Updated News From Kaup

NSCDF ಸಂಸ್ಕೃತಿ ಜಾತ್ರೆ - ಸಾಮಾಜಿಕ, ರಾಜಕೀಯ, ಧಾರ್ಮಿಕ ಪರಿಸರದ ಬಗ್ಗೆ ಅರಿವು ಮೂಡಿಸಬೇಕಾಗಿದೆ : ಅರಳಿ ನಾಗರಾಜ್

Thumbnail
Posted On: 07 Jul 2022, 11:44 AM

ಮಂಗಳೂರು : ಪರಿಸರ ಅಂದರೆ ಗಿಡ ನೆಡುವುದು ನೀರು ಉಳಿಸುವುದು ಎಂದು ಭಾಷಣ ಮಾಡುತ್ತೇವೆ ಕಾರ್ಬನ ಡೈಆಕ್ಸೈಡ್ ಜಾಸ್ತಿ ಆಗದಂತೆ ನೋಡಿಕೊಳ್ಳಬೇಕು ಎಂದೆಲ್ಲ ಹೇಳಿಕೊಳ್ಳುತ್ತೇವೆಯೇ ಹೊರತು ಸಾಮಾಜಿಕ ಪರಿಸರ, ರಾಜಕೀಯ ಪರಿಸರ, ಧಾರ್ಮಿಕ ಪರಿಸರದ ಬಗ್ಗೆ ಅರಿವು ಮೂಡಿಸುತ್ತಿಲ್ಲ. ಇದು ಅತ್ಯಂತ ಖೇದಕರ ಸಂಗತಿ ಎಂದು ಹೈಕೋರ್ಟ್ ವಿಶ್ರಾಂತ ನ್ಯಾಯಾಧೀಶ ಅರಳಿ ನಾಗರಾಜ್ ಹೇಳಿದರು. ಅವರು ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಪುರ ಭವನದಲ್ಲಿ ಜುಲೈ ಮೂರರಂದು ಆಯೋಜಿಸಿದ್ದ ಒಂದು ದಿನದ ಸಂಸ್ಕೃತಿ ಜಾತ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ದೇಶ ಇಂದು ಸಾಕಷ್ಟು ಅಭಿವೃದ್ಧಿ ಹೊಂದಿದೆ. ಕೋವಿಡ್ ನಂತಹ ಪರಿಸ್ಥಿತಿಯಲ್ಲೂ ದೇಶ ಮುನ್ನಡೆದಿದೆ. ವಿದೇಶಗಳಿಗೆ ಔಷಧಿ ರಫ್ತು ಮಾಡುವ ಸಾಮರ್ಥ್ಯ ಹೊಂದಿದೆ. ಆದರೆ ಅದೇ ರೀತಿ ಬ್ರಷ್ಟಾಚಾರದಂತಹ ಪಿಡುಗು ಕೂಡಾ ವ್ಯಾಪಕವಾಗಿ ಹರಡಿಕೊಂಡಿದೆ. ಇಂದು ಪೂರ್ಣಾಂಕ ಪಡೆದ ಮಕ್ಕಳಿಗೆ ಮಾನ್ಯತೆ ಇಲ್ಲ. ಲಕ್ಷಾಂತರ ರುಪಾಯಿ ನೀಡಿ ಸೀಟು ಗಿಟ್ಟಿಸಿ ಕೊಂಡ ವಿದ್ಯಾರ್ಥಿಗಳು ಬಳಿಕ ಬ್ರಷ್ಟರಾಗದೆ ಇರುತ್ತಾರೆಯೇ ಎಂದು ಪ್ರಶ್ನಿಸಿದ ಅವರು ಇದನ್ನ ತಡೆಯಬೇಕಾದರೆ ಇಂದಿನ ಮಕ್ಕಳಲ್ಲಿ ಸಾಮಾಜಿಕ ಅರಿವು ಮೂಡಿಸಬೇಕಾಗಿದೆ ಎಂದು ಹೇಳಿದರು. ಲೋಕಾಯುಕ್ತ ನ್ಯಾಯವಾದಿ ರವೀಂದ್ರ ಮುನ್ನಿ ಪಾಡಿ ಮಾತನಾಡಿ NSCDF ಒಂದು ಸಾಮಾಜಿಕ ಕಳಕಳಿ ಹೊಂದಿರುವ ಸಂಸ್ಥೆ . ಈ ಕಾರಣದಿಂದಾಗಿಯೇ ಅವರ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ನಾನು ಭಾಗವಹಿಸುತ್ತೇನೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸಾಮಾಜಿಕ ಸೇವೆಗಾಗಿ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸಾಮಾಜಿಕ ವಿಜ್ಞಾನಿ ಡಾ. ಎಂ ಪಿ. ವರ್ಷ , ಸಾಹಿತ್ಯ ಕ್ಷೇತ್ರದಲ್ಲಿ ಪಿ.ವಿ.ಪ್ರದೀಪ್ ಕುಮಾರ್, ನೃತ್ಯ ಕ್ಷೇತ್ರದಲ್ಲಿ ಲಾಲಿತ್ಯ ಕುಮಾರ್ ಬೇಲೂರು ಇವರನ್ನು ಗೌರವಿಸಿ ಸನ್ಮಾನಿಸಲಾಯಿತು. NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ, ಕವಿಗೋಷ್ಠಿ ಅಧ್ಯಕ್ಷೆ ಉಪನ್ಯಾಸಕಿ ಮಾನ್ವಿ, ಕವಿಗೋಷ್ಟಿ ಸಂಚಾಲಕಿ ಮಾನಸ ಪ್ರವೀಣ್ ಭಟ್ ಉಪಸ್ಥಿತರಿದ್ದರು. ರಶ್ಮಿ ಸನಿಲ್ ಕಾರ್ಯಕ್ರಮ ನಿರೂಪಿಸಿದರು. ಕವಿಗೋಷ್ಠಿ, ಯಕ್ಷಗಾನ ಹಾಗೂ ವಿವಿಧ ಕಲಾ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಪಾಂಬೂರು : ಕಾಣೆಯಾಗಿದ್ದ ವ್ಯಕ್ತಿ ಪತ್ತೆ

