Updated News From Kaup
ಕಳತ್ತೂರು ಆರೋಗ್ಯ ಉಪ ಕೇಂದ್ರಕ್ಕೆ ಕುಡಿಯುವ ನೀರಿನ ಟ್ಯಾಂಕ್ ಕೊಡುಗೆ
Posted On: 17 May 2022, 05:08 PM
ಕಾಪು : ಕಾಪು ಪರಿಸರದ ಸಮಾಜ ಸೇವೆಯಲ್ಲಿ ರಾಷ್ಟೀಯ ಪ್ರಶಸ್ತಿ ಪುರಸ್ಕೃತರುಗಳಾದ ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಜನಸಂಪ್ರ್ಕ ಜನಸೇವಾ ವೇದಿಕೆ ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು,ಉಭಯ ವೇದಿಕೆ ಸಂಚಾಲಕರುಗಳಾದ ದಿವಾಕರ ಡಿ ಶೆಟ್ಟಿ ಕಳತ್ತೂರು ಇವರು ವೈಯಕ್ತಿಕವಾಗಿ ಕಳತ್ತೂರು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಆರೋಗ್ಯ ಉಪ ಕೇಂದ್ರ ಕಳತ್ತೂರುಗೆ 1000 ಲೀಟರ್ ನ ಕುಡಿಯುವ ನೀರಿನ ಟ್ಯಾಂಕ್ ಕೊಡುಗೆಯಾಗಿ ಹಸ್ತಾಂತರಿಸಿದರು.) ಈ ಸಂದರ್ಭದಲ್ಲಿ ಆರೋಗ್ಯ ಸುರಕ್ಷಾಧಿಕಾರಿ ಸುಧಾವತಿ ಮಾತನಾಡಿ ನಮ್ಮ ಆರೋಗ್ಯ ಕೇಂದ್ರಕ್ಕೆ ನೀರಿನ ಟ್ಯಾಂಕ್ ಅಗತ್ಯವಿದ್ದು ಕೊಡುಗೆ ನೀಡಿದ ಮೂವರು ರಾಷ್ಟೀಯ ಪ್ರಶಸ್ತಿ ಪಡೆದ ಸಮಾಜ ಸೇವಕರಿಗೆ ಕೃತಜ್ಞತೆ ಸಲ್ಲಿಸಿದರು.
ಕಾಪು : ಮುಂಬೈ ಪೊಲೀಸ್ ಉಪ ಮಹಾನಿರೀಕ್ಷಕ ವೀರೇಶ್ ಪ್ರಭುರವರಿಂದ ಶಿಲಾ ಸೇವೆ, ಶಿಲಾ ಪುಷ್ಪ ಸಮರ್ಪಣೆ
Posted On: 17 May 2022, 04:44 PM
ಕಾಪು : ಪೊಲೀಸ್ ಉಪ ಮಹಾನಿರೀಕ್ಷಕ, ಡಿಐಜಿ ಮುಂಬೈ ಕ್ರೈಮ್ ವೀರೇಶ್ ಪ್ರಭು, ಬೈಕಲ, ಮುಂಬೈ ಇವರು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ 9 ಶಿಲಾ ಸೇವೆ ನೀಡಿ, ಶಿಲಾ ಪುಷ್ಪ ಸಮರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರಾದ ಮನೋಹರ ಶೆಟ್ಟಿ ಮತ್ತು ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾದ ಉದಯ ಸುಂದರ ಶೆಟ್ಟಿ ಉಪಸ್ಥಿತರಿದ್ದರು.
ಅಕ್ರಮ ಗೋಸಾಗಾಟ, ಕಸಾಯಿಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಲು ಮನವಿ ; ಬೃಹತ್ ಪ್ರತಿಭಟನೆಯ ಎಚ್ಚರಿಕೆ
Posted On: 16 May 2022, 11:36 PM
ಪಡುಬಿದ್ರಿ : ವಿಶ್ವ ಹಿಂದು ಪರಿಷದ್, ಬಜರಂಗದಳ ಕಾಪು ಪ್ರಖಂಡ ವತಿಯಿಂದ ಪಡುಬಿದ್ರಿ ಸುತ್ತ ಮುತ್ತ ನಡೆಯುವ ಅಕ್ರಮ ಗೋಸಾಗಾಟ, ಕಸಾಯಿಖಾನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮೇ. 16ರಂದು ಪಡುಬಿದ್ರಿ ಪೋಲಿಸ್ ಠಾಣೆಗೆ ಮನವಿ ನೀಡಲಾಯಿತು. ಪಡುಬಿದ್ರಿ ಠಾಣಾ ವ್ಯಾಪ್ತಿಯ ಪಡುಬಿದ್ರಿ, ಹೆಜಮಾಡಿ, ಅವರಾಲು ಪ್ರದೇಶದಲ್ಲಿ ಅವ್ಯಾಹತವಾಗಿ ಗೋಸಾಗಾಟ ಮತ್ತು ಅಕ್ರಮ ಕಸಾಯಿಖಾನೆಗಳನ್ನು ನಡೆಸುವ ತಂಡವನ್ನು ಬಂಧಿಸಿ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು. ಇಂತಹ ಅಕ್ರಮ ದಂಧೆಗಳು ಮುಂದುವರಿದಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂದರ್ಭ ವಿಶ್ವ ಹಿಂದು ಪರಿಷದ್, ಬಜರಂಗದಳದ ಪ್ರಮುಖರು ಉಪಸ್ಥಿತರಿದ್ದರು.
ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ; ಜಿಲ್ಲಾಡಳಿತದಿಂದ ಪ್ರಕಟನೆ
Posted On: 16 May 2022, 10:19 PM
ಉಡುಪಿ : ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಕರ್ನಾಟಕದ ಕರಾವಳಿ ಭಾಗದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯು ಮುಂದುವರಿಯುವ ಸಾಧ್ಯತೆಯಿರುವ ಕಾರಣ ಮೇ 17 ಮತ್ತು 19ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮತ್ತು ದಿನಾಂಕ 16 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಪ್ರತಿದಿನ ತಲಾ 100ಮಿ.ಮಿ ರಿಂದ 150ಮಿ.ಮಿ ಮೇಲ್ಪಟ್ಟು ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಮೂರು ದಿನಗಳ ಭಾರೀ ಮಳೆಯಾಗುವ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಬೇಕಾಗಿದೆ ಅದರಂತೆ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು. ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದೆ. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರುವಂತೆ, ಪ್ರವಾಸಿಗರು/ ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಎಚ್ಚರಿಕೆ ವಹಿಸುವುದು ಎಂದು ತಿಳಿಸಿದ್ದಾರೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077 ದೂರವಾಣಿಗೆ ಸಂಪರ್ಕಿಸುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾಸ್ಟರ್ ಪ್ರಥಮ್ ಕಾಮತ್ ಕಟಪಾಡಿ ಇವರಿಗೆ ಸಂಗಮ ರತ್ನ ರಾಷ್ಟ್ರೀಯ ಪ್ರಶಸ್ತಿ
Posted On: 16 May 2022, 09:59 PM
ಕಟಪಾಡಿ : ಡಾ| ಶಿವಕುಮಾರ ಸ್ವಾಮೀಜಿಯವರ ಜಯಂತಿ ಅಂಗವಾಗಿ ಸಂಗಮ ಸಮಾವೇಶ ಸಮಾರಂಭ ಮತ್ತು ಜನಸ್ಪಂದನ ಪತ್ರಿಕೆಯ 13ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ನೀಡಲಿರುವ ಸಂಗಮ ರತ್ನ ರಾಷ್ಟ್ರೀಯ ಪ್ರಶಸ್ತಿಗಾಗಿ ಬಹುಮುಖ ಪ್ರತಿಭೆ ಮಾ.ಪ್ರಥಮ್ ಕಾಮತ್ ಕಟಪಾಡಿ ಇವರು ಆಯ್ಕೆಯಾಗಿರುತ್ತಾರೆ. ಮೇ 22 ರ ಬೆಂಗಳೂರಿನ ಜೆ. ಪಿ ರಸ್ತೆಯ ಕನ್ನಡ ಭವನದ ನಯನ ಸಭಾಂಗಣದಲ್ಲಿ ಗಣ್ಯರ ಸಮ್ಮುಖದಲ್ಲಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ಪ್ರಥಮ್ ಕಾಮತ್ ಕಟಪಾಡಿ ಇವರಿಂದ 75 ನೇ ಜಾದೂ ಪ್ರದರ್ಶನ ಕೂಡ ನಡೆಯಲಿದೆ.
ಉಡುಪಿ ಜಿಲ್ಲಾ ಕುಲಾಲ ಕುಂಬಾರ ಸಂಘಟನೆ ಇಡೀ ರಾಜ್ಯಕ್ಕೆ ಮಾದರಿ : ಡಾ.ಎಂ.ಅಣ್ಣಯ್ಯ ಕುಲಾಲ್ ಉಳ್ತೂರು
Posted On: 16 May 2022, 08:44 PM
ಉಡುಪಿ : ಜಿಲ್ಲಾ ಕುಲಾಲ ಕುಂಬಾರ ಸಂಘಟನೆಗಳ ಒಗ್ಗಟ್ಟು ಇಡೀ ರಾಜ್ಯಕ್ಕೆ ಮಾದರಿ, ಹಿರಿ ಕಿರಿಯ ನಾಯಕರುಗಳನ್ನ ಗಟ್ಟಿಯಾಗಿ ಬೆಸೆದು ಕ್ರೀಡಾ ಸಂಘಟನೆಯ ಮೂಲಕ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಮತ್ತೂ ರಾಜಕೀಯ ಹೋರಾಟಗಳ ಮೂಲಕ, ಇಡೀ ರಾಜ್ಯದ ಯುವ ಸಂಘಟನೆ ಗಳಿಗೆ ಪ್ರೇರಣೆ ಆಗುವಂತೆ ಬೆಳೆದು ನಿಂತ ಉಡುಪಿ ಜಿಲ್ಲಾ ಯುವ ವೇದಿಕೆ ಅದರ ಬೆಳವಣಿಗೆಗೆ ಕಾರಣರಾದ ಜಿಲ್ಲೆಯ ಎಲ್ಲಾ ಹಿರಿಯ ಯುವ ವೇಧಿಕೆಯ ನಾಯಕರುಗಳಿಗೆ ಇದರ ಶ್ರೇಯಸ್ಸು ಸಲ್ಲಬೇಕು. ಎಂದು ಡಾ.ಎಂ.ಅಣ್ಣಯ್ಯ ಕುಲಾಲ್ ಉಳ್ತೂರು ಹೇಳಿದರು. ಅವರು ಕಾರ್ಕಳದಲ್ಲಿ ಕುಲಾಲ ಟ್ರೋಫಿ ಉದ್ಘಾಟಿಸಿ ಮಾತನಾಡಿದರು. ಇವತ್ತು ಸೇರಿದ ಇಡೀ ಜಿಲ್ಲೆಯ ಎಲ್ಲಾ ಸಂಘಟನೆ ಗಳ ಒಗ್ಗಟ್ಟು ಇದನ್ನ ಸೂಚಿಸುತ್ತೆ. ಇದೇ ರೀತಿಯಲ್ಲಿ ದುಡಿದ ಯುವ ವೇದಿಕೆಯ ಸೇವೆ ಸಂಘಟನೆ ಸರಕಾರದ ಗಮನ ಸೆಳೆದ ಬೆಳವಣಿಗೆ,ಅದರಲ್ಲೂ ಸರ್ವಜ್ಞ ವೃತ್ತವನ್ನ ನಿರ್ಮಿಸಿ ರಾಜ್ಯದಲ್ಲೇ ಸುದ್ದಿ ಆಗಿರುವ ಕಾರ್ಕಳ ಕುಲಾಲ ಯುವ ವೇದಿಕೆ ಮತ್ತು ಕಾರ್ಕಳ ಕುಲಾಲ ಸಂಘ ಇಡೀ ರಾಜ್ಯದ ಎಲ್ಲಾ ಸಂಘಟನೆ ಗಳಿಗೆ ಮಾದರಿ. ಕರಾವಳಿ ಕುಲಾಲ ಕುಂಬಾರ ಯುವ ವೇದಿಕೆ ಹಾಗೂ ಮಹಿಳಾ ಸಂಘಟನೆಗಳ ಸೇವೆಯನ್ನ ಪರಿಗಣಿಸಿ ಜಿಲ್ಲಾ ಹಾಗೂ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಹುಡುಕಿ ಕೊಂಡು ಬರುವ ದಿನಗಳು ದೂರ ಇಲ್ಲ ಎಂದರು. ಈ ಸಂದರ್ಭ ಅತಿಥಿಗಳು, ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ವಿಶ್ವಭಾರತಿ ಕಾಪು ವತಿಯಿಂದ ಸಮಾಜ ಸೇವಕ ಫಾರೂಕ್ ಚಂದ್ರನಗರ, ಸಾಯಿನಾಥ್ ಶೇಟ್ ಕುಂದಾಪುರ ಹಾಗೂ ಪ್ರಭಾಕರ ಆಚಾರ್ಯ ಮೂಡುಬೆಳ್ಳೆಗೆ ಸಮ್ಮಾನ
Posted On: 16 May 2022, 05:58 PM
ಕಾಪು : ವಿಶ್ವಭಾರತಿ ಕಾಪು ವತಿಯಿಂದ ಸ್ವದೇಶಿ ಮೇಳದ ಸಭಾಂಗಣ ವೇದಿಕೆಯಲ್ಲಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಮೊಹಮ್ಮದ್ ಫಾರೂಕ್ ಚಂದ್ರನಗರ, ಸಾಯಿನಾಥ್ ಶೇಟ್ ಕುಂದಾಪುರ ಹಾಗೂ ಕಲಾವಿದ ಪ್ರಭಾಕರ ಆಚಾರ್ಯ ಮೂಡುಬೆಳ್ಳೆ ಇವರಿಗೆ ಸನ್ಮಾನ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕಾಪು ಶಾಸಕರು ಲಾಲಾಜಿ ಆರ್ ಮೆಂಡನ್ ಮಾತನಾಡಿ ಸಮಾಜ ಸೇವಕರನ್ನು ಸನ್ಮಾನಿಸಿ ಗೌರವಿಸುವುದು ಅವರಿಗೆ ಇನ್ನಷ್ಟು ಸಮಾಜ ಮುಖಿ ಕೆಲಸ ಮಾಡಲು ಉತ್ತೇಜನ ನೀಡಿದಂತೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಗುರ್ಮೆ ಸುರೇಶ್ ಶೆಟ್ಟಿ ಫಾರೂಕ್ ಚಂದ್ರನಗರ, ಸಾಯಿನಾಥ್ ಶೇಟ್ ಹಾಗೂ ಪ್ರಭಾಕರ ಆಚಾರ್ಯರ ಸಮಾಜ ಮುಖಿ ಕೆಲಸ ಎಲ್ಲರು ಮೆಚ್ಚುವಂತದ್ದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಭಾ ಅಧ್ಯಕ್ಷತೆಯನ್ನು ವಿಶ್ವಭಾರತಿ ಅಧ್ಯಕ್ಷರಾದ ಕಾಪು ಶ್ರೀಕಾಂತ್ ಬಿ ಆಚಾರ್ಯ ವಹಿಸಿದ್ದರು. ಕುವೆಂಪು ವಿ.ವಿ ಸಿಂಡಿಕೇಟ್ ಸದಸ್ಯರಾದ ರಮೇಶ್ ಬಾಬು ಶಿವಮೊಗ್ಗ, ಸಂತೋಷ್ ಬಡಿಗೇರ್, ಸುರೇಶ್ ಆಚಾರ್ಯ, ಮದು ಆಚಾರ್ಯ ಮೂಲ್ಕಿ, ಸುಮನಾ ಮಂಗಳೂರು, ಗಂಗಾಧರ ಆಚಾರ್ಯ,ರೋಷನ್ ಬೆಲ್ಮನ್, ಚಂದ್ರಶೇಖರ್ ಮಂಡೆಕೋಲು, ಪ್ರಬೋದ್ ಚಂದ್ರ,ಕಾಪು ಪುರಸಭೆ ಮಾಜಿ ಅಧ್ಯಕ್ಷರಾದ ಅನಿಲ್ ಕುಮಾರ್, ಕಿಶೋರ್ ಆಚಾರ್ಯ, ಸುಧಾಕರ್ ಆಚಾರ್ಯ ಬಿಳಿಯಾರು, ಸುನಿಲ್ ಶೇಟ್ ಕುಂದಾಪುರ, ದಾಮೋದರ ಶರ್ಮ, ಶಶಿಧರ ಪುರೋಹಿತ ಕಟಪಾಡಿ, ಸುಧಾಕರ ಸಾಲ್ಯಾನ್ ಕಾಪು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಶ್ರೀಕೃಷ್ಣ ದರ್ಶನ ಬಿಡುಗಡೆ
Posted On: 16 May 2022, 04:56 PM
ಮುಂಬಯಿ : ಇಲ್ಲಿಯ ಸಯಾನ್ ಗೋಕುಲದ ಗೋಪಾಲಕೃಷ್ಣ ದೇವರ ಪುನಃ ಪ್ರತಿಷ್ಠೆ - ಬ್ರಹ್ಮಕಲಶಾಭಿಷೇಕ ಧಾರ್ಮಿಕ - ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭವು ಷಣ್ಮುಖಾನಂದ ಸಭಾಗೃಹದಲ್ಲಿ ನಡೆಯಿತು. ಬೃಹನ್ಮುಂಬಯಿ ಗೋಕುಲ ಪುನರುತ್ಥಾನ ಸ್ಮರಣೆಯ ಸಂಪುಟ "ಶ್ರೀಕೃಷ್ಣ ದರ್ಶನ"ವನ್ನು ಪಲಿಮಾರು ಮಠಾಧೀಶ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಬಿಡುಗಡೆಗೊಳಿಸಿದರು.ಜಾನಪದ ಸಂಶೋಧಕ ಕೆ.ಎಲ್.ಕುಂಡಂತಾಯ ಅವರು 'ಶ್ರೀಕೃಷ್ಣ ದರ್ಶನ'ದ ಪ್ರಧಾನ ಸಂಪಾದಕರು. ಕೇಂದ್ರ ವಿತ್ಥಖಾತೆ ರಾಜ್ಯ ಸಚಿವ ಭಾಗವತ್ ಕಿಶನ್ ರಾವ್ ಕರಾಡ್, ಲೋಕಸಭಾ ಸದಸ್ಯ ರಾಹುಲ್ ಆರ್.ಶಿವಾಲೆ, ಕರ್ಣಾಟಕ ಬ್ಯಾಂಕ್ ನ ಆಡಳಿತ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್, ಮಧುಸೂದನ ಅಗರ್ ವಾಲ್, ಐಕಳ ಹರೀಶ್ ಶೆಟ್ಟಿ, ಸುಧೀರ್ ಶೆಟ್ಟಿ, ಆನಂದ ಪೇಜಾವರ, ಬಿ ಎಸ್ ಕೆ.ಬಿ. (ಗೋಕುಲ) ಅಧ್ಯಕ್ಷ ಡಾ.ಸುರೇಶ ರಾವ್ ಮುಂತಾದವರು ಉಪಸ್ಥಿತರಿದ್ದರು.
