Updated News From Kaup

ಸಂತ ಮೇರಿ ಮಹಾವಿದ್ಯಾಲಯ ಶಿರ್ವದಲ್ಲಿ ರಾಷ್ಟ್ರೀಯ ಭೂ-ಯುವಸೇನಾ ತರಬೇತಿ ಶಿಬಿರ

Posted On: 09-02-2022 07:56PM

ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ ಕೆ ಸಿಂಗ್ ಅವರ ಮಾರ್ಗದರ್ಶನದಲ್ಲಿ ಒಂದು ದಿನದ ಶಸ್ತ್ರ ತರಬೇತಿ ಶಿಬಿರವು ಏರ್ಪಡಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಶಸ್ತ್ರಾಸ್ತ್ರವನ್ನು ಹೇಗೆ ನಿರ್ವಹಣೆ ಮಾಡಬಹುದೆಂದು ಪ್ರತಿಯೊಬ್ಬ ಕ್ಯಾಡೆಟ್‍ಗಳು ಪ್ರತ್ಯಕ್ಷವಾಗಿ ಅನುಭವ ಪಡೆದುಕೊಳ್ಳುವುದು ಅತೀ ಅಗತ್ಯ ಮುಂದೆ ವಿವಿಧ ಉದ್ಯೋಗಾವಕಾಶಗಳಿಗೆ ಇದು ಸಹಕಾರಿ ಎಂದು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಾರ್ಕಳದ ಪೊಲೀಸ್ ಫೈರ್ ರೇಂಜ್ ಅಲ್ಲಿ ನಡೆದಂತ ಬೆಸ್ಟ್ ಫೈರಿಂಗ್ ತರಬೇತಿಯಲ್ಲಿ ಭಾಗವಹಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ ಕೆಡೆಟ್ ಆಶಿಶ್ ಪ್ರಸಾದ್ ಮತ್ತು ಇತರ ಕ್ಯಾಡೆಟ್ ಗಳನ್ನು ಅಭಿನಂದಿಸಲಾಯಿತು.

'ಕೆಡ್ಡಸ' ಮರೆತು ಹೋಗುತ್ತಿರುವ ಆಚರಣೆ - ಭೂಮಿತಾಯಿ 'ಪುಷ್ಪವತಿ' ಎಂಬ 'ಒಸಗೆ'

