Updated News From Kaup

ಮೋದಿ ಆಡಳಿತದ ಎಂಟನೆ ವರ್ಷದ ಆಚರಣೆ ; ಸಾಧಕರಿಗೆ ಸನ್ಮಾನ

Thumbnail
Posted On: 13 Jun 2022, 07:51 AM

ಕಾಪು : ಮೋದಿ ಆಡಳಿತದ ಎಂಟನೆ ವರ್ಷದ ಆಚರಣೆ ಪ್ರಯುಕ್ತ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಪಡುಬಿದ್ರಿ ಬಿಜೆಪಿ ಮಹಾಶಕ್ತಿ ಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌ ಜರಗಿತು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದಿ ಸರಕಾರದ ಎಂಟು ವರ್ಷಗಳ ಸಾಧನೆ ಹಾಗೂ ಬಡವರ ಕಲ್ಯಾಣ ಕಾರ್ಯಕ್ರಮಗಳ‌ ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ ವಹಿಸಿದ್ದರು. ಫಲಾನುಭವಿಗಳ ಕಾರ್ಯಕ್ರಮದ ಜಿಲ್ಲಾ ಬಿಜೆಪಿ ಸಂಚಾಲಕರಾದ ಶಿಲ್ಪಾ ಜಿ‌ ಸುವರ್ಣ, ಮಂಡಲ ಸಂಚಾಲಕರಾದ ಮುರಳೀಧರ ಪೈ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ನಿಕಟಪೂರ್ವ ಮಂಡಲ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ನಿಕಟಪೂರ್ವ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಸಾಧಕರ ಗೌರವಾರ್ಪಣೆ ಮಂಡಲ ಸಂಚಾಲಕರಾದ ಗುರುಕೃಪಾ ರಾವ್, ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಾಂತ ಪಡುಬಿದ್ರಿ, ಪಡುಬಿದ್ರಿ ಪಂಚಾಯತ್ ಅಧ್ಯಕ್ಷರಾದ ರವಿ‌ಶೆಟ್ಟಿ, ಹೆಜಮಾಡಿ ಪಂಚಾಯತ್ ಪ್ರಭಾರ ಅಧ್ಯಕ್ಷರಾದ ಪವಿತ್ರ ಗಿರೀಶ್, ಪಲಿಮಾರು ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಪ್ರಭು, ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಸಾದ್ ಪಲಿಮಾರು ಕಾರ್ಯಕ್ರಮ ನಿರೂಪಿಸಿದರು.

ಜಲಜೀವನ್ ಮಿಷನ್ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಮುಕ್ತಾಯಗೊಳಿಸಿ: ಜಿ.ಪಂ. ಸಿಇಒ ಪ್ರಸನ್ನ ಹೆಚ್

