರು ಚಂದ್ರ ನಗರದ ಆರೋಗ್ಯ ಕೇಂದ್ರಗಳಿಗೆ ಕೊರೋನಾ ಸಂದರ್ಭ ಸಂಸ್ಥೆ ಸಹಕಾರ ನೀಡಿದ್ದು ಮುಂದಿನ ದಿನಗಳಲ್ಲಿಯೂ ಸಹಕಾರ ಮುಂದುವರಿಯಲಿದೆ ಎಂದರು. ಈ ಸಂದರ್ಭ ಗ್ರಾಮ ಪಂಚಾಯತ್ ಸದಸ್ಯೆ ದಿವ್ಯ ಶೆಟ್ಟಿಗಾರ್, ಪ್ರಾಥಮಿಕ ಆರೋಗ್ಯ ಕೇಂದ್ರದ ದಾದಿ ಸುಧಾವತಿ, ಜಾನ್ಸನ್ ಕರ್ಕಡ, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶ್ರೀ ಶಕ್ತಿ ಗುಂಪಿನ ಸದಸ್ಯರು, ಗ್ರಾಮ ನೈರ್ಮಲ್ಯ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ಹೆಜಮಾಡಿ : ತೆಂಗಿನ ಮರ ಹತ್ತುವವರಿಗೆ ಕೇರಾ ಸುರಕ್ಷಾ ವಿಮೆ ಬಗ್ಗೆ ಮಾಹಿತಿ ಹಾಗೂ ನೋಂದಾವಣಿ ಕಾರ್ಯಕ್ರಮ
Posted On: 23 Aug 2022, 08:57 PM
ಹೆಜಮಾಡಿ : ಗ್ರಾಮ ಪಂಚಾಯತ್ ಹೆಜಮಾಡಿ ಹಾಗೂ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಉಡುಪಿ ಇವರ ಸಹಯೋಗದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ 'ತೆಂಗಿನ ಮರ ಹತ್ತುವವರಿಗೆ ಕೇರಾ ಸುರಕ್ಷಾ ವಿಮೆ' ಬಗ್ಗೆ ಮಾಹಿತಿ ಹಾಗೂ ನೋಂದಾವಣಿ ಕಾರ್ಯಕ್ರಮಕ್ಕೆ ಮಂಗಳವಾರ ಶಾಸಕರಾದ ಲಾಲಾಜಿ ಆರ್ ಮೆಂಡನ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಾಂಡುರಂಗ ಕರ್ಕೇರ, ಉಪಾಧ್ಯಕ್ಷೆ ಪವಿತ್ರ ಗಿರೀಶ್, ಜಿಲ್ಲಾ ಪಂಚಾಯತ್ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಭುವನೇಶ್ವರಿ, ಹೆಜಮಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇನಾಯತ್ ಅಲಿ, ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡುಬಿದ್ರಿ ಪಿ. ಕೆ. ಸದಾನಂದ, ನಿವೃತ್ತ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಸಂಜೀವ ನಾಯ್ಕ್, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಹೇಮಂತ್ ಕುಮಾರ್, ಕಾರ್ಯಕ್ರಮದ ಸಂಯೋಜಕ ಪ್ರಾಣೇಶ್ ಹೆಜಮಾಡಿ ಹಾಗೂ ಗ್ರಾಮ ಪಂಚಾಯತ್ ಸದಸ್ಯರು, ಇಲಾಖಾ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಬ್ಯಾಂಕ್ ಆಫ್ ಬರೋಡ ಕಾಪು ಶಾಖೆ : ಬಿ.ಒ.ಬಿ ವಲ್ಡ್೯ ಆಪ್ ಮೇಳಕ್ಕೆ ಚಾಲನೆ
Posted On: 23 Aug 2022, 08:46 PM
ಕಾಪು : ಬ್ಯಾಂಕ್ ಆಫ್ ಬರೋಡ ಕಾಪು ಬ್ರಾಂಚ್ ವತಿಯಿಂದ ನಡೆದ ಬಿ.ಒ.ಬಿ ವಲ್ಡ್೯ ಆಪ್ ಮೇಳಕ್ಕೆ ಉಡುಪಿ ರೀಜಿನಲ್ ಅಧಿಕಾರಿ ರೋಹಿತ್ ಸಿನ್ಹಾ ಕಾಪು ಬ್ಯಾಂಕ್ ಆಫ್ ಬರೋಡ ಕಛೇರಿಯಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬ್ಯಾಂಕ್ನ ಗ್ರಾಹಕರುಗಳಾದ ದಿವಾಕರ.ಬಿ.ಶೆಟ್ಟಿ ಕಳತ್ತೂರು, ಸಮಾಜ ಸೇವಕ ಮೊಹಮ್ಮದ್ ಫಾರೂಕ್ ಚಂದ್ರನಗರ, ಕಾಪು ಉದ್ಯಮಿ ಎಚ್.ಅಬ್ದುಲ್ಲಾ, ಬ್ಯಾಂಕ್ನ ಪ್ರಬಂಧಕರಾದ ನಮೃತ ಸಿನ್ಹಾ, ಸಚಿನ್, ಬಬಿತ, ಶ್ರೀನಿಧಿ, ರೇವತಿ, ಧನ್ಯ ಹಾಗೂ ಮುಂತಾದವರು ಉಪಸ್ಥಿತರಿದ್ದರು.