Posted On: 09-02-2022 07:46PM

[ಫೆ.9,10,11 ಅಂದರೆ ಮಕರಮಾಸದ ಕೊನೆಯ ಮೂರು ದಿನ.ಪುಯಿಂತೆಲ್ ತಿಂಗಳ ಅಂತ್ಯದ ದಿನಗಳು : 'ಭೂ ರಜಸ್ವಲಾ ದಿನ'.] ‌‌‌ ‘ನಿಸರ್ಗ ದೇಶಕ್ಕೆ ಸೌಭಾಗ್ಯವನ್ನು ಕೊಡುತ್ತದೆ’ ಎಂಬುದು ಒಂದು ಹಳೆಯ ರೂಢಿಯ ಮಾತು. ಕಾಡು ನಾಡಾಗುತ್ತಾ ಕೃಷಿ ಲಾಭಕಾರಿ ಎನಿಸದೆ, ಅವಗಣನೆಗೆ ಒಳಗಾಗಿರುವ ಅಭಿವೃದ್ಧಿಯ ಭರಾಟೆಯ ಈ ಕಾಲಘಟ್ಟದಲ್ಲಿ ಒಂದು ಪುರಾತನ ಸಾಂಸ್ಕೃತಿಕ ಸಂಭ್ರಮ ಮರೆಯಾಗುತ್ತಿದೆ. ಆದುದರಿಂದಲೇ ನಮ್ಮ ಆಚರಣೆಗಳು ಮೂಲ ಆಶಯ ಕಳೆದುಕೊಳ್ಳುತ್ತಿವೆ, ಔಪಚಾರಿಕವಾಗುತ್ತಿವೆ. ಅಥವಾ ಮರೆತೇ ಹೋಗುತ್ತಿವೆ. ಮರೆತು ಹೋದ - ಹೋಗುತ್ತಿರುವ ಆಚರಣೆಗಳಲ್ಲಿ ತುಳುವರ ‘ಕೆಡ್ಡಸ’ ಒಂದು; ಹೌದು... ಕೆಡ್ಡಸ ಹಾಗಂದರೆ ಏನು, ಯಾವಾಗ ಸನ್ನಿಹಿತವಾಗುತ್ತದೆ ಎಂದು ಪ್ರಶ್ನಿಸುವಂತಾದ ಈ ಸ್ಥಿತಿಗೆ ನಮ್ಮ ಬದುಕಿನ ರೀತಿ-ನೀತಿ-ರಿವಾಜುಗಳು ಬದಲಾದುದೇ ಕಾರಣ. ಮನಸ್ಸು - ಮನಸ್ಸುಗಳ ನಡುವಿನ ಮಾನಸಿಕ ಅಂತರ ಹಿಗ್ಗುತ್ತಾ ಭಾವನಾತ್ಮಕ ಸಂಬಂಧಗಳು ಕೇವಲ ‘ಸೋಗು ಅನ್ನಿಸುತ್ತಾ’ ಮುಂದೆ ಗಮಿಸುವ ಅತಿ ಉತ್ಸಾಹದಲ್ಲಿ ನೆಲ, ಜಲ, ಮರಮಟ್ಟು ,ಒಟ್ಟಿನಲ್ಲಿ ಪ್ರಕೃತಿಯನ್ನು ಕಾಣುವ ದೃಷ್ಟಿಯೂ ಬದಲಾಗಿದೆ. ಒಂದು ಕಾಲಕ್ಕೆ ಪ್ರಕೃತಿ ನಮ್ಮನ್ನು ಪೋಷಿಸುವ, ಜೀವನಾಧಾರಳಾಗಿರುವ ತಾಯಿ. ನೆಲದವ್ವೆಯನ್ನು ನಂಬಿದ್ದು ಎಲ್ಲಿಯವರೆಗೆ ಎಂದರೆ ‘ಭೂಮಿಸಾಕ್ಷಿಯಾಗಿ ಹೇಳುತ್ತೇನೆ' ಎಂದು ಭೂಮಿಯನ್ನು ಸ್ಪರ್ಶಿಸಿ ಸಾಕ್ಷಿ ಹೇಳುವ ಮಾತು ಜನಮಾನಸದಲ್ಲಿ ಸಹಜವಾಗಿ ಚಾಲ್ತಿಯಲ್ಲಿತ್ತು. ನಾವು ಭೂಮಿಯನ್ನು ಗೌರವಿಸುತ್ತಿದ್ದೆವು, ಪೂಜಿಸುತ್ತಿದ್ದೆವು.