Updated News From Kaup
ಮಿಸ್ ಇಂಡಿಯಾ 2022 ಕಿರೀಟ ಮುಡಿಗೇರಿಕೊಂಡ ಸಿನಿ ಶೆಟ್ಟಿ
Posted On: 04 Jul 2022, 12:17 PM
ಉಡುಪಿ : ಮುಂಬೈನ ಜಿಯೋ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ವಿ.ಎಲ್.ಸಿ.ಸಿ ಫೆಮಿನಾ ಇಂಡಿಯಾ 2022 ಸ್ಪರ್ಧೆಯ ಗ್ರಾಂಡ್ ಫಿನಾಲೆಯಲ್ಲಿ ಕಾಪು ತಾಲೂಕಿನ ಇನ್ನಂಜೆಯ ಮಡುಂಬುವಿನ ಸಿನಿ ಶೆಟ್ಟಿ ಅವರ ಮಿಸ್ ಇಂಡಿಯಾ 2022 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಇವರು ಮುಂಬೈಯ ನಿವಾಸಿಯಾಗಿದ್ದು ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದರು. ಪ್ರಸ್ತುತ ಚಾರ್ಟೆಡ್ ಫೈನಾನ್ಸಿಯಲ್ ಅನಾಲಿಸ್ಟ್ ಕೋರ್ಸ್ ನ ವ್ಯಾಸಂಗ ನಡೆಸುತ್ತಿರುವ ಇವರು. 71ನೇ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ತಿಳಿದು ಬಂದಿದೆ. ಇವರು ಕಾಪು ತಾಲೂಕಿನ ಇನ್ನಂಜೆಯ ಮಡುಂಬುವಿನ ಉದ್ಯಮಿ ಸದಾನಂದ ಶೆಟ್ಟಿ ಮತ್ತು ಹೇಮ ಶೆಟ್ಟಿ ದಂಪತಿಗಳ ಪುತ್ರಿ.
ಕಕ್ಕುಂಜೆ : ಕಳವುಗೈದವರ ಬಂಧನ
Posted On: 03 Jul 2022, 05:33 PM
ಉಡುಪಿ : ತಾಲೂಕಿನ ಶಿವಳ್ಳಿ ಗ್ರಾಮದ ಅಂಬಾಗಿಲು ಕಕ್ಕುಂಜೆ ಎಂಬಲ್ಲಿ 9 ಪವನ್ ತೂಕದ ರೂಪಾಯಿ 3,15,000 ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಆರೋಪಿಗಳನ್ನು ಪೋಲಿಸರು ಬಂಧಿಸಿದ್ದಾರೆ. ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಈ ಪ್ರಕರಣವಾಗಿತ್ತು. ಮನೆಯೊಡತಿ ಪ್ರಮೀಳ ಬಂಗೇರರವರು ಮನೆಗೆ ಬರುತ್ತಿದ್ದ ಸಂತೋಷ ಎಂಬಾತನ ಮೇಲೆ ಸಂಶಯ ಇರುವುದಾಗಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳಾದ ಕಕ್ಕುಂಜೆ ಗ್ರಾಮದ ಸಂತೋಷ್ ಪೂಜಾರಿ (36) ಮತ್ತು ಕಟಪಾಡಿ ಮಟ್ಟುವಿನ ರಾಕೇಶ್ ಪಾಲನ್ (37)ನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ, ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಪ್ರಕರಣದಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಮಾನ್ಯ ಪೊಲೀಸ್ ಅಧೀಕ್ಷಕರಾದ ಎನ್. ವಿಷ್ಣುವರ್ಧನ್ ಆದೇಶದಂತೆ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ ಸದಾನಂದ ನಾಯ್ಕ್ ನಿರ್ದೇರ್ಶನದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಮೋದ ಕುಮಾರ್ ಪಿರವರ ಮಾರ್ಗದರ್ಶನದಂತೆ ಪಿ.ಎಸ್.ಐ ಮಹೇಶ್ ಟಿ.ಎಮ್, ಪ್ರಸಾದ್ಕುಮಾರ್ ಕೆ. ಪಿ.ಎಸ್.ಐ ತನಿಖೆ, ಪಿ.ಎಸ್.ಐ ವಾಸಪ್ಪ ನಾಯ್ಕ್, ಹಾಗೂ ಸಿಬ್ಬಂದಿಯವರಾದ ಎ.ಎಸ್.ಐ ಅರುಣ್ , ಸತೀಶ್ ಬೆಳ್ಳೆ , ಕಿರಣ್ ರವರು ಸಹಕರಿಸಿದ್ದರು.