Thumbnail
Posted On: 10 Jun 2022, 05:24 PM

ಉಡುಪಿ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡಿರುವ ಕಾಮಗಾರಿಗಳನ್ನು ಜಿಲ್ಲೆಯಲ್ಲಿ ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ, ಗ್ರಾಮೀಣ ಪ್ರದೇಶದ ಎಲ್ಲಾ ಮನೆಗಳಿಗೆ ಶುದ್ಧ ನಳ್ಳಿ ನೀರು ಸಂಪರ್ಕ ಒದಗಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಸೂಚಿಸಿದರು. ಅವರು ಇಂದು ಜಿ.ಪಂ. ಕಚೇರಿಯಲ್ಲಿ ನಡೆದ, ಜಿಲ್ಲಾ ನೀರು ಸರಬರಾಜು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯಲ್ಲಿ 155 ಗ್ರಾಮ ಪಂಚಾಯತ್ಗಳ 246 ಗ್ರಾಮಗಳಲ್ಲಿನ 2,42,526 ಮನೆಗಳ ಒಟ್ಟು 10,32,277 ಜನರಿಗೆ ದೈನಂದಿನ ಬಳಕೆಗಾಗಿ ಶುದ್ಧ ಕುಡಿಯುವ ನೀರು ಒದಗಿಸುವ ಗುರಿ ಹೊಂದಿದ್ದು, ಈ ಬಗ್ಗೆ ಕೈಗೊಂಡಿರುವ ಎಲ್ಲಾ ಕಾಮಗಾರಿಗಳನ್ನು 2023 ನೇ ಸಾಲಿನ ಒಳಗೆ ಮುಗಿಸಿ, ನಿಗದಿತ ಅವಧಿಯೊಳಗೆ ಗುರಿ ಸಾಧನೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದರು. ಮನೆಗಳಿಗೆ ನಳ್ಳಿ ನೀರಿನ ಸಂಪರ್ಕ ನೀಡಿದ ನಂತರ, ನೀರಿನ ಸಮರ್ಪಕ ಬಳಕೆ ಕುರಿತು ಪರಿಶೀಲಿಸಲು ಪ್ರತಿ ಮನೆಗಳಿಗೆ ಮೀಟರ್ ಅಳವಡಿಸುವಂತೆ ಹಾಗೂ ಅನಗತ್ಯವಾಗಿ ನೀರು ಪೋಲಾಗದಂತೆ ಅರಿವು ಮೂಡಿಸಿ, ಆಗಾಗ್ಗೆ ಪರಿಶೀಲನೆ ನಡೆಸುವಂತೆ ಸೂಚಿಸಿದರು. ಜಿಲ್ಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸಲು ಈಗಾಗಲೇ ನಿಟ್ಟೆಯಲ್ಲಿ ಎಂ.ಆರ್.ಎಫ್ ಘಟಕವನ್ನು ಆರಂಭಿಸಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲಾಗುತ್ತಿದ್ದು, ಇದುವರೆಗೆ 1000 ಟನ್ ಗೂ ಅಧಿಕ ಪ್ಲಾಸ್ಟಿಕ್ ಕಸವನ್ನು ವಿಲೇವಾರಿ ಮಾಡಲಾಗಿದೆ. ಇನ್ನೂ 1 ಮಿನಿ ಎಂ.ಆರ್.ಎಫ್ ಘಟಕ ಆರಂಭಿಸಲು ಟೆಂಡರ್ ಕರೆಯಲಾಗಿದ್ದು, 2 ಮಿನಿ ಎಂ.ಆರ್.ಎಫ್ ಘಟಕ ಆರಂಭಿಸಲು ಮಂಜೂರಾತಿಗೆ ಕಳುಹಿಸಲಾಗಿದೆ. ಜಿಲ್ಲೆಯ ವಿವಿಧ ಗ್ರಾಮ ಪಂಚಾಯತ್ಗಳ ಅಧ್ಯಕ್ಷರು ಮತ್ತು ಪಿಡಿಓ ಗಳಿಗೆ ನಿಟ್ಟೆ ಎಂ.ಆರ್.ಎಫ್ ಘಟಕಕ್ಕೆ ಆಹ್ವಾನಿಸಿ, ಘಟಕದ ಕಾರ್ಯನಿರ್ವಹಣೆ ಬಗ್ಗೆ ಸವಿವರಣೆ ಮತ್ತು ಪ್ರಾತ್ಯಕ್ಷಿಕೆ ತೋರಿಸಲಾಗಿದ್ದು, ಎಲ್ಲಾ ಗ್ರಾಮ ಪಂಚಾಯತ್ಗಳಲ್ಲಿ ಸಮರ್ಪಕ ರೀತಿಯಲ್ಲಿ ತ್ಯಾಜ್ಯ ಸಂಗ್ರಹಣೆ ಮತ್ತು ವಿಲೇವಾರಿ ಮಾಡಲು ಹೆಚ್ಚಿನ ಗಮನಹರಿಸುವಂತೆ ಸೂಚಿಸಿದರು. ಮನೆಗಳಲ್ಲಿ ತ್ಯಾಜ್ಯದ ನಿರ್ವಹಣೆ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಶಾಲಾ ಮಕ್ಕಳಿಗೆ ಅರಿವು ಮೂಡಿಸಿ, ಅದನ್ನು ತಮ್ಮ ಮನೆಗಳಲ್ಲಿ ಅನುಷ್ಠಾನಗೊಳಿಸುವಂತೆ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಡಿಡಿಪಿಐ ಅವರಿಗೆ ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪುಣೆಯ ಬಿಲ್ಲವ ಸಂಘದ ಮಹಿಳಾ ಯುವ ವಿಭಾಗದ ಅಧ್ಯಕ್ಷೆಯಾಗಿ ತೃಪ್ತಿ ಎಸ್ ಪೂಜಾರಿ ಆಯ್ಕೆ