ಜನಪದರ ಜೀವನ ಭೂಮಿಗೆ ಅಂತಹ ಮಹತ್ತರ ಪ್ರಾಶಸ್ತ್ಯ ಕೊಟ್ಟಿತ್ತು ಎಂಬುದಕ್ಕೆ ‘ಕೆಡ್ಡಸ’ ಆಚರಣೆಯ ಸ್ವರೂಪ, ಕಲ್ಪನೆ, ಅನುಸಂಧಾನಕ್ಕೆ ಆಧಾರವಾಗುತ್ತದೆ. ಭೂಮಿ ಹೆಣ್ಣು ಎಂದು ಪರಿಗ್ರಹಿಸಿದ ಮಾನವ ಭೂಮಿಯಂತೆ ಫಲಸಮೃದ್ಧಿಯನ್ನು ನೀಡುವ, ಜನ್ಮ ನೀಡಿದ ತಾಯಿಯ ಔದಾರ್ಯಕಂಡ; ‘ನೆಲವನ್ನು ಅಬ್ಬೆ ಎಂದು ಪ್ರೀತಿಸಿದ. ಆಕೆಯ ಉತ್ಪನ್ನಗಳೆಲ್ಲ ‘ಫಲವೆಂದು ಪರಿಗ್ರಹಿಸಿ ತಾಯಿಯಿಂದ ತಾನು, ಭೂಮಿಯಿಂದ ಫಲವಂತಿಕೆ’ ಎಂದು ಸಮೀಕರಿಸಿ ಆರಾಧಿಸತೊಡಗಿದ. ಜನಪದರ ಸರಳ, ಮುಗ್ಧ ಆದರೆ ಗಾಢವಾದ ಚಿಂತನೆಯುಳ್ಳ ಪ್ರಕೃತಿ ಪರ ಕಾಳಜಿ ಎಷ್ಟು ಭವ್ಯವಾಗಿದೆ ತಾನೆ! ಸ್ತ್ರೀ ಸಹಜ ದೈಹಿಕ ಬದಲಾವಣೆಯನ್ನು ಗಮನಿಸುತ್ತಾ ಪ್ರಕೃತಿಯ ಋತುಚಕ್ರಕ್ಕನುಗುಣವಾಗಿ ಭೂಮಿತಾಯಿಯಲ್ಲಿ ಕಾಣುವ ಸ್ಥಿತ್ಯಂತರಗಳನ್ನು ಕ್ರೋಡೀಕರಿಸಿಕೊಂಡ ಜನಪದರು ತನ್ನ ತಾಯಿಯಂತೆಯೇ ಭೂಮಿದೇವಿಯೂ 'ಋತುಮತಿ'ಯಾಗುವ ಕಾಲವನ್ನು, ಮತ್ತೆ ಸೃಷ್ಟಿಗೆ ಅಣಿಯಾಗುವ ಸಂದರ್ಭವನ್ನು ಪ್ರಾಕೃತಿಕ ಋತುಮಾನಕ್ಕೆ ಅನುಗುಣವಾಗಿ ನಿಗದಿಪಡಿಸಿ ಆಚರಿಸತೊಡಗಿದ , ಹೇಗಿದೆ ಮುಗ್ಧ ಹೃದಯಗಳ ಕಲ್ಪನೆ? ನಮ್ಮವ್ವೆ ತಿಂಗಳಿಗೊಮ್ಮೆ ಪುಷ್ಪವತಿಯಾಗುವುದಾದರೆ, ‘ಭೂಮಿ ಅವ್ವೆ ವರ್ಷಕ್ಕೊಮ್ಮೆ ಋತುಮತಿಯಾಗುವುದು. ನಮ್ಮ ಜೀವನ ವಿಧಾನದಲ್ಲಿ ಇರುವ ಎಲ್ಲ ವಿಧಿ-ನಿಷೇಧಗಳೂ ಭೂಮಿತಾಯಿಗೂ ಇದೆ ಎಂದು ನಿರ್ಧರಿಸಿ ಭೂಮಿಯನ್ನು ಅಗೆಯಬಾರದು, ಕೃಷಿಗೆಂದು ಉಳಬಾರದು, ಮರಗಿಡಗಳನ್ನು ಕಡಿಯಬಾರದು , ಬದಲಾಗುವ ನಿಸರ್ಗದ ಸೌಂದರ್ಯ ನೋಡುತ್ತಾ ಸೌಭಾಗ್ಯ ರೂಪದ ಕೃಷಿ ಸಮೃದ್ಧಿ ನೀಡಲು ಭೂಮಿತಾಯಿ ಪ್ರಕೃತಿಯ ಮಡಿಲಲ್ಲಿ ಮತ್ತೆ ಅಣಿಯಾದಳು ಎಂಬ ಸಂಕೇತವಾಗಿ ಫಲೀಕರಣಕ್ಕೆ ಮುನ್ನ ಪುಷ್ಪವತಿಯಾಗಿ ತಾನು ಸಿದ್ಧಳಾಗುತ್ತಿದ್ದಾಳೆ ಎಂದು ಭವದ ಭವ್ಯತೆಯನ್ನು ನಿರೂಪಿಸಿರಬೇಕು.

