Updated News From Kaup

ಪಡುಬಿದ್ರಿ : ಕಡಲ್ಕೊರೆತ ಸ್ಥಳಕ್ಕೆ ಶಾಸಕರ ಭೇಟಿ

Thumbnail
Posted On: 10 Jul 2022, 01:19 PM

ಪಡುಬಿದ್ರಿ : ಕಾಪು ತಾಲೂಕಿನ ಹಲವೆಡೆ ಕಡಲ್ಕೊರೆತ ಉಂಟಾಗಿದ್ದು ಆ ಸ್ಥಳಗಳಿಗೆ ಮತ್ತು ಪಡುಬಿದ್ರಿಯಲ್ಲಿ ಕಡಲ್ಕೊರೆತಕ್ಕೆ ಒಳಗಾದ ಸ್ಥಳಕ್ಕೆ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಭೇಟಿ ನೀಡಿದರು. ಈ ಸಂದರ್ಭ ಬಂದರು ಹಾಗೂ ಮೀನುಗಾರಿಕಾ ಕಾರ್ಯನಿರ್ವಾಹಕ ಇಂಜಿನಿಯರ್ ಉದಯಕುಮಾರ್, ಸಹಾಯಕ ಇಂಜಿನಿಯರ್ ಜಯರಾಜ್, ಪಡುಬಿದ್ರಿ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಉಪಾಧ್ಯಕ್ಷರಾದ ಯಶೋಧ ಪೂಜಾರಿ, ಕಾಪು ಬಿಜೆಪಿ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ಪಂಚಾಯತ್ ಸದಸ್ಯರುಗಳು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.

'ಮುಖ್ಯಮಂತ್ರಿ ನಮ್ಮ ಮಾತು ಕೇಳುತ್ತಿಲ್ಲ' ಎಂದಾದರೆ ರಾಜೀನಾಮೆ ನೀಡಿ - ಡಾ.ಪ್ರಣಾವನಂದ ಸ್ವಾಮೀಜಿಯಿಂದ ಸಚಿವದ್ವಯರಿಗೆ ತಾಕೀತು