Thumbnail
Posted On: 10 Jun 2022, 02:54 PM

ಉಡುಪಿ : ಪುಣೆಯ ಪ್ರತಿಷ್ಠಿತ ಬಿಲ್ಲವ ಸಮಾಜ ಸೇವಾ ಸಂಘದ ಮಹಿಳಾ ಯುವ ವಿಭಾಗದ ಅಧ್ಯಕ್ಷೆಯಾಗಿ ತೃಪ್ತಿ ಎಸ್ ಪೂಜಾರಿ ಆಯ್ಕೆಯಾಗಿದ್ದಾರೆ. ಜೂನ್ 5ರಂದು ಪುಣೆ ಬಿಲ್ಲವ ಸಮಾಜ ಸೇವಾ ಸಂಘದ ಕಚೇರಿಯಲ್ಲಿ ಅಧ್ಯಕ್ಷ ವಿಶ್ವನಾಥ ಪೂಜಾರಿ ಕಡ್ತಲ ಅವರ ಅಧ್ಯಕ್ಷತೆಯಲ್ಲಿ ಸಂಘದ ಸಭೆ ಜರಗಿತು. ಈ ಸಂದರ್ಭ ಸರ್ವಾನುಮತದಿಂದ ಆರಿಸಲಾಯಿತು. ಪುಣೆ ಬಿಲ್ಲವ ಸಂಘದಲ್ಲಿ ಸಕ್ರಿಯ ಸದಸ್ಯರಾಗಿರುವ ಇವರು ಬಿ.ಕಾಂ, ಪದವೀಧರೆಯಾಗಿದ್ದು, ಸೌಂದರ್ಯ ವಿನ್ಯಾಸಕಿಯಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆದಿದ್ದಾರೆ. ನೃತ್ಯ ಕಲಾವಿದೆಯಾಗಿರುವ ಇವರು ಸಮಾಜ ಸೇವೆಯಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ತನ್ನ ಅಕ್ಕನೊಂದಿಗೆ ಡ್ರೀಮ್ ಕ್ಯಾಚಸ್ ಫೌಂಡೇಶನ್‌ನಲ್ಲಿ ಕೆಲಸ ಮಾಡುತ್ತಿರುವ ಇವರು ಪುಣೆಯ ಉದ್ಯಮಿ ಶಂಕರ ಪೂಜಾರಿ ಕಲ್ಲುಗುಡ್ಡೆ‌ ಮತ್ತು ಸಂಗೀತಾ ಎಸ್ ಪೂಜಾರಿ ದಂಪತಿಯ ಪುತ್ರಿ.

ಕುರ್ಕಾಲು ಬೀಡು ನವೀನ್ ಶೆಟ್ಟಿಯವರಿಗೆ ಗಡಿಪ್ರಧಾನ

Thumbnail
Posted On: 10 Jun 2022, 11:35 AM

ಕಾಪು : ತಾಲೂಕಿನ ಕುರ್ಕಾಲು ಬೀಡಿನ ಸಾರಾಲ ಜುಮಾದಿ ಬಂಟ ದರ್ಶನ ಮತ್ತು ಕುರ್ಕಾಲು ಬೀಡುವಿನ ನವೀನ್ ಶೆಟ್ಟಿಯವರಿಗೆ ಗಡಿಪ್ರಧಾನವು ಇತ್ತೀಚೆಗೆ ಜರಗಿತು. ಈ ಸಂದರ್ಭ ಬೀಡಿನ ಪ್ರಮುಖರು ಮತ್ತು ಊರಿನ ಪ್ರಮುಖರು ಉಪಸ್ಥಿತರಿದ್ದರು.