3.48 ಕೋಟಿ ಮೌಲ್ಯದ ಅಂಬರ್ ಗ್ರೀಸ್ ಪತ್ತೆ ಹಚ್ಚಿದ ಮಂಗಳೂರು ನಗರ ಪೊಲೀಸರು

Posted On: 09-02-2022 06:58PM

ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ತಾಲೂಕು ಬಾಳೆಪುಣಿ ಗ್ರಾಮದ ನವೋದಯ ಶಾಲೆಯ ಬಳಿ ನಿಷೇಧಿತ ವಸ್ತುವಾದ ಅಂಬರ್ ಗ್ರೀಸ್ ನ್ನು ಅಕ್ರಮವಾಗಿ ಮಾರಾಟ ಮಾಡಲು ಬಂದ ಬೆಂಗಳೂರು ಮತ್ತು ಉಡುಪಿ ಮೂಲದವರು ಸೇರಿದಂತೆ 6 ಮಂದಿಯನ್ನು ಬಂಧಿಸಿ ಅವರಿಂದ 3.48 ಕೋಟಿ ಮೌಲ್ಯದ 3 ಕೆಜಿ 480 ಗ್ರಾಂ ತೂಕದ ಅಂಬರ್ ಗಿಸ್ ವಶಕ್ಕೆ ಪಡೆಯಲಾಗಿದೆ.

ಕಟಪಾಡಿ ಗ್ರಾಮ ಒನ್ ಕೇಂದ್ರದಲ್ಲಿ : ಉದ್ಯೋಗಾವಕಾಶ

Posted On: 08-02-2022 10:44AM

ಕಟಪಾಡಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಯೋಜನೆಯು ಕಟಪಾಡಿ ಗ್ರಾಮದ ವ್ಯಾಪ್ತಿಯಲ್ಲಿ ಕಾರ್ಯಾಚರಿಸಲಿದ್ದು ಸುಮಾರು 750ಕ್ಕೂ ಹೆಚ್ಚಿನ ಸೇವೆಗಳನ್ನು ಒಳಗೊಂಡಿದೆ.

ಡೊಮೆಸ್ಟಿಕ್ ಗ್ಯಾಸ್ ಸಿಲಿಂಡರ್ನಿಂದ ಖಾಲಿ ಕಮರ್ಷಿಯಲ್ ಸಿಲಿಂಡರ್ ಗೆ ಕೃತಕವಾಗಿ ತುಂಬಿಸಿ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಪೋಲಿಸ್ ಧಾಳಿ ; ಆರೋಪಿ ಪರಾರಿ

Posted On: 07-02-2022 10:51PM

ಮಂಗಳೂರು : ಪೆರ್ಮನ್ನೂರು ಗ್ರಾಮದ ಚೆಂಬುಗುಡ್ಡೆ ಎಂಬಲ್ಲಿನ ನಿವಾಸಿ ಫ್ರಾನ್ಸಿಸ್ ಎಂಬವರು ತನ್ನ ವಾಸದ ಮನೆಗೆ ತಾಗಿಕೊಂಡು ತಗಡು ಶೀಟಿನಿಂದ ನಿರ್ಮಿಸಿದ ಕೋಣೆಯಲ್ಲಿ ತುಂಬಿದ ಅಡುಗೆ ಅನಿಲದ (ಡೊಮೆಸ್ಮಿಕ್) ಸಿಲಿಂಡರ್ ನಿಂದ ಖಾಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಗೆ ತಾನೇ ಕೃತಕವಾಗಿ ರೆಗ್ಯುಲೇಟರ್ ಮುಖೇನ ತುಂಬಿಸಿ ಗಿರಾಕಿಗಳಿಗೆ ಹಣಕ್ಕಾಗಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಸಹಾಯಕ ಪೊಲೀಸ್ ಆಯುಕ್ತರು, ಮಂದ,ಉ,ವಿಭಾಗ ರವರ ಮಾರ್ಗದರ್ಶನದಲ್ಲಿ ಮಂಗಳೂರು ಗಿರಾಕಿಗಳಿಗೆ ಹಣಕ್ಕಾಗಿ ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯಂತೆ ಸಹಾಯಕ ಪೊಲೀಸ್ ಆಯುಕ್ತರು, ಮಂ,ಉ,ವಿಭಾಗ ರವರ ಮಾರ್ಗದರ್ಶನದಲ್ಲಿ ಮಂಗಳೂರು ತಾಲೂಕು ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಸಂದೀಪ್,ಜಿ.ಎಸ್.ಪೊಲೀಸ್ ಉಪ-ನಿರೀಕ್ಷಕರಾದ ಶಿವಕುಮಾರ್,ಕೆ, ಹಾಗೂ ಸಿಬ್ಬಂದಿಗಳಾದ ಮಹೇಶ, ರೆಜಿ, ಉದಯ, ಸಾಗರ್ ರವರು ಮತ್ತು ಉಳ್ಳಾಲ ವಲಯದ ಆಹಾರ ನಿರೀಕ್ಷಕರಾದ ಹಾರಿಸ್, ಪ್ರಭಾರ ಆಹಾರ ನಿರೀಕ್ಷಕರಾದ ರೇಖ ಹಾಗೂ ಅವರ ತಂಡದವರೊಂದಿಗೆ ಫೆಬ್ರವರಿ 5ರಂದು ಸ್ಥಳಕ್ಕೆ ಗಂಟೆಗೆ ಧಾಳಿ ನಡೆಸಲಾಗಿದೆ.