Thumbnail
Posted On: 10 Jul 2022, 12:28 PM

ಮಂಗಳೂರು : ನಾರಾಯಣ ಗುರು ನಿಗಮ ಹಾಗೂ ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ನಾರಾಯಣ ಗುರುಗಳ ಪಠ್ಯವನ್ನು ಕೈಬಿಟ್ಟ ವಿಚಾರ ಸೇರಿದಂತೆ ಹಲವಾರು ವಿಷಯಗಳ ಕುರಿತಂತೆ ಬಿಲ್ಲವ ಸಮುದಾಯವನ್ನು ರಾಜ್ಯ ಸರಕಾರ ನಿರ್ಲಕ್ಷಿಸುತ್ತಿದೆ. ಈ ಬಗ್ಗೆ ಸ್ಥಳೀಯ ಸಮುದಾಯದ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಸುನೀಲ್ ಕುಮಾರ್ ಅವರನ್ನು ಕೇಳಿದರೆ, 'ಮುಖ್ಯಮಂತ್ರಿ ನಮ್ಮ ಮಾತು ಕೇಳುತ್ತಿಲ್ಲ' ಎನ್ನುತ್ತಿದ್ದಾರೆ. ಹಾಗಿದ್ದರೆ ರಾಜೀನಾಮೆ ಕೊಟ್ಟು ಹೊರಬನ್ನಿ ಎಂದು ಅವರಿಗೆ ಹೇಳಿದ್ದೇನೆ. ಆದರೆ ಸ್ಪಂದನ ಸಿಗುತ್ತಿಲ್ಲ. ಬದಲಾಗಿ ಅವರು ನಮ್ಮ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಅವರಿಗೆ ಸಮುದಾಯದ ಜನಪ್ರತಿನಿಧಿಗಳಾಗಿ ಮುಂದುವರಿಯುವ ನೈತಿಕತೆ ಇಲ್ಲ ಎಂದು ಆರ್ಯ ಈಡಿಗ ರಾಷ್ಟ್ರೀಯ ಮಹಾ ಮಂಡಲದ ರಾಷ್ಟ್ರೀಯ ಅಧ್ಯಕ್ಷ, ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಡಾ.ಪ್ರಣಾವನಂದ ಸ್ವಾಮೀಜಿ ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕುಲಕಸುಬು ನಮ್ಮ ಹಕ್ಕು' ಎಂಬ ಘೋಷಣೆಯೊಂದಿಗೆ ಕಳೆದ ಎರಡು ವರ್ಷಗಳಿಂದ ಚಿಂಚೋಳಿಯಿಂದ ಪಾದಯಾತ್ರೆ ನಡೆಸಿದೆ. ಆ ಸಂದರ್ಭದಲ್ಲೂ ರಾಜ್ಯದಲ್ಲಿ ಆಡಳಿತ ನಡೆಸುವ ಸಮುದಾಯ ಜನಪ್ರತಿನಿಧಿಗಳಾಗಿರುವವರು ಯಾರೂ ಸಹಕಾರ ನೀಡಿಲ್ಲ. ಇತ್ತೀಚೆಗೆ ಆಮರಣಾಂತ ಉಪವಾಸ ಕೈಗೊಂಡಿದ್ದೆ. ಆ ಸಂದರ್ಭ ಕೆಲ ಉತ್ತರ ಭಾಗದ ಜನಪ್ರತಿನಿಧಿಗಳು ನನ್ನನ್ನು ಭೇಟಿಯಾಗಿ ಜುಲೈ 5ರೊಳಗೆ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದರು. ಆದರೆ ಈವರೆಗೆ ಅವರ ಒಂದು ಫೋನ್ ಕರೆಯೂ ಇಲ್ಲ. ಹಾಗಾಗಿ ಜುಲೈ 13ರಿಂದ ಉತ್ತರ ಕರ್ನಾಟಕದ 9 ಜನ ಜನಪ್ರತಿನಿಧಿಗಳ ಮನೆ ಎದುರು ಧರಣಿ ಕೂರಲಾಗುವುದು. ನಿರ್ಲಜ್ಜ ರಾಜಕಾರಣಿಗಳಿಗೆ ನಮ್ಮ ಸಮುದಾಯದ ಶಕ್ತಿಯನ್ನು ಮುಂದಿನ ದಿನಗಳಲ್ಲಿ ತೋರಿಸಲಿದ್ದೇವೆ ಎಂದು ಪ್ರಣಾವನಂದ ಸ್ವಾಮೀಜಿ ಎಚ್ಚರಿಕೆ ನೀಡಿದರು. ಪ್ರತಿ ಮಾತು ಮಾತಿಗೂ ನಾರಾಯಣಗುರುಗಳ ನಾಲ್ಕು ಶಾಲೆ ಕಟ್ಟಿಸಿದ್ದೇವೆ ಎಂದು ಇಲ್ಲಿನ ಜನಪ್ರತಿನಿಧಿಗಳಾದ ಸುನೀಲ್ ಕುಮಾರ್ ಹಾಗೂ ಕೋಟ ಶ್ರೀನಿವಾಸ ಪೂಜಾರಿ ಭಾಷಣದಲ್ಲಿ ಹೇಳುತ್ತಿರುತ್ತಾರೆ. ಇದು ಮೂಗಿಗೆ ತುಪ್ಪ ಸವರುವ ಯತ್ನವಷ್ಟೆ. ಕೋಟ ಶ್ರೀನಿವಾಸ ಪೂಜಾರಿ ಮೇಲೆ ಸಾಕಷ್ಟು ಗೌರವ ಇದೆ. ಆದರೆ ಸಮುದಾಯದ ನೋವಿನ ಎದುರು ಅವರ ಸರಳ ಸಜ್ಜನಿಕೆ ಯಾವುದೇ ಉಪಯೋಗಕ್ಕೆ ಬಾರದು. ಹಾಗಾಗಿ ಮುಂದಿನ ದಿನಗಳಲ್ಲಿ ಯುವಕರಿಗೆ ರಾಜಕೀಯ ಪ್ರಬುದ್ಧತೆ ನೀಡುವ ಜಾಗೃತಿ ನೀಡುವಲ್ಲಿ ನಾವು ಕಾರ್ಯಾಚರಣೆ ಮಾಡಲಿದ್ದೇವೆ ಎಂದು ಅವರು ಹೇಳಿದರು. ಪ್ರತಿಯೊಂದು ಸಮುದಾಯಕ್ಕೂ ನೋವು ಆದಾಗ ಅವರ ಸಮುದಾಯದ ನಾಯಕರು, ಜನಪ್ರತಿನಿಧಿಗಳು ಧ್ವನಿ ಎತ್ತಿ ಸರಕಾರದಿಂದ ಆಗಬೇಕಾದ್ದನ್ನು ಮಾಡಿಸಿಕೊಳ್ಳುತ್ತಿದ್ದಾರೆ. ಆದರೆ ನಮ್ಮ ಸಮುದಾಯದ ಜನಪ್ರತಿನಿಧಿಗಳು ಮಾತ್ರ ಬಾಯಿ ಮುಚ್ಚಿ ಕುಳಿತಿದ್ದಾರೆ. ರಾಜ್ಯದಲ್ಲಿ 70 ಲಕ್ಷ ಜನಸಂಖ್ಯೆಯನ್ನು ಹೊಂದಿರುವ ರಾಜ್ಯದ ಒಟ್ಟು ಜನಸಂಖ್ಯೆಯ ಶೇ. 20ರಷ್ಟಿರುವ ಬಿಲ್ಲವ ಸಮುದಾಯ ಕರಾವಳಿ ಭಾಗದಲ್ಲಿ ಚುನಾವಣೆಯಲ್ಲೂ ನಿರ್ಣಾಯಕ ಸ್ಥಾನದಲ್ಲಿದ್ದಾರೆ. ಹಾಗಿರುವಾಗ ಮುಂದಿನ ದಿನಗಳಲ್ಲಿ ನಾವು ನಮ್ಮ ಶಕ್ತಿಯನ್ನು ಪ್ರದರ್ಶಿಸಲಿದ್ದೇವೆ ಎಂದರು. ನಾರಾಯಣಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್ ಮಾತನಾಡಿ, ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ನಳಿನ್ ಕುಮಾರ್ ಕಟೀಲ್‌ರವರು ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭ ವಿವಿಧ ಸಮುದಾಯಗಳಿಗೆ ಆದ ನೋವಿನ ಬಗ್ಗೆ ಮೌನವಾಗಿದ್ದರು. ಸಿಎಂ ಜತೆ ಚರ್ಚಿಸಿ ನ್ಯಾಯ ಕೊಡಿಸುವ ಕೆಲಸ ಮಾಡಿಲ್ಲ. ಆದರೆ ಕಯ್ಯಾರ ಕಿಂಞಣ್ಣ ರೈ ಅವರ ವಿಷಯ ಪ್ರಸ್ತಾಪ ಆದಾಗ ಸಮುದಾಯದ ನಾಯಕರು ಧ್ವನಿ ಎತ್ತಿದಾಗ ಅವರ ಸಮುದಾಯದ ಮನೆಗೆ ತೆರಳಿ ಸಂತೈಸುವ ಕೆಲಸ ಮಾಡಿದ್ದಾರೆ. ಅವರು ಹಿಂದೂವಾದಿಯೋ, ಜಾತಿಯವಾದಿಯೋ ಎಂಬುದು ಇದರಲ್ಲೇ ಸಾಬೀತಾಗಿದೆ. ಅವರಿಗಿಂತ ಇನ್ನೋರ್ವ ಜಾತಿವಾದಿಯೇ ಇಲ್ಲ ಎಂದು  ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದುತ್ವದ ಹೋರಾಟ ಕೇವಲ ಹಿಂದುಳಿದ ವರ್ಗ ಅಥವಾ ದಲಿತ ವರ್ಗಕ್ಕತೆ ಮಾತ್ರ ಸೀಮಿತವಾಗಿಲ್ಲ. ಆದರೆ ರಾಜಕಾರಣ ಹಿಂದುಳಿದ ವರ್ಗವನ್ನು ಹಿಂದುತ್ವಕ್ಕಾಗಿ ಬಳಸಿಕೊಂಡಿದೆ. ಅವರಿಗೆ ನ್ಯಾಯ ಒದಗಿಸುವ ಕೆಲಸ ಮಾಡಿಲ್ಲ. ಉಳಿದ ವರ್ಗಗಳು ಸಾಮಾಜಿಕ, ರಾಜಕೀಯ ನ್ಯಾಯ ಪಡೆಯುವಲ್ಲಿ ಸಫಲರಾಗಿದ್ದಾರೆ. ಹಾಗಾಗಿ ಹಿಂದುಳಿದ ವರ್ಗ, ದಲಿತ ವರ್ಗವನ್ನು ತುಳಿಯಲು ಹೊರಟರೆ ಹಿಂದೂ ಸಮಾಜ ಸಾಯಲಿದೆ ಎಂದು ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ಹಾಗೂ ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷ ಪೀತಾಂಬರ ಹೆರಾಜೆ, ಗೆಜ್ಜೆಗಿರಿ ಕ್ಷೇತ್ರದ ವಕ್ತಾರ ರಾಜೇಂದ್ರ ಚಿಲಿಂಬಿ ಉಪಸ್ಥಿತರಿದ್ದರು.

