Updated News From Kaup
ಏಣಗುಡ್ಡೆ ಗರಡಿ ಕಟಪಾಡಿ : ಶ್ರದ್ಧಾಕೇಂದ್ರಗಳು ಭಕ್ತಿ ಮತ್ತು ಶಕ್ತಿಯ ಕೇಂದ್ರಗಳು - ವಿಖ್ಯಾತಾನಂದ ಸ್ವಾಮೀಜಿ
Posted On: 14 May 2022, 12:13 AM
ಕಟಪಾಡಿ : ಶೃದ್ಧೆ, ಶುಚಿತ್ವ ಕಾಪಾಡುವ ಮೂಲಕ ಕ್ಷೇತ್ರಗಳಲ್ಲಿ ಭಕ್ತಿ ಮೂಡಲು ಸಹಕಾರಿ. ತನ್ಮೂಲಕ ಕ್ಷೇತ್ರದ ವೃದ್ಧಿಯಾಗುತ್ತದೆ. ಶ್ರದ್ಧಾಕೇಂದ್ರಗಳು ಭಕ್ತಿ ಮತ್ತು ಶಕ್ತಿಯ ಕೇಂದ್ರಗಳು. ಏಣಗುಡ್ಡೆ ಗರಡಿಯು ಪವಿತ್ರ ದೇಗುಲವಾಗಿ ಶಕ್ತಿ ಕೇಂದ್ರವಾಗಲಿ ಎಂದು ಆರ್ಯಈಡಿಗ ಮಹಾ ಸಂಸ್ಥಾನ ಸೋಲೂರು, ಬೆಂಗಳೂರು ಇದರ ಪೀಠಾಧಿಪತಿ ಶ್ರೀಗಳಾದ ವಿಖ್ಯಾತಾನಂದ ಸ್ವಾಮೀಜಿ ಕಟಪಾಡಿ ಏಣಗುಡ್ಡೆ ಶ್ರೀ ಬ್ರಹ್ಮಬೈದೇರುಗಳ ಗರಡಿಯ ಪುನರ್ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶಾಭಿಷೇಕ ಹಾಗೂ ಕಾಲಾವಧಿ ಜಾತ್ರಾ ಉತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಜ್ಯೋತಿ ಪ್ರಜ್ವಲಿಸಿ ಆಶೀರ್ವಚನ ನೀಡಿದರು. ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ ಸಮಾಜದಲ್ಲಿ ಎಲ್ಲರಿಗೂ ಬದುಕುವ ಹಕ್ಕಿದೆ. ಕೋಟಿಚೆನ್ನಯರು ಸ್ವಾಭಿಮಾನದ ಧೀಮಂತಿಕೆಯ ಪ್ರತಿಪಾದಕರು. ಗರಡಿಗಳು ಸ್ವಾಭಿಮಾನದ ಸಂಕೇತ. ಈಗಾಗಲೇ ಸರಕಾರ ಬ್ರಹ್ಮಶ್ರೀ ನಾರಾಯಣಗುರುಗಳ ಹೆಸರಿನಲ್ಲಿ ವಸತಿ ಶಾಲೆಗೆ ಅನುಮೋದಿಸಿದೆ. ಕೋಟಿ ಚೆನ್ನಯರ ಹೆಸರಿನಲ್ಲಿ ಸೈನಿಕ ಶಾಲೆಯ ತೆರೆಯುವ ಅಗತ್ಯವಿದೆ. ಎಂದರು. ಗರಡಿಯಲ್ಲಿ ಸೇವೆಗೈದ ಪ್ರಮುಖರಿಗೆ ಅತಿಥಿಗಳ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್. ಮೆಂಡನ್, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರ, ಮಂಗಳೂರು ಅಧ್ಯಕ್ಷರಾದ ಮಟ್ಟಾರ್ ರತ್ನಾಕರ್ ಹೆಗ್ಡೆ, ಜಿಲ್ಲಾ ಸಹಕಾರಿ ಮೀನುಗಾರರ ಮಾರಾಟ ಮಂಡಳಿ, ಉಡುಪಿ-ದ.