Updated News From Kaup

ಹಿರಿಯರ ಸಾಧನೆಯನ್ನು ಗುರುತಿಸಿ ಗೌರವಿಸುವುದು ಗುರುಕಾಣಿಕೆ ನೀಡಿದಂತೆ : ಮಹೇಶ್ ಶೆಟ್ಟಿ

Posted On: 23-05-2022 11:34PM

ಬಂಟಕಲ್ಲು : ವಿವಿಧ ರಂಗದಲ್ಲಿ ಸಾಧನೆಯನ್ನು ಮಾಡಿ ಈಗ ವಿಶ್ರಾಂತ ಜೀವನ ನಡೆಸುತ್ತಿರುವ ವ್ಯಕ್ತಿ ಗಳನ್ನು ಗುರುತಿಸಿ ಅವರಿಗೆ ಗೌರವ ಸಲ್ಲಿಸುವುದು ಸಮಾಜ ಅವರಿಗೆ ಗುರುಕಾಣಿಕೆ ನೀಡಿದಂತೆ ಎಂದು 92ನೇ ಹೇರೂರು ವಿಕಾಸ ಸೇವಾ ಸಮಿತಿ ಮತ್ತು ಮಹಿಳಾ ಬಳಗದ 2ನೇ ವರ್ಷದ ಸಾರ್ವಜನಿಕ ಕ್ರಿಡೋಸವದ ಸಮಾರೋಪ ಸಮಾರಂಭದಲ್ಲಿ ಸ್ಥಳೀಯ ಭವಾನಿ ಫಾರ್ಮ್ನ ಮಾಲಕರಾದ ಶ್ರೀ ಮಹೇಶ್ ಶೆಟ್ಟಿ ಹಿರಿಯರಾದ ವಿಠ್ಠಲ್ ಶೆಟ್ಟಿ, ದೇವದಾಸ ಜೋಗಿ, ದೇವರಾಜ ಆಚಾರ್ಯ, ಕೂಸ ಎಸ್. ಪೂಜಾರಿ ಕಲ್ಲುಗುಡ್ಡೆ ಇವರನ್ನು ಸನ್ಮಾನಿಸಿ ಅಭಿಪ್ರಾಯ ಪಟ್ಟರು.

ಮೇ 24 : ಪತ್ತನಾಜೆ - ಆಟ, ಕೋಲ, ಬಲಿ, ಅಂಕ, ಆಯನಗಳಿಗೆ 'ವಿರಾಮ'

Posted On: 23-05-2022 08:46PM

'ಪತ್ತನಾಜೆ' ಎಂದರೆ ಆಟ. ಕೋಲ‌, ಬಲಿ‌, ಅಂಕ, ಆಯನಗಳಿಗೆ ಅಲ್ಪವಿರಾಮ ಎಂಬ ನಂಬಿಕೆ ಸರಿಯಾದುದೇ . ಆದರೆ ಸಾಕು ಸಂಭ್ರಮ - ಗೌಜಿ ಗದ್ದಲ , ಉತ್ಸವಗಳ ಗುಂಗಿನಿಂದ ಹೊರಗೆ ಬಾ.....ತೊಡಗು... ಕೃಷಿಗೆ ಎಂಬ ಎಚ್ಚರಿಕೆಯೂ 'ಪತ್ತನಾಜೆ'ಯ ನೆನಪಿನಲ್ಲಿದೆ . ಆಚರಣೆಗಳು ಇಲ್ಲದಿದ್ದರೂ ಜೀವನಾಧಾರವಾದ ಬೇಸಾಯಕ್ಕೆ ಪ್ರವೃತ್ತನಾಗು ಎಂಬ ನಿರ್ದೇಶನ ಪತ್ತನಾಜೆ ಒದಗಿ ಬರುವ ಸಂದರ್ಭದಲ್ಲಿ ನಿಚ್ಚಳ . ತುಳುವರ ಬೇಶ ತಿಂಗಳ ಹತ್ತನೇ ದಿನವೇ ಪತ್ತನಾಜೆ .ಸೌರ ಪದ್ಧತಿಯ ಎರಡನೇ ತಿಂಗಳು ವೃಷಭ .‌ವೃಷಭ ಎಂದರೆ ಬೇಶ .ಹತ್ತನೇ ದಿನವನ್ನು ತಿಂಗಳು ಸಾಗುವ ಹತ್ತನೇ ಹೆಜ್ಜೆ (ಅಜೆ)ಎಂದು ಗ್ರಹಿಸಿ 'ಪತ್ತನಾಜೆ"ಎಂದಿರ ಬಹುದು.

