Updated News From Kaup

ಎಸ್. ಎಮ್. ಹೆಗಡೆ ಮತ್ತು ಕೆ. ಎಲ್. ಕುಂಡಂತಾಯರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ

Posted On: 29-04-2022 01:58PM

ಉಡುಪಿ : ಇಲ್ಲಿನ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಲೇಖಕ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಅನುಕ್ರಮವಾಗಿ ಹಿರಿಯ ಅರ್ಥಧಾರಿ ಎಸ್. ಎಮ್. ಹೆಗಡೆ ಹಾಗೂ ಅರ್ಥಧಾರಿ, ಲೇಖಕ, ಚಿಂತಕ ಕೆ. ಎಲ್. ಕುಂಡಂತಾಯ ಆಯ್ಕೆಯಾಗಿದ್ದಾರೆ.

ಸಂಸ್ಥೆಯ ತಾಳಮದ್ದಲೆ ಸಪ್ತಾಹ ಮೇ 23 ರಿಂದ ಆರಂಭವಾಗಲಿದ್ದು, ಮೇ 29 ಭಾನುವಾರ ಸಂಜೆ 5 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿರುವ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಎಸ್. ಎಮ್. ಹೆಗಡೆ ಮುಡಾರೆಯವರು ಪ್ರಶಸ್ತಿಗೆ ಆಯ್ಕೆಯಾದ ನಂತರ ನಮ್ಮನ್ನಗಲಿದ್ದು ಮರಣೋತ್ತರವಾಗಿ ಪ್ರದಾನ ಮಾಡಲಾಗುವುದು.

ಪರ್ಯಾಯ ಶ್ರೀ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿಯು ರೂ. 20,000/- ನಗದು ಪುರಸ್ಕಾರ ಒಳಗೊಂಡಿರುತ್ತದೆ.

ಎಸ್. ಎಮ್. ಹೆಗಡೆ ಮತ್ತು ಕೆ. ಎಲ್. ಕುಂಡಂತಾಯರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ

Posted On: 29-04-2022 01:57PM

< controls src="https://nammakaup.in/application/upload/459" alt="" --->

< controls src="https://nammakaup.in/application/upload/459" alt="" --->

< controls src="https://nammakaup.in/application/upload/459" alt="" --->

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮೈಸೂರು ಒಡೆಯರ ಭೇಟಿ

Posted On: 29-04-2022 01:48PM

ಉಚ್ಚಿಲ : ಇಲ್ಲಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮೈಸೂರು ಒಡೆಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ದೇವಳದ ಪ್ರಮುಖರು ಉಪಸ್ಥಿತರಿದ್ದರು.

