Updated News From Kaup
ಟೀಮ್ ಮೋದಿ ಕಾಪು ವಲಯದಿಂದ ನಾಳೆ ಮಹಾರುದ್ರಯಾಗ
Posted On: 02-03-2022 08:25PM
ಕಾಪು :ಪ್ರಧಾನಿ ನರೇಂದ್ರ ಮೋದಿಯವರ ಆರೋಗ್ಯ ವೃದ್ಧಿ, ಹಿಂದುತ್ವದ ಮತ್ತು ಹಿಂದೂ ಕಾರ್ಯಕರ್ತರ ಶ್ರೇಯೋಭಿವೃದ್ಧಿಗಾಗಿ ಮಹಾರುದ್ರಯಾಗವು ಟೀಮ್ ಮೋದಿ ಕಾಪು ವಲಯದ ವತಿಯಿಂದ ಯಶ್ ಪಾಲ್ ಸುವರ್ಣರ ಸಹಕಾರದೊಂದಿಗೆ ಮಾಚ್೯ 3ರಂದು ಕಾಪು ತಾಲೂಕಿನ ಮಡುಂಬು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರಗಲಿದೆ.
ಉಡುಪಿ ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘದಿಂದ ಮುದ್ರಕರ ದಿನಾಚರಣೆ
Posted On: 02-03-2022 05:45PM
ಉಡುಪಿ : ಜಿಲ್ಲಾ ಮುದ್ರಣಾಲಯಗಳ ಮಾಲಕರ ಸಂಘ ಉಡುಪಿ ಇದರ ವತಿಯಿಂದ ಮುದ್ರಕರ ದಿನಾಚರಣೆಯು ಅಮೃತ್ ಗಾರ್ಡನ್ ನಲ್ಲಿ ಜರಗಿತು.
ಆಟವಾಡಲು ಹೋಗಿ ಕಾಣೆಯಾದ ಬಾಲಕ ಶವವಾಗಿ ಪತ್ತೆ
Posted On: 28-02-2022 11:21PM
ಮಂಗಳೂರು : ಮನೆಯ ಹತ್ತಿರದ ಆಟದ ಮೈದಾನಕ್ಕೆ ಕ್ರಿಕೆಟ್ ಆಟಕ್ಕೆ ತೆರಳಿದ ಬಾಲಕ ಮನೆಗೆ ಬಾರದಿದ್ದನ್ನು ಕಂಡು ಕಾಣೆಯಾದ ಬಗ್ಗೆ ಬಾಲಕನ ತಾಯಿ ದೂರು ನೀಡಿದ್ದರು. ಸಂಜೆಯ ವೇಳೆ ಹೊಯ್ಗೆ ಬಜಾರ್ ಬಳಿಯ ನೇತ್ರಾವತಿ ನದಿಯಲ್ಲಿ ಬಾಲಕನ ಶವ ಪತ್ತೆಯಾದ ಘಟನೆ ಪಾಂಡೇಶ್ವರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇ ಸಮುದಾಯ್ ಆಪ್ ಡೌನ್ಲೋಡ್ ಮಾಡಿ - ನಿಮಗೆ ಬೇಕಾದ ದಿನಸಿ, ಆಹಾರ ಪದಾರ್ಥಗಳು ಮನೆ ಬಾಗಿಲಿಗೆ
Posted On: 28-02-2022 10:43PM
ಕಾಪು : ಸಾರ್ವಜನಿಕರಿಗೆ ಬೇಕಾದ ದಿನಸಿ ವಸ್ತುಗಳು, ಆಹಾರ ಪದಾರ್ಥ, ತಿಂಡಿತಿನಿಸುಗಳನ್ನು ಮನೆ ಬಾಗಿಲಿಗೆ ತಲುಪಿಸುವ ಸೇವೆಯು ಇದೀಗ ಕಾಪುವಿನಲ್ಲಿ ಪ್ರಾರಂಭವಾಗಿದೆ.
ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಪ್ರಾಜೆಕ್ಟ್ ಅಭಿವೃದ್ಧಿ ಕಾರ್ಯಗಾರ
Posted On: 28-02-2022 05:47PM
ಶಿರ್ವ: ಇಂದಿನ ತಂತ್ರಜ್ಞಾನ ಯುಗದಲ್ಲಿ ಕಂಪ್ಯೂಟರ್ ಪದವೀಧರ ವಿದ್ಯಾರ್ಥಿಗಳು ಬದಲಾಗುತ್ತಿರುವ ತಂತ್ರಜ್ಞಾನ ಕಲಿಕೆಯು ಕಾಲೇಜು ಹಂತದಲ್ಲಿ ಕಲಿಯುವ ಮೂಲಕ ಮುಂದೆ ಸಮಾಜಕ್ಕೆ ಬೇಕಾಗುವ ನುರಿತ ತಂತ್ರಾಂಶವನ್ನು ರೂಪಿಸಲು ಮತ್ತು ಸಂಶೋಧನಾ ಮನಸ್ಥಿತಿಯನ್ನು ಬೆಳೆಸಲು ಇಂತಹ ಕಾರ್ಯಗಾರ ಸಹಕಾರಿ ಎಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದ ಗಣಕ ವಿಜ್ಞಾನ ವಿಭಾಗದ ವತಿಯಿಂದ ಬಿಸಿಎ ವಿದ್ಯಾರ್ಥಿಗಳಿಗೆ ಫೆಬ್ರವರಿ 28ರಂದು ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ಏರ್ಪಡಿಸಿದ ಸಾಫ್ಟ್ವೇರ್ ಪ್ರಾಜೆಕ್ಟ್ ಅಭಿವೃದ್ಧಿ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಿಪ್ರೋ ಕಂಪನಿಯ ಜೂನಿಯರ್ ಅಸೋಸಿಯೇಟ್ ರಿಯಾನ್ ರಿಷಿ ಅಲ್ಫೋನ್ಸೋ ಮಾತನಾಡಿದರು.
ಶಿವರಾತ್ರಿ - ಶರ್ವನಿಗೆ ಶರಣಾರ್ಥಿಯ ಶರಣು
Posted On: 28-02-2022 05:30PM
ಶಿವ ಶರಣರು , ದಾಸರು ಶಿವನನ್ನು ಕಂಡ ಬಗೆ ವಿಶಿಷ್ಟವಾದುದು : • ಜಗವು ಶಿವನೊಳಗುಂಟು ಜಗದೊಳು ಶಿವನಿಲ್ಲ ಜಗವು ಶಿವನಿಂದ ಬೇರಿಲ್ಲ ಈ ಬೆಡಗ ಅಘಹರನೇ ಬಲ್ಲ ಸರ್ವಜ್ಞ' 'ತ್ರಿಪದಿ ಕವಿ ಸರ್ವಜ್ಞನ ನಿರೂಪಣೆಯಂತೆ ಜಗವು ಶಿವನಿಂದ ಬೇರಿಲ್ಲ'. • 'ರಾತ್ರಿಯೊಳು ಶಿವರಾತ್ರಿ' ಎಂದೂ ಸರ್ವಜ್ಞ ಉದ್ಗರಿಸಿದ್ದಿದೆ . • ಶಿವರಾತ್ರಿಯ ಜಾಗರಣೆಯಲ್ಲಿ ತನಗೆ ಶಿವ ದರ್ಶನವಾದುದನ್ನು ದಾಸವರೇಣ್ಯ ಪುರಂದರದಾಸರು ಹಾಡುತ್ತಾರೆ . • ಭಕ್ತಿ ಭಂಡಾರಿ ಬಸವಣ್ಣನವರಿಗೆ ಶಿವ ಎಲ್ಲೆಲ್ಲೂ ಕಾಣುತ್ತಾನೆ ,ವಿಶ್ವವೇ ಶಿವಮಯವಾಗಿ ಭಾಸವಾಗುತ್ತದೆ .ತ್ರಿನಯನನ ಕಣ್ಣಿನ ಕಾಂತಿಯ ಬೆಳಕಿನಿಂದಲೇ ಓಡಾಡುತ್ತಾರೆ ಬಸವಣ್ಣನವರು. • 'ಚೆನ್ನಮಲ್ಲಿಕಾರ್ಜುನಯ್ಯ ,ಆತ್ಮ ಸಂಗಾತಕ್ಕೆ ನೀನೆನಗುಂಟು', ಎನ್ನುತ್ತಾ ಸಂಸಾರ ತ್ಯಾಗ ಮಾಡಿ ಹೊರಟಳು ಮಹಾಶಿವಶರಣೆ ಅಕ್ಕಮಹಾದೇವಿ.