ಮಳೆಗಾಲದಲ್ಲಿ ರಸ್ತೆಗಳಲ್ಲಿ ನೀರು ನಿಲ್ಲದಂತೆ ಕ್ರಮ ಕೈಗೊಳ್ಳಿ : ಉಸ್ತುವಾರಿ ಸಚಿವ ಎಸ್.ಅಂಗಾರ

Posted On: 23-05-2022 08:34PM

ಉಡುಪಿ : ಮಳೆಗಾಲದ ಸಂದರ್ಭದಲ್ಲಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಲೋಕೋಪಯೋಗಿ ರಸ್ತೆ, ಜಿಲ್ಲಾ ಪಂಚಾಯತ್ ರಸ್ತೆ, ಗ್ರಾಮೀಣ ರಸ್ತೆಗಳು ಸೇರಿದಂತೆ ಯಾವುದೇ ರಸ್ತೆಯಲ್ಲಿ ಮಳೆಯ ನೀರು ನಿಲ್ಲದೇ, ಸರಾಗವಾಗಿ ಹರಿದುಹೋಗುವ ಕುರಿತಂತೆ ರಸ್ತೆ ಪಕ್ಕದ ಚರಂಡಿಗಳನ್ನು ಸ್ವಚ್ಛಗೊಳಿಸಿ, ಯಾವುದೇ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ರಾಜ್ಯದ ಮೀನುಗಾರಿಕೆ, ಬಂದರು ಮತು ಒಳನಾಡು ಜಲಸಾರಿಗೆ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ ನೀಡಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಜಿಲ್ಲೆಯಲ್ಲಿ ಮಾನ್ಸೂನ್ ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕಡಲ್ಕೊರೆತಗೊಂಡ ಪ್ರದೇಶಗಳಿಗೆ ಶಾಸಕ ಲಾಲಾಜಿ ಆರ್ ಮೆಂಡನ್ ಭೇಟಿ ; ತಡೆಗೋಡೆ ನಿರ್ಮಾಣ ಕಾಮಗಾರಿಗೆ ಸೂಚನೆ

Posted On: 23-05-2022 06:02PM

ಕಾಪು : ಇಲ್ಲಿನ ವಿಧಾನ ಸಭಾ ವ್ಯಾಪ್ತಿಯ ಕೈಪುಂಜಾಲು, ಪೊಲಿಪು ಭಾಗಗಳಲ್ಲಿ ಕಡಲ್ಕೊರೆತಗೊಂಡ ಪ್ರದೇಶಗಳಿಗೆ ಶಾಸಕ ಲಾಲಾಜಿ ಆರ್ ಮೆಂಡನ್ ಅಧಿಕಾರಿಗಳೊಂದಿಗೆ ಭೇಟಿ ನೀಡಿ ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚಿಸಿದರು.

ವಿದ್ಯಾಸರಸ್ವತಿಗೆ ಡಾಜ್ಲಿಂಗ್ ಫ್ಯಾಷನ್ ಸ್ಟ್ರೀಕ್ಸ್ ಪ್ರಶಸ್ತಿ

Posted On: 22-05-2022 05:28PM

ಉಡುಪಿ : ಬೆಂಗಳೂರಿನ ಡಾಜ್ಲಿಂಗ್ ಫ್ಯಾಷನ್ ಸ್ಟ್ರೀಕ್ಸ್ ಫ್ಯಾಷನ್ ಶೋ ಕಾರ್ಯಕ್ರಮದಲ್ಲಿ ಉಡುಪಿಯ ವಿದ್ಯಾ ಸರಸ್ವತಿ ಅವರು ಡಾಜ್ಲಿಂಗ್ ಫ್ಯಾಷನ್ ಸ್ಟ್ರೀಕ್ಸ್ ಎಂಬ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಕೊರಂಗ್ರಪಾಡಿ ಉಪಚುನಾವಣೆ ಬಿಜೆಪಿಗೆ ಗೆಲುವು

Posted On: 22-05-2022 01:03PM

ಉಡುಪಿ : ಅಲೆವೂರು ಗ್ರಾಮ ಪಂಚಾಯತ್ ಕೊರಂಗ್ರಪಾಡಿ ಮೂರನೇ ವಾರ್ಡ್ ನ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಂಕರ್ ಪಾಲನ್ ರವರು 67 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.