ಜನರಿಂದ ಜನರಿಗಾಗಿರುವ ಸಹಕಾರಿ ಬ್ಯಾಂಕುಗಳು ಸಾರ್ವಜನಿಕರ ಸೇವೆಗೆ ಸದಾ ಸಿದ್ಧ : ಡಾ| ಎಮ್.ಎನ್. ರಾಜೇಂದ್ರ ಕುಮಾರ್

Thumbnail
Posted On: 10 Jul 2022, 12:23 PM

ಪಡುಬಿದ್ರಿ : ಸಹಕಾರಿ ಕ್ಷೇತ್ರದ ಬ್ಯಾಂಕುಗಳು ನಮ್ಮಲ್ಲಿ ಗುಣಮಟ್ಟದ ಸೇವೆಯನ್ನು ನೀಡುತ್ತಾ ಬಂದಿದೆ. ಅದರಲ್ಲಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಕೂಡ ಒಂದಾಗಿದೆ. ನಮ್ಮವರೇ ಇರುವ ಸಹಕಾರಿ ಬ್ಯಾಂಕುಗಳನ್ನು ಬೆಳೆಸಬೇಕಾಗಿದೆ. ಹೊರ ರಾಜ್ಯದವರಿಂದ ಇಂದು ರಾಷ್ಟ್ರೀಕೃತ ಬ್ಯಾಂಕುಗಳು ತುಂಬಿದೆ. ಇಂತಹ ನಿಟ್ಟಿನಲ್ಲಿ ನಮ್ಮ ಯುವಜನಾಂಗ ಬ್ಯಾಂಕಿಂಗ್ ಕ್ಷೇತ್ರದತ್ತ ಗಮನಹರಿಸಬೇಕಾಗಿದೆ ಎಂದು ಶಾಸಕರಾದ ಲಾಲಾಜಿ ಆರ್. ಮೆಂಡನ್ ಹೇಳಿದರು. ಅವರು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ (ನಿ) ಇದರ ನವೀಕೃತ ಹವಾನಿಯಂತ್ರಿತ ಸಿಟಿ ಶಾಖೆಯ ಉದ್ಘಾಟನೆ, ಕೃಷಿ ಸಲಕರಣೆಗಳ ಮಾರಾಟ ವಿಭಾಗದ ಶುಭಾರಂಭ, ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಲೋಕಾರ್ಪಣೆಯ ನಂತರ ಪ್ರಧಾನ ಕಚೇರಿ ಸಹಕಾರ ಸಂಗಮ ಇಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಡಾ| ಎಮ್.ಎನ್. ರಾಜೇಂದ್ರ ಕುಮಾರ್ ಮಾತನಾಡಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯು ಶೇ. 25 ಡಿವಿಡೆಂಟ್ ನೀಡುತ್ತಿರುವುದು ಶ್ಲಾಘನೀಯ. ಇಲ್ಲಿನ ಬೆಳವಣಿಗೆಗೆ ಸಿಬ್ಬಂದಿ ವರ್ಗದ ಸೇವಾಮನೋಭಾವವೇ ಕಾರಣವಾಗಿದೆ. ಜನರಿಂದ ಜನರಿಗಾಗಿ ಇರುವ ಬ್ಯಾಂಕ್ ಸಹಕಾರಿ ಬ್ಯಾಂಕುಗಳು. ಜನಸಾಮಾನ್ಯರ ಆರ್ಥಿಕ ಸದೃಢತೆಗೆ ಸಹಕಾರಿ ಬ್ಯಾಂಕುಗಳು ಸಹಕಾರಿ. ಉಳ್ಳವರಿಗೆ ಮಣೆ ಹಾಕುವ, ನಮ್ಮ ಭಾಷೆ, ಸಂಸ್ಕೃತಿ ತಿಳಿಯದ ರಾಷ್ಟ್ರೀಕೃತ, ವಾಣಿಜ್ಯ ಬ್ಯಾಂಕುಗಳಿಗಿಂತ ಸಹಕಾರಿ ಬ್ಯಾಂಕುಗಳು ಸಾರ್ವಜನಿಕರ ಸೇವೆಗೆ ಸದಾ ಸಿದ್ಧವಾಗಿದೆ. ಈ ಸಂದರ್ಭ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಗೆ 5 ಲಕ್ಷ ನೀಡುವುದಾಗಿ ಹೇಳಿದರು. ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಮಾತನಾಡಿ ಗ್ರಾಹಕರ ಬಗೆಗೆ ಇರುವ ಕಾಳಜಿಯನ್ನು ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯಿಂದ ಇತರ ಬ್ಯಾಂಕುಗಳು ಕಲಿಯಬೇಕಾಗಿದೆ. ರೈತರಿಗೆ ಬೇಕಾದ ಕೃಷಿ ಉಪಕರಣ, ಹಡಿಲು ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಮಾಡಬೇಕಾದ ಅನಿವಾರ್ಯತೆಯಿದೆ. ಇದು ಸಹಕಾರಿ ಬ್ಯಾಂಕುಗಳಿಂದ ಮಾತ್ರ ಸಾಧ್ಯ. ರಾಷ್ಟ್ರೀಕೃತ ಬ್ಯಾಂಕುಗಳ ವಿಲೀನದಿಂದಾಗಿ ಸುಮಾರು 50,000 ಕುಟುಂಬ ವರ್ಗಗಳು, ಜನಸಾಮಾನ್ಯರಿಗೆ ತೊಂದರೆಯಾಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು. ವಿವಿಧ ಸೇವೆಗಳ ಉದ್ಘಾಟನೆ, ಲೋಕಾರ್ಪಣೆ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಡಾ| ಎಮ್.ಎನ್. ರಾಜೇಂದ್ರ ಕುಮಾರ್ ನವೀಕೃತ ಹವಾನಿಯಂತ್ರಿತ ಸಿಟಿ ಶಾಖೆಯನ್ನು, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಕೃಷಿ ಸಾಮಾಗ್ರಿಗಳ ಮಳಿಗೆ, ಉಡುಪಿ ಶಾಸಕರಾದ ರಘುಪತಿ ಭಟ್ ಭತ್ತದ ಕೃಷಿಗೆ ಸಹಾಯಧನ ವಿತರಣೆಯನ್ನು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಬಿ. ಜಯಕರ ಶೆಟ್ಟಿ ಇಂದ್ರಾಳಿ ಚಿನ್ನಾಭರಣ ಶುದ್ಧತೆ ಪರೀಕ್ಷಿಸುವ ಯಂತ್ರ ಉದ್ಘಾಟಿಸಿದರು. ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಲೋಕಾರ್ಪಣೆ ಮಾಡಿದರು. ಸನ್ಮಾನ, ಸಹಾಯ ಧನ ವಿತರಣೆ : ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಡಾ| ಎಮ್.ಎನ್. ರಾಜೇಂದ್ರ ಕುಮಾರ್, ಕಾಪು ತಾಲೂಕು ಪತ್ರಕರ್ತ ಸಂಘದ ಅಧ್ಯಕ್ಷರಾದ ಸುರೇಶ್ ಎರ್ಮಾಳ್, ಸಹಕಾರಿ ರತ್ನ ಪುರಸ್ಕೃತ ಚಿತ್ತರಂಜನ್ ಬೋಳಾರ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ನಿವೃತ್ತ ಉದ್ಯೋಗಿ ರವೀಂದ್ರ ರಾವ್, ಪಲಿಮಾರು ಪಂಚಾಯತ್ ತ್ಯಾಜ್ಯ ವಿಲೇವಾರಿ ವಾಹನ ಚಾಲಕ ಮಹೇಶ್, ಗುತ್ತಿಗೆದಾರರಾದ ಪ್ರಣಾಮ್ ಜಿ. ಶೆಟ್ಟಿ, ಮತ್ತು ಮೊಹಮ್ಮದ್ ಇಮ್ತಿಯಾಜ್, ಚಿನ್ನಾಭರಣ ಶುದ್ಧತೆ ಯಂತ್ರದ ಪ್ರದೀಪ್ ಕುಮಾರ್, ತಂತ್ರಾಂಶ ತಜ್ಞ ವೀರೇಂದ್ರ ರಾವ್ ಅವರನ್ನು ಸನ್ಮಾನಿಸಲಾಯಿತು. ಭತ್ತದ ಕೃಷಿಗೆ ಸಹಾಯಧನ ವಿತರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ನಿರ್ದೇಶಕರಾದ ಡಾ| ದೇವಿಪ್ರಸಾದ್ ಶೆಟ್ಟಿ ಬೆಳಪು, ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷರಾದ ಬಂಟಕಲ್ ರಾಮಕೃಷ್ಣ ಶರ್ಮ, ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಪ್ರಭು, ಎರ್ಮಾಳು ತೆಂಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕಸ್ತೂರಿ ಪ್ರವೀಣ್, ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಪವಿತ್ರ ಗಿರೀಶ್, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ನಿರ್ದೇಶಕರಾದ ವೈ.ಜಿ, ರಸೂಲ್, ಗಿರೀಶ್ ಪಲಿಮಾರು, ಶಿವರಾಮ ಎನ್. ಶೆಟ್ಟಿ ರಾಜಾರಾಮ್ ರಾವ್, ವಾಸುದೇವ ದೇವಾಡಿಗ, ಯಶವಂತ್ ಪಿ.ಬಿ., ಮಾಧವ ಆಚಾರ್ಯ, ಸ್ಟ್ಯಾನಿ ಕ್ವಾಡ್ರಸ್, ಸುಚರಿತ ಎಲ್.ಅಮೀನ್, ಕುಸುಮಾ ಎಂ. ಕರ್ಕೇರ, ಮತ್ತು ಕಾಂಚನಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಿಶ್ಚಿತಾ ಪಿ.ಎಚ್., ಶಾಖಾ ವ್ಯವಸ್ಥಾಪಕಿ ಅನಸೂಯಾ ಶೆಣೈ ಉಪಸ್ಥಿತರಿದ್ದರು. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿ, ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಉಪಾಧ್ಯಕ್ಷರಾದ ಗುರುರಾಜ್ ಪೂಜಾರಿ ವಂದಿಸಿದರು. ಜಯ ಶೆಟ್ಟಿ ಪದ್ರ ಕಾರ್ಯಕ್ರಮ ನಿರ್ವಹಿಸಿದರು.

