Updated News From Kaup
ಕಾಪು ತಾಲೂಕು ಪಂಚಾಯತ್ನಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ
Posted On: 15 Aug 2022, 06:07 PM
ಕಾಪು : ಇಲ್ಲಿನ ತಾಲೂಕು ಪಂಚಾಯತ್ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ 76ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕಾಪು ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಕ ಅಧಿಕಾರಿ ಶಿವ ಪ್ರಕಾಶ್ ಎಸ್ ನೆರವೇರಿಸಿದರು. ಈ ಸಂದರ್ಭ ಅವರು ಎಲ್ಲರಿಗೂ ಶುಭಾಶಯಗಳನ್ನು ತಿಳಿಸುತ್ತಾ ಹಿರಿಯರ ಹಾಗೂ ಯೋಧರ ತ್ಯಾಗ ಬಲಿದಾನವನ್ನು ಸ್ಮರಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಚಂದ್ರಕಲಾರವರು ಎಲ್ಲರನ್ನು ಸ್ವಾಗತಿಸಿದರು. ಈಸಂದರ್ಭದಲ್ಲಿ ಕಾಪು ತಾಲೂಕು ಪಂಚಾಯತ್ ನ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಕಾಪು ತಾಲೂಕು ಆಡಳಿತದಿಂದ ಕಾಪುವಿನಲ್ಲಿ 76ನೇ ಸ್ವಾತಂತ್ರೋತ್ಸವ ದಿನಾಚರಣೆ
Posted On: 15 Aug 2022, 05:58 PM
ಕಾಪು : ಇಲ್ಲಿನ ತಾಲೂಕು ಮಟ್ಟದ ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವದ ಸ್ವಾತಂತ್ರೋತ್ಸವ ಸೋಮವಾರ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೈದಾನದಲ್ಲಿ ನಡೆಯಿತು. ಕಾಪು ತಹಸೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ಅವರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು. ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಅಧ್ಯಕ್ಷತೆ ವಹಿಸಿ ಶುಭಾಶಂಸನೆಗೈದರು. ಸಾಧಕರಾದ ನಾಟಿ ವೈದ್ಯೆ ಶಾಲಿನಿ, ಸಾಮಾಜಿಕ ಕಾರ್ಯಕರ್ತ ರವಿ ಕಟಪಾಡಿ, ನಿವೃತ್ತ ಹಿರಿಯ ಸೈನಿಕ ಜೆರೋಮ್ ಕೊಮೋಡೋರ್ ಕೆಸ್ತಲಿನೋ ಮತ್ತು ಜಾನಪದ ಕಲಾವಿದ ಗುರುಚರಣ್ ಪೊಲಿಪು ಇವರರನ್ನು ಸನ್ಮಾನಿಸಲಾಯಿತು. ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದವರನ್ನು ಸನ್ಮಾನಿಸಲಾಯಿತು. ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಶಿವಪ್ರಕಾಶ್, ಕಾಪು ಪುರಸಭಾಧಿಕಾರಿ ವೆಂಕಟೇಶ್ ನಾವಡ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಶಿಕ್ಷಣ ಇಲಾಖೆಯ ಶಂಕರ ಸುವರ್ಣ, ಕಾಪು ಪೋಲಿಸ್ ವೃತ್ತ ನಿರೀಕ್ಷಕ ಪೂವಯ್ಯ ಕೆಸಿ, ಶಿರ್ವ ಠಾಣಾಧಿಕಾರಿ ರಾಘವೇಂದ್ರ, ಕಾಪು ಠಾಣಾಧಿಕಾರಿ ಶ್ರೀ ಶೈಲ ಮುರುಗೊಡ, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ್, ಪುರಸಭಾ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.
