Updated News From Kaup

ದಲಿತ ವೃದ್ಧೆಯ ಅನಧಿಕೃತ ಮನೆ ಕೆಡವಿದ ಕಂದಾಯ ಇಲಾಖೆ ; ನ್ಯಾಯಕ್ಕೆ ಒತ್ತಾಯಿಸಿದ ಮಾಜಿ ಸಚಿವ ಸೊರಕೆ ಮತ್ತು ಪಿಡಿಒ ನಡುವೆ ಮಾತಿನ ಚಕಮಕಿ

Posted On: 05-04-2022 03:27PM

ಶಿರ್ವ : ಕಾಪು ತಾಲೂಕು ಶಿರ್ವ ಗ್ರಾಮದ ಸರ್ಕಾರಿ ಜಮೀನಿನಲ್ಲಿ ದಲಿತ ಜನಾಂಗಕ್ಕೆ ಸೇರಿದ ಪದ್ಮಬಾಯಿ ಎಂಬವರು ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ತಗಡಿನ ಗುಡಿಸಲು ಮನೆ ನಿರ್ಮಾಣ ಮಾಡಿಕೊಂಡಿದ್ದರು. ಈ ಪೈಕಿ ಕಂದಾಯ ಇಲಾಖೆ ದಿನಾಂಕ ಏಪ್ರಿಲ್ 4ರಂದು ಜೆಸಿಬಿ ಮುಖಾಂತರ ಅಕ್ರಮ ಮನೆಯನ್ನು ಕೆಡವಿ ಹಾಕಿದ್ದರು.

ಈ ವಿಚಾರವನ್ನು ಖಂಡಿಸಿ ಇಂದು ಶಿರ್ವ ಗ್ರಾಮ ಪಂಚಾಯತ್ ಮುಂಭಾಗ ಮಾಜಿ ಸಚಿವ, ಮಾಜಿ ಶಾಸಕ ವಿನಯ ಕುಮಾರ್ ಸೊರಕೆಯ ನೇತೃತ್ವದಲ್ಲಿ ಬಡ ಕುಟುಂಬಕ್ಕೆ ನ್ಯಾಯ ದೊರಕಬೇಕೆಂಬ ದೃಷ್ಟಿಯಿಂದ ಪ್ರತಿಭಟನೆ ನಡೆಸಿ ಪಿಡಿಓ ಮುಖಾಂತರ ಮನವಿ ಸಲ್ಲಿಸಲಾಯಿತು.

ಈ ಸಂದರ್ಭ ಬಿಜೆಪಿ ಕಾರ್ಯಕರ್ತರು ಸ್ಥಳದಲ್ಲಿ ಜಮಾಗೊಂಡಿದ್ದರು. ಅವರು ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಲಾರಂಭಿಸಿದ್ದರು. ಈ ಸಮಯದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಸೊರಕೆಯ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂಧರ್ಭದಲ್ಲಿ ಗುಂಪಾಗಿ ಸೇರಿದ್ದ ಪ್ರತಿಭಟನಕಾರರ ನೂಕಾಟ ತಲ್ಲಾಟದಲ್ಲಿ ಮಾಜಿ ಸಚಿವ ಸೊರಕೆಯ ಶರ್ಟ್ ಹರಿದ ಘಟನೆ ನಡೆದಿದೆ.

ಮನವಿ ಸಲ್ಲಿಸಲು ಪಂಚಾಯತ್ ಗೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸೊರಕೆ ಪಿಡಿಓಗೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದ ಸಂದರ್ಭ ಉಡಾಫೆ ಉತ್ತರ ನೀಡಿದ್ದರಿಂದ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ವಿರುದ್ಧ ಗರಂ ಆದರು. ಘಟನಾ ಸ್ಥಳಕ್ಕೆ ಕಾಪು ತಾಲೂಕಿನ ತಹಶಿಲ್ದಾರ್ ಶ್ರೀನಿವಾಸ ಕುಲಕರ್ಣಿ ಭೇಟಿ ನೀಡಿ ಸಮಸ್ಯೆಗೆ ಶೀಘ್ರ ನ್ಯಾಯ ಒದಗಿಸುವ ಬಗ್ಗೆ ಭರವಸೆ ನೀಡಿದರು.

ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಸ್ವೀಕಾರ ಸಮಾರಂಭ

Posted On: 04-04-2022 02:47PM

ಕಾಪು : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆ ಇದರ ಕಾಪು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಸ್ವೀಕಾರ ಸಮಾರಂಭವು ಏಪ್ರಿಲ್ 3ರಂದು ಕಾಪು ಶ್ರೀವೀರಭದ್ರ ಸಭಾಭವನ ಇಲ್ಲಿ ಜರಗಿತು.

ಕಾರ್ಯಕ್ರಮವನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಸ್ಥಾಪಕ ಅಧ್ಯಕ್ಷರಾದ ಎ.ಎಸ್.ಎನ್.ಹೆಬ್ಬಾರ್ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ವಹಿಸಿದ್ದರು. ಈ ಸದರ್ಭ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಗೌರವ ಕಾರ್ಯದರ್ಶಿಗಳಾದ ಸುಬ್ರಹ್ಮಣ್ಯ ಶೆಟ್ಟಿ, ನರೇಂದ್ರಕುಮಾರ್ ಕೋಟ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲೆಯ ಕೋಶಾಧ್ಯಕ್ಷರಾದ ಮನೋಹರ್ ಪಿ, ಕಾಪು ತಾಲೂಕು ಘಟಕದ ನಿಯೋಜಿತ ಅಧ್ಯಕ್ಷರಾದ ಬಿ ಪುಂಡಲೀಕ ಮರಾಠೆ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಬಳಿಕ ಖ್ಯಾತ ಬಾನುಲಿ ಕಲಾವಿದ, ಶ್ರೀ ಗಣೇಶ್ ಗಂಗೊಳ್ಳಿಯವರಿಂದ ಗೀತಾಗಾಯನ ಕಾರ್ಯಕ್ರಮ ಜರಗಿತು.

ಕಾಪು : ಮಾತು...ಕಥೆ ಕಿರುಚಿತ್ರ ಬಿಡುಗಡೆ

Posted On: 03-04-2022 06:03PM

ಕಾಪು, ಏ.3 : ಈಶಾನ್ಯ ಕ್ರಿಯೇಷನ್ಸ್ ಅರ್ಪಿಸುವ ಎಸ್- ಟೀಮ್ ಪ್ರಸ್ತುತಪಡಿಸುವ ಸತ್ಯ ಘಟನೆ ಆಧಾರಿತ ಕಿರುಚಿತ್ರ ಮಾತು... ಕಥೆ ಜೆಸಿಐ ಭವನ ಕಾಪು ಇಲ್ಲಿ ಬಿಡುಗಡೆಗೊಂಡಿತು.

ಮುಖ್ಯ ಅತಿಥಿಗಳಾಗಿ ಕಾಪುವಿನ ಈಶಾನ್ಯ ಕನ್ಸ್ ಸ್ಟ್ರಕ್ಷನ್ ನ ಪ್ರಸಾದ್ ಪಾದೂರು, ಸಂಗೀತ ನಿರ್ದೇಶಕ ಲಾಯ್ ವ್ಯಾಲೆಂಟೈನ್ ಸಲ್ಡಾನ್ಹಾ, ರಂಗನಟ, ನಿರ್ದೇಶಕ ದಿವಾಕರ್ ಕಟೀಲ್, ಕಾಪು ಕಾಳಿಕಾಂಬ ದೇವಸ್ಥಾನದ ಆಡಳಿತ ಮೊಕ್ತೇಸರ ಶೇಖರ ಆಚಾರ್ಯ, ದಿನೇಶ್ ಆಚಾರ್ಯ, ಶ್ರೀಕಾಂತ್ ಆಚಾರ್ಯ ಉಪಸ್ಥಿತರಿದ್ದರು.

ಮಾತು... ಕಥೆ ಕಿರುಚಿತ್ರದಲ್ಲಿ ವಿಕಾಸ್ ಕೆ ಇವರ ಚಿತ್ರಕಥೆ, ಸಂಕಲನ, ನಿರ್ದೇಶನವಿದ್ದು, ಪ್ರದೀಪ್ ನಾಯಕ್, ಧೀರಜ್ ಭಟ್ ಛಾಯಾಗ್ರಹಣ, ಸೃಜನ್ ಕುಮಾರ್ ತೋನ್ಸೆ ಸಂಗೀತವಿದೆ. ಕಲಾವಿದರಾಗಿ ಅವಿನಾಶ್ ರೈ, ಸಂದೀಪ್ ಬಂಟ್ವಾಳ ನಟಿಸಿದ್ದಾರೆ.

