Updated News From Kaup
ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ
Posted On: 29-01-2022 07:28PM
ಮಂಗಳೂರು : ಇಲ್ಲಿನ ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಯ ಶಿಲಾನ್ಯಾಸ ಸಮಾರಂಭ ವು ಜನವರಿ 27ರಂದು ಜರಗಿತು.
ಕಾಪು : ಕರಾವಳಿ ವಾರ್ಡ್ನ ಗಟ್ಟಿ ಧ್ವನಿ ಕಿರಣ್ ಆಳ್ವ
Posted On: 29-01-2022 07:13PM
ಕಾಪು : ಈಗಾಗಲೇ ಕಾಪು ಪುರಸಭೆಯ ಚುನಾವಣಾ ಕಾವು ಮುಗಿದು ಗೆದ್ದವರೆಲ್ಲಾ ಗದ್ದುಗೆಯ ಬಗ್ಗೆ ಯೋಚಿಸುತ್ತಿದ್ದರೆ ಇಲ್ಲೊಬ್ಬ ಜನಪರ ಕಾರ್ಯದಲ್ಲಿ ತೊಡಗಿದ್ದಾರೆ ಅವರೇ ಕರಾವಳಿ ವಾರ್ಡ್ ಇದರ ಸದಸ್ಯ ಕಿರಣ್ ಆಳ್ವ. ಕಾಪು ಪುರಸಭೆಯ ಗಟ್ಟಿ ಧ್ವನಿಯಾಗುವುದರಲ್ಲಿ ಎರಡು ಮಾತಿಲ್ಲ ಎಂಬುದು ಸಾರ್ವಜನಿಕರ ಮಾತು.
ಬಿರುವೆರ್ ಕಾಪು ಸೇವಾ ಸಮಿತಿ ಉದ್ಘಾಟನೆ, ಸಮ್ಮಾನ ಸಮಾರಂಭ, ಸಹಾಯ ಹಸ್ತಾಂತರ
Posted On: 28-01-2022 10:26PM
ಮೂಳೂರು : ನಾರಾಯಣಗುರುಗಳ ತತ್ವಾದರ್ಶಗಳು ಅಜರಾಮರ. ಅವುಗಳನ್ನು ಸಂಘ ಸಂಸ್ಥೆಗಳು ಪ್ರಚುರಪಡಿಸಬೇಕಾದ ಅನಿವಾರ್ಯತೆಯಿದೆ. ಬಿರುವೆರ್ ಕಾಪು ಸೇವಾ ಸಮಿತಿಯು ಸಮಾಜಮುಖಿ ಚಿಂತನೆಯ ಕಾರ್ಯಕ್ರಮಗಳು ನಿರಂತರವಾಗಿರಲಿ ಎಂದು ಕೇರಳ ಶಿವಗಿರಿ ಮಠದ ಶ್ರೀ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿ ಹೇಳಿದರು. ಅವರು ಮೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಲ್ಲಿ ಜರಗಿದ ಬಿರುವೆರ್ ಕಾಪು ಸೇವಾ ಸಮಿತಿಯ ಸಮಾರಂಭದಲ್ಲಿ ಆಶೀರ್ವಚನ ನೀಡಿದರು. ಮೂಳೂರಿನ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷರಾದ ಸುಭಾಶ್ಚಂದ್ರ ಪೂಜಾರಿ ರಾಜಮನೆ ಮೂಳೂರು ಬಿರುವೆರ್ ಕಾಪು ಸೇವಾ ಸಮಿತಿಯನ್ನು ಉದ್ಘಾಟಿಸಿದರು.
ಶಿರ್ವ ಸಂತ ಮೇರಿ ಮಹಾವಿದ್ಯಾಲಯದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ
Posted On: 27-01-2022 08:06PM
ಶಿರ್ವ : 73 ನೇ ಗಣರಾಜ್ಯೋತ್ಸವ ದಿನದಂದು ಶಿರ್ವ-ಮಂಚಕಲ್ ಲಯನ್ಸ್ ಕ್ಲಬ್ ಹಾಗೂ ಶಿರ್ವ ಸಂತ ಮೇರಿ ಕಾಲೇಜಿನ ಎನ್ ಸಿ ಸಿ, ಎನ್ ಎಸ್ ಎಸ್, ರೆಂಜರ್ಸ್ ಮತ್ತು ರೋವರ್ಸ್ ಘಟಕಗಳ ಜಂಟಿ ಆಶ್ರಯದಲ್ಲಿ ಶಿರ್ವದ ಪ್ರವಾಸಿ ಮಂದಿರ ವಠಾರವನ್ನು ಸ್ವಚ್ಛಗೊಳಿಸುವ ಶ್ರಮದಾನ ಕಾರ್ಯಕ್ರಮ ನಡೆಯಿತು.
ಕುರ್ಕಾಲು : ಗ್ರಾಮ ಒನ್ ಉದ್ಘಾಟನೆ
Posted On: 26-01-2022 07:23PM
ಕಾಪು : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಯೋಜನೆಯು ಕುರ್ಕಾಲು ಗ್ರಾಮದ ವ್ಯಾಪ್ತಿಯಲ್ಲಿ ಬರುವ ಶಂಕರಪುರದಲ್ಲಿ ಉದ್ಘಾಟನೆಗೊಂಡಿತು.
