Updated News From Kaup

ಹೆಜಮಾಡಿ : ಕಾಪು ತಾಲೂಕು ದಸರಾ ಕ್ರೀಡಾಕೂಟಕ್ಕೆ ಚಾಲನೆ

Thumbnail
Posted On: 17 Aug 2025, 02:57 PM

ಪಡುಬಿದ್ರಿ : ಕಾಪು ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯೋಜನೆಯಲ್ಲಿ ಹೆಜಮಾಡಿ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ 2025 - 26 ಕ್ಕೆ ಭಾನುವಾರ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಕಾಪು ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ನವೀನ್ ಚಂದ್ರ ಎಸ್ ಸುವರ್ಣ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೆ ಅವಕಾಶವಿದೆ. ಯುವ ಸಮೂಹ ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕ್ರೀಡಾಕೂಟಕ್ಕೆ ಶುಭ ಹಾರೈಸಿದರು. ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಕ್ರೀಡೆಯು ದೈಹಿಕ, ಮಾನಸಿಕ ಸಮತೋಲನಕ್ಕೆ ಪೂರಕವಾಗಿದೆ. ಒತ್ತಡಗಳಿಂದ ದೂರವಾಗಲು ಕ್ರೀಡೆ ಅನಿವಾರ್ಯ ಎಂದರು. ಕಾಪು ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಕಿರಣ್ ಕುಮಾರ್ ಶೆಟ್ಟಿ ಮಾತನಾಡಿ, ಸಮರ್ಪಕ ಕ್ರೀಡಾಂಗಣವಿಲ್ಲದಿದ್ದರೂ ಕಾಪು ತಾಲೂಕಿನಲ್ಲಿ ಸತತ 3 ವರ್ಷಗಳಿಂದ ದಸರಾ ಕ್ರೀಡಾಕೂಟ ಆಯೋಜಿಸಲಾಗುತ್ತಿದೆ ಎಂದರು. ಈ ಸಂದರ್ಭ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೇಷ್ಮಾ ಮೆಂಡನ್, ಉಪಾಧ್ಯಕ್ಷರಾದ ಮೋಹನ್ ಸುವರ್ಣ, ರಾಷ್ಟ್ರೀಯ ಹೈ ಜಂಪ್ ಕ್ರೀಡಾಪಟು ಪ್ರಕಾಶ್ ಶೆಟ್ಟಿ ಹೆಜಮಾಡಿ, ರಾಜ್ಯ ಸರಕಾರಿ ನೌಕರರ ಪರಿಷತ್ತು ನಿರ್ದೇಶಕ ಅಬ್ದುಲ್ ರಜಾಕ್ ಮತ್ತಿತರರು ಉಪಸ್ಥಿತರಿದ್ದರು. ಯೋಗ, ವಾಲಿಬಾಲ್, ತ್ರೋಬಾಲ್, ಕಬಡ್ಡಿ, ಕೊಕ್ಕೊ, ಫುಟ್ಬಾಲ್, ಅಥ್ಲೆಟಿಕ್ಸ್ ಮತ್ತು ವಿವಿಧ ಕ್ರೀಡಗಳು ಜರಗಿದವು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಾಪು ತಾಲೂಕು ಅಧಿಕಾರಿ ರಿತೇಶ್ ಕುಮಾರ್ ಸ್ವಾಗತಿಸಿದರು. ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ ನಿರೂಪಿಸಿ, ಎಸ್ ವಿ ಎಚ್ ಇನ್ನಂಜೆ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಶೆಟ್ಟಿ ವಂದಿಸಿದರು.