ಕೊಲೆ ಪ್ರಕರಣ ಭೇದಿಸಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು

Thumbnail
Posted On: 09 Jun 2022, 11:30 PM

ಮಂಗಳೂರು : ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪ್ಪಾಡಿ ಎಂಬಲ್ಲಿ ಚರಣ್ ರಾಜ್ ಎಂಬವರನ್ನು ಕಿಶೋರ್ ಪುಜಾರಿ ಮತ್ತು ಇತರರ ತಂಡ ಜೂನ್ 4ರಂದು ತಲವಾರು ಮತ್ತು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದು ಈ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿತ್ತು. ಇದೊಂದು ಪೂರ್ವದ್ವೇಷದಿಂದ ಮಾಡಿರುವ ಕೊಲೆಯಾಗಿದ್ದು. ಈ ಹಿಂದೆ ಮೃತ ಚರಣ್ ರಾಜ್ ತನ್ನ ಸಹಚರರೊಂದಿಗೆ ಸೇರಿಕೊಂಡು ಸಂಪ್ಯ ಬಳಿ ಕಾರ್ತಿಕ್ ಮಾರ್ಲ ಎಂಬವರನ್ನು ಕೊಲೆ ಮಾಡಿದ್ದು ಪ್ರಸ್ತುತ ಜಾಮೀನಿನಲ್ಲಿ ಬಿಡುಗಡೆಗೊಂಡು ಪೆರ್ಲಂಪ್ಪಾಡಿಯಲ್ಲಿ ಹೊಸದಾಗಿ ತೆರೆಯಲಿರುವ ಮೆಡಿಕಲ್ ಶಾಪ್ ಕೆಲಸಕ್ಕೆ ಓಡಾಡಿಕೊಂಡಿದ್ದ ವೇಳೆ ಆರೋಪಿತರುಗಳು ಹೊಂಚುಹಾಕಿ ಕೊಲೆ ಮಾಡಿರುವುದು ತಿಳಿದು ಬಂದಿದೆ. ಪ್ರಕರಣದಲ್ಲಿ ಆರೋಪಿಗಾದ ಕಿಶೋರ್ ಪುಜಾರಿ ( 34),ರಾಕೇಶ್ ಮಡಿವಾಳ (27), ರೇಮಂತ್ ಗೌಡ (26), ನರ್ಮೆಶ್ ರೈ(29), ನಿತಿಲ್ ಶೆಟ್ಟಿ (23), ವಿಜೇಶ್(22) ಎಂಬ ಆರೋಪಿಗಳನ್ನು ದಸ್ತಗಿರಿ ಮಾಡಿ ಆರೋಪಿಗಳಿಂದ ಕೃತ್ಯಕ್ಕೆ ಉಪಯೋಗಿಸಿದ ಬಾಳುಕತ್ತಿ-1 , ರಾಡ್ -2 ಮತ್ತು ಮೋಟಾರ್ ಸೈಕಲ್ -2 ನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಸದ್ರಿ ಪ್ರಕರಣದ ಪತ್ತೆ ಬಗ್ಗೆ ಮಾನ್ಯ ಪೊಲೀಸ್ ಅಧೀಕ್ಷಕರಾದ ಋಷಿಕೇಶ್ ಭಗವಾನ್ ಸೊನವಣೆ ಐಪಿಎಸ್ ಮತ್ತು ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಕುಮಾರ್ ಚಂದ್ರ ಹಾಗು ಮಾನ್ಯ ಪೊಲೀಸ್ ಉಪಾಧೀಕ್ಷಕರಾದ ಗಾನಾ.ಪಿ.ಕುಮಾರ್ ರವರ ಮಾರ್ಗದರ್ಶನದಂತೆ ನವೀನ್ ಚಂದ್ರ ಜೋಗಿ, ಪೊಲೀಸ್ ವೃತ್ತ ನಿರೀಕ್ಷಕರು, ಮತ್ತು ಸಿಬ್ಬಂದಿಗಳು, ರುಕ್ಮ ನಾಯ್ಕ್ ಪಿ ಎಸ್ ಐ ಬೆಳ್ಳಾರೆ ಮತ್ತು ಸಿಬ್ಬಂದಿಗಳು, ದಿಲೀಪ್ ಪೊಲೀಸ್ ಉಪನಿರೀಕ್ಷಕರು ಸುಳ್ಯ ಠಾಣೆ, ಮತ್ತು ಸಿಬ್ಬಂದಿಗಳು, ಉದಯರವಿ ಪಿ ಎಸ್ ಐ ಪುತ್ತೂರು ಗ್ರಾಮಾಂತರ ಠಾಣೆ ಮತ್ತು ಸಿಬ್ಬಂದಿಗಳು, ರಾಜೇಶ್ ಪುತ್ತೂರು ನಗರ ಠಾಣೆ ಮತ್ತು ಸಿಬ್ಬಂದಿಗಳು ಪತ್ತೆ ಕಾರ್ಯದಲ್ಲಿ ಸಹಕರಿಸಿದ್ದರು.