ಮಜೂರು : ಕಾಪು ತಾಲೂಕಿನ 52 ಕುಟುಂಬಕ್ಕೆ ರಂಜಾನ್ ಕಿಟ್ ವಿತರಣೆ

Posted On: 27-04-2022 06:05PM

ಕಾಪು : ಮಲಬಾರ್ ಗೋಲ್ಡ್ & ಡೈಮಂಡ್ಸ್ ವತಿಯಿಂದ ಕಾಪು ತಾಲೂಕಿನ 52 ಕುಟುಂಬಕ್ಕೆ ರಂಜಾನ್ ಕಿಟ್ ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷ ಫಾರೂಕ್ ಚಂದ್ರನಗರ ನೇತೃತ್ವದಲ್ಲಿ ಆರ್.ಕೆ ಗೆಸ್ಟ್ ಹೌಸ್ ಮಜೂರಿನಲ್ಲಿ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಫಾರೂಕ್ ಮಲಬಾರ್ ಗೋಲ್ಡ್ & ಡೈಮಂಡ್ಸ್ ಕಳೆದ ಹತ್ತಾರು ವರ್ಷದಲ್ಲಿ ಜಾತಿ ಭೇದವಿಲ್ಲದೆ ಹತ್ತಾರು ಸಾಮಾಜಿಕ ಕೆಲಸ, ಬಡವರ ಉದ್ದಾರದ ಕೆಲಸವನ್ನು ಮಾಡುತ್ತಿದೆ. ಕೊರೊನದ ಸಂದರ್ಭದಲ್ಲಿ ಇಡೀ ಜಿಲ್ಲೆಯ 7000 ಕ್ಕೂ ಮಿಕ್ಕಿ ಬಡ ಕುಟುಂಬವನ್ನು ಗುರುತಿಸಿ ಅಕ್ಕಿ ಹಾಗೂ ಜಿನಸು ಕಿಟ್ ವಿತರಿಸಿದ್ದು ನಿಜಕ್ಕೂ ಶ್ಲಾಘನೀಯ ಅದಲ್ಲದೆ ಉಚಿತ ಮೆಡಿಸಿನ್ ಕಿಟ್, ಬಡ ಹೆಣ್ಣು ಮಕ್ಕಳ ಮದುವೆಗೆ ಸಹಾಯಧನ ,ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಅರ್ಧದಲ್ಲಿ ನಿಂತ ಮನೆ ಪೂರ್ತಿಗೊಳಿಸಲು ಸಹಾಯಧನ, ಪಬ್ಲಿಕ್ ಟಿವಿ ಮುಖಾಂತರ ಬಂದ ಮನವಿಗೆ 100 ಟ್ಯಾಬ್ ವಿತರಿಸಿ ಬಡಮಕ್ಕಳ ವಿದ್ಯೆಗೆ ಪ್ರೋತ್ಸಾಹ, ಜಾತಿ ಬೇದವಿಲ್ಲದೆ ಪ್ರತಿಯೊಂದು ಜಾತಿಯ ಹಬ್ಬದ ಆಚರಣೆ, ರಾಷ್ಟೀಯ ಮಟ್ಟದ ಎಲ್ಲಾ ಹಬ್ಬದ ಆಚರಣೆ ನಿಜಕ್ಕೂ ಇವರ ಕೆಲಸ ದೇವರು ಹಾಗೂ ಸಮಾಜ ಮೆಚ್ಚುವಂತಹದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ ಚಾರಿಟಿ ಉಸ್ತುವಾರಿ ತಂಝೀಮ್ ಶಿರ್ವ, ಕಾಪು ಸಮಾಜ ಸೇವಾ ವೇದಿಕೆ ಗೌರವಾಧ್ಯಕ್ಷ ದಿವಾಕರ ಬಿ ಶೆಟ್ಟಿ ಕಳತ್ತೂರು, ಚಂದ್ರನಗರ ಮಸ್ಜಿದ್ ಇ ನೂರ್ ಖತೀಬರಾದ ರಮೀಝ್ ಹನಫಿ, ಶರ್ಫುದ್ದಿನ್ ಶೇಖ್ ಮಜೂರು, ಬಿ.ಎ.ಫಕ್ರುದ್ದಿನ್ ಆಲಿ ಚಂದ್ರನಗರ, ಕಾಪು ಪುರಸಭೆ ಸದಸ್ಯ ನೂರುದ್ದಿನ್.ಅಹ್ಮದಿಮೋಹಲ್ಲ, ಮಲಬಾರ್ ಗೋಲ್ಡ್ & ಡೈಮಂಡ್ಸ್ ಸಿಬ್ಬಂದಿ ಫಯಾಜ್ ಅಹ್ಮದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಕಳಚಿತು ಕುಲಾಲ ಸಮುದಾಯದ ಹಿರಿಯ ಕೊಂಡಿ - ಬೋಳ ಸಂಜೀವ ಕುಲಾಲ್ ವಿಧಿವಶ

Posted On: 27-04-2022 05:52PM

ಕಾರ್ಕಳ : ಬೋಳ ಕುಲಾಲ ಸಂಘದ ಮಾಜಿ‌ ಅಧ್ಯಕ್ಷರು, ಹಿರಿಯರು, ಅನುಭವಿಗಳೂ ಆದ ಸಂಜೀವ ಕುಲಾಲ್ ಬೋಳ ಇವರು ಮುಂಬೈಯ ತಮ್ಮ ನಿವಾಸದಲ್ಲಿ ವಿಧಿವಶರಾದರು.