ಯುವಸೇನೆ ಮಡುಂಬು ನೂತನ ಅಧ್ಯಕ್ಷರಾಗಿ ಸುನಿಲ್ ಸಾಲಿಯಾನ್
Posted On: 03 Jul 2022, 04:38 PM
ಇನ್ನಂಜೆ : ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ವಲಯದಲ್ಲಿ ತನ್ನಿಂದ ಆದ ಸೇವೆಯನ್ನು ಮಾಡಿಕೊಂಡು ಇತರ ಸಂಸ್ಥೆಗಳಿಗೆ ಮಾದರಿಯಾಗಿರುವ ಯುವಸೇನೆ ಮಡುಂಬು (Y. S. M Friends) ಇದರ 2022-23ನೇ ಸಾಲಿನ ನೂತನ ಅಧ್ಯಕ್ಷರಾಗಿ ಸುನಿಲ್ ಸಾಲಿಯಾನ್ , ಕಾರ್ಯದರ್ಶಿಯಾಗಿ ಸಚಿನ್ ಸಾಲಿಯಾನ್ ಹಾಗೂ ಕೋಶಾಧಿಕಾರಿಯಾಗಿ ಪೃಥ್ವಿರಾಜ್ ಶೆಟ್ಟಿ ಇವರು ಸರ್ವಾನುಮತದಿಂದ ಆಯ್ಕೆಯಾಗಿರುತ್ತಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು : ಪ್ರವಾಹದ ಕಾರಣ ದೋಣಿಯನ್ನು ದಡದ ಮೇಲೆತ್ತುವಾಗ ನೀರಿನ ರಭಸಕ್ಕೆ ಕೊಚ್ಚಿ ಹೋದ ವ್ಯಕ್ತಿ
Posted On: 03 Jul 2022, 08:04 AM
ಮಂಗಳೂರು : ಅರ್ಕುಳ ಗ್ರಾಮದ ಶಶಿರಾಜ್ ಧಕ್ಕೆ ಯಲ್ಲಿ ಈ ಹಿಂದೆ ಸಾಂಪ್ರದಾಯಿಕ ಮರಳುಗಾರಿಕೆ ನಡೆಸುತ್ತಿದ್ದ ಸಮಯದಲ್ಲಿ ಉಪಯೋಗಿಸುತ್ತಿದ್ದ ದೋಣಿಯನ್ನು ಪ್ರವಾಹದ ಕಾರಣ ದಡಕ್ಕೆ ಮೇಲೆತ್ತುವಾಗ ನೀರಿನ ರಭಸಕ್ಕೆ ದೋಣಿ ಸಮೇತ ಕೊಚ್ಚಿಹೋಗಿ ಇಬ್ಬರು ಪಾರಾದರೆ, ವ್ಯಕ್ತಿಯೋರ್ವನು ಕೊಚ್ಚಿಹೋದ ಘಟನೆ ಅಡ್ಯಾರ್-ಪಾವೂರು ಬ್ರಿಡ್ಜಿನ ಸಮೀಪ ನಡೆದಿದೆ. ನೇತ್ರಾವತಿ ನದಿಯಲ್ಲಿ ವಿಪರೀತ ನೀರು ಇದ್ದು, ಉತ್ತರ ಪ್ರದೇಶ ಮೂಲದವರಾದ ರಾಜು ಸಾಹ್, ಮೊಂತು ಸಾಹ್ ಮತ್ತು ನಾಗೇಂದ್ರ ಕುಮಾರ್ ಸಾಯನಿ ಎಂಬವರುಗಳು ದೋಣಿ ಸಮೇತ ನದಿಯ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿರುತ್ತಾರೆ. ಅದರಲ್ಲಿ ಅಡ್ಯಾರ್-ಪಾವೂರು ಬ್ರಿಡ್ಜಿನ ಅಡಿಯಲ್ಲಿ ಮೊಂತು ಸಾಹ್ ಮತ್ತು ನಾಗೇಂದ್ರ ಕುಮಾರ್ ರವರು ಈಜಿ ದಡ ಸೇರಿದ್ದು, ರಾಜು ಸಾಹ್ ಎಂಬವರು ನೀರಿನ ರಭಸಕ್ಕೆ ನಾಪತ್ತೆಯಾಗಿರುತ್ತಾರೆ. ಆಸಿಫ್ & ಇಸಾಕ್ ಎಂಬವರು ದೋಣಿಯ ಮಾಲಕರಾಗಿರುತ್ತಾರೆ.
