Updated News From Kaup
ಸಾಹಿತ್ಯ ಬದುಕನ್ನು ಉತ್ತಮಗೊಳಿಸುತ್ತದೆ - ಗುರ್ಮೆ ಸುರೇಶ್ ಶೆಟ್ಟಿ
Posted On: 25-04-2022 08:55PM
ಉಡುಪಿ : ಅನಾದಿ ಕಾಲದಿಂದಲೂ ತುಳುವರು ಭಾವನಾತ್ಮಕವಾದ ಬದುಕನ್ನು ಕಟ್ಟಿಕೊಂಡವರು, ಪ್ರಕೃತಿಯನ್ನು ಆರಾಧಿಸುತಿದ್ದವರು. ಆದರೇ ಇಂದು ಮನೆಗಳು ದೊಡ್ಡದಾಗಿವೆ, ಆದರೇ ಮನಸ್ಸುಗಳು ಚಿಕ್ಕದಾಗುತ್ತಿವೆ. ತುಳುವರಲ್ಲಿಯೂ ಕೌಟುಂಬಿಕ ಶಿಥಿಲತೆ ಕಾಣಲಾರಂಭಿಸಿದೆ ಎಂದು ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ವಿಷಾದ ವ್ಯಕ್ತಪಡಿಸಿದರು. ಅವರು ಉಡುಪಿ ತುಳುಕೂಟದ 27ನೇ ವರ್ಷದ ಪಣಿಯಾಡಿ ಕಾದಂಬರಿ ಪ್ರಶಸ್ತಿ ಪಡೆದ, ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕಿ ಪ್ರೊ. ಅಕ್ಷಯಾ ಆರ್. ಶೆಟ್ಟಿ ಅವರ ದೆಂಗ ಕಾದಂಬರಿಯನ್ನು ಬಿಡುಗಡೆ ಮಾಡಿ ಮಾತನಾಡಿದರು. ಉತ್ತಮ ಸಾಹಿತ್ಯದಿಂದ ಬದುಕನ್ನು ಉತ್ತಮಗೊಳಿಸಲು ಸಾಧ್ಯವಿದೆ. ಕಾದಂಬರಿ ಎಂಬುದು ಜನರ ನಡುವಿನ ಮಾತು ಘಟನೆಗಳೇ ಆಗುತ್ತವೆ. ಆದ್ದರಿಂದ ತುಳುಕೂಟವು ತುಳು ಭಾಷೆಯಲ್ಲಿ ಕಾದಂಬರಿಗಳನ್ನು ಬರೆಯುವುದಕ್ಕೆ ನೀಡುತ್ತಿರುವ ಪ್ರೋತ್ಸಾಹ ಶ್ಲಾಘನೀಯವಾದುದು ಎಂದರು.
ಕಾಪು : ಕಾಂಗ್ರೆಸ್ ವತಿಯಿಂದ ಸೌಹಾರ್ದ ಸಮಾರಂಭ ಹಾಗೂ ಇಫ್ತಾರ್ ಕೂಟ
Posted On: 24-04-2022 05:15PM
ಕಾಪು : ಬ್ಲಾಕ್ ಕಾಂಗ್ರೆಸ್ ಸಮಿತಿ, ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ, ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಕಾಪು (ದ) ಇದರ ಸಹಯೋಗದೊಂದಿಗೆ ಸೌಹಾರ್ದ ಸಮಾರಂಭ ಹಾಗೂ ಇಫ್ತಾರ್ ಕೂಟವು ಏಪ್ರಿಲ್ 27ರ ಸಂಜೆ 4:30 ಕ್ಕೆ ಕಾಪುವಿನ ಕೊಪ್ಪಲಂಗಡಿಯ ಕಮ್ಯುನಿಟಿ ಹಾಲ್ ನಲ್ಲಿ ಸಭಾ ಕಾರ್ಯಕ್ರಮದೊಂದಿಗೆ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 29 : ಶ್ರೀ ದೇವಿ ಭಜನಾ ಮಂಡಳಿ ಮಂಡೇಡಿ ಇನ್ನಂಜೆ - ವಾರ್ಷಿಕ ಭಜನಾ ಮಂಗಳೋತ್ಸವ
Posted On: 24-04-2022 05:03PM
ಕಾಪು : ತಾಲೂಕಿನ ಮಂಡೇಡಿ ಇನ್ನಂಜೆಯ ಶ್ರೀ ದೇವಿ ಭಜನಾ ಮಂಡಳಿ ಇದರ ವಾರ್ಷಿಕ ಭಜನಾ ಮಂಗಳೋತ್ಸವ ಏಪ್ರಿಲ್ 29 ರಂದು ಜರಗಲಿದೆ.
