Updated News From Kaup
ಪಡುಬಿದ್ರಿ : ಬ್ರಹ್ಮಶ್ರೀ ನಾರಾಯಣಗುರು ಗುರುಮೂರ್ತಿ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಭಜನಾ ಕಾರ್ಯಕ್ರಮ ಸಂಪನ್ನ
Posted On: 17-04-2022 01:00PM
ಪಡುಬಿದ್ರಿ : ಇಲ್ಲಿನ ಬಿಲ್ಲವ ಸಮಾಜ ಸೇವಾ ಸಂಘದ ಬ್ರಹ್ಮಶ್ರೀ ನಾರಾಯಣಗುರು ಸ್ವಾಮೀಜಿಯವರ ಗುರುಮೂರ್ತಿ ಪ್ರತಿಷ್ಠಾ ವರ್ಧಂತಿಯ ಪ್ರಯುಕ್ತ ಶನಿವಾರ ನಾರಾಯಣಗುರು ಮಂದಿರದಲ್ಲಿ ಧಾರ್ಮಿಕ ಕಾರ್ಯ, ಭಜನಾ ಕಾರ್ಯಕ್ರಮ ಜರಗಿತು.
ಉಂಡಾರು ದೇವಳಕ್ಕೆ ಇಂಟರ್ಲಾಕ್ ಸೌಲಭ್ಯ ಒದಗಿಸಿದ ಮಟ್ಟಾರು ರತ್ನಾಕರ ಹೆಗ್ಡೆಯವರಿಗೆ ಸೋದೆ ಶ್ರೀಗಳಿಂದ ಸನ್ಮಾನ
Posted On: 17-04-2022 12:11PM
ಕಾಪು : ಉಂಡಾರು ಶ್ರೀ ವಿಷ್ಣುಮೂರ್ತಿ ದೇವಳದ ವಾರ್ಷಿಕ ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಸಂದರ್ಭ ದೇವಳದ ಮುಂಭಾಗ ಇಂಟರ್ಲಾಕ್ ಸೌಲಭ್ಯ ಮಂಜೂರು ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆಯವರನ್ನು ಸೋದೆ ಮಠದ ಶ್ರೀಗಳಾದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಸನ್ಮಾನಿಸಿದರು.
ಹಿಂದು ಜಾಗರಣ ವೇದಿಕೆ ಬೆಳಪು -ಪೈಯಾರು ಘಟಕದ ವತಿಯಿಂದ ಹನುಮ ಜಯಂತಿ ಆಚರಣೆ
Posted On: 16-04-2022 10:16PM
ಕಾಪು : ತಾಲೂಕಿನ ಬೆಳಪು ಪಣಿಯೂರಿನ ಕಾನ ದೇವಸ್ಥಾನದಲ್ಲಿ ಹಿಂದು ಜಾಗರಣ ವೇದಿಕೆ ಬೆಳಪು -ಪೈಯಾರು ಘಟಕದ ವತಿಯಿಂದ ಹನುಮ ಜಯಂತಿ ಆಚರಿಸಲಾಯಿತು.
ಜನರ ಮನೆ ಬಾಗಿಲಿಗೆ ತೆರಳಿ ಸಮಸ್ಯೆಗಳ ಇತ್ಯರ್ಥ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 16-04-2022 07:02PM
ಉಡುಪಿ : ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಮೂಲಕ ಜಿಲ್ಲೆಯ ಗ್ರಾಮೀಣ ಭಾಗದ ಜನರ ಮನೆ ಬಾಗಿಲಿಗೆ ತೆರಳಿ, ಅವರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ತಕ್ಷಣದಲ್ಲಿ ಸ್ಪಂದಿಸಿ, ಪರಿಹಾರ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇನ್ನಂಜೆ ದಾಸ ಭವನದಲ್ಲಿ ಏಪ್ರಿಲ್ 18ರಂದು ಉಚಿತ ದಂತ ಚಿಕಿತ್ಸಾ ಶಿಬಿರ
Posted On: 16-04-2022 11:58AM
ಕಾಪು : ಯುವತಿ ಮಂಡಲ (ರಿ.) ಇನ್ನಂಜೆ ಇದರ ಆಶ್ರಯದಲ್ಲಿ ಸಮುದಾಯ ದಂತ ಚಿಕಿತ್ಸಾ ವಿಭಾಗ ಮಣಿಪಾಲ ಮತ್ತು ರಾಜರಾಜೇಶ್ವರಿ ಸಂಜೀವಿನಿ ಗ್ರಾಮ ಮಟ್ಟದ ಒಕ್ಕೂಟ ಇನ್ನಂಜೆ ಇದರ ಸಹಯೋಗದೊಂದಿಗೆ ಉಚಿತ ದಂತ ಚಿಕಿತ್ಸಾ ಶಿಬಿರ ಏಪ್ರಿಲ್ 18, ಸೋಮವಾರ ಇನ್ನಂಜೆ ದಾಸಭವನದಲ್ಲಿ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1ಗಂಟೆವರೆಗೆ ಜರಗಲಿದೆ.
