Updated News From Kaup
ಉಡುಪಿ : ಉಚಿತ ದಂತ ಪಂಕ್ತಿ ಜೋಡಣಾ ಶಿಬಿರ
Posted On: 11-04-2022 10:55PM
ಉಡುಪಿ : ರೋಟರಿ ಕ್ಲಬ್ ಕಲ್ಯಾಣಪುರ, ಜಿಲ್ಲಾ ಆಸ್ಪತ್ರೆ ಉಡುಪಿ, ಭಾರತೀಯ ದಂತ ವೈದ್ಯಕೀಯ ಸಂಘ ಉಡುಪಿ ಇದರ ಜಂಟಿ ಆಶ್ರಯದಲ್ಲಿ ಎ.ಬಿ. ಶೆಟ್ಟಿ ದಂತ ಮಹಾವಿದ್ಯಾಲಯ ಮಂಗಳೂರು ತಜ್ಙ ದಂತ ವೈದ್ಯರಿಂದ ಉಚಿತ ದಂತ ಪಂಕ್ತಿ ಜೋಡಣಾ ಶಿಬಿರವನ್ನು ಉಡುಪಿಯ ಸರ್ಕಾರಿ ದಂತ ಚಿಕಿತ್ಸಾ ಆಸ್ಪತ್ರೆ ವಠಾರದಲ್ಲಿ ಅತ್ಯಂತ ಯಶಸ್ವಿಯಾಗಿ ನಿರ್ವಹಿಸಲಾಯಿತು.
ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಜನಸೇವಾ ಸದ್ಭಾವನ ಪುರಸ್ಕಾರ್ ರಾಷ್ಟ್ರಿಯ ಪ್ರಶಸ್ತಿಗೆ ಮೊಹಮ್ಮದ್ ಫಾರೂಕ್ ಚಂದ್ರನಗರ, ದಿವಾಕರ ಬಿ ಶೆಟ್ಟಿ ಕಳತ್ತೂರು ಆಯ್ಕೆ
Posted On: 11-04-2022 10:36PM
ಕಾಪು : ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ದೆಹಲಿ ವತಿಯಿಂದ ಏಪ್ರಿಲ್ 20 ರಂದು ಗೋವಾದ ಪಂಚಾತಾರ ಹೋಟೆಲ್ ವಿವಿಟಾ ತಾಜ್ ಸಭಾಂಗಣದಲ್ಲಿ ನಡೆಯುವ ಐ.ಜೆ.ಸಿ ಹಾಗೂ ಇ.ಜೆ.ಎಸ್.ಐ ರಾಷ್ಟ್ರೀಯ ಸಮ್ಮೇಳನದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಮಾಜ ಸೇವಕರಿಗೆ ಕೊಡಮಾಡುವ ಜನಸೇವಾ ಸದ್ಭಾವನ ಪುರಸ್ಕಾರ್ ರಾಷ್ಟ್ರೀಯ ಪ್ರಶಸ್ತಿಗೆ ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಮತ್ತು ದಿವಾಕರ ಬಿ ಶೆಟ್ಟಿ ಕಳತ್ತೂರು ಆಯ್ಕೆಯಾಗಿದ್ದಾರೆ ಎಂದು ಇಂಡಿಯನ್ ಜರ್ನಲಿಸ್ಟ್ ಕಾಂಪೆಡಿಯಂ ಸಂಸ್ಥೆ ಇದರ ಅಧ್ಯಕ್ಷರಾದ ಗ್ಯಾನ್ ಪ್ರಕಾಶ್ ದೆಹಲಿ ಇವರು ಪತ್ರಿಕಾ ಪ್ರಕಟನೆ ಮೂಲಕ ತಿಳಿಸಿದ್ದಾರೆ.
ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು : ದಶಮಾನೋತ್ಸವದ ಪ್ರಯುಕ್ತ ಶ್ರೀರಾಮ ನವಮಿ ಉತ್ಸವ ; ಸಾಮೂಹಿಕ ದೀಪ ಪ್ರಜ್ವಲನೆ ; ಮಂತ್ರ ಪಠಣ
Posted On: 11-04-2022 10:14PM
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ವತಿಯಿಂದ ದಶಮಾನೋತ್ಸವದ ಪ್ರಯುಕ್ತ ಶ್ರೀರಾಮ ನವಮಿ ಉತ್ಸವ ಕಾರ್ಯಕ್ರಮ ಜರಗಿತು. ವಿಶ್ವ ಹಿಂದೂ ಪರಿಷದ್ ಮಟ್ಟಾರು ಉಪಾಧ್ಯಕ್ಷ ಜಗದೀಶ ಆಚಾರ್ಯ ಸಭಾಧ್ಯಕ್ಷತೆ ವಹಿಸಿದ್ದರು.