ಕಟಪಾಡಿ ಟ್ರಾಫಿಕ್ ಸಮಸ್ಯೆ, ಮುಗಿಯದ ಗೋಳು, ಮುಕ್ತಿ ಎಂದು ?
Posted On: 24-04-2022 03:45PM
ಕಟಪಾಡಿ : ಕಾಪು ತಾಲೂಕಿನ ಕಟಪಾಡಿ ಮುಖ್ಯ ಜಂಕ್ಷನ್ ನ ಟ್ರಾಫಿಕ್ ಸಮಸ್ಯೆಯು ವಾಹನ ಸವಾರರಿಗೆ ಮುಗಿಯದ ಗೋಳಾಗಿದೆ. ವಿಶೇಷ ದಿನಗಳಲ್ಲಿ ಇಲ್ಲಿ ಪ್ರತಿದಿನಕ್ಕಿಂತ ಅಧಿಕ ವಾಹನಗಳು ಓಡಾಟ ಕಾಣಬಹುದು ಅಂತಹ ಸಂದರ್ಭ ಟ್ರಾಫಿಕ್ ನಿವಾರಣೆಗೆ ಒಂದಷ್ಟು ಪೋಲಿಸರ ಅಗತ್ಯ ಈ ಸ್ಥಳದಲ್ಲಿದೆ.
ಅಜ್ಜಮ್ಮ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ವತಿಯಿಂದ ಅಜ್ಜಮ್ಮ ಟ್ರೋಫಿ - ಸಮಾರೋಪ ಸಮಾರಂಭ
Posted On: 21-04-2022 10:53PM
ಉಡುಪಿ : ಅಜ್ಜಮ್ಮ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ಇದರ ಅಜ್ಜಮ್ಮ ಟ್ರೋಫಿಯ ಸಮಾರೋಪ ಸಮಾರಂಭವು ಬೀಡಿನಗುಡ್ಡೆ ಮಹಾತ್ಮಗಾಂಧಿ ಮೈದಾನದಲ್ಲಿ ನಡೆಯಿತು.
ನಾಂಜಾರು ಶ್ರೀ ಧರ್ಮ ಜಾರಂದಾಯ ದೈವಸ್ಥಾನ ಪಣಿಯೂರು : ಶ್ರೀ ಧರ್ಮ ಜಾರಂದಾಯ ಹಾಗೂ ಪರಿವಾರ ದೈವಗಳ ವಾರ್ಷಿಕ ಸಿರಿ-ಸಿಂಗಾರದ ನೇಮ
Posted On: 21-04-2022 05:35AM
ಕಾಪು : ಇಲ್ಲಿನ ಪಣಿಯೂರು ನಾಂಜಾರು ಶ್ರೀ ಧರ್ಮ ಜಾರಂದಾಯ ದೈವಸ್ಥಾನದಲ್ಲಿ ಶ್ರೀ ಧರ್ಮ ಜಾರಂದಾಯ ಹಾಗೂ ಪರಿವಾರ ದೈವಗಳ ವಾರ್ಷಿಕ ಸಿರಿ-ಸಿಂಗಾರದ ನೇಮವು ಏಪ್ರಿಲ್ 21ರಂದು ಜರಗಲಿದೆ.
ಕಾಪು ಮಂಡಲ ಬಿಜೆಪಿ ಯುವಮೋರ್ಚದಿಂದ ಯೋಧರ ಸನ್ಮಾನ
Posted On: 21-04-2022 05:17AM
ಕಾಪು : ಸ್ವಾತಂತ್ರ್ಯದ ಅಮ್ರತ ಮಹೋತ್ಸವದ ನಿಮಿತ್ತ ಕಾಪು ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಏಪ್ರಿಲ್ 19ರಂದು ಅಧ್ಯಕ್ಷರಾದ ಸಚಿನ್ ಸುವರ್ಣ ಇವರ ನೇತೃತ್ವದಲ್ಲಿ ಯೋಧರನ್ನು ಸನ್ಮಾನಿಸುವ ಕಾರ್ಯಕ್ರಮ ಜರಗಿತು.
