Updated News From Kaup
ಮಾಚ್೯ 12ರಂದು ಕಾಪು ತಾಲೂಕಿನಲ್ಲಿ ಕಂದಾಯ ದಾಖಲೆ ಮನೆಬಾಗಿಲಿಗೆ ಯೋಜನೆಗೆ ಚಾಲನೆ
Posted On: 11-03-2022 09:11PM
ಕಾಪು : ರಾಜ್ಯ ಸರ್ಕಾರವು ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ ನಿಟ್ಟಿನಲ್ಲಿ ಕಂದಾಯದಾಖಲೆ ಮನೆಬಾಗಿಲಿಗೆ ಯೋಜನೆಯನ್ನು ಮಾಚ್೯ 12 ರಂದು ರಾಜ್ಯಾದ್ಯಂತ ಅನುಷ್ಠಾನ ಗೊಳಿಸಲಾಗುತ್ತಿದೆ.
ಮಾರ್ಚ್ 13 : ಕಳತ್ತೂರು ಪೈಯಾರು ಶ್ರೀ ಮಲೆ ಧೂಮಾವತಿ ದೈವ ಸನ್ನಿಧಿಯಲ್ಲಿ ವಾರ್ಷಿಕ ಮಂಜ
Posted On: 11-03-2022 08:57PM
ಕಾಪು : ಕಳತ್ತೂರು ಪೈಯಾರು ಶ್ರೀ ಮಲೆಧೂಮಾವತಿ ದೈವ ಸನ್ನಿಧಿಯಲ್ಲಿ ವಾರ್ಷಿಕ ಮಂಜ (ಭೋಗ) ಹಾಗೂ ರಾತ್ರಿ ಅನ್ನದಾನ ಕಾರ್ಯಕ್ರಮ ಮಾರ್ಚ್ 13 ರಂದು ನಡೆಯಲಿದೆ.
ಜಯ ಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ ಬೈಂದೂರಿನಲ್ಲಿ ಪರಿಸರ ರಕ್ಷಿಸಿ - ಜೀವನ ಉಳಿಸಿ ಅಭಿಯಾನ
Posted On: 11-03-2022 08:51PM
ಕುಂದಾಪುರ : ಕೃಷಿ ಮತ್ತು ಸಾಮಾನ್ಯ ಜನ ಜೀವನಕ್ಕೆ ಪೂರಕವಾಗಿರುವ ಅರಣ್ಯ ಭೂಮಿಯನ್ನು ಕೈಗಾರಿಕೆಗೆ ನೀಡುವುದು ಸೂಕ್ತವಲ್ಲ, ಕೈಗಾರಿಕೆಗೆಂದು ಅರಣ್ಯ ನಾಶ ಮಾಡುವುದರಿಂದ ಪ್ರಕೃತಿ ನಾಶದೊಂದಿಗೆ ಜನರ ನಿತ್ಯ ಜೀವನದ ಮೇಲೂ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಆದ್ದರಿಂದ ಬರಡು ಭೂಮಿಯನ್ನು ಕೈಗಾರಿಕೆಗೆ ಬಳಸಿಕೊಳ್ಳಲು ಯೋಜನೆ ರೂಪಿಸಬೇಕು ಎಂದು ಜಯ ಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ ಅಧ್ಯಕ್ಷ ಎಲ್. ವಿ. ಅಮೀನ್ ಹೇಳಿದರು. ಹಳಗೇರಿಯ ೫೩ ಎಕರೆ ದಟ್ಟ ಅರಣ್ಯ ಭೂಮಿಯನ್ನು ಕೈಗಾರಿಕೆ ಉದ್ದೇಶಕ್ಕೆ ಕಾದಿರಿಸಿರುವುದನ್ನು ಖಂಡಿಸಿ ಜಯ ಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿ, ವನದುರ್ಗ ರೈತ ಶಕ್ತಿ ಗುಂಪು ಮತ್ತು ಹಳಗೇರಿ ಪರಿಸರ ಹಿತರಕ್ಷಣಾ ವೇದಿಕೆಯ ಸಹಯೋಗದಲ್ಲಿ ಗುರುವಾರ ನಾಗೂರಿನ ಮಹಾಲಸಾ ಕಲ್ಚರರ್ ಹಾಲ್ ನಲ್ಲಿ ನಡೆದ ಪರಿಸರ ರಕ್ಷಿಸಿ - ಜೀವನ ಉಳಿಸಿ ಅಭಿಯಾನ ಮತ್ತು ಬೃಹತ್ ಪ್ರತಿಭಟನೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಾಚ್೯ 13 : ಕಾಪು ಶ್ರೀ ಮಾರಿಯಮ್ಮ ದೇವಸ್ಥಾನದ ಆದಿಸ್ಥಳದಲ್ಲಿ ವಾರ್ಷಿಕ ಮಹೋತ್ಸವ
Posted On: 09-03-2022 10:43PM
ಕಾಪು : ಇಲ್ಲಿನ ಶ್ರೀ ಮಾರಿಯಮ್ಮ ದೇವಸ್ಥಾನದ ಆದಿಸ್ಥಳ ಶ್ರೀ ತ್ರಿಶಕ್ತಿ ಸನ್ನಿಧಾನ ಕೋಟೆಮನೆ ಇದರ ವಾರ್ಷಿಕ ಮಹೋತ್ಸವವು ಮಾಚ್೯13 ರಂದು ಜರಗಲಿದೆ.
ಉಡುಪಿ : ಜಿಲ್ಲಾ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮ
Posted On: 09-03-2022 06:11PM
ಉಡುಪಿ : ರಾಷ್ಟ್ರದ ಅಭಿವೃದ್ಧಿಯಲ್ಲಿ ಯುವ ಸಮುದಾಯ ಹಾಗೂ ಯುವಕ ಹಾಗೂ ಯುವತಿ ಮಂಡಲಗಳ ಪಾತ್ರ ಬಹು ಮುಖ್ಯವಾಗಿದ್ದು, ವಿವೇಕಾನಂದರ ನುಡಿಯಂತೆ ಯುವ ಜನತೆಯಿಂದ ಸದೃಢ ಭಾರತ ನಿರ್ಮಾಣ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ಇಂದು ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಆಡಿಟೋರಿಯಂನಲ್ಲಿ, ನೆಹರು ಯುವ ಕೇಂದ್ರ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೂರ್ಣಪ್ರಜ್ಞ ಕಾಲೇಜು ಉಡುಪಿ, ಪೂರ್ಣಪ್ರಜ್ಞ ಇನಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಹಾಗೂ ಉಡುಪಿ ಜಿಲ್ಲೆಯ ಯುವಕ, ಯುವತಿ ಮತ್ತು ಮಹಿಳಾ ಮಂಡಲಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ ಮಹಿಳಾ ಬಳಗದ ಒಂಭತ್ತನೆ ವರ್ಷದ ವಾರ್ಷಿಕೋತ್ಸವ
Posted On: 09-03-2022 05:59PM
ಶಿರ್ವ : ಶ್ರೀ ವಿಶ್ವಬ್ರಾಹ್ಮಣ ಯುವ ಸಂಗಮ ಶಿರ್ವ, ಮಹಿಳಾ ಬಳಗದ ವತಿಯಿಂದ ಶಿರ್ವ ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಒಂಭತ್ತನೆ ವರ್ಷದ ವಾರ್ಷಿಕೋತ್ಸವವು ಜರಗಿತು.
