Updated News From Kaup

ಸಂತ ಮೇರಿ ಮಹಾವಿದ್ಯಾಲಯದಲ್ಲಿ ಬೂಸ್ಟರ್ ಡೋಸ್ ಲಸಿಕಾ ಅಭಿಯಾನ

Thumbnail
Posted On: 22 Jul 2022, 01:18 PM

ಶಿರ್ವ : ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್‍ಸಿಸಿ, ಎನ್‍ಎಸ್‍ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಜಂಟಿಯಾಗಿ ಬೂಸ್ಟರ್ ಡೋಸು ಲಸಿಕಾ ಅಭಿಯಾನವನ್ನು ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ, ವಿದ್ಯಾರ್ಥಿಗಳಿಗೆ ಕಾಲೇಜಿನ ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಜುಲೈ 22 ರಂದು ಆಯೋಜಿಸಲಾಯಿತು. ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗೆ ಬೂಸ್ಟರ್ ಡೋಸ್ ಕೋವಿಡ್ -19 ಲಸಿಕಾಕರಣ ನಡೆಸಲು ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಕಾಲೇಜಿನ 18 ವರ್ಷಕ್ಕಿಂತ ಮೇಲ್ಪಟ್ಟ ಎರಡು ಡೋಸ್ ಪಡೆದ ಅರ್ಹ ಫಲಾನುಭವಿಗಳಿಗೆ ಲಸಿಕೆಗಳ ಲಭ್ಯತೆಗೆ ಅನುಸಾರವಾಗಿ ಕಾಲೇಜು ಆವರಣದಲ್ಲಿಯೇ ಲಸಿಕಾಕರಣ ಅಭಿಯಾನ ಆಯೋಜಿಸಲಾಯಿತು, ಕಾಲೇಜು ಆಡಳಿತ ವ್ಯವಸ್ಥೆಯ ಸಹಕಾರದಿಂದ ಕೋವಿಡ್ ನಿಯಂತ್ರಣ ನಿಯಮಾವಳಿಗಳನ್ನು ಪಾಲಿಸಿಕೊಂಡು ಲಸಿಕೆ ವಿತರಿಸಲಾಗುತ್ತಿದೆ ಎಂದು ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಶಿರ್ವ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಸುಬ್ರಮಣ್ಯರವರು ಜಿಲ್ಲಾಡಳಿತದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಲಸಿಕೆ ವಿತರಣೆ ಮಾಡಲಾಗುತ್ತಿದ್ದು ಕಾಲೇಜುಗಳ ಮೂಲಕ ಲಸಿಕೆ ನೀಡಲಾಗುತ್ತಿದೆ,ಲಸಿಕೆ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿದೆ ಎಂಬ ಮಾಹಿತಿಯನ್ನು ನೀಡಿದರು.      ಈ ಕಾರ್ಯಕ್ರಮದಲ್ಲಿ ಬೋಧಕ,ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದರು. ಈ ಅಭಿಯಾನಕ್ಕೆ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕರಾದ ಶಶಿ , ಆಶಾ ಕಾರ್ಯಕರ್ತರಾದ ಸವಿತಾ,ರೆಹೆಮತ್‍ವರು ಸಹಕಾರವನ್ನು ನೀಡಿದರು.

ಸುರತ್ಕಲ್ ರಸ್ತೆ ಅಪಘಾತದಲ್ಲಿ ಕಟಪಾಡಿಯ ಮೂಡಬೆಟ್ಟು ದೇವಸ್ಥಾನದ ಅರ್ಚಕ ದುರ್ಮರಣ

Thumbnail
Posted On: 22 Jul 2022, 01:10 PM

ಕಟಪಾಡಿ : ಸುರತ್ಕಲ್ ನಲ್ಲಿ ಲಾರಿ ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕಟಪಾಡಿ ಬಳಿಯ ಮಟ್ಟು ನಿವಾಸಿ, ದೇಗುಲದ ಅರ್ಚಕ ಅಕ್ಷಯ್ ಕೆ. ಆರ್ (33) ದುರ್ಮರಣ ಹೊಂದಿದ್ದಾರೆ. ಕಟಪಾಡಿ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನಡೆಸುತ್ತಿದ್ದ ಅಕ್ಷಯ್ ಸುರತ್ಕಲ್ ನಲ್ಲಿ ಪೂಜೆ ಮುಗಿಸಿ ಕಟಪಾಡಿ ಗೆ ಹಿಂತಿರುಗಿ ಬರುವ ವೇಳೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತರು ತಾಯಿಯನ್ನು ಅಗಲಿದ್ದಾರೆ.