ಕ ಅಧ್ಯಕ್ಷರಾದ ಯಶಪಾಲ್ ಸುವರ್ಣ, ಕೋಟೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕಿಶೋರ್ ಕುಮಾರ್ ಅಂಬಾಡಿ, ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಇಂದಿರಾ ಆಚಾರ್ಯ, ರಾಷ್ಟ್ರೀಯ ಬಿಲ್ಲವ ಮಹಾ ಮಂಡಲ (ರಿ.) ಮುಲ್ಕಿ ಅಧ್ಯಕ್ಷರಾದ ಡಾ| ರಾಜಶೇಖರ್ ಕೋಟ್ಯಾನ್, ಸಮಾಜ ಸೇವಕರಾದ ಸುರೇಶ್ ಶೆಟ್ಟಿ ಗುರ್ಮೆ, ಎಸ್.ವಿ.ಎಸ್. ವಿದ್ಯಾವರ್ಧಕ ಸಂಘ, ಕಟಪಾಡಿ ಸಂಚಾಲಕರಾದ ಸತ್ಯೇಂದ್ರ ಪೈ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಚೋಕ್ಕಾಡಿ ಆಡಳಿತ ಮೊಕ್ತೇಸರರಾದ ವಿಜಯ ಕುಮಾರ್ ಶೆಟ್ಟಿ, ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಉಚ್ಚಿಲ ಆಡಳಿತ ಮೊಕ್ತೇಸರರಾದ ವಾಸುದೇವ ಸಾಲ್ಯಾನ್, ಶ್ರೀ ಗೋಕರ್ಣನಾಥ ಕ್ಷೇತ್ರ, ಕುದ್ರೋಳಿಯ ಕೋಶಾಧಿಕಾರಿ ಪದ್ಮರಾಜ್, ದೇವಾಡಿಗರ ಸಂಘದ ಅಧ್ಯಕ್ಷರಾದ ಮನೋಹರ ದೇವಾಡಿಗ, ಮುಂಬಯಿ ಸಮಿತಿಯ ಕಾರ್ಯದರ್ಶಿ ಸತೀಶ್ ಅಮೀನ್, ಗರಡಿ ಪೂಜಾ ಪೂಜಾರಿ ಇಂಪು ಪೂಜಾರಿ, ಗರಡಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ಗಂಗಾಧರ ಸುವರ್ಣ, ಧಾರ್ಮಿಕ ವಿಧಿ ವಿಧಾನದ ತಂತ್ರಿಗಳಾದ ವೇದ ಮೂರ್ತಿ ಮನೋಜ್ ತಂತ್ರಿ ಶಿವಗಿರಿ ಮತ್ತು ವೇದ ಮೂರ್ತಿ ಮಹೇಶ್ ಶಾಂತಿ ಹೆಜಮಾಡಿ, ಜ್ಯೋತಿಷ್ಯ ಪ್ರವೀಣ ಮೋಹನ್ ಮಾಯಿಪ್ಪಾಡಿ ಕೇರಳ, ಗರಡಿಯ ವಾಸ್ತು ಶಿಲ್ಪಿ ಪ್ರಮಲ್ ಕುಮಾರ್, ಕಾಷ್ಠ ಶಿಲ್ಪಿ ಜಯರಾಮ್ ಆಚಾರ್ಯ, ಶಿಲಾ ಶಿಲ್ಪಿ ಸುಧೀರ್ ಆಚಾರ್ಯ ಉಪಸ್ಥಿತರಿದ್ದರು. ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗರಡಿ ಜೀಣೋದ್ಧಾರ ಸಮಿತಿಯ ಅಧ್ಯಕ್ಷರಾದ ಅಶೋಕ್ ಎನ್. ಪೂಜಾರಿ ವಹಿಸಿದ್ದರು. ಪಲ್ಲವಿ ಏಣಗುಡ್ಡೆ ಪ್ರಾರ್ಥಿಸಿ, ಗರಡಿ ಜೀಣೋದ್ಧಾರ ಸಮಿತಿಯ ಕಾರ್ಯದರ್ಶಿ ಹರಿಶ್ಚಂದ್ರ ಅಮೀನ್ ಸ್ವಾಗತಿಸಿದರು. ಕೇಂಜ ಗರಡಿಯ ಬಗ್ಗ ಪೂಜಾರಿ ಯಾನೆ ಉಮೇಶ್ ಕೋಟ್ಯಾನ್ ಪ್ರಸ್ತಾವಿಸಿದರು. ದಯಾನಂದ ಉಗ್ಗೆಲ್ ಬೆಟ್ಟು ನಿರೂಪಿಸಿ, ರಿತೇಶ್ ಕೋಟ್ಯಾನ್ ವಂದಿಸಿದರು.
ಉದ್ಯೋಗ ತರಬೇತಿ ಸಹಯೋಗದ ಪರಸ್ಪರ ಒಡಂಬಡಿಕೆ ಕಾರ್ಯಕ್ರಮ
Posted On: 13 May 2022, 08:23 PM
ಶಿರ್ವ : ಸಂತ ಮೇರಿಸ್ ಕಾಲೇಜು,ಶಿರ್ವ ಮತ್ತು ಉನ್ನತಿ ಕ್ಯಾರಿಯರ್ ಅಕಾಡೆಮಿ ಬೆಂಗಳೂರು ಇವರ ಸಹಭಾಗಿತ್ವದಲ್ಲಿ ಉದ್ಯೋಗ ತರಬೇತಿ ಕಾರ್ಯಕ್ರಮಗಳ ಪರಸ್ಪರ ಒಡಂಬಡಿಕೆಯು ಎರಡು ಸಂಸ್ಥೆಗಳ ಮುಖ್ಯಸ್ಥರ ಸಮ್ಮುಖದಲ್ಲಿ ನಡೆಯಿತು. ನಮ್ಮ ದೇಶದಲ್ಲಿ ಶೇಕಡಾ ೫೦ರಷ್ಟು ಜನರು ೩೫ ವರ್ಷಕ್ಕಿಂತ ಸಣ್ಣವರು. ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಉದ್ಯೋಗ ಲಭಿಸುವುದು ಕಷ್ಟಸಾಧ್ಯವಾಗಿದೆ. ಯುವಜನರ ಉದ್ಯೋಗದ ಸಾಮಾರ್ಥ್ಯವನ್ನು ಸಮರ್ಥವಾಗಿ ಬಳಸಿಕೊಳ್ಳಬೇಕಾದರೆ ಅಯಾ ಉದ್ಯೋಗಗಳ ಹಿನ್ನಲೆಯಲ್ಲಿ ಸೂಕ್ತ ತರಬೇತಿಯು ಅತ್ಯಂತ ಅಗತ್ಯವಾಗಿದೆ. ತಾಂತ್ರಿಕತೆ ಇಂದು ಎಲ್ಲಾರಂಗಗಳಲ್ಲಿ ವ್ಯಾಪಕವಾಗಿರುವ ಕಾರಣ ಅದರ ಅಗತ್ಯವೂ ಇದೆ ಆದುದರಿಂದ ಈ ಎಲ್ಲಾ ವಿಷಯಗಳನ್ನು ಉನ್ನತಿ ಕ್ಯಾರಿಯರ್ ಅಕಾಡಮಿಯು ಒಬ್ಬ ಅಭ್ಯರ್ಥಿಗೆ ಒದಗಿಸುವಲ್ಲಿ ಉತ್ತಮ ರೀತಿಯ ಪ್ರಯತ್ನವನ್ನು ಮಾಡುತ್ತಾಬಂದಿದೆ ಇದರ ಸದುಪಯೋಗ ವಿದ್ಯಾರ್ಥಿಗಳಿಗೆ ಒದಗುವಂತಾಗಲಿ ಎಂದು ಅಕಾಡೆಮಿಯ ಸ್ಥಾಪಕರಾದ ಪ್ರೇಮ್ ಪ್ರಸಾದ್ ಶೆಟ್ಟಿ ಒಡಂಬಡಿಕೆಗೆ ಸಹಿ ಹಾಕುವ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇದೊಂದು ಚಾರಿತ್ರಿಕ ದಾಖಲೆ, ಮುಂದಿನ ದಿನಗಳಲ್ಲಿ ಪದವಿಯ ಜೊತೆಗೆ ವೃತ್ತಿಕೌಶಲ್ಯ ತರಬೇತಿಯೂ ದೇಶ-ವಿದೇಶಗಳಲ್ಲಿ ಅಗತ್ಯವಾಗಿದೆ. ಪ್ರಸ್ತುತ ಉದ್ಯೊಗ ಒಂದು ಪ್ರಾಥಮಿಕ ಅಗತ್ಯವಾಗಿದೆ. ಸಂತ ಮೇರಿ ಕಾಲೇಜಿನ ವಿದ್ಯಾರ್ಥಿಗಳು ಸಮಾಜದಲ್ಲಿ ಯಾವ ಕಾರಣಕ್ಕೆ ಉತ್ತಮರು ಎಂಬ ಪ್ರಶ್ನೆಗೆ ನಮ್ಮ ಕಾಲೇಜಿನಲ್ಲಿ ಸಂಘಟಿಸುವ ತರಬೇತಿ ಕಾರ್ಯಕ್ರಗಳು ಆಗಿವೆ ಎಂದರೆ ಅತಿಶಯೋಕ್ತಿಯಲ್ಲ ಎಂದು ಪ್ರಶಂಸೆ ಮಾತುಗಳನ್ನು ಕಾಲೇಜಿನ ಪ್ರಾಶುಂಪಾಲರಾದ ಡಾ.ಹೆರಾಲ್ಡ್ ಐವನ್ ಮೊನಿಸ ರವರು ವ್ಯಕ್ತಪಡಿಸಿದರು. ನವೀನ್ ನಾಯಕ್ ರವರು ಒಡಂಬಡಿಕೆಯ ಮುಖ್ಯಾಂಶಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು ಹಾಗೂ ಪರಿಪೂರ್ಣ ಮಾಹಿತಿಯನ್ನು ತರಬೇತಿಯ ರೂಪದಲ್ಲಿ ನೀಡಿದರು.ಪ್ರಿಯಾಂಕ ಪ್ರಾರ್ಥಿಸಿ, ಕಾಲೇಜಿನ ಉದ್ಯೋಗ ಮಾಹಿತಿ ಘಟಕದ ಸಂಯೋಜಕಿ ತನುಜಾ ಸುವರ್ಣ ಸ್ವಾಗತಿಸಿ, ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಕೆ.ಪ್ರವೀಣ್ ಕುಮಾರ್ ಪ್ರಸ್ತಾವನೆಗೈದರು. ಆಕಾಂಕ್ಷ ನಿರೂಪಿಸಿ, ರೊಯ್ಸ್ಟನ್ ವಂದಿಸಿದರು.
ಶಿರ್ವ: ಕ್ಯಾನ್ಸರ್ ಪೀಡಿತ ಒಬ್ಬಂಟಿ ವ್ಯಕ್ತಿಗೆ ಗ್ರಾ.ಪಂ ಅಧ್ಯಕ್ಷರ ವಾಟ್ಸಪ್ ಗ್ರೂಪ್ ನಿಂದ 1.58 ಲಕ್ಷ ರೂ ನೆರವು
Posted On: 13 May 2022, 08:15 PM
ಶಿರ್ವ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಟಕಲ್ಲು ಪೊದಮಾಲೆ ನಿವಾಸಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ಹೆನ್ರಿ ಅರಾನ್ನಾರವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದು ಮಣಿಪಾಲದ ಕೆ.ಎಮ್.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಸುಮಾರು 1.50 ಲಕ್ಷ ರೂ ಚಿಕಿತ್ಸಾ ವೆಚ್ಚವನ್ನು ಭರಿಸಬೇಕಾಗಿತ್ತು. ಈ ವಿಚಾರವನ್ನು ತಿಳಿದ ಶಿರ್ವ ಗ್ರಾ.ಪಂ ಅಧ್ಯಕ್ಷ, ಬಂಟಕಲ್ಲು ವಾರ್ಡಿನ ಸದಸ್ಯ ಕೆ ಆರ್ ಪಾಟ್ಕರ್ ರವರು ತಮ್ಮ ವಾರ್ಡ್ ನ ಬಂಟಕಲ್ಲು ವಾರ್ಡ್ ವಾಟ್ಸಪ್ ಗ್ರೂಪ್ ಮೂಲಕ ಈ ಬಗ್ಗೆ ಒಂದು ಸಂದೇಶವನ್ನು ಹಾಕಿದ್ದರು. ಕೇವಲ ಅರ್ಧ ದಿನದ ಅವಧಿಯಲ್ಲಿ ರೂ 1.58 ಲಕ್ಷ ರೂ ಯನ್ನು ಆ ವಾರ್ಡಿನ ಸಹೃದಯಿ ಬಾಂಧವರಿಂದ ಸಂಗ್ರಹವಾಗಿತ್ತು. ಈ ಸ್ಪಂದನೆಗೆ ಕೆ ಆರ್ ಪಾಟ್ಕರ್ ರವರು ವಾಟ್ಸಪ್ ಮೂಲಕವೇ ಕೃತಜ್ಞತೆ ಸಲ್ಲಿಸಿದ್ದರು. ಆಸ್ಪತ್ರೆಯ ವೆಚ್ಚ ಭರಿಸಲು ಹಣ ಸಂಗ್ರಹವಾಗುತ್ತಿದ್ದಂತೆ ಹೆನ್ರಿ ಅರಾನ್ನಾ ರವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಸಂಗ್ರಹವಾದ ಹಣವನ್ನು ಆಸ್ಪತ್ರೆಗೆ ನೀಡಬೇಕಾಗಿದ್ದ ಬಾಕಿ ಮೊತ್ತವನ್ನು ಪಾವತಿಸಲು ಹಾಗೂ ಅವರ ಅಂತ್ಯಕ್ರಿಯೆಯ ವೆಚ್ಚಕ್ಕೆ ಉಪಯೋಗಿಸಲಾಯಿತು.
ಹೆಜಮಾಡಿ : ಗ್ಯಾಸ್ ಸಿಲಿಂಡರ್ಗಳಿದ್ದ ಲಾರಿಗೆ ಬೆಂಕಿ ; ತಪ್ಪಿದ ಭಾರಿ ಅನಾಹುತ
Posted On: 12 May 2022, 10:30 PM
ಹೆಜಮಾಡಿ : ಇಲ್ಲಿನ ಟೋಲ್ ಬಳಿ ನಿಲ್ಲಿಸಿದ್ದ ಗ್ಯಾಸ್ ಸಿಲಿಂಡರ್ ಇದ್ದ ಲಾರಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಇದನ್ನು ಕಂಡ ಸ್ಥಳೀಯರ ಸಮಯಪ್ರಜ್ಞೆಯಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ. ಈ ಆಕಸ್ಮಿಕ ಬೆಂಕಿಗೆ ಕಾರಣ ಶಾಟ್೯ ಸಕ್ಯೂ೯ಟ್ ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಪಡುಬಿದ್ರಿ ಪೋಲಿಸರು ಬಂದು ಪರಿಶೀಲಿಸಿದ್ದಾರೆ.
ವಿಶ್ವ ಭಾರತಿ ಕಾಪು ವತಿಯಿಂದ ಮೇ 14, 15 ಮತ್ತು 16ರಂದು ಕಾಪುವಿನಲ್ಲಿ ವಿಶ್ವಭಾರತಿ ಸ್ವದೇಶಿ ಮೇಳ
Posted On: 12 May 2022, 07:46 PM
ಕಾಪು : ವಿಶ್ವ ಭಾರತಿ ಕಾಪು ಅರ್ಪಿಸುವ ವಿಶ್ವಭಾರತಿ ಸ್ವದೇಶಿ ಮೇಳವು ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ವಠಾರದಲ್ಲಿ ಮೇ 14, 15 ಮತ್ತು 16 ರಂದು ಜರಗಲಿದೆ. ಸಮಾರಂಭವನ್ನು ಪರಮಪೂಜ್ಯ ಜಗದ್ಗುರು ಆನೆಗುಂದಿ ಮಹಾಸಂಸ್ಥಾನ ಸರಸ್ವತಿ ಪೀಠಾಧೀಶ್ವರರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತೀ ಮಹಾಸ್ವಾಮೀಜಿಯವರು ಪಡುಕುತ್ಯಾರು ಉದ್ಘಾಟಿಸಲಿದ್ದಾರೆ. ಸ್ವದೇಶಿ ವಸ್ತುಗಳ ಬಗ್ಗೆ ತಿಳುವಳಿಕೆ ಮೂಡಿಸುವ ನಿಟ್ಟಿನಲ್ಲಿ ಕರಕುಶಲತೆಗಳನ್ನು ಒಳಗೊಂಡಂತೆ ಸುಮಾರು 80ರಷ್ಟು ಮಳಿಗೆಗಳು ಈ ವಿಶ್ವಭಾರತಿ ಸ್ವದೇಶಿ ಮೇಳದಲ್ಲಿ ಇರಲಿದೆ. ಸಭಾ ಕಾರ್ಯಕ್ರಮ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮಗಳು, ಮಕ್ಕಳಿಂದ ಹಿರಿಯರವರೆಗೆ ಸ್ಪರ್ಧಾ ಕಾರ್ಯಕ್ರಮ, ಚಿತ್ರೋತ್ಸವ, ಸ್ಥಳೀಯ ಪ್ರತಿಭೆಗಳಿಂದ ಕಾರ್ಯಕ್ರಮಗಳು ನಡೆಯಲಿದೆಯೆಂದು ವಿಶ್ವಭಾರತಿ ಇದರ ಪ್ರಮುಖರಾದ ರಂಗಕರ್ಮಿ ಬಾಸುಮ ಕೊಡಗು ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮೇ 14, ಶನಿವಾರ ಪೂರ್ವಾಹ್ನ 10ರಿಂದ ಉದ್ಘಾಟನಾ ಸಮಾರಂಭ ಮತ್ತು ಪುನೀತ ನಮನ ಕಾರ್ಯಕ್ರಮ, ಮೂರು ತಿಂಗಳಿಂದ ಎರಡು ವರ್ಷದ ಮಕ್ಕಳಿಗೆ ಆರೋಗ್ಯವಂತ ಶಿಶು ಸ್ಪರ್ಧೆ ಎಳೆಯರ ಅಂಗಳ, ಮಧ್ಯಾಹ್ನ 2ರಿಂದ 5ರವರೆಗೆ ಮಕ್ಕಳಿಗಾಗಿ ಛದ್ಮವೇಷ ಸ್ಪರ್ಧೆ, ಜನಪದ/ದೇಶೀ ನೃತ್ಯ ಸ್ಪರ್ಧೆ, ಮೇ 15ರಂದು ಯುವಕ-ಯುವತಿಯರಿಗಾಗಿ ಪ್ರತ್ಯೇಕ ದೇಶೀ ನೃತ್ಯ ಸ್ಪರ್ಧೆ, ಮಧ್ಯಾಹ್ನ 2ರಿಂದ 5ರವರೆಗೆ ಆದರ್ಶ ದಂಪತಿ ಸ್ಪರ್ಧೆ, ರಾತ್ರಿ ಆದರ್ಶ ಕಲಾವಿದರು ಅಂಬಾಗಿಲು ಇವರಿಂದ ಕರ್ಣಾಂತರಂಗ, ಮೇ 16 ಸೋಮವಾರ ಬೆಳಿಗ್ಗೆ 10ರಿಂದ ತಾರೆಯರ ತೋಟದಲ್ಲಿ ಕನ್ನಡ ತುಳು ಚಿತ್ರರಂಗದ ತಾರೆಯರ ಸಂಗಮ ಮತ್ತು ಮುಖಾಮುಖಿ, ಮೇ 16 ಅಪರಾಹ್ನ 2ರಿಂದ ಮಹಿಳೆಯರಿಗಾಗಿ ಜನಪದ ಗೀತೆ ಸ್ಪರ್ಧೆ ನಾರೀ ಧ್ವನಿ, ರಾತ್ರಿ ಸ್ಥಳೀಯ ಕಲಾವಿದರಿಂದ ನೃತ್ಯ ವೈಭವ, ಪ್ರತಿದಿನ ಸಂಜೆ 6ಗಂಟೆಯಿಂದ ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ಗಿರೀಶ್ ಕಾಸರವಳ್ಳಿ ಚಿತ್ರೋತ್ಸವ, ಸಮಾರಂಭದಲ್ಲಿ ಭಾಗವಹಿಸಿದವರಿಗೆ ಅದೃಷ್ಟ ಬಹುಮಾನದ ಅವಕಾಶವಿದೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ವಿಶ್ವಭಾರತಿ ಕಾಪು ಅಧ್ಯಕ್ಷರಾದ ಕಾಪು ಶ್ರೀಕಾಂತ್ ಬಿ. ಆಚಾರ್ಯ, ಸ್ವದೇಶಿ ಮೇಳದ ಸಂಚಾಲಕರಾದ ಎಲ್ಲೂರು ಆನಂದ ಕುಂದರ್ ಉಪಸ್ಥಿತರಿದ್ದರು.
ಉದ್ಯಾವರ : ಖಾಸಗಿ ಬಸ್ ಪಲ್ಟಿ
Posted On: 12 May 2022, 05:14 PM
ಉಡುಪಿ : ಖಾಸಗಿ ಎಕ್ಸ್ ಪ್ರೆಸ್ ಬಸೊಂದು ಉದ್ಯಾವರ ಬಲಾಯಿಪಾದೆ ಬಳಿ ಮಗುಚಿ ಬಿದ್ದ ಘಟನೆ ಇಂದು ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಇದಾಗಿದ್ದು, ಬಲಾಯಿಪಾದೆಯ ಬಳಿ ಬ್ಯಾರಿಕೇಡ್ ದಾಟುವಾಗ ಡಿವೈಡರ್ ಮೇಲೆ ಮಗುಚಿ ಬಿದ್ದಿದೆ. 20 ಮಂದಿ ಪ್ರಯಾಣಿಕರು ಗಾಯಗೊಂಡು ಉಡುಪಿ ಮತ್ತು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳಕ್ಕೆ ಉಡುಪಿ ಸಂಚಾರಿ ಠಾಣಾ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಥಮ್ಸ್ ಮ್ಯಾಜಿಕ್ ವಲ್ಡ್೯ ಕಟಪಾಡಿ ರಜಾ ಮಜಾ -2022 ಬೇಸಿಗೆ ಶಿಬಿರ
Posted On: 11 May 2022, 07:46 PM
ಕಟಪಾಡಿ : ಇಲ್ಲಿನ ಪ್ರಥಮ್ಸ್ ಮ್ಯಾಜಿಕ್ ವಲ್ಡ್೯ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ ರಜಾ ಮಜಾ ಮೇ 2ರಿಂದ ಮೇ 7ರವರೆಗೆ ಕಟಪಾಡಿಯ ಎಸ್ ವಿ ಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ಎಸ್ ವಿ ಎಸ್ ವಿದ್ಯಾವರ್ಧಕ ಸಂಘ ಇದರ ಸಂಚಾಲಕರಾದ ಕೆ ಸತ್ಯೇಂದ್ರ ಪೈ.ಶಿಬಿರವನ್ನು ಮ್ಯಾಜಿಕ್ ಮೂಲಕ ಉದ್ಘಾಟಿಸಿ ಮಕ್ಕಳ ಪ್ರತಿಭೆ ಬೆಳಗಲು ಇಂತಹ ಬೇಸಿಗೆ ಶಿಬಿರಗಳು ಸಹಕಾರಿಯಾಗಲಿವೆ. ಮುಂದಿನ ದಿನಗಳಲ್ಲಿ ಎಲ್ಲಾ ಶಾಲೆಗಳಲ್ಲಿ ಪ್ರತೀ ತಿಂಗಳಿಗೊಮ್ಮೆ ಮಕ್ಕಳ ಆಸಕ್ತಿಗೆ ಅನುಗುಣವಾಗಿ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಬೇಕೆಂದು ತಿಳಿಸಿದರು. ಶಿಬಿರದಲ್ಲಿ ಚಿತ್ರಕಲೆ ಬಗ್ಗೆ ಪ್ರಸಾದ ರಾವ್ ಉಡುಪಿ, ಮುಖವಾಡ ತಯಾರಿ ಬಗ್ಗೆ ರಮೇಶ್ ಬಂಟಕಲ್, ಮ್ಯಾಜಿಕ್- ಪ್ರಥಮ್ ಕಾಮತ್ , ಅಭಿನಯ- ನಾಗೇಶ್ ಕಾಮತ್, ಕ್ಲೇಮಾಡ್ಲಿಂಗ್, ಕ್ರಾಫ್ಟ್, ಟ್ಯಾಟೂ ಬಗ್ಗೆ - ಮುಸ್ತಫಾ, ರಂಗೋಲಿ ಆರ್ಟ್ ಬಗ್ಗೆ ಸೂರ್ಯ ಪುರೋಹಿತ್ ಕಾರ್ಕಳ ಇವರು ತರಬೇತಿಯನ್ನು ನೀಡಿದರು. ಸಮಾರೋಪ ಸಮಾರಂಭದಲ್ಲಿ. ಎಸ್ ವಿ ಎಸ್ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ದೇವೇಂದ್ರ ನಾಯಕ್ ಇವರು ಮಕ್ಕಳಿಗೆ ಶುಭಹಾರೈಸಿದರು. ಸುಮಾರು 22 ಮಂದಿ ಮಕ್ಕಳು ಭಾಗವಹಿಸಿದ ಶಿಬಿರವನ್ನು ಮ್ಯಾಜಿಕ್ ವರ್ಲ್ಡ್ ನ ಪ್ರಥಮ್ ಕಾಮತ್, ನಾಗೇಶ್ ಕಾಮತ್, ಸುಜಾತ ಕಾಮತ್ ಕಟಪಾಡಿ ಇವರು ಯಶಸ್ವಿಯಾಗಿ ಆಯೋಜಿಸಿದ್ದರು.
ಜಾನಪದ ಸಂಶೋಧಕ ಕೆ.ಎಲ್.ಕುಂಡಂತಾಯರಿಗೆ ಸನ್ಮಾನ
Posted On: 09 May 2022, 11:12 PM
ಸುರತ್ಕಲ್ : ಉಭಯ ಜಿಲ್ಲೆಗಳ ಲ್ಲೆಗಳ ನೂರಕ್ಕೂ ಹೆಚ್ಚು ದೇವಾಲಯಗಳ ಕುರಿತು ಅಧ್ಯಯನ ನಡೆಸಿ ಸಂಶೋಧನಾತ್ಮಕ ಲೇಖನಗಳನ್ನು ಬರೆದ,ಜಾನಪದ ಸಂಶೋಧಕ, ನಾಗಾರಾಧನೆ, ಬೂತಾರಾಧನೆ ಸಹಿತ ಜನಪದರ ಆಚರಣೆಗಳ ಕುರಿತು ಬರೆದ ಕೆ.ಎಲ್.ಕುಂಡಂತಾಯ ಅವರನ್ನು ಸುರತ್ಕಲ್ ಶಾಸಕ ಡಾ.ವೈ ಭರತ ಶೆಟ್ಟಿ, ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು, ಯಕ್ಷಗಾನ ಕಲಾವಿದ ಕೆ.ಗೋವಿಂದ ಭಟ್, ದೇವಳದ ಆನುವಂಶಿಕ ಮೊಕ್ತಸರ ಡಾ. ಮಯ್ಯ ಮುಂತಾದವರ ಉಪಸ್ಥಿತಿಯಲ್ಲಿ ಸುರತ್ಕಲ್ ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ಸನ್ಮಾನಿಸಲಾಯಿತು.
ಗಾನ ವೈಭವ ; ಶ್ರೀನಿವಾಸ ಕಲ್ಯಾಣ ಕಿರು ಯಕ್ಷಗಾನ ಪ್ರದರ್ಶನ
Posted On: 09 May 2022, 10:49 PM
ನಂದಿಕೂರು : ಸುವರ್ಣ ಪ್ರತಿಷ್ಠಾನ ಕರ್ನಿರೆ ವತಿಯಿಂದ ಭಾಗವತರಾದ ಪಟ್ಲ ಸತೀಶ್ ಶೆಟ್ಟಿ, ರವಿಚಂದ್ರ ಕನ್ನಡಿಕಟ್ಟೆ, ಕಾವ್ಯಶ್ರೀ ಅಜೇರು ಅವರಿಂದ ಗಾನ ವೈಭವ ಹಾಗೂ ತೆಂಕುತಿಟ್ಟಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಶ್ರೀನಿವಾಸ ಕಲ್ಯಾಣ ಯಕ್ಷಗಾನ ಪ್ರದರ್ಶನ ನಂದಿಕೂರಿನ ಸುವರ್ಣ ಸದನ ನಿವಾಸದಲ್ಲಿ ಸೋಮವಾರ ನಡೆಯಿತು. ಕಲಾವಿದರಾದ ವಸಂತ ಗೌಡ ಕಾಯರ್ತಡ್ಕ, ಸಂತೋಷ್ ಕುಮಾರ್ ಹಿರಿಯಾಣ, ಕಾವ್ಯಶ್ರೀ ಅಜೇರು ಅವರನ್ನು ಸನ್ಮಾನಿಸಲಾಯಿತು. ಸುವರ್ಣ ಪ್ರತಿಷ್ಠಾನ ಅಧ್ಯಕ್ಷ ಪ್ರಭಾಕರ್ ಡಿ. ಸುವರ್ಣ, ಹಿರಿಯರಾದ ಭುಜಂಗ ಡಿ. ಸುವರ್ಣ, ಶಿವಾನಂದ ಸುವರ್ಣ ಮೊದಲಾದವರಿದ್ದರು. ಜನಾರ್ದನ ಅಮ್ಮುಂಜೆ ಕಾರ್ಯಕ್ರಮ ನಿರೂಪಿಸಿದರು.
ಔಷಧ ರಹಿತ ಕೆಚ್ಚಲು ಬಾವು ಗುಣಪಡಿಸುವಿಕೆ ಕುರಿತು ಮಾಹಿತಿ ಕಾರ್ಯಾಗಾರ
Posted On: 08 May 2022, 05:46 PM
ಕಾಪು : ಕರ್ನಾಟಕ ಹಾಲು ಮಹಾ ಮಂಡಲ ಬೆಂಗಳೂರು, ದ.ಕ. ಹಾಲು ಒಕ್ಕೂಟ ಮಂಗಳೂರು, ಇನ್ನಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಸಹಭಾಗಿತ್ವದಲ್ಲಿ ಮಡುಂಬು ಶೇಖರ್ ಬಂಗೇರ ಅವರ ಮನೆ ವಠಾರದಲ್ಲಿ ಮೇ 4ರಂದು ಔಷಧ ರಹಿತ ಕೆಚ್ಚಲು ಬಾವು ಗುಣಪಡಿಸುವಿಕೆ ಕುರಿತು ಮಾಹಿತಿ ಕಾರ್ಯಾಗಾರವನ್ನು ಕರ್ನಾಟಕ ಹಾಲು ಮಹಾಮಂಡಲದ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಉದ್ಘಾಟಿಸಿದರು. ಕೆಚ್ಚಲು ಬಾವು ರೋಗ ಕರಾವಳಿಯ ಹೈನುಗಾರಿಕೆಗೆ ಮಾರಕ ಪರಿಣಾಮ ಬೀರುತ್ತಿದೆ. ಈ ರೋಗಕ್ಕೆ ಗುರಿಯಾಗುವ ರಾಸುಗಳ ಹಾಲನ್ನು ಡೈರಿಗೆ ಪೂರೈಸಲು ಅವಕಾಶವಿಲ್ಲದೆ ಇದ್ದು, ಅದನ್ನು ನೀಡಿದರೆ ಕೆಎಂ ಪತ್ತೆ ಹಚ್ಚಿ ಡಿಪೋದ ಹಾಲನ್ನೇ ತಿರಸ್ಕರಿಸುವ ತಂತ್ರಜ್ಞಾನ ಕೆಎಂಎಫ್ ಡೈರಿಯಲ್ಲಿದೆ. ಹೈನುಗಾರರಿಗೆ ಆಗುತ್ತಿರುವ ನಷ್ಟ ತಪ್ಪಿಸಲು ಇಸ್ರೇಲ್ ಮಾದರಿಯಲ್ಲಿ ಚುಚ್ಚು ಮದ್ದು ಇಲ್ಲದೇ ಕೆಚ್ಚಲು ಬಾವು ರೋಗ ನಿಯಂತ್ರಿಸಲು ರೈತರಿಗೆ ಪ್ರಾಯೋಗಿಕ ನೆಲೆಯಲ್ಲಿ ಮಾಹಿತಿ ಮಾರ್ಗದರ್ಶನ ನೀಡಲಾಗುತ್ತಿದೆ ಎಂದರು. ಹಾಲು ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಡಾ ರವಿರಾಜ ಹೆಗ್ಡೆ ಕೊಡವೂರು ಅಧ್ಯಕ್ಷತೆ ವಹಿಸಿ ಮಾತನಾಡಿ, ಔಷಧ ರಹಿತವಾಗಿ ಕೆಚ್ಚಲು ಬಾವು ರೋಗದ ಉಪಶಮನಕ್ಕೆ ಕೆಎಂಎಫ್ ಮುಂದಾಗಿದೆ. ಇದರಿಂದಾಗಿ ರಾಸುಗಳ ಆರೋಗ್ಯ ಕಾಪಾಡಲು ಸಾಧ್ಯ ಎಂದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ತಾಂತ್ರಿಕ ಮಾರ್ಗದರ್ಶಕ ರಘೋತ್ತಮ್ ಅವರು ಔಷಧ ರಹಿತ ಕೆಚ್ಚಲು ಬಾವು ಗುಣಪಡಿಸುವಿಕೆಯ ಸಮಗ್ರ ಮಾಹಿತಿ ನೀಡಿದರು. ಶಾಂತಾರಾಮ ಶೆಟ್ಟಿ, ದ.ಕ. ಹಾಲು ಒಕ್ಕೂಟದ ಉಪ ವ್ಯವಸ್ಥಾಪಕರಾದ ಡಾ| ಅನಿಲ್ ಕುಮಾರ್ ಶೆಟ್ಟಿ, ಡಾ| ಟಿ. ವಿ. ಶ್ರೀನಿವಾಸ್, ಡಾ| ಮಹೇಶ್ವರಪ್ಪ, ವೈದ್ಯ ಡಾ| ಧನಂಜಯ್, ಇನ್ನಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಲಕ್ಷ್ಮಣ್ ಶೆಟ್ಟಿ ಉಪಸ್ಥಿತರಿದ್ದರು. ಇನ್ನಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯನಿರ್ವಹಣಾಧಿಕಾರಿ ಸುಬ್ರಹ್ಮಣ್ಯ ಭಟ್ ಸ್ವಾಗತಿಸಿದರು. ವಿಸ್ತರಣಾಧಿಕಾರಿ ಯಶವಂತ್ ನಿರೂಪಿಸಿದರು. ಸಂಘದ ಅಧ್ಯಕ್ಷ ಲಕ್ಷ್ಮಣ್ ಶೆಟ್ಟಿ ವಂದಿಸಿದರು.
