Updated News From Kaup

ಓಮಸತ್ವ ನೀಡುವ ನೆಪದಲ್ಲಿ ಒಂಟಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನ

Posted On: 04-02-2022 05:09PM

ಮಂಗಳೂರು : ಇಲ್ಲಿನ ಹೊರವಲಯದ ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ‌ವಿಧವೆ ಮಹಿಳೆಯೊಬ್ಬರ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ್ದು, ಈ ವೇಳೆ ಸ್ಥಳೀಯರ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ಗೂಸಾ ತಿಂದು ಪೋಲಿಸರ ಅತಿಥಿಯಾದ ಘಟನೆ ನಡೆದಿದೆ.

ಬಂಧಿತ ಆರೋಪಿಯನ್ನು ಮೊಹಮ್ಮದ್ ಇಕ್ಬಾಲ್ ಕೆಂಚನಕೆರೆ‌ ಎಂದು ಗುರುತಿಸಲಾಗಿದೆ.

ಘಟನೆಯ ವಿವರ‌: ಬಜ್ಪೆ ಠಾಣಾ ವ್ಯಾಪ್ತಿಯ ಕಂದಾವರ ಗ್ರಾಮ ಪಂಚಾಯತ್ ನ ಕಜೆಪದವು ಎಂಬಲ್ಲಿ ಔಷಧಿ ಮಾರುವ ನೆಪದಲ್ಲಿ‌ ಮನೆಗೆ ಬಂದ ಆರೋಪಿ ಓಮಸತ್ವ ನೀಡುವ ನೆಪದಲ್ಲಿ ಮನೆಯಲ್ಲಿದ್ದ ವಿಧವೆ ಒಂಟಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಈ ವೇಳೆ ಆ ಒಂಟಿ ಮಹಿಳೆ ಕಿರುಚಿದ್ದು, ಸಾರ್ವಜನಿಕರು ಕೂಡಲೇ ಮನೆ ಬಳಿ ಜಮಾಯಿಸಿದ್ದಾರೆ ಎನ್ನಲಾಗಿದೆ. ನಂತರ ಕಾಮುಕನಿಗೆ ಧರ್ಮದೇಟು ಬಿದ್ದಿದ್ದು, ಬಜ್ಪೆ ಪೋಲಿಸರ ವಶಕ್ಕೆ ಒಪ್ಪಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಪಾಂಡೇಶ್ವರ ಮಹಿಳಾ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮನೆಯಲ್ಲಿ ಒಬ್ಬಂಟಿಯಾಗಿರುವ ಮಹಿಳೆಯರು ಅಪರಿಚಿತರಿಗೆ ವ್ಯಾಪಾರದ ನೆಪದಲ್ಲಿ ಮನೆಯ ಆವರಣ ಪ್ರವೇಶಿಸಲು ಬಿಡದೇ ಜಾಗೃತವಾಗಿರಬೇಕು ಎಂಬ ಒಕ್ಕಣೆಯ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ವಿಶ್ವ ಹಿಂದು ಪರಿಷದ್ ಬಜರಂಗದಳ ಕೊಡಿಬೆಟ್ಟು ಘಟಕದಿಂದ ಪಾದಯಾತ್ರೆ - ನಮ್ಮ ನಡಿಗೆ ಅಮ್ಮನೆಡೆಗೆ

Posted On: 03-02-2022 10:05PM

ಉಡುಪಿ : ವಿಶ್ವ ಹಿಂದು ಪರಿಷದ್ ಬಜರಂಗದಳ ಪೆರ್ಣಂಕಿಲ, ಕೊಡಿಬೆಟ್ಟು ಘಟಕದಿಂದ ಪ್ರಥಮ ವರ್ಷದ ಸಾಮೂಹಿಕ ಪಾದಯಾತ್ರೆ ಕಾರ್ಯಕ್ರಮವಾದ ನಮ್ಮ ನಡಿಗೆ ಅಮ್ಮನೆಡೆಗೆ ಫೆಬ್ರವರಿ 6, ಆದಿತ್ಯವಾರ ಬೆಳಗ್ಗೆ 7.30ಕ್ಕೆ ಪೆರ್ಣಂಕಿಲ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದಿಂದ ಕುಂಜಾರುಗಿರಿ ದುರ್ಗಾದೇವಿ ಸನ್ನಿಧಾನದವರೆಗೆ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವಿಶ್ವ ಹಿಂದು ಪರಿಷದ್ ಬಜರಂಗದಳ ಕೊಡಿಬೆಟ್ಟು ಘಟಕದಿಂದ ಪಾದಯಾತ್ರೆ - ನಮ್ಮ ನಡಿಗೆ ಅಮ್ಮನೆಡೆಗೆ