ಶ್ರೀ ವಿಠೋಬಾ ಭಜನಾ ಮಂಡಳಿ ಗೋಳಿಕಟ್ಟೆ, ಇನ್ನಂಜೆ : 79ನೇ ವಾರ್ಷಿಕ ಸ್ವಾತಂತ್ರ್ಯೋತ್ಸವ ಆಚರಣೆ

Thumbnail
Posted On: 15 Aug 2025, 04:35 PM

ಕಾಪು : ಶ್ರೀ ವಿಠೋಬಾ ಭಜನಾ ಮಂಡಳಿ ಗೋಳಿಕಟ್ಟೆ, ಇನ್ನಂಜೆ ಇಲ್ಲಿ 79ನೇ ವಾರ್ಷಿಕ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಸಂಭ್ರಮ - ಸಡಗರದಿಂದ ಆಚರಿಸಲಾಯಿತು. ಇನ್ನಂಜೆ ಶಾಲೆಯಲ್ಲಿ ಶಿಕ್ಷಕಿಯಾಗಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಮಮತಾ ಎಚ್. ಅಂಚನ್ ಧ್ವಜಾರೋಹಣಗೈದರು. ಬಳಿಕ ಭಜನಾ ಮಂಡಳಿ ವತಿಯಿಂದ ಅವರನ್ನು ಸನ್ಮಾನಿಸಲಾಯಿತು. ಭಜನಾ ಮಂಡಳಿಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪಡುಬಿದ್ರಿ : ಕಾಮತ್ ಸರ್ವಿಸ್ ಸೆಂಟರ್ - 79 ನೇ ಸ್ವಾತಂತ್ರ್ಯ ದಿನಾಚರಣೆ

Thumbnail
Posted On: 15 Aug 2025, 02:56 PM

ಪಡುಬಿದ್ರಿ : 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪಡುಬಿದ್ರಿ ‌ಕಾಮತ್ ಸರ್ವಿಸ್ ಸೆಂಟರ್ ಎಚ್ಪಿ ಪೆಟ್ರೋಲ್ ಪಂಪ್ ಇಲ್ಲಿ ಆಚರಿಸಲಾಯಿತು. ಪಡುಬಿದ್ರಿ ಮೆಸ್ಕಾಂ ಎ.ಇ. ಪ್ರೀತಂ ಮತ್ತು ಕುಟುಂಬ ಧ್ವಜಾರೋಹಣ ಮಾಡಿದರು. ಈ ಸಂದರ್ಭ ಪೆಟ್ರೋಲ್ ಪಂಪ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಶಿರ್ವ : ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಬಂಟಕಲ್ ಬಿ ಸಿ ರೋಡ್ - 79ನೇ ಸ್ವಾತಂತ್ರ್ಯ ದಿನಾಚರಣೆ

Thumbnail
Posted On: 15 Aug 2025, 02:53 PM

ಶಿರ್ವ : ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಬಂಟಕಲ್ ಬಿ ಸಿ ರೋಡ್ ಇದರ ಆಶ್ರಯದಲ್ಲಿ ನಡೆದ 79ನೇ ಸ್ವಾತಂತ್ರ್ಯ ದಿನದ ಧ್ವಜಾರೋಹಣವನ್ನು ಸಂಘದ ಗೌರವಾಧ್ಯಕ್ಷರಾದ ಕೆ.ಆರ್. ಪಾಟ್ಕರ್ ರವರು ನೆರವೇರಿಸಿ, ಸ್ವಾತಂತ್ರ್ಯ ದಿನದ ಸಂದೇಶವನ್ನು ನೀಡಿದರು. ಮುಖ್ಯ ಅತಿಥಿಯಾಗಿ ಡಾ. ಪ್ರಕಾಶ್ ಭಟ್, ವಲೇರಿಯನ್ ಮತಯಸ್, ದೀಪಕ್, ವಾಯ್ಲೆಟ್ ಕ್ಯಾಸ್ಟಲಿನೋ, ಉಮೇಶ್ ಪ್ರಭು ಉಪಸ್ಥಿತರಿದ್ದರು. ರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಬಿ ಸಿ ರೋಡ್ ಇದರ ಅಧ್ಯಕ್ಷರಾದ ಸದಾಶಿವ ಕುಲಾಲ್ ಸ್ವಾಗತಿಸಿದರು. ಶ್ರೀತೇಶ್ ಕುಲಾಲ್ ವಂದಿಸಿದರು. ಡೆನಿಸ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು.

