Updated News From Kaup

ಅಸಹಾಯಕಳಾಗಿದ್ದ ಮೂಕ ಮಹಿಳೆಯನ್ನು ರಕ್ಷಿಸಿದ ವಿಶು ಶೆಟ್ಟಿ ಅಂಬಲಪಾಡಿ

Posted On: 25-01-2022 10:45AM

ಉಡುಪಿ : ಕಾಪು ಠಾಣಾ ವ್ಯಾಪ್ತಿಯ ಇನ್ನಂಜೆಯಲ್ಲಿ ತನ್ನವರು ಯಾರೂ ಇಲ್ಲದೆ ಅಸಹಾಯಕಳಾಗಿ ರೋಧಿಸುತ್ತಿದ್ದ ಮೂಕ ಮಹಿಳೆಯನ್ನು ವಿಶು ಶೆಟ್ಟಿ ಅಂಬಲಪಾಡಿ ರಕ್ಷಿಸಿ ನಿಟ್ಟೂರಿನ ಸಖಿ ಸೆಂಟರ್ ಗೆ ದಾಖಲಿಸಿದ ಘಟನೆ ಜನವರಿ 24ರಂದು ನಡೆದಿದೆ.

ಕೈ,ಕಾಲುಗಳಿಗೆ ಕಬ್ಬಿಣದ ಸರಪಳಿಯಿಂದ ಬೀಗ ಜಡಿದು ಅರಬ್ಬೀ ಸಮುದ್ರದಲ್ಲಿ ಈಜಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಗಂಗಾಧರ್ ಜಿ. ಕಡೆಕಾರ್

Posted On: 24-01-2022 06:23PM

ಉಡುಪಿ : ಇಲ್ಲಿನ ಕಡೆಕಾರಿನ ನಿವಾಸಿ ಆದ ಗಂಗಾಧರ್ ಜಿ. ಕಡೆಕಾರ್ ಈ ಬಾರಿ ಕೈ ಮತ್ತು ಕಾಲುಗಳಿಗೆ ಕಬ್ಬಿಣದ ಸರಪಳಿಯಿಂದ ಬೀಗ ಜಡಿದು ಅರಬ್ಬೀ ಸಮುದ್ರದಲ್ಲಿ 3.5 ಕಿ.ಮಿ ಈಜಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ ನಲ್ಲಿ ತಮ್ಮ ಸಾಧನೆಯನ್ನು ತೋರಿಸಿರುತ್ತಾರೆ.

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ : ಉಡುಪಿಗೆ ಅಂಗಾರ, ದಕ್ಷಿಣ ಕನ್ನಡಕ್ಕೆ ಸುನೀಲ್ ಕುಮಾರ್, ಉತ್ತರ ಕನ್ನಡಕ್ಕೆ ಕೋಟಾ ಶ್ರೀನಿವಾಸ ಪೂಜಾರಿ

Posted On: 24-01-2022 05:56PM

ಉಡುಪಿ : ರಾಜ್ಯದ 28 ಜಿಲ್ಲೆಗಳಿಗೆ ಕೋವಿಡ್ ಉಸ್ತುವಾರಿ ಸಚಿವರು ಹಾಗು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ.

ಕಟಪಾಡಿ : ಶಿಲಾನ್ಯಾಸ ಕಾರ್ಯಕ್ರಮ

Posted On: 22-01-2022 03:58PM

ಕಟಪಾಡಿ : ಏಣಗುಡ್ಡೆ ಶ್ರೀ ಬ್ರಹ್ಮ ಬೈದೇರುಗಳ ಗರಡಿ ಇಲ್ಲಿಯ ಮಾಯಂದಾಲ್ ಗುಡಿ, ಕಾಂತೇರಿ ಧೂಮಾವತಿ ಗುಡಿ, ಬೊಬ್ಬರ್ಯ ಗುಡಿ ಹಾಗೂ ಸಮುದಾಯ ಭವನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಜನವರಿ 23, ಆದಿತ್ಯವಾರ ಪೂರ್ವಾಹ್ನ ಗಂಟೆ 11ಗಂಟೆಗೆ ಜರಗಲಿದೆ.

ಕಾಪು : ಮಹಿಳೆಗೆ ಚೂರಿ ಇರಿತ, ಪ್ರಾಣಾಪಾಯದಿಂದ ಪಾರು

Posted On: 22-01-2022 12:56PM

ಕಾಪು : ಇಲ್ಲಿನ ಬ್ಲಾಕ್ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರೀನಾ ಡಿ'ಸೋಜಾ(35) ಅವರಿಗೆ ನೆರೆ ಮನೆಯಾತ ಚೂರಿಯಿಂದ ಇರಿದ ಘಟನೆ ಕಳೆದ ರಾತ್ರಿ ನಡೆದಿದೆ.

