Updated News From Kaup

ಕಂಚಿನಡ್ಕ ಮಿಂಚಿನ ಬಾವಿ ಮೇಲ್ಛಾವಣಿ ವಿವಾದ : ಅವಶ್ಯಕತೆ ಬಿದ್ದರೆ ಕಂಚಿನಡ್ಕ ಚಲೋಗೆ ಸಿದ್ಧ ; ಮುಂದೆ ಇಲ್ಲಿಯ ಎರಡು ಶ್ರದ್ಧಾಕೇಂದ್ರಗಳ ಅಭಿವೃದ್ಧಿಗೆ ಸಿದ್ಧತೆ - ಯಶ್ಪಾಲ್ ಸುವರ್ಣ

Posted On: 01-06-2022 07:29AM

ಪಡುಬಿದ್ರಿ : ಕಾಪು ತಾಲೂಕಿನ ಪಡುಬಿದ್ರಿ ಬಳಿಯ ಕಂಚಿನಡ್ಕದಲ್ಲಿರುವ ಪ್ರಸಿದ್ಧ ಕಾರಣಿಕದ ಸ್ಥಳ ಬಬ್ಬುಸ್ವಾಮಿ ದೈವ ಮಾಯವಾದ ಮಿಂಚಿನ ಬಾವಿ ಶ್ರೀ ಬಬ್ಬುಸ್ವಾಮಿ ದೈವಸ್ಥಾನಕ್ಕೆ ತಗಡಿನ ಮೇಲ್ಛಾವಣಿ ಹಾಕುವ ಬಗೆಗೆ ಎಸ್ಡಿಪಿಐ ಬೆಂಬಲಿತ ಸ್ಥಳೀಯ ಮುಸ್ಲಿಮರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪಡುಬಿದ್ರಿ ಠಾಣೆಯಲ್ಲಿ ದೈವಸ್ಥಾನದ ಆಡಳಿತ ಮಂಡಳಿ ಮತ್ತು ಆಕ್ಷೇಪವೆತ್ತಿದವರ ಜೊತೆಗಿನ ಸಭೆಯು ನಡೆದಿತ್ತು. ಆದರೆ ಇದು ಪ್ರಯೋಜನಕಾರಿಯಾಗಿರಲಿಲ್ಲ.

ಐತಿಹಾಸಿಕ ಮಹತ್ವದ ಕಾಪು ಮಲ್ಲಾರು ಕೋಟೆಯಲ್ಲಿದ್ದ ಮಾರಿಯಮ್ಮನ ಮೂಲನೆಲೆ ನಿನ್ನಿಕೆರೆ ರಕ್ಷಣೆಗೆ ಸಾಮಾಜಿಕ ಕಾರ್ಯಕರ್ತ ಶ್ರೀರಾಮ ದಿವಾಣ ಆಗ್ರಹ

Posted On: 31-05-2022 02:20PM

ಕಾಪು : ಇತಿಹಾಸ ಪ್ರಜ್ಞೆಯ ಕೊರತೆಯ ಕಾರಣದಿಂದ, ಐತಿಹಾಸಿಕ ಮಹತ್ವದ ಸ್ಥಳಗಳನ್ನು ಉಳಿಸುವಲ್ಲಿ ಸರಕಾರ, ಪುರಾತತ್ವ ಇಲಾಖೆ, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು ನಿರಂತರವಾಗಿ ವಿಫಲವಾಗುತ್ತಾ ಬಂದಿವೆ. ಬುದ್ಧಿವಂತರ ಜಿಲ್ಲೆಗಳಾದ ಕರಾವಳಿ ಕರ್ನಾಟಕವೂ ಐತಿಹಾಸಿಕ ಮಹತ್ವದ ಸ್ಥಳಗಳನ್ನು, ಸ್ಮಾರಕಗಳನ್ನು ಉಳಿಸುವಲ್ಲಿ ಆಸಕ್ತಿ, ಕಾಳಜಿ, ಇಚ್ಛಾಶಕ್ತಿ ತೋರಿಸದಿರುವುದು ನಿಜಕ್ಕೂ ವಿಷಾದನೀಯ. ಉಡುಪಿ ಜಿಲ್ಲೆ ಕಾಪು ತಾಲೂಕಿನ ಮಲ್ಲಾರು ಕೋಟೆ ಇದ್ದ ಸ್ಥಳದಲ್ಲಿ ಪ್ರಸ್ತುತ ಕೋಟೆ ನಾಶವಾಗಿ ಹೋಗಿದ್ದರೂ, ಕೋಟೆ ಇದ್ದ ಸ್ಥಳದಲ್ಲಿ ನಿನ್ನೆಯವರೆಗೂ ಇದ್ದ ಅಳಿದುಳಿದ ಅವಶೇಷಗಳಲ್ಲಿ ಒಂದಾದ ನಿನ್ನಿಕೆರೆ ಇಂದು ಇಲ್ಲವಾಗುತ್ತಿರುವುದು. ಅಂದರೆ, ನಿನ್ನಿಕೆರೆಯನ್ನು ಮುಚ್ಚಲಾಗುತ್ತಿದೆಯಲ್ಲ ಎಂದು ಬೇಸರವಿದೆ ಎಂದು ಸಾಮಾಜಿಕ ಕಾರ್ಯಕರ್ತ ಶ್ರೀರಾಮ ದಿವಾಣ ಹೇಳಿದರು.

