Updated News From Kaup
ಜೂನ್ 20 : ಆನೆಗುಂದಿ ಶ್ರೀ ಸರಸ್ವತೀ ಪೀಠ ಸೂರ್ಯಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ನಲ್ಲಿ ವಿವಿಧ ವಿದ್ಯಾರ್ಥಿ ಕ್ಲಬ್ ಗಳ ಉದ್ಘಾಟನೆ
Posted On: 17-06-2022 07:56PM
ಕಾಪು : ಶಾಲಾ ಶೈಕ್ಷಣಿಕ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳ ತೊಡಗಿಸಿಕೊಳ್ಳುವಿಕೆಯು ಅತ್ಯಂತ ಮಹತ್ವದ್ದು. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣದ ಉದ್ದೇಶ . ಈ ನಿಟ್ಟಿನಲ್ಲಿ ಆನೆಗುಂದಿ ಶ್ರೀ ಸರಸ್ವತೀ ಎಜುಕೇಷನಲ್ ಟ್ರಸ್ಟ್ ನ ಅಧೀನ ಸಂಸ್ಥೆಯಾದ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ಕುತ್ಯಾರುವಿನಲ್ಲಿ ವಿವಿಧ ವಿದ್ಯಾರ್ಥಿ ಕ್ಲಬ್ ಗಳನ್ನು ರಚಿಸಿದ್ದು ಈ ಕ್ಲಬ್ ಗಳ ಉದ್ಘಾಟನಾ ಸಮಾರಂಭವು ದಿನಾಂಕ ಜೂನ್ 20 ಸೋಮವಾರದಂದು ಮಧ್ಯಾಹ್ನ 2-30 ಕ್ಕೆ ಶಾಲಾ ಸಭಾಭವನದಲ್ಲಿ ನಡೆಯಲಿದೆ.
ಪಡುಬಿದ್ರಿ : ಮಟ್ಕಾ ಜುಗಾರಿ ಚೀಟಿ ಬರೆಯುತ್ತಿದ್ದ ವ್ಯಕ್ತಿ ಬಂಧನ
Posted On: 16-06-2022 10:52PM
ಪಡುಬಿದ್ರಿ : ಇಲ್ಲಿನ ಅಪೋಲೋ ಮೆಡಿಕಲ್ನ ಹಿಂಭಾಗದ ಓಣಿಯಲ್ಲಿ ಮಟ್ಕಾ ಜುಗಾರಿ ಆಟದ ಬಗ್ಗೆ ಸಾರ್ವಜನಿಕರಿಗೆ ಚೀಟಿ ಬರೆದು ಕೊಡುತ್ತಿದ್ದ ವ್ಯಕ್ತಿಯೋರ್ವನನ್ನು ಜೂ.15 ರಂದು ಬಂಧಿಸಲಾಗಿದೆ.
ಎಲ್ಲಾ ಕಚೇರಿಗಳಲ್ಲಿ ಪ್ರತಿಶತಃ ನೂರರಷ್ಟು ಕನ್ನಡ ಅನುಷ್ಠಾನ ಆಗಬೇಕು : ಡಾ.ಟಿ.ಎಸ್.ನಾಗಾಭರಣ
Posted On: 16-06-2022 06:02PM
ಉಡುಪಿ : ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ದೈನಂದಿನ ಕಾರ್ಯಚಟುವಟಿಕೆಗಳಲ್ಲಿ ಪ್ರತಿಶತಃ ನೂರರಷ್ಟು ಕನ್ನಡದ ಬಳಕೆ ಆಗುವ ಕುರಿತಂತೆ ಎಲ್ಲಾ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು, ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ವರದಿ ನೀಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್.ನಾಗಾಭರಣ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಸರ್ಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯೆ ಬಿಜೆಪಿ ಸೇರ್ಪಡೆ
Posted On: 15-06-2022 10:49PM
ಕಾಪು : ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇರೂರು ಗ್ರಾಮದ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಾದ ಮಂಜುಳಾ ಆಚಾರ್ಯರವರು ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಒಪ್ಪಿ ಶಾಸಕರಾದ ಲಾಲಾಜಿ ಆರ್ ಮೆಂಡನ್ ಮತ್ತು ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ಸಮ್ಮತಿ ಮೇರೆಗೆ ಇಂದು ಕಾಪು ಬಿಜೆಪಿ ಕಛೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಸಿಸಿಬಿ ಕಾರ್ಯಾಚರಣೆ: ಮಾದಕ ವಸ್ತು ಹೊಂದಿದ 4 ಆರೋಪಿಗಳ ಸೆರೆ
Posted On: 15-06-2022 09:34PM
ಮಂಗಳೂರು : ನಗರದ ಸಾರ್ವಜನಿಕರಿಗೆ ಮಾದಕ ವಸ್ತುವಾದ (Methylene dioxy methamphetamine) MDMA ನ್ನು ಬೆಂಗಳೂರಿನಿಂದ ಯಿಂದ ಖರೀದಿಸಿ ಮಂಗಳೂರಿಗೆ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ 4 ಆರೋಪಿಗಳನ್ನು ದಸ್ತಗಿರಿ ಮಾಡಿರುತ್ತಾರೆ.
