Updated News From Kaup
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ
Posted On: 21-01-2022 09:14PM
ಮಂಗಳೂರು : ಕುದ್ರೋಳಿಯಲ್ಲಿರುವ ಬಾಡಿಗೆ ಮನೆಯಲ್ಲಿ ಸುಮಾರು 5 ತಿಂಗಳಿನಿಂದ ಸೂಫಿಯಾ ಬೇಗಂ ಮತ್ತು ಆಕೆಯ ಗಂಡ ವಾಸ್ತವ್ಯ ಮಾಡಿಕೊಂಡಿರುತ್ತಾರೆ. ಜನವರಿ 21ರಂದು ಸೂಫಿಯಾ ಬೇಗಂ ಮಲಗಿದ್ದ ಕೋಣೆಯ ಕಿಟಕಿಯ ಕಬ್ಬಿಣದ ಸರಳಿಗೆ ಚೂಡಿದಾರದ ಶಾಲನ್ನು ಕುತ್ತಿಗೆಗೆ ಕಟ್ಟಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದೆ.
ಹಣಕ್ಕಾಗಿ ವ್ಯಕ್ತಿಯೊಬ್ಬರನ್ನು ಹನಿಟ್ರಾಪ್ ಮಾಡುತ್ತಿದ್ದ ದಂಪತಿಗಳ ಸೆರೆ
Posted On: 21-01-2022 08:28PM
ಮಂಗಳೂರು : ನಗರದ ಪದವಿನಂಗಡಿನ ಬಾಡಿಗೆ ಮನೆಯೊಂದಕ್ಕೆ ದಂಪತಿಗಳ ನಡುವಿನ ಸಮಸ್ಯೆಯನ್ನು ಪರಿಹಾರ ಮಾಡಲು ಮನೆಯಲ್ಲಿ ಪೂಜೆ ಮಾಡಬೇಕೆಂದು ಪುರೋಹಿತರನ್ನು ಕರೆಯಿಸಿ ಹನಿಟ್ರಾಪ್ ಮಾಡಿ ವ್ಯಕ್ತಿಯೊಬ್ಬರನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ದಂಪತಿ ಆರೋಪಿಗಳನ್ನು ದಸ್ತಗಿರಿ ಮಾಡಿ ಹನಿಟ್ರಾಪ್ ಪ್ರಕರಣವೊಂದನ್ನು ಭೇದಿಸುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಪತ್ತೆ
Posted On: 19-01-2022 05:09PM
ಮಂಗಳೂರು : ಇಲ್ಲಿನ ಉತ್ತರ ಪೊಲೀಸ್ ಠಾಣೆಯಲ್ಲಿ 2000ನೇ ಇಸವಿಯಲ್ಲಿ ದಾಖಲಾದ ಪ್ರಕರಣದಲ್ಲಿ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕಾರ್ಕಳದ ಬಜಗೋಳಿಯ ದಿಡಿಂಬಿಲ ಗುಡ್ಡೆ, ಹೈಸ್ಕೂಲು ಬಳಿ ನಿವಾಸಿ ಸಿ.ಎ.ಅಬ್ಬಾಸ್ ಪುತ್ರನಾದ ಆರೋಪಿ ಝಕಾರಿಯಾ ಎಂಬಾತನನ್ನು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಪೊಲೀಸು ನಿರೀಕ್ಷಕರಾದ ರಾಘವೇಂದ್ರ ಬೈಂದೂರು ಇವರ ಮಾರ್ಗದರ್ಶನದಂತೆ ಠಾಣಾ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಓಂದಾಸ್, ಪೊಲೀಸ್ ಕಾನ್ಸ್ಟೇಬಲ್ ಸಂಪತ್ ಇವರೊಂದಿಗೆ ಜನವರಿ 18ರಂದು ವಶಕ್ಕೆ ಪಡೆದಿರುತ್ತಾರೆ. ಆರೋಪಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಿಂದ 25ಲಕ್ಷ ರೂಪಾಯಿ ದೇಣಿಗೆ
Posted On: 19-01-2022 04:38PM
ಹೆಜಮಾಡಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ದಾರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಪ್ರಥಮ ಹಂತದಲ್ಲಿ 10 ಲಕ್ಷ, ದ್ವಿತೀಯ ಹಂತದಲ್ಲಿ 15 ಲಕ್ಷ ಒಟ್ಟು 25ಲಕ್ಷ ಮಂಜೂರು ಮಾಡಿದ್ದಾರೆ.
ಕೆ.ಎಲ್.ಕುಂಡಂತಾಯರ 'ಧರ್ಮ ಜಾಗರ' ಬಿಡುಗಡೆ
Posted On: 18-01-2022 10:43AM
ಕಿನ್ನಿಗೋಳಿ : ಕರ್ನಾಟಕ ಸರಕಾರದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಎಂ.ಎನ್.ನಂದೀಶ್ ಹಂಚೆ ಅವರು ಕೆ.ಎಲ್.ಕುಂಡಂತಾಯರ 'ಧರ್ಮ ಜಾಗರ' ಕೃತಿಯನ್ನು ಬಿಡುಗಡೆಗೊಳಿಸಿದರು.
ಕಾಪು ಶಾಸಕರಿಂದ 6 ಲಕ್ಷ ರೂ.ಗಳ ಮೀನುಗಾರಿಕಾ ಪರಿಹಾರ ಚೆಕ್ ಹಸ್ತಾಂತರ
Posted On: 17-01-2022 06:07PM
ಹೆಜಮಾಡಿ : ಇತ್ತೀಚಿಗೆ ಹೆಜಮಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೋಡಿ ಸಮೀಪ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಹೆಜಮಾಡಿ ಕೋಡಿ ನಿವಾಸಿ ಭಾಸ್ಕರ್ ಪುತ್ರನ್ ರವರ ಪುತ್ರ ಜಯಂತ್ ರವರು ನೀರು ಪಾಲಾಗಿ ಮೃತರಾಗಿದ್ದರು.