ತಾಳಮದ್ದಳೆ ಸಪ್ತಾಹ : ಕೆ.ಎಲ್.ಕುಂಡಂತಾಯರಿಗೆ "ಪೆರ್ಲ ಕೃಷ್ಣ ಭಟ್ ಪ್ರಶಸ್ತಿ" ಪ್ರದಾನ

Posted On: 29-05-2022 08:22PM

ಉಡುಪಿ : ಇಲ್ಲಿಯ ಯಕ್ಷಗಾನ ಕಲಾಕೇಂದ್ರ (ರಿ) ಇವರು ಪರ್ಯಾಯ ಕೃಷ್ಣಾಪುರ ಮಠದ ಆಶ್ರಯದಲ್ಲಿ ರಾಜಾಂಗಣದಲ್ಲಿ ನಡೆಸಿದ ತಾಳಮದ್ದಳೆ ಸಪ್ತಾಹ - 2022 ರ ಸಮಾರೋಪ ಸಮಾರಂಭದಲ್ಲಿ ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು ಜಾನಪದ ವಿದ್ವಾಂಸ , ಯಕ್ಷಗಾನ ವೇಷಧಾರಿ - ಅರ್ಥಧಾರಿ ಕೆ.ಎಲ್.ಕುಂಡಂತಾಯರಿಗೆ ಪಂಡಿತ ಪರಂಪರೆಯ ವಿದ್ವಾಂಸ ಪೆರ್ಲ ಕೃಷ್ಣ ಭಟ್ ನೆನಪಿನ "ಪೆರ್ಲ ಕೃಷ್ಣ ಭಟ್ ಪ್ರಶಸ್ತಿ"ಯನ್ನು ಪ್ರದಾನಿಸಿದರು.

ಮದುವೆ ಮಂಟಪದಿಂದ ಸಿನೆಮಾ ‌ಮಂದಿರ - ಮದುವೆ ಪೋಷಾಕಿನಲ್ಲಿ ತುಳು ಸಿನಿಮಾ ವೀಕ್ಷಿಸಿದ ನೂತನ ವಧುವರರು

Posted On: 28-05-2022 07:23PM

ಉಡುಪಿ : ಮದುವೆ ಶಾಸ್ತ್ರ ಮುಗಿದ ಬಳಿಕ ಸಭಾಂಗಣದಿಂದ ಪೇಟ, ಬಾಸಿಂಗ, ಹಾರ ಸಹಿತ ಕೈ ಕೈ ಹಿಡಿದು ನೂತನ ವಧುವರ ಮತ್ತು ಅವರ ಗೆಳೆಯರು ಮಣಿಪಾಲದಲ್ಲಿ ಸಿನಿಮಾ ಮಂದಿರಕ್ಕೆ ತೆರಳಿ ತುಳು ಚಿತ್ರ ನೋಡಿ ಸಿನಿಮಾದ ಬಗೆಗಿನ ಪ್ರೀತಿಯನ್ನು ವ್ಯಕ್ತಪಡಿಸಿದರು.

ದೈವ ಕಾರ್ಣಿಕ ; ಮದುವೆ ಮನೆಯಲ್ಲಿ ಕಳೆದುಕೊಂಡ ಸರ ದೈವಸ್ಥಾನದೆದುರು ಪತ್ತೆ

Posted On: 28-05-2022 04:31PM

ಕಾಪು : ಕಳೆದುಕೊಂಡ ಚಿನ್ನದ ಸರ ದೈವ ಪ್ರಾರ್ಥನೆಯ ಬಳಿಕ ಮರಳಿ ಸಿಗುವ ಮೂಲಕ ತುಳುನಾಡಿನ ದೈವ ಶಕ್ತಿಯ ಮಹಿಮೆಗೆ ಪಣಿಯೂರು ನಾಂಜಾರು ಶ್ರೀ ಧರ್ಮ ಜಾರಂದಾಯನ ಸಾನಿಧ್ಯ ಸಾಕ್ಷಿಯಾಗಿದೆ.

ಕಾಂಗ್ರೆಸ್ ಯುವನಾಯಕ ಫಾರೂಕ್ ಚಂದ್ರನಗರ ಮನೆಗೆ ಶಾಸಕ ಯು.ಟಿ ಖಾದರ್ ಭೇಟಿ

Posted On: 26-05-2022 10:42PM

ಕಾಪು : ಕರ್ನಾಟಕ ಸರಕಾರದ ವಿರೋದ ಪಕ್ಷದ ಉಪ ನಾಯಕ ಯು.ಟಿ ಖಾದರ್ ಕಾಂಗ್ರೆಸ್ ಯುವನಾಯಕ, ಕೆ.ಪಿ.ಸಿ.ಸಿ ಅಲ್ಪ ಸಂಖ್ಯಾತ ರಾಜ್ಯ ಸಂಯೋಜಕರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಮನೆಗೆ ಭೇಟಿ ನೀಡಿ ಪ್ರಸ್ತುತ ರಾಜಕೀಯ ಬಗ್ಗೆ ಚರ್ಚಿಸಿದರು.

ಪ್ರಶಸ್ತಿ, ಡಾಕ್ಟರೇಟ್ ಪಡೆದ ಪತ್ರಕರ್ತರಿಗೆ ಅಭಿನಂದನೆ, ವರ್ಗಾವಣೆಗೊಂಡ, ನಿವೃತ್ತಿ ಹೊಂದಿದ ಪತ್ರಕರ್ತರಿಗೆ ಸನ್ಮಾನ, ಬೀಳ್ಕೊಡುಗೆ

Posted On: 26-05-2022 10:34PM

ಮಂಗಳೂರು : ಪತ್ರಿಕಾರಂಗವು ಸಾಮಾಜಿಕ ಪರಿವರ್ತನೆಯ ಅಸ್ತ್ರವಾಗಿದೆ. ಆರೋಗ್ಯಕರ ಸಮಾಜ ನಿರ್ಮಾಣದಲ್ಲಿ ಮಾಧ್ಯಮ ಕ್ಷೇತ್ರದ ಜವಾಬ್ದಾರಿ ಮಹತ್ತರವಾದುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬುಧವಾರ ಪ್ರಶಸ್ತಿ ಪಡೆದ, ಡಾಕ್ಟರೇಟ್ ಪದವಿ ಗಳಿಸಿದ, ವರ್ಗಾವಣೆಗೊಂಡ, ನಿವೃತ್ತಿ ಹೊಂದಿದ ಪತ್ರಕರ್ತರನ್ನು ಸನ್ಮಾನಿಸಿ ಅವರು ಮಾತನಾಡಿದರು.

ಕರಂಬಳ್ಳಿ ಗೋಪಾಲ್ ಶೆಟ್ಟಿ ನಿಧನ

Posted On: 26-05-2022 10:24PM

ಉಡುಪಿ :ದೈವಾರಾಧನೆ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದ ಕರಂಬಳ್ಳಿ ಗೋಪಾಲ್ ಶೆಟ್ಟಿ ಇಂದು ನಿಧನರಾಗಿದ್ದಾರೆ.

ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾದ ಕಾಪು ದಿವಾಕರ ಶೆಟ್ಟಿ

Posted On: 24-05-2022 06:03PM

ಕಾಪು : 2020-22ನೇ ಸಾಲಿನಲ್ಲಿ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಗೆ ಕೆಎಂಎಫ್ ಆಡಳಿತ ಮಂಡಳಿ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಅವರನ್ನು ಆಯ್ಕೆ ಮಾಡಲಾಗಿದೆ.

ಸ್ಟ್ರಿಂಗ್ ಆರ್ಟ್ ನಲ್ಲಿ 2022ನೇ ಸಾಲಿನ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲಿಸಿದ ಬಂಟಕಲ್ಲಿನ ಪ್ರಿಯಾಂಕಾ

Posted On: 24-05-2022 02:18PM

ಕಾಪು : ಬಂಟಕಲ್ಲು 92ನೇ ಹೇರೂರಿನ ಯುವ ಕಲಾವಿದೆ ಕುಮಾರಿ ಪ್ರಿಯಾಂಕಾ ಆಚಾರ್ಯ ಅವರು ಸ್ಟ್ರಿಂಗ್ ಆರ್ಟ್ ನಲ್ಲಿ 2022ನೇ ಸಾಲಿನ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ನ ಸಾಧನೆ ಮಾಡಿದ್ದಾರೆ.