ಶಿರ್ವ ಟು ಕಾಪು ; ಕಾಪು ಟು ಶಿರ್ವ - ಪಿಎಸ್ಐಗಳ ವರ್ಗಾವಣೆ
Posted On: 15 May 2022, 04:26 PM
ಕಾಪು : ಸರಕಾರದ ಆದೇಶದಂತೆ ಶಿರ್ವ ಠಾಣೆಯ ಪಿಎಸ್ಐ ಶ್ರೀಶೈಲ ಡಿ ಮುರಗೊಡ್ ಕಾಪು ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಕಾಪು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ರಾಘವೇಂದ್ರ ಸಿ ಶಿರ್ವ ಠಾಣೆಗೆ ವರ್ಗಾವಣೆಗೊಂಡಿದ್ದಾರೆ.
ಪಡುಬಿದ್ರಿ ಪಂಚಾಯತ್ಗೆ ಕಸ ಸಾಗಾಟ ವಾಹನ ಕೊಡುಗೆ
Posted On: 15 May 2022, 10:35 AM
ಪಡುಬಿದ್ರಿ : ಅದಾನಿ ಫೌಂಡೇಶನ್ ಹಾಗೂ ಉಡುಪಿ ಪವರ್ ಕಾರ್ಪೋರೇಷನ್ ಸಿಎಸ್ಆರ್ ನಿಧಿಯಿಂದ ಪಡುಬಿದ್ರಿ ಗ್ರಾಮ ಪಂಚಾಯತ್ ಗೆ ಸುಮಾರು 8.50 ಲಕ್ಷ ರೂ. ವೆಚ್ಚದ ಕಸ ಸಾಗಾಟ ವಾಹನವನ್ನು ಪಡುಬಿದ್ರಿ ಗ್ರಾಮ ಪಂಚಾಯತ್ ವಠಾರದಲ್ಲಿ ಮೇ 14 ರಂದು ಅದಾನಿ ಸಮೂಹ ಸಂಸ್ಥೆಯ ಅಧ್ಯಕ್ಷ ಕಿಶೋರ್ ಆಳ್ವ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ ರವಿ ಶೆಟ್ಟಿ ಪಾದೆಬೆಟ್ಟು ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಮಾತನಾಡಿದ ಕಿಶೋರ್ ಆಳ್ವ ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆ ನಡೆಸುತ್ತಿರುವ ಯುಪಿಸಿಎಲ್ ಸಂಸ್ಥೆಯು ತನ್ನ ಸಿಎಸ್ಆರ್ ನಿಧಿಯನ್ನು ಪರಿಸರದ ಗ್ರಾಮಗಳ ಅಭಿವೃದ್ಧಿಗೆ ಬಳಸುತ್ತಿದ್ದು, ಪಡುಬಿದ್ರಿ ಗ್ರಾಪಂಗೆ ಹಂತ ಹಂತವಾಗಿ 2.77 ಕೋಟಿ ರೂ. ನೀಡಲು ಬದ್ಧವಿದೆ ಎಂದರು. ಈ ಸಂದರ್ಭ ಯುಪಿಸಿಎಲ್ ಉಪ ಮಹಾ ಪ್ರಬಂಧಕ ರವಿ ಜೇರೆ, ಪಡುಬಿದ್ರಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಯಶೋದ, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