ಮೇ 1 : ಉಡುಪಿಯ ಕೃಷ್ಣ ಮಠದ ರಾಜ್ಯಾಂಗಣದಲ್ಲಿ ರಾಜ್ಯ ಮಟ್ಟದ ಭಜನಾ ಕಮ್ಮಟ - ಗುರುವಂದನೆ
Posted On: 21-04-2022 05:07AM
ಉಡುಪಿ : ಶ್ರೀ ಕ್ರಷ್ಣ ಮಠ ಪರ್ಯಾಯ ಶ್ರೀ ಕ್ರಷ್ಣಾಪುರ ಮಠ ಉಡುಪಿ, ಇದರ ಆಶ್ರಯದಲ್ಲಿ, ಮೋಹಿನಿ ಭಟ್ ಮಂಜೇಶ್ವರ ಮತ್ತು ಮಾಯಾ ಕಾಮತ್ ಈಶ್ವರ ನಗರ ಮಣಿಪಾಲ, ಶ್ರೀ ಮಹಾಮಾಯಾ ಭಜನಾ ಮಂಡಳಿ ಈಶ್ವರನಗರ ಮಣಿಪಾಲ, ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಕರ್ವಾಲು, ಅಲೆವೂರು, ಪರಿವರ್ತನಾ ಫೌಂಡೇಶನ್ ಮಣಿಪಾಲ ಇದರ ಸಹಯೋಗದಲ್ಲಿ ರಾಜ್ಯ ಮಟ್ಟದ ಭಜನಾ ಕಮ್ಮಟ - ಗುರುವಂದನೆ ಮೇ 1 ರಂದು ಬೆಳಿಗ್ಗೆ 9ಗಂಟೆಗೆ ಉಡುಪಿಯ ಕೃಷ್ಣ ಮಠದ ರಾಜ್ಯಾಂಗಣದಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಆಯೋಜಕರಿಂದ ಪರ್ಯಾಯ ಶ್ರೀ ಕ್ರಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥ ಶ್ರೀಗಳಿಗೆ ನೀಡಲಾಯಿತು.
ಪಂದ್ಯಕೂಟದಲ್ಲಿ ಸಂಗ್ರಹವಾದ ಮೊತ್ತದಿಂದ ಉಳಿತಾಯದ ಹಣದಲ್ಲಿ ಸರ್ಕಾರಿ ಶಾಲೆಗೆ ಕಂಪ್ಯೂಟರ್ ನೀಡಿದ ಟೀಮ್ ಡ್ಯೂಡ್
Posted On: 21-04-2022 04:48AM
ಉಡುಪಿ : ಬ್ರಹ್ಮಾವರ ಗಾಂಧಿ ಮೈದಾನದಲ್ಲಿ ಟೀಮ್ ಡ್ಯೂಡ್ ಆಶ್ರಯದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ನಡೆದ ಪಂದ್ಯಕೂಟ ಏಪ್ರಿಲ್ 8 ಮತ್ತು 9ರಂದು ಡ್ಯೂಡ್ ಟ್ರೋಫಿ ಜರಗಿತು.
ಏಣಗುಡ್ಡೆ : ಶ್ರೀ ಬ್ರಹ್ಮ ಬೈದೆರುಗಳ ಗರಡಿ ಪುನರ್ ಪ್ರತಿಷ್ಠಾಪನೆ, ಬ್ರಹ್ಮಕಲಶಾಭಿಷೇಕ, ಕಾಲಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
Posted On: 18-04-2022 11:54AM
ಕಟಪಾಡಿ : ಅವಳಿ ವೀರರಾದ ಕೋಟಿಚೆನ್ನಯರು ನೆಲೆಯೂರಿದ ಐತಿಹ್ಯದ ಕಟಪಾಡಿ ಏಣಗುಡ್ಡೆ ಗರಡಿಯ ಸಮಗ್ರ ಜೀರ್ಣೋದ್ಧಾರ ಪ್ರಕ್ರಿಯೆಯು ಸುಮಾರು 4.5 ಕೋಟಿ ವೆಚ್ಚದಲ್ಲಿ ನಿರ್ಮಿತವಾಗಿದ್ದು ಮೇ 7ರಿಂದ ಮೊದಲ್ಗೊಂಡು ಮೇ 23ರವರೆಗೆ ವಿವಿಧ ಧಾರ್ಮಿಕ ಕ್ರಿಯೆಗಳು ನಡೆಯಲಿವೆ ಎಂದು ಜೀಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ಹರೀಶ್ಚಂದ್ರ ಅಮೀನ್ ಹೇಳಿದರು. ಅವರು ಕಟಪಾಡಿ ಏಣಗುಡ್ಡೆ ಶ್ರೀ ಬ್ರಹ್ಮ ಬೈದೆರುಗಳ ಗರಡಿ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶಾಭಿಷೇಕ ಹಾಗೂ ಕಾಲಾವಧಿ ಜಾತ್ರಾ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದರು.
