Updated News From Kaup
ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪು ನಮಗೆ ನಿರಾಸೆಯಾಗಿದೆ : ಎಸ್. ಐ. ಓ. ಕರ್ನಾಟಕ
Posted On: 15-03-2022 02:45PM
ಉಡುಪಿ : ಕರ್ನಾಟಕದ ಹೈಕೋರ್ಟ್ ಇಂದು ನೀಡಿದ ತೀರ್ಪಿನಿಂದ ನಮಗೆ ನಿರಾಸೆಯಾಗಿದೆ. ಹಿಜಾಬ್ ಇತರರಿಗೆ ಹಾನಿ ಮಾಡುವುದಿಲ್ಲ ಅಥವಾ ಮನ ನೋಯಿಸುವುದಿಲ್ಲ ಎಂದು ಎಸ್. ಐ. ಓ. ಕರ್ನಾಟಕ ತಿಳಿಸಿದೆ.
ಸಂಸ್ಥೆ ಕಟ್ಟುವುದು ಸುಲಭ, ಮುಂದುವರಿಸಿಕೊಂಡು ಹೋಗುವುದು ಕಷ್ಟ : ಶ್ವೇತಾ ಜೈನ್
Posted On: 15-03-2022 11:53AM
ಮಂಗಳೂರು : ಜೈನ ಧರ್ಮೀಯರು ಸಂಘಟಿತರಾಗಬೇಕು. ತಮ್ಮಲ್ಲಿ ಕರಗತವಾಗಿರುವ ನಾಯಕತ್ವ ಗುಣಗಳ ಮೂಲಕ ಸಮಾಜ ಸೇವಾ ಚಟುವಟಿಕೆಗಳನ್ನು ಸಕ್ರಿಯವಾಗಿ ಮುಂದುವರಿಸಿಕೊಂಡು ಹೋಗಬೇಕು ಎಂದು ಮೂಡುಬಿದಿರೆಯ ಹಿರಿಯ ನ್ಯಾಯವಾದಿ ಹಾಗೂ ಮಂಗಳೂರಿನ ಭಾರತೀಯ ಮಿಲನ್ ಸಹ ಕಾರ್ಯದರ್ಶಿ ಶ್ವೇತಾ ಜೈನ್ ಹೇಳಿದರು. ಬೆಳಗಾವಿ ನಗರದ ಯಳ್ಳೂರ ರಸ್ತೆಯ ಶ್ರೀ ಅನ್ನಪೂರ್ಣೇಶ್ವರಿ ಮಂಗಲ ಕಾರ್ಯಾಲಯದಲ್ಲಿ ಭಾನುವಾರ ದಕ್ಷಿಣ ಕನ್ನಡ ದಿಗಂಬರ ಜೈನ ಮೈತ್ರಿಕೂಟದ ದಶಮಾನೋತ್ಸವದಲ್ಲಿ ಅವರು ಮಾತನಾಡಿದರು.
ಕಳತ್ತೂರು : ಸಮಾನ ಮನಸ್ಕರ ತಂಡದಿಂದ ಮನೆ ಹಸ್ತಾಂತರ
Posted On: 14-03-2022 08:11PM
ಕಾಪು : ಸಮಾನ ಮನಸ್ಕರ ತಂಡದಿಂದ ಶಶಿಧರ್ ಪುರೋಹಿತ್ ಕಟಪಾಡಿ ಇವರ ನೇತೃತ್ವದಲ್ಲಿ ಹಾಗೂ ಮಾಧವ ಆಚಾರ್ಯ ಇವರ ಮಾರ್ಗದರ್ಶನದಲ್ಲಿ ಸಂತೋಷ ಆಚಾರ್ಯ ಕಳತ್ತೂರು ಇವರ ಪರಿಕಲ್ಪನೆಯಲ್ಲಿ ೧೦೮ ಕಳತ್ತೂರಿನ ನಿವಾಸಿ ಲೀಲಾರವರ ವಾಸಿಸಲು ಅತಂತ್ರವಾಗಿದ್ದ ಮನೆಯನ್ನು ಮರು ನಿರ್ಮಾಣಗೊಳಿಸಿ ಹಸ್ತಾಂತರಿಸಲಾಯಿತು.