ಜುಲೈ 23 : ಮುಕುಂದ ಕೃಪಾ ನರ್ಸರಿ, ಪ್ರಾಥಮಿಕ ಶಾಲೆಯ ಸಂಸ್ಥಾಪಕರ ದಿನಾಚರಣೆ ಹಾಗೂ ಗೋಲ್ಡನ್ ಜ್ಯುಬ್ಲಿ ಸಂಭ್ರಮಾಚಾರಣೆ

Thumbnail
Posted On: 21 Jul 2022, 11:27 AM

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದ ಬಳಿಯ ಮುಕುಂದ ಕೃಪಾ ಇಂಗ್ಲೀಷ್ ಮೀಡಿಯಂ ನರ್ಸರಿ ಹಾಗೂ ಪ್ರಾಥಮಿಕ ಶಾಲೆಯ ಸಂಸ್ಥಾಪಕರ ದಿನಾಚರಣೆ ಹಾಗೂ ಗೋಲ್ಡನ್ ಜ್ಯುಬ್ಲಿ ಸಂಭ್ರಮಾಚಾರಣೆಯ ಸಮಾರಂಭ ಜುಲೈ 23ರಂದು ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲಿ ಮಾಧ್ಯಾಹ್ನ 2:30 ಕ್ಕೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕುದಿ ವಸಂತ ಶೆಟ್ಟಿ ಅವರು ಭಾಗವಹಿಸಲಿದ್ದಾರೆ. ಹಾಗೂ ಈ ವೇಳೆ ಸಮಾರಂಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್,ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಪ್ರಭಾರ ಬಿಇಒ ಅಶೋಕ್ ಕಾಮತ್, ಅಕಾಡೆಮಿ ಜನರಲ್ ಎಜುಕೇಷನ್ ಮಣಿಪಾಲ ಇದರ ಕಾರ್ಯದರ್ಶಿ ವರದಾಯ ಪೈ, ಡೆಂಟಾ ಕೇರ್ ಕ್ಲಿನಿಕ್ ಉಡುಪಿ ಇದರ ಡಾ.ವಿಜಯೇಂದ್ರ ವಸಂತ್ ರಾವ್, ಮುಕುಂದ ಕೃಪಾ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಪ್ರಭಾವತಿ.ಎಸ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಡೆಕಾರು : ಉಚಿತ ಆರೋಗ್ಯ ತಪಾಸಣಾ ಶಿಬಿರ

Thumbnail
Posted On: 20 Jul 2022, 04:36 PM

ಉಡುಪಿ‌: ಕಡೆಕಾರು ಗ್ರಾಮ ಪಂಚಾಯತ್, ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಪೆ ಹಾಗೂ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಡೆಕಾರು, ಕುತ್ಪಾಡಿ ಇವರ ಸಹಯೋಗದೊಂದಿಗೆ ಜುಲೈ 20ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವು ಕಡೆಕಾರು- ಕುತ್ಪಾಡಿ ಅಂಗನವಾಡಿ ಪಡುಕೆರೆಯಲ್ಲಿ ಜರಗಿತು. ಈ ಸಂದರ್ಭ ಮಧುಮೇಹ ತಪಾಸಣೆ, ರಕ್ತದೊತ್ತಡ ಪರೀಕ್ಷೆ, ನುರಿತ ವೈದ್ಯರಿಂದ ಸಲಹೆ, ಕೋವಿಡ್ ಲಸಿಕಾ ವಿತರಣಾ ಕಾರ್ಯಕ್ರಮ, ಆಯುಷ್ಮಾನ್ ಕಾರ್ಡ್, ಸೀನಿಯರ್ ಸಿಟಿಜನ್ ಕಾರ್ಡ್ ಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.