ಇಳಿ ವಯಸಿನಲ್ಲೂ ಸದಾ ಲವಲವಿಕೆಯಿಂದ , ಉತ್ಸಾಹದಿಂದ ಸಮುದಾಯದ ಜನರು ದುರ್ಬಲರ ಬಗ್ಗೆ ಅಪಾರ ಕಾಳಜಿ ಹೊಂದಿರುವ ಇವರು ಇಂದು ಬಂಧು ಬಳಗ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಇವರ ಅಗಲುವಿಕೆ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದ್ದು, ಕುಲಾಲ ಸಂಘ (ರಿ ) ಕಾಪು ವಲಯವು ಮೃತರ ದಿವ್ಯ ಆತ್ಮಕ್ಕೆ ಚಿರಶಾಂತಿಯನ್ನು‌ ಕೋರಿದೆ.

ಮನೆ-ನಿವೇಶನ ರಹಿತ ಎಸ್ಸಿ ಕುಟುಂಬಗಳಿಗೆ ತ್ವರಿತ ನಿವೇಶನ ಹಂಚಿಕೆಗೆ ಕ್ರಮ : ಸಚಿವ ಕೋಟ ಶ್ರೀನಿವಾಸ ಪೂಜಾರಿ

Posted On: 26-04-2022 05:07PM

ಉಡುಪಿ : ರಾಜ್ಯದಲ್ಲಿ ಮನೆ ನಿವೇಶನ ಹೊಂದಿರದ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಕುಟುಂಬಗಳ ಪಟ್ಟಿಮಾಡಿ ಅವರಿಗೆ ತ್ವರಿತವಾಗಿ ನಿವೇಶನಗಳನ್ನು ಒದಗಿಸಲು ನಮ್ಮ ಸಮಾಜ ಕಲ್ಯಾಣ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ನಾಲ್ಕು ವಿಭಾಗಗಳ ಒಂದೊಂದು ಜಿಲ್ಲೆಯನ್ನು ಮಾದರಿಯಾಗಿ ಆಯ್ಕೆ ಮಾಡಲಾಗಿದೆ. ರಾಜ್ಯಾದ್ಯಂತ ಪರಿಶಿಷ್ಟ ಜಾತಿಯ ಮನೆ/ನಿವೇಶನ ರಹಿತ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಕುಟುಂಬಗಳಿಗೆ ಮನೆ ನಿವೇಶನಗಳನ್ನು ನೀಡಬೇಕು. ಈ ಮಹತ್ವದ ಕಾರ್ಯವನ್ನು ನಡೆಸಲು ಆರಂಭಿಕವಾಗಿ ನಾಲ್ಕು ವಿಭಾಗಗಳಲ್ಲಿ ಅತೀ ಹೆಚ್ಚು ಜನಸಂಖ್ಯೆ ಇರುವ ನಾಲ್ಕು ಜಿಲ್ಲೆಗಳನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರು ವಿಭಾಗದಲ್ಲಿ ಚಿತ್ರದುರ್ಗ, ಮೈಸೂರು ವಿಭಾಗದಲ್ಲಿ ಚಾಮರಾಜ ನಗರ, ಕಲಬುರ್ಗಿ ವಿಭಾಗದಲ್ಲಿ ರಾಯಚೂರು ಮತ್ತು ಬೆಳಗಾವಿ ವಿಭಾಗದಲ್ಲಿ ಹಾವೇರಿ ಜಿಲ್ಲೆಯಲ್ಲಿ ಇದನ್ನು ಪೈಲಟ್ ಆಗಿ ಅನುಷ್ಠಾನಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ರಾಜ್ಯದಲ್ಲೀಗ ಒಟ್ಟು 5.46 ಲಕ್ಷ ಕುಟುಂಬಗಳು ಮನೆ ನಿವೇಶನ ಹೊಂದಿಲ್ಲ. ಅವರಿಗೆ ಭೂಮಿ ಕೊಡುವುದು ಸರಕಾರದ ಜವಾಬ್ದಾರಿ. ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಆದ್ಯತೆಯಲ್ಲಿ ಶೀಘ್ರ ಮನೆ ಒದಗಿಸಲು, ಆಯ್ದ ಜಿಲ್ಲೆಗಳಲ್ಲಿ ಸರಕಾರಿ ಭೂಮಿ ಲಭ್ಯತೆ, ಮನೆ ನಿವೇಶನ ರಹಿತ ಪರಿಶಿಷ್ಟ ಜಾತಿ ಸಮುದಾಯದ ಕುಟುಂಬಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಬಳಿಕ ಪ್ರತೀ ಜಿಲ್ಲೆಗೂ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ನಿವೇಶನ ಒದಗಿಸಲು ಮಾರ್ಗಸೂಚಿಗಳಲ್ಲಿ ಸಡಿಲಿಕೆ ಮಾಡಿ, ಫಲಾನುಭವಿಗಳಿಗೆ ಅನುಕೂಲವಾಗುವಂತೆ ಕ್ರಮವಹಿಸಬೇಕೆಂದು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.

ಸಭೆಯಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಸಲಹೆಗಾರ ನಿವೃತ್ತ ಅಧಿಕಾರಿ ವೆಂಕಟಯ್ಯ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕ್ಯಾಪ್ಟನ್ ಮಣಿವಣ್ಣನ್ ಪಿ., ಆಯುಕ್ತ ರಾಕೇಶ್ ಕುಮಾರ್, ರಾಜೀವ್‌ಗಾಂಧಿ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ಬಸವರಾಜ್, ಕೊಳಗೇರಿ ಅಭಿವೃದ್ಧಿ ಮಂಡಳಿ ಆಯುಕ್ತರ ಸಹಿತ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಸುರೇಶ್ ಎರ್ಮಾಳ್ ಆಯ್ಕೆ

Posted On: 26-04-2022 02:43PM

ಕಾಪು : ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧೀನ ಸಂಸ್ಥೆಯಾದ ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಸುರೇಶ್ ಎರ್ಮಾಳ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನೂತನ ಪ್ರಧಾನ ಕಾರ್ಯದರ್ಶಿಯಾಗಿ ಪುಂಡಲೀಕ ಮರಾಠ, ಉಪಾಧ್ಯಕ್ಷರಾಗಿ ಹರೀಶ್ ಕಟಪಾಡಿ, ಕೋಶಾಧಿಕಾರಿಯಾಗಿ ಅಬ್ದುಲ್ ಹಮೀದ್,ಜೊತೆ ಕಾರ್ಯದರ್ಶಿ ವಿಜಯ ಆಚಾರ್ಯ, ಕ್ರೀಡಾ ಕಾರ್ಯದರ್ಶಿ ಸಂತೋಷ ನಾಯ್ಕ ಆಯ್ಕೆಯಾಗಿದ್ದಾರೆ.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಅಧ್ಯಕ್ಷರಾದ ಅಲೆವೂರು ರಾಜೇಶ್ ಶೆಟ್ಟಿ ನೂತನ ಪಧಾದಿಕಾರಿಗಳನ್ನು ಘೋಷಣೆ ಮಾಡಿದರು.

ಕಾಪು ತಾಲೂಕು ನಿಕಟಪೂರ್ವ ಅಧ್ಯಕ್ಷ ರಾಕೇಶ್ ಕುಂಜೂರು, ನಿಕಟಪೂರ್ವ ಕಾರ್ಯದರ್ಶಿ ಶಫಿ ಉಚ್ಚಿಲ ಉಪಸ್ಥಿತರಿದ್ದರು.

