Updated News From Kaup
ಪಲಿಮಾರು : ನರೇಂದ್ರ ಮೋದಿಯವರ ಎಂಟನೇ ವರ್ಷದ ಆಡಳಿತದ ಪ್ರಯುಕ್ತ ಎಸ್ಸೆಲ್ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ
Posted On: 20-06-2022 07:47PM
ಕಾಪು : ಬಿಜೆಪಿ ಶಕ್ತಿಕೇಂದ್ರ ಪಲಿಮಾರು ಇದರ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಎಂಟನೇ ವರ್ಷದ ಆಡಳಿತದ ಪ್ರಯುಕ್ತ ಸೇವಾ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಹತ್ತನೇ ತರಗತಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸುವ ಕಾರ್ಯಕ್ರಮವು ಅವರಾಲು ಶ್ರೀ ಧೂಮಾವತಿ ದೈವಸ್ಥಾನದ ವಠಾರದಲ್ಲಿ ನಡೆಯಿತು.
ಹರಿಯಾಣದಲ್ಲಿ ಜರಗಲಿರುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಸಮಿತಿಯ ಸಭೆಗೆ ಸಂತ ಶ್ರೀ ಸಾಯಿ ಈಶ್ವರ್ ಗುರೂಜಿಗೆ ಆಹ್ವಾನ
Posted On: 20-06-2022 05:46PM
ಕಾಪು : ಉಡುಪಿ ಜಿಲ್ಲೆಯ ಶಂಕರಪುರ ದ್ವಾರಕಾಮಾಯಿ ಮಠದ ಸಂತ ಶ್ರೀ ಸಾಯಿ ಈಶ್ವರ್ ಗುರೂಜಿ ಹರಿಯಾಣ ಪಟೋಡಿ ಎಂಬಲ್ಲಿ ಜೂನ್ 25 ಮತ್ತು 26ರಂದು ನಡೆಯಲಿರುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಸಮಿತಿಯ ಸಭೆಯಲ್ಲಿ ರಾಜ್ಯ ಪ್ರಮುಖ್ ಓಂ ಶ್ರೀ ವಿದ್ಯಾನಂದ ಸರಸ್ವತಿ ಜೊತೆಗೆ ಭಾಗವಹಿಸಬೇಕೆಂದು ಸೂಚಿಸಲಾಗಿದೆ.
ಪ್ರದೀಪಚಂದ್ರ ಕುತ್ಪಾಡಿಯವರಿಗೆ ಜಾನಪದ ಪ್ರಶಸ್ತಿ
Posted On: 18-06-2022 11:14PM
ಉಡುಪಿ : ಕರ್ನಾಟಕ ಜಾನಪದ ಪರಿಷತ್ತು (ರಿ) ಬೆಂಗಳೂರು- ಉಡುಪಿ ಜಿಲ್ಲಾ ಘಟಕ ಇವರು ಆಯೋಜಿಸಿದ್ದ ಜಾನಪದ ಉತ್ಸವ 2022 ರಲ್ಲಿ ಈ ಬಾರಿ ಪ್ರದೀಪಚಂದ್ರ ಕುತ್ಪಾಡಿ ,ರಂಗಕರ್ಮಿ ಮತ್ತು ಸಂಘಟಕರು ಉಡುಪಿ ಇವರಿಗೆ ಜಾನಪದ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ತಂಡವಾಗಿ ಕೆಲಸ ಮಾಡಬೇಕು : ಶಾಸಕ ಕೆ. ರಘುಪತಿ ಭಟ್
Posted On: 18-06-2022 11:06PM
ಉಡುಪಿ : ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಒಂದು ತಂಡದ ರೀತಿಯಲ್ಲಿ ಕೆಲಸ ನಿರ್ವಹಿಸಿದರೆ ಸಾರ್ವಜನಿಕರ ಎಲ್ಲಾ ಸಮಸ್ಯೆಗಳಿಗೆ ಶೀಘ್ರದಲ್ಲಿ ನ್ಯಾಯಯುತ ಪರಿಹಾರ ಒದಗಿಸಲು ಸಾಧ್ಯವಾಗಲಿದೆ ಎಂದು ಶಾಸಕ ಕೆ. ರಘುಪತಿ ಭಟ್ ಹೇಳಿದರು. ಅವರು ಇಂದು ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಮ ವ್ಯಾಪ್ತಿಯ ಪೇತ್ರಿ ಯುವಕ ಮಂಡಲ ವಠಾರದಲ್ಲಿ, ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹೆಜಮಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು : ಶಾಸಕ ಲಾಲಾಜಿ ಆರ್ ಮೆಂಡನ್
Posted On: 18-06-2022 06:14PM
ಹೆಜಮಾಡಿ : ಇಲ್ಲಿನ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚಿನ ಮಟ್ಟದಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, ಈಗಾಗಲೇ 12 ಕೋಟಿ ರೂ.ಗಳಿಗೂ ಹೆಚ್ಚಿನ ಮೊತ್ತದ ಅನುದಾನವನ್ನು ನೀಡಲಾಗಿದೆ ಹೆಜಮಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ಮುಖ್ಯ ರಸ್ತೆಗಳನ್ನು ಮೀನುಗಾರಿಕಾ ರಸ್ತೆಗಳನ್ನು ಉತ್ತಮ ರೀತಿಯಲ್ಲಿ ಅಭಿವೃದ್ಧಿ ಪಡಿಸಲಾಗಿದೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಪಂಚಾಯತ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯಲ್ಲಿ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಕಾಪು ಶಾಸಕರಾದ ಲಾಲಾಜಿ ಆರ್. ಮೆಂಡನ್ ಹೇಳಿದರು. ಅವರು ಹೆಜಮಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿದ ವಿವಿಧ ಇಲಾಖೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಿವಿಧ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ತಾಯಿಯ ತೀವ್ರ ಅನಾರೋಗ್ಯದ ನಡುವೆಯೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ಕಾರ್ತಿಕ್
Posted On: 18-06-2022 05:16PM
ಉಡುಪಿ : ಇಲ್ಲಿನ ಎಂಜಿಎಂ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಕಾರ್ತಿಕ್ ಶೆಣೈ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 584 (97.33)ಅಂಕ ಪಡೆದು ಅತ್ಯುತ್ತಮ ಸಾಧನೆ ಮಾಡಿ ಕಾಲೇಜಿಗೆ ಕೀರ್ತಿ ತಂದಿದ್ದಾನೆ.