ಉದ್ಯಾವರ : ಗುಂಡಿ ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಕಂಟೈನರ್

Thumbnail
Posted On: 20 Jul 2022, 01:39 PM

ಉದ್ಯಾವರ : ರಾಷ್ಟ್ರೀಯ ಹೆದ್ದಾರಿ 66 ಹಾಲಿಮಾ ಸಾಬ್ಜು ಸಭಾಂಗಣದ ಮುಂಭಾಗದಲ್ಲಿ ಹೆದ್ದಾರಿಯ ಗುಂಡಿ ತಪ್ಪಿಸಲು ಹೋಗಿ ಕಂಟೈನರ್ ಕಾರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿರು ಗುಂಡಿಯಿಂದ ಅದನ್ನು ತಪ್ಪಿಸಲು ಹೋಗಿ ಕಂಟೈನರ್ ನ ನಿಯಂತ್ರಣ ತಪ್ಪಿ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ ಹಾಗೂ ಕಂಟೈನರ್ ರಾಷ್ಟ್ರೀಯ ಹೆದ್ದಾರಿಯ ಡೈವರ್ಷನ್ ಏರಿ ನಿಂತಿದೆ.

ತುಳುವಿನ ಮಾನ್ಯತೆಗೆ ರಾಜ್ಯಸಭೆಯಲ್ಲಿ ಪ್ರಯತ್ನ - ಡಾ. ಹೆಗ್ಗಡೆ ಭರವಸೆ

Thumbnail
Posted On: 20 Jul 2022, 12:05 AM

ಮಂಗಳೂರು : ತುಳು ಭಾಷೆಯನ್ನು ಸಂವಿಧಾನದ ಕಲಂ 347ರ ಪ್ರಕಾರ ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾನ್ಯ ಮಾಡಲು, ಜನಪ್ರತಿನಿಧಿಗಳು ಹೇಳುತ್ತಿರುವ ತಾಂಂತ್ರಿಕ ಕಾರಣವನ್ನು ನಿವಾರಿಸುವಂತೆ ಜೈ ತುಳುನಾಡ್ ಸಂಘಟನೆಗಳು ಕಾರ್ಯಕರ್ತರು ಮಂಗಳವಾರ ಶ್ರೀಕ್ಷೇತ್ರದ ಧರ್ಮಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಂತರ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಡಾ: ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಅಭಿನಂದನೆಯನ್ನು ಸಲ್ಲಿಸಿ, ತುಳುಮಾತೆಯ ಛಾಯಾಚಿತ್ರವನ್ನು ನೀಡಿ ಗೌರವಿಸಲಾಯಿತು. ಹೆಗ್ಗಡೆ ಅವರು ತುಳುವನ್ನು ಅಧಿಕೃತ ಭಾಷೆಯನ್ನಾಗಿಸಲು ಖಂಡಿತ ಪ್ರಯತ್ನ ಪಡುವುದಾಗಿ ತಿಳಿಸಿದರು. ರಾಜ್ಯಸಭಾ ಸದಸ್ಯನಾಗಿ ನನಗೆ ತುಳು ಭಾಷೆಯ ಬಗ್ಗೆ ಸಂಸತ್ತಿನಲ್ಲಿ ಮಾತನಾಡಲು ಒಂದು ಒಳ್ಳೆಯ ಅವಕಾಶವನ್ನು ಒದಗಿ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ.ಆಕಾಶ್ ರಾಜ್ ಜೈನ್, ಜೈ ತುಳುನಾಡ್ ಸಂಘಟನೆ ಅಧ್ಯಕ್ಷ ಅಶ್ವಥ್ ತುಳುವೆ, ಸ್ಥಾಪಕ ಸದಸ್ಯ ಕಿರಣ್ ತುಳುವೆ, ತುಲು ಸಾಹಿತ್ಯ - ಸಂಸ್ಕೃತಿ ಸಮಿತಿಯ ಕುಶಾಲಾಕ್ಷೀ ವಿ.ಕಣ್ವತೀರ್ಥ, ಉಪಸಂಘಟನಾ ಕಾರ್ಯದರ್ಶಿ ಪೃಥ್ವಿ ತುಳುವೆ, ಪ್ರಚಾರ ಸಮಿತಿಯ ವಿನಯ್ ರೈ ಕುಡ್ಲ, ತುಳುನಾಡು ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ., ಚಾವಡಿ ಕೂಟದ ಅಧ್ಯಕ್ಷ ಶೇಖರ್ ಗೌಡತ್ತಿಗೆ, ಬೊಲ್ತೇರ್ ತಾಲೂಕು ಕೂಟದ ಅಧ್ಯಕ್ಷ ರಾಜೇಶ್ ಕುಲಾಲ್, ತುಳುವೆರೆ ಪಕ್ಷ ಚಾವಡಿ ಕೂಟದ ಉಪಾಧ್ಯಕ್ಷ ನವೀನ್ ಪೂಜಾರಿ ಅಡ್ಕದಬೈಲು, ತುಳುವರೆ ಪಕ್ಷ ಕರಂಬಾರ್ ಗ್ರಾಮ ಸಮಿತಿ ಅಧ್ಯಕ್ಷ ಉಮೇಶ್ ಕುಲಾಲ್, ಮುಗಿದು ಗ್ರಾಮ ಸಮಿತಿದ ಅಧ್ಯಕ್ಷ ಉಮೇಶ್ ಕುಲಾಲ್, ಮುಗೇರ್ ಗ್ರಾಮ ಸಮಿತಿದ ಅಧ್ಯಕ್ಷ ಅಶ್ವಥ್ ಕುಲಾಲ್, ಬೊಲ್ತೇರ್ ಗ್ರಾಮ ಸಮಿತಿಯ ಉಪಾಧ್ಯಕ್ಷರಾದ ರಮೇಶ್ ಸಾಲಿಯಾನ್ ಮೊದಲಾದವರು ಉಪಸ್ಥಿತರಿದ್ದರು.