ಸಾಹಿತ್ಯ ಬದುಕನ್ನು ಉತ್ತಮಗೊಳಿಸುತ್ತದೆ - ಗುರ್ಮೆ ಸುರೇಶ್ ಶೆಟ್ಟಿ

Posted On: 25-04-2022 08:55PM

ಉಡುಪಿ : ಅನಾದಿ ಕಾಲದಿಂದಲೂ ತುಳುವರು ಭಾವನಾತ್ಮಕವಾದ ಬದುಕನ್ನು ಕಟ್ಟಿಕೊಂಡವರು, ಪ್ರಕೃತಿಯನ್ನು ಆರಾಧಿಸುತಿದ್ದವರು. ಆದರೇ ಇಂದು ಮನೆಗಳು ದೊಡ್ಡದಾಗಿವೆ, ಆದರೇ ಮನಸ್ಸುಗಳು ಚಿಕ್ಕದಾಗುತ್ತಿವೆ. ತುಳುವರಲ್ಲಿಯೂ ಕೌಟುಂಬಿಕ ಶಿಥಿಲತೆ ಕಾಣಲಾರಂಭಿಸಿದೆ ಎಂದು ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ವಿಷಾದ ವ್ಯಕ್ತಪಡಿಸಿದರು. ಅವರು ಉಡುಪಿ ತುಳುಕೂಟದ 27ನೇ ವರ್ಷದ ಪಣಿಯಾಡಿ ಕಾದಂಬರಿ ಪ್ರಶಸ್ತಿ ಪಡೆದ, ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕಿ ಪ್ರೊ. ಅಕ್ಷಯಾ ಆರ್. ಶೆಟ್ಟಿ ಅವರ ದೆಂಗ ಕಾದಂಬರಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಉತ್ತಮ ಸಾಹಿತ್ಯದಿಂದ ಬದುಕನ್ನು ಉತ್ತಮಗೊಳಿಸಲು ಸಾಧ್ಯವಿದೆ. ಕಾದಂಬರಿ ಎಂಬುದು ಜನರ ನಡುವಿನ ಮಾತು ಘಟನೆಗಳೇ ಆಗುತ್ತವೆ. ಆದ್ದರಿಂದ ತುಳುಕೂಟವು ತುಳು ಭಾಷೆಯಲ್ಲಿ ಕಾದಂಬರಿಗಳನ್ನು ಬರೆಯುವುದಕ್ಕೆ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾದುದು ಎಂದರು.

ಪ್ರೊ. ಅಕ್ಷಯಾ ಆರ್. ಶೆಟ್ಟಿ ಅವರಿಗೆ ಜನಪದ ವಿದ್ವಾಂಸ ಕೆ.ಎಲ್.ಕುಂಡಂತಾಯ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿದರು. ಕಾದಂಬರಿಯನ್ನು ಡಾ.ನಿಕೇತನ ಅವರು ಪರಿಚಯಿಸಿದರು.

ತುಳುಕೂಟದ ಅಧ್ಯಕ್ಷ ಜಯಕರ ಶೆಟ್ಟಿಇಂದ್ರಾಳಿ ಅಧ್ಯಕ್ಷತೆ ವಹಿಸಿದ್ದರು. ದಾನಿ ವಿಶ್ವನಾಥ ಶೆಣೈ, ಪ್ರ.ಕಾರ್ಯದರ್ಶಿ ಗಂಗಾಧರ ಕಿದಿಯೂರು, ಖಜಾಂಚಿ ಎಂ.ಜಿ.ಚೈತನ್ಯ, ಉಪಾಧ್ಯಕ್ಷೆ ಮನೋರಮಾ ಶೆಟ್ಟಿ ವೇದಿಕೆಯಲ್ಲಿದ್ದರು.

ಕಾದಬಂರಿ ಪ್ರಶಸ್ತಿ ಸಮಿತಿ ಸಂಚಾಲಕಿ ತಾರಾ ಉಮೇಶ್ ಆಚಾರ್ಯ ಸ್ವಾಗತಿಸಿದರು, ಸರೋಜಾ ಯಶವಂತ್ ಮತ್ತು ರಶ್ಮಿ ಶೆಣೈ ಕಾರ್ಯಕ್ರಮ ನಿರೂಪಿಸಿದರು. ಯಶೋಧಾ ಕೇಶವ್ ಮತ್ತು ವೇದಾವತಿ ಸಹಕರಿಸಿದರು.