Thumbnail
Posted On: 06 Jul 2022, 01:58 PM

ಶಿರ್ವ : ಕಾಪು ತಾಲೂಕಿನ ಪಾಂಬೂರಿನ ಲಕ್ಷ್ಮಣ್ ರಾವ್ (66) ಕಾಣೆಯಾದ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇವರು ಉಡುಪಿಯ ಕಲ್ಯಾಣಪುರ, ಸಂತೆಕಟ್ಟೆ ಬಳಿ ಪತ್ತೆಯಾಗಿದ್ದಾರೆ. ಇವರು ಕಾಣೆಯಾದ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಹೋಟೆಲ್ನಲ್ಲಿ ಹೊಟ್ಟೆ ತುಂಬಾ ತಿಂದು ಹಣ ನೀಡದೆ ಮಾಲಿಕರಿಗೆ ಬೆದರಿಕೆ

Thumbnail
Posted On: 06 Jul 2022, 12:00 PM

ಮಣಿಪಾಲ : ಹೋಟೆಲ್ ಗೆ ಆಗಮಿಸಿ ಹೊಟ್ಟೆ ತುಂಬಾ ತಿಂದು ಹಣವನ್ನು ಕೊಡದೆ ಹೋಟೆಲ್ ಮಾಲಿಕರಿಗೆ ಬೆದರಿಕೆಯೊಡ್ಡಿದ ಘಟನೆ ಮುರ್ಡೇಶ್ವರ ಭಟ್ಕಳ, ಉತ್ತರ ಕನ್ನಡ ಜಿಲ್ಲೆ ಇಲ್ಲಿ ಜುಲೈ 5ರಂದು ನಡೆದಿದೆ. ಹಬೀಬುಲ್ಲಾ ಇವರ ಹೋಟೆಲ್ ಗೆ ಮೊಹಮ್ಮದ್ ಅನ್ವರ್ ಎಂಬಾತ ಕಾರಿನಲ್ಲಿ ಬಂದು ತಿಂಡಿ ತಿಂದು ಚಾ ಕುಡಿದು ಅದರ ಹಣವನ್ನು ಪಾವತಿಸದೇ ಕಾರಿನ ಬಳಿ ಹೋದಾಗ ಮಾಲಿಕರು ಹಣವನ್ನು ಕೇಳಿದಾಗ ಕೈಯಿಂದ ಹೊಡೆದು ಅಡ್ಡಗಟ್ಟಿ ಪಿಸ್ತೂಲ್ ತರಹ ಇರುವ ಒಂದು ವಸ್ತುವನ್ನು ತೋರಿಸಿ ಜೀವ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ದಾಖಲಿಸಿದ್ದಾರೆ. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಂಬೂರು : ವ್ಯಕ್ತಿಯೋರ್ವ ಕಾಣೆ