ಪಣಿಯೂರು : ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಜೀರ್ಣೋದ್ಧಾರದ ಮನವಿ ಪತ್ರ ಬಿಡುಗಡೆ
Posted On: 23 Aug 2022, 06:31 PM
ಪಣಿಯೂರು : ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಸಮಗ್ರ ಜೀರ್ಣೋದ್ಧಾರದ ಸಂಕಲ್ಪದೊಂದಿಗೆ ಹೂವಿನ ಪೂಜೆ ಮತ್ತು ಜೀರ್ಣೋದ್ಧಾರ ಮನವಿ ಪತ್ರ ಬಿಡುಗಡೆ ಸಮಾರಂಭವು ಮಂಗಳವಾರ ಪಣಿಯೂರು ಬಬ್ಬುಸ್ವಾಮಿ ದೈವಸ್ಥಾನದ ಆವರಣದಲ್ಲಿ ನಡೆಯಿತು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅವರು ಮನವಿ ಪತ್ರ ಬಿಡುಗಡೆಗೊಳಿಸಿದರು. ಈ ಸಂದರ್ಭ ಶಾಸಕ ಲಾಲಾಜಿ ಮೆಂಡನ್ ಮಾತನಾಡಿ, ಶಾಸಕರ ಇತಿಮಿತಿಯೊಳಗೆ ಸರಕಾರದಲ್ಲಿ ಸಿಗುವ ಅನುದಾನ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯನ್ನ ಮಾಡುವುದಾಗಿ ಭರವಸೆ ನೀಡಿದರು. ಪಣಿಯೂರು ಬಬ್ಬುಸ್ವಾಮಿ ದೈವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಅದಾನಿ ಸಮೂಹದ ಅಧ್ಯಕ್ಷ ಕಿಶೋರ್ ಆಳ್ವ, ಉದ್ಯಮಿ ಸುರೇಶ್ ಪಿ. ಶೆಟ್ಟಿ ಗುರ್ಮೆ, ದ. ಕ. ಮತ್ತು ಉಡುಪಿ ಜಿಲ್ಲಾ ಮೀನುಗಾರಿಕಾ ಫೆಡರೇಷನ್ ಅಧ್ಯಕ್ಷ ಯಶ್ಪಾಲ್ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಬೆಟ್ಟಿಗೆ ವೆಂಕಟರಾಜ ತಂತ್ರಿ, ಗುತ್ತಿನಾರ್ ಯೋಗೀಶ್ ಶೆಟ್ಟಿ ಪಣಿಯೂರುಗುತ್ತು, ಪ್ರಫುಲ್ಲ ಶೆಟ್ಟಿ ಎಲ್ಲೂರುಗುತ್ತು, ಕಾರ್ಯಾಧ್ಯಕ್ಷ ಕರುಣಾಕರ ಶೆಟ್ಟಿ ಪಣಿಯೂರುಗುತ್ತು, ಕೊರಗ ಶೆಟ್ಟಿ ಬುಳಿಬೆಟ್ಟುಗುತ್ತು, ದೇವಿಪ್ರಸಾದ್ ಶೆಟ್ಟಿ ಬಡಕರಗುತ್ತು, ಜಗನ್ನಾಥ ಪೂಜಾರಿ, ಸುರೇಂದ್ರ ಪಣಿಯೂರು, ಮುಂಬಯಿ ಸಮಿತಿ ಅಧ್ಯಕ್ಷ ಸುಕುಮಾರ್ ಶೆಟ್ಟಿ ನಡಿಮನೆ ಮೊದಲಾದವರು ಉಪಸ್ಥಿತರಿದ್ದರು. ಡಾ. ದೇವಿಪ್ರಸಾದ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸತೀಶ್ ಶೆಟ್ಟಿ ಗುಡ್ಡೆಚ್ಚಿ ನಿರೂಪಿಸಿದರು. ಕರುಣಾಕರ ಶೆಟ್ಟಿ ವಂದಿಸಿದರು.
