Updated News From Kaup
ಯುವವಾಹಿನಿ ಉಡುಪಿ ಘಟಕದಿಂದ ಸಾಹಿತ್ಯ ಸೌರಭ - ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ವಿವಿಧ ಸ್ಪರ್ಧೆಗಳು
Posted On: 23 Jul 2022, 10:31 PM
ಉಡುಪಿ : ಯುವ ವಾಹಿನಿ ಉಡುಪಿ ಘಟಕದಿಂದ ಸಾಹಿತ್ಯ ಸೌರಭ ಕಾರ್ಯಕ್ರಮದ ಅಂಗವಾಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಜುಲೈ 23 ರಂದು ಉದ್ಯಾವರ ಬಲಾಯಿಪಾದೆಯ ಯುವವಾಹಿನಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಖ್ಯಾತ ಸಾಹಿತಿಗಳು ಹಾಗೂ ಉಪನ್ಯಾಸಕರಾದ ವಾಸಂತಿ ಅಂಬಲಪಾಡಿ ಮುಖ್ಯ ಅತಿಥಿಯಾಗಿ ಆಗಮಿಸಿ ಸ್ಪರ್ಧಾ ಕೂಟದ ಯಶಸ್ಸಿಗೆ ಶುಭ ಹಾರೈಸಿದರು. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲೆ, ಹೈಸ್ಕೂಲು ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆಯನ್ನು ನಡೆಸಲಾಯಿತು. ಒಟ್ಟು 70 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಎಲ್ಲಾ ಪ್ರತಿಭೆಗಳಿಗೂ ಪ್ರಶಂಸನಾ ಪತ್ರ ನೀಡಿ ಪ್ರೋತ್ಸಾಹಿಸಲಾಯಿತು. ಉಡುಪಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಪ್ರವೀಣ್ ಡಿ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ ಕೇಂದ್ರ ಸಮಿತಿಯ ಕಲೆ ಮತ್ತು ಸಾಹಿತ್ಯ ನಿರ್ದೇಶಕರಾದ ಜಗದೀಶ್ ಕುಮಾರ್, ಯುವವಾಹಿನಿ ಉಡುಪಿ ಘಟಕದ ಮಾಜಿ ಅಧ್ಯಕ್ಷರುಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಉಡುಪಿ ಯುವವಾಹಿನಿ ಘಟಕದ ಪ್ರವೀಣ್ ಡಿ ಪೂಜಾರಿ ಸ್ವಾಗತಿಸಿದರು. ಕಾರ್ಯಕ್ರಮ ಸಂಚಾಲಕ ವೀಕ್ಷಿತ್ ಪ್ರಸ್ತಾವಿಸಿದರು. ಸುಪ್ರೀತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ದಯಾನಂದ್ ಕರ್ಕೇರ ವಂದಿಸಿದರು. ಶ್ರೇಯಸ್ ಕೋಟ್ಯಾನ್ ತೀರ್ಪುಗಾರರಾಗಿ ಹಾಗೂ ಅಮಿತಾಂಜಲಿ ಕಿರಣ್ ಕಾರ್ಯಕ್ರಮ ಸಂಚಾಲಕರಾಗಿ ಸಹಕರಿಸಿದರು.
ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಕಾಪುವಿನಲ್ಲಿ ಎಸ್ಡಿಪಿಐ ಪ್ರತಿಭಟನೆ
Posted On: 23 Jul 2022, 08:12 PM
ಕಾಪು : ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಬೆಲೆ ಏರಿಕೆ ಹಾಗೂ ಜಿಎಸ್ಟಿ ನೀತಿಯ ವಿರುದ್ಧ ಕಾಪುಪೇಟೆಯಲ್ಲಿ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ವತಿಯಿಂದ ಪ್ರತಿಭಟನಾ ಸಭೆ ನೆರವೇರಿತು. ಎಸ್ಡಿಪಿಐ ಕಾಪು ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಹನೀಫ್ ಮೂಳೂರು ಮಾತನಾಡಿ, ಕೇಂದ್ರದ ತೆರಿಗೆ ನೀತಿಯಿಂದ ಬಡವರು ತಿನ್ನುವ ಅನ್ನದ ಬಟ್ಟಲಿಗೆ ಟ್ಯಾಕ್ಸ್ ಹಾಕಿದ್ದಾರೆ. ಹಾಲು, ಮಜ್ಜಿಗೆ, ಮೊಸರಿಗೆ ಜಿಎಸ್ಟಿ ಹಾಕಿ ಜನರನ್ನು ಬದುಕದಂತೆ ಮಾಡಿದ್ದಾರೆ. ಇದೇ ರೀತಿ ಬಡವರನ್ನು ತುಳಿಯುವ ಪ್ರಯತ್ನ ಮುಂದುವರಿದರೆ, ಮುಂದಿನ ದಿನಗಳಲ್ಲಿ ಶ್ರೀಲಂಕಾ ದೇಶದ ಪರಿಸ್ಥಿತಿ ಭಾರತದಲ್ಲಿ ಬರುವುದು ಖಚಿತ ಎಂದರು. ಈ ಸಂದರ್ಭ ಎಸ್ ಡಿ ಪಿ ಐ ಜಿಲ್ಲಾ ಉಪಾಧ್ಯಕ್ಷ ಶಾಹಿದ್ ಅಹ್ಮದ್, ಕಾಪು ಪುರಸಭಾ ಸದಸ್ಯ ನೂರುದ್ದೀನ್ ಅಹಮದ್ ಮಹಲ್ಲಾ, ಅಬ್ದುಲ್ ಖಾದರ್ ಉಪಸ್ಥಿತರಿದ್ದರು.
ಕಟಪಾಡಿ : ಎಸ್. ವಿ.ಎಸ್ ಶಾಲೆಯ ಹಳೆವಿದ್ಯಾರ್ಥಿಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ಗುರುತಿನ ಚೀಟಿ ಕೊಡುಗೆ
Posted On: 23 Jul 2022, 07:10 PM
ಕಟಪಾಡಿ : ಇಲ್ಲಿನ ಎಸ್. ವಿ.ಎಸ್ ಹೈಸ್ಕೂಲ್ ಇದರ 1997ರಿಂದ 2002 ರ ಬ್ಯಾಚ್ ನ ಹಳೆವಿದ್ಯಾರ್ಥಿಗಳ ವತಿಯಿಂದ ಶಾಲಾ ಮಕ್ಕಳಿಗೆ ಗುರುತಿನ ಚೀಟಿ ನೀಡುವ ಕಾರ್ಯಕ್ರಮ ಜುಲೈ 22 ರಂದು ಎಸ್. ವಿ. ಎಸ್ ಹೈಸ್ಕೂಲ್ ಇದರ ಸಭಾಂಗಣದಲ್ಲಿ ಜರಗಿತು. ಮುಖ್ಯ ಅತಿಥಿಗಳಾಗಿ ಶಾಲಾ ಮುಖ್ಯೋಪಾಧ್ಯಾಯರಾದ ಸುಬ್ರಹ್ಮಣ್ಯ ತಂತ್ರಿ ಶಾಲಾ ಸಮಿತಿ ಸದಸ್ಯರಾದ ನಿತ್ಯಾನಂದ ಶೆಣೈ, ಸಂಘದ ಗೌರವಾಧ್ಯಕ್ಷರಾದ ಸತೀಶ್ ಕುಮಾರ್ ಉದ್ಯಾವರ ಹಾಗೂ ಅಧ್ಯಕ್ಷರಾದ ಜ್ಯೋತಿ ಪ್ರಶಾಂತ್ ಕಟಪಾಡಿ ಹಾಗೂ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಎಸ್. ವಿ. ಎಸ್ ನ 1997-2002 ರ ಬ್ಯಾಚ್ ನ ಹಳೆವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೊಂಡ ತಪ್ಪಿಸಲು ಹೋಗಿ ಹೊಂಡಕ್ಕೆ ಬಿದ್ದ ಕಾರು
Posted On: 22 Jul 2022, 06:23 PM