ಶ್ರೀ ಸರಸ್ವತೀ ಪೀಠ ಆನೆಗುಂದಿ ಸೂರ್ಯ ಚೈತನ್ಯ ಶಾಲೆಯಲ್ಲಿ ಚಿಣ್ಣರ ಚೈತನ್ಯ ಭೋಜನ ಪ್ರಾರಂಭ

Thumbnail
Posted On: 09 Jun 2022, 11:17 PM

ಕಾಪು : ಆನೆಗುಂದಿ ಶ್ರೀ ಸರಸ್ವತೀ ಪೀಠ ಎಜುಕೇಷನ್‌ ಟ್ರಸ್ಟ್‌ (ರಿ) ಅಸೆಟ್‌ ನ ಅಧೀನ ಸಂಸ್ಥೆ ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್‌ ಅಕಾಡೆಮಿ ಶಾಲೆಯಲ್ಲಿ ಮಕ್ಕಳ ಮಧ್ಯಾಹ್ನದ ಊಟದ ಯೋಜನೆಯಾದ ಚಿಣ್ಣರ ಚೈತನ್ಯ ಭೋಜನಕ್ಕೆ ಆನೆಗುಂದಿ ಮಠದ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅಸೆಟ್‌ ನ ಪ್ರಧಾನ ಕಾರ್ಯದರ್ಶಿ ಗುರುರಾಜ ಆಚಾರ್ಯ ಮಂಗಳೂರು ,ಉಪಾಧ್ಯಕ್ಷ ವಿವೇಕ ಆಚಾರ್ಯ ಶಿರ್ವ , ಶಿಕ್ಷಕ – ಪೋಷಕ ಸಂಘದ ಅಧ್ಯಕ್ಷ ದೀಪಕ್‌ ಕಾಮತ್‌ , ಉಪಾಧ್ಯಕ್ಷೆ ಶೋಭಾ ಆಚಾರ್ಯ ,ವಿದ್ವಾನ್‌ ಶಂಭುದಾಸ್‌ ಗುರೂಜಿ, ಪ್ರಾಂಶುಪಾಲ ಗುರುದತ್ತ ಸೋಮಯಾಜಿ , ಸರ್ವ ಸದಸ್ಯರು ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಮುನಿಯಾಲು ಆಯುರ್ವೇದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎನ್ಎಸ್ಎಸ್ ವತಿಯಿಂದ ಪೌಷ್ಟಿಕ ಆಹಾರ, ಸ್ವಚ್ಛತೆಯ ಬಗ್ಗೆ ಮಕ್ಕಳಿಗೆ ಜಾಗೃತಿ ಕಾರ್ಯಕ್ರಮ

Thumbnail
Posted On: 09 Jun 2022, 11:06 PM

ಉಡುಪಿ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಂಚಿಕೊಡಿ ಇಲ್ಲಿ ಜೂನ್ 08 ರಂದು ಮುನಿಯಾಲು ಆಯುರ್ವೇದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಎನ್ಎಸ್ಎಸ್ ಘಟಕದ ವತಿಯಿಂದ ಪೌಷ್ಟಿಕ ಆಹಾರ ಮತ್ತು ಸ್ವಚ್ಛತೆಯ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾದ ಡಾ. ಅರ್ಚನಾ ಇವರು ಪೌಷ್ಟಿಕ ಆಹಾರ ಮತ್ತು ಸ್ವಚ್ಛತೆಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಿದರು. ಇವರು ಮಕ್ಕಳಿಗೆ ದಿನನಿತ್ಯ ಜೀವನ ಶೈಲಿ, ಬಿಸಿನೀರು ಕುಡಿಯುವುದು, ಎಣ್ಣೆ ಹಚ್ಚಿ ಸ್ನಾನಮಾಡುವುದರ ಮಹತ್ವವನ್ನು ತಿಳಿಸಿಕೊಟ್ಟರು. ನಮ್ಮ ಅರೋಗ್ಯವನ್ನು ಕಾಪಾಡಿಕೊಳ್ಳಲು ದಿನನಿತ್ಯ ಸೊಪ್ಪು, ತರಕಾರಿಯನ್ನು ಸೇವಿಸಬೇಕೆಂದು ತಿಳಿಸಿದರು. ಹಾಗೆಯೇ ದಿನನಿತ್ಯ ವಿಟಮಿನ್ಯುಕ್ತ ಆಹಾರ ಮತ್ತು ಕಬ್ಬಿಣಅಂಶ ಇರುವ ಆಹಾರವನ್ನು ಸೇವಿಸಬೇಕು. ಪ್ರತಿದಿನ 2 ಲೋಟ ಹಾಲನ್ನು ಕುಡಿಯಬೇಕು ಎಂದು ತಿಳಿಸಿ, ಬೆಲ್ಲದ ಪ್ರಾಮುಖ್ಯತೆಯನ್ನು ಹಾಗೂ ಒಂದೆಲಗದ ಪ್ರಾಮುಖ್ಯತೆಯನ್ನು ತಿಳಿಸಿ ಕೊಟ್ಟರು. ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಔಷಧಿ ಗಿಡವನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಆಶಾಲತಾ, ಎನ್ಎಸ್ಎಸ್ ಅಧಿಕಾರಿಗಳಾದ ಡಾ. ಸುದೀಪ್ ಹಾಗೂ ಡಾ. ಅರ್ಚನಾ ಅವರು ಉಪಸ್ಥಿತರಿದ್ದರು.