ಆಗಸ್ಟ್ 24 : ರವಿ ಕೃಷ್ಣಾ ರೆಡ್ಡಿ ನೇತೃತ್ವದ ಜನ ಚೈತನ್ಯ ಯಾತ್ರೆ ಉಡುಪಿಗೆ
Posted On: 23 Aug 2022, 06:12 PM
ಉಡುಪಿ : ಭೃಷ್ಟಾಚಾರ ಮುಕ್ತ ಕರ್ನಾಟಕ ಅಭಿಯಾನದ ಅಂಗವಾಗಿ ಭೃಷ್ಟಾಚರದ ವಿರುದ್ಧ ಜಾಗೃತಿ ಮಾಡುತ್ತಿರುವ ರವಿ ಕೃಷ್ಣಾ ರೆಡ್ಡಿ ನೇತೃತ್ವದ ಜನ ಚೈತನ್ಯ ಯಾತ್ರೆ ಉಡುಪಿಗೆ ಬರಲಿದೆ. ಉಡುಪಿಯ ನಗರ ಸಭೆಯ ಎದುರಿಗೆ ಆಗಸ್ಟ್ 24, ಮಧ್ಯಾಹ್ನ 2:30 ಗಂಟೆಗೆ ಭೃಷ್ಟಾಚಾರ ಮುಕ್ತ ಕರ್ನಾಟಕ ಅಭಿಯಾನ ನಡೆಯಲಿದೆ. ಸಮಾನ ಮನಸ್ಕರೆಲ್ಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಭ್ರಷ್ಟಾಚಾರ ಮುಕ್ತ ಕರ್ನಾಟಕಕ್ಕೆ ಕೈ ಜೋಡಿಸಬೇಕಾಗಿಕರ್ನಾಟಕ ರಕ್ಷಣಾ ಸಮಿತಿ (KRS) ಉಡುಪಿ ಜಿಲ್ಲಾ ಘಟಕ ಪ್ರಕಟನೆಯಲ್ಲಿ ತಿಳಿಸಿದೆ.
ಎಸ್ಕೆಪಿಎ ಕಾಪು ವಲಯ :ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಇಬ್ಬರು ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ
Posted On: 22 Aug 2022, 08:48 PM
ಪಡುಬಿದ್ರಿ : ಸೌತ್ ಕೆನರಾ ಫೋಟೋಗ್ರಾಫರ್ಸ್ ಎಸೋಸಿಯೇಶನ್ನ ಕಾಪು ವಲಯದ ವತಿಯಿಂದ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ಪಡುಬಿದ್ರಿಯ ಎಸ್ಎಸ್ ಸಭಾಭವನದಲ್ಲಿ ಕಾಪು ವಲಯದ ಇಬ್ಬರು ಹಿರಿಯ ಸದಸ್ಯರಾದ ಬೆಳ್ಮಣ್ನ ವೆಂಕಟ್ರಾಯ ಕಾಮತ್ ದಂಪತಿ ಹಾಗೂ ಪಡುಬಿದ್ರಿಯ ಕರುಣಾಕರ್ ನಾಯಕ್ ದಂಪತಿಯನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಪತ್ರಕರ್ತ ರಾಮಚಂದ್ರ ಆಚಾರ್ಯ ಮಾತನಾಡಿ, ಛಾಯಾಗ್ರಹಣದ ಹಿಂದಿನ ದಿನಗಳನ್ನು ಛಾಯಾಗ್ರಾಹಕರು ನೆನಪು ಮಾಡಬೇಕಿದೆ. ಪೋಲಿಸರು ಕೂಡಾ ಛಾಯಾಗ್ರಾಹಕರನ್ನು ಅವಲಂಭಿಸಬೇಕಾದ ಅನಿವಾರ್ಯ ಪರಿಸ್ಥಿತಿಯೂ ಇತ್ತು. ಛಾಯಾಗ್ರಾಹಕರಲ್ಲಿ ಉತ್ತಮ ಕಲಾವಿದನಿದ್ದು, ಅದನ್ನು ಗ್ರಹಿಸಬೇಕಿದೆ ಎಂದರು. ಕಾಪು ವಲಯ ಎಸ್ಕೆಪಿಎ ಅಧ್ಯಕ್ಷ ವಿನೋದ್ ಕಾಂಚನ್ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಗೌರವಾಧ್ಯಕ್ಷ ರವಿ ಕುಮಾರ್ ಕಟಪಾಡಿ, ಕೋಶಾಧಿಕಾರಿ ರಾಘವೇಂದ್ರ ಭಟ್ ಉಪಾಧ್ಯಕ್ಷ ಸಚಿನ್ ಉಚ್ಚಿಲ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಶ್ರೀನಿವಾಸ ಐತಾಳ್, ಜತೆ ಕಾರ್ಯದರ್ಶಿ ಪ್ರಕಾಶ್ ಹೆಜಮಾಡಿ ಮತ್ತಿತರರು ಉಪಸ್ಥಿತರಿದ್ದರು. ವಿನೋದ್ ಕಾಂಚನ್ ಸ್ವಾಗತಿಸಿದರು. ಶ್ರೀನಿವಾಸ ಐತಾಳ್ ನಿರೂಪಿಸಿದರು. ಸಚಿನ್ ಉಚ್ಚಿಲ ವಂದಿಸಿದರು.
