Updated News From Kaup

ರೋಟರಿ ಸಮುದಾಯ ದಳ ಇನ್ನಂಜೆಯಿಂದ ಇನ್ನಂಜೆ ಪ್ರಾಥಮಿಕ ಆರೋಗ್ಯ ಉಪಕೇಂದ್ರಕ್ಕೆ ಬಿ. ಪಿ. ಆಪರೇಟರ್ ಕೊಡುಗೆ

Posted On: 21-03-2022 01:26PM

ಕಾಪು : ರೋಟರಿ ಸಮುದಾಯ ದಳ ಇನ್ನಂಜೆ ಇವರ ವತಿಯಿಂದ ಮಾಲಿನಿ ಶೆಟ್ಟಿ ಇನ್ನಂಜೆ ಇವರ ಪ್ರಾಯೋಜಕತ್ವದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಉಪ ಕೇಂದ್ರವಾದ ಇನ್ನಂಜೆಗೆ ಬಿ. ಪಿ. ಆಪರೇಟರನ್ನು ಪ್ರೈಮರಿ ಹೆಲ್ತ್ ಆಫೀಸರ್ ಶಕುಂತಲಾ ಇವರಿಗೆ ಹಸ್ತಾಂತರಿಸಲಾಯಿತು.

ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ - ಇಬ್ಬರ ಮೃತ್ಯು, ಮೂವರು ಗಂಭೀರ

Posted On: 21-03-2022 01:01PM

ಕಾಪು : ಇಲ್ಲಿನ ಮಲ್ಲಾರು ಸಲಫಿ ಮಸೀದಿ ಸಮೀಪಗುಜರಿ ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನಪ್ಪಿ ಮೂವರು ಗಂಭೀರ ಗಾಯಗೊಂಡ ಘಟನೆ ಮಾಚ್೯ 21ರಂದು ನಡೆದಿದೆ. ಮೃತರನ್ನು ರಜಾಕ್ ಮಲ್ಲಾರ್ ಮತ್ತು ರಜಬ್ ಚಂದ್ರನಗರ ಎಂದು ಗುರುತಿಸಲಾಗಿದೆ.

ಮಟ್ಟಾರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ - ದಶಮಾನೋತ್ಸವದ ಪ್ರಯುಕ್ತ ಬೃಹತ್ ಸ್ವಚ್ಛತಾ ಜನಜಾಗೃತಿ ಅಭಿಯಾನ

Posted On: 20-03-2022 10:29PM

ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ದಶಮಾನೋತ್ಸವದ ಪ್ರಯುಕ್ತ ಬೃಹತ್ ಸ್ವಚ್ಛತಾ ಜನಜಾಗೃತಿ ಅಭಿಯಾನ ಕಾರ್ಯಕ್ರಮ ಜರಗಿತು.

ಶ್ರೀ ದೇವಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಕಾಪು -ಪಡು ವತಿಯಿಂದ ಜರಗಲಿರುವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Posted On: 20-03-2022 11:53AM

ಕಾಪು : ಕಾಪು -ಪಡು ಇಲ್ಲಿನ ಶ್ರೀ ದೇವಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಇದರ ಆಶ್ರಯದಲ್ಲಿ ಏಪ್ರಿಲ್ 16, ಶನಿವಾರ ಮಧ್ಯಾಹ್ನ 12: 30ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 8 ಗಂಟೆಗೆ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ಸಭಾ ಕಾರ್ಯಕ್ರಮ ಮತ್ತು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮಂಡಳಿ ಇವರಿಂದ ಸಾರ್ವಜನಿಕ ಹರಕೆಯ ಯಕ್ಷಗಾನ ಬಯಲಾಟ ಶ್ರೀ ಶನೀಶ್ವರ ಮಹಾತ್ಮೆ ಜರಗಲಿದೆ. ಈ ಪ್ರಯುಕ್ತ ಮಾಚ್೯ 20 ರಂದು ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು.

ರೋಟರಿ ಕಲ್ಯಾಣಪುರ : ಕರಾವಳಿಯಿಂದ ಕಾಶ್ಮೀರಕ್ಕೆ ಕಾಲ್ನಡಿಗೆಯಲ್ಲಿ ಕ್ರಮಿಸಿ ಹುಲಿವೇಷದ ಸಾಂಸ್ಕೃತಿಕ ಸೊಗಡನ್ನು ಪ್ರದರ್ಶಿಸಿದ ಹರ್ಷೆಂದ್ರ ಆಚಾರ್ಯಗೆ ಸನ್ಮಾನ