ಕಾರವಾರ : ಅಸ್ವಸ್ಥರಾಗಿದ್ದ ಅರವತ್ತು ವರ್ಷ ಪ್ರಾಯದ ವೃದ್ಧನ ರಕ್ಷಣೆ
Posted On: 03 Jul 2022, 07:59 AM
ಉಡುಪಿ : ಹೊಸ ಬೆಳಕು ಆಶ್ರಮ ಮಣಿಪಾಲ ಇವರ ವಿನಂತಿಯ ಮೇರೆಗೆ,ಕಾರವಾರ ಶಹರ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ ತಂಗುದಾಣದಲ್ಲಿ ಅಸ್ವಸ್ಥರಾಗಿದ್ದ ಸುಮಾರು ಅರವತ್ತು ವರ್ಷ ಪ್ರಾಯದ ಒಂಪ್ರಕಾಶ್ ಎಂಬುವವರನ್ನು ಈಶ್ವರ್ ಮಲ್ಪೆರವರು ಸತ್ಯದ ತುಳುವೆರ್ (ರಿ) ಉಡುಪಿ- ಮಂಗಳೂರು ಸಂಸ್ಥೆಯ ಸಂಸ್ಥಾಪಕರಾಗಿರುವ ಪ್ರವೀಣ್ ಕುರ್ಕಾಲುರವರ ಹಾಗು ವಿಜಯ್ ಕೋಟ್ಯಾನ್ ಜೊತೆಗೆ, ಪ್ರಥಮ ಚಿಕಿತ್ಸೆ ಕೊಡಿಸಿ ಮಣಿಪಾಲದ ಹೊಸಬೆಳಕು ಆಶ್ರಮಕ್ಕೆ ಸೇರಿಸಿದರು. ಈ ಸಂದರ್ಭದಲ್ಲಿ ಹೊಸ ಬೆಳಕು ಆಶ್ರಮದ ಮುಖ್ಯಸ್ಥರಾಗಿರುವ ಪೂರ್ಣಿಮ, ವಿನಯಚಂದ್ರ, ಗೌರೀಶ್, ಕಾರವಾರ ಪೊಲೀಸ್ ಠಾಣಾಧಿಕಾರಿ ಹಾಗೂ ಮಲ್ಪೆ ಪೊಲೀಸ್ ಠಾಣಾಧಿಕಾರಿ ಶಕ್ತಿವೇಲು ಸಹಕರಿಸಿದ್ದರು.
ವಿಶ್ವ ವೈದ್ಯರ ದಿನ : ಡಾ. ಉದಯ್ ಕುಮಾರ್ ಶೆಟ್ಟಿಗೆ ಸನ್ಮಾನ
Posted On: 03 Jul 2022, 07:52 AM
ಕಟಪಾಡಿ : ಇಲ್ಲಿಯ ಜನರಿಗೆ ಹಲವಾರು ವರ್ಷಗಳಿಂದ ವೈದ್ಯಕೀಯ ಸೇವೆ ನೀಡುತ್ತಾ ಬಂದಿರುವ ಕಟಪಾಡಿಯ ಹೆಸರಾಂತ ವೈದ್ಯರಾದ ಡಾ. ಉದಯ್ ಕುಮಾರ್ ಶೆಟ್ಟಿಯವರನ್ನು ವಿಶ್ವ ವೈದ್ಯರ ದಿನದಂದು ಸನ್ಮಾನಿಸಲಾಯಿತು. ಈ ಸಂದರ್ಭ ಕಟಪಾಡಿಯ ನವೀನ್ ಪೂಜಾರಿ, ಕಿಶನ್ ಪೂಜಾರಿ, ಪ್ರಭಾಕರ್ ಕೋಟ್ಯಾನ್, ಸತೀಶ್, ರಾಜೇಶ್ ಉಪಸ್ಥಿತರಿದ್ದರು.