Posted On: 03-02-2022 10:05PM

< controls src="https://nammakaup.in/application/upload/11133" alt="" --->

< controls src="https://nammakaup.in/application/upload/11133" alt="" --->

< controls src="https://nammakaup.in/application/upload/11133" alt="" --->

ಎಲ್ಲೂರು : ವೀರಾಂಜನೇಯ ದೇವರಿಗೆ ಬೆಳ್ಳಿಯ ಕವಚ ಸಮರ್ಪಣೆ

Posted On: 03-02-2022 09:56PM

ಕಾಪು : ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನ, ಎಲ್ಲೂರು ಇಲ್ಲಿ ಫೆಬ್ರವರಿ 5, ಶನಿವಾರ ಬೆಳಗ್ಗೆ 10.30ಕ್ಕೆ ಶ್ರೀ ವೀರಾಂಜನೇಯ ದೇವರ ಸನ್ನಿಧಿಯಲ್ಲಿ ಕೆ. ಲಕ್ಷ್ಮೀನಾರಾಯಣ ರಾವ್ ಮತ್ತು ಸಹೋದರರು, ಪಡುಕುದುರೆ ಇವರು ಸೇವಾ ರೂಪದಲ್ಲಿ ಶ್ರೀ ವೀರಾಂಜನೇಯ ದೇವರಿಗೆ ಬೆಳ್ಳಿಯ ಕವಚ ಸಮರ್ಪಣೆ ಮಾಡಲಿದ್ದಾರೆ.

ಈ ಪುಣ್ಯಕಾರ್ಯದಲ್ಲಿ ಭಕ್ತಾದಿಗಳು ಭಾಗವಹಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಕ್ರಮವಾಗಿ ಸಾಗಿಸುತ್ತಿದ್ದ ದನದ ಮಾಂಸ ವಶ ; ನಾಲ್ವರ ದಸ್ತಗಿರಿ

Posted On: 03-02-2022 05:17PM

ಮಂಗಳೂರು : ಕಾಸರಗೋಡು ಕಡೆಯಿಂದ ಉಳ್ಳಾಲಕ್ಕೆ ಅಕ್ರಮವಾಗಿ ಇಂದು ಬೆಳಿಗ್ಗೆ 7ಗಂಟೆಗೆ ಮಾರುತಿ ಈಕೋ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1 ಕ್ವಿಂಟಲ್ 60 ಕೆ ಜಿ ದನದ ಮಾಂಸವನ್ನು ಪತ್ತೆ ಹಚ್ಚಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಸರಗೋಡು ತಾಲೂಕು ಬಂದ್ಯೋಡು ಎಂಬಲ್ಲಿನ ಮೊಹಮ್ಮದ್ ಎಂಬವರಿಂದ ದನವನ್ನು ಖರೀದಿಸಿ ಅವರ ಮನೆಯಲ್ಲೇ ದನವನ್ನು ಕಡಿದು ಮಾಂಸ ಮಾಡಿ ಉಳ್ಳಾಲಕ್ಕೆ ತಂದು ಯುಸಿ ಇಬ್ರಾಹಿಂ ಕೋಡಿ ಎಂಬವರ ಕೋಡಿ ಮತ್ತು ಮುಕ್ಕಚ್ಚೇರಿಯಲ್ಲಿರುವ ಬೀಫ್ ಸ್ಟಾಲ್ ನಲ್ಲಿ ಮಾರಾಟ ಮಾಡುವುದಾಗಿದೆ.

ಈಕೋ ಕಾರಿನಲ್ಲಿ ದನದ ಮಾಂಸ ಮೂರು ತಲೆಗಳು ದನದ ಚರ್ಮಗಳು ಪತ್ತೆ ಯಾಗಿರುತ್ತದೆ. ಈ ಪ್ರಕಾರಣದಲ್ಲಿ ನಾಲ್ಕು ಜನ ಆರೋಪಿಗಳಾದ ಮಂಗಳೂರಿನ ಚೆಂಬುಗುಡ್ಡೆ ಪೆರ್ಮನ್ನೂರಿನ ಹುಸೇನ್ (24), ಮಂಜಿಲ್ ಕೋಡಿ ಉಳ್ಳಾಲದ ಮಹಮ್ಮದ್ ಮುಜಾಂಬಿಲ್ (25), ಮಂಜಿಲ್ ಕೋಡಿ ಉಳ್ಳಾಲದ ಮಹಮ್ಮದ್ ಅಮೀನ್ (21), ಕೋಡಿ ಉಳ್ಳಾಲದ ಸೋಹೈಬ್ ಅಕ್ತರ್ (22) ದಸ್ತಗಿರಿ ಮಾಡಲಾಗಿದೆ.

ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಅಂದಾಜು ರೂಪಾಯಿ 3,10,000/- ಆಗಿರುತ್ತದೆ. ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಮ್ ಶಂಕರ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ರವರಾದ ದಿನೇಶ್ ಕುಮಾರ್ ಬಿ ಪಿ ರವರ ಮಾರ್ಗದರ್ಶನದಲ್ಲಿ ನಗರ ಅಪರಾಧ ಪತ್ತೆ ವಿಭಾಗದ ಪೋಲಿಸು ನಿರೀಕ್ಷಕರಾದ ಮಹೇಶ್ ಪ್ರಸಾದ್ ರವರ ನೇತೃತ್ವದಲ್ಲಿ ಪಿ ಎಸ್ ಐ ರಾಜೇಂದ್ರ, ಎ ಎಸ್ ಐ ಮೋಹನ್ ಸಿಬಂದಿಗಳಾದ ಸುಬ್ರಹ್ಮಣ್ಯ ಕೆ. ಎನ್, ಮಣಿ ಎಂ. ಎನ್, ಅಬ್ದುಲ್ ಜಬ್ಬಾರ್, ಸುನಿಲ್ ಕುಮಾರ್ ಹಾಗೂ ಎ ಆರ್ ಎಸ್ ಐ ತೇಜ ಕುಮಾರ್ ಭಾಗವಸಿದ್ದರು.

ಬಹುಮುಖ ಪ್ರತಿಭೆ ರಶ್ಮಿ ಸನಿಲ್ ಗೆ ಆದಿಗ್ರಾಮೋತ್ಸವ ಯುವ ಸಿರಿ ಗೌರವ

Posted On: 03-02-2022 10:53AM

ಮಂಗಳೂರು : ಕಾರ್ಕಳದ ಅಜೆಕಾರ್ ನಲ್ಲಿ ಡಾ || ಶೇಖರ್ ಅಜೆಕಾರ್ ಇವರು ಕಳೆದ 23 ವರುಷಗಳಿಂದ ನಡೆಸಿಕೊಂಡು ಬರುತ್ತಿರುವ ಆದಿ ಗ್ರಾಮೋತ್ಸವ ಎಂಬ ಕಾರ್ಯಕ್ರಮವು ಜನವರಿ 25ರಂದು ಜರುಗಿತು.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ತಲ್ಲೂರು ಶಿವರಾಮ ಶೆಟ್ಟಿ, ಅಧ್ಯಕ್ಷರು ತಲ್ಲೂರು ಫ್ಯಾಮಿಲಿ ಟ್ರಸ್ಟ್ ಇವರು ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವನಾಥ ಶೆಣೈ ಉಡುಪಿ,ಗೌರವಾಧ್ಯಕ್ಷರು ವಿಶ್ವ ಸಂಸ್ಕೃತಿ ಪ್ರತಿಷ್ಠಾನ ಇವರು ವಹಿಸಿದ್ದರು.

ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರು ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭ ಹಲವಾರು ಗಣ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಉದ್ಯೋಗಿ ಮಂಗಳೂರಿನ ರಶ್ಮಿ ಸನಿಲ್ ಇವರಿಗೆ ಬಹುಮುಖ ಪ್ರತಿಭೆಗಾಗಿ ಆದಿಗ್ರಾಮೋತ್ಸವ ಯುವಸಿರಿ ಗೌರವ ನೀಡಿ ಸನ್ಮಾನಿಸಲಾಯಿತು.

ತೀವ್ರ ನಿಗಾ ಘಟಕದಲ್ಲಿರುವ ಪ್ರಖ್ಯಾತ್ ಇನ್ನಂಜೆ ; ದಾನಿಗಳ ಸಹಕಾರದ ನಿರೀಕ್ಷೆಯಲ್ಲಿ

Posted On: 03-02-2022 12:25AM

ಆತ್ಮೀಯ ಓದುಗರೇ ಇನ್ನಂಜೆಯ ದಡ್ಡು ನಿವಾಸಿ ಪ್ರಖ್ಯಾತ್ ಇವರು ಸೆರೆಬ್ರಲ್ ವೆನಸ್ ಸೈನಸ್ ಥ್ರಂಬೋಸಿಸ್ (CVST) ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಮಣಿಪಾಲದ KMC ಆಸ್ಪತ್ರೆಯಲ್ಲಿ ದಾಖಲಾಗಿರುವ ಇವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ಪಡೆಯತ್ತಿದ್ದಾರೆ... ಆರ್ಥಿಕವಾಗಿ ಸಂಕಷ್ಟದಲ್ಲಿರುವ ಇವರ ಕುಟುಂಬಕ್ಕೆ ಚಿಕಿತ್ಸಾ ವೆಚ್ಚವನ್ನು ಭರಿಸುವುದು ಕಷ್ಟಸಾಧ್ಯ.

ಹಾಗಾಗಿ ಇವರ ಕುಟುಂಬಸ್ಥರು ದಾನಿಗಳ ಸಹಾಯ ಹಸ್ತದ ನಿರೀಕ್ಷೆಯಲ್ಲಿದ್ದು ನಮ್ಮ ಕಾಪು ವೆಬ್ ನ್ಯೂಸ್ ಓದುಗರು, ದಾನಿಗಳು ಪ್ರಖ್ಯಾತ್ ತಮ್ಮ ಮನೆ ಮಗನೆಂದು ತಿಳಿದು ಕೈಲಾದ ಆರ್ಥಿಕ ಸಹಾಯವನ್ನು ಇವರ ತಾಯಿಯ ಈ ಕೆಳಗಿನ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕಾಗಿ ವಿನಂತಿ.

ಬ್ಯಾಂಕ್ ಖಾತೆಯ ವಿವರ ಈ ಕೆಳಗಿನಂತಿದೆ. Name : GULABI Bank : CANARA BANK Branch : Shankarapura A/c. No. 02382210015675 IFSC : CNRB0000636

ಡಾ| ಕೆ. ಪ್ರಭಾಕರ್ ಶೆಟ್ಟಿ ವೈಕುಂಠ ಸಮಾರಾಧನೆ - ಸಾವಿರಕ್ಕೂ ಅಧಿಕ ಮಂದಿ ಭಾಗಿ

Posted On: 02-02-2022 08:39PM

ಕಾಪು : ಇತ್ತೀಚಿಗೆ ನಿಧನರಾದ ಜನಾನುರಾಗಿ ವೈದ್ಯ, ಶಿಕ್ಷಣತಜ್ಞ ಡಾ| ಕೆ. ಪ್ರಭಾಕರ ಶೆಟ್ಟಿಯವರ ವೈಕುಂಠ ಸಮಾರಾಧನೆಯು ಇಂದು ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು.

ಈ ಸಂದರ್ಭ ಜರಗಿದ ಶ್ರದ್ಧಾಂಜಲಿ ಸಭೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಪ್ರಭಾಕರ ಶೆಟ್ಟಿಯವರ ಅಸಂಖ್ಯಾತ ಅಭಿಮಾನಿಗಳು ಭಾಗಿಯಾಗಿದ್ದರು.

ಬಾಡಿಗೆ ಮನೆ ತೆರವಲ್ಲಿ ಮಧ್ಯಸ್ಥಿಕೆ ವಹಿಸಿದ ಕಾರಣಕ್ಕೆ ವ್ಯಕ್ತಿಯೋರ್ವರಿಗೆ ತಂಡದಿಂದ ಹಲ್ಲೆ, ಕೊಲೆ ಯತ್ನ

Posted On: 02-02-2022 08:29PM

ಸುರತ್ಕಲ್ : ಇಲ್ಲಿನ ಠಾಣಾ ವ್ಯಾಪ್ತಿಯ ಕಾಟಿಪಳ್ಳ ಗ್ರಾಮದಲ್ಲಿ ಯುವಕರಿಬ್ಬರು ತಾವು ವಾಸವಿದ್ದ ಬಾಡಿಗೆ ಮನೆ ತೆರವಲ್ಲಿ ಮಧ್ಯಸ್ಥಿಕೆ ವಹಿಸಿದ್ದಾರೆ ಎಂಬ ಕಾರಣದಿಂದ ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸುರತ್ಕಲ್ ಠಾಣೆಯಲ್ಲಿ ದಾಖಲಾಗಿದೆ.

ಮೊಹಮ್ಮದ್ ಅನಾಸ್ ರವರು ಫೆಬ್ರವರಿ 1ರಂದು ರಾತ್ರಿ 11-45ರ ಸುಮಾರಿಗೆ ತಮ್ಮ ಪರಿಚಯದ ಅಬೂಬಕರ್ ಮತ್ತು ಹ್ಯಾರಿಸ್ ರವರ ಬಳಿ ಅವರ ಮನೆಯ ಮುಂದೆ ನಿಂತು ಮಾತನಾಡುತ್ತಿರುವ ಸಮಯ ಆರೋಪಿಗಳಾದ ಚಾರು, ರವೂಫ್, ಅಕಿ, ಮುಸ್ತಫಾ @ ಅಪ್ಪು ಮತ್ತು ಇತರರೊಂದಿಗೆ ಸಮಾನ ಉದ್ದೇಶದಿಂದ ಮಾರಕಾಸ್ತ್ರಗಳೊಂದಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ್ದಾರೆ ಎಂದು ದೂರು ನೀಡಿದ್ದಾರೆ.