ಕಾಪು : ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರ ಕಲ್ಲಾಪು ಸಮೀಪ ಉಡುಪಿಯಿಂದ ಪಡುಬಿದ್ರಿ ಕಡೆಗೆ ಹೋಗುತ್ತಿರುವಾಗ ಹೊಂಡ ತಪ್ಪಿಸಲು ಹೋಗಿ ಕಾರೊಂದು ಗದ್ದೆಗೆ ಉರುಳಿದ ಘಟನೆ ನಡೆದಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರು ಚಲಾಯಿಸುತ್ತಿದ್ದ ಪತ್ರಕರ್ತ ಹಮೀದ್ ಪಡುಬಿದ್ರಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸಂತ ಮೇರಿ ಮಹಾವಿದ್ಯಾಲಯದಲ್ಲಿ ಬೂಸ್ಟರ್ ಡೋಸ್ ಲಸಿಕಾ ಅಭಿಯಾನ
Posted On: 22 Jul 2022, 01:18 PM
ಶಿರ್ವ : ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್ಸಿಸಿ, ಎನ್ಎಸ್ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಜಂಟಿಯಾಗಿ ಬೂಸ್ಟರ್ ಡೋಸು ಲಸಿಕಾ ಅಭಿಯಾನವನ್ನು ಕಾಲೇಜಿನ ಎಲ್ಲಾ ಬೋಧಕ ಬೋಧಕೇತರ, ವಿದ್ಯಾರ್ಥಿಗಳಿಗೆ ಕಾಲೇಜಿನ ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಜುಲೈ 22 ರಂದು ಆಯೋಜಿಸಲಾಯಿತು. ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ-ಬೋಧಕೇತರ ಸಿಬ್ಬಂದಿಗೆ ಬೂಸ್ಟರ್ ಡೋಸ್ ಕೋವಿಡ್ -19 ಲಸಿಕಾಕರಣ ನಡೆಸಲು ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಕಾಲೇಜಿನ 18 ವರ್ಷಕ್ಕಿಂತ ಮೇಲ್ಪಟ್ಟ ಎರಡು ಡೋಸ್ ಪಡೆದ ಅರ್ಹ ಫಲಾನುಭವಿಗಳಿಗೆ ಲಸಿಕೆಗಳ ಲಭ್ಯತೆಗೆ ಅನುಸಾರವಾಗಿ ಕಾಲೇಜು ಆವರಣದಲ್ಲಿಯೇ ಲಸಿಕಾಕರಣ ಅಭಿಯಾನ ಆಯೋಜಿಸಲಾಯಿತು, ಕಾಲೇಜು ಆಡಳಿತ ವ್ಯವಸ್ಥೆಯ ಸಹಕಾರದಿಂದ ಕೋವಿಡ್ ನಿಯಂತ್ರಣ ನಿಯಮಾವಳಿಗಳನ್ನು ಪಾಲಿಸಿಕೊಂಡು ಲಸಿಕೆ ವಿತರಿಸಲಾಗುತ್ತಿದೆ ಎಂದು ಲಸಿಕಾ ಅಭಿಯಾನದ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿದರು. ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾದ ಶಿರ್ವ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ| ಸುಬ್ರಮಣ್ಯರವರು ಜಿಲ್ಲಾಡಳಿತದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಲಸಿಕೆ ವಿತರಣೆ ಮಾಡಲಾಗುತ್ತಿದ್ದು ಕಾಲೇಜುಗಳ ಮೂಲಕ ಲಸಿಕೆ ನೀಡಲಾಗುತ್ತಿದೆ,ಲಸಿಕೆ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿದೆ ಎಂಬ ಮಾಹಿತಿಯನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಬೋಧಕ,ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದರು. ಈ ಅಭಿಯಾನಕ್ಕೆ ಶಿರ್ವ ಸಮುದಾಯ ಆರೋಗ್ಯ ಕೇಂದ್ರದ ಕಿರಿಯ ಆರೋಗ್ಯ ಸಹಾಯಕರಾದ ಶಶಿ , ಆಶಾ ಕಾರ್ಯಕರ್ತರಾದ ಸವಿತಾ,ರೆಹೆಮತ್ವರು ಸಹಕಾರವನ್ನು ನೀಡಿದರು.