Posted On: 20-03-2022 09:23AM

ಉಡುಪಿ : ಉಡುಪಿ ಕರಾವಳಿಯಿಂದ ಭಾರತದ ತುತ್ತ ತುದಿಯ ಕಾಶ್ಮೀರದವರೆಗೆ ಒಂಟಿಯಾಗಿ ಕಾಲ್ನಡಿಗೆಯಲ್ಲಿ ಪ್ರಯಾಣಿಸಿ, ಅಲ್ಲಿ ಹುಲಿವೇಷದ ಸಾಂಸ್ಕೃತಿಕ ಸೊಗಡನ್ನು ಪ್ರದರ್ಶನಗೈದು ಮೆಚ್ಚುಗೆ ಗಳಿಸಿದ ವಿಶೇಷ ವ್ಯಕ್ತಿತ್ವದ ಹರ್ಷೆಂದ್ರ ಆಚಾರ್ಯ ಎಮ್ ಜಡ್ಡು ಬ್ರಹ್ಮಾವರ ಇವರನ್ನು ರೋಟರಿ ಕ್ಲಬ್ ಕಲ್ಯಾಣಪುರದ ವತಿಯಿಂದ ಇತ್ತೀಚೆಗೆ ಗುರುತಿಸಿ ಅಭಿನಂದಿಸಲಾಯಿತು.

ಪ್ರೊಫೆಸರ್ ಮೇಟಿ ಮುದಿಯಪ್ಪ ವಿಧಿವಶ

Posted On: 18-03-2022 05:23PM

ಉಡುಪಿ : ಉತ್ತಮ ಸಾಹಿತಿ , ರಂಗನಟ, ಶಿಕ್ಷಕ , ಭಾಷಣಕಾರ, ಪರಿಸರ ಪ್ರೇಮಿ, ಸಂಘಟಕ ,ಚಲನ ಚಿತ್ರ ನಟ ಪೊ. ಮೇಟಿ ಮುದಿಯಪ್ಪ ಅಲ್ಪ ಕಾಲದ ಅಸೌಖ್ಯದಿಂದ ವಿಧಿವಶರಾಗಿದ್ದಾರೆ. ವೃತ್ತಿಯಲ್ಲಿ ಶಿಕ್ಷಕ ಕಳೆದ ೩೫ ವರುಷಗಳಿಂದ ಶಿಷ್ಯರ ಮೆಚ್ಚಿನ ಗುರುಗಳಾಗಿ ಸೇವೆ ಸಲ್ಲಿಸಿದ್ದು ಈಗಲೂ ಹೋದಕಡೆಗಳೆಲ್ಲ ಶಿಷ್ಯವೃಂದ ಇವರನ್ನು ಗೌರವಿಸುವುದು ಇವರ ಜನಪ್ರಿಯತೆಗೆ ಸಾಕ್ಷಿ.

ಲಸಿಕೆ ನೀಡುವುದರಿಂದ ಮಕ್ಕಳಿಗೆ ಕೋವಿಡ್ನಿಂದ ಸಂಪೂರ್ಣ ಸುರಕ್ಷೆ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

Posted On: 17-03-2022 03:15PM

ಉಡುಪಿ : ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದ್ದು, ಇಂದಿನಿಂದ 12 ರಿಂದ 14 ವರ್ಷದವರೆಗಿನ ಮಕ್ಕಳಿಗೆ ಉಚಿತವಾಗಿ ಕೋರ್ಬೆವ್ಯಾಕ್ಸ್ ಲಸಿಕೆ ನೀಡಲಾಗುತಿದ್ದು, ಈ ಲಸಿಕೆಯು ಅತ್ಯಂತ ಸುರಕ್ಷಿತವಾಗಿದ್ದು, ಇದನ್ನು ಮುಂಜಾಗ್ರತೆಯಾಗಿ ಎಲ್ಲಾ ರೀತಿಯಲ್ಲಿ ಪರೀಕ್ಷೆಗಳಿಗೆ ಒಳಪಡಿಸಿದ್ದು, ಯಾವುದೇ ಅಡ್ಡ ಪರಿಣಾಮಗಳಿಲ್ಲ ಎಂದು ಖಾತ್ರಿಯಾಗಿರುವುದರಿಂದ, ಜಿಲ್ಲೆಯ ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ಈ ಲಸಿಕೆ ಕೊಡಿಸುವ ಮೂಲಕ ಮಕ್ಕಳನ್ನು ಕೋವಿಡ್ನಿಂದ ಸಂಪೂರ್ಣ ಸುರಕ್ಷೆ ಒದಗಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಅಜ್ಜರಕಾಡುವಿನ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ, ಜಿಲ್ಲಾ ಪಂಚಾಯತ್ ಉಡುಪಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ, 12 ರಿಂದ 14 ವರ್ಷದವರೆಗಿನ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿ ಆತ್ಮಹತ್ಯೆ : ಡೊನೇಷನ್ ಪಡೆದು ಉತ್ತಮ ಶಿಕ್ಷಣ ನೀಡದ ಕಾಲೇಜು ಮುಖ್ಯಸ್ಥ ಮತ್ತು ಪರೀಕ್ಷೆಗೆ ಕುಳಿತುಕೊಳ್ಳಲು ಬಿಡದ ಪ್ರಾಧ್ಯಾಪಕನ ವಿರುದ್ಧ ದೂರು ದಾಖಲು