Thumbnail
Posted On: 06 Jul 2022, 11:37 AM

ಶಿರ್ವ : ಕಾಪು ತಾಲೂಕಿನ ಪಾಂಬೂರಿನ ಲಕ್ಷ್ಮಣ್‌ ರಾವ್‌ (66) ಕಾಣೆಯಾದ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಜಾತ ರಾವ್‌ ಎಂಬುವವರು ನೀಡಿದ ದೂರಿನಂತೆ ಅವರ ಗಂಡ ಶಿವರಾಯ ರಾವ್‌ ಮತ್ತು ತಂದೆ ಲಕ್ಷ್ಮಣ್‌ ರಾವ್‌ ರವರು ಉಡುಪಿ ಬನ್ನಂಜೆಯ ಕೆನರಾ ಬ್ಯಾಂಕ್‌ ವ್ಯವಹಾರದ ಬಗ್ಗೆ ಬಸ್ಸಿನಲ್ಲಿ ಬಂದವರು ಉಡುಪಿಯ ಕೆಎಂ ಮಾರ್ಗದ ಬಳಿ ಬಸ್ಸಿನಿಂದ ಇಳಿದಿದ್ದು, ಶಿವರಾಯ ರಾವ್‌ರವರು ಲಕ್ಷ್ಮಣ ರಾವ್‌ರವರನ್ನು ಅಲ್ಲಿಯೇ ನಿಲ್ಲಲು ಹೇಳಿ ರಾಧಾ ಮೆಡಿಕಲ್‌ಗೆ ಹೋಗಿ ಔಷಧಿಯನ್ನು ತೆಗೆದುಕೊಂಡು ವಾಪಾಸು ಹಿಂತಿರುಗಿ ಬಂದು ನೋಡಿದಾಗ ಲಕ್ಷ್ಮಣ ರಾವ್‌ರವರು ಅಲ್ಲಿರಲಿಲ್ಲ. ಈವರೆಗೂ ಮನೆಗೂ ಬಾರದೇ, ಸಂಬಂಧಿಕರ ಮನೆಗೂ ಹೋಗದೇ ಕಾಣೆಯಾಗಿರುತ್ತಾರೆ.

ಮುಂಬೈ ಉದ್ಯಮಿ ಶ್ರೀನಿವಾಸ್ ಎನ್ ಕಾಂಚನ್ ಅವರಿಗೆ ರಾಷ್ಟ್ರೀಯ ನಿರ್ಮಾಣ ರತನ್ ಅವಾರ್ಡ್

Thumbnail
Posted On: 06 Jul 2022, 08:28 AM

ಕಾಪು : ಅಖಿಲ ಭಾರತ ಉದ್ಯಮ ಅಭಿವೃದ್ಧಿ ಸಂಘವು ಮುಂಬೈ ಉದ್ಯಮಿ ಕನ್ನಡಿಗ ಶ್ರೀನಿವಾಸ್ ಎನ್ ಕಾಂಚನ್ ಅವರಿಗೆ 'ರಾಷ್ಟ್ರೀಯ ನಿರ್ಮಾಣ ರತನ್ ಅವಾರ್ಡ್ ಫ಼ಾರ್ ಇಂಡಸ್ಟ್ರಿ ಡೆವಲಪ್ಮೆಂಟ್' ಎಂಬ ರಾಷ್ಟ್ರೀಯ ಪ್ರಶಸ್ತಿಯ ಗೌರವ ಪಡೆದರು. ಶ್ರೀನಿವಾಸ್ ಕಾಂಚನ್ ಅವರು ಹಿಂದುಳಿದ ಪ್ರದೇಶವಾದ ಮಹಾರಾಷ್ಟ್ರ ದ ನಾಸಿಕ್ ಗ್ರಾಮೀಣ ಪ್ರದೇಶದಲ್ಲಿ ಪಂಚಾವಟಿ ವಲ್ವೇಸ್ ಆಂಡ್ ಫ್ಲಾಲೆಂಗ್ಸ್ ಎಂಬ ಕಾರ್ಖಾನೆಯನ್ನು ಸ್ಥಾಪಿಸಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗ ನೀಡುವಲ್ಲಿ ಶ್ರಮಿಸಿರುವದರಿಂದ ಈ ಪ್ರತಿಷ್ಟಿತ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅವರ ಉದ್ಯೋಗ ವೃದ್ಧಿಯಲ್ಲಿ ಅವರ ಪುತ್ರ ಸಾಯಿಪ್ರಸಾದ್ ಸಹಾಯ ಮಾಡುತ್ತಿದ್ದಾರೆ.