ಕಾಪು‌ : ಮಲ್ಲಾರು ಯುವಕ ಮಂಡಲದ ವತಿಯಿಂದ ಧ್ವಜಾರೋಹಣ

Thumbnail
Posted On: 15 Aug 2025, 01:41 PM

ಕಾಪು : ಮಲ್ಲಾರು ಯುವಕ ಮಂಡಲ (ರಿ.) ಮಲ್ಲಾರು ಇದರ ವತಿಯಿಂದ ಮಂಡಲದ ಹಿರಿಯ ಸದಸ್ಯರಾದ ಅನ್ವರ್ ಅಲಿ ಕಾಪುರವರು 79 ನೇ ಸ್ವಾತಂತ್ರ್ಯತ್ಸವದ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು, ಸಮಾಜದಲ್ಲಿ ಶಾಂತಿ, ಪ್ರೀತಿ, ಸೌಹಾರ್ದತೆಯನ್ನು ಕಾಪಾಡಿದರೆ, ನಾವು ಪಡೆದ ಸ್ವಾತಂತ್ರ್ಯವನ್ನು ಉಳಿಸಿಕೊಂಡು ಮುನ್ನಡೆಯಲು ಸಾಧ್ಯವಾಗುತ್ತದೆ. ಇದಕ್ಕೆ ನಾವೆಲ್ಲರೂ ಬದ್ಧರಾಗಿರಬೇಕೆನ್ನುವ ಸಂದೇಶವನ್ನು ನೀಡಿದರು. ಈ ಸಂಭ್ರಮಾಚಾರಣೆಯಲ್ಲಿ ಮಲ್ಲಾರು ಯುವಕ ಮಂಡಲದ ಉಪಾಧ್ಯಕ್ಷರಾದ ಹಸನ್ ಅಬ್ದುಲ್ ಖಾದರ್, ಕಾರ್ಯದರ್ಶಿ ಸತೀಶ್ ಆಚಾರ್ಯ, ನಾರಾಯಣ, ವೇಲು ಸ್ವಾಮಿ, ನಸೀರ್ ಅಹಮದ್ ಶರ್ಫುದ್ದಿನ್, ಅಬ್ದುಲ್ ಸತ್ತಾರ್, ಕೃಷ್ಣ ಟೈಲರ್, ಗುರುಮೂರ್ತಿ, ಮೊಯಿದಿನ್, ಜಮಾಲ್, ಮಯ್ಯದಿ, ಅಣ್ಣಪ್ಪ, ಇಬ್ರಾಹಿಮ್, ಮುಹಮ್ಮದ್ ಸೈಫ್, ಅಂಗನವಾಡಿ ಕಾರ್ಯಕತೆಯರಾದ ರೇಖಾ, ವಿದ್ಯಾ ಪ್ರಶಾಂತ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ವೇಲು ಸ್ವಾಮಿಯವರ ವತಿಯಿಂದ ಸಿಹಿ ತಿಂಡಿ‌ ಮತ್ತು ಪಾನೀಯದ ವ್ಯವಸ್ಥೆ ಮಾಡಲಾಗಿತ್ತು.