ಕಾಪು ವಿಧಾನಸಭಾ ಕ್ಷೇತ್ರದ ದಕ್ಷಿಣ ವಿಭಾಗದ ಜನತಾದಳ ಪಕ್ಷದ ಅಧ್ಯಕ್ಷರಾಗಿ ಭರತ್ ಕುಮಾರ್ ಶೆಟ್ಟಿ ಆಯ್ಕೆ
Posted On: 11-04-2022 10:00PM
ಕಾಪು : ಜನತಾದಳ( ಜಾತ್ಯತೀತ) ಕಾಪು ವಿಧಾನಸಭಾ ಕ್ಷೇತ್ರದ ದಕ್ಷಿಣ ವಿಭಾಗದ ಅಧ್ಯಕ್ಷರನ್ನಾಗಿ ಭರತ್ ಕುಮಾರ್ ಶೆಟ್ಟಿ ಕಾಪುರವರನ್ನು ಜಿಲ್ಲಾಧ್ಯಕ್ಷರಾದ ಯೋಗಿಶ್ ವಿ ಶೆಟ್ಟಿಯವರು ನೇಮಕಾತಿ ಮಾಡಿರುತ್ತಾರೆ.
ಮಂಗಳೂರು : ಯುವತಿಯರಿಬ್ಬರು ಸಮುದ್ರ ಪಾಲು
Posted On: 10-04-2022 04:56PM
ಸುರತ್ಕಲ್ : ಇಲ್ಲಿಗೆ ಸಮೀಪದ ಎನ್ಐಟಿಕೆ ಬೀಚ್ ನಲ್ಲಿ ಬೆಂಗಳೂರು ಮೂಲದ ಯುವತಿಯರಿಬ್ಬರು ಸಮುದ್ರ ಪಾಲಾದ ಘಟನೆ ಏಪ್ರಿಲ್ 10ರಂದು ನಡೆದಿದೆ.
ಪಂಚಲಿಂಗೇಶ್ವರ ರಥೋತ್ಸವದಂದು ಸಾರ್ವಜನಿಕರ ಮನಸೂರೆಗೊಂಡ ಜಾನಪದ ವೈಭವ
Posted On: 09-04-2022 10:35PM
ಬಾರ್ಕೂರು : ಇಲ್ಲಿನ ಶ್ರೀ ಪಂಚಲಿಂಗೇಶ್ವರ ದೇವಾಲಯದ ರಥೋತ್ಸವದ ಪ್ರಯುಕ್ತ ಏಪ್ರಿಲ್ 8ರಂದು ಜಾನಪದ ವೈಭವ ಜರಗಿತು.
ಉಚ್ಚಿಲ : ಮುಖ್ಯಮಂತ್ರಿ ಆಗಮನ - ಏಪ್ರಿಲ್ 11ಕ್ಕೆ ಮುಂದೂಡಿಕೆ
Posted On: 08-04-2022 03:41PM
ಉಚ್ಚಿಲ : ಇಲ್ಲಿನ ಮಹಾಲಕ್ಷ್ಮೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಏಪ್ರಿಲ್ 9 ರಂದು 11 ಗಂಟೆಗೆ ನಡೆಯಬೇಕಿರುವ ಮುಖ್ಯಮಂತ್ರಿಗಳು ಪಾಲ್ಗೊಳ್ಳಬೇಕಿರುವ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಏಪ್ರಿಲ್ 11 ರಂದು ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ.
ರಸ್ತೆಗಳ ಬ್ಲಾಕ್ಸ್ಪಾಟ್ನಲ್ಲಿ ಅಪಘಾತವಾಗಿ ಜೀವಹಾನಿಯಾದಲ್ಲಿ ಅಧಿಕಾರಿಗಳ ವಿರುದ್ಧ ಪ್ರಕರಣ : ಜಿಲ್ಲಾಧಿಕಾರಿ ಎಚ್ಚರಿಕೆ
Posted On: 07-04-2022 09:26PM
ಉಡುಪಿ : ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲಾಗಿರುವ ರಸ್ತೆ ಬ್ಲಾಕ್ಸ್ಪಾಟ್ಗಳನ್ನು ಸಂಬಂಧಪಟ್ಟ ಹೆದ್ದಾರಿ ಇಲಾಖೆಗಳ ಅಧಿಕಾರಿಗಳು 15 ದಿನಗಳಲ್ಲಿ ತೆರವುಗೊಳಿಸಬೇಕು. 15 ದಿನದ ನಂತರ ಆ ಪ್ರದೇಶದಲ್ಲಿ ಅಪಘಾತ ಸಂಭವಿಸಿ ಜೀವಹಾನಿಯಾದಲ್ಲಿ ರಸ್ತೆಯನ್ನು ನಿರ್ಮಿಸಿ, ನಿರ್ವಹಿಸುತ್ತಿರುವ ಇಲಾಖೆಯ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಎಚ್ಚರಿಕೆ ನೀಡಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ ಜಿಲ್ಲೆಗೆ ಮುಖ್ಯಮಂತ್ರಿಗಳ ಭೇಟಿ - ಪೂರ್ವಭಾವಿ ಸಭೆ
Posted On: 07-04-2022 09:20PM
ಉಡುಪಿ : ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಏಪ್ರಿಲ್ 11 ರಂದು ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಈ ಕುರಿತು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧ್ಯಕ್ಷತೆಯಲ್ಲಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ಪೂರ್ವಭಾವಿ ಸಭೆ ಇಂದು ನಡೆಯಿತು.
ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುಂಜಾಗ್ರತೆ ವಹಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 07-04-2022 09:15PM
ಉಡುಪಿ : ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲಾ ತಹಶೀಲ್ದಾರ್ಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಸೂಚನೆ ನೀಡಿದರು. ಅವರು ಬುಧವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಆಧ್ಯಕ್ಷತೆ ವಹಿಸಿ ಮಾತನಾಡಿದರು.