ಜುಲೈ 24 : ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ ವತಿಯಿಂದ ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ, ವಿದ್ಯಾರ್ಥಿವೇತನ ವಿತರಣೆ, ಸಾಧಕರಿಗೆ ಸನ್ಮಾನ

Thumbnail
Posted On: 19 Jul 2022, 11:29 PM

ಕಾಪು : ಜಿ.ಎಸ್.ಬಿ ಸಮಾಜ ಹಿತರಕ್ಷಣಾ ವೇದಿಕೆ(ರಿ.), ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.) ಮುದರಂಗಡಿ ಇದರ ಸಹಭಾಗಿತ್ವದಲ್ಲಿ ಜುಲೈ 24ರಂದು ವಿದ್ಯಾ ಪೋಷಕ ನಿಧಿ (2022-23)ವಿದ್ಯಾರ್ಥಿ ವೇತನವನ್ನು ಸುಮಾರು 500ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳಿಗೆ ಸುಮಾರು 70 ಲಕ್ಷ ಮೌಲ್ಯದ ವಿದ್ಯಾರ್ಥಿವೇತನ ವಿತರಣೆ, ಶೈಕ್ಷಣಿಕ ಪ್ರೇರಣಾ ಕಾರ್ಯಗಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉಚ್ಚಿಲದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಂಕೀರ್ಣದ ಮಾಧವ ಮಂಗಲ ಸಭಾಭವನದಲ್ಲಿ ಆಯೋಜಿಸಲಾಗಿದೆ. ಎಂದು ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್ ಕಾಪು ವೆಂಕಟರಮಣ ದೇವಳದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ‌ ನೀಡಿದರು. ಮುಂಬಯಿಯ ಖ್ಯಾತ ಸುಪ್ರೀಂ ಕೋರ್ಟ್‌ ವಕೀಲರಾದ ರವಿಚಂದ್ರ ಕಿಣಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಬೆಂಗಳೂರಿನ ಸೆಂಚುರಿ ರಿಯಲ್ ಎಸ್ಟೇಟ್ ಹೋಲ್ಡಿಂಗ್ಸ್ ಪ್ರೈವೆಟ್ ಲಿಮಿಟೆಡ್ ನ ಆಡಳಿತ ನಿರ್ದೇಶಕರಾದ ಪಿ ರವೀಂದ್ರ ದಯಾನಂದ ಪೈಯವರು ದಿಕ್ಸೂಚಿ ಭಾಷಣವನ್ನು ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆ ಉಡುಪಿಯ ಅನಂತ ವೈದಿಕ ಕೇಂದ್ರದ ವೇದಮೂರ್ತಿ ಚೇಂಪಿ ರಾಮಚಂದ್ರ ಅನಂತ ಭಟ್ ರವರು ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ಗಣೇಶ್ ಬೀಡಿ ವರ್ಕ್ಸ್ ಪ್ರೈವೆಟ್ ಲಿಮಿಟೆಡ್ ಮೈಸೂರು ಇದರ ಪಾಲುದಾರರಾದ ಗೋವಿಂದ ಜಗನ್ನಾಥ ಶೆಣೈ, ಅಮೇರಿಕದ ವಾಷಿಂಗ್‌ಟನ್ ಡಿಸಿಯ ಇಂಡಿಯನ್ ಸಿಎ ಎಸೋಸಿಯೇಷನ್ ನ ಸ್ಥಾಪಕಾಧ್ಯಕ್ಷರು, ಹಾಗೂ ವಿಶ್ವ ಬ್ಯಾಂಕ್ ನ ಕಾರ್ಯನಿರ್ವಾಹಕರಾಗಿರುವ ಸಿಎ ಗೋಕುಲ್‌ದಾಸ್ ಪೈ ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ (ರಿ.)