ದಂಡತೀರ್ಥ ವಿದ್ಯಾ ಸಂಸ್ಥೆ : ಮುದ್ದುಕೃಷ್ಣ ವೇಷ ಸ್ಪರ್ಧೆ

Thumbnail
Posted On: 15 Aug 2025, 01:34 PM

ಕಾಪು : ಇಲ್ಲಿನ ದಂಡತೀರ್ಥ ವಿದ್ಯಾಸಂಸ್ಥೆಯ ಕಿರಿಯ ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಮುದ್ದು ಕೃಷ್ಣ ಮತ್ತು ಮುದ್ದು ರಾಧೆ ಸ್ಪರ್ಧೆಯನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಹಳೆ ವಿದ್ಯಾರ್ಥಿನಿ, ವಕೀಲೆ ಮತ್ತು ನೋಟರಿ ಅಕ್ಷತಾ ಶೆಣೈ ಕಾಪು ಇವರು ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ, ಮುದ್ದು ಮಕ್ಕಳಿಗೆ ಇಂತಹ ಅವಕಾಶ ಶಾಲೆಯಲ್ಲಿ ದೊರೆತಾಗ ಅವರ ಪ್ರತಿಭೆ ವ್ಯಕ್ತವಾಗುತ್ತದೆ ಹಾಗೂ ನಮ್ಮ ಸಂಸ್ಕೃತಿಯ ಪರಿಚಯವಾಗುತ್ತದೆ. ಬದಲಾಗುತ್ತಿರುವ ಈ ಪರಿಸ್ಥಿತಿಯಲ್ಲಿ ನಮ್ಮ ಸಂಪ್ರದಾಯವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಶಾಲೆ ಮತ್ತು ಶಿಕ್ಷಕರ ಮೇಲಿದೆ ಎಂಬ ಸಂದೇಶವನ್ನು ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯೆ, ಪ್ರಶಾಂತ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ|| ಪನ್ನ ಪ್ರಶಾಂತ್ ಶೆಟ್ಟಿಯವರು ವಹಿಸಿ, ಎಲ್ಲಾ ಧರ್ಮೀಯರು ಸೇರಿಕೊಂಡು ಈ ಮುದ್ದು ಕೃಷ್ಣ,ರಾಧೆಯರ ಸ್ಪರ್ಧೆಯಲ್ಲಿ ಪಾಲ್ಗೊಂಡಿರುವುದು ನಿಜಕ್ಕೂ ಸಂತಸದಾಯಕ, ಶಾಲೆಯಲ್ಲಿ ಸರ್ವಧರ್ಮ ಸಮಭಾವದ ಈ ವಾತಾವರಣ ನಿಜಕ್ಕೂ ಪ್ರಶಂಸನೀಯ ಎಂಬ ಸಂದೇಶವನ್ನು ನೀಡಿದರು. ಆಡಳಿತಾಧಿಕಾರಿ ಆಲ್ಬನ್ ರೊಡ್ರಿಗಸ್ ಮತ್ತು ಶಿಕ್ಷಕಿ ರಜನಿ ಪ್ರಭು ಸಾಂದರ್ಭಿಕವಾಗಿ ಮಾತನಾಡಿದರು. ಪ್ರಾಂಶುಪಾಲ ನೀಲಾನಂದ್ ನಾಯ್ಕ್, ಶಿಕ್ಷಣ ಸಂಯೋಜಕ ಶಿವಣ್ಣ ಬಾಯರ್, ಶಿಕ್ಷಕ - ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ವಿವಿಧ ವಿಭಾಗಗಳ ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ವಿಜೇತರಿಗೆ ಬಹುಮಾನ ಹಾಗೂ ಸ್ಪರ್ಧಾಳುಗಳಿಗೆ ಸ್ಮರಣಿಕೆಗಳನ್ನು ನೀಡಿ ಅಭಿನಂದಿಸಲಾಯಿತು. ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯ ಗೇಬ್ರಿಯಲ್ ಮಸ್ಕರೇನ್ಹಸ್ ಸ್ವಾಗತಿಸಿ, ಶಿಕ್ಷಕಿ ವರ್ಷಾ ಆಚಾರ್ಯ ವಂದಿಸಿದರು. ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ರಾಜಲಕ್ಷ್ಮೀ ರಾವ್ ನಿರೂಪಿಸಿದರು.

