Updated News From Kaup
ಶ್ರೀ ಕ್ಷೇತ್ರ ಶಂಕರಪುರ : ವಿಶ್ವ ಪ್ರಾಣಿ ಪಕ್ಷಿಗಳ ಮೋಕ್ಷ ದಿನಾಚರಣೆ
Posted On: 17-03-2025 12:59PM
ಕಟಪಾಡಿ : ಶ್ರೀ ಕ್ಷೇತ್ರ ಶಂಕರಪುರ ಶ್ರೀ ಸಾಯಿ ಮುಖ್ಯಪ್ರಾಣ ದೇವಸ್ಥಾನ ಇದರ ವತಿಯಿಂದ ವಿಶ್ವ ಪ್ರಾಣಿ ಪಕ್ಷಿಗಳ ಮೋಕ್ಷ ದಿನಾಚರಣೆಯು ಆದಿತ್ಯವಾರ ಶಂಕರಪುರದಲ್ಲಿ ನಡೆಯಿತು.
ಬದ್ರೀಯಾ ಜುಮ್ಮಾ ಮಸೀದಿ ಮಜೂರು ಮಲ್ಲಾರು ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ
Posted On: 17-03-2025 11:10AM
ಕಾಪು : ಬದ್ರೀಯಾ ಜುಮ್ಮಾ ಮಸೀದಿ ಮಜೂರು ಮಲ್ಲಾರು ಇದರ ನೂತನವಾಗಿ ಆಯ್ಕೆಯಾದ ಜಮಾತ್ ಆಡಳಿತ ಸಮಿತಿ ಹಾಗೂ ಜಮಾತ್ ಅಭಿವೃದ್ದಿ ಸಮಿತಿಯ ವತಿಯಿಂದ ದಾನಿಗಳ ನೆರವಿನಿಂದ ವಿವಿದ ಅಭಿವೃದ್ಧಿ ಕಾಮಗಾರಿಗಳನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಈ ಸಂದರ್ಭ ಅವರು ಅಭಿವೃದ್ದಿ ಕೆಲಸಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಜಮಾತ್ ಸಮಿತಿ ಮತ್ತು ಅಬಿವೃದ್ದಿ ಸಮಿತಿ ಹಾಗೂ ದಾನಿಗಳು, ಎಲ್ಲಾ ಜಮಾತಿಗರ ಒಗ್ಗಟ್ಟನ್ನು ಶ್ಲಾಘಿಸಿದರು.
ತೇಜಸ್ವಿ ಸೂರ್ಯ ದಂಪತಿ : ಕಾಪು ಶ್ರೀ ಹೊಸ ಮಾರಿಗುಡಿ ದೇವಳ ಭೇಟಿ
Posted On: 16-03-2025 10:14PM
ಕಾಪು : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ದಂಪತಿ ಆದಿತ್ಯವಾರ ಸಂಜೆ ದೆಹಲಿಗೆ ಹೊರಡುವ ಮುನ್ನ ಕಾಪು ಮಾರಿಯಮ್ಮನ ದರುಶನ ಪಡೆದರು. ಈ ಸಂದರ್ಭ ದಂಪತಿಗಳಿಗೆ ಅಮ್ಮನ ಅನುಗ್ರಹ ಪ್ರಸಾದವನ್ನು ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅವರು ನೀಡಿದರು.
ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದಂಪತಿ ಭೇಟಿ
Posted On: 16-03-2025 10:45AM
ಕಾಪು : ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಶನಿವಾರ ಬೆಳಿಗ್ಗೆ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ ಪ್ರಹ್ಲಾದ್ ಜೋಶಿ ದಂಪತಿ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಮಾ.13 :ಪಾಂಗಾಳದಲ್ಲಿ ನಡೆಯಲಿದೆ ವೈಭವದ ಸಿರಿಜಾತ್ರೆ
Posted On: 12-03-2025 10:00AM
ಪಾಂಗಾಳ : ಮುಕ್ಕಾಲಿ ಅಣ್ಣು ಶೆಟ್ಟಿ ಕುಟುಂಬಸ್ಥರ ಆಡಳಿತದ ಶ್ರೀ ಆದಿ ಆಲಡೆ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಂಪ್ರತಿ ಜರಗುವ ವೈಭವದ ಸಿರಿ ಜಾತ್ರೆಯು ಮಾ.13, ಗುರುವಾರದಂದು ಜರಗಲಿದೆ.
ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ : 21ನೇ ವರ್ಷದ ಸಂಭ್ರಮ ಕಲಾಸಂಗಮ -2025
Posted On: 11-03-2025 10:50AM
ಉಡುಪಿ : ಮಂಗಳ ಕಲಾ ಸಾಹಿತ್ಯ ವೇದಿಕೆ ಪರ್ಕಳ ಇದರ 21ನೇ ವರ್ಷದ ಸಂಭ್ರಮ ಕಲಾಸಂಗಮ -2025 ಕಾರ್ಯಕ್ರಮವು ಶ್ರೀ ವಿಘ್ನೇಶ್ವರ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಸರ್ವೋದಯ ಶೆಟ್ಟಿಗಾರ್ ಪರ್ಕಳ ಮತ್ತು ಸ್ವಾಗತ ಹೋಟೆಲ್ ಮಾಲಕ ಮೋಹನ್ ದಾಸ್ ನಾಯಕ್ ಪರ್ಕಳ ಉದ್ಘಾಟಿಸಿ ಶುಭ ಹಾರೈಸಿದರು.