ಮುದರಂಗಡಿ ಇದರ ವಿಶ್ವಸ್ಥರಾದ ರತ್ನಾಕರ ಕಾಮತ್, ಪಡುಬಿದ್ರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಆಡಳಿತ ಮೋಕ್ತೇಸರರಾದ ಪಿ ರಾಮಚಂದ್ರ ಶೆಣೈರವರು ಭಾಗವಹಿಸಲಿದ್ದಾರೆ ಎಂದರು. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮುಂಬಯಿಯ ಎಮ್.ವಿ. ಕಿಣಿ ಲಾ-ಫರ್ಮ್ ನ ಸಂಸ್ಥಾಪಕರಾದ ಖ್ಯಾತ ಸುಪ್ರೀಂ ಕೋರ್ಟ್ ನ ವಕೀಲರಾದ ಮಣಿಪುರ ವಸಂತ ಕಿಣಿ, ಭಾರತ ಸರಕಾರದ ನ್ಯಾಶನಲ್ ಬ್ಯಾಂಕ್‌ ಆಫ್ ಇನ್‌ಫ್ರಾಸ್ಟ್ರಕ್ಚರ್ ಡೆವಲಪ್‌ಮೆಂಟ್ ನ ಅಧ್ಯಕ್ಷರಾದ ಪದ್ಮಭೂಷಣ ಕೆ.ವಿ ಕಾಮತ್ ರವರ ದಿಕ್ಸೂಚಿ ಭಾಷಣ, ಮುಖ್ಯ ಅತಿಥಿಗಳಾಗಿ ಮುಂಬಯಿ ನ್ಯಾಚುರಲ್ ಐಸ್‌ ಕ್ರೀಂನ ಆಡಳಿತ ನಿರ್ದೇಶಕರಾದ ರಘುನಂದನ್ ಎಸ್. ಕಾಮತ್, ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಹಳೆ ಮಾರಿಗುಡಿಯ ಆಡಳಿತ ಮೊಕ್ತೇಸರರಾದ ಶ್ರೀ ಪ್ರಸಾದ ಶೆಣೈ, ರಾಯಚೂರಿನ ಹೆಸರಾಂತ ಲೆಕ್ಕ ಪರಿಶೋಧಕರಾದ ಉಪ್ಪುಂದ ರಾಮಚಂದ್ರ ಪ್ರಭು ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಉಡುಪಿಯ ತ್ರಷಾ ವಿದ್ಯಾಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿಎ ಗೋಪಾಲಕೃಷ್ಣ ಭಟ್ ರವರಿಂದ ಶೈಕ್ಷಣಿಕ ಪ್ರೇರಣಾ ಕಾರ್ಯಾಗಾರ ಹಾಗೂ ಭಾರತೀಯ ಸೇನೆಯಲ್ಲಿ ಯುವ ಜನರಿಗೆ ಲಭ್ಯವಿರುವ ಅವಕಾಶಗಳು, ಸವಾಲುಗಳು ಮತ್ತು ಕಾರ್ಗಿಲ್ ಹುತಾತ್ಮ ಮರಣೋತ್ತರ ಶೌರ್ಯಚಕ್ರ ಪುರಸ್ಕೃತ ಲೆ|ಕ| ಅಜಿತ್‌ ವಿ ಭಂಡಾರ್ಕಾರ್ ರವರ ಜೀವನ ಸಾಧನೆಯ ವಿಶೇಷ ಸಾಕ್ಷ್ಯಚಿತ್ರ ಮತ್ತು ವಿಶೇಷ ಉಪನ್ಯಾಸವನ್ನು ಬೆಂಗಳೂರಿನ ಶಕುಂತಲಾ ಭಂಡಾ‌ಕಾರ್‌ ರವರು ನಿರ್ವಹಿಸಲಿದ್ದಾರೆ. ಕಾರ್ಗಿಲ್‌ ಹುತಾತ್ಮ ಲೆ|ಕ|ಶೌರ್ಯಚಕ್ರ ಪುರಸ್ಕೃತ ಅಜಿತ್ ವಿ ಭಂಡಾ‌ರ್ಕಾರ್‌ ರವರ ಧರ್ಮಪತ್ನಿ ಶಕುಂತಲಾ ಎ. ಭಂಡಾ‌ರ್ಕಾರ್‌ ರವರಿಗೆ ವಿಶೇಷ ಸನ್ಮಾನ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಸಿಇಟಿ, ನೀಟ್ ಮಾಡಲಾದ ಉನ್ನತ ವ್ಯಾಸಂಗದ ಪ್ರವೇಶ ಪರೀಕ್ಷೆಗಳಲ್ಲಿ ಅತ್ಯುನ್ನತ ಸಾಧನೆಗೈದ ಜಿ.ಎಸ್.ಬಿ. ಸಮಾಜದ ವಿದ್ಯಾರ್ಥಿಗಳಿಗೆ ವಿಶೇಷ ಅಭಿನಂದನೆ ನಡೆಯಲಿದೆ ಎಂದರು. ಈ ಸಂದರ್ಭ ಜಿ ಎಸ್ ಬಿ ಸಮಾಜ ಹಿತರಕ್ಷಣಾ ವೇದಿಕೆ ಸಂಚಾಲಕರಾದ ಆರ್. ವಿವೇಕಾನಂದ ಶೆಣೈ, ಅಧ್ಯಕ್ಷರಾದ ಜಿ. ಸತೀಶ್ ಹೆಗ್ಡೆ ಕೊಟ, ಪ್ರಧಾನ ಕಾರ್ಯದರ್ಶಿ ಸಾಣೂರು ನರಸಿಂಹ ಕಾಮತ್, ಸಿಎ ಎಸ್ ಎಸ್ ನಾಯಕ್, ವಿಜಯಕುಮಾರ್ ಶೆಣೈ, ಸಿಎ ಗೋಪಾಲಕೃಷ್ಣ ಭಟ್ ಉಪಸ್ಥಿತರಿದ್ದರು.