ಶ್ರೀ ದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು : 23ನೇ ವಾರ್ಷಿಕೋತ್ಸವ, ಯುಗಾದಿ ಸಂಭ್ರಮ 2022, ಸಮ್ಮಾನ
Posted On: 15-04-2022 07:27PM
ಪಲಿಮಾರು : ಶ್ರೀ ದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು ಇದರ 23ನೇ ವಾರ್ಷಿಕೋತ್ಸವ ಹಾಗೂ ಯುಗಾದಿ ಸಂಭ್ರಮ 2022 ಏಪ್ರಿಲ್ 13ರಂದು ಅವರಾಲು ಶ್ರೀ ಮೂಕಾಂಬಿಕ ದೇವಸ್ಥಾನದ ಬಳಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಗುತ್ತಿನಾರ್ ಕೃಷ್ಣ ಶೆಟ್ಟಿ ಕಂಕಣಗುತ್ತು ಮಾತನಾಡಿ ಶ್ರೀ ದೇವಿ ಫ್ರೆಂಡ್ಸ್ ಕ್ಲಬ್ ನ ಚಟುವಟಿಕೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಕಾಪು ಬಿಜೆಪಿ ಕಚೇರಿಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜನ್ಮದಿನಾಚರಣೆ
Posted On: 14-04-2022 10:07PM
ಕಾಪು : ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಜನ್ಮದಿನ ಆಚರಿಸಲಾಯಿತು.
ಸೌರಯುಗಾದಿ : ಬಿಸು - ವಿಷು ; ಕೃಷಿಗೆ ತೊಡಗುವ ಉತ್ಸಾಹ
Posted On: 14-04-2022 09:53PM
ಅದೋ ನೋಡಿ... ಅನ್ನದಾತ 'ಪುಂಡಿಬಿತ್ತ್ ಪಾಡ್ಗ, ನಾಲೆರು ಮಾದಾಗ’ ಅಂದರೆ 'ಹಿಡಿ ಬೀಜ ಬಿತ್ತೋಣ, ನೇಗಿಲುಕಟ್ಟಿ ಒಂದು ಸುತ್ತು ಉಳುಮೆ ಮಾಡೋಣ'ಎನ್ನುತ್ತಾ ನೇಗಿಲನ್ನು ಹೆಗಲೇರಿಸಿ ಕೋಣ ಅಥವಾ ಎತ್ತುಗಳನ್ನು ಅಟ್ಟುತ್ತಾ ಕೃಷಿ ಕಾಯಕಕ್ಕೆ ತೊಡಗಲು ಗದ್ದೆಗೆ ಹೊರಟಿದ್ದಾನೆ. ಹೌದು... ಇದು ಸೌರ ಯುಗಾದಿಯ ದಿನದ ರೈತನ ಆದ್ಯತೆಯ ಕಾಯಕ. ಸೌರ ಪದ್ಧತಿಯನ್ನು ಅಂಗೀಕರಿಸಿದವರಿಗೆಲ್ಲ ಹೊಸ ವರ್ಷ ಆರಂಭವಾಗುವುದು ಯುಗಾದಿಯಿಂದ . ಇಗಾದಿ, ಬಿಸು,ವಿಷು ಎಂಬಿತ್ಯಾದಿ ಹೆಸರಿನಿಂದ ಆಚರಿಸುವ ಪರ್ವದಿನ ಸನ್ನಿಹಿತವಾಗುವುದು ಮೇಷ ಸಂಕ್ರಮಣದ ಮರುದಿನದಿಂದ. ತುಳುವರ ಪಗ್ಗು ತಿಂಗಳ ಮೊದಲ ದಿನ 'ಇಗಾದಿ'. ನಿಸರ್ಗದಲ್ಲಿ ನಳನಳಿಸುವ ನಾವೀನ್ಯವನ್ನು ಕಾಣುತ್ತಾ ನಲವೇರಿ ನರ್ತಿಸುತ್ತಾ ಕೃಷಿಗೆ ಗಮನ ಹರಿಸಲು ಇದೇ ಸುಮುಹೂರ್ತವೆಂದು ಕೃಷಿಕ ಪರಿವರ್ತಿತ ಪ್ರಕೃತಿಯಿಂದ ಹೊಸ ಸಂದೇಶವನ್ನು ಸ್ವೀಕರಿಸಿ ಸೌರ ಯುಗಾದಿಯಂದು ಎಚ್ಚೆತ್ತು ಕೊಂಡಂತಿದೆ. ಪರಿಸರ ಪಲ್ಲವಿಸಿದೆ. ಚೈತ್ರಮಾಸ-ವಸಂತ ಋತು, ಸೌರಮೇಷ ತಿಂಗಳು ಸನ್ನಿಹಿತವಾಗಿದೆ. ಸೂರ್ಯನಿರಲಿ, ಚಂದ್ರನಾಗಲಿ ಪ್ರಾಕೃತಿಕ ಪರಿವರ್ತನೆಗೆ ನಿಯಾಮಕರು ತಾನೆ? ಈ ಬದಲಾವಣೆಯನ್ನು ಗಮನಿಸುತ್ತಾ ಮಾನವ ಕಾಲ ನಿರ್ಣಯಿಸಿದ, ಕೃಷಿ ಸಂಸ್ಕೃತಿ ಬೆಳೆಸಿದ, ಬದುಕು ಕಟ್ಟಿದ. ಆದುದರಿಂದಲೇ ಪ್ರಾಚೀನವೆಂದು ಸ್ವೀಕರಿಸಲ್ಪಟ್ಟ ಸೌರ ಪದ್ಧತಿ ಮಾನವ ಜೀವನಕ್ಕೆ ಸಮೀಪವೆಂದು ಸ್ವೀಕಾರ. ಆದರೆ ಚಂದ್ರನನ್ನು ಬಿಟ್ಟಿಲ್ಲ, ಸೂರ್ಯನ ಚಲನೆಯನ್ನು ಅನುಸರಿಸುವಮ ಸೌರಮಾನಿಗಳಿಗೆ ಎರಡೂ ವಿಧಾನವೂ ಮಾನ್ಯವೆ. ಆಚರಣೆಗೆ ಮಾತ್ರ ಸೂರ್ಯ ಪ್ರಧಾನವಾದ ಸೌರಮಾನ ವಿಧಾನ.
ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಿ.ಎಂ ಮಾರ್ಗದರ್ಶಿ ಕಾರ್ಯಕ್ರಮ : ಮುಖ್ಯಮಂತ್ರಿ ಬೊಮ್ಮಾಯಿ
Posted On: 12-04-2022 06:14PM
ಉಡುಪಿ : ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದ ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಈ ಬಾರಿಯ ಬಜೆಟ್ನಲ್ಲಿ ಸಿಎಂ ಮಾರ್ಗದರ್ಶಿ ಎಂಬ ಯೋಜನೆ ರೂಪಿಸಿದ್ದು, ಯುವಜನತೆ ಇದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಪುರಭವನದ ಬಳಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿದ್ಯಾ ವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಜಿಲ್ಲಾ ಕೇಂದ್ರ ಗ್ರಂಥಾಲಯ ಮತ್ತು ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯ ಕಟ್ಟಡ ಡಿಜಿಟಲ್ ಗ್ರಂಥಾಲಯ ಹಾಗೂ ಡಾ.ಬನ್ನಂಜೆ ಗೋವಿಂದಾಚಾರ್ಯರವರ ಪುತ್ಥಳಿ ಅನಾವರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಸಿ.ಎಂ ಮಾರ್ಗದರ್ಶಿ ಕಾರ್ಯಕ್ರಮ : ಮುಖ್ಯಮಂತ್ರಿ ಬೊಮ್ಮಾಯಿ
Posted On: 12-04-2022 06:13PM
ಉಡುಪಿ : ರಾಜ್ಯದ ಗ್ರಾಮೀಣ ಮತ್ತು ನಗರ ಪ್ರದೇಶದ ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅನುಕೂಲವಾಗುವಂತೆ ಈ ಬಾರಿಯ ಬಜೆಟ್ನಲ್ಲಿ ಸಿಎಂ ಮಾರ್ಗದರ್ಶಿ ಎಂಬ ಯೋಜನೆ ರೂಪಿಸಿದ್ದು, ಯುವಜನತೆ ಇದರ ಸಂಪೂರ್ಣ ಪ್ರಯೋಜನ ಪಡೆಯುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಪುರಭವನದ ಬಳಿ, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಮತ್ತು ನಗರ ಕೇಂದ್ರ ಗ್ರಂಥಾಲಯ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿದ್ಯಾ ವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಜಿಲ್ಲಾ ಕೇಂದ್ರ ಗ್ರಂಥಾಲಯ ಮತ್ತು ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯ ಕಟ್ಟಡ ಡಿಜಿಟಲ್ ಗ್ರಂಥಾಲಯ ಹಾಗೂ ಡಾ.ಬನ್ನಂಜೆ ಗೋವಿಂದಾಚಾರ್ಯರವರ ಪುತ್ಥಳಿ ಅನಾವರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