ಮಂಗಳೂರಿನಲ್ಲಿ 518 ವಿದೇಶಿ ಪ್ರಜೆಗಳ ವಿಚಾರಣೆ

Thumbnail
Posted On: 04 Jul 2022, 10:55 PM

ಮಂಗಳೂರು : ನಗರದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳನ್ನು ಪತ್ತೆ ಹಚ್ಚುವ ಕಾರ್ಯ ಸಾಗಿದ್ದು, ಕಳೆದ ಒಂದು ವಾರದಲ್ಲಿ 4 ಸಾವಿರ ಮಂದಿಯ ದಾಖಲೆ ಪರಿಶೀಲಿಸಲಾಗಿದೆ. ಈ ಪೈಕಿ ಸೂಕ್ತ ದಾಖಲೆಗಳಿಲ್ಲದೆ ವಾಸಿಸುತ್ತಿದ್ದ 518 ಮಂದಿ ವಲಸೆ ಕಾರ್ಮಿಕರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಸೋಮವಾರ ನಗರದ ರೊಸಾರಿಯೊ ಶಾಲೆಯ ಸಭಾಂಗಣದಲ್ಲಿ ಪೊಲೀಸರು ಬೆಳಗ್ಗಿನಿಂದಲೇ ಪ್ರತಿಯೊಬ್ಬ ವಲಸೆ ಕಾರ್ಮಿಕರ ದಾಖಲೆ ಪರಿಶೀಲನೆ ಕಾರ್ಯ ನಡೆಸಿದ್ದಾರೆ. ನಗರದಲ್ಲಿ ಬಾಂಗ್ಲಾ ಮತ್ತಿತರ ದೇಶಗಳ ಕಾರ್ಮಿಕರು ಅಕ್ರಮವಾಗಿ ನೆಲೆಸಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಅವರನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಈ ದಾಖಲೆ ಪರಿಶೀಲನೆ ಕಾರ್ಯ ನಡೆದಿದೆ. ಈ ಸಂದರ್ಭ ಮಾತನಾಡಿದ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ನಗರದ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಸಲಾದ ಕಾರ್ಯಾಚರಣೆಯ ವೇಳೆ 4000 ಮಂದಿಯ ದಾಖಲೆ ಪರಿಶೀಲನೆ ನಡೆಸಲಾಗಿದೆ. ಅವರಲ್ಲಿ ಸರಿಯಾದ ದಾಖಲೆಗಳಿಲ್ಲದೆ, ಅನುಮಾನಸ್ಪದ ರೀತಿಯಲ್ಲಿ ಕಂಡುಬಂದವರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದರು. ಗೃಹ ಸಚಿವರು ಇತ್ತೀಚೆಗೆ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪರಿಶೀಲನಾ ಸಭೆಯ ಸಂದರ್ಭ ನೀಡಿದ ಆದೇಶದಂತೆ ಅಕ್ರಮ ವಲಸಿಗರನ್ನು ಪತ್ತೆ ಹಚ್ಚುವ ಕಾರ್ಯ ಸಾಗಿದೆ. ಪ್ರತಿಯೊಬ್ಬ ವಲಸೆ ಕಾರ್ಮಿಕರ ಮೇಲೂ ವಿಶೇಷ ನಿಗಾ ಇಡಲಾಗಿದೆ ಎಂದರು. ಮುಖ್ಯವಾಗಿ ಚುನಾವಣಾ ಗುರುತಿನ ಚೀಟಿ, ಆಧಾರ್‌ಕಾರ್ಡ್‌ಗಳ ಪರಿಶೀಲನೆ ನಡೆಯುತ್ತಿದೆ. ಆದರೆ ಅವುಗಳನ್ನು ಕೂಡಾ ನಕಲಿಯಾಗಿ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅದನ್ನು ಖಾತ್ರಿ ಪಡಿಸುವ ನಿಟ್ಟಿನಲ್ಲಿಯೂ ಮೊಬೈಲ್ ನಂಬರಗಳ ಮೂಲಕ ಅವರ ಪರಿಶೀಲನೆ ನಡೆಸಲಾಗುತ್ತಿದೆ. 20ಕ್ಕೂ ಅಧಿಕ ವಿಷಯಗಳ ಮೇಲೆ ಸಮಗ್ರ ವಿಚಾರಣೆ ನಡೆಸಲಾಗುತ್ತಿದೆ ಎಂದವರು ತಿಳಿಸಿದರು.