ಶಿರ್ವ ವಿಶ್ವಬ್ರಾಹ್ಮಣ ಯುವ ಸಂಗಮ ಮತ್ತು ಮಹಿಳಾ ಬಳಗದ ವತಿಯಿಂದ ಆಷಾಢ ಸಂಭ್ರಮ

Thumbnail
Posted On: 19 Jul 2022, 02:01 PM

ಶಿರ್ವ : ಇಲ್ಲಿನ ವಿಶ್ವಬ್ರಾಹ್ಮಣ ಯುವ ಸಂಗಮ (ರಿ.) ಮತ್ತು ಮಹಿಳಾ ಬಳಗದ ವತಿಯಿಂದ ಶಿರ್ವದ ಹೋಟೆಲ್ ಮಂದಾರದ ಸಭಾಂಗಣದಲ್ಲಿ ನಡೆದ ಆಷಾಢ ಸಂಭ್ರಮ ಕಾರ್ಯಕ್ರಮವು ಜರಗಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಮುದರಂಗಡಿ ನಿಶಾ ಕೊ. ಸೋ. ಲಿ. ಇದರ ಆಡಳಿತ ನಿರ್ದೇಶಕಿ ನಿಶಾ ಆಚಾರ್ಯ ಹಿಂದಿನ ಕಾಲದಲ್ಲಿ ಆಟಿ ತಿಂಗಳು ಹೇಗಿತ್ತು. ಈಗ ಹೇಗಿದೆ. ಅಂದಿನ ಬಡತನದ ಬದುಕೇ ಆಟಿಡೊಂಜಿ ದಿನ ಅಭಿಪ್ರಾಯಪಟ್ಟರು. ಆಟಿ ತಿಂಗಳು ಮತ್ತು ಶ್ರಾವಣ ಮಾಸದ ಧಾರ್ಮಿಕ ಆಚರಣೆ ಬಗ್ಗೆ ಸಾಂತೂರು ವಿಶ್ವಕಲಾ ಮಹಿಳಾ ಮಂಡಲದ ಅಧ್ಯಕ್ಷೆ ವಸಂತಿ ಮೋಹನ ಆಚಾರ್ಯ ಮಾಹಿತಿ ನೀಡಿದರು. ಅಧ್ಯಕ್ಷರಾದ ಉಮೇಶ್ ಆಚಾರ್ಯರು ನಮ್ಮ ಹಿರಿಯರು ಯಾವ ರೀತಿಯಿಂದ ನಮ್ಮನ್ನು ಸಾಕಿ ಬೆಳೆಸಿದ್ದಾರೆ ಅದನ್ನು ನೆನಪಿಟ್ಟು ನಾವು ಬದುಕಬೇಕು ಎಂದು ತಮ್ಮ ಅಧ್ಯಕ್ಷೀಯ ಮಾತಿನಲ್ಲಿ ತಿಳಿಸಿದರು. ಗೌರವಾಧ್ಯಕ್ಷ ಸುರೇಶ ಆಚಾರ್ಯ, ಮಹಿಳಾ ಬಳಗದ ಅಧ್ಯಕ್ಷೆ ಸುಮತಿ ಆಚಾರ್ಯ, ಕಾರ್ಯದರ್ಶಿ ಪ್ರೀತಿ ಆಚಾರ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಹಿಳಾ ಬಳಗದ ಸದಸ್ಯರು ಪ್ರಾರ್ಥಿಸಿದರು. ಕಾರ್ಯದರ್ಶಿ ಮಾಧವ ಆಚಾರ್ಯ ಸ್ವಾಗತಿಸಿದರು. ಶರ್ಮಿಳಾ ಆಚಾರ್ಯ ಪರಿಚಿಸಿದರು. ಕೋಶಾಧಿಕಾರಿ ಪ್ರಶಾಂತ್ ಆಚಾರ್ಯ ವಂದಿಸಿದರು. ಪ್ರೀತಮ್ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು. ಆಟಿಯ ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ಮಹಿಳಾ ಬಳಗದ ಸದಸ್ಯರು ಉಣ ಬಡಿಸಿದರು.