ವಿವಿಧ ಅಕ್ರಮಗಳ ಬಗ್ಗೆ ದೂರು ನೀಡಿದರೂ ಜಿಲ್ಲಾಧಿಕಾರಿಗಳ ಅಸಡ್ಡೆ ; ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆಗೆ ಸಜ್ಜು
Posted On: 15-06-2022 09:23PM
ಉಡುಪಿ : ಜಿಲ್ಲೆಯ ವಿವಿಧ ಸಂಘಟನೆಗಳಿಂದ ಉಡುಪಿ ಜಿಲ್ಲಾಧಿಕಾರಿಗಳಿಗೆ ನೀಡಿರುವ ಸಾರ್ವಜನಿಕ ಸಮಸ್ಯೆಗಳ ಬಗ್ಗೆ ನಿರಂತರವಾಗಿ ದಾಖಲೆ ಸಮೇತ ದೂರು ನೀಡಿದ್ದರೂ ಯಾವುದೇ ಕಾನೂನು ಕ್ರಮ ಕೈಗೊಳ್ಳದೇ ಉದಾಸಿನ ಭಾವನೆ ತೋರುತ್ತಿರುವ ಹಿನ್ನೆಲೆಯಲ್ಲಿ ಇದರ ವಿರುದ್ಧ ವಿವಿಧ ಸಂಘಟನೆಗಳ ಜಂಟಿ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಛೇರಿ ಎದುರು (ನ್ಯಾಯಕ್ಕಾಗಿ ಹೋರಾಟ) ಧರಣಿ (ಪ್ರತಿಭಟನೆ) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ಪ್ರಮುಖರು ಉಡುಪಿ ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಕಲೆ, ಶೈಕ್ಷಣಿಕ ಕಾರ್ಯಕ್ರಮದ ಬಗ್ಗೆ ಆಸಕ್ತಿ ಇರುವವರ ಸಂಖ್ಯೆ ಕಡಿಮೆಯಾಗದು : ಪ್ರೊ. ಕಿಶೋರ್ ಕುಮಾರ್ ಸಿ.ಕೆ
Posted On: 15-06-2022 08:47AM
ಮಂಗಳೂರು : ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಬಹಳ ಮುತುವರ್ಜಿಯಿಂದ ಸಾಮಾಜಿಕ ಕಳಕಳಿಯಿಂದ ದೇಶದ ಬೆಳವಣಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದೆ. ಅದರಲ್ಲು ಮುಖ್ಯವಾಗಿ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಸ್ತುತ್ಯಾರ್ಹ ವಿಚಾರ ಎಂದು ಮಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವ ಪ್ರೊ. ಕಿಶೋರ್ ಕುಮಾರ್ ಸಿ.ಕೆ. ಅವರು ಹೇಳಿದರು.
ಕಾಪು ಬಂಟರ ಸಂಘ : ಭಜನಾ ಕಾರ್ಯಕ್ರಮ ಉದ್ಘಾಟನೆ
Posted On: 14-06-2022 11:59PM
ಕಾಪು : ಬಂಟರ ಸಂಘ (ರಿ) ಕಾಪುವಿನ ಭಜನಾ ಕಾರ್ಯಕ್ರಮ ಹಾಗೂ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವು ಸೋಮವಾರ, ಸಂಘದ ಕಛೇರಿಯಲ್ಲಿ ಜರಗಿತು.
ಶಂಕರಪುರ : ಆರೋಗ್ಯ ತಪಾಸಣೆಯ ನೆಪದಲ್ಲಿ ವೈದ್ಯನಿಂದ ಮಹಿಳೆಯ ಮಾನಭಂಗಕ್ಕೆ ಯತ್ನ
Posted On: 14-06-2022 11:37PM
ಶಿರ್ವ : ಇಲ್ಲಿನ ಕ್ಲಿನಿಕ್ ಒಂದರ ವೈದ್ಯ ಪತಿಯೊಂದಿಗೆ ಆರೋಗ್ಯ ತಪಾಸಣೆಗೆ ಬಂದಿದ್ದ ಮಹಿಳೆಯ ಮಾನಭಂಗಕ್ಕೆ ಯತ್ನಿಸಿದ ಘಟನೆ ಸೋಮವಾರ ನಡೆದಿದೆ.
ಕೋವಿಡ್ ಎದುರಿಸಲು ಎಲ್ಲಾ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 13-06-2022 08:17PM
ಉಡುಪಿ : ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬಂದರೆ ಅದನ್ನು ಎದುರಿಸಲು ಅಗತ್ಯವಿರುವ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ, ಜಿಲ್ಲೆಯಲ್ಲಿನ ಕೋವಿಡ್-19, ಡೆಂಗ್ಯೂ ಮತ್ತು ಮಲೇರಿಯಾ ಪ್ರಕರಣಗಳ ಪ್ರಸಕ್ತ ಪರಿಸ್ಥಿತಿ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