ಪಡುಬಿದ್ರಿ ರೋಟರಿ ಕ್ಲಬ್ ಗೆ ಗವರ್ನರ್ ಭೇಟಿ - ವಿವಿಧ ಸಮಾಜಮುಖಿ ಕಾರ್ಯಗಳ ಉದ್ಘಾಟನೆ

Thumbnail
Posted On: 07 Jun 2022, 10:31 PM

ಪಡುಬಿದ್ರಿ : ಇಲ್ಲಿನ ರೋಟರಿ ಕ್ಲಬ್ ಗೆ ಗವರ್ನರ್ ಭೇಟಿ ನೀಡಿ ವಿವಿಧ ಸಮಾಜಮುಖಿ ಕಾರ್ಯಗಳನ್ನು ಉದ್ಘಾಟಿಸಿದರು. ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ನಾಮಫಲಕ , ದಾರಿ ಸೂಚಕ ನಾಮಫಲಕ , ಅಂಗನವಾಡಿ ಕೇಂದ್ರ ಪಡುಬಿದ್ರಿ ಪುನರ್ ಪೈಂಟಿಂಗ್, ವಿಶ್ವ ಪರಿಸರ ದಿನಾಚರಣೆ, ಬ್ಲೂ ಫ್ಲಾಗ್ ಬೀಚಿನಲ್ಲಿ ನಾಮಫಲಕದ ಅನಾವರಣಗೊಳಿಸಲಾಯಿತು. ರೋಟೇರಿಯನ್ ಪಿಎಚ್ಎಫ್ ಎಂಜಿ ರಾಮಚಂದ್ರಮೂರ್ತಿ ಡಿಸ್ಟ್ರಿಕ್ ಗವರ್ನರ್ ಮಾತನಾಡಿ ಪಡುಬಿದ್ರಿ ರೋಟರಿ ಕ್ಲಬ್ ನ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಪಡುಬಿದ್ರಿ ರೋಟರಿ ಕ್ಲಬ್ ಜನಸೇವೆ ಮಾಡುತ್ತಾ ಮನೆಮಾತಾಗಿದ್ದಾರೆ ಇದನ್ನು ಮುಂದುವರಿಸಿಕೊಂಡು ಬರಬೇಕಾಗಿ ಕೇಳಿಕೊಂಡರು. ಅಸಿಸ್ಟೆಂಟ್ ಗವರ್ನರ್ ಆದ ರೋಟೇರಿಯನ್ ಪಿಎಚ್ಎಫ್ ಡಾ.ಅರುಣ್ ಹೆಗ್ಗಡೆಯವರು ಸ್ಪಂದನ ಗ್ರಹ ಪತ್ರಿಕೆಯನ್ನು ಉದ್ಘಾಟಿಸಿ ಮಾತನಾಡಿ ತರುಣರ ಕ್ಲಬ್ ಪಡುಬಿದ್ರಿ ರೋಟರಿ ಶಿಸ್ತಿನ ಕ್ಲಬ್ ಎಂದು ಕೊಂಡಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ವಲಯ ಸೇನಾನಿ ಅನಿಲ್ ಡೆಸ ಶುಭಾಶಯ ಕೋರಿದರು. ಸಾರ್ವಜನಿಕ ಸಮಾರಂಭದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಮೊಹಮ್ಮದ್ ನಿಯಾಜ್ ಅಧ್ಯಕ್ಷತೆವಹಿಸಿಕೊಂಡರು. ಸುಧಾಕರ್ ಕೆ ಹಾಗೂ ಸಂತೋಷ್ ಕಾರ್ಯಕ್ರಮ ನಿರೂಪಿಸಿದರು. ಬಿ ಎಸ್ ಆಚಾರ್ಯ ವರದಿ ವಾಚಿಸಿ, ವಂದಿಸಿದರು.