ಮುಂಡಾಲ ಯುವ ವೇದಿಕೆ ಪಡುಬಿದ್ರಿ : ಸ್ವಾತಂತ್ರ್ಯ ಸಂಭ್ರಮಾಚರಣೆ

Thumbnail
Posted On: 15 Aug 2025, 01:14 PM

ಪಡುಬಿದ್ರಿ : 79ನೇ ಸ್ವಾತಂತ್ರ ದಿನಾಚರಣೆಯ ಅಂಗವಾಗಿ ಪಡುಬಿದ್ರಿಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯದಲ್ಲಿ ಮುಂಡಾಲ ಯುವ ವೇದಿಕೆಯ ಜೊತೆಯಾಗಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ, ಸಿಹಿತಿಂಡಿ ವಿತರಿಸಲಾಯಿತು. ಧ್ವಜಾರೋಹಣವನ್ನು ವೇದಿಕೆಯ ಅಧ್ಯಕ್ಷರಾದ ಮಂಜುನಾಥ ಕರ್ಕೇರ ನೆರವೇರಿಸಿದರು. ವಸತಿ ನಿಲಯದ ಮೇಲ್ವಿಚರಕರಾದ ಬಸವರಾಜ್ ಶುಭಾಶಯವನ್ನು ಸಲ್ಲಿಸಿದರು. ಮುಂಡಾಲ ವೇದಿಕೆಯ ಸದಸ್ಯರಾದ ಸಂತೋಷ್ ನಂಬಿಯಾರ್ ಮಾತನಾಡಿ, ಸಾವಿರಾರು ವರ್ಷಗಳ ದಾಳಿಯನ್ನು ಈ ದೇಶ ಶೌರ್ಯದ ಮೂಲಕವೇ ಉತ್ತರವನ್ನಿತ್ತು, ತಾಯಿ ಭಾರತಿಯನ್ನು ದುಷ್ಟರಿಂದ ರಕ್ಷಿಸುವಂತ ಕಾರ್ಯ ನಮ್ಮ ಪೂರ್ವಜರು ಮಾಡಿದರು. ಹಾಗಾಗಿ ನಾವು ಇಂದು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ‌. ಆದ್ದರಿಂದ ಭವಿಷ್ಯದ ಪೀಳಿಗೆ ಈ ಪರಾಕ್ರಮ, ಶೌರ್ಯ ಬಲಿದಾನದ ವಿಚಾರವನ್ನು ತಿಳಿಸುತ್ತ, ಮುಂದೆ ಅಂತಹ ಸಂದಿಗ್ಧ ಪರಿಸ್ಥಿತಿ ಬಾರದಂತೆ ರಾಷ್ಟರಕ್ಷಣೆಯ ಜವಾಬ್ದಾರಿ ನಮ್ಮಿಂದಾಗಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ವೇದಿಕೆಯ ಕಾರ್ಯದರ್ಶಿ ನಿತೀನ್ ಸಾಲ್ಯಾನ್, ಕೋಶಾಧಿಕಾರಿ ಪ್ರಕಾಶ್ ಮುಂಡ್ಕೂರು, ಸ್ಥಾಪಕಾದ್ಯಕ್ಷರಾದ ಪಿ‌.ಪ್ರಸನ್ನ ಕುಮಾರ್, ಸದಸ್ಯರಾದ ಸುರೇಶ್ ಪಡುಬಿದ್ರಿ, ಸೋಮಯ್ಯ ಎರ್ಮಾಳ್, ವೇದಿಕೆಯ ಸದಸ್ಯರು, ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಕಾಪು : ಮುಟ್ಲಪಾಡಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Thumbnail
Posted On: 15 Aug 2025, 01:08 PM

ಕಾಪು : ಮುಟ್ಲಪಾಡಿ ಹಳೆ ವಿದ್ಯಾರ್ಥಿಗಳು, ಅಂಗನವಾಡಿ ಕೇಂದ್ರ ಮುಟ್ಲಪಾಡಿ ಹಾಗೂ ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ) ಕಡಂಬು ಮಟ್ಟಾರ್ ಆಶ್ರಯದಲ್ಲಿ ಮುಟ್ಲಪಾಡಿ ಶಾಲೆಯಲ್ಲಿ ಸ್ವಾತಂತ್ರ ದಿನಾಚರಣೆಯನ್ನು ‌ಆಚರಿಸಲಾಯಿತು. ಹಿರಿಯರಾದ ಸುಶೀಲ ಪೂಜಾರ್ತಿ, ವಿಶ್ವಕರ್ಮ ಸಂಘದ ಅಧ್ಯಕ್ಷರಾದ ಮಂಜುನಾಥ್ ಆಚಾರ್ಯ, ಅಂಗನವಾಡಿ ಶಿಕ್ಷಕಿ ನಿಶ್ಮಾ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮುಟ್ಲಪಾಡಿ ಶಾಲೆಯ ಹಳೆವಿದ್ಯಾರ್ಥಿಗಳು, ಶಾಲೆಯ ಮಕ್ಕಳು, ವಿಶ್ವಕರ್ಮ ಸಮಾಜ ಸೇವಾ ಸಂಘದ ಸದಸ್ಯರು, ಗ್ರಾಮಸ್ಥರು ಪಾಲ್ಗೊಂಡರು.