ಉಡುಪಿ : ಹಲಸು ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ
Posted On: 18-06-2022 05:10PM
ಉಡುಪಿ : ಹಲಸು ಬೆಳೆಗಾರರು ಗ್ರಾಹಕರಿಗೆ ನೇರವಾಗಿ ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಿ ಲಾಭ ಪಡೆಯಲು ಹಲಸು ಮೇಳ ಕಾರ್ಯಕ್ರಮವು ಹೆಚ್ಚಿನ ಪ್ರಯೋಜನಕಾರಿಯಾಗಲಿದೆ ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರ ಎಸ್. ನಾಯಕ್ ಹೇಳಿದರು ಅವರು ಇಂದು ದೊಡ್ಡಣ ಗುಡ್ಡೆ ಶಿವಳ್ಳಿ ಮಾದರಿ ತೋಟಗಾರಿಕೆ ಕ್ಷೇತ್ರದ ರೈತ ಸೇವಾ ಕೇಂದ್ರದದಲ್ಲಿ ನಡೆದ ಹಲಸು ಮತ್ತು ಜೇನು ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿದರು.
ಕುತ್ಯಾರು : ಅಸೆಟ್ ಗೆ ನೂತನ ಅಧ್ಯಕ್ಷರಾಗಿ ಮೋಹನ್ ಕುಮಾರ್ ಬೆಳ್ಳೂರು
Posted On: 18-06-2022 04:54PM
ಕಾಪು : ಪಡುಕುತ್ಯಾರುವಿನ ಆನೆಗುಂದಿ ಶ್ರೀ ಸರಸ್ವತೀ ಎಜ್ಯುಕೇಶನಲ್ ಟ್ರಸ್ಟ್ ನ ನೂತನ ಅಧ್ಯಕ್ಷರಾಗಿ ಮೋಹನ್ ಕುಮಾರ್ ಬೆಳ್ಳೂರು ಆಯ್ಕೆಯಾಗಿದ್ದಾರೆ.
ಕಾಪು : ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಯ ಗುಡಿಗಳ ದೇವಿ ದ್ವಾರ ಸ್ಥಾಪನಾ ಧಾರ್ಮಿಕ ಕಾರ್ಯಕ್ರಮ ಸಂಪನ್ನ
Posted On: 18-06-2022 04:40PM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಮಾರಿಯಮ್ಮ ಗುಡಿ ಮತ್ತು ಉಚ್ಚಂಗಿ ದೇವಿಯ ಗುಡಿಗಳ ದೇವಿ ದ್ವಾರ ಸ್ಥಾಪನಾ ಧಾರ್ಮಿಕ ಕಾರ್ಯಕ್ರಮಗಳು ಜೂನ್ 17ರಂದು ಸಂಪನ್ನಗೊಂಡಿತು.
ಯಕ್ಷಗಾನ ಕಲಾರಂಗದ ಮೂವತ್ತನೇ ಮನೆ ಹಸ್ತಾಂತರ
Posted On: 17-06-2022 08:08PM
ಉಡುಪಿ : ಸಂಸ್ಥೆಯ ವಿದ್ಯಾಪೋಷಕ್ ಫಲಾನುಭವಿ ವಿದ್ಯಾರ್ಥಿನಿಯಾದ ಪಾದೂರಿನ ಮಲ್ಲಿಕಾ ಶೆಟ್ಟಿ (ದ್ವಿತೀಯ ಪಿ.ಯು.ಸಿ) ಹಾಗೂ ನರ್ಸಿಂಗ್ ವಿದ್ಯಾರ್ಥಿನಿ ರಕ್ಷಿತಾ ಶೆಟ್ಟಿ ಇವರಿಗೆ ಮಂಗಳೂರಿನ ಉದ್ಯಮಿ ಪಿ. ಗೋಕುಲನಾಥ ಪ್ರಭುರವರು ತಮ್ಮ ಮಾತೃಶ್ರೀ ಪದ್ಮಾವತಿ ವೆಂಕಟ್ರಾಯ ಪ್ರಭು ಅವರ ಜನ್ಮಶತಾಬ್ದದ ಶುಭಾವಸರದಲ್ಲಿ ನಿರ್ಮಿಸಿಕೊಟ್ಟ ನೂತನ ಮನೆ ‘ಪದ್ಮಾವತಿ’ಯನ್ನು ನಿವೇದಿತಾ ಜಿ. ಪ್ರಭು ಮತ್ತು ಪಿ. ಗೋಕುಲನಾಥ ಪ್ರಭು ಅವರು ಜೂನ್ 16 ರಂದು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
