Updated News From Kaup

ಬಿಜೆಪಿ ಕಾಪು ವಿಧಾನ ಸಭಾ ಕ್ಷೇತ್ರ : ಸಮರ್ಪಣಾ ದಿನ

Posted On: 12-02-2022 08:33PM

ಕಾಪು : ಪಂಡಿತ್ ದೀನ ದಯಾಳ್ ಇವರ ಬಲಿದಾನ ದಿನವಾದ ಇಂದು ಸಮರ್ಪಣಾ ದಿನವನ್ನಾಗಿ ಕಾಪು ಕ್ಷೇತ್ರದ 8 ಮಹಾಶಕ್ತಿಕೇಂದ್ರಗಳಾದ ಪಡುಬಿದ್ರಿ, ಉಚ್ಚಿಲ, ಶಿರ್ವ, ಕಾಪು, ಕುರ್ಕಾಲು, ಉದ್ಯಾವರ, 80 ಬಡಗುಬೆಟ್ಟು ಹಾಗೂ ಪೆರ್ಡೂರಿನಲ್ಲಿ ಆಚರಿಸಲಾಯಿತು.

ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ

Posted On: 11-02-2022 11:42PM

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ರಾಜ್ಯ ಪೊಲೀಸ್ ಇಲಾಖೆಯು ಕರ್ನಾಟಕ ಕೈಗಾರಿಕೆ ಭದ್ರತಾ ಪಡೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ.

ವಿಧಾನ ಪರಿಷತ್​ ಸಭಾನಾಯಕನಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನಾಮನಿರ್ದೇಶನ

Posted On: 11-02-2022 11:30PM

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ವಿಧಾನ ಪರಿಷತ್​ ಸಭಾನಾಯಕನಾಗಿ ನಾಮನಿರ್ದೇಶನ ಮಾಡಲಾಗಿದೆ.

ಉಡುಪಿ ಬೊಬ್ಬರ್ಯ ಯುವಸೇವಾ ಸಮಿತಿಯಿಂದ ಹೊರೆಕಾಣಿಕೆ ಸಮರ್ಪಣೆ

Posted On: 11-02-2022 11:23PM

ಉಡುಪಿ : ಕುಕ್ಕೆಹಳ್ಳಿ ಕೊರಗಜ್ಜ ದೈವಸ್ಥಾನದಲ್ಲಿ ಫೆಬ್ರವರಿ 12ರ ಶನಿವಾರದಂದು ನಡೆಯಲಿರುವ ವಾರ್ಷಿಕ ನೇಮೋತ್ಸವಕ್ಕೆ ಉಡುಪಿ ಬೊಬ್ಬರ್ಯ ಯುವಸೇವಾ ಸಮಿತಿಯಿಂದ ಹೊರೆಕಾಣಿಕೆ ಸಲ್ಲಿಸಲಾಯಿತು.

ನಿರ್ಲಕ್ಷ್ಯತನದ ಚಾಲನೆ ಸ್ಕೂಟರ್ ಸವಾರನಿಗೆ ಗಂಭೀರ ಗಾಯ

Posted On: 11-02-2022 11:17PM

ಮೂಡಬಿದ್ರಿ : ಇಲ್ಲಿನ ವಿದ್ಯಾಗಿರಿ ಎಂಬಲ್ಲಿ ಮೂಲ್ಕಿ ಕ್ರಾಸ್ ರಸ್ತೆಯ ಬಳಿ ಕಾರಿನ ನಿರ್ಲಕ್ಷ್ಯತನದ ಚಾಲನೆಯದ ಸ್ಕೂಟರ್ ಸವಾರನಿಗೆ ಗಂಭೀರ ಗಾಯಗೊಂಡ ಘಟನೆ ಫೆಬ್ರವರಿ 9ರಂದು ನಡೆದಿದೆ.

ಹಿಜಾಬ್- ಕೇಸರಿ ವಿವಾದದ ಹಿನ್ನೆಲೆ-ಕಾಪು ಪೇಟೆಯಲ್ಲಿ ಪೊಲೀಸ್ ಪಥಸಂಚಲನ

Posted On: 11-02-2022 01:28PM

ಕಾಪು : ಹಿಜಾಬ್- ಕೇಸರಿ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕಾಪು ವೃತ್ತ ವ್ಯಾಪ್ತಿಯ ಪೊಲೀಸರು ಕಾಪು ಪೇಟೆಯಲ್ಲಿಂದು ಬೆಳಗ್ಗೆ ಪಥ ಸಂಚಲನ ನಡೆಸಿದರು.