ಉಡುಪಿ ಜಿಲ್ಲಾ ರಜತ ಮಹೋತ್ಸವ ವೆಬ್ಸೈಟ್ ; ಲಾಂಭನ ಬಿಡುಗಡೆ
Posted On: 22 Aug 2022, 08:37 PM
ಉಡುಪಿ : ಜಿಲ್ಲಾ ರಜತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮದ ವೆಬ್ಸೈಟ್ ಮತ್ತು ಲಾಂಛನವನ್ನು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಬಿಡುಗಡೆ ಮಾಡಲಾಯಿತು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ವೆಬ್ಸೈಟ್ ನ್ನು ಬಿಡುಗಡೆ ಮಾಡಿದರು. ಕಾರ್ಯಕ್ರಮದ ಲಾಂಛನವನ್ನು ಉಡುಪಿ ಶಾಸಕರಾದ ಕೆ.ರಘುಪತಿ ಭಟ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರಿಸ್ ಲಿಮಿಟೆಡ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಎಎಸ್ಪಿ ಎಸ್.ಟಿ ಸಿದ್ಧಲಿಂಗಪ್ಪ, ಕುಂದಾಪುರ ಸಹಾಯಕ ಕಮೀಷನರ್ ರಾಜು ಕೆ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಆಗಸ್ಟ್ 25 : ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ
Posted On: 22 Aug 2022, 08:19 PM
ಉಡುಪಿ : ಜಿಲ್ಲಾಡಳಿತ ಉಡುಪಿ ಇವರ ವತಿಯಿಂದ ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಆಗಸ್ಟ್ 25 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್, ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ಸಂಸದ ಬಿ.ವೈ.ರಾಘವೇಂದ್ರ, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರುಗಳಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ.ಆರ್.ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಆಯನೂರು ಮಂಜುನಾಥ, ಎಸ್.ಎಲ್.ಭೋಜೆಗೌಡ, ಡಾ||ತೇಜಸ್ವಿನಿ ಗೌಡ, ಮಂಜುನಾಥ ಭಂಡಾರಿ, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್ ಕಲ್ಮಾಡಿ, ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್, ವಿಧಾನಪರಿಷತ್ ಮಾಜಿ ಸಭಾಪತಿ ಕೆ.ಪ್ರತಾಪಚಂದ್ರ ಶೆಟ್ಟಿ, ಮಾಜಿ ಶಾಸಕ ಯು.ಆರ್.ಸಭಾಪತಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.