ಮಂಗಳೂರು : ಪಿಂಗಾರ ಸಾಹಿತ್ಯ ಬಳಗದಿಂದ ಸಾಹಿತ್ಯ ಸಂಭ್ರಮ, ಕವಿಗೋಷ್ಠಿ, ಸಾಧಕಿಗೆ ಸನ್ಮಾನ
Posted On: 14-03-2022 07:48PM
ಮಂಗಳೂರು : ಪಿಂಗಾರ ಸಾಹಿತ್ಯ ಬಳಗದ ರೇಮಂಡ್ ಡಿ ಕುನ್ಹಾ ತಾಕೊಡೆಯವರ ನೇತೃತ್ವದಲ್ಲಿ ಡಾ. ಸುರೇಶ ನೆಗಳಗುಳಿ ಸಂಚಾಲಕರಾಗಿ ,ಸಂದೇಶ ಪ್ರತಿಷ್ಠಾನ ಸಹಯೋಗದಲ್ಲಿ ಮಂಗಳೂರು ನಂತೂರು ಸಮೀಪದ ಸಂದೇಶ ಪ್ರತಿಷ್ಠಾನ ಸಭಾಂಗಣದಲ್ಲಿ ಮಹಿಳಾ ದಿನಾಚರಣೆಯ ಪ್ರಯುಕ್ತ ಅಂತಾರಾಜ್ಯ ಮಟ್ಟದ ಮಾತೃಭಾಷಾ ಕವಿಗೋಷ್ಠಿಗಳನ್ನು ಹಮ್ಮಿಕೊಳ್ಳಲಾಗಿತ್ತು. ರಾಜ್ಯಾದ್ಯಂತ 50 ಕವಿಗಳು ತಮ್ಮ ಮಾತೃಭಾಷೆಯಲ್ಲಿ ಕವನಗಳನ್ನು ವಾಚಿಸಿದರು.
92ನೇ ಹೇರೂರು :ಬಂಟಕಲ್ಲು- ವಿಕಾಸ ಸೇವಾ ಸಮಿತಿ, ದಾನಿಗಳ ನೆರವಿನಿಂದ ನೀಡಲ್ಪಟ್ಟ 5 ನಾಮ ಫಲಕದ ಅನಾವರಣ
Posted On: 13-03-2022 09:26PM
ಕಾಪು : ನಾನೇ ಎಂಬ ಭಾವವನ್ನು ಬಿಟ್ಟು ನಾವು ಎಂಬ ಭಾವನೆ ಇದ್ದರೆ ದೈವಾನುಗ್ರಹ ಸದಾ ನಮಗಿರುತ್ತದೆ ಎಂದು ಹೇರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ರಮಾನಾಥ ಶೆಟ್ರವರು ಹೇಳಿದರು.
ಶಿರ್ವದ ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗದ ವತಿಯಿಂದ ಧರ್ಮಜಾರಂದಾಯ ದೈವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ
Posted On: 13-03-2022 02:45PM
ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ (ರಿ.) ಶಿರ್ವ ಮತ್ತು ಮಹಿಳಾ ಬಳಗದ ವತಿಯಿಂದ ಶಿರ್ವ ಶ್ರೀ ಧರ್ಮಜಾರಂದಾಯ ನೇಮೋತ್ಸವದ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.