ಜಲಸಾಧಕ, ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕರಿಗೆ ಒಲಿದ ಪದ್ಮಶ್ರೀ ಪ್ರಶಸ್ತಿ
Posted On: 25-01-2022 10:57PM
ಮಂಗಳೂರು: ಗುಡ್ಡಕ್ಕೆ ಸುರಂಗ ಕೊರೆದು ಜೀವಜಲ ಪಡೆದು ಬೋಳುಗುಡ್ಡೆಯಲ್ಲಿ ಹಸಿರೆಬ್ಬಿಸಿದ ಅಪರೂಪದ ಸಾಹಸಿ ದಕ್ಷಿಣ ಕನ್ನಡ ಜಿಲ್ಲೆಯ ಪ್ರಗತಿಪರ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರಿಗೆ ಈ ಸಾಲಿನ ಪದ್ಮಶ್ರೀ ಪ್ರಶಸ್ತಿ ಒಲಿದಿದೆ.
ಉಡುಪಿ : ರಾಷ್ಟ್ರೀಯ ಮತದಾರರ ದಿನಾಚರಣೆ
Posted On: 25-01-2022 08:28PM
ಉಡುಪಿ : ಪ್ರಜಾಪ್ರಭುತ್ವ ವ್ಯವಸ್ಥೆಯ ಮೊದಲ ಮತ್ತು ಪ್ರಮುಖ ಹೆಜ್ಜೆ ಮತದಾನ. ಆದ್ದರಿಂದ ಪ್ರತಿಯೊಬ್ಬ ಮತದಾರರು ತಮಗೆ ನೀಡಿರುವ ಮತದಾನದ ಹಕ್ಕನ್ನು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು, ಜಿಲ್ಲಾ ಪಂಚಾಯತ್ನ ಡಾ.ವಿ.ಎಸ್.ಆಚಾರ್ಯ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ನಾಳೆ ರಾಷ್ಟ್ರರಾಜಧಾನಿಯಲ್ಲಿ ಕಂಗೊಳಿಸಲಿದೆ ತುಳುನಾಡ ಕಂಗೀಲು
Posted On: 25-01-2022 08:19PM
ಕಾಪು : ನಾಳೆ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್ ನ ಸ್ತಬ್ಧಚಿತ್ರ ಪ್ರದರ್ಶನದಲ್ಲಿ ಕರ್ನಾಟಕದಿಂದ ಜಾನಪದ ಮತ್ತು ಶಾಸ್ತ್ರೀಯ ನೃತ್ಯ ತಂಡಗಳು ಭಾಗವಹಿಸಲಿದ್ದು, ಇದರಲ್ಲಿ ತುಳುನಾಡಿನ ಕಂಗೀಲು ನೃತ್ಯವು ನಾಳೆ ಪ್ರದರ್ಶನಗೊಳ್ಳಲಿದೆ.
ವಿಜಯ್ ಕಾಂಚನ್ ರಿಗೆ ರಾಷ್ಟ್ರಪತಿಗಳ ವಿಶೇಷ ಸೇವಾ ಪದಕ
Posted On: 25-01-2022 07:57PM
ಮಂಗಳೂರು : 2021-22 ನೇ ಸಾಲಿನ ಭಾರತದ ಪ್ರತಿಷ್ಠಿತ ಗೌರವಾನ್ವಿತ ರಾಷ್ಟ್ರಪತಿಗಳ ವಿಶೇಷ ಸೇವಾ ಪದಕಕ್ಕೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಎ.ಎಸ್.ಐ ವಿಜಯ್ ಕಾಂಚನ್ ಭಾಜನರಾಗಿದ್ದಾರೆ.
ಬೆಳ್ಮಣ್ಣು: ಎರಡು ಗ್ರಂಥಗಳ ಲೋಕಾರ್ಪಣೆ
Posted On: 25-01-2022 02:01PM
ಬೆಳ್ಮಣ್ಣು: ಲಯನ್ಸ್ ಕ್ಲಬ್ ಬೆಳ್ಮಣ್ಣು ಆಶ್ರಯದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಲಯನ್ಸ್ ಭವನದಲ್ಲಿ, ಮುದ್ದಣ ಜಯಂತಿ ಮತ್ತು ಎರಡು ಗ್ರಂಥಗಳ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಲ|ಎನ್.ಸುಹಾಸ್ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಅಧ್ಯಕ್ಷರಾದ ಡಾ. ಜಿ. ಎನ್. ಉಪಾಧ್ಯ ಅವರ 'ವಾಙ್ಮಯ ವಿವೇಕ' ಮತ್ತು ಡಾ. ಬಿ. ಜನಾರ್ದನ ಭಟ್ ಅವರ 'ಸಾಹಿತ್ಯ ವಿಮರ್ಶೆ: ಒಂದು ಪ್ರವೇಶಿಕೆ' ಗ್ರಂಥಗಳು ಲೋಕಾರ್ಪಣೆಗೊಂಡವು.