ಕಟಪಾಡಿ : ಚಿಣ್ಣರ ಬಾಲವನ ನವೀಕರಣದ ಉದ್ಘಾಟನೆ
Posted On: 15 Aug 2022, 05:48 PM
ಕಟಪಾಡಿ : 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸವಿನೆನಪಿಗಾಗಿ ಏಣಗುಡ್ಡೆ ಅಗ್ರಹಾರದ ಗ್ರಾಮದ ಮಕ್ಕಳಿಗೆ ಅನುಕೂಲವಾಗುವಂತೆ ಊರ ದಾನಿಗಳ ಸಹಾಯದಿಂದ ನಿರ್ಮಾಣಗೊಂಡಿದ್ದ ಮಕ್ಕಳ ಬಾಲವನದ ನವೀಕರಣದ ಉದ್ಘಾಟನೆಯು ಆಗಸ್ಟ್ 15 ರಂದು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಅಗ್ರಹಾರ ದ ಬಳಿಯಲ್ಲಿ ನಡೆಯಿತು. ಈ ಸಂಧರ್ಭದಲ್ಲಿ ಹಿಂದೂ ಯುವಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕ ಅಗ್ರಹಾರ ಇದರ ಅಧ್ಯಕ್ಷರಾದ ದಿಲೀಪ್ ಕುಮಾರ್, ಕಾರ್ಯದರ್ಶಿ ಮಂಜುನಾಥ್, ಕೋಶಾಧಿಕಾರಿ ಅರ್ಜುನ್, ತಾಲೂಕು ಪಂಚಾಯತ್ ಸದಸ್ಯರಾದ ನಾಗೇಶ್ ಹಾಗೂ ಕಾರ್ಯಕರ್ತರಾದ ದೀಪಕ್ ದುರ್ಗಾನಗರ, ಸಂತೋಷ್.ಎನ್.ಎಸ್, ಕಟಪಾಡಿ ಗಣೇಶ್ ಉಪಸ್ಥಿತರಿದ್ದರು.
ಸಚಿವ ಎಸ್ ಅಂಗಾರರಿಂದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಎರ್ಮಾಳು ತೆಂಕದ ನೂತನ ಶಾಲಾ ಕೊಠಡಿ ಉದ್ಘಾಟನೆ
Posted On: 15 Aug 2022, 05:31 PM
ಪಡುಬಿದ್ರಿ : ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಎರ್ಮಾಳು ತೆಂಕ ಇಲ್ಲಿನ ನೂತನ ಇಂಗ್ಲಿಷ್ ಭಾಷಾ ಕಲಿಕಾ ಕೊಠಡಿಯ ಉದ್ಘಾಟನೆಯನ್ನು ಬಂದರು ಮತ್ತು ಮೀನುಗಾರಿಕಾ ಸಚಿವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಅಂಗಾರ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಊರಿನ ಶಾಲೆಯನ್ನು ಕಳೆದುಕೊಂಡಾಗ ಮತ್ತೆ ಪಡೆದುಕೊಳ್ಳುವುದು ಕಷ್ಟ. ಶಾಲೆಯನ್ನು ಉಳಿಸುವ ಪ್ರಯತ್ನ ಮಾಡಬೇಕು. ಗುಣಮಟ್ಟದ ಶಿಕ್ಷಣವನ್ನು ನೀಡಬೇಕಾದರೆ ತರಗತಿವಾರು, ವಿಷಯವಾರು ಶಿಕ್ಷಕರು ಇರಬೇಕು. ಅದು ಆಗದಾಗ ಗುಣಮಟ್ಟದ ಶಿಕ್ಷಣ ಸಾಧ್ಯವಾಗದು. ಇಚ್ಛಾಶಕ್ತಿ, ನಮ್ಮ ಊರಿನ ಶಾಲೆಯೆಂಬ ಅಭಿಮಾನ ಇದ್ದರೆ ನಮ್ಮ ಶಾಲೆಗೆ ನಾವೇ ಸೌಲಭ್ಯಗಳನ್ನು ಹೊಂದಿಸಲು ಸಾಧ್ಯ. ಅಂದಿನ ಜನರ ಮನಸ್ಥಿತಿ ಸಮಾಜಕ್ಕಾಗಿ ನೀಡಬೇಕೆಂಬ ಭಾವನೆಯಿತ್ತು ಆದರೆ ಈಗ ಸರಕಾರ ನೀಡಬೇಕೆಂಬ ಭಾವನೆಯಿದೆ. ಸ್ವಾತಂತ್ರ್ಯ ಬಂದಾಗಿದೆ ಕೊಟ್ಟಂತಹ ಸ್ವಾತಂತ್ರ್ಯ ಉಳಿಸಬೇಕಾದರೆ ನಮ್ಮಲ್ಲಿ ದೇಶಭಕ್ತಿ ಇರಬೇಕು.