ಅರ್ಜಿ ವಿಲೇವಾರಿಯಲ್ಲಿ ಶಿರ್ವ ಗ್ರಾಮ ಒನ್ ಕೇಂದ್ರ ಪ್ರಥಮ

Thumbnail
Posted On: 04 Jul 2022, 09:08 PM

ಕಾಪು : ಉಡುಪಿ ಜಿಲ್ಲೆಯಲ್ಲಿ ಕಳೆದ 6 ತಿಂಗಳಲ್ಲಿ ಗ್ರಾಮ ಒನ್ ಕೇಂದ್ರಗಳಲ್ಲಿ ಅತೀ ಹೆಚ್ಚಿನ ಅರ್ಜಿ ವಿಲೇವಾರಿಯಲ್ಲಿ ಮಾಡಿದ ಶಿರ್ವ ಗ್ರಾಮ ಒನ್ ಕೇಂದ್ರ ಮೊದಲ ಸ್ಥಾನ ಪಡೆದುಕೊಂಡಿದೆ. ಉಡುಪಿ ಜಿಲ್ಲೆಯ ಎಡಿಸಿ ವೀಣಾ ಬಿ.ಎನ್ ಇವರು ಅಭಿನಂದಿಸಿ, ಟ್ರೋಫಿಯನ್ನು ನೀಡಿ ಗೌರವಿಸಿದರು.

92 ಹೇರೂರು : ವಿಶ್ವ ಜನಸಂಖ್ಯಾ ದಿನಾಚರಣೆಯ ಪ್ರಯುಕ್ತ ಮಾಹಿತಿ ಕಾರ್ಯಗಾರ

Thumbnail
Posted On: 04 Jul 2022, 08:48 PM

ಕಾಪು, ಜು.4 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಪ್ರಾಥಮಿಕ ಆರೋಗ್ಯ ಕೇಂದ್ರ ಕಾಪು, ಅಂಗನವಾಡಿ ಕೇಂದ್ರ 92 ಹೇರೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯ ಪ್ರಯುಕ್ತ 92 ಹೇರೂರು ಗ್ರಾಮದಲ್ಲಿ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಸದಸ್ಯರಾದ ಮಂಜುಳ ಗಣೇಶ್ ನೆರವೇರಿಸಿ ಇಲಾಖೆಯಲ್ಲಿ ಸಿಗುವ ಮಾಹಿತಿಯನ್ನು ಹಾಗೂ ಸೇವೆಯನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ಇವರು ಜುಲೈ 11 ರಂದು ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಆಚರಿಸಲಾಗುವುದು. ಇದರ ಅಂಗವಾಗಿ ಜೂನ್ 27 ರಿಂದ ಜುಲೈ 10 ರವರೆಗೆ ಕುಟುಂಬ ಕಲ್ಯಾಣದ ಮಹತ್ವ ಮತ್ತು ಜನಸಂಖ್ಯೆ ನಿಯಂತ್ರಣಕ್ಕೆ ಆರೋಗ್ಯ ಇಲಾಖೆಯ ಸೇವೆಗಳ ಬಗ್ಗೆ ಅರಿವು ಮೂಡಿಸುವ ಜಾಗೃತಿ ಕಾರ್ಯ ಹಮ್ಮಿಕೊಳ್ಳಲಾಗುವುದು ಎಂದು ಕುಟುಂಬ ಯೋಜನೆಯ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಜೂರು ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ್ ಧೀರಜ್ ಮಾತನಾಡಿ ಕುಟುಂಬ ಯೋಜನೆ ಅನುಸರಿಸುವುದರಿಂದ ಆದರ್ಶ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಸಮುದಾಯ ಆರೋಗ್ಯ ಅಧಿಕಾರಿ ಡಯಾನ, ಆಶಾ ಕಾರ್ಯಕರ್ತೆ ವಿನೋದ, ಅಂಗನವಾಡಿ ಶಿಕ್ಷಕಿ ಬಬಿತ, ಸಹಾಯಕಿ ಪವಿತ್ರ, ಮಕ್ಕಳ ಪೋಷಕರು, ಗರ್ಭಿಣಿಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಯಶೋಧಾ ನಿರೂಪಿಸಿ, ವಂದಿಸಿದರು.