ಸುರತ್ಕಲ್ ರಸ್ತೆ ಅಪಘಾತದಲ್ಲಿ ಕಟಪಾಡಿಯ ಮೂಡಬೆಟ್ಟು ದೇವಸ್ಥಾನದ ಅರ್ಚಕ ದುರ್ಮರಣ
Posted On: 22 Jul 2022, 01:10 PM
ಕಟಪಾಡಿ : ಸುರತ್ಕಲ್ ನಲ್ಲಿ ಲಾರಿ ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಉಡುಪಿ ಕಟಪಾಡಿ ಬಳಿಯ ಮಟ್ಟು ನಿವಾಸಿ, ದೇಗುಲದ ಅರ್ಚಕ ಅಕ್ಷಯ್ ಕೆ. ಆರ್ (33) ದುರ್ಮರಣ ಹೊಂದಿದ್ದಾರೆ. ಕಟಪಾಡಿ ಮೂಡಬೆಟ್ಟು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜಾ ಕೈಂಕರ್ಯ ನಡೆಸುತ್ತಿದ್ದ ಅಕ್ಷಯ್ ಸುರತ್ಕಲ್ ನಲ್ಲಿ ಪೂಜೆ ಮುಗಿಸಿ ಕಟಪಾಡಿ ಗೆ ಹಿಂತಿರುಗಿ ಬರುವ ವೇಳೆಯಲ್ಲಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಮೃತರು ತಾಯಿಯನ್ನು ಅಗಲಿದ್ದಾರೆ.
ಜುಲೈ 23 : ಮುಕುಂದ ಕೃಪಾ ನರ್ಸರಿ, ಪ್ರಾಥಮಿಕ ಶಾಲೆಯ ಸಂಸ್ಥಾಪಕರ ದಿನಾಚರಣೆ ಹಾಗೂ ಗೋಲ್ಡನ್ ಜ್ಯುಬ್ಲಿ ಸಂಭ್ರಮಾಚಾರಣೆ
Posted On: 21 Jul 2022, 11:27 AM
ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದ ಬಳಿಯ ಮುಕುಂದ ಕೃಪಾ ಇಂಗ್ಲೀಷ್ ಮೀಡಿಯಂ ನರ್ಸರಿ ಹಾಗೂ ಪ್ರಾಥಮಿಕ ಶಾಲೆಯ ಸಂಸ್ಥಾಪಕರ ದಿನಾಚರಣೆ ಹಾಗೂ ಗೋಲ್ಡನ್ ಜ್ಯುಬ್ಲಿ ಸಂಭ್ರಮಾಚಾರಣೆಯ ಸಮಾರಂಭ ಜುಲೈ 23ರಂದು ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲಿ ಮಾಧ್ಯಾಹ್ನ 2:30 ಕ್ಕೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕುದಿ ವಸಂತ ಶೆಟ್ಟಿ ಅವರು ಭಾಗವಹಿಸಲಿದ್ದಾರೆ. ಹಾಗೂ ಈ ವೇಳೆ ಸಮಾರಂಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್,ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಪ್ರಭಾರ ಬಿಇಒ ಅಶೋಕ್ ಕಾಮತ್, ಅಕಾಡೆಮಿ ಜನರಲ್ ಎಜುಕೇಷನ್ ಮಣಿಪಾಲ ಇದರ ಕಾರ್ಯದರ್ಶಿ ವರದಾಯ ಪೈ, ಡೆಂಟಾ ಕೇರ್ ಕ್ಲಿನಿಕ್ ಉಡುಪಿ ಇದರ ಡಾ.