ಪೋಲಿಸರ ಮೇಲೆ ಹಲ್ಲೆ : ಆರೋಪಿಗಳ ಬಂಧನ

Posted On: 22-01-2022 10:51AM

ಮಂಗಳೂರು : ಇಲ್ಲಿನ ಪೂರ್ವ ಪೋಲಿಸ್ ಠಾಣೆ, ಕದ್ರಿ ಇಲ್ಲಿಯ ಪೋಲಿಸರಾದ ಶಿವಾನಂದ ಮತ್ತು ಬೀರೇಂದ್ರ ದ್ವಿಚಕ್ರ ವಾಹನದಲ್ಲಿ ವಾಮಂಜೂರಿನ ತಮ್ಮ ವಸತಿ ಗೃಹಕ್ಕೆ ತೆರಳುತ್ತಿರುವ ಸಮಯ ರಾತ್ರಿಯ 10ಗಂಟೆಯ ಸುಮಾರಿಗೆ ಯೆಯ್ಯಾಡಿ ಜಂಕ್ಷನ್ ಸಮೀಪ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ತಡೆದು ನಿಲ್ಲಿಸಿ ಅವ್ಯಾಚ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿದ ಪ್ರಕರಣ ಪೂರ್ವ ಪೋಲಿಸ್ ಠಾಣೆ, ಕದ್ರಿ ಇಲ್ಲಿ ದಾಖಲಾಗಿದೆ.

ಜಿಲ್ಲೆಯಲ್ಲಿ 4253 ಯುವ ಮತದಾರರ ನೋಂದಣಿ

Posted On: 21-01-2022 09:49PM

ಉಡುಪಿ : ಜಿಲ್ಲೆಯಲ್ಲಿ ಈ ಸಾಲಿನ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂದರ್ಭದಲ್ಲಿ 4253 ಯುವ ಮತದಾರರು ನೋಂದಣಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ಹಾಲ್ನಲ್ಲಿ, ಭಾರತೀಯ ಚುನಾವಣಾ ಆಯೋಗವು 1-1-2022 ನ್ನು ಅರ್ಹತಾ ದಿನವನ್ನಾಗಿಟ್ಟುಕೊಂಡು ಸಿದ್ಧಪಡಿಸಿರುವ ಭಾವಚಿತ್ರವುಳ್ಳ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯ, ಅಂತಿಮ ಮತದಾರರ ಪಟ್ಟಿಯ ಪ್ರತಿಗಳನ್ನು ಹಸ್ತಾಂತರಿಸಿ ಮಾತನಾಡಿದರು.

ಗಣರಾಜ್ಯೋತ್ಸವ ಆಚರಣೆ ಪೂರ್ವಭಾವಿ ಸಭೆ

Posted On: 21-01-2022 09:42PM

ಉಡುಪಿ : ಜನವರಿ 26 ರಂದು ನಡೆಯುವ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆ ಕುರಿತಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರ ಅದ್ಯಕ್ಷತೆಯಲ್ಲಿ, ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ಹಾಲ್ನಲ್ಲಿ ಇಂದು ಸಭೆ ನಡೆಯಿತು.

ಮಹನೀಯರ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತ: ಜಿಲ್ಲಾಧಿಕಾರಿ ಕೂರ್ಮಾರಾವ್ .ಎಂ

Posted On: 21-01-2022 09:37PM

ಉಡುಪಿ : ಸಮಾಜದಲ್ಲಿನ ಅಸಮಾನತೆಯನ್ನು ಹೋಗಲಾಡಿಸಲು ಮಹನೀಯ ವ್ಯಕ್ತಿಗಳಾದ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ, ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಅವರು ನೀಡಿರುವ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿದೆ ಹಾಗೂ ತ್ರಿವಿಧ ದಾಸೋಹಿ ಶ್ರೀ ಡಾ.ಶಿವಕುಮಾರ ಸ್ವಾಮೀಜಿ ಅವರು ಜಾತಿ ಧರ್ಮ ಬೇಧವಿಲ್ಲದೇ ಮಾಡಿರುವ ತ್ರಿವಿಧ ದಾಸೋಹ ಸೇವೆಯು ಎಲ್ಲರಿಗೂ ಮಾದರಿಯಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿಲಾದ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ, ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಹಾಗೂ ದಾಸೋಹ ದಿನ ಕಾರ್ಯಕ್ರಮದಲ್ಲಿ ಮಹನೀಯರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಮಹನೀಯ ವ್ಯಕ್ತಿಗಳು ನೀಡಿರುವ ಸಂದೇಶಗಳನ್ನು ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಹಾಗೂ ತಮ್ಮ ದೈನಂದಿನ ಕರ್ತವ್ಯಗಳಲ್ಲಿ ಅಳವಡಿಸಿಕೊಂಡು ಅದರಂತೆ ನಡೆಯಬೇಕು. ಇಂತಹ ವ್ಯಕ್ತಿಗಳ ಜೀವನ ಚರಿತ್ರೆಯ ಬಗ್ಗೆ ಅರಿಯಬೇಕು ಎಂದರು.

ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಕರ್ವಾಲು 60 ನೇ ವರ್ಷದ ಭಜನಾ ಮಂಗಲೋತ್ಸವ ಪ್ರಯುಕ್ತ ಭಜನಾ ಸಂಭ್ರಮ

Posted On: 21-01-2022 09:28PM

ಉಡುಪಿ : ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ ಕರ್ವಾಲು 60 ನೇ ವರ್ಷದ ಭಜನಾ ಮಂಗಲೋತ್ಸವ ಪ್ರಯುಕ್ತ ಭಜನಾ ಸಂಭ್ರಮಕ್ಕೆ ವಿಘ್ನವಿನಾಶಕ ವಿಘ್ನೇಶ್ವರನಿಗೆ ಗಣಹೋಮ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. 4 ದಿನಗಳ ಕಾಲ ನಗರ ಭಜನೆ ನಡೆಯಲಿದೆ.