ಮುದರಂಗಡಿ : ಜೋಜ್೯ ಮೆಂಡೋನ್ಸ ರಸ್ತೆಗೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಹತ್ತು ಲಕ್ಷ ; ಕೊನೆಗೂ ಈಡೇರಿದ ಇಪ್ಪತ್ತೈದು ವರ್ಷಗಳ ಬೇಡಿಕೆ
Posted On: 09-03-2022 05:48PM
ಮುದರಂಗಡಿ : ಇಲ್ಲಿನ ಪಂಚಾಯತ್ ವ್ಯಾಪ್ತಿಯ ಮೂಡು ದಡ್ಡು ಕ್ರಿಶ್ಚಿಯನ್ ಕುಟುಂಬಗಳ ಸುಮಾರು ಇಪ್ಪತ್ತೈದು ವರ್ಷಗಳ ಬೇಡಿಕೆಯಾದ ದಿವಂಗತ ಜೋಜ್೯ ಮೆಂಡೋನ್ಸ ರಸ್ತೆಗೆ ಕಾಂಕ್ರಿಟೀಕರಣಕ್ಕಾಗಿ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ರೂ. ಹತ್ತು ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಶಾಸಕರಾದ ಲಾಲಾಜಿ. ಆರ್ ಮೆಂಡನ್ ರವರು ಉದ್ಘಾಟಿಸಿದರು.
ಕೆಎಸ್ಟಿಎ ಕ್ಷೇತ್ರ ಸಮಿತಿ ಕಾಪು : ಟೈಲರ್ಸ್ ಡೇ ಕಾರ್ಯಕ್ರಮ
Posted On: 08-03-2022 06:10PM
ಕಾಪು : ಕೆಎಸ್ಟಿಎ ಕ್ಷೇತ್ರ ಸಮಿತಿ ಕಾಪು ವತಿಯಿಂದ ಮಾಚ್೯ 7ರಂದು ಟೈಲರ್ಸ್ ಡೇ ಕಾರ್ಯಕ್ರಮವು ಕಾಂಚನ್ ಮೂಲಸ್ಥಾನ ಸಭಾ ಭವನ ಕಾಪು ಇಲ್ಲಿ ಜರಗಿತು.
ಮಾಚ್೯ 8 : ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಶಿರ್ವದಲ್ಲಿ 3 ನೇ ಸಂಜೀವಿನಿ ಸಂತೆ
Posted On: 07-03-2022 05:49PM
ಶಿರ್ವ : ಮಹಿಳಾ ಸ್ವ ಸಹಾಯ ಸಂಘಗಳ ಸಂಜೀವಿನಿ ಒಕ್ಕೂಟಗಳ 3ನೇ ಸಂಜೀವಿನಿ ಸಂತೆಯು ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಾಚ್೯ 8, ಮಂಗಳವಾರ ಶಿರ್ವ ಮಹಿಳಾ ಮಂಡಲದ ಮಹಿಳಾ ಸೌಧದಲ್ಲಿ ನಡೆಯಲಿದೆ.
ಮಿಸ್ಟರ್ ಕರ್ನಾಟಕ ಮತ್ತು ಮಿಸ್ಟರ್ ಉಡುಪಿ - 2022 ಸ್ಫರ್ಧೆಯ ಮಾಸ್ಟರ್ ವಿಭಾಗದಲ್ಲಿ ಗೋವರ್ಧನ ಬಂಗೇರರಿಗೆ ಚಿನ್ನದ ಪದಕ
Posted On: 07-03-2022 05:02PM
ಉಡುಪಿ : ಇಲ್ಲಿನ ಸಂತಕಟ್ಟೆಯ ಮೌಂಟ್ ರೋಸರಿ ಚರ್ಚ್ ಮೈದಾನದಲ್ಲಿ ಮಾಂಡವಿ ಬಿಲ್ಡರ್ಸ್ ಹಾಗೂ ಇ-ಫಿಟ್ನೆಸ್ ಜಿಮ್ ಇವರು ಮಾರ್ಚ್ 5 ಮತ್ತು 6 ರಂದು ಆಯೋಜಿಸಿದ್ದ ಮಿಸ್ಟರ್ ಕರ್ನಾಟಕ - 2022 ಹಾಗೂ ಮಿಸ್ಟರ್ ಉಡುಪಿ - 2022 ಸ್ಫರ್ಧೆಯಲ್ಲಿ ಮಾಸ್ಟರ್ ವಿಭಾಗದಲ್ಲಿ ಗೋವರ್ಧನ ಬಂಗೇರ ಇವರಿಗೆ ಚಿನ್ನದ ಪದಕ ಲಭಿಸಿದೆ.