ವಿಜಯೇಂದ್ರ ವಸಂತ್ ರಾವ್, ಮುಕುಂದ ಕೃಪಾ ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿ ಪ್ರಭಾವತಿ.ಎಸ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಡೆಕಾರು : ಉಚಿತ ಆರೋಗ್ಯ ತಪಾಸಣಾ ಶಿಬಿರ
Posted On: 20 Jul 2022, 04:36 PM
ಉಡುಪಿ: ಕಡೆಕಾರು ಗ್ರಾಮ ಪಂಚಾಯತ್, ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಪೆ ಹಾಗೂ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕಡೆಕಾರು, ಕುತ್ಪಾಡಿ ಇವರ ಸಹಯೋಗದೊಂದಿಗೆ ಜುಲೈ 20ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವು ಕಡೆಕಾರು- ಕುತ್ಪಾಡಿ ಅಂಗನವಾಡಿ ಪಡುಕೆರೆಯಲ್ಲಿ ಜರಗಿತು. ಈ ಸಂದರ್ಭ ಮಧುಮೇಹ ತಪಾಸಣೆ, ರಕ್ತದೊತ್ತಡ ಪರೀಕ್ಷೆ, ನುರಿತ ವೈದ್ಯರಿಂದ ಸಲಹೆ, ಕೋವಿಡ್ ಲಸಿಕಾ ವಿತರಣಾ ಕಾರ್ಯಕ್ರಮ, ಆಯುಷ್ಮಾನ್ ಕಾರ್ಡ್, ಸೀನಿಯರ್ ಸಿಟಿಜನ್ ಕಾರ್ಡ್ ಗಳ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಉದ್ಯಾವರ : ಗುಂಡಿ ತಪ್ಪಿಸಲು ಹೋಗಿ ಕಾರಿಗೆ ಡಿಕ್ಕಿ ಹೊಡೆದ ಕಂಟೈನರ್
Posted On: 20 Jul 2022, 01:39 PM
ಉದ್ಯಾವರ : ರಾಷ್ಟ್ರೀಯ ಹೆದ್ದಾರಿ 66 ಹಾಲಿಮಾ ಸಾಬ್ಜು ಸಭಾಂಗಣದ ಮುಂಭಾಗದಲ್ಲಿ ಹೆದ್ದಾರಿಯ ಗುಂಡಿ ತಪ್ಪಿಸಲು ಹೋಗಿ ಕಂಟೈನರ್ ಕಾರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿರು ಗುಂಡಿಯಿಂದ ಅದನ್ನು ತಪ್ಪಿಸಲು ಹೋಗಿ ಕಂಟೈನರ್ ನ ನಿಯಂತ್ರಣ ತಪ್ಪಿ ಕಾರಿನ ಹಿಂಬದಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಸಂಪೂರ್ಣ ಜಖಂಗೊಂಡಿದೆ ಹಾಗೂ ಕಂಟೈನರ್ ರಾಷ್ಟ್ರೀಯ ಹೆದ್ದಾರಿಯ ಡೈವರ್ಷನ್ ಏರಿ ನಿಂತಿದೆ.