ಪಾಂಗಾಳ : ಫೆಬ್ರವರಿ 15 ರಂದು ವೈಭವದ ಸಿರಿಜಾತ್ರೆ

Posted On: 07-02-2022 10:33PM

ಪಾಂಗಾಳ : ಮುಕ್ಕಾಲಿ ಅಣ್ಣು ಶೆಟ್ಟಿ ಕುಟುಂಬಸ್ಥರ ಆಡಳಿತದ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ವೈಭವದ ಸಿರಿಜಾತ್ರೆಯು ಫೆಬ್ರವರಿ 15, ಮಂಗಳವಾರದಂದು ಜರಗಲಿರುವುದು. ಅಂದು ಬೆಳಗ್ಗೆ 11 ಗಂಟೆಗೆ ಧ್ವಜಾರೋಹಣದಿಂದ ಪ್ರಾರಂಭಗೊಂಡು ಮಧ್ಯಾಹ್ನ 12-30 ಕ್ಕೆ ಮಹಾಪೂಜೆ , 12-45 ಕ್ಕೆ ಬ್ರಾಹ್ಮಣ ಸುಹಾಸಿನಿ ಆರಾಧನೆ , ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ.

ಗೂಗಲ್ ಪೇ, ಫೋನ್ ಪೇ ಬಳಸುವವರೇ ಜಾಗೃತರಾಗಿರಿ ಇಂತಹ ಕೆಲಸಗಳನ್ನು ಎಂದಿಗೂ ಮಾಡಬೇಡಿ..!

Posted On: 06-02-2022 10:42AM

ನೀವು ಫೋನ್ ಪೇ ಬಳಸುತ್ತಿರುವಿರಾ? ಗೂಗಲ್ ಪೇ ಬಳಸುತ್ತೀರಾ? ನೀವು Paytm ಬಳಸುತ್ತೀರಾ..? ಅಗಾದರೆ, ನೀವು ಖಂಡಿತವಾಗಿಯೂ ಕೆಲವು ವಿಷಯಗಳನ್ನು ತಿಳಿದುಕೊಳ್ಳಬೇಕು. ಇಲ್ಲದಿದ್ದರೆ ತೊಂದರೆಗೆ ಸಿಲುಕುತ್ತೀರಿ. ತಪ್ಪಿದಲ್ಲಿ ಖಾತೆಯಿಂದ ಹಣ ಕಳೆದುಕೊಳ್ಳಬಹುದು. ಹಾಗಾಗಿ ಯುಪಿಐ ಆ್ಯಪ್ ಬಳಸುವವರು ಜಾಗರೂಕರಾಗಿರಬೇಕು.