ಎಸ್- ಟೀಮ್ ಇವೆಂಟ್ಸ್ ಕಾಪು ಕಾರ್ಯಕ್ರಮ ಸಂಯೋಜಿಸಿ, ದೂರದರ್ಶನ ಕಾರ್ಯಕ್ರಮ ನಿರೂಪಕ ಎನ್ ಆರ್ ದಾಮೋದರ ಶರ್ಮ ಕಾರ್ಯಕ್ರಮ ನಿರೂಪಿಸಿದರು.

ಕಾಪು ಹೊಸ ಮಾರಿಗುಡಿಯಲ್ಲಿ ಧಾರ್ಮಿಕ ದಿನಾಚರಣೆ ಪ್ರಯುಕ್ತ ಭಜನಾ ಕಾರ್ಯಕ್ರಮ

Posted On: 02-04-2022 07:54PM

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಚಾಂದ್ರಮಾನ ಯುಗಾದಿ ಪ್ರಯುಕ್ತ ನಡೆದ ಧಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಶ್ರೀ ಲಕ್ಷ್ಮೀ ಜನಾರ್ದನ ಮಹಿಳಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮವನ್ನು ನೆರವೇರಿತು.

ದೇವಳಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರು ಮತ್ತು ಕಾರ್ಯನಿರ್ವಹಣಾಧಿಕಾರಿ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಜಾನಪದ ವಿದ್ವಾಂಸ ಕೆ.ಎಲ್. ಕುಂಡಂತಾಯರ ದೈವಾರಾಧನೆಯ ಕುರಿತ ನಡುವಣ ಲೋಕದ ನಡೆ ಕೃತಿ ಬಿಡುಗಡೆ

Posted On: 02-04-2022 09:00AM

ಎಲ್ಲೂರು : ಇಲ್ಲಿಯ ಕುಂಜೂರು ಶ್ರೀದುರ್ಗಾ ದೇವಸ್ಥಾನದಲ್ಲಿ ಕೆ.ಎಲ್.ಕುಂಡಂತಾಯರ ದೈವ - ಬೂತಾರಾಧನೆಯ ಕುರಿತ ಲೇಖನಗಳ ಸಂಗ್ರಹ 'ನಡುವಣ ಲೋಕದ ನಡೆ' ದೈವಾರಾಧನೆಯ ನೆಲೆ - ಕಲೆ ಬಿಡುಗಡೆಗೊಂಡಿತು.

ಜಾನಪದ ವಿದ್ವಾಂಸ ಡಾ.ವೈ.ಎನ್ .ಶೆಟ್ಟಿ ಹಾಗೂ‌ ಸಾಮಾಜಿಕ ಕಾರ್ಯಕರ್ತ ಸುರೇಶ ಶೆಟ್ಟಿ ಗುರ್ಮೆ 'ನಡುವಣ ಲೋಕದ ನಡೆ'ಯನ್ನು ಬಿಡುಗಡೆಗೊಳಿಸಿದರು. ಸಾಹಿತಿ,ಲೇಖಕ ಡಾ.ಜನಾರ್ದನ ಭಟ್ ಕೃತಿಯನ್ನು ಪರಿಚಯಿಸಿದರು.

ಜಾನಪದ ವಿದ್ವಾಂಸ ಡಾ.ಅಶೋಕ ಆಳ್ವ, ಉದ್ಯಮಿ ನಾರಾಯಣ ಕೆ.ಶೆಟ್ಟಿ, ನಡಿಮನೆ ದೇವರಾಜ ರಾವ್, ನಿವೃತ್ತ ಪ್ರಾಂಶುಪಾಲ ಸುದರ್ಶನ ವೈ.ಎಸ್, ದೇವಳದ ಮ್ಯಾನೇಜರ್ ರಾಘವೇಂದ್ರ ಶೆಟ್ಟಿ ಹಾಗೂ ಕೆ.ಎಲ್.ಕುಂಡಂತಾಯ ಉಪಸ್ಥಿತರಿದ್ದರು.