ಶಿರ್ವ : ಆಟೋರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ ಬಂಟಕಲ್ - 79 ನೇ ಸ್ವಾತಂತ್ರ್ಯ ದಿನಾಚರಣೆ

Thumbnail
Posted On: 15 Aug 2025, 01:01 PM

ಶಿರ್ವ : ಆಟೋರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ (ರಿ.) ಬಂಟಕಲ್ ಇದರ ಆಶ್ರಯದಲ್ಲಿ ನಡೆದ 79 ನೇ ಸ್ವಾತಂತ್ರ್ಯ ದಿನದ ಧ್ವಜಾರೋಹಣವನ್ನು ಆಟೋರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘ (ರಿ.) ಬಂಟಕಲ್ ಇದರ ಗೌರವಾಧ್ಯಕ್ಷರಾದ ಮಾಧವ ಕಾಮತ್ ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಶಿರ್ವ ಗ್ರಾಮ ಪಂಚಾಯತ್ ಗ್ರಾಮಾಭಿವೃದ್ಧಿ ಅಧಿಕಾರಿ ಅನಂತ ಪದ್ಮನಾಭ ನಾಯಕ್, ನಾಗರಿಕ ಸೇವಾ ಸಮಿತಿ ಬಂಟಕಲ್ ಇದರ ಅಧ್ಯಕ್ಷರಾದ ಕೆ ಆರ್ ಪಾಟ್ಕರ್, ಬಂಟಕಲ್ ಆಟೋರಿಕ್ಷಾ ಚಾಲಕರ ಹಾಗೂ ಮಾಲಕರ ಸಂಘದ ಅಧ್ಯಕ್ಷರಾದ ಮಂಜುನಾಥ್ ಪೂಜಾರಿ ಉಪಸ್ಥಿತರಿದ್ದರು. ಉಮೇಶ್ ಪ್ರಭು ಸ್ವಾಗತಿಸಿದರು. ದಿವಾಕರ್ ಶೆಟ್ಟಿ ವಂದಿಸಿದರು. ಗೋಪಾಲ್ ದೇವಾಡಿಗ ನಿರೂಪಿಸಿದರು.