ಕ್ಯಾನ್ಸರ್ ಆರಂಭದಲ್ಲೇ ಪತ್ತೆ ಹಚ್ಚಿದರೆ ಗುಣಮುಖರಾಗಲು ಸಾಧ್ಯ : ಸುಮಿತ್ರಾ ನಾಯಕ್

Posted On: 06-02-2022 10:23AM

ಉಡುಪಿ : ಕ್ಯಾನ್ಸರ್ನ ಲಕ್ಷಣಗಳ ಬಗ್ಗೆ ಅರಿತುಕೊಂಡು, ಖಾಯಿಲೆಯನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿದಲ್ಲಿ, ಕ್ಯಾನ್ಸರ್ನಿಂದ ಗುಣಮುಖವಾಗಲು ಸಾಧ್ಯವಿದೆ ಎಂದು ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಹೇಳಿದರು. ಅವರು ಇಂದು, ಅಜ್ಜರಕಾಡು ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಸ್ಪತ್ರೆ (ಎನ್.ಸಿ.ಡಿ ವಿಭಾಗ), ಜಿಲ್ಲಾ ಸರ್ವೇಕ್ಷಣಾ ಘಟಕ (ಎನ್.ಸಿ.ಡಿ&ಎನ್.ಟಿ.ಸಿ.ಪಿ ಘಟಕ), ದಂತ ವೈದ್ಯಕೀಯ ವಿಭಾಗ ಜಿಲ್ಲಾ ಆಸ್ಪತ್ರೆ, ಭಾರತೀಯ ದಂತ ವೈದ್ಯಕೀಯ ಮಂಡಳಿ, ಭಾರತೀಯ ವೈದ್ಯಕೀಯ ಸಂಘ ಉಡುಪಿ ಕರಾವಳಿ, ಡಾ. ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ ಇವರ ಸಹಯೋಗದಲ್ಲಿ ನಡೆದ ವಿಶ್ವ ಕ್ಯಾನ್ಸರ್ ಜಾಗೃತಿ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಚುನಾವಣಾ ಪ್ರಕ್ರಿಯೆಯಲ್ಲಿ ವಿದ್ಯುನ್ಮಾನ ವ್ಯವಸ್ಥೆಗೆ ಆದ್ಯತೆ: ಜಂಟಿ ಮುಖ್ಯ ಚುನಾವಣಾಧಿಕಾರಿ ಡಿ.ಶಂಭುಶೆಟ್ಟಿ

Posted On: 06-02-2022 09:49AM

ಉಡುಪಿ : ಚುನಾವಣಾ ಆಯೋಗವು ಚುನಾವಣಾ ಪ್ರಕ್ರಿಯೆಯಲ್ಲಿ ವಿದ್ಯುನ್ಮಾನ ವ್ಯವಸ್ಥೆಯ ಬಳಕೆಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಚುನಾವಣಾ ಪ್ರಕ್ರಿಯೆಯ ವಿವಿಧ ಹಂತದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಈ ಬಗ್ಗೆ ಹೆಚ್ಚಿನ ತಾಂತ್ರಿಕ ಕೌಶಲ್ಯವನ್ನು ಪಡೆದುಕೊಳ್ಳುವಂತೆ ರಾಜ್ಯದ ಜಂಟಿ ಮುಖ್ಯ ಚುನಾವಣಾಧಿಕಾರಿ ಡಿ.ಶಂಭು ಶೆಟ್ಟಿ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ, ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ನೋಂದಣಿ ಅಭಿಯಾನದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಶ್ರೀ ಬನ್ನಂಜೆ ವರ್ತೆಕಾಳಿ ಕಲ್ಕುಡ ದೈವಸ್ಥಾನ - ಸಿರಿ ಸಿಂಗಾರದ ಕಾಲಾವಧಿ ನೆಮೋತ್ಸವ

Posted On: 05-02-2022 02:50PM

ಉಡುಪಿ : ಜಿಲ್ಲೆಯ ಹಲವಾರು ವರ್ಷಗಳ ವರ್ಷಗಳ ಇತಿಹಾಸವಿರುವ ಶ್ರೀ ಬನ್ನಂಜೆ ವರ್ತೆಕಾಳಿ ಕಲ್ಕುಡ ದೈವಸ್ಥಾನ - ಬನ್ನಂಜೆ ಕಲ್ಕುಡ ಮನೆ , ಉಡುಪಿ ಇಲ್ಲಿ ಫೆಬ್ರವರಿ 8, ಮಂಗಳವಾರದಂದು ರಾತ್ರಿ 9 ಗಂಟೆಯಿಂದ ವರ್ತೆ ಕಲ್ಕುಡ ದೈವಗಳಿಗೆ ಸಿರಿ ಸಿಂಗಾರದ ಕಾಲಾವಧಿ ನೆಮೋತ್ಸವ ಜರಗಲಿದೆ.