ತುಳುವಿನ ಮಾನ್ಯತೆಗೆ ರಾಜ್ಯಸಭೆಯಲ್ಲಿ ಪ್ರಯತ್ನ - ಡಾ. ಹೆಗ್ಗಡೆ ಭರವಸೆ
Posted On: 20 Jul 2022, 12:05 AM
ಮಂಗಳೂರು : ತುಳು ಭಾಷೆಯನ್ನು ಸಂವಿಧಾನದ ಕಲಂ 347ರ ಪ್ರಕಾರ ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಾನ್ಯ ಮಾಡಲು, ಜನಪ್ರತಿನಿಧಿಗಳು ಹೇಳುತ್ತಿರುವ ತಾಂಂತ್ರಿಕ ಕಾರಣವನ್ನು ನಿವಾರಿಸುವಂತೆ ಜೈ ತುಳುನಾಡ್ ಸಂಘಟನೆಗಳು ಕಾರ್ಯಕರ್ತರು ಮಂಗಳವಾರ ಶ್ರೀಕ್ಷೇತ್ರದ ಧರ್ಮಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದರು. ನಂತರ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾದ ಡಾ: ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಅಭಿನಂದನೆಯನ್ನು ಸಲ್ಲಿಸಿ, ತುಳುಮಾತೆಯ ಛಾಯಾಚಿತ್ರವನ್ನು ನೀಡಿ ಗೌರವಿಸಲಾಯಿತು. ಹೆಗ್ಗಡೆ ಅವರು ತುಳುವನ್ನು ಅಧಿಕೃತ ಭಾಷೆಯನ್ನಾಗಿಸಲು ಖಂಡಿತ ಪ್ರಯತ್ನ ಪಡುವುದಾಗಿ ತಿಳಿಸಿದರು. ರಾಜ್ಯಸಭಾ ಸದಸ್ಯನಾಗಿ ನನಗೆ ತುಳು ಭಾಷೆಯ ಬಗ್ಗೆ ಸಂಸತ್ತಿನಲ್ಲಿ ಮಾತನಾಡಲು ಒಂದು ಒಳ್ಳೆಯ ಅವಕಾಶವನ್ನು ಒದಗಿ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ.ಆಕಾಶ್ ರಾಜ್ ಜೈನ್, ಜೈ ತುಳುನಾಡ್ ಸಂಘಟನೆ ಅಧ್ಯಕ್ಷ ಅಶ್ವಥ್ ತುಳುವೆ, ಸ್ಥಾಪಕ ಸದಸ್ಯ ಕಿರಣ್ ತುಳುವೆ, ತುಲು ಸಾಹಿತ್ಯ - ಸಂಸ್ಕೃತಿ ಸಮಿತಿಯ ಕುಶಾಲಾಕ್ಷೀ ವಿ.ಕಣ್ವತೀರ್ಥ, ಉಪಸಂಘಟನಾ ಕಾರ್ಯದರ್ಶಿ ಪೃಥ್ವಿ ತುಳುವೆ, ಪ್ರಚಾರ ಸಮಿತಿಯ ವಿನಯ್ ರೈ ಕುಡ್ಲ, ತುಳುನಾಡು ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ., ಚಾವಡಿ ಕೂಟದ ಅಧ್ಯಕ್ಷ ಶೇಖರ್ ಗೌಡತ್ತಿಗೆ, ಬೊಲ್ತೇರ್ ತಾಲೂಕು ಕೂಟದ ಅಧ್ಯಕ್ಷ ರಾಜೇಶ್ ಕುಲಾಲ್, ತುಳುವೆರೆ ಪಕ್ಷ ಚಾವಡಿ ಕೂಟದ ಉಪಾಧ್ಯಕ್ಷ ನವೀನ್ ಪೂಜಾರಿ ಅಡ್ಕದಬೈಲು, ತುಳುವರೆ ಪಕ್ಷ ಕರಂಬಾರ್ ಗ್ರಾಮ ಸಮಿತಿ ಅಧ್ಯಕ್ಷ ಉಮೇಶ್ ಕುಲಾಲ್, ಮುಗಿದು ಗ್ರಾಮ ಸಮಿತಿದ ಅಧ್ಯಕ್ಷ ಉಮೇಶ್ ಕುಲಾಲ್, ಮುಗೇರ್ ಗ್ರಾಮ ಸಮಿತಿದ ಅಧ್ಯಕ್ಷ ಅಶ್ವಥ್ ಕುಲಾಲ್, ಬೊಲ್ತೇರ್ ಗ್ರಾಮ ಸಮಿತಿಯ ಉಪಾಧ್ಯಕ್ಷರಾದ ರಮೇಶ್ ಸಾಲಿಯಾನ್ ಮೊದಲಾದವರು ಉಪಸ್ಥಿತರಿದ್ದರು.