ಟೀಕೆ ವಿರೋಧಗಳಿಂದ ನಾವು ಯಾವುದನ್ನು ಸಾಧಿಸಲಾಗದು. ಜನರಲ್ಲಿ ದೇಶಭಕ್ತಿಯ ಭಾವ ಉಂಟಾದಾಗ ದೇಶಕ್ಕಾಗಿ ಕೊಡಬೇಕೆನ್ನುವ ಮನಸ್ಥಿತಿ ಸಾಧ್ಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ವಹಿಸಿದ್ದರು. ಈ ಸಂದರ್ಭ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಶೀಲಾ ಕೆ ಶೆಟ್ಟಿ, ಎರ್ಮಾಳು ತೆಂಕ ಗ್ರಾಮ ಪಂಚಾಯತ್ ಅಧ್ಯಕ್ಷೆ ಕಸ್ತೂರಿ, ಉಪಾಧ್ಯಕ್ಷೆ ಜಯಶ್ರೀ, ಶಿಕ್ಷಣ ಇಲಾಖೆಯ ಸಮನ್ವಯಾಧಿಕಾರಿ ಉಮಾ, ಎಸ್ಡಿಎಂಸಿ ಅಧ್ಯಕ್ಷರಾದ ಸೋಮಯ್ಯ, ಶಾಲಾ ಮುಖ್ಯಶಿಕ್ಷಕಿ ವಿನೋದ ಮತ್ತಿತರರು ಉಪಸ್ಥಿತರಿದ್ದರು.
ಹಿಂದೂ ಯುವಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕ ಅಗ್ರಹಾರ ಕಟಪಾಡಿ : ಸ್ವಚ್ಛತಾ ಕಾರ್ಯಕ್ರಮ
Posted On: 15 Aug 2022, 02:14 PM
ಕಟಪಾಡಿ : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಸ್ವಚ್ಛ ಭಾರತ ಶ್ರೇಷ್ಠ ಭಾರತ ಎಂಬ ಪರಿಕಲ್ಪನೆಯೊಂದಿಗೆ ಹಿಂದೂ ಯುವಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕ ಅಗ್ರಹಾರ ಕಟಪಾಡಿ ಇದರ ವತಿಯಿಂದ ಅಗ್ರಹಾರ ಶ್ರೀ ದುರ್ಗಾಪರಮೇಶ್ವರಿ ಶಾಲಾ ವಠಾರದಲ್ಲಿ ಆಗಸ್ಟ್ 13ರಂದು ಸ್ವಚ್ಛತಾ ಕಾರ್ಯಕ್ರಮವು ನಡೆಯಿತು. ಈ ಸಂದರ್ಭದಲ್ಲಿ ಹಿಂದೂ ಯುವಸೇನೆ ಶ್ರೀ ದುರ್ಗಾಪರಮೇಶ್ವರಿ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾವ್ಯವನ್ನು ಅನುಭವಿಸಿ ಬರೆದರೆ ಉತ್ತಮ ಕವನ ಬರುತ್ತೆ – ರೇಮಂಡ್ ಡಿ.ಕುನ್ಹ ತಾಕೊಡೆ
Posted On: 15 Aug 2022, 12:56 PM