ಜಿಲ್ಲೆಯಲ್ಲಿ 10000 ಜನರಿಂದ ಯೋಗಾಭ್ಯಾಸ ಕಾರ್ಯಕ್ರಮ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 02 Jul 2022, 08:01 PM
ಉಡುಪಿ : ಜನಸಾಮಾನ್ಯರಲ್ಲಿ ಯೋಗದ ಮಹತ್ವ ಹಾಗೂ ಅದರಿಂದ ದೇಹಕ್ಕೆ ಆಗುವ ಪ್ರಯೋಜನ ಕುರಿತು ಅರಿವು ಮೂಡಿಸುವುದು ಸೇರಿದಂತೆ ಯೋಗವನ್ನು ನಿತ್ಯ ಜೀವನದ ಒಂದು ಭಾಗವಾಗಿ ಅಳವಡಿಸಿಕೊಳ್ಳಲು ಆಗಸ್ಟ್ 12, 13 ಮತ್ತು 14 ರಂದು ಯೋಗಾಥಾನ್ ಕಾರ್ಯಕ್ರಮವನ್ನು ಜಿಲ್ಲಾಮಟ್ಟದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ ನಲ್ಲಿ, ಜಿಲ್ಲೆಯಲ್ಲಿ ಯೋಗಾಥಾನ್ ಕಾರ್ಯಕ್ರಮ ಏರ್ಪಡಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ನಡೆಯುವ ಯೋಗಾಥಾನ್ ಕಾರ್ಯಕ್ರಮಕ್ಕೆ 10000 ಜನರಿಗೆ ಏಕಕಾಲದಲ್ಲಿ ಒಂದೆಡೆ ತರಬೇತಿ ನೀಡಿ,ಯೋಗವನ್ನು ತಮ್ಮ ದೈನಂದಿನ ಚಟುವಟಿಕೆಗಳನ್ನಾಗಿಸಿಕೊಳ್ಳುವುದರೊಂದಿಗೆ ಉತ್ತಮ ಮಾನಸಿಕ ಮತ್ತು ದೈಹಿಕ ಆರೋಗ್ಯವಂತರನ್ನಾಗಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ , ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಪ್ರಮಾಣಪತ್ರ ನೀಡಲಾಗುವುದು ಎಂದರು. ಯೋಗಾಭ್ಯಾಸಕ್ಕೆ ಸಾರ್ವಜನಿಕರು ಸೇರಲು ಅನುಕೂಲವಾಗುವ ಸೂಕ್ತ ಸ್ಥಳವನ್ನು ಗುರುತಿಸಿ, ಅಲ್ಲಿ ಎಲ್ಲಾ ಅಗತ್ಯ ಮೂಲ ಸೌಕರ್ಯಗಳನ್ನು ಕೈಗೊಳ್ಳಬೇಕು, ಕಾರ್ಯಕ್ರಮದಲ್ಲಿ ಜಿಲ್ಲೆಯ ಯೋಗ ಸಂಸ್ಥೆಗಳು, ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಲು ಅನುಕೂಲವಾಗುವಂತೆ ವಿವಿಧ ಸ್ವಯಂ ಸೇವಾ ಸಂಘಟನೆಗಳ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಕಾರವನ್ನು ಪಡೆಯುವಂತೆ ಸೂಚಿಸಿದರು. ಜಿಲ್ಲೆಯ ಎಲ್ಲಾ ಸಾರ್ವಜನಿಕರು ಈ ಯೋಗಾಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಲು ನೊಂದಣಿ ಮಾಡಲು, ಆನ್ಲೈನ್ ನೊಂದಣಿಯನ್ನು register@yogathon2022.com ಹಾಗೂ ಆಫ್ಲೈನ್ ನೊಂದಣಿಯನ್ನು ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮಾಡಬಹುದಾಗಿದೆ ಎಂದರು. ಯುವಜನರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕಾಲೇಜುಗಳಲ್ಲಿ ಪ್ರಾಂಶುಪಾಲರ ಸಹಕಾರ ಪಡೆಯಬೇಕು.ಯೋಗ ತರಬೇತಿ ನೀಡಲು ಯೋಗ ಶಿಕ್ಷಕರನ್ನು ಗುರುತಿಸಬೇಕು, ಕಾರ್ಯಕ್ರಮಕ್ಕೆ ಶಿಬಿರಾರ್ಥಿಗಳು ಭಾಗವಹಿಸಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು. ಉಡುಪಿ ಜಿಲ್ಲೆ ಘೋಷಣೆಯಾಗಿ 25 ವರ್ಷಗಳು ಸಂಪೂರ್ಣವಾಗುತ್ತಿದ್ದು, ಇದರ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಷನ್ ಕುಮಾರ್ ಶೆಟ್ಟಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಮಲ್ಪೆ : ಅಂಗನವಾಡಿಯಿಂದ 13,900 ರೂ. ಮೌಲ್ಯದ ವಸ್ತುಗಳ ಕಳ್ಳತನ
Posted On: 02 Jul 2022, 07:46 PM
ಮಲ್ಪೆ: ಇಲ್ಲಿಯ ಕೊಳ -1ರಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಸುಮಾರು 13,900 ಮೌಲ್ಯದ ವಸ್ತುಗಳ ಕಳವುಗೈದ ಘಟನೆ ನಡೆದಿದೆ. ಪ್ರತಿದಿನ ಅಂಗನವಾಡಿ ಶಿಕ್ಷಕಿ ಬೆಳಿಗ್ಗೆ 09:30ಕ್ಕೆ ಅಂಗನವಾಡಿಗೆ ಬಂದು, ಕರ್ತವ್ಯ ನಿರ್ವಹಿಸಿ ಸಂಜೆ 4:30 ಗಂಟೆಗೆ ಬಾಗಿಲು ಹಾಕಿ ಹೋಗುತ್ತಿದ್ದು , ಜುಲೈ 1ರಂದು ಜಿಲ್ಲಾಧಿಕಾರಿಗಳ ಆದೇಶದಂತೆ ರಜೆ ಇದ್ದು , ಮರುದಿನ ಶಿಕ್ಷಕಿ ಮತ್ತು ಅಂಗನವಾಡಿ ಸಹಾಯಕಿ ಬೆಳಿಗ್ಗೆ ಬಂದು ನೋಡಿದಾಗ ಅಂಗನವಾಡಿಯ ಎದುರಿನ ಮುಖ್ಯ ಕಬ್ಬಿಣದ ಬಾಗಿಲಿನ ಡ್ರಿಲ್ ನ ಚಿಲಕವನ್ನು ಯಾರೋ ಕಳ್ಳರು ಯಾವುದೋ ಆಯುಧದಿಂದ ತುಂಡು ಮಾಡಿದ್ದು ಕಂಡುಬಂದಿದ್ದು, ಕೊಠಡಿಯ ಕೋಣೆಯ ಒಳಗಡೆ ಇದ್ದ ಬೀರುವನ್ನು ತೆರೆದಿದ್ದು, ಅದರೊಳಗಿದ್ದ ಮೊಬೈಲ್ ಪೋನ್, ಸ್ತ್ರೀ ಶಕ್ತಿ ಸಂಘದ ಡಬ್ಬದಲ್ಲಿದ್ದ ಹಣ ಕಳವಾಗಿರುತ್ತದೆ. ಇದರ ಒಟ್ಟು ಮೌಲ್ಯ 13,900 ರೂ. ಆಗಿರುತ್ತದೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಮಟ್ಟು : ಮೀನುಗಾರಿಕೆಯ ಸಂದರ್ಭ ಎದೆ ನೋವು ವ್ಯಕ್ತಿ ಸಾವು
Posted On: 02 Jul 2022, 06:06 PM