ಜಿಲ್ಲೆಯಲ್ಲಿ 8 ಲಕ್ಷ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡಿಕೆ ಗುರಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Thumbnail
Posted On: 18 Jul 2022, 07:42 PM

ಉಡುಪಿ : ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸಂಭಾವ್ಯ ನಾಲ್ಕನೇ ಅಲೆಯಿಂದ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ 18 ರಿಂದ 59 ವರ್ಷದೊಳಗಿನ ಸಾರ್ವಜನಿಕರಿಗೆ ಸೆಪ್ಟಂಬರ್ 30 ರ ಒಳಗೆ 8 ಲಕ್ಷ ಕೋವಿಡ್-19 ಮುಂಜಾಗ್ರತಾ ಡೋಸ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ನಡೆದ, 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಉಚಿತ ಮುನ್ನೆಚ್ಚರಿಕಾ ಡೋಸ್ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಈಗಾಗಲೇ 18 ವರ್ಷ ಮೇಲ್ಪಟ್ಟವರಿಗೆ ಮೊದಲನೇ ಮತ್ತು 2 ನೇ ಡೋಸ್ ಲಸಿಕೆ ನೀಡುವಲ್ಲಿ ಶೇಕಡಾ 100% ಸಾಧನೆ ಆಗಿದ್ದು, ಪ್ರಸ್ತುತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ಉಚಿತವಾಗಿ ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತಿದ್ದು, ಎರಡನೇ ಡೋಸ್ ಪಡೆದು 6 ತಿಂಗಳು ದಾಟಿದ ಸಾರ್ವಜನಿಕರು ಜಿಲ್ಲೆಯಾದ್ಯಂತ ತಮ್ಮ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಬಹುದಾಗಿದೆ ಎಂದರು. ಜಿಲ್ಲೆಯ ಸಾರ್ವಜನಿಕರು ಕೋವಿಡ್-19 ಪ್ರಥಮ ಮತ್ತು 2 ನೇ ಡೋಸ್ನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆದಿದ್ದ ಕಾರಣ ಕೋವಿಡ್ 3 ನೇ ಅಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆ ದಾಖಲಾತಿ ಪ್ರಕರಣಗಳು ಕಂಡುಬರಲಿಲ್ಲ. ಆದ್ದರಿಂದ ಸಂಭಾವ್ಯ ನಾಲ್ಕನೇ ಅಲೆಯಿಂದ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ತಪ್ಪದೇ ಮುನ್ನೆಚ್ಚರಿಕಾ ಡೋಸ್ ಪಡೆಯುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ವಿವಿಧ ಸಂಘ ಸಂಸ್ಥೆಗಳು ಹಾಗೂ ನಾಗರೀಕರು ಜಿಲ್ಲಾಡಳಿತಕ್ಕೆ ಉತ್ತಮ ಸಹಕಾರ ನೀಡಿದ್ದು, ಮುನ್ನೆಚ್ಚರಿಕಾ ಡೋಸ್ ನೀಡಿಕೆಯಲ್ಲಿ 100% ಪ್ರಗತಿ ಸಾಧಿಸುವಲ್ಲಿ ಕೂಡಾ ಅಗತ್ಯ ಸಹಕಾರ ನೀಡುವಂತೆ ತಿಳಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಮಾಧ್ಯಮ ಪ್ರತಿನಿಧಿಗಳು ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಲಸಿಕೆ ಪಡೆದರು. ಜಿಲ್ಲಾ ಕೋವಿಡ್ ಲಸಿಕಾ ಉಸ್ತುವಾರಿ ಡಾ.ಎಂ.ಜಿ.ರಾಮ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಡಾ. ಕೀರ್ತಿನಾಥ ಬಲ್ಲಾಳ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಸ್ವಾಗತಿಸಿದರು. ಜಿಲ್ಲಾ ಸರ್ಜನ್ ಡಾ.ಮಧುಸೂದನ ನಾಯಕ್ ವಂದಿಸಿದರು.