ಮಂಗಳೂರು : ಪ್ರೇರಣಾತ್ಮಕವಾಗಿ ಬರೆಯುವ ಸಾಹಿತಿಗಳು ನಡು ನಡುವೆ ವಿರಾಮ ತೆಗೆದು ಕೊಂಡು ಅಭ್ಯಸಿಸಿ ಬರೆಯುವ ಹವ್ಯಾಸ ಇಟ್ಟುಕೊಳ್ಳಬೇಕು. ಆ ಮೂಲಕ ಒಂದು ಸೃಜನಾತ್ಮಕ ಸಾಹಿತ್ಯ ರಚಿಸಲು ಸಾಧ್ಯ ಎಂದು ಹಿರಿಯ ಪತ್ರಕರ್ತ ರೇಮಂಡ್ ಡಿ.ಕುನ್ಹ ತಾಕೋಡೆ ಹೇಳಿದರು . ಅವರು ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಆಗಸ್ಟ್ 14ರಂದು ಮಂಗಳೂರಿನ ಕದ್ರಿ ಬಾಲಭವನದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ ಭಾರತಾಂಬೆಗೆ ಕನ್ನಡದಾರತಿ ಮತ್ತು ಸಾಧಕರಿಗೆ ಸನ್ಮಾನ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈಗ ಸಂಘಟಕರು ಸಂಶೋಧಕರು ಮತ್ತು ಸಾಹಿತಿಗಳು ಈ ಮೂರು ವರ್ಗದವರಿಂದ ಸಾಹಿತ್ಯ ಸೇವೆ ನಡೀತಿದೆ. ಇದರಲ್ಲಿ ಸಾಹಿತಿಗಳು ಸಂಶೋಧನೆ ಮತ್ತು ಸಂಘಟನೆ ಮಾಡಿದ್ರೆ ಉತ್ತಮ ಸಾಹಿತ್ಯ ಬರುತ್ತದೆ ಎಂದರು. ಇದೇ ಸಂದರ್ಭದಲ್ಲಿ ಸಾಹಿತ್ಯ ಕ್ಷೇತ್ರದಲ್ಲಿ ಗಝಲ್ ಕವಿ ಹಾಗೂ ಮುಕ್ತಕ ಕವಿ ಎಂದೇ ಜನಪ್ರಿಯರಾದ ಡಾ. ಸುರೇಶ್ ನೆಗಳಗುಳಿ ಅವರನ್ನು ಸನ್ಮಾನಿಸಲಾಯಿತು. ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಗುಣಾಜೆ ರಾಮಚಂದ್ರ ಭಟ್ ಮಾತನಾಡಿ ಕವಿತೆ ಕಟ್ಟುತ್ತಾ ಹೋದಂತೆ ಅದು ಹುಟ್ಟುವುದು, ಕವನವನ್ನು ಮೊದಲ ಬಾರಿಗೆ ಓದಿದಾಗ ಎಲ್ಲಾ ಅರ್ಥವಾಗದೆ ಮರಳಿ ಓದಿಸಬೇಕು. ಹಾಗೆಂದು ಕವನಗಳು ಅರ್ಥ ಮಾಡಲು ತುಂಬಾ ಕಷ್ಟವಾಗಿರಲೂಬಾರದು. ಕವಿಗಳು ನಿರಂತರ ಅಧ್ಯಯನ ಮಾಡುತ್ತಿರಬೇಕು , ಶಬ್ಧ ಸಂಪತ್ತನ್ನು ಗಳಿಸಿ ಜೀವನಾನುಭವ ಹೊಂದಿರಬೇಕೆಂದು ಹೇಳಿದರು. ಕೆ ಎಸ್ ಎಸ್ ಎ ಪಿ ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಸ್ವಾಗತಿಸಿ ಪ್ರಾಸ್ತಾವನೆಗೈದರು. ಎನ್ ಎಸ್ ಸಿ ಡಿ ಎಫ್ ಅಧ್ಯಕ್ಷ ಗಂಗಾಧರ್ ಗಾಂಧಿ, ಹಾಗೂ ಕವಯತ್ರಿ ರೇಖಾ ಸುದೇಶ್ ರಾವ್ ಉಪಸ್ಥಿತರಿದ್ದರು. ರೇಶ್ಮಾ ಶೆಟ್ಟಿ ಗೋರೂರು ನಿರೂಪಿಸಿದರು. ನಂತರ ನಡೆದ ಕವಿಗೋಷ್ಠಿಯಲ್ಲಿ ವಿವಿಧ ಜಿಲ್ಲೆಯ ಸುಮಾರು 30 ಕ್ಕೂ ಹೆಚ್ಚು ಕವಿಗಳು ತಮ್ಮ ಸ್ವರಚಿತ ಕವನ ವಾಚನ ಮಾಡಿದರು. ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಗೀತ ಗಾಯನ ನಡೆಯಿತು.