ಬಕ್ರೀದ್ ಹಬ್ಬ ಶಾಂತಿ ಸೌಹಾರ್ದತೆಯ ಪ್ರತೀಕವಾಗಿದೆ : ಫಾರೂಕ್ ಚಂದ್ರನಗರ

Thumbnail
Posted On: 09 Jul 2022, 05:35 PM

ಕಾಪು : ಬಕ್ರೀದ್ ಹಬ್ಬ ಶಾಂತಿ ಸೌಹಾರ್ದ ತೆಯ ಪ್ರತೀಕವಾಗಿದೆ ಬಡವರು ಕೂಡ ಎಲ್ಲರಂತೆ ಹಬ್ಬ ವನ್ನು ಆಚರಿಸಲು ತ್ಯಾಗ ಬಲಿದಾನವನ್ನು ಇಸ್ಲಾಂನಲ್ಲಿ ಕಡ್ಡಾಯಗೊಳಿಸಲಾಗಿದೆ ಈ ಹಬ್ಬವು ಸಮಾಜದಲ್ಲಿ ಶಾಂತಿ ಭಾವೈಕ್ಯತೆ ಉಂಟಾಗಲು ನಾಂದಿಯಾಗಲಿ ಸರಕಾರದ ನಿಯಮವನ್ನು ಪಾಲಿಸುತ್ತ ನಾವು ಈದ್-ಉಲ್-ಅಲ್ಹಾ ವನ್ನು ಆಚರಿಸೋಣ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ರಾಜ್ಯ ಸಂಯೋಜಕರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ತಿಳಿಸಿದ್ದಾರೆ.

ಬಕ್ರೀದ್ ಹಬ್ಬ ಸೌಹಾರ್ದಯುತವಾಗಿ ಆಚರಿಸಲು ಸೂಕ್ತ ಮುಂಜಾಗರೂಕತೆ ವಹಿಸುವ ಕುರಿತು ಕಾಪು ಪೊಲಿಸ್ ವೃತ್ತ ನಿರೀಕ್ಷಕರಿಗೆ ಮನವಿ

Thumbnail
Posted On: 09 Jul 2022, 01:41 PM

ಕಾಪು : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ವತಿಯಿಂದ ನಾಳೆ ಆಚರಿಸುತ್ತಿರುವ ಈದುಲ್ ಅದ್ಹಾ ಹಬ್ಬದಂದು ಕುರ್ಬಾನಿ ಮಾಡಲು, ಮತ್ತು ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತ ಕ್ರಮ ಕೈಗೊಳ್ಳಲು ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತರ ಘಟಕದ ಅದ್ಯಕ್ಷರಾದ ಶರ್ಫುಧ್ದೀನ್ ಶೇಖ್ ಇವರ ನೇತ್ರತ್ವದಲ್ಲಿ ಕಾಪು ಪೊಲಿಸ್ ವೃತ್ತ ನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತಕರ ಘಟಕದ ಉಪಾದಾಕ್ಷರಾದ ಹಮೀದ್ ಯೂಸುಫ್, ಯೂತ್ ಕಾಂಗ್ರೆಸ್ ಅದ್ಯಕ್ಷರಾದ ರಮೀಜ್ ಹುಸೈನ್, ಜಿಲ್ಲಾ ಕಾಂಗ್ರೆಸ್ ಮೀನುಗಾರರ ವೇದಿಕೆಯ ಅದ್ಯಕ್ಷರಾದ ರಾಜೇಶ್ ಮೆಂಡನ್, ಹಿಂದುಳಿದ ವರ್ಗದ ಅದ್ಯಕ್ಷರಾದ ದೀಪಕ್ ಕುಮಾರ್, ಅಲ್ಪಸಂಖ್ಯಾತರ ಉಪಾದ್ಯಕ್ಷರಾದ ನಸೀರ್ ಕಾಪು, ಮಜೂರು ಗ್ರಾಮೀಣ ಕಾಂಗ್ರೆಸ್ ಅದ್ಯಕ್ಷರಾದ ನಾಗಭೂಷಣ್ ರಾವ್, ಯುವ ಕಾಂಗ್ರೆಸ್ ಉಪಾದ್ಯಕ್ಷರಾದ ಸುಲಕ್ಷನ್ ಪೂಜಾರಿ, ಕಾಂಗ್ರೆಸ್ ಮುಂಖಡರಾದ ಬಾಷು ಸಾಹೇಬ್, ಉಸ್ಮಾನ್ ಮಲ್ಲಾರ್, ಸಿರಾಜುದ್ದೀನ್, ಅಲ್ ರೆಹಾನ್ ಮಲ್ಲಾರ್ ಇನ್ನಿತರರು ಉಪಸ್ಥಿತರಿದ್ದರು.

ಬಿರುವೆರ್ ಕಾಪು ಸೇವಾ ಸಮಿತಿಯಿಂದ ವರ್ಗಾವಣೆಗೊಳ್ಳಲಿರುವ ಕಾಪು ಪೊಲೀಸ್ ವೃತ್ತ ನಿರೀಕ್ಷಕ ಪ್ರಕಾಶ್ ರವರಿಗೆ ಗೌರವ