ಪಡುಬಿದ್ರಿ : ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮಹತ್ಯೆ

Posted On: 10-02-2022 06:34PM

ಪಡುಬಿದ್ರಿ : ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಯುವತಿಯೋರ್ವಳು ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುಬಿದ್ರಿ ಬ್ರಹ್ಮಸ್ಥಾನದ ಬಳಿ ನಡೆದಿದೆ.

ಫೆಬ್ರವರಿ 11 -13 : ಉದ್ಯಾವರದಲ್ಲಿ ನಿರಂತರ್ ನಾಟಕೋತ್ಸವ

Posted On: 10-02-2022 12:02PM

ಕಾಪು : ಕಲೆ' ಸಾಹಿತ್ಯ ಮತ್ತು ಕಲಾವಿದರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಆರಂಭವಾಗಿರುವ ನಿರಂತರ್ ಉದ್ಯಾವರ ಸಂಸ್ಥೆಯ ನಾಲ್ಕನೇ ವರ್ಷದ 3 ದಿನಗಳ 'ನಿರಂತರ್ ನಾಟಕೋತ್ಸವ'ವೂ ಇದೇ ಫೆಬ್ರವರಿ 11ರಿಂದ 13ರವರೆಗೆ ಉದ್ಯಾವರ ಸಂತ ಫ್ರಾನ್ಸಿಸ್ ಝೇವಿಯರ್ ದೇವಾಲಯದ ವಠಾರದ ಐಸಿವೈಎಂ ಉದ್ಯಾವರ ಸುವರ್ಣಮಹೋತ್ಸವ ರಂಗಮಂದಿರದಲ್ಲಿ ನಡೆಯಲಿದೆ ಎಂದು ಸಂಘಟನೆಯ ಪ್ರಕಟನೆ ತಿಳಿಸಿದೆ.

ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಂತೋಷ್ ಕುಲಾಲ್ ಪಕ್ಕಾಲು ಆಯ್ಕೆ

Posted On: 09-02-2022 09:04PM

ಕಾಪು : ಪಕ್ಷ ಸಂಘಟನೆಯ ಹೊಣೆಯರಿತ ಜವಾಬ್ದಾರಿ ಮತ್ತು ಸಂಘಟನಾ ಸಾಮರ್ಥ್ಯವನ್ನು ಗುರುತಿಸಿ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆಯವರ ಶಿಪಾರಸ್ಸಿನ ಮೇರೆಗೆ, ಪೆರ್ಡೂರಿನ ಕಾಂಗ್ರೆಸ್ ಮುಖಂಡರಾದ ಶಾಂತಾರಾಮ್ ಸೂಡ ರವರ ಮುತುವರ್ಜಿಯಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ‌.ಶಿವಕುಮಾರ್ ರವರು ಕಾಪು ವಿಧಾನಸಭಾ ಕ್ಷೇತ್ರದ ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಸಂತೋಷ್ ಕುಲಾಲ್ ಪಕ್ಕಾಲು ಅವರನ್ನು ಆಯ್ಕೆ ಮಾಡಲಾಗಿದೆ.

ಆತ್ಮ ರಕ್ಷಣಾ ಕಲೆಯ ಮೂಲಕ ದೌರ್ಜನ್ಯನಿಂದ ರಕ್ಷಣೆ: ಜಯಪ್ರಕಾಶ್ ಹೆಗ್ಡೆ

Posted On: 09-02-2022 08:39PM

ಉಡುಪಿ : ಹೆಣ್ಣುಮಕ್ಕಳು ತಮ್ಮ ಮೇಲೆ ನಡೆಯುವ ದೌರ್ಜನ್ಯದಿಂದ ರಕ್ಷಿಸಿಕೊಳ್ಳಲು ಕರಾಟೆ ಆತ್ಮ ರಕ್ಷಣಾ ಕಲೆಯು ಸಹಕಾರಿಯಾಗಲಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ, ಓಬವ್ವ ಆತ್ಮರಕ್ಷಣೆ ಕಲೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.