ಶಿರ್ವ ಸಂತ ಮೇರಿ ಮಹಾವಿದ್ಯಾಲಯ : 75 ನೇ ಅಮೃತ ಮಹೋತ್ಸವದ ಸಂಭ್ರಮ
Posted On: 15 Aug 2022, 12:45 PM
ಶಿರ್ವ: ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 2022ರ ಆಗಸ್ಟ್ 15 ರಂದು 76ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದ 75 ನೇ ಅಮೃತ ಮಹೋತ್ಸವ ಪ್ರಯುಕ್ತ ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸರವರು ಧ್ವಜಾರೋಹಣವನ್ನು ನೆರವೇರಿಸಿ, ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯವೆಂದರೆ ಇದರ ಹಿಂದಿನ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಕೋಟ್ಯಾಂತರ ಭಾರತೀಯರ ತ್ಯಾಗ-ಬಲಿದಾನ- ಹೋರಾಟದ ಕಥೆ ಇದೆ. ನಮ್ಮ ಯೋಧರ ತ್ಯಾಗಗಳನ್ನು ಸ್ಮರಿಸೋಣ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸದಾ ನೆನೆಯೋಣ. ನವಸಮಾಜ ನಿರ್ಮಾಣ ಜೊತೆಗೆ ದೇಶಾಭಿವೃದ್ಧಿಗಾಗಿ ಇಂದು ಯುವಕರು ಸರಿಯಾದ ಮಾರ್ಗದರ್ಶನವನ್ನು ಪಡೆದುಕೊಂಡು ವಿವಿಧ ಕ್ಷೇತ್ರಗಳಲ್ಲಿ ಕಠಿಣ ಪರಿಶ್ರಮ ನೀಡಿ ದೇಶ ಪ್ರಗತಿಗೆ ಕೈಜೋಡಿಸಬೇಕು ಎಂದು ಕರೆ ನೀಡಿ ಕಾರ್ಯಕ್ರಮದ ಮುಖ್ಯ ಉದ್ದೇಶವನ್ನು ಮತ್ತು ಪ್ರಾಮುಖ್ಯತೆಯನ್ನು ತಿಳಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಕ್ಯಾಡೆಟ್ ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ, ಜೂನಿಯರ್ ಅಂಡರ್ ಆಫೀಸರ್ ಸುರಕ್ಷಾ, ಕ್ವಾರ್ಟರ್ ಮಾಸ್ಟರ್ ಮೋಹಿತ್ ಎನ್ ಸಾಲಿಯಾನ್, ಲ್ಲ್ಯಾನ್ಸ್ ಕಾರ್ಪೊರಲ್ ಲೋಬೋ ಆನ್ ರಿಯಾ ನೇವಿಲ್ ಪರೇಡ್ ನ ನೆರವೇರಿಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಕಚೇರಿನ ಅಧೀಕ್ಷಕ್ಕಿ ಡೋರಿನ್ ಡಿಸಿಲ್ವಾ, ಎನ್ಎಸ್ಎಸ್ ಯೋಜನಾಧಿಕಾರಿ ಶ್ರೀರಕ್ಷಾ, ರೋವರ್ಸ್ ಮತ್ತು ರೇಂಜರ್ಸ್ ಸ್ಕೌಟ್ ಲೀಡರ್ ಗಳಾದ ಪ್ರಕಾಶ್, ಸಂಗೀತ ಪೂಜಾರಿ, ಎನ್ ಎಸ್ ಎಸ್, ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಿದ್ಯಾರ್ಥಿ ಕಾಲೇಜಿನ ಎಲ್ಲಾ ಭೋಧಕ ಹಾಗು ಭೋಧಕೆತರ ವೃಂದದವರು ಉಪಸ್ಥಿತರಿದ್ದರು. ಎನ್ಎಸ್ಎಸ್ ಯೋಜನಾಧಿಕಾರಿ ಪ್ರೇಮನಾಥ್ ಸ್ವಾಗತಿಸಿದರು. ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ ಯಶೋದ ವಂದಿಸಿದರು. ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್ಕುಮಾರ್ ರವರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿ-ಸಂಯೋಜಿಸಿದರು.