Posted On: 16-03-2022 11:04PM

ಮಂಗಳೂರು : ಮಂಗಳೂರಿನ ಪ್ರತಿಷ್ಠಿತ ಹೊಟೆಲ್ ಮ್ಯಾನೇಜ್ಮೆಂಟ್ ಕಾಲೇಜು ಡೊನೇಷನ್ ಪಡೆದು ಉತ್ತಮ ಶಿಕ್ಷಣ ನೀಡದಿರುವ ಮತ್ತು ಅಲ್ಲಿನ ಪ್ರಾಧ್ಯಾಪಕರೋರ್ವರ ಕಿರುಕುಳದಿಂದ ಬೇಸತ್ತು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೈದ ಪ್ರಕರಣ ಉರ್ವ ಠಾಣೆಯಲ್ಲಿ ದಾಖಲಾಗಿದೆ.

ಕ್ಯಾನ್ಸರ್ ಇದೆಯೆಂದು ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಉದ್ಯಮಿ

Posted On: 15-03-2022 10:09PM

ಮಂಗಳೂರು : ತನಗೆ ಕ್ಯಾನ್ಸರ್ ಇರುವ ಬಗ್ಗೆ ಮಾಹಿತಿ ಅರಿತು ಇದರಿಂದ ಮನನೊಂದು ಮಂಗಳೂರಿನ ಜವಳಿ ಸಂಸ್ಥೆಯ ಮಾಲಿಕರೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಮಣ್ಣಗುಡ್ಡದಲ್ಲಿ ನಡೆದಿದೆ.

ಕಾಪು ಸುಗ್ಗಿ ಮಾರಿಪೂಜೆಗೆ ಕ್ಷಣಗಣನೆ : ಹೊಸಮಾರಿಗುಡಿ ಅಭಿವೃದ್ಧಿ ಸಮಿತಿ

Posted On: 15-03-2022 07:07PM

ಕಾಪು : ಇಲ್ಲಿನ ಮಾರಿಯಮ್ಮನ ಗರ್ಭಗುಡಿ, ಉಚ್ಚಂಗಿ ಗರ್ಭಗುಡಿ, ಗೋಪುರಗಳು, ಮುಖಮಂಟಪ, ಸುತ್ತುಪೌಳಿ ಹಾಗೂ ಇನ್ನಿತರ ಅಭಿವೃದ್ಧಿ ಯೋಜನೆಗಳ ಸಂಕಲ್ಪದೊಂದಿಗೆ ಸುಮಾರು 30ಕೋಟಿ ರೂಪಾಯಿ ವೆಚ್ಚದಲ್ಲಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರಥಮ ಹಂತದ ಜೀರ್ಣೋದ್ದಾರ ಕೆಲಸಗಳು ಭರದಿಂದ ಸಾಗುತ್ತಿದ್ದು, ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ದಾರಕ್ಕೆ ಶಿಲಾಸೇವೆ ಸಮರ್ಪಣೆಗೆ ಸಂಕಲ್ಪಿಸಲಾಗಿದ್ದು ಅದಕ್ಕೆ ಪೂರಕವಾಗಿ ಮಾರ್ಚ್ 22 ಮತ್ತು 23ರಂದು ನಡೆಯಲಿರುವ ಸುಗ್ಗಿ ಮಾರಿಪೂಜೆಯಂದು ಭಕ್ತಾದಿಗಳಿಗೆ ಶಿಲಾಸೇವೆ ನೀಡಿ ಶಿಲಾ ಪುಷ್ಪ ಸಮರ್ಪಣೆಗೆ ಅವಕಾಶ ಕಲ್ಪಿಸಲಾಗಿದೆ. ಮಾರಿಯಮ್ಮನ ಭಕ್ತರಿಗೆ ಶಿಲಾಸೇವೆ ಸಮರ್ಪಣೆಗೆ ವಿಶೇಷ ಅವಕಾಶ ಮಾಡಿಕೊಡಲಾಗುತ್ತಿದ್ದು, ಈ ಕಾರ್ಯಕ್ರಮವನ್ನು ಅತ್ಯಂತ ಶಿಸ್ತುಬದ್ದವಾಗಿ ನಡೆಸಲು ನಿರ್ಧರಿಸಲಾಗಿದೆ.