ಶಿರ್ವ ಸಂತ ಮೇರಿ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರೊ| ಪಾಸ್ಕಲ್ ಡೇಸಾ ನಿಧನ
Posted On: 13-03-2022 02:39PM
ಶಿರ್ವ: ಶಿರ್ವ ಸಂತ ಮೇರಿ ಕಾಲೇಜಿನ ನಿವೃತ್ತ ಉಪನ್ಯಾಸಕ ಪ್ರೊ| ಪಾಸ್ಕಲ್ಡೇಸಾ (67) ಅವರು ಮಾ. 13ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ರೋಟರಿ ಕಲ್ಯಾಣಪುರದಿಂದ ವಿಶ್ವ ಮಹಿಳಾ ದಿನಾಚರಣೆ ; ಆಶಾ ಕಾರ್ಯಕರ್ತೆಯರಿಗೆ ಸನ್ಮಾನ
Posted On: 12-03-2022 11:11PM
ಉಡುಪಿ : ರೋಟರಿ ಕಲ್ಯಾಣಪುರದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ 2022 ಪ್ರಯುಕ್ತ ಮಾಚ್೯ 10ರಂದು ಕ್ಲಬ್ ನ ಸಭಾಂಗಣದಲ್ಲಿ ಅಧ್ಯಕ್ಷರಾದ ಶಂಭು ಶಂಕರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಳಲಗಿರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯ, ಉಪ್ಪೂರು, ಮತ್ತು ಹಾವಂಜೆ ಗ್ರಾಮದ 11 ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿ ಅವರ ಸೇವೆಯನ್ನು ಗುರುತಿಸಿ ಅಭಿನಂದಿಸಲಾಯಿತು.
ಮಾಚ್೯ 13 : ಪಾಂಗಾಳ ಬ್ರಹ್ಮಲಿಂಗೇಶ್ವರ ಆದಿ ಆಲಡೆಯಲ್ಲಿ ಹರಕೆಯ ಉತ್ಸವ, ರಂಗಪೂಜೆ, ಬ್ರಹ್ಮಮಂಡಲ ಸೇವೆ
Posted On: 12-03-2022 11:04PM
ಪಾಂಗಾಳ : ಮುಕ್ಕಾಲಿ ಅಣ್ಣು ಶೆಟ್ಟಿ ಕುಟುಂಬಸ್ಥರ ಆಡಳಿತದ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಮಾಚ್೯ 13, ಭಾನುವಾರದಂದು ವೈಭವದ ಒಂದು ದಿನದ ಹರಕೆಯ ಉತ್ಸವವು ಮಂಡೇಡಿ ಬಾಲಟ್ಟ ಮನೆ ಕಲ್ಯಾಣಿ ಶೆಟ್ಟಿ ಹಾಗೂ ಇವರ ಕುಟುಂಬಸ್ಥರ ಸೇವಾರ್ಥವಾಗಿ ಜರಗಲಿದೆ.
ಸಾರ್ವಜನಿಕರಿಗೆ ಕಂದಾಯ ಸೇವೆಗಳು ಸಮರ್ಪಕವಾಗಿ ತಲುಪಬೇಕು : ಶಾಸಕ ರಘುಪತಿ ಭಟ್
Posted On: 12-03-2022 08:00PM
ಉಡುಪಿ : ಸಾರ್ವಜನಿಕರಿಗೆ ಕಂದಾಯ ಇಲಾಖೆ ವ್ಯಾಪ್ತಿಯ ಎಲ್ಲಾ ಸೇವೆಗಳನ್ನು ಸಮರ್ಪಕವಾಗಿ, ಮಧ್ಯವರ್ತಿಗಳ ಹಾವಳಿ ಇಲ್ಲದೆ , ಸಕಾಲದಲ್ಲಿ ಒದಗಿಸುವ ಮೂಲಕ, ಕಂದಾಯ ಸಮಸ್ಯೆಗಳನ್ನು ಸಮರ್ಪಕ ರೀತಿಯಲ್ಲಿ ಬಗೆಹರಿಸಲು, ಅಧಿಕಾರಿಗಳು ಪ್ರಾಮಾಣಿಕ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಇಂದು “ಕಂದಾಯ ದಾಖಲೆ ಮನೆ ಬಾಗಿಲಿಗೆ” ಯೋಜನೆಯಡಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿನ ರೈತರ ಮನೆಗಳಿಗೆ, ಕಂದಾಯ ದಾಖಲೆಗಳನ್ನು ಮನೆ ಬಾಗಿಲಿಗೆ ತೆರಳಿ ವಿತರಿಸಿ, ನಂತರ ತೆಂಕನಿಡಿಯೂರು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