ಕಟಪಾಡಿ : ರಥ ಕೊಡ್ಕೆ ಫ್ರೆಂಡ್ಸ್ ವತಿಯಿಂದ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ
Posted On: 14 Aug 2022, 07:18 PM
ಕಟಪಾಡಿ : ರಥ ಕೊಡ್ಕೆ ಫ್ರೆಂಡ್ಸ್ ಕಟಪಾಡಿ ವತಿಯಿಂದ ಜಿ ಎಸ್ ಬಿ ಸಮಾಜದ ಎಸ್ ಎಸ್ ಎಲ್ ಸಿ ಸಾಧಕರಾದ ಸಂದೀಪ್ ಪೈ, ಸಾತ್ವಿಕ್ ಕಾಮತ್, ಅಮೇಯ ಶೆಣೈ, ವೈಭವಿ ಕಾಮತ್, ಪ್ರಥಮ್ ಕಾಮತ್ ಇವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ರಥ ಕೊಡ್ಕೆ ಫ್ರೆಂಡ್ಸ್ ನ ಏಕನಾಥ ಭಟ್, ಶ್ರೀನಿವಾಸ್ ಶೆಣೈ, ದಿವಾಕರ್ ಭಟ್, ವಿನೋದ್ ಕಾಮತ್, ಗಜಾನನ ಶೆಣೈ, ಶ್ರೀನಾಥ್ ಶೆಣೈ, ವೇದಾಂತ ಭಟ್, ಸುಧೀರ್ ನಾಯಕ್ ಮೊದಲಾದವರು ಉಪಸ್ಥಿತರಿದ್ದರು.
ಬೆಳಪು : ಜಮಾ ಅತೆ ಇಸ್ಲಾಮಿ ಕಾಪು ವರ್ತುಲದ ವತಿಯಿಂದ ಉಚಿತ ಹಿಜಾಮ ಶಿಬಿರ
Posted On: 14 Aug 2022, 06:11 PM
ಕಾಪು : ಸೃಷ್ಟಿಕರ್ತನು ಮಾನವನನ್ನು ಭೂಮಿಯ ಮೇಲೆ ತನ್ನ ಪ್ರತಿನಿಧಿಯಾಗಿ ಕಳುಹಿಸಿ , ಕೆಡುಕನ್ನು ಅಳಿಸಿ ಒಳಿತನ್ನು ಸ್ಥಾಪಿಸಲು ಆದೇಶಿಸಿ , ಸ್ವಸ್ಥ ಸುಂದರ , ಆರೋಗ್ಯಪೂರ್ಣ ಸಮಾಜ ನಿರ್ಮಿಸಿ ರೋಗ ರುಜಿನ ಪೀಡಿತರ ಸೇವೆಗೈಯ್ಯಲು ತಿಳಿಸಿರುವನು. ನಿಮ್ಮಲ್ಲಿರುವ ಸಂಪತ್ತನ್ನು ಸೃಷ್ಟಿಕರ್ತನ ಸಂಪ್ರೀತಿ ಗಳಿಸಲು ಬಡವರ ಉದ್ಧಾರಕ್ಕೆ ಬಳಸಿದರೆ ಅದು ದೇವ ಮಾರ್ಗದಲ್ಲಿ ಬಳಸಿದಂತೆ ಎಂದು ಅನ್ವರ್ ಅಲಿ ಕಾಪು ಹೇಳಿದರು. ಅವರು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಲುವಾಗಿ ಜಮಾ ಅತೆ ಇಸ್ಲಾಮಿ ಕಾಪು ವರ್ತುಲದ ವತಿಯಿಂದ ಬೆಳಪು ಮಸ್ಜಿದ್ ಎ ತೈಬಾ ದಲ್ಲಿ ಉಚಿತ ಹಿಜಾಮ ಶಿಬಿರದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಶಿಬಿರಾರ್ಥಿಗಳನ್ನು ಉದ್ದೇಶಿಸಿ ಹೇಳಿದರು. ಹಿಜಾಮ ಚಿಕಿತ್ಸೆ ನೀಡಲು ಬಂದಿರುವ ಆಯುಷ್ ಸರಕಾರಿ ಆಸ್ಪತ್ರೆ ಉಡುಪಿಯ ವೈದ್ಯಾಧಿಕಾರಿಯಾದ ಡಾಕ್ಟರ್ ರುಕ್ಸಾರ್ ಅಂಜುಮ್ ರವರು, ಈ ಚಿಕಿತ್ಸೆಯಿಂದ ಹಲವಾರು ಕಾಯಿಲೆಗಳು ಶಸ್ತ್ರ ಚಿಕಿತ್ಸೆ, ಮಾತ್ರೆ, ಔಷಧಿ ಸೇವಿಸದೆ ಗುಣ ಪಡಿಸಬಹುದಾಗಿದೆ ಹಾಗೂ ಇನ್ನೂ ಹಲವಾರು ಪ್ರಯೋಜನಗಳು ಇವೆ ಎಂದು ತಿಳಿಸಿದರು. 