ಹೇರೂರು : ಆಮಂತ್ರಣ ಪತ್ರಿಕೆ ಬಿಡುಗಡೆ

Posted On: 22-05-2022 10:05AM

ಕಾಪು : ಹೇರೂರು ಗ್ರಾಮದ ಶ್ರೀ ಜುಮಾದಿ ಮತ್ತು ಬಂಟ ದೈವಸ್ಥಾನದ ಪುನರ್ ಪ್ರತಿಷ್ಠೆ ಸಾನಿಧ್ಯ ಕಲಶಾಭಿಷೇಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹೇರೂರು ಇದರ ಪ್ರಧಾನ ಅರ್ಚಕರಾದ ಗುರುರಾಜ್ ಭಟ್ ರವರು ಬಿಡುಗಡೆಗೊಳಿಸಿದರು.

ಗುರಿ ಸಾಧನೆಗೆ ಪ್ರಯತ್ನ ನಿರಂತರವಾಗಿರಲಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Posted On: 21-05-2022 05:52PM

ಉಡುಪಿ : ವಿದ್ಯಾರ್ಥಿಗಳು ತಮ್ಮ ಕನಸಿನ ಗುರಿಯನ್ನು ಸಾಧಿಸಲು ಕಠಿಣ ಶ್ರಮ ಮತ್ತು ನಿರಂತರವಾಗಿ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625 ಅಂಕ ಗಳಿಸಿ ವಿಶೇಷ ಸಾಧನೆ ಮಾಡಿದ ಜಿಲ್ಲೆಯ ಪ್ರತಿಭಾವಂತ ಮಕ್ಕಳಿಗೆ ಸನ್ಮಾನಿಸಿ ಮಾತನಾಡಿದರು.

ಕಾಪು ಸಾರ್ವಜನಿಕ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ

Posted On: 21-05-2022 05:39PM

ಕಾಪು : ಕರ್ನಾಟಕ ಸರಕಾರದ ಅಧೀನದಲ್ಲಿರುವ ಕಾಪು ಸಾರ್ವಜನಿಕ ಗ್ರಂಥಾಲಯ ಮತ್ತು ಉಡುಪಿ ಮಲಬಾರ್ ಗೋಲ್ಡ್ & ಡೈಮಂಡ್ಸ್ ಇದರ ಸಾರ್ವಜನಿಕ ಗ್ರಂಥಾಲಯಕ್ಕೆ ಸಮಾಜ ಸೇವೆಯಲ್ಲಿ ರಾಷ್ಟ್ರೀಯ ಪುರಸ್ಕೃತರಾದ ಮೊಹಮ್ಮದ್ ಫಾರೂಕ್ ಚಂದ್ರನಗರ, ದಿವಾಕರ ಬಿ ಶೆಟ್ಟಿ ಕಳತ್ತೂರು,ದಿವಾಕರ ಡಿ ಶೆಟ್ಟಿ ಕಳತ್ತೂರು ಇವರ ನೇತೃತ್ವದಲ್ಲಿ ಕಾದಂಬರಿ ಕಥೆ ಪುಸ್ತಕ, ಆರೋಗ್ಯಕ್ಕೆ ಸಂಬಂಧಪಟ್ಟ ಪುಸ್ತಕ ಹಾಗೂ ಧಾರ್ಮಿಕ ವಿಚಾರವಾದ ದೆಂದೂರ ಪಂಜುರ್ಲಿ ಪುಸ್ತಕವನ್ನು ಕಾಪುವಿನ ಸಾರ್ವಜನಿಕ ಗ್ರಂಥಾಲಯದ ಮೇಲ್ವಿಚಾರಕರಾದ ಪೂರ್ಣಿಮಾ ಇವರಿಗೆ ಹಸ್ತಾಂತರಿಸಲಾಯಿತು.

ಕಾಪು ಶ್ರೀ ಹೊಸ ಮಾರಿಗುಡಿಗೆ ಬಹುಭಾಷಾ ಗಾಯಕಿ ವಿದೂಷಿ ನಂದಿನಿ ರಾವ್ ಭೇಟಿ

Posted On: 21-05-2022 05:21PM

ಕಾಪು : ದೇಶ ವಿದೇಶಗಳಲ್ಲಿ ಸಂಗೀತ ಕಾರ್ಯಕ್ರಮವನ್ನು ನೀಡಿರುವ ಬಹುಭಾಷಾ ಗಾಯಕಿ ವಿದೂಷಿ ನಂದಿನಿ ರಾವ್ ಪಡುಬಿದ್ರಿ ಅವರು ಮೇ. 20ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.