ಕಾಪು : ಕಾಂಗ್ರೆಸ್ ವತಿಯಿಂದ ಸೌಹಾರ್ದ ಸಮಾರಂಭ ಹಾಗೂ ಇಫ್ತಾರ್ ಕೂಟ

Posted On: 24-04-2022 05:15PM

ಕಾಪು : ಬ್ಲಾಕ್ ಕಾಂಗ್ರೆಸ್ ಸಮಿತಿ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಕಾಪು (ದ) ಇದರ ಸಹಯೋಗದೊಂದಿಗೆ ಸೌಹಾರ್ದ ಸಮಾರಂಭ ಹಾಗೂ ಇಫ್ತಾರ್ ಕೂಟವು ಏಪ್ರಿಲ್‌ 27ರ ಸಂಜೆ 4:30 ಕ್ಕೆ ಕಾಪುವಿನ ಕೊಪ್ಪಲಂಗಡಿಯ ಕಮ್ಯುನಿಟಿ ಹಾಲ್ ನಲ್ಲಿ ಸಭಾ ಕಾರ್ಯಕ್ರಮದೊಂದಿಗೆ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಏಪ್ರಿಲ್‌ 29 : ಶ್ರೀ ದೇವಿ ಭಜನಾ ಮಂಡಳಿ ಮಂಡೇಡಿ ಇನ್ನಂಜೆ - ವಾರ್ಷಿಕ ಭಜನಾ ಮಂಗಳೋತ್ಸವ

Posted On: 24-04-2022 05:03PM

ಕಾಪು : ತಾಲೂಕಿನ ಮಂಡೇಡಿ ಇನ್ನಂಜೆಯ ಶ್ರೀ ದೇವಿ ಭಜನಾ ಮಂಡಳಿ ಇದರ ವಾರ್ಷಿಕ ಭಜನಾ ಮಂಗಳೋತ್ಸವ ಏಪ್ರಿಲ್‌ 29 ರಂದು ಜರಗಲಿದೆ.

ಏಪ್ರಿಲ್ 29, ಶುಕ್ರವಾರದಂದು ಬೆಳಿಗ್ಗೆ ಗಂಟೆ 10ಕ್ಕೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಗಂಟೆ 12ಕ್ಕೆ ಪ್ರಸಾದ ವಿತರಣೆ, ಮಧ್ಯಾಹ್ನ 1ರಿಂದ ಅನ್ನಸಂತರ್ಪಣೆ, ಸಾಯಂಕಾಲ ಗಂಟೆ 6ರಿಂದ ದೀಪ ಪ್ರತಿಷ್ಠೆಯೊಂದಿಗೆ ಭಜನೆ ಆರಂಭ, ರಾತ್ರಿ ಗಂಟೆ 12-30ಕ್ಕೆ ಭಜನಾ ಮಂಗಳೋತ್ಸವ ಜರಗಲಿದೆ.

ಭಜನಾ ಮಂಗಳೋತ್ಸವದಲ್ಲಿ ಶ್ರೀ ದೇವಿ ಭಜನಾ ಮಂಡಳಿಯ ಮಹಿಳಾ ಸದಸ್ಯರು, ಮಂಡೇಡಿ, ಶಿಮಂತೂರು ಶ್ರೀ ಆದಿಜನಾರ್ದನ ಮಕ್ಕಳ ಕುಣಿತ ಭಜನಾ ಮಂಡಳಿ, ಮುಲ್ಕಿ, ಇನ್ನಂಜೆಯ ಯುವತಿ ಮಂಡಲ ಸದಸ್ಯರಿಂದ ಕುಣಿತ ಭಜನೆ, ಶ್ರೀ ಮಹಾಲಸ ನಾರಾಯಣಿ ಭಜನಾ ಮಂಡಳಿ ಶಿರ್ವ, ಶ್ರೀ ಬ್ರಹ್ಮಲಿಂಗೇಶ್ವರ ಭಜನಾ ಮಂಡಳಿ ಕರಂದಾಡಿ, ಶ್ರೀ ಸರಸ್ವತಿ ಭಜನಾ ಮಂಡಳಿ ಸರಸ್ವತಿನಗರ ಪಾಂಗಾಳ, ಶ್ರೀ ದೇವಿ ಭಜನಾ ಮಂಡಳಿ, ಮಂಡೇಡಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.