ಈ ಬಗ್ಗೆ ಸುರತ್ಕಲ್ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಾಚಿದೇವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Posted On: 01-02-2022 09:04PM

ಉಡುಪಿ : ಮಡಿವಾಳ ಮಾಚಿದೇವರಂತಹ ಮಹಾನ್ ಪುರುಷರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಕರೆ ನೀಡಿದರು. ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ, ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

12 ನೇ ಶತಮಾನದಲ್ಲಿಯೇ ಸಮಾಜದಲ್ಲಿ ನಡೆಯುತ್ತಿದ್ದ ಶೋಷಣೆಯ ವಿರುದ್ಧ ಧ್ವನಿ ಎತ್ತಿದ್ದ ಮಡಿವಾಳ ಮಾಚಿದೇವ ಅವರು, ಮಹಿಳೆಯರಿಗೆ ಸಮಾನತೆ ಕಲ್ಪಿಸಬೇಕೆಂಬ ಅರಿವಿನ ಸಂದೇಶವನ್ನು ನೀಡಿದ್ದರು. ಪ್ರಕೃತಿ ಸೊಬಗನ್ನು ಸಂರಕ್ಷಿಸುವ ಬಗ್ಗೆ ಸಾರಿದ್ದ ಅವರು ಉತ್ತಮ ಪ್ರಕೃತಿಯನ್ನು ಉಳಿಸಿಕೊಂಡರೆ ಅದು ನಮ್ಮನ್ನು ರಕ್ಷಿಸುತ್ತದೆ ಎಂದಿದ್ದರು. ಇದು ಸರ್ವಕಾಲಿಕ್ಕೂ ಹಾಗೂ ಪ್ರಸ್ತುತವಾಗಿದೆ ಎಂದರು.

ಮಡಿವಾಳ ಮಾಚಿದೇವರು ಕಾಯಕ, ನಿಷ್ಠೆಗೆ ಹೆಚ್ಚಿನ ಮಹತ್ವ ನೀಡಿದ್ದು, ಅವರ ಸಂದೇಶಗಳನ್ನು ನಮ್ಮ ದೈನಂದಿನ ಕಾರ್ಯದಲ್ಲಿ ಹಾಗೂ ಕರ್ತವ್ಯದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಜಿಲ್ಲಾ ರಜಕ ಯಾನೆ ಮಡಿವಾಳ ಸಂಘದ ಅಧ್ಯಕ್ಷ ಪ್ರದೀಪ್ ಸಾಗರ್ ಮಾತನಾಡಿ, 12 ನೇ ಶತಮಾನದಲ್ಲಿ ಬಸವಣ್ಣನ ಸಮಕಾಲೀನರಾಗಿದ್ದ ಮಡಿವಾಳ ಮಾಚಿದೇವರು ಅನುಭವ ಮಂಟಪದಲ್ಲಿ ಸಹಾ ಭಾಗಿಯಾಗಿದ್ದರು. ಬದುಕಿಗೆ ಸಾತ್ವಿಕತೆ ನೀಡಿ ಸತ್ಯ, ಶುದ್ಧ ಕಾಯಕ ಕೊಟ್ಟವರಾಗಿದ್ದರು. ಅರಸುತನ ಮೇಲಲ್ಲ ಅಗಸತನ ಕೀಳಲ್ಲ ಎಂಬುವುದನ್ನು ಸಾರಿದ್ದ ಅವರು, ಸಮಾಜದಲ್ಲಿನ ಅಸ್ಪೃಶ್ಯತೆಯ ವಿರುದ್ಧ ಸಮರ ಸಾರಿ, ವಚನ ಸಾಹಿತ್ಯದ ಸಂರಕ್ಷಣೆಗೆ ಮುಂದಾಗಿದ್ದರು ಎಂದರು.

ಇದೇ ಸಂದರ್ಭದಲ್ಲಿ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಿ, ಸರಕಾರದ ಸೌಲಭ್ಯಗಳನ್ನು ಒದಗಿಸಬೇಕೆಂಬ ಮನವಿಯನ್ನು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ವಾರ್ತಾಧಿಕಾರಿ ಬಿ. ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿದ್ದರು.