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ 74ನೇ ಸೇನಾ ದಿನಾಚರಣೆ
Posted On: 17-01-2022 06:01PM
ಶಿರ್ವ: ಈ ದಿನಗಳಲ್ಲಿ ರಾಷ್ಟ್ರದ ಭದ್ರತೆಯನ್ನು ಕಾಪಾಡುವುದು ಪ್ರತಿಯೊಬ್ಬ ಯುವ ನಾಗರಿಕನ ಕರ್ತವ್ಯವಾಗಿದೆ. ರಾಷ್ಟ್ರೀಯ ಆಸ್ತಿಗಳು, ನೈಸರ್ಗಿಕ ಸಂಪನ್ಮೂಲಗಳು, ಕಾನೂನು ಮತ್ತು ಸುವ್ಯವಸ್ಥೆಯನ್ನು ರಕ್ಷಿಸಲು ಇಂದು ನಾವು ಸಶಸ್ತ್ರ ಪಡೆಗಳನ್ನು ಹೆಚ್ಚಿಸಬೇಕಾಗಿದೆ. ಸೇನೆ ತನ್ನ ನೆಲೆಯಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಪ್ರಜೆಗಳು ಮತ್ತು ಸರ್ಕಾರ ತಮ್ಮ ಸಂಪೂರ್ಣ ಸಹಕಾರವನ್ನು ನೀಡಿ ರಾಷ್ಟ್ರದ ಪ್ರಗತಿಗೆ ಕೈಜೋಡಿಸಬೇಕಾಗಿರುವುದು ಇಂದು ಅತಿ ಅಗತ್ಯವಾಗಿದೆ ಎಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕಾಲೇಜಿನ ಎನ್.ಸಿ.ಸಿ ಭೂಯುವ ಸೇನಾ ದಳದಿಂದ ಏರ್ಪಡಿಸಿದ 74ನೇ ಸೇನಾ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೆಮುಂಡೆಲ್ ನ ಆಧ್ಯಾ ಫೌಂಡೇಶನ್ ಸೀನಿಯರ್ ಡೈರೆಕ್ಟರ್ ರಾಕೇಶ್ ಅಜಿಲ ಮಾತನಾಡಿದರು.
ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ ಶ್ರೀಧರ ಡಿ.ಎಸ್. ಅವರಿಗೆ ಸಮ್ಮಾನ
Posted On: 17-01-2022 05:56PM
ಸುರತ್ಕಲ್ : ತಡಂಬೈಲು ಶ್ರೀದುರ್ಗಾಂಬಾ ಮಹಿಳಾ ಯಕ್ಷಗಾನ ಮಂಡಳಿಯ ಏಳನೇ ವರ್ಷದ ತಾಳಮದ್ದಳೆ ಸಪ್ತಾಹದ ಸಮರೋಪ ಸಮಾರಂಭದಲ್ಲಿ ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತ , ಹಿರಿಯ ಯಕ್ಷಗಾನ ವಿದ್ವಾಂಸ,ಪ್ರಸಂಗಕರ್ತ,ಸಾಹಿತಿ ಶ್ರೀಧರ ಡಿ.ಎಸ್.ಅವರನ್ನು ಅಭಿನಂದಿಸಿ ಸಮ್ಮಾನಿಸಲಾಯಿತು.
ಉದ್ಯಾವರದ ಸುರೇಶ್ ಬಂಗೇರ ಶಬರಿಮಲೆಯಲ್ಲಿ ಹೃದಯಘಾತದಿಂದ ಸಾವು
Posted On: 16-01-2022 07:35PM
ಉಡುಪಿ : ಜಿಲ್ಲೆಯ ಉದ್ಯಾವರ ಅಯ್ಯಪ್ಪಸ್ವಾಮಿ ಮಂದಿರದಿಂದ ಹೊರಟ ಅಯ್ಯಪ್ಪಸ್ವಾಮಿ ಸುರೇಶ್ ಬಂಗೇರ ( 52) ಶಬರಿಮಲೆಯಲ್ಲಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ.
ಮೋಕ್ಷಗಿರಿಯಲ್ಲಿ ಕಿಡಿಗೇಡಿಗಳಿಂದ ಧ್ವಂಸಗೊಂಡಿದ್ದ ಭಾಗವಧ್ವಜ ಕಟ್ಟೆಯನ್ನು ಮರುಸ್ಥಾಪಿಸಿದ ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರು
Posted On: 16-01-2022 07:16PM
ಉಡುಪಿ : ಜಿಲ್ಲೆಯಲ್ಲಿ ಒಂದು ದೊಡ್ಡ ಮಟ್ಟಿನಲ್ಲಿ ಸದ್ದು ಮಾಡಿದ್ದ ಕುಂತಲ ನಗರ ಗ್ರಾಮದಲ್ಲಿ ಮೋಕ್ಷಗಿರಿ ಎಂಬ ಪರ್ವತದಲ್ಲಿ 2 ತಿಂಗಳ ಹಿಂದೆಯಷ್ಟೇ ವಿಶ್ವ ಹಿಂದೂ ಪರಿಷತ್ ಭಜರಂಗದಳ ಕಾರ್ಯಕರ್ತರು ಸ್ಥಾಪಿಸಿದ್ದ ಭಾಗವಧ್ವಜ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದರು.