ಕಾಪು ಲಯನ್ಸ್ ಕ್ಲಬ್ : ಜಿಲ್ಲಾ ಗವರ್ನರ್ ಭೇಟಿ
Posted On: 10-03-2025 11:20PM
ಕಾಪು : ಕಾಪು ಲಯನ್ಸ್ ಕ್ಲಬ್ ಗೆ ಜಿಲ್ಲಾ ಗವರ್ನರ್ ಭೇಟಿ ಕಾರ್ಯಕ್ರಮ ಸೋಮವಾರ ಕಾಪುವಿನ K1 ಹೋಟೆಲ್ ಸಭಾಂಗಣದಲ್ಲಿ ಜರಗಿತು. ಜಿಲ್ಲಾ ಗವರ್ನರ್ ಹನೀಫ್ ಮೊಹಮ್ಮದ್ ರವರು ಮಾತನಾಡಿ, ಕಾಪು ಲಯನ್ಸ್ ಸುಮಾರು 48 ವರ್ಷಗಳ ಇತಿಹಾಸವುಳ್ಳ ಕ್ಲಬ್ ಆಗಿದು, ಉತ್ತಮ ಸಮಾಜ ಸೇವೆ ಮಾಡುವ ಮೂಲಕ ಮಾದರಿಯಾಗಿದೆ. ಮುಂದಿನ ದಿನಗಳಲ್ಲಿ ಕ್ಲಬ್ಬಿಗೆ ಒಳ್ಳೆಯ ಸದಸ್ಯರನ್ನು ಸೇರಿಸಿ ಗೋಲ್ಡನ್ ಜುಬ್ಲಿಯನ್ನು ಆಚರಿಸುವಂತಾಗಲಿ ಎಂದು ಹಾರೈಸಿದರು.
ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ : ಬಾಲಾಲಯಗಳ ಶಿಲಾನ್ಯಾಸ
Posted On: 06-03-2025 09:18PM
ಪಡುಬಿದ್ರಿ : ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವರ ಸಮಗ್ರ ಜೀರ್ಣೋದ್ದಾರವು ಶೀಘ್ರದಲ್ಲಿ ನಡೆಯಲ್ಲಿದ್ದು ಅದರ ಪೂರ್ವಭಾವಿಯಾಗಿ ಮಾ.6ರ ಪೂರ್ವಾಹ್ನ ವೃಷಭ ಲಗ್ನ ಸುಮೂರ್ತದಲ್ಲಿ ಶ್ರೀ ದೇವಳದ ತಂತ್ರಿಗಳಾದ ಕಂಬಳ ಕಟ್ಟ ಶ್ರೀ ರಾಧಕೃಷ್ಣ ಉಪಾಧ್ಯಾಯರ ನೇತೃತ್ವದಲ್ಲಿ ಶ್ರೀ ದೇವರ ಬಾಲಾಲಯಗಳ ಶಿಲಾನ್ಯಾಸದ ಧಾರ್ಮಿಕ ಕಾರ್ಯಕ್ರಮವು ಶ್ರೀ ಕ್ಷೇತ್ರದಲ್ಲಿ ನೆರವೇರಿತು.
ಮಾತೃಭಾಷೆಯೇ ಇತರ ಭಾಷಾ ಕಲಿಕೆಯ ತಳಹದಿ : ಬಿ.ಪುಂಡಲೀಕ ಮರಾಠೆ ಶಿರ್ವ
Posted On: 06-03-2025 09:14PM
ಶಿರ್ವ : ಶತಮಾನೋತ್ಸವ ಸಂಭ್ರಮದ ಹೊಸ್ತಿಲಲ್ಲಿರುವ ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರೀ ಹಿ.ಪ್ರಾ.ಶಾಲಾ ಶಿಕ್ಷಕ, ಪೋಷಕರ ಸಭೆ ಗುರುವಾರ ಜರಗಿತು.
ಬೆಳ್ಳೆ ಗ್ರಾ.ಪಂ.ಪರಿಸರದಲ್ಲಿ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನ
Posted On: 06-03-2025 09:01PM
ಶಿರ್ವ : ಬೆಳ್ಳೆ ಗ್ರಾಮ ಪಂಚಾಯತ್ ಬೆಳ್ಳೆ, ಉಷಾ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ನಿಟ್ಟೆ ಇದರ "ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ-2025" ಬೆಳ್ಳೆಯಲ್ಲಿ ಜರುಗುತ್ತಿದ್ದು, ಬುಧವಾರ ವಿದ್ಯಾರ್ಥಿಗಳು ಬೆಳ್ಳೆ ಗ್ರಾಮ ಪಂಚಾಯತ್ ಪರಿಸರದಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು.