Thumbnail
Posted On: 08 Jul 2022, 07:47 PM

ಕಾಪು : ಇಲ್ಲಿನ ಪೊಲೀಸ್ ವೃತ್ತ ನಿರೀಕ್ಷಕರಾಗಿ ಉತ್ತಮ ಸೇವೆ ಸಲ್ಲಿಸಿದ್ದ ಪ್ರಕಾಶ್ ಇವರು ಬಜ್ಪೆ ಠಾಣೆಗೆ ವರ್ಗಾವಣೆಗೊಂಡಿರುತ್ತಾರೆ. ಅವರ ಸೇವೆಯನ್ನು ಗಮನಿಸಿ ಸಮಾಜ ಸೇವಾ ಸಂಸ್ಥೆ ಬಿರುವೆರ್ ಕಾಪು ಸೇವಾ ಸಮಿತಿ (ರಿ.)ಯ ವತಿಯಿಂದ ಬೀಳ್ಕೊಡುಗೆಯ ನಿಮಿತ್ತ ಅವರ ವೃತ್ತಿ ಜೀವನಕ್ಕೆ ಶುಭಾಶಯ ಕೋರಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿರುವೆರ್ ಕಾಪು ಸೇವಾ ಸಮಿತಿಯ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯ ವಿಚಾರದಲ್ಲಿ ಸರಕಾರದ ತಾರತಮ್ಯ ನೀತಿ ಹಾಗು ಸಚಿವರುಗಳ ಸುಳ್ಳು ಭರವಸೆಗಳು - ಪ್ರವೀಣ್ ಎಂ ಪೂಜಾರಿ

Thumbnail
Posted On: 08 Jul 2022, 07:34 PM

ಉಡುಪಿ : ಸಾರ್ವಕಾಲಿಕ ಸತ್ಯನಿಷ್ಠವಾದ ಮಾನವೀಯ ಮೌಲ್ಯಗಳನ್ನು ಸಾಕಾರಗೊಳಿಸಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತಂತೆ ಸರ್ಕಾರವು ಪದೇ ಪದೇ ನಕಾರಾತ್ಮಕ ನಿಲುವನ್ನು ಪ್ರಕಟಿಸುತ್ತಿರುವುದು ಸಮಂಜಸವಲ್ಲ. ಗಣರಾಜ್ಯೋತ್ಸವ ಟ್ಯಾಬ್ಲೋ ತಿರಸ್ಕಾರದ ಬಳಿಕ ಹೈಸ್ಕೂಲ್ ಪಠ್ಯಪುಸ್ತಕದಲ್ಲಿ ಗುರುಗಳ ಚಿಂತನೆಯ ಪಾಠವನ್ನು ಕೈಬಿಟ್ಟಿರುವುದರ ಕುರಿತು ಈಗಾಗಲೇ ಸಚಿವರುಗಳಿಗೆ ಮನವಿ ಸಲ್ಲಿಸಿದಾಗ ಯಾವುದೇ ಸಮಸ್ಯೆಯಾಗದಂತೆ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದರು‌. ಆದರೆ ಇದು ಸುಳ್ಳಾಗಿದ್ದು ಗುರುಗಳನ್ನು ಕೇವಲ ಭಾಷಾ ಪಾಠದಲ್ಲಿ ತೋರಿಸಿ ಮೆಲ್ನೋಟಕ್ಕೆ ಎಲ್ಲವೂ ಸರಿಯಾಗಿದೆ ಎಂದು ನಂಬಿಸಿದ್ದಾರೆ. ಗುರುಗಳ ಅನುಯಾಯಿಗಳಾದ ನಮಗೆ ಸರ್ಕಾರದ ನಡೆಯ ಕುರಿತು ತೀವ್ರ ಅಸಮಾಧಾನವಿದ್ದು ಈಗಾಗಲೇ ನೀಡಿರುವ ಮನವಿಯನ್ನು ಕಡೆಗಣಿಸಿದ್ದರ ಕುರಿತಾಗಿ ಸಂಘಟನಾ ಸ್ವರೂಪದ ಹೋರಾಟಕ್ಕೆ ಮುಂದಾಗಿದ್ದೇವೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ (ರಿ.) ಇದರ ಅಧ್ಯಕ್ಷರಾದ ಪ್ರವೀಣ್ ಎಂ ಪೂಜಾರಿ ಆಗ್ರಹಿಸಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವಮಾನವೇ ಸಮಾಜ ಸುಧಾರಣೆಗೆ ಸೀಮಿತವಾಗಿರುವಾಗ ನಾವೂ ಕೂಡ ಪಕ್ಷಾತೀತವಾಗಿ ಸಮಾಜದ ಪರ ಸಮಾನಮನಸ್ಕ ನಿಲುವಿನಲ್ಲಿ ಗುರುಗಳ ಪಠ್ಯಕ್ರಮ ಈ ಹಿಂದಿನಂತೆ ಯಥಾಸ್ಥಿತಿಯಲ್ಲಿರಬೇಕೆಂದು ಬಯಸುತ್ತೇವೆ. ಸಮಾಜದ ಎಲ್ಲಾ ಸಂಘ-ಸಂಸ್ಥೆಗಳು ಪಕ್ಷಾತೀತವಾಗಿ ವಿರೋಧಿಸಬೇಕು, ಕೇವಲ ಅಧಿಕಾರಕ್ಕೋಸ್ಕರ ಗುರುಗಳನ್ನು ಜಪಿಸುವ ಬದಲು ಯಾವ ಪಕ್ಷದ ಯಾವ ಪ್ರತಿನಿಧಿಯೆ ಆಗಲಿ ಸದ್ರಿ ಹಾಗೂ ಮುಂದೆಯೂ ಗುರುಗಳಿಗೆ ಅವಮಾನವಾಗದಂತೆ ನಡೆಯುವುದು ಸಾಮಾಜಿಕ ಸೌಹಾರ್ದ ಸ್ಥಿತಿಗತಿಗೆ ಅತ್ಯಂತ ಅಗತ್ಯ ಎಂದು ತಿಳಿಸಿದ್ದಾರೆ.