ಕಾಪು ತಾಲೂಕು ಆಡಳಿತದಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

Thumbnail
Posted On: 15 Aug 2025, 12:49 PM

ಕಾಪು : ಸ್ವಾತಂತ್ರ್ಯ ದಿನವು ಮಳೆ ಚಳಿ ಬಿಸಿಲನ್ನು ಲೆಕ್ಕಿಸದೆ ಸ್ವಾತಂತ್ರ್ಯದ ಗುರಿಯನ್ನು ಇರಿಸಿ ನಮ್ಮನೆಲ್ಲ ಸ್ವತಂತ್ರರನ್ನಾಗಿಸಿ ಆತ್ಮಾರ್ಪಣೆ ಮಾಡಿದ ಹೋರಾಟಗಾರರನ್ನು ನೆನಪಿಸುವ ದಿನ. ಸ್ವಾತಂತ್ರ್ಯವೆಂದರೆ ಬೆಚ್ಚನೆಯ ಅನುಭೂತಿ. ಭಾರತ ಆತ್ಮನಿರ್ಭರದೊಂದಿಗೆ ಸ್ವಾವಲಂಬನೆಯತ್ತ ಸಾಗುತ್ತಿದೆ‌. ಭಾರತ ಜಗದ್ಗುರುವಾಗಲಿದೆ ಎಂದು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಕಾಪು ತಾಲೂಕು ಆಡಳಿತದ ವತಿಯಿಂದ ಜರಗಿದ 79ನೇ ಸ್ವಾತಂತ್ರ್ಯದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಗಣ್ಯರು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ‌ಅವರ‌ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾಪು ತಹಶಿಲ್ದಾರ್ ಡಾ.ಪ್ರತಿಭಾ ಆರ್. ಮಾತನಾಡಿ, ಭಾರತ ಬೆಳಕಿನ ಕಣಜವಾಗಿದೆ. ಸುವರ್ಣ ದಿನ ಸ್ವಾತಂತ್ರ್ಯ ದಿನವಾಗಿದೆ. ವೈಚಾರಿಕ ವೈಜ್ಞಾನಿಕ ಭಾರತವಾಗಬೇಕಿದೆ. ಮೌಲ್ಯಗಳನ್ನು ಇರಿಸಿ ತಂತ್ರಜ್ಞಾನ ಅಭಿವೃದ್ಧಿಯಾಗಬೇಕು. ಇಂದಿಗೂ ಮಹಿಳೆಯರು ಆತಂಕದಲ್ಲಿದ್ದು ನಿರ್ಭೀತಿಯಿಂದ ಇರಬೇಕಾಗಿದೆ. ಭಾರತದ ಅಖಂಡತೆ ತೋರಿಸಲು ನಾವೆಲ್ಲರೂ ಪಣತೊಡೋಣ ಎಂದು ಹೇಳಿದರು. ಸನ್ಮಾನ : ದೈವ ಪಾಡ್ದನ ಹಾಡುಗಾರ್ತಿ ಲಿಂಗು ಪಾಣಾರ, ಸಮಾಜ ಸೇವಕ ಗೋಪಾಲ ಪೂಜಾರಿ, ಪಾಕ ಶಾಸ್ತ್ರಜ್ಞ ಗುರುರಾಜ್ ರಾವ್, ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ವಿನ್ನಿ ಗೋನ್ಸವಾಲ್ ರನ್ನು ಸನ್ಮಾನಿಸಲಾಯಿತು. ಕಾಪು ತಾಲೂಕಿನ ಅರ್ಹ ಫಲಾನುಭವಿಗಳಿಗೆ ಕಂದಾಯ ಇಲಾಯಿಂದ ಹಕ್ಕುಪತ್ರಗಳ ವಿತರಣೆಯನ್ನು ಕಾಪು ಶಾಸಕರು ವಿತರಿಸಿದರು. ಪೋಲಿಸ್, ಸೇವಾದಳ, ಸ್ಕೌಟ್ಸ್ ಗೈಡ್, ಶಾಲಾ ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ಮಾಜಿ ಶಾಸಕ ಲಾಲಾಜಿ‌ಆರ್. ಮಂಡನ್, ಕಾಪು ಪುಸಭಾಧ್ಯಕ್ಷೆ ಹರಿಣಾಕ್ಷಿ ದೇವಾಡಿಗ, ಉಪಾಧ್ಯಕ್ಷೆ ಸರಿತಾ ಶಿವಾನಂದ್, ಕಾಪು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿಕ್ರಂ ಕಾಪು, ಕಾಪು ತಾಲೂಕು ಗ್ಯಾರಂಟಿ ‌ಅನುಷ್ಠಾನ ಸಮಿತಿ ‌ಅಧ್ಯಕ್ಷ ನವೀನ್ಚಂದ್ರ ಸುವರ್ಣ, ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್, ಕಾಪು ತಾಲೂಕು ಸಿಇಒ ಜೇಮ್ಸ್ ಡಿಸಿಲ್ವ, ಕಾಪು ಪುರಸಭಾಧಿಕಾರಿ ನಾಗರಾಜ್, ಕಾಪು ವೃತ್ತ ನಿರೀಕ್ಷಕಿ ಜಯಶ್ರೀ ಮಾಣೆ, ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಗೋಪಾಲಕೃಷ್ಣ ಗಾಂವ್ಕಂರ್, ಕ.ಸಾ.ಪ.ತಾಲೂಕು ಅಧ್ಯಕ್ಷ ಪುಂಡಲೀಕ ಮರಾಠೆ, ಸಮಾಜ ಸೇವಕ ಗೋಪಾಲ ಪೂಜಾರಿ, ಪುರಸಭಾ ಸದಸ್ಯರು, ಕಾಪು ತಾಲೂಕಿನ ವಿವಿಧ ಠಾಣೆಗಳ ಠಾಣಾಧಿಕಾರಿಗಳು, ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು. ಯುವಜನ ಮತ್ತು ಕ್ರೀಡಾ ಇಲಾಖೆಯ ತಾಲೂಕು ಅಧಿಕಾರಿ ರಿತೇಶ್ ಕುಮಾರ್ ಸ್ವಾಗತಿಸಿದರು. ಪಿ.ಡಿ.ಒ ಶ್ರೀನಿವಾಸ ವಂದಿಸಿದರು.