ಕಾಪು : ಅಣ್ಣ ಮತ್ತು ತಮ್ಮ ಮಟ್ಟುಗ್ರಾಮದ ಪಾಪನಾಶಿನಿ ನದಿಯಲ್ಲಿ ಮೀನುಗಾರಿಕೆಗೆ ತೆರಳಿದ್ದು ಅಣ್ಣನು ಮೀನು ಹಿಡಿಯುವ ಸಂದರ್ಭದಲ್ಲಿ ಎದೆ ನೋವು ಕಾಣಿಸಿಕೊಂಡು ಮೃತಪಟ್ಟ ಘಟನೆ ಜುಲೈ 1ರಂದು ನಡೆದಿದೆ. ಮಟ್ಟು ಗ್ರಾಮದ ದಿನೇಶ್ ಎಂಬುವವರು ತನ್ನ ಅಣ್ಣ ಗಣೇಶ್ (45)ರೊಂದಿಗೆ ಎಂದಿನಂತೆ ಮೀನು ಹಿಡಿಯಲು ಬೆಳಿಗ್ಗೆ 10 ಗಂಟೆಗೆ ಮಟ್ಟುಗ್ರಾಮದ ಪಾಪನಾಶಿನಿ ನದಿಗೆ ದೋಣಿಯಲ್ಲಿ ಹೋಗಿದ್ದು, ಮೀನು ಹಿಡಿಯುತ್ತಿರುವ ಸಂದರ್ಭ ಗಣೇಶ್ ಗೆ ಎದೆ ನೋವು ಕಾಣಿಸಿಕೊಂಡು ದೋಣಿಯಿಂದ ನೀರಿಗೆ ಬಿದ್ದಿದ್ದು, ಆ ಕೂಡಲೇ ದಿನೇಶ್ ಅಲ್ಲಿಯೇ ಬೇರೆ ದೋಣಿಯಲ್ಲಿ ಮೀನು ಹಿಡಿಯುತ್ತಿದ್ದವರನ್ನು ಕೂಗಿ ಕರೆದು ಅವರ ಸಹಾಯದಿಂದ ನೀರಿಗೆ ಬಿದ್ದಿದ್ದ ಗಣೇಶ್ರವರನ್ನು ಮೇಲಕ್ಕೆ ಎತ್ತಿ ದಡಕ್ಕೆ ತಂದಾಗ ಮಾತನಾಡುವ ಸ್ಥಿತಿಯಲ್ಲಿ ಇಲ್ಲದೇ ಇದ್ದು ಅವರನ್ನು ಕೂಡಲೇ ಮಟ್ಟುವಿನ ಕ್ಲಿನಿಕ್ಗೆ ಕರೆದುಕೊಂಡು ಹೋಗಲಾಗಿತ್ತು. ಅಲ್ಲಿಂದ ಉಡುಪಿಯ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ತಿಳಿಸಿದ್ದು, ಪರೀಕ್ಷಿಸಿದ ಅಲ್ಲಿನ ವೈದ್ಯರು ಮೃತಪಟ್ಟಿರುವ ಬಗ್ಗೆ ತಿಳಿಸಿರುತ್ತಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಣಿಪಾಲ : ಮನೆಯಂಗಳದಲ್ಲಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ
Posted On: 01 Jul 2022, 08:20 PM
ಮಣಿಪಾಲ : ಮನೆಯ ಮುಂದಿನ ತೋಟದಲ್ಲಿ ತೆಂಗಿನಕಾಯಿ ಹೆಕ್ಕಲು ಮನೆಯಂಗಳದಲ್ಲಿ ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದು, ತಲೆಗೆ ತೀವ್ರ ತರಹದ ಗಾಯವಾಗಿ ವ್ಯಕ್ತಿಯೋರ್ವರು ಮೃತ ಪಟ್ಟ ಘಟನೆ ಮಣಿಪಾಲದಲ್ಲಿ ನಡೆದಿದೆ. ತಲೆಗೆ ತೀವ್ರವಾದ ಗಾಯವಾದ ಕೆ .ಎಸ್. ರಮೇಶ್ (62) ರವರನ್ನು ಕೂಡಲೇ ಚಿಕಿತ್ಸೆಗಾಗಿ ಉಡುಪಿ ಸಿಟಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯರಲ್ಲಿ ತೋರಿಸಲಾಗಿದ್ದು, ವೈದ್ಯರು ಪರೀಕ್ಷಿಸಿ ಕೆ.ಎಸ್.ರಮೇಶ್ ರವರು ಮೃತಪಟ್ಟಿರುವುದಾಗಿ ತಿಳಿಸಿರುತ್ತಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