ಸ್ಪರ್ಧಾತ್ಮಕ ಪರೀಕ್ಷೆ - ಗಣಿತ ತರಬೇತಿ ಕಾರ್ಯಾಗಾರ

Thumbnail
Posted On: 07 Jun 2022, 09:45 PM

ಶಿರ್ವ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಕರು ಯಾವುದೇ ಪರೀಕ್ಷೆಯನ್ನು ಎದುರಿಸಬೇಕಾದದಲ್ಲಿ ಅವರಲ್ಲಿ ಪರೀಕ್ಷೆಯ ಸಂಪೂರ್ಣ ಮಾಹಿತಿ, ಮಾರ್ಗದರ್ಶನವನ್ನು ಪಡೆದು ಪೂರ್ವಸಿದ್ಧತೆಯನ್ನು ಮಾಡಿದ್ದಲ್ಲಿ ಮುಂದೆ ಎಂಥಾ ಸವಾಲುಗಳನ್ನು ಎದುರಿಸುವ ಗುಣಗಳನ್ನು ಪಡೆಯಬಹುದು. ಕಠಿಣ ಪರಿಶ್ರಮದ ಜೊತೆಗೆ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಕೌಶಲ್ಯಗಳನ್ನು ಅರಿತುಕೊಂಡು ಪ್ರಯತ್ನ ಪಡುವ ಮೂಲಕ ಉದ್ಯೋಗವನ್ನು ಪಡೆದು ಅವರ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಇಂತಹ ಕಾರ್ಯಗಾರಗಳು ಅತ್ಯಗತ್ಯ ಎಂದು ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿದರು. ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗ ಹಾಗೂ ಐಟಿ ಕ್ಲಬ್ ಜಂಟಿಯಾಗಿ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕೋಟೇಶ್ವರ, ಇಸಿಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ನಾ ಗಣಿತ ಉಪನ್ಯಾಸಕಿ ಪ್ರಣಿತರವರು ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಪಟ್ಟಂತ ಗಣಿತ ವಿಷಯದ ಬಗ್ಗೆ ವಿವರಣೆ ನೀಡಿ ಪ್ರಾತ್ಯಕ್ಷಿಕೆಯ ಮೂಲಕ ತರಬೇತಿ ನೀಡಿದರು. ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಐಟಿ ಕ್ಲಬ್ ನಿರ್ದೇಶಕರಾದ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ರವರು ಕಾರ್ಯಕ್ರಮದ ಉದ್ದೇಶ ಮತ್ತು ಪ್ರಾಮುಖ್ಯತೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಮೂಲಕ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಬಿಸಿಎ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿಗಳು ವಿವಿಧ ಕ್ಯಾಂಪಸ್ನಲ್ಲಿ ಆಯ್ಕೆ ಆದ ಪ್ರೀತಿಕಾ,ವಿಧಾತ ಶೆಟ್ಟಿ, ಪ್ರಜ್ವಲ್, ಪ್ರತ್ವಿನ್ ಬಂಗೇರ, ದೇವಿಪ್ರಸಾದ್ ಶೆಟ್ಟಿ, ಪ್ರಿಯಾಂಕ ಆಚಾರ್ಯ, ಸುರೇಖಾ ರಾವ್, ಶಮಿತಾ ಶೆಟ್ಟಿ , ದ್ಯುತಿಶ್ರೀ, ಹಾರ್ದಿಕ ಸಾಲಿಯಾನ್, ದೀಕ್ಷಾ ಪಿಜಿ ಯವರನ್ನು ಅಭಿನಂದಿಸಲಾಯಿತು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ದಿವ್ಯಶ್ರೀ ಬಿ, ಪ್ರಕಾಶ್, ಬಿಸಿಎ ವಿಭಾಗದ ಎಲ್ಲಾ ಅಧ್ಯಾಪಕ ಅಧ್ಯಾಪಕೇತರರು , ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಅನುಪ್ ನಾಯಕ ಹಾಗೂ ಅಲಿಸ್ಟರ್ ಸುಜಾಯ್ ಡಿಸೋಜಾ ಸಹಕರಿಸಿದರು. ಸುಪ್ರಿಯ ಪ್ರಾರ್ಥಿಸಿದರು. ಸಹನ ಶೆಟ್ಟಿ ಸ್ವಾಗತಿಸಿ, ಶ್ವೇತಾ ಕಾರ್ಯಕ್ರಮ ಸಂಯೋಜಿಸಿದರು. ಪ್ರತಿಕ್ಷ ವಂದಿಸಿದರು.