ಕಲ್ಲುಗುಡ್ಡೆ ಕೊರಗಜ್ಜ ಸೇವಾಸಮಿತಿ ಅಧ್ಯಕ್ಷರಾಗಿ ಸುಧೀರ್ ಸೋನು ಪೂಜಾರಿ ಆಯ್ಕೆ

Thumbnail
Posted On: 04 Jul 2022, 08:28 PM

ಕಾಪು : ಕೊರಗಜ್ಜ ಸೇವಾ ಸಮಿತಿ ಕಲ್ಲುಗುಡ್ಡೆ ಇದರ 2022-2024ನೇ ಸಾಲಿನ ಅಧ್ಯಕ್ಷರಾಗಿ ಸುಧೀರ್ ಸೋನು ಪೂಜಾರಿ, ಕಾರ್ಯದರ್ಶಿಯಾಗಿ ಅರವಿಂದ್ ಕೋಟ್ಯಾನ್ ಮತ್ತು ಕೋಶಾಧಿಕಾರಿಯಾಗಿ ಮನೋಹರ್ ಕಲ್ಲುಗುಡ್ಡೆ ಹಾಗೂ ಪದಾಧಿಕಾರಿಗಳನ್ನು ಜೂನ್ 29ರಂದು ನಡೆದ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಇವರುಗಳು ಎರಡು ವರ್ಷದವರೆಗೆ ಸಮಿತಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಕೊರಗಜ್ಜ ಸೇವಾ ಸಮಿತಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಪಡುಬಿದ್ರಿ : ರೋಟರಿ ಕ್ಲಬ್ ಪದಗ್ರಹಣ ; ಪ್ರಥಮ ಮಹಿಳಾ ಅಧ್ಯಕ್ಷೆಯಾಗಿ ಗೀತಾ ಅರುಣ್