ಕಾಪು : ಎಲೆಕ್ಟ್ರಿಕಲ್ ಪೊಲ್‌ಗೆ ಕಾರು ಢಿಕ್ಕಿ, ಪಲ್ಟಿ ; ನವಯುಗ ಕಂಪನಿಗೆ ನಷ್ಟ

Thumbnail
Posted On: 08 Jul 2022, 07:25 PM

ಕಾಪು : ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿಕೊಂಡು ಬಂದು ಎಲೆಕ್ಟ್ರಿಕಲ್ ಪೊಲ್‌ ಗೆ ಢಿಕ್ಕಿ ಹೊಡೆದು, ಪಲ್ಟಿಯಾಗಿ ಎಲೆಕ್ಟ್ರಿಕಲ್ ಪೊಲ್‌ ಜಖಂಗೊಂಡ ಘಟನೆ ಕಾಪುವಿನಲ್ಲಿ ನಡೆದಿದೆ. ಬೆಳಗ್ಗಿನ ಸಮಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಕಾರನ್ನು ಚಲಾಯಿಸಿಕೊಂಡು ಬಂದು ಕಾಪು ವಿದ್ಯಾನಿಕೇತನ ಶಾಲೆಯ ಬಳಿ ಸರ್ವಿಸ್ ರಸ್ತೆಗೆ ನವಯುಗ ಕಂಪನಿಯವರು ಅಳವಡಿಸಿದ ಎಲೆಕ್ಟ್ರಿಕಲ್ ಪೊಲ್‌ ಗೆ ಢಿಕ್ಕಿ ಹೊಡೆದು ಕಾರು ಪಲ್ಟಿಯಾಗಿ ಬಿದ್ದು, ಪರಿಣಾಮ ಎಲೆಕ್ಟ್ರಿಕಲ್ ಪೊಲ್‌ ಜಖಂಗೊಂಡು ಅದರ ಮೇಲಿದ್ದ ಎರಡು ಬಲ್ಬ್‌ಗಳು ಜಖಂ ಗೊಂಡಿದೆ. ಢಿಕ್ಕಿ ಹೊಡೆದ ಕಾರು ಸಂಪೂರ್ಣ ಜಖಂ ಗೊಂಡಿರುತ್ತದೆ. ಕಾರಿನಲ್ಲಿದ್ದ ಅರುಣಕುಮಾರ ರವರಿಗೆ ಬಲಭಾಗದ ಪಕ್ಕೆಲುಬಿಗೆ ಗುದ್ದಿದ ಒಳ ನೋವುಂಟಾಗಿರುತ್ತದೆ. ಈ ಅಪಘಾತದಿಂದ ನವಯುಗ ಕಂಪನಿಗೆ ಸುಮಾರು 2,04,000 ರೂ, ನಷ್ಟ ಉಂಟಾಗಿರುತ್ತದೆ. ಈ ಬಗ್ಗೆ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿನ ಸಮಸ್ಯೆಗಳನ್ನು 10 ದಿನದ ಒಳಗೆ ಸರಿಪಡಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Thumbnail
Posted On: 08 Jul 2022, 06:26 PM