ಕಟಪಾಡಿ : ಯುವವಾಹಿನಿಯ ಅಂತರ್ ಘಟಕಗಳ ಸಾಂಸ್ಕೃತಿಕ ಕಾರ್ಯಕ್ರಮ ಡೆನ್ನಾನ ಡೆನ್ನನ ಸಂಪನ್ನ
Posted On: 21 Aug 2022, 11:54 PM
ಕಟಪಾಡಿ : ಅಂತರ್ ಜಿಲ್ಲೆಯಲ್ಲಿ 33 ಘಟಕಗಳನ್ನು ಹೊಂದಿರುವ ಯುವವಾಹಿನಿ ಸಂಸ್ಥೆಯ ಸದಸ್ಯರ ಪ್ರತಿಭೆ ಅನಾವರಣಗೊಳಿಸುವ ನಿಟ್ಟಿನಲ್ಲಿ ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಉಡುಪಿ ಯುವವಾಹಿನಿ ಘಟಕದ ಆತಿಥ್ಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ಅಂತರ್ ಘಟಕ ಸಾಂಸ್ಕೃತಿಕ ಕಾರ್ಯಕ್ರಮವಾಗಿರುವ ಡೆನ್ನಾನ ಡೆನ್ನನ ಆಗಸ್ಟ್ 21 ರಂದು ಕಟಪಾಡಿ ವಿಶ್ವನಾಥ ಕ್ಷೇತ್ರದ ಸಪ್ತಗಿರಿ ಸಭಾಗ್ರಹದಲ್ಲಿ ಸಂಪನ್ನಗೊಂಡಿತು. ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಮಾತನಾಡಿ ಡೆನ್ನಾನ ಡೆನ್ನನ ತುಳುನಾಡಿನ ಪ್ರತೀಕ. ಯುವ ಸಮುದಾಯದ ದೇಶ ನಮ್ಮದು. ಸಾಂಸ್ಕೃತಿಕ, ಕ್ರೀಡೆಯ ಮೂಲಕ ಯುವ ಸಮುದಾಯವನ್ನು ಆಕರ್ಷಿಸಲು ಸಾಧ್ಯ. ಬಿಲ್ಲವ ಸಮಾಜ ಕೋಟಿ ಚೆನ್ನಯ ಮತ್ತು ಕಾಂತಾಬಾರೆ ಬುದಬಾರೆಯರ ಆರಾಧನೆಯ ಮೂಲಕ ಸಂಘಟಿತರಾಗಬೇಕಾಗಿದೆ. ಸಮಾಜದ ಸಂಘಟನೆಗಳು ಸಮಾಜದ ಏಳಿಗೆಗೆ ಶ್ರಮಿಸಬೇಕಿದೆ ಎಂದರು. ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿ ಕೋಶಾಧಿಕಾರಿ ಪದ್ಮರಾಜ್ ಆರ್ ಮಾತನಾಡಿ ಸ್ಪರ್ಧೆಗಳಲ್ಲಿ ಭಾಗವಹಿಸುವುದು ಮುಖ್ಯ. ಬಹುಮಾನದ ವಿಚಾರವಲ್ಲ. ಸಾಂಸ್ಕೃತಿಕ ಕಾರ್ಯಕ್ರಮ ಸಂಘಟಿಸುವ ಮೂಲಕ ಯುವವಾಹಿನಿ ಗೆದ್ದಿದೆ. ಯುವವಾಹಿಯ ಮೂಲಕ ಯುವಕರನ್ನು ಸಮಾಜದ ಮುಖ್ಯವಾಹಿನಿಗೆ ತಂದು ನಾರಾಯಣಗುರುಗಳ ತತ್ವ ಸಂದೇಶ ಸಾರಬೇಕಾಗಿದೆ ಎಂದರು. ಡೆನ್ನಾನ ಡೆನ್ನನ -2022 ವಿಜೇತರು : ಯುವವಾಹಿನಿಯ 20 ಘಟಕಗಳು ಸ್ಪರ್ಧಿಸಿದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಘಟಕ ರೂ.25,000 ನಗದಿನೊಂದಿಗೆ ಪ್ರಥಮ ಬಹುಮಾನ, ಹಳೆಯಂಗಡಿ ಘಟಕ ರೂ.15,000 ನಗದಿನೊಂದಿಗೆ ದ್ವಿತೀಯ, ಪಣಂಬೂರು ಕುಳಾಯಿ ಘಟಕ ರೂ.10,000 ನಗದಿನೊಂದಿಗೆ ತೃತೀಯ ಬಹುಮಾನ ಪಡೆಯಿತು. ವೈಯಕ್ತಿಕವಾಗಿ ಶ್ರೇಷ್ಠ ನಿರ್ವಹಣೆ ನೀಡಿದ ನಿರ್ಮಿತಾ ಹಳೆಯಂಗಡಿ ಘಟಕ, ಶ್ರವಣ್ ಕುಮಾರ್ ಪಡುಬಿದ್ರಿ ಘಟಕ, ಚಂದ್ರಹಾಸ್ ಬೆಳ್ತಂಗಡಿ ಘಟಕ, ಯುವರಾಜ್ ಬೆಳ್ತಂಗಡಿ ಘಟಕ ಮತ್ತು ರಿದ್ವಿ ಡಿ ಪೂಜಾರಿ ಪಣಂಬೂರು ಕುಳಾಯಿ ಘಟಕ, ಮೋಕ್ಷ್ ಮಾಣಿ ಘಟಕ ಬಾಲ ನಟ ವಿಶೇಷ ಬಹುಮಾನ ಪಡೆದರು. ಆಗಸ್ಟ್ ತಿಂಗಳಲ್ಲಿ ನಡೆಸಲಾಗಿದ್ದ ಸಾಹಿತ್ಯ ಸೌರಭ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗಾಗಿ ಚಿತ್ರಕಲೆ, ಭಾಷಣ, ಪ್ರಬಂಧ ಏರ್ಪಡಿಸಲಾಗಿದ್ದು, ಇದರ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಸ್ಪರ್ಧೆಯಲ್ಲಿ ಸುಮಾರು 800 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿ ಗಳಾಗಿ ನಾರಾಯಣಗುರು ಅರ್ಬನ್ ಕೋ- ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾದ ಹರಿಶ್ಚಂದ್ರ ಅಮೀನ್, ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಗೀತಾಂಜಲಿ ಸುವರ್ಣ, ಉಡುಪಿ ಜಿಲ್ಲೆಯ ಬಿಲ್ಲವ ಪರಿಷತ್ ಅಧ್ಯಕ್ಷರಾದ ನವೀನ್ ಅಮೀನ್ ಶಂಕರಪುರ, ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ, ಯುವವಾಹಿನಿ ಕೇಂದ್ರ ಸಮಿತಿಯ ಸಂಘಟನಾ ಕಾರ್ಯದರ್ಶಿ ದೀಪಕ್ ಕುಮಾರ್ ಎರ್ಮಾಳ್, ಕಾಪು ಬಿಲ್ಲವರ ಸಹಾಯಕ ಸಂಘದ ಗೌರವ ಅಧ್ಯಕ್ಷರಾದ ಪ್ರಭಾಕರ್ ಪೂಜಾರಿ, ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಪ್ರವೀಣ್ ಡಿ.ಪೂಜಾರಿ, ಯುವವಾಹಿನಿ ಉಡುಪಿ ಘಟಕದ ಕಾರ್ಯದರ್ಶಿ ದಯಾನಂದ ಕರ್ಕೇರ, ಯುವವಾಹಿನಿ ಕೇಂದ್ರ ಸಮಿತಿಯ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ನಿರ್ದೇಶಕರಾದ ಜಗದೀಶ್ ಕುಮಾರ್ ಕಾರ್ಯಕ್ರಮ ಸಂಚಾಲಕರಾದ ಅಶೋಕ್ ಕೋಟ್ಯಾನ್, ಮಹಾಬಲ ಅಮೀನ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು ವಹಿಸಿದ್ದರು. ಯುವವಾಹಿನಿ ಉಡುಪಿ ಘಟಕದ ಅಧ್ಯಕ್ಷರಾದ ಪ್ರವೀಣ್ ಡಿ. ಪೂಜಾರಿ ಸ್ವಾಗತಿಸಿದರು. ರೇಣುಕಾ ಕಣಿಯೂರು ಮತ್ತು ಸಂತೋಷ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ಸಂಚಾಲಕರಾದ ಅಶೋಕ್ ಕೋಟ್ಯಾನ್ ಸ್ಪರ್ಧಾ ವಿಜೇತರ ಪಟ್ಟಿ ವಾಚಿಸಿದರು. ಯುವವಾಹಿನಿ ಕೇಂದ್ರ ಸಮಿತಿಯ ಕಾರ್ಯದರ್ಶಿ ಸತೀಶ್ ಕಿಲ್ಪಾಡಿ ವಂದಿಸಿದರು.