Thumbnail
Posted On: 04 Jul 2022, 07:30 PM

ಪಡುಬಿದ್ರಿ : ಸ್ನೇಹ ಮತ್ತು ಏಕತೆಯ ಮೂಲ ಧ್ಯೇಯೋದ್ದೇಶಗಳೊಂದಿಗೆ ಆರಂಭಗೊಂಡಿರುವ ರೋಟರಿಯು ಮುಂದೆ ಸೇವೆ ಮತ್ತು ವಿಭಿನ್ನತೆಯಲ್ಲಿ ಏಕತೆಯೊಂದಿಗೆ ಒಗ್ಗೂಡಿ ಮುನ್ನಡೆಯುತ್ತಿದೆ ರೋಟರಿ ಜಿಲ್ಲಾ ಸಹಾಯಕ ರಾಜ್ಯಪಾಲೆ ಡಾ| ಪ್ರೀತಿ ಮೋಹನ್ ಹೇಳಿದರು. ಅವರು ಶನಿವಾರ ಪಡುಬಿದ್ರಿಯ ರೋಟರಿ ಕ್ಲಬ್ ಪಡುಬಿದ್ರಿಯ ಪ್ರಥಮ ಮಹಿಳಾ ಅಧ್ಯಕ್ಷೆಯಾದ ಗೀತಾ ಅರುಣ್ ಅವರ ಪದಗ್ರಹಣ ಸಮಾರಂಭದ ಪದಪ್ರಧಾನ ಅಧಿಕಾರಿಯಾಗಿ ಮಾತನಾಡಿದ ಅವರು, ಸಮುದಾಯದ ಅವಶ್ಯಕತೆಗಳನ್ನು ಗ್ರಹಿಸಿ ಜನಸೇವೆಗೈಯ್ಯವುದೇ ರೋಟರಿ ಅಂತಾರಾಷ್ಟ್ರೀಯ ಸಂಸ್ಥೆಯ ಧ್ಯೇಯವಾಗಿದೆ ಎಂದರು. ಸ್ಪಂದನಾ ಗೃಹಪತ್ರಿಕೆಯನ್ನು ಬಿಡುಗಡೆಗೊಳಿಸಿ ಮಾತಾಡಿದ ವಲಯ ಸೇನಾನಿ ವಿಘ್ನೇಶ್ ಶೆಣೈ ನೂತನ ಪಡುಬಿದ್ರಿ ರೋಟರಿ ತಂಡಕ್ಕೆ ಶುಭ ಹಾರೈಸಿದರು. ನೂತನ ಅಧ್ಯಕ್ಷೆಯಾಗಿ ಪದಗ್ರಹಣವನ್ನು ಮಾಡಿದ ಗೀತಾ ಅರುಣ್ ತಮ್ಮ ತಂಡದ ಸದಸ್ಯರನ್ನು ಸಭೆಗೆ ಪರಿಚಯಿಸಿದರು. ಪಡುಬಿದ್ರಿ ರೋಟರಿ ನಿಕಟಪೂರ್ವ ಅಧ್ಯಕ್ಷ ಮಹಮ್ಮದ್ ನಿಯಾಜ್ ಅಧ್ಯಕ್ಷತೆಯನ್ನು ವಹಿಸಿ ತನ್ನ ಒಂದು ವರ್ಷದ ಅವಧಿಯಲ್ಲಿ ತನಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಅರ್ಪಿಸಿದರು. ಇಂಟರ್ಯಾಕ್ಟ್ ಕ್ಲಬ್ಬಿನ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಪಡೆದು ದಿ| ವೈ. ಹಿರಿಯಣ್ಣ ಮತ್ತು ದಿ| ಮೀರಾ ಹಿರಿಯಣ್ಣ ಸ್ಮಾರಕ ರೋಲಿಂಗ್ ಶೀಲ್ಡನ್ನು ಎರ್ಮಾಳು ಬಡಾ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗವು ತನ್ನದಾಗಿಸಿಕೊಂಡಿತು. ಪ್ರತಿಭಾವಂತ ಯುವ ಸಾಧಕರಾಗಿರುವ ರೂಪಾ ವಸುಂಧರ ಆಚಾರ್ಯ, ಸ್ವಾತಿ ಗಣೇಶ್, ವೈಷ್ಣವಿ ರಾವ್, ಸುಶ್ಮಿತಾ ದೇವಾಡಿಗ, ಧನುಷ್ ಸಾಲ್ಯಾನ್, ಯಶಸ್ವಿನಿ ಭಂಡಾರಿ, ಶ್ಲಾಘ ಸಾಲಿಗ್ರಾಮ ಅವರನ್ನು ಸಮ್ಮಾನಿಸಲಾಯಿತು. ಸಂಸ್ಥೆಗೆ ನೂತನ ಸದಸ್ಯರನ್ನಾಗಿ ರಂಜನಿ, ಸುನಿಲ್ ಕುಮಾರ್, ಗಣೇಶ್ ಶೆಟ್ಟಿಗಾರ್ ಹಾಗೂ ದಿನೇಶ್ ಪೂಜಾರಿ ಅವರನ್ನು ಅತಿಥಿಗಳು ಸೇರ್ಪಡೆಗೊಳಿಸಿದರು. ಮಹಮ್ಮದ್ ನಿಯಾಜ್ ಸ್ವಾಗತಿಸಿದರು. ನಿಕಟಪೂರ್ವ ಕಾರ್ಯದರ್ಶಿ ಬಿ. ಎಸ್. ಆಚಾರ್ಯ ವರದಿ ವಾಚಿಸಿದರು. ಯಶೋದಾ ಹಾಗೂ ಸಂತೋಷ್ ಪಡುಬಿದ್ರಿ ಕಾರ್ಯಕ್ರಮ ನಿರ್ವಹಿಸಿದರು. ನೂತನ ಕಾರ್ಯದರ್ಶಿ ಜ್ಯೋತಿ ಮೆನನ್ ವಂದಿಸಿದರು