ಉಡುಪಿ : ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169 ಮತ್ತು 169 ಎ ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡಚಣೆಯಾಗಿರುವ ಎಲ್ಲಾ ರಸ್ತೆ ಮೂಲಭೂತ ಸಮಸ್ಯೆಗಳನ್ನು 10 ದಿನಗಳ ಒಳಗೆ ಸಂಪೂರ್ಣವಾಗಿ ಬಗೆಹರಿಸಿ, ಈ ಕುರಿತು ಪೂರ್ಣ ವರದಿಯನ್ನು ನೀಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಜಿಲ್ಲಾಡಳಿತ ಸೂಚಿಸುವ ಸಭೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರ ಸಭೆಗಳಿಗೂ ಸಹ ಗೈರು ಹಾಜರಾಗುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಮತ್ತು ಇತರೆ ಕಾರ್ಯಗಳನ್ನು ಸುಗಮವಾಗಿ ಮಾಡಲು ಜಿಲ್ಲಾಡಳಿತದ ನೆರವು ಬೇಕಿದ್ದಲ್ಲಿ, ಜಿಲ್ಲಾಡಳಿತ ನೀಡುವ ಎಲ್ಲಾ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಮತ್ತು ಪ್ರಸ್ತುತ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಡು ಬರುತ್ತಿರುವ ಸಮಸ್ಯೆಗಳ ಕುರಿತು ನೀಡಿರುವ ಎಲ್ಲಾ ಸಮಸ್ಯೆಗಳನ್ನು 10 ದಿನದ ಒಳಗೆ ಸಂಪೂರ್ಣವಾಗಿ ಬಗೆ ಹರಿಸಿ, ಈ ಸಮಸ್ಯೆಗಳನ್ನು ಸರಿಪಡಿಸಿದ ದಿನಾಂಕ ಮತ್ತು ಸಮಯವನ್ನು ಒಳಗೊಂಡ ಕುರಿತು ಛಾಯಾಚಿತ್ರಗಳು ಹಾಗೂ ವರದಿಯನ್ನು ಸಲ್ಲಿಸಿ, ಮುಂದಿನ ಸಭೆಗೆ ಹಾಗೂ ಜಿಲ್ಲಾಡಳಿತ ಸೂಚಿಸುವ ಎಲ್ಲಾ ಸಭೆಗಳಿಗೆ ಕಡ್ಡಾಯವಾಗಿ ಹಾಜರಿರುವಂತೆ ಎಚ್ಚರಿಕೆ ನೀಡಿದರು. ರಾಷ್ಟ್ರೀಯ ಹೆದ್ದಾರಿ ಪಕ್ಕದ ಚರಂಡಿಗಳಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗಲು ತೊಂದರೆ ಇರುವ ಅಡೆತಡೆಗಳನ್ನು ತಕ್ಷಣವೇ ಸರಿಪಡಿಸಬೇಕು. ತುರ್ತು ಅಗತ್ಯವಿರುವೆಡೆಗಳಲ್ಲಿ ತಕ್ಷಣವೇ ಬೀದಿ ದೀಪಗಳನ್ನು ಅಳವಡಿಸಬೇಕು. ಹೆದ್ದಾರಿ ಪಕ್ಕದಲ್ಲಿ ನೀರು ಹರಿಸಲು ಮತ್ತು ಸಂಚಾರಕ್ಕೆ ತಡೆ ಉಂಟು ಮಾಡುವ ಗಿಡಗಳನ್ನು ಕೂಡಲೇ ತೆರವುಗೊಳಿಸಬೇಕು. ಫ್ಲೈ ಓವರ್ಗಳ ಮೇಲೆ ನೀರು ನಿಲ್ಲದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು. ಹೆದ್ದಾರಿಯಲ್ಲಿ ಅವೈಜ್ಞಾನಿಕ ಕಾಮಗಾರಿಯ ಕಾರಣ ಅಪಘಾತಗಳು ಸಂಭವಿಸಿ, ಸಾವು ಸಂಭವಿಸಿದ್ದಲ್ಲಿ ಸಂಬಂಧಪಟ್ಟ ಹೆದ್ದಾರಿಯ ಅಧಿಕಾರಿಗಳ ಮೇಲೆ ಕೇಸು ದಾಖಲಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು. ಹೆದ್ದಾರಿಯ ಸಮಸ್ಯೆಗಳ ಬಗ್ಗೆ ಜಿಲ್ಲಾಡಳಿತ ಮತ್ತು ಸಾರ್ವಜನಿಕರು ಸಲ್ಲಿಸುವ ದೂರುಗಳನ್ನು ದಾಖಲಿಸಿ ಅವುಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸಬೇಕು. ಇದಕ್ಕಾಗಿ ದೂರು ನಿರ್ವಹಣಾ ವ್ಯವಸ್ಥೆಯನ್ನು ಅಳವಡಿಸಿಕೊಂಡು, ಅದರಲ್ಲಿ ದೂರುಗಳಿಗೆ ಸಂಬಂಧಪಟ್ಟ ಎಲ್ಲಾ ವಿವರಗಳನ್ನು ದಾಖಲಿಸಬೇಕು. ನಿಗಧಿತ ಅವಧಿಯೊಳಗೆ ಸಮಸ್ಯೆಗಳನ್ನು ಬಗೆಹರಿಸದ ಸಿಬ್ಬಂದಿಗಳ ವೇತನ ಮತ್ತು ಭತ್ಯೆಗಳನ್ನು ತಡೆ ಹಿಡಿಯುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು. ಹೆದ್ದಾರಿಯಲ್ಲಿನ ಸಮಸ್ಯೆಗಳ ಪರಿಹಾರಕ್ಕೆ ಹೆಚ್ಚಿನ ಸಿಬ್ಬಂದಿ ಮತ್ತು ಯಂತ್ರೋಪಕರಣಗಳನ್ನು ಅಳವಡಿಸಿಕೊಂಡು ಜಿಲ್ಲಾಡಳಿತ ಸೂಚಿಸುವ ಕಾಲಮಿತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸಬೇಕು. ಕುಂದಾಪುರದ ಸಂಗಂ ಜಂಕ್ಷನ್ನಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಕಲ್ಪಿಸಿ ನೀರು ಹರಿದುಹೋಗಲು ವ್ಯವಸ್ಥೆ ಹಾಗೂ ವಾಹನ ಸಂಚಾರಕ್ಕೆ ಅನುಕೂಲವಾಗುವಂತೆ ಬೀದಿ ದೀಪದ ವ್ಯವಸ್ಥೆ ಮಾಡಬೇಕು. ಸಾಲಿಗ್ರಾಮ ಬಳಿಯ ಸರ್ವಿಸ್ ರಸ್ತೆ ಕಾಮಗಾರಿ ಸೇರಿದಂತೆ ಬಾಕಿ ಇರುವ ಎಲ್ಲಾ ಅಪೂರ್ಣ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಕ್ತಾಯಗೊಳಿಸಬೇಕು. ಮಳೆ ನಿಂತ ಕೂಡಲೇ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯ ಎಲ್ಲಾ ರಸ್ತೆಗಳ ದುರಸ್ಥಿ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿ ಈಗಾಗಲೇ ಕೈಗೊಂಡಿರುವ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿಗಳಿಗೆ ರೈಲ್ವೆ ಮತ್ತು ರಾಷ್ಟ್ರೀಯ ಹೆದ್ದಾರಿ ಇಲಾಖೆಗಳಿಂದ ಅಗತ್ಯ ಸಹಕಾರ ನೀಡುವಂತೆ ಸೂಚನೆ ನೀಡಿದರು. ಸಭೆಯಲ್ಲಿ ಎಎಸ್ಪಿ ಸಿದ್ದಲಿಂಗಪ್ಪ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಲಿಂಗೇಗೌಡ, ನವಯುಗ ಮತ್ತು ಐಆರ್ಬಿಯ ಇಂಜನಿಯರ್ ಗಳು ಹಾಗೂ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮಳೆಯ ರಜೆಯನ್ನು ಸಾರ್ವತ್ರಿಕ ರಜೆಗಳಂದು ಸರಿದೂಗಿಸಿ : ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.

Thumbnail
Posted On: 08 Jul 2022, 05:58 PM

ಮಂಗಳೂರು : ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆ ಹಿನ್ನೆಲೆಯಲ್ಲಿ ಮಂಗಳೂರು ಜಿಲ್ಲಾಧಿಕಾರಿ ರಜೆ ಘೋಷಿಸಿದ್ದರು. ಇದು ಪ್ರಸ್ತುತ ಶೈಕ್ಷಣಿಕ ವರ್ಷದ ಪಠ್ಯಕ್ರಮದ ಮೇಲೆ ಪರಿಣಾಮ ಬೀರುವ ದೃಷ್ಟಿಯಿಂದ ಜಿಲ್ಲಾಧಿಕಾರಿ ಮಹತ್ವದ ಆದೇಶ ಹೊರಡಿಸಿದ್ದಾರೆ. ಇದರಂತೆ ಮಳೆಗಾಗಿ ನೀಡಿದ ರಜೆಯ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರ ಸಾರ್ವತ್ರಿಕ ರಜೆಗಳಂದು ಸರಿದೂಗಿಸಬೇಕು ಎಂದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ.