Updated News From Kaup

ಕಾಂಗ್ರೆಸ್ಗೆ ಗುಡ್ ಬೈ ಹೇಳಿದ ಪ್ರಮೋದ್ ಮಧ್ವರಾಜ್

Thumbnail
Posted On: 07 May 2022, 04:38 PM

ಉಡುಪಿ : ಕರಾವಳಿ ರಾಜಕೀಯದಲ್ಲಿ ಬಹಳ ದಿನಗಳಿಂದ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ತೊರೆಯಲಿದ್ದಾರೆ ಎಂಬ ಮಾತು ಇಂದು ಸತ್ಯವಾಗಿದೆ. ಕಾಂಗ್ರೆಸ್ ಸರಕಾರದ ಸಂದರ್ಭ ಮೀನುಗಾರಿಕೆ, ಕ್ರೀಡಾ ಸಚಿವರಾಗಿ, ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾಗಿ ಜನಪರ ಕಾರ್ಯ ಮಾಡಿದ್ದರು. ಇದೀಗ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಮ್ಮ ರಾಜೀನಾಮೆಯನ್ನು ಪಕ್ಷದ ಅಧ್ಯಕ್ಷರಿಗೆ ರವಾನಿಸಿದ್ದಾರೆ. ಯಾವ ರಾಜಕೀಯ ಪಕ್ಷಕ್ಕೆ ಸೇರಲಿದ್ದಾರೆ? ಅಥವಾ ರಾಜಕೀಯದಿಂದ ದೂರವಿದ್ದು ಜನಪರ ಕಾರ್ಯದಲ್ಲಿ ತೊಡಗಲಿದ್ದಾರೆಯೇ ಎಂಬುದು ಸದ್ಯದ ಕುತೂಹಲವಾಗಿದೆ.

ಪಡುಬಿದ್ರಿ ಠಾಣೆ ಪಿಎಸ್ ಐ ಆಗಿ ಪುರುಷೋತ್ತಮ್ ನೇಮಕ

Thumbnail
Posted On: 06 May 2022, 07:21 PM

ಪಡುಬಿದ್ರಿ: ಇಲ್ಲಿನ ಪೋಲಿಸ್ ಠಾಣೆಗೆ ನೂತನ ಪಿಎಸ್ ಐ ಆಗಿ ಪುರುಷೋತ್ತಮ್ ರವರು ನೇಮಕಗೊಂಡಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪಿಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಶೋಕ್ ಕುಮಾರ್ ಮಂಗಳೂರಿನ ಐಜಿ ಕಛೇರಿಗೆ ವರ್ಗಾವಣೆ ಆಗಿದ್ದಾರೆ. ನೂತನ ಪಿಎಸ್ ಐ ಪುರುಷೋತ್ತಮ್ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಎಬಿವಿಪಿ ಉಡುಪಿ : ಪಿಎಸ್ಐ,ಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ಖಂಡಿಸಿ ಜಿಲ್ಲಾಧಿಕಾರಿಗೆ ಮನವಿ

Thumbnail
Posted On: 04 May 2022, 08:09 PM

ಉಡುಪಿ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಪಿಎಸ್ಐ ನೇಮಕಾತಿ ಮತ್ತು ಕರ್ನಾಟಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ನಡೆದ ಅಕ್ರಮವನ್ನು ಖಂಡಿಸಿ ಅಕ್ರಮ ಚಟುವಟಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಅತ್ಯಂತ ಕಠಿಣ ಕ್ರಮ ನಡೆಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿಯದ ವೀಣಾ ಬಿ.ಎನ್ ಇವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಂಚಾಲಕ ಆಶಿಶ್ ಶೆಟ್ಟಿ, ತಾಲೂಕು ಸಂಚಾಲಕ ಸುಮುಖ ಭಟ್, ನಗರ ಕಾರ್ಯದರ್ಶಿ ಆಕಾಶ್, ಸಹ ಕಾರ್ಯದರ್ಶಿಗಳಾದ ಹೃತಿಕ್, ಸಿಂಚನ, ಶ್ರೀಹರಿ, ಪ್ರಮುಖ ಕಾರ್ಯಕರ್ತರಾದ ಅಜಿತ್, ಶಾರ್ವರಿ, ದೀಪೇಶ್, ಶ್ರೀಕಂಠ, ದಿಶಾನ್, ಭೂಷಣ್, ಸಂಹಿತ್ ಮತ್ತಿತರರು ಉಪಸ್ಥಿತರಿದ್ದರು.

ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಬಹುಭಾಷಾ ನಟಿ ಪೂಜಾ ಹೆಗ್ಡೆ ಭೇಟಿ

Thumbnail
Posted On: 03 May 2022, 07:30 PM

ಕಾಪು : ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು‌ವಿನ ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಬಹುಭಾಷಾ ನಟಿ ಪೂಜಾ ಹೆಗ್ಡೆ ಭೇಟಿ ಇಂದು ಭೇಟಿ ನೀಡಿದರು. ಈ ಸಂದರ್ಭ ದೇವಳದ ಜೀರ್ಣೋದ್ಧಾರ ಸಮಿತಿಯ ಪ್ರಮುಖರು, ಕಾರ್ಯನಿರ್ವಹಣಾಧಿಕಾರಿ, ದೇವಳದ ಸಿಬ್ಬಂದಿ, ಮತ್ತಿತರರು ಉಪಸ್ಥಿತರಿದ್ದರು.

ಇನ್ನಂಜೆ : ಔಷಧಿ ರಹಿತ ಕೆಚ್ಚಲು ಬಾವು ಗುಣಪಡಿಸುವುದು - ಕಾರ್ಯಾಗಾರ

Thumbnail
Posted On: 03 May 2022, 07:20 PM

ಕಾಪು : ಕರ್ನಾಟಕ ಹಾಲು ಮಹಾಮಂಡಲ (ನಿ.), ಬೆಂಗಳೂರು, ದ.ಕ. ಹಾಲು ಒಕ್ಕೂಟ (ನಿ.), ಮಂಗಳೂರು ಹಾಗೂ ಇನ್ನಂಜೆ ಹಾಲು ಉತ್ಪಾದಕರ ಸಹಕಾರ ಸಂಘದ ಸಹಭಾಗಿತ್ವದಲ್ಲಿ ಔಷಧಿ ರಹಿತ ಕೆಚ್ಚಲು ಬಾವು ಗುಣಪಡಿಸುವುದು ಕಾರ್ಯಾಗಾರ ಮೇ 4 ಬೆಳಿಗ್ಗೆ 9.30ಕ್ಕೆ ಇನ್ನಂಜೆ, ಮಡುಂಬು (ಕೊಲ್ಲಂಗಾಲ್) ಶೇಖರ್‌ ಎನ್‌. ಬಂಗೇರ ಅವರ ಮನೆಯ ಹತ್ತಿರ ಜರಗಲಿದೆ. ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ದ.ಕ.ಸ.ಹಾಲು ಒಕ್ಕೂಟ (ನಿ.), ಮಂಗಳೂರು ಇದರ ನಿಕಟಪೂರ್ವ ಅಧ್ಯಕ್ಷರಾದ ರವಿರಾಜ್ ಹೆಗ್ಡೆ ವಹಿಸಲಿದ್ದು, ಕ. ಹಾ. ಮ., ಬೆಂಗಳೂರು ಇದರ ನಿರ್ದೇಶಕರಾದ ಕಾಪು ದಿವಾಕರ ಶೆಟ್ಟಿ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶೇ. ಇದರ ಉಪ ವ್ಯವಸ್ಥಾಪಕರಾದ ಡಾ. ಅನಿಲ್ ಕುಮಾರ್ ಶೆಟ್ಟಿ, ಎ.ಎಚ್./ಎ.ಐ. ಉಪ ವ್ಯವಸ್ಥಾಪಕರಾದ ಡಾ. ಟಿ. ವಿ. ಶ್ರೀನಿವಾಸ, ಸಂಪನ್ಮೂಲ ವ್ಯಕ್ತಿಯಾಗಿ ರಘೋತ್ತಮ್ ಭಾಗವಹಿಸಲಿದ್ದಾರೆ. ಇನ್ನಂಜೆ ಹಾ.ಉ.ಸ.ಸಂ. (ನಿ.) ಅಧ್ಯಕ್ಷರಾದ ಲಕ್ಷ್ಮಣ ಕೆ. ಶೆಟ್ಟಿಯವರ ಗೌರವ ಉಪಸ್ಥಿತಿಯಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಳಿಯಾರು : ಉಳಿಯಾರಮ್ಮನ ಸನ್ನಿಧಿಯಲ್ಲಿ ಪ್ರತಿಷ್ಠೆಯ ವರ್ಧಂತಿ ಮಹೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮ

Thumbnail
Posted On: 01 May 2022, 11:48 PM

ಕಾಪು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಉಳಿಯಾರು ಮಜೂರು ಉಳಿಯಾರಮ್ಮನ ಸನ್ನಿಧಿಯಲ್ಲಿ ಭಕ್ತಾಧಿಗಳ ಸಹಕಾರದೊಂದಿಗೆ ಮೇ 3, ಮಂಗಳವಾರ ಅಕ್ಷಯ ತೃತಿಯ ದಿನದಂದು ಪ್ರತಿಷ್ಠೆಯ ವರ್ಧಂತಿ ಮಹೋತ್ಸವದ ಪ್ರಯುಕ್ತ ದುರ್ಗೆಯ ಸನ್ನಿಧಿಯಲ್ಲಿ ಬೆಳಿಗ್ಗೆ 7 ಗಂಟೆಗೆ ಶತ ಚಂಡಿಕಯಾಗ, ಮಧ್ಯಾಹ್ನ 12ಕ್ಕೆ ಪೂರ್ಣಹುತಿ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ೬ ಗಂಟೆಗೆ ರಂಗಪೂಜೆ ಬಲಿ ಉತ್ಸವ, ರಾತ್ರಿ ಶ್ರೀ ಪಂಚಾಕ್ಷರೀ ಮಕ್ಕಳ ಮೇಳ ಎಲ್ಲೂರು ಇವರಿಂದ ಮಹಿಷ ಮರ್ಧಿನಿ ಯಕ್ಷಗಾನ ನಡೆಯಲಿದೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಅನ್ನ ಪ್ರಸಾದ ಸ್ವೀಕರಿಸಿ ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪಡುಬಿದ್ರಿ : ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಶಿಬಿರ

Thumbnail
Posted On: 30 Apr 2022, 07:53 PM

ಪಡುಬಿದ್ರಿ, ಏ.30 : ಯುವಜನಾಂಗವು ಕಲಿಕೆಯ ಸಮಯದಲ್ಲಿ ಮುಂದಿನ ಭವಿಷ್ಯದ ಬಗ್ಗೆ ತಿಳಿದುಕೊಳ್ಳುವ ಅನಿವಾರ್ಯತೆಯಿದೆ. ಕಲಿಕೆಯ ಹಂತದಲ್ಲಿಯೇ ತರಬೇತಿಗಳು ಅವಶ್ಯ. ಉದ್ಯಮಶೀಲತಾ ತರಬೇತಿ ಶಿಬಿರಗಳು ಈ ನಿಟ್ಟಿನಲ್ಲಿ ಸಹಕಾರಿಯಾಗಿದೆ ಎಂದು ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಉದಯ ಅಮೀನ್ ಹೇಳಿದರು. ಅವರು ಪಡುಬಿದ್ರಿ ಬಿಲ್ಲವ ಸಂಘದಲ್ಲಿ ಜರಗಿದ ಯುವವಾಹಿನಿ ಪಡುಬಿದ್ರಿ ಘಟಕ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ, ಜೀವನೋಪಾಯ ಇಲಾಖೆ ಸಿಡೋಕ್ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಜರಗಿದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು. ತರಬೇತುದಾರರಾಗಿ ಸಿಡೋಕ್ ಮಂಗಳೂರಿನ ಸಂಪನ್ಮೂಲ ವ್ಯಕ್ತಿ ಸತೀಶ್ ಮಾಬೆನ್, ಉದ್ಯಮಶೀಲತಾ ತರಬೇತುದಾರರಾದ ಮೋಹನಾಂಗಯ್ಯ ಸ್ವಾಮಿ, ಆರ್ಥಿಕ ಸಾಕ್ಷರತಾ ಕೇಂದ್ರ ಅಮೂಲ್ಯ ಮಂಗಳೂರು ಇಲ್ಲಿಯ ಹಿರಿಯ ಸಮಾಲೋಚಕರಾದ ಅಶೋಕ್ ಶೆಟ್ಟಿ ಶಿಬಿರಾರ್ಥಿಗಳಿಗೆ ತರಬೇತಿ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತಾ, ಜೀವನೋಪಾಯ ಇಲಾಖೆಯ ಜಂಟಿ ನಿರ್ದೇಶಕರಾದ ಅರವಿಂದ ಡಿ ಬಾಲೇರಿ ವಹಿಸಿದ್ದರು. ಸುಮಾರು 30ಕ್ಕೂ ಅಧಿಕ ಶಿಬಿರಾರ್ಥಿಗಳು ತರಬೇತಿಯಲ್ಲಿ ಭಾಗವಹಿಸಿದ್ದರು. ಸಿಡೋಕ್ ಮಂಗಳೂರಿನ ಜಿಲ್ಲಾ ಸಂಯೋಜಕರಾದ ಪ್ರವಿಶ್ಯ, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಉದ್ಯೋಗ ಹಾಗೂ ಭವಿಷ್ಯ ನಿರ್ಮಾಣ ನಿರ್ದೇಶಕರಾದ ರೇಖಾ ಗೋಪಾಲ್, ಸಮಾಜಸೇವಕರಾದ ಉಮಾನಾಥ್ ಕೋಟ್ಯಾನ್, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯೆ ಶಶಿಕಲ, ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷೆ ಯಶೋದ, ಪಡುಬಿದ್ರಿ ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಸುಜಾತ ಪ್ರಸಾದ್, ಘಟಕದ ಕಾರ್ಯದರ್ಶಿ ವಿಧಿತ್, ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪಡುಬಿದ್ರಿ ಯುವವಾಹಿನಿ ಘಟಕದ ಮಾಜಿ ಅಧ್ಯಕ್ಷರಾದ ಸುಜಿತ್ ಕುಮಾರ್ ನಿರೂಪಿಸಿದರು. ಪಡುಬಿದ್ರಿ ಯುವವಾಹಿನಿ ಘಟಕದ ಅಧ್ಯಕ್ಷರಾದ ಯಶೋದ ಸ್ವಾಗತಿಸಿ, ಪಡುಬಿದ್ರಿ ಘಟಕದ ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾದ ಸುಜಾತ ಪ್ರಸಾದ್ ವಂದಿಸಿದರು.

ಮೇ 2 ರಿಂದ 7ರವರೆಗೆ ಪ್ರಥಮ್ಸ್ ಮ್ಯಾಜಿಕ್ ವಲ್ಡ್೯ ಕಟಪಾಡಿಯಿಂದ ಮಕ್ಕಳಿಗಾಗಿ ರಜಾ ಶಿಬಿರ

Thumbnail
Posted On: 30 Apr 2022, 06:33 PM

ಕಟಪಾಡಿ : ಇಲ್ಲಿನ ಪ್ರಥಮ್ಸ್ ಮ್ಯಾಜಿಕ್ ವಲ್ಡ್೯ ಇವರಿಂದ 1ರಿಂದ 10ನೇ ತರಗತಿಯೊಳಗಿನ ಮಕ್ಕಳಿಗಾಗಿ ರಜಾ ಶಿಬಿರವು ಮೇ 2 ರಿಂದ 7ರವರೆಗೆ )ಪ್ರತೀ ದಿನ ಬೆಳಗ್ಗೆ 9 ರಿಂದ 1 ಗಂಟೆ ತನಕ ಎಸ್. ವಿ. ಎಸ್ ಹಿ. ಪ್ರಾ.ಶಾಲೆ ಕಟಪಾಡಿ ಇಲ್ಲಿ ಜರಗಲಿದೆ. ಅಂತರರಾಷ್ಟ್ರೀಯ ಖ್ಯಾತಿಯ ತರಬೇತುದಾರರಾದ ವೆಂಕಿ ಪಲಿಮಾರು, ಪ್ರಸಾದ್ ರಾವ್ ಉಡುಪಿ, ಮುಸ್ತಫಾ, ರಮೇಶ್ ಬಂಟಕಲ್, ವಂದನಾ ರೈ ಕಾರ್ಕಳ, ಸೂರ್ಯ ಪುರೋಹಿತ್ ಕಾರ್ಕಳ ಮತ್ತು ಪ್ರಥಮ್ ಕಾಮತ್ ಕಟಪಾಡಿ ಇವರಿಂದ ಮಕ್ಕಳಿಗಾಗಿ ಡ್ರಾಯಿಂಗ್, ಕ್ಲೇ ಮಾಡೆಲಿಂಗ್, ಅಭಿನಯ, ಮ್ಯಾಜಿಕ್, ಪೇಪರ್ ಕ್ರಾಪ್ಟ್, ಡ್ಯಾನ್ಸ್, ಟ್ಯಾಟೂ, ಮುಖವಾಡ ತಯಾರಿ, ಪಿಕ್ನಿಕ್ ಇತ್ಯಾದಿ ಹೊಸತನದ ಕ್ರಿಯಾಶೀಲ ಚಟುವಟಿಕೆಗಳ ಶಿಬಿರ ಜರಗಲಿದೆ. ಕಳೆದ ಬಾರಿ ಕೊರೊನ ಸಮಯ ಕಟಪಾಡಿಯ ಪ್ರಥಮ್ಸ್ ಮ್ಯಾಜಿಕ್ ವಲ್ಡ್೯ನಿಂದ ಉಚಿತವಾಗಿ ನಮ್ಮ ರಾಜ್ಯವಲ್ಲದೆ ಹೊರ ರಾಜ್ಯದ ಮಕ್ಕಳು ಸೇರಿದಂತೆ ಸುಮಾರು 1ಸಾವಿರಕ್ಕೂ ಅಧಿಕ ಮಕ್ಕಳಿಗೆ ರಜಾ ಮಜಾ ಎಂಬ ವಾಟ್ಸಾಪ್ ಗ್ರೂಪಿನ ಮೂಲಕ ದಿನಕ್ಕೊಂದು ಪ್ರಸಿದ್ಧ ತರಬೇತುದಾರರಿಂದ ಸಾಹಿತ್ಯ, ಕರಕುಶಲಕಲೆಗೆ ಸಂಬಂಧಿಸಿದಂತೆ ತರಬೇತಿ ನೀಡಿದ ಹೆಗ್ಗಳಿಕೆಯಿದ್ದು ಈ ಬಾರಿ ಕಟಪಾಡಿಯಲ್ಲಿ ಮಕ್ಕಳ ಉಪಸ್ಥಿತಿಯೊಂದಿಗೆ ಶಿಬಿರ ನಡೆಯಲಿದೆ. ಕೇವಲ 50 ಮಂದಿಗೆ ಮಾತ್ರ ಅವಕಾಶ. ಮೊದಲು ಬಂದವರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಶಿಬಿರದ ಆಯೋಜಕರಾದ ನಾಗೇಶ್ ಕಾಮತ್ ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಕೆ.ನಾಗೇಶ್ ಕಾಮತ್, ಕಟಪಾಡಿ 9886432197

ಕೋಟಿ ಚೆನ್ನಯ್ಯ ಪೌಂಡೇಶನ್ ಕಾಪು ವತಿಯಿಂದ ಯಕ್ಷಗಾನ ಕಲಾವಿದನ ಚಿಕಿತ್ಸೆಗೆ ನೆರವು

Thumbnail
Posted On: 30 Apr 2022, 09:05 AM

ಕಾಪು : ಯಕ್ಷಗಾನ ಕ್ಷೇತ್ರದ ಪ್ರತಿಭೆ ಗಣೇಶ್ ಕೊಲೆಕಾಡಿ, ಮುಲ್ಕಿಯವರು ಅನಾರೋಗ್ಯದಿಂದ ಮಂಗಳೂರಿನ ಮಂಗಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಚಿಕಿತ್ಸೆಗೆ ಕೋಟಿ ಚೆನ್ನಯ್ಯ ಪೌಂಡೇಶನ್(ರಿ), ಕಾಪು ಇದರ ವತಿಯಿಂದ ರೂಪಾಯಿ 28,000 ಗಳ ಚೆಕ್ಕನ್ನು ಕೋಟಿ ಚೆನ್ನಯ್ಯ ಫೌಂಡೇಶನ್(ರಿ) ಇದರ ಅಧ್ಯಕ್ಷರಾದ ಡಾ.ರಾಜಶೇಖರ್ ಕೋಟ್ಯಾನ್ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಗೋಪಿನಾಥ ಪಡಂಗ,ಧನಂಜಯ ಮಟ್ಟು, ಪುಷ್ಪರಾಜ್ ಕೊಲೆಕಾಡಿ, ಶಶಿಧರ ಬಂಗೇರ ಉಪಸ್ಥಿತರಿದ್ದರು.

ಹೆಜಮಾಡಿ : ವಿಜ್ಞಾನ ಸಂಶೋಧಕ ಪುಷ್ಪರಾಜ್ ಅಮೀನ್ ತಯಾರಿಸಿದ ಸ್ಪೆಷಲ್ ಪರ್ಪಸ್ ಬೋಟ್ ಪ್ರಾತ್ಯಕ್ಷಿಕೆ

Thumbnail
Posted On: 29 Apr 2022, 05:59 PM

ಹೆಜಮಾಡಿ : ರಾಷ್ಟ್ರೀಯ ದಾಖಲೆಗಳನ್ನು ಮಾಡಿದ ವಾಯು ಜಲ ಬಲ ವಿಜ್ಞಾನ ಸಂಶೋಧಕ ಪುಷ್ಪರಾಜ್ ಅಮೀನ್ ಅವರು ತಯಾರಿಸಿದ ಸ್ಪೆಷಲ್ ಪರ್ಪಸ್ ಬೋಟ್ ಪ್ರಾತ್ಯಕ್ಷಿಕೆ ಇಂದು ಹೆಜಮಾಡಿ ಕೋಡಿ ನದಿ ಕುದ್ರುವಿನಲ್ಲಿ ನಡೆಯಿತು. ಈ ಸಂದರ್ಭ ಉಡುಪಿ ಶಾಸಕ ರಘುಪತಿ ಭಟ್, ಸ್ಥಳೀಯರು ಉಪಸ್ಥಿತರಿದ್ದರು.