ಕಲ್ಯಾಣಪುರ ರೋಟರಿ ಪ್ರಾಯೋಜಕತ್ವದಲ್ಲಿ ಕೆಮ್ಮಣ್ಣು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಪೈಂಟಿಂಗ್

Posted On: 01-04-2022 02:55PM

ಉಡುಪಿ :ಸರ್ಕಾರಿ ಪದವಿಪೂರ್ವ ಕಾಲೇಜು, ಕೆಮ್ಮಣ್ಣು ಇದರ ಕಟ್ಟಡಕ್ಕೆ ಆಂಶಿಕವಾಗಿ ಇತ್ತೀಚೆಗೆ ಪೈಂಟಿಂಗ್ ಕೆಲಸವನ್ನು ಕಲ್ಯಾಣಪುರ ರೋಟರಿ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಮಾಡಿ ಕೊಡಲಾಯಿತು.

ಇದರ ಹಸ್ತಾಂತರವನ್ನು ರೋಟರಿ ಕಲ್ಯಾಣಪುರದ ಅಧ್ಯಕ್ಷರಾದ ಶಂಭು ಶಂಕರ್, ಕಾರ್ಯದರ್ಶಿ ಪ್ರಕಾಶ್ , ವಲಯ ಸೇನಾನಿ ಬ್ರಯಾನ್ ಡಿಸೋಜ ಮತ್ತಿತರ ರೋಟರಿ ಪದಾಧಿಕಾರಿಗಳು ,ಕಾಲೇಜಿನ ಪ್ರಾಂಶುಪಾಲರಾದ ಲಕ್ಷ್ಮಿ ನಾರಾಯಣ ಎಸ್. ವಿ. ಮತ್ತು ಉಪನ್ಯಾಸಕರಾದ ಕ್ಸೇವಿಯರ್ ರವರು ಉಪಸ್ಥಿತಿಯಲ್ಲಿ ನೆರವೇರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲರು ಸಂಸ್ಥೆಯ ಅವಶ್ಯಕ ಬೇಡಿಕೆಗೆ ಸ್ಪಂದಿಸಿ, ಪೂರೈಸಿದ ರೋಟರಿ ಕ್ಲಬ್ ನ ಸೇವೆಯನ್ನು ಶ್ಲಾಘಿಸಿ ವಂದಿಸಿದರು.

ಮಣಿಪಾಲ : ಚಿನ್ನದ ಸರವನ್ನು ವಾರಸುದಾರರಿಗೆ ಮರಳಿಸಿದ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷ ಸುದೇಶ್ ನಾಯ್ಕ

Posted On: 31-03-2022 09:50PM

ಮಣಿಪಾಲ : ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನದ ಸರವು ಮಾಚ್೯ 31ರ ಬೆಳಿಗ್ಗೆ ಮಣಿಪಾಲ ರಿಕ್ಷಾ ಚಾಲಕ ಮಾಲಕ ಸಂಘದ ಅಧ್ಯಕ್ಷರಾದ ಸುದೇಶ್ ನಾಯ್ಕ ಇವರಿಗೆ ಸಿಕ್ಕಿರುತ್ತದೆ.

ಆ ಚಿನ್ನದ ಸರವನ್ನು ನಿಜವಾದ ವಾರಸುದಾರರಿಗೆ ಮರಳಿಸುವ ಮೂಲಕ ಮಾನವೀಯತೆಯನ್ನು ಮೆರೆದಿರುತ್ತಾರೆ. ಚಿನ್ನದ ಸರದ ವಾರಸುದಾರರು ಇವರ ಕಾರ್ಯಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿರುತ್ತಾರೆ.