ಕಾಪು : ಬಿಜೆಪಿಯಿಂದ ರೈತ ಕಲ್ಯಾಣ ಯೋಜನೆಗಳ ಕರಪತ್ರ ಬಿಡುಗಡೆ ; ವಿದ್ಯಾರ್ಥಿಗಳಿಗೆ ಕೃಷಿ ಪ್ರಾತ್ಯಕ್ಷಿಕೆ

Thumbnail
Posted On: 18 Jul 2022, 06:20 PM

ಕಾಪು : ಬಿಜೆಪಿಯ ಕಾಪು ಮಂಡಲ ರೈತ ಮೋರ್ಚಾ ಮತ್ತು ಗ್ರಾಮ ವಿಕಾಸ ಸಮಿತಿ ಪಟ್ಲ ಇವುಗಳ ಜಂಟಿ ಸಹಯೋಗದಲ್ಲಿ ಜುಲೈ 18ರಂದು ಪಟ್ಲದಲ್ಲಿ ಕೇಂದ್ರ ಸರ್ಕಾರದ ರೈತ ಕಲ್ಯಾಣ ಯೋಜನೆಗಳ ಕರಪತ್ರ ಬಿಡುಗಡೆ ಹಾಗೂ ನೇಜಿ ನಾಟಿಯ ಪ್ರಾತ್ಯಕ್ಷಿಕೆ ಕಾರ್ಯ ಜರಗಿತು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಯು.ಎಸ್.ನಾಯಕ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, ಗದ್ದೆಯಲ್ಲಿ ನೇಜಿ ನೆಟ್ಟು ಕೃಷಿಯ ಪ್ರತ್ಯಕ್ಷ ಅನುಭವ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಕಾಪು ಮಂಡಲದ ಅಧ್ಯಕ್ಷ ಶ್ರೀಕಾಂತ್ ನಾಯಕ್, ಮಂಡಲದ ರೈತ ಮೋರ್ಚಾ ಅಧ್ಯಕ್ಷ ಗುರುನಂದ ನಾಯಕ್, ರಾಜ್ಯ ಸಾವಯವ ಕೃಷಿ ನಿಗಮದ ನಿರ್ದೇಶಕ ರಾಘವೇಂದ್ರ ಉಪ್ಪೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧೀರಜ್ ಕೆ., ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಶೆಟ್ಟಿ, ಉಪಾಧ್ಯಕ್ಷರಾದ ಶೈಲೇಶ್ ಶೆಟ್ಟಿ ಮತ್ತು ಸುಬ್ರಮಣ್ಯ ಕರ್ಕೇರ, ಜಿಲ್ಲಾ ಉಸ್ತುವಾರಿಗಳಾದ ಪದ್ಮನಾಭ ಹೆಗಡೆ, ಯು.ಎಸ್.ನಾಯಕ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶ್ರೀಕಾಂತ್ ಪ್ರಭು ಮುಂತಾದವರು ಉಪಸ್ಥಿತರಿದ್ದರು.