ಶ್ರೀ ಆನೆಗುಂದಿ ಸರಸ್ವತೀ ಪೀಠ ಸೂರ್ಯಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ನಲ್ಲಿ ಪೋಷಕರ ಸಭೆ

Thumbnail
Posted On: 06 Jun 2022, 09:31 PM

ಕಾಪು : ಶ್ರೀ ಆನೆಗುಂದಿ ಮೂಲಗುರು ಪರಂಪರಾ ಪರಮ ಪೂಜ್ಯನೀಯ ಜಗದ್ಗುರುಗಳ ದಿವ್ಯ ಉಪಸ್ಥಿಯಲ್ಲಿ ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ನ ಪ್ರಸಕ್ತ ಶೈಕ್ಷಣಿಕ ವರ್ಷದ ಪ್ರಥಮ ಪೋಷಕರ ಸಭೆಯು ಜೂನ್ 4ರಂದು ಶ್ರೀ ಆನೆಗುಂದಿ ಮಠ ಸೂರ್ಯಚೈತನ್ಯ ಶಾಲಾ ಸಭಾಂಗಣದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪರಮಪೂಜ್ಯ ಜಗದ್ಗುರು ಅನಂತಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮಿಗಳವರು ಕಾರ್ಯಕ್ರಮ ಉದ್ಘಾಟಿಸಿ ಆಶೀರ್ವಚನ ನೀಡಿದರು. ಶಿಕ್ಷಣದಿಂದ ಸಮಾಜದ ಅಭಿವೃದ್ಧಿ ಸಾಧ್ಯ. ಸೂರ್ಯ ಚೈತನ್ಯ ಹೈಸ್ಕೂಲ್ ಮುಂದಿನ ವರ್ಷಗಳಲ್ಲಿ ಮಾದರಿ ಶಾಲೆಯಾಗಿ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಅತ್ಯುನ್ನತ ಸಾಧನೆ ತೋರುತ್ತದೆ ಎಂದು ಶ್ರೀಗಳು ನುಡಿದರು. ವೇದಿಕೆಯಲ್ಲಿ ಮೋಹನ್ ಕುಮಾರ್ ಬೆಳ್ಳೂರು, ಪ್ರಾಂಶುಪಾಲ ಗುರುದತ್ ಸೋಮಯಾಜಿ, ಶಾಲೆಯ ಅಧ್ಯಾಪಕ ವೃಂದ, ಶಂಭುದಾಸ್ ಗುರೂಜಿ , ಆನೆಗುಂದಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಲೋಕೇಶ್ ಆಚಾರ್ಯ ಕಂಬಾರ್, ಆನೆಗುಂದಿ ಶ್ರೀ ಸರಸ್ವತೀ ಎಜುಕೇಷನ್ ಟ್ರಸ್ಟ್ (ಅಸೆಟ್) ನ ನೂತನ ಆಡಳಿತ ಮಂಡಳಿಯ ಉಪಾಧ್ಯಕ್ಷರಾದ ವಿವೇಕ್ ಆಚಾರ್ಯ ಶಿರ್ವ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕೋಶಾಧ್ಯಕ್ಷರಾದ ಸೂರ್ಯಕುಮಾರ್ ಹಳೆಯಂಗಡಿ , ಪ್ರಧಾನ ಕಾರ್ಯದರ್ಶಿಗಳಾದ ಗುರುರಾಜ ಆಚಾರ್ಯ ಮಂಗಳೂರು, ಪೋಷಕರು, ವಿದ್ಯಾರ್ಥಿಗಳು ಮತ್ತು ವಿದ್ಯಾಭಿಮಾನಿಗಳು ಪಾಲ್ಗೊಂಡಿದ್ದರು. ಆಡಳಿತ ಮಂಡಳಿ ಹಾಗೂ ಪೋಷಕರ ಜೊತೆ ಶೈಕ್ಷಣಿಕ ಸಂವಾದ, ತದನಂತರ ಶಾಲಾಭಿವೃದ್ಧಿಗೆ ಆಡಳಿತ ಮಂಡಳಿ ಕೈಗೊಂಡ ಯೋಜನೆಗಳ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಶಿಕ್ಷಕಿ ರಾಜಲಕ್ಷ್ಮಿ ಅಜಯ್ ಕಾರ್ಯಕ್ರಮ ನಿರೂಪಿಸಿದರು.