61 ಮಹಿಳೆಯರು 53 ಪುರುಷರು ಶಿಬಿರದಲ್ಲಿ ಹಿಜಾಮ ಚಿಕಿತ್ಸೆಯ ಪ್ರಯೋಜನ ಪಡೆದರು. ವೇದಿಕೆಯಲ್ಲಿ ರಫೀಕ್ ಖಾನ್, ಮುಸ್ತಾಕ್ ಇಬ್ರಾಹೀಮ್ ಉಪಸ್ಥಿತರಿದ್ದರು. ಮಸೀದಿಯ ಗುರುಗಳಾದ, ಮೌಲಾನಾ ಮುಹಮ್ಮದ್ ಫಾರೂಕ್ ರವರ ಕುರ್ ಆನ್ ಪಠಣದೊಂದಿಗೆ ಕಾರ್ಯಕ್ರಮ ಪ್ರಾರಂಭ ಆಯಿತು. ಶೇಹೆನಾಜ್ , ಬೀಬಿ ಬತುಲ್, ಸಕ್ಲೇನ್ ಪಾಷ , ಅಬ್ದುಲ್ ಅಹದ್, ಸರ್ಫರಾಜ್ ಸಹಕರಿಸಿದರು. ಮುಹಮ್ಮದ್ ಇಕ್ಬಾಲ್ ಸಾಹೇಬ್ ಸ್ವಾಗತಿಸಿದರು. ಇಬ್ರಾಹೀಮ್ ಸಯೀದ್ ಉಮರಿಯವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕುದ್ರೋಳಿ : 18 ಗಂಟೆಗಳ ಶ್ರಮದಿಂದ ಧಾನ್ಯ, ತರಕಾರಿ, ಅಕ್ಕಿ ಇತ್ಯಾದಿ ವಸ್ತುಗಳಿಂದ ಮೂಡಿದ ತಿರಂಗ
Posted On: 14 Aug 2022, 03:14 PM
ಮಂಗಳೂರು : ಸ್ವಾತಂತ್ರ್ಯದ 75ರ ಅಮೃತ ಮಹೋತ್ಸವದ ಸಂಭ್ರಮದ ಪ್ರಯುಕ್ತ ಗುರುಬೆಳದಿಂಗಳು ಸೇವಾ ಸಂಸ್ಥೆಯ ಆಶ್ರಯದಲ್ಲಿ ಮಂಗಳೂರಿನ ಪ್ರಸಿದ್ಧ ಕುದ್ರೋಳಿ ದೇವಳ ಮುಂಭಾಗ ಧಾನ್ಯ, ತರಕಾರಿ, ಅಕ್ಕಿ, ಕಳಶ, ಬಾಳೆ ಎಲೆ, ವೀಳ್ಯದೆಲೆ ಇತ್ಯಾದಿ ವಸ್ತುಗಳಿಂದ ಭಾರತದ ತ್ರಿವರ್ಣ ಧ್ವಜವನ್ನು ರಚಿಸಲಾಗಿದೆ. ಕಲಾವಿದ, ಛಾಯಾಗ್ರಾಹಕ ಪುನೀಕ್ ಶೆಟ್ಟಿ ನೇತೃತ್ವದಲ್ಲಿ 30 ಗುರುಬೆಳದಿಂಗಳು ಸದಸ್ಯರು ಹಾಗೂ ಕ್ಷೇತ್ರದ ಸಿಬ್ಬಂದಿ ವರ್ಗದ ಸಹಕಾರದಿಂದ 18 ಗಂಟೆಗಳ ನಿರಂತರ ಕಾರ್ಯದಿಂದ ಮೂಡಿದೆ. ಇದಕ್ಕಾಗಿ 900 ಕೆಜಿ ಧಾನ್ಯ, 100 ಕೆಜಿ ತರಕಾರಿ, 38 ಅಡಿ ವೃತ್ತ, 54 ಕಳಶ, 108 ಬಾಳೆ ಎಲೆ, 500 ವೀಳ್ಯದೆಲೆ, 100 ಕೆಜಿ ಬೆಳ್ತಿಗೆ ಅಕ್ಕಿ ಉಪಯೋಗಿಸಲಾಗಿದೆ.