ಪಲ್ಸ್ ಪೋಲಿಯೋ : ರೋಟರಿ ಕಲ್ಯಾಣಪುರ ಅಧ್ಯಕ್ಷರಿಂದ ಚಾಲನೆ
Posted On: 27-02-2022 10:30PM
ಉಡುಪಿ : ರೋಟರಿ ಕಲ್ಯಾಣಪುರದ ವ್ಯಾಪ್ತಿಯಲ್ಲಿ ನಡೆದ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಸಂಸ್ಥೆಯ ಅಧ್ಯಕ್ಷರಾದ ಶಂಭು ಶಂಕರ್ ಹಾಗೂ ನಿರಂತರವಾಗಿ 25ವರ್ಷಗಳಿಂದ ಈ ಸಂಸ್ಥೆಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಿರ್ದೇಶಕರಾಗಿ ನಿಸ್ವಾರ್ಥ ಸೇವೆ ಸಲ್ಲಿಸುತ್ತ ಬಂದಿರುವ ಗಿರಿಧರ್ ಬಾಳಿಗ ನೇತೃತ್ವದಲ್ಲಿ ಫೆಬ್ರವರಿ 27ರಂದು ಸರ್ಕಾರದ ಪೋಲಿಯೋ ಲಸಿಕಾ ಕಾರ್ಯಕ್ರಮ ಯಶಸ್ವಿಯಾಗಿ ನಿರ್ವಹಿಸಲಾಯಿತು.
ಇನ್ನಂಜೆ : 14ನೇ ಶತಮಾನದ ಶಿಲಾಶಾಸನ ಪತ್ತೆ
Posted On: 27-02-2022 10:00PM
ಕಾಪು : ಇನ್ನಂಜೆ ಗ್ರಾಮದ ಕುಂಜಾರ್ಗ ಪ್ರಭು ಕುಟುಂಬದ ಬ್ರಹ್ಮಸ್ಥಾನದ ಪಶ್ಚಿಮದಲ್ಲಿರುವ ಗದ್ದೆಯಲ್ಲಿ ಶಿಲಾಶಾಸನವೊಂದು ಪತ್ತೆಯಾಗಿದೆ.
ಜಾನಪದ ಸಂಶೋಧಕ ಕೆ.ಎಲ್.ಕುಂಡಂತಾಯರಿಗೆ ವಿಶೇಷ ಸಾಧನಾ ಪ್ರಶಸ್ತಿ ಗೌರವ
Posted On: 27-02-2022 09:47PM
ಮಂಗಳೂರು : ಕಾಸರಗೋಡು ಜಿಲ್ಲೆ ಪೆರ್ಲದ ಪಡ್ರೆ ಚಂದು ಸ್ಮಾರಕ ಯಕ್ಷಗಾನ ನಾಟ್ಯ ತರಬೇತಿ ಕೇಂದ್ರ ಇದರ ಹದಿನೇಳನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ, ಮಕ್ಕಳ ಯಕ್ಷಗಾನ ಬಯಲಾಟದ ವಾರ್ಷಿಕ ಕಲಾಪದಲ್ಲಿ ಫೆಬ್ರವರಿ 26ರಂದು ಜಾನಪದ ಸಂಶೋಧಕ,ಕಟೀಲಿನ ಯಕ್ಷಪ್ರಭಾ ಪತ್ರಿಕೆಯ ಸಂಪಾದಕ ಕೆ.ಎಲ್.ಕುಂಡಂತಾಯರಿಗೆ "ವಿಶೇಷ ಸಾಧನಾ ಪ್ರಶಸ್ತಿ" ನೀಡಿ ಗೌರವಿಸಲಾಯಿತು.
ಹಿರಿಯ ಪತ್ರಕರ್ತ ಟಿ ಪಿ ಮಂಜುನಾಥ್ ಅವರಿಗೆ ಬಿ ಅಪ್ಪಣ್ಣ ಹೆಗಡೆ ಜೀವಮಾನ ಸಾಧನ ಪ್ರಶಸ್ತಿ
Posted On: 27-02-2022 09:14PM
ಕುಂದಾಪುರ: ಓಂ ಶಾಂತಿ ಪ್ರೊಡಕ್ಷನ್ ಕೋಟೇಶ್ವರ ಕುಂದಾಪುರ ತಾಲೂಕು ಪತ್ರಕರ್ತರ ಸಂಘ ಆಶ್ರಯದಲ್ಲಿ ಮಾಚ್೯ 1 ರಂದು ಸಂಜೆ 5:30 ಕ್ಕೆ ಹೊಡೆ ಹೋಬಳಿ ಹನುಮನ್ ಗ್ಯಾರೇಜ್ ಸಮೀಪದಲ್ಲಿರುವ ಪ್ರೆಸ್ ಕ್ಲಬ್ ವಠಾರದಲ್ಲಿ ಶಿವರಾತ್ರಿ ಆಧ್ಯಾತ್ಮ ಸಂದೇಶ, ತಾಲೂಕು ಪತ್ರಕರ್ತರ ಸಂಘದ ಮೂರನೇ ವಾರ್ಷಿಕ ಸಂಭ್ರಮ ಜರಗಲಿದೆ.