ಕೊಂಕಣ್ ರೈಲ್ವೇಸ್ನಿಂದ ಜಿಲ್ಲಾ ಆರೋಗ್ಯ ಇಲಾಖೆಗೆ ವಾಹನ ಹಸ್ತಾಂತರ

Posted On: 30-03-2022 10:17PM

ಉಡುಪಿ : ಕೊಂಕಣ್ ರೈಲ್ವೇಸ್ ಮುಂಬೈ ಇವರ ವತಿಯಿಂದ ಸಿ.ಎಸ್.ಆರ್ (ಸಾಮಾಜಿಕ ಹೊಣೆಗಾರಿಕೆ ಕಾರ್ಯನೀತಿ) ಅನುದಾನದಡಿಯಲ್ಲಿ ಮಹೇಂದ್ರ ಬೊಲೇರೋ ವಾಹನವನ್ನು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮುಖಾಂತರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ ಹೆಚ್ ಇವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕೊಂಕಣ್ ರೈಲ್ವೇಸ್ ಅಧಿಕಾರಿಗಳಾದ ಸುಧಾ ಕೃಷ್ಣಮೂರ್ತಿ, ಬಿ.ಬಿ.ನಿಖಂ, ಆಶಾ ಶೆಟ್ಟಿ, ಡಾ. ಸ್ಟೀವೆನ್ ಜಾರ್ಜ್, ಜೈಸ್ವಾಲ್, ಬಿ.ಎಮ್ ವೆಂಕಟೇಶ್, ಆರೋಗ್ಯ ಇಲಾಖಾ ಅಧಿಕಾರಿಗಳಾದ ಡಾ ಪ್ರಶಾಂತ್ ಭಟ್, ಸುಬ್ರಮಣ್ಯ ಶೇರಿಗಾರ್ ಉಪಸ್ಥಿತರಿದ್ದರು.

ಏಪ್ರಿಲ್ 1 : ಶಿವದೂತೆ ಗುಳಿಗೆ ಯಶಸ್ಸಿನ ಬಳಿಕ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಇವರ ಮತ್ತೊಂದು ತುಳು ನಾಟಕ ಮಣಿಕಂಠ ಮಹಿಮೆ ಉಡುಪಿಯಲ್ಲಿ ಪ್ರಥಮ ಪ್ರದರ್ಶನ

Posted On: 28-03-2022 11:23PM

ಉಡುಪಿ : ತುಳುನಾಡು ಅಲ್ಲದೇ ಬೇರೆ ಬೇರೆ ಕಡೆಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಇವರ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಶಿವದೂತೆ ಗುಳಿಗೆ ತಂಡದಿಂದ ಮತ್ತೊಂದು ಸಂಚಲನ ಮೂಡಿಸುವ ತುಳು ನಾಟಕ ಮಣಿಕಂಠ ಮಹಿಮೆ ರೋಯಲ್ ಫ್ರೆಂಡ್ಸ್, ಮಲ್ಪೆ-ಉಡುಪಿ ಪ್ರಾಯೋಜಕತ್ವದಲ್ಲಿ ಉಡುಪಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಉಡುಪಿಯ ಅಜ್ಜರಕಾಡುವಿನಲ್ಲಿರುವ ಉಡುಪಿ ಪುರಭವನದಲ್ಲಿ ಏಪ್ರಿಲ್‌ 1 ರಂದು ಸಂಜೆ 6:30ಕ್ಕೆ ಪ್ರಥಮ ಪ್ರದರ್ಶನವಾಗಲಿದೆ.

ವಿಜಯಕುಮಾರ್ ಕೊಡಿಯಾಲ್ ಬೈಲ್ ರಚಿಸಿ ನಿರ್ದೇಶಿಸಿರುವ ತುಳು ನಾಟಕ ಮಣಿಕಂಠ ಮಹಿಮೆಯ ಟಿಕೇಟಿಗಾಗಿ ಸಂಪರ್ಕಿಸಿ : +91 9611649910, +91 9743247113

ಎಐಐಯು ಸಾಫ್ಟ್ ಬಾಲ್ ಟೂರ್ನಮೆಂಟ್ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿರುವ ವಿಧಾತ್ ಶೆಟ್ಟಿ

Posted On: 28-03-2022 10:57PM

ಶಿರ್ವ : ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ತೃತೀಯ ಬಿಸಿಎ ವಿದ್ಯಾರ್ಥಿ ವಿಧಾತ್ ಶೆಟ್ಟಿ ಆಂಧ್ರಪ್ರದೇಶದ ಗುಂಟೂರಿನಲ್ಲಿ ಇರುವ ಆಚಾರ್ಯ ನಾಗಾರ್ಜುನ ಯುನಿವರ್ಸಿಟಿಯಲ್ಲಿ ಮಾರ್ಚ್ 24ರಿಂದ 30ರವರೆಗೆ ನಡೆಯಲಿರುವ ಆಲ್ ಇಂಡಿಯಾ ಇಂಟರ್ ಯೂನಿವರ್ಸಿಟಿ ಸಾಫ್ಟ್ ಬಾಲ್ ಟೂರ್ನಮೆಂಟ್ ನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ ಎಂದು ಪ್ರಾಂಶುಪಾಲರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.