Updated News From Kaup
ಮಹಿಳೆಯರು ಸ್ವಾವಲಂಬಿಗಳಾಗಬೇಕು : ಡಾ.ಪ್ರತಿಭಾ .ಆರ್.
Posted On: 07 Aug 2025, 10:24 PM
ಕಾಪು : ಮಹಿಳೆ ಸಮಾಜದಲ್ಲಿ ಎದುರಿಸುತ್ತಿರುವ ಸಮಸ್ಯೆಗಳು ಹಲವಾರು. ಆದರೆ ಸಮಸ್ಯೆಗಳು ಬಂದಾಗ ಅಂಜದೇ ಅಳುಕದೇ ಧೈರ್ಯದಿಂದ ಅವುಗಳನ್ನು ಎದುರಿಸುವ ಛಲವನ್ನು ಪ್ರತಿಯೊಬ್ಬ ಹೆಣ್ಣು ಹೊಂದಿರಬೇಕು. ಪ್ರಸಕ್ತ ಪರಿಸ್ಥಿತಿಯಲ್ಲಿ ಮಹಿಳೆ ತಮ್ಮ ರಕ್ಷಣೆಯನ್ನು ತಾನೇ ಮಾಡಿಕೊಳ್ಳಲು ತನ್ನನ್ನು ತಾನು ಸಿದ್ಧಗೊಳಿಸಬೇಕಿದೆ. ಆದ್ದರಿಂದ ಮೊದಲು ವಿದ್ಯಾವಂತರಾಗಿ ಸ್ವಾವಲಂಬನೆಯಿಂದ ಸ್ವಾಭಿಮಾನದ ಬದುಕನ್ನು ಕಟ್ಟಿಕೊಳ್ಳಲು ಮಹಿಳೆ ಮುಂದಾಗಬೇಕು ಎಂಬುದಾಗಿ ಕಾಪು ತಾಲೂಕು ದಂಡಾಧಿಕಾರಿ ಡಾ.ಪ್ರತಿಭಾ .ಆರ್.ಹೇಳಿದರು. ಅವರು ಕಾಪು ತಾಲೂಕಿನ ಇನ್ನಂಜೆ ಮಹಿಳಾ ಮಂಡಳಿಯ ಆಶ್ರಯದಲ್ಲಿ ನಡೆದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಯುವ ನ್ಯಾಯವಾದಿ, ವಾಗ್ಮಿ ಕು.ಸಹನಾ ಕುಂದರ್ ಅವರು ತಮ್ಮ ಭಾಷಣದಲ್ಲಿ ಮಹಿಳೆಯರು ತಮ್ಮ ಸಹಜ ದೌರ್ಬಲ್ಯಗಳಾದ ಮತ್ಸರ, ದ್ವೇಷ, ಅಸೂಯೆ, ಚಾಡಿ ಮಾತುಗಳನ್ನು ಬದಿಗಿಟ್ಟು ನಮ್ಮ ಹಿರಿಯರು ಹಿಂದಿನ ಕಾಲದಲ್ಲಿ ಅನುಭವಿಸಿದ್ದ ಕಷ್ಟಕಾರ್ಪಣ್ಯಗಳು, ಪಟ್ಟಿರುವ ಶ್ರಮದ ಬಗ್ಗೆ ತಮ್ಮ ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸವನ್ನು ಮಾಡಿದಲ್ಲಿ ಉತ್ತಮ ಸಮಾಜದ ನಿರ್ಮಾಣ ಖಂಡಿತಾ ಸಾಧ್ಯವಿದೆ ಎಂದರು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ನಿಟ್ಟೆ ವಿದ್ಯಾಸಂಸ್ಥೆಯ ಪ್ರಾಧ್ಯಾಪಕಿ ಹಾಗೂ ಶಿರ್ವ ಮಹಿಳಾ ಮಂಡಲದ ಅಧ್ಯಕ್ಷೆ ಡಾ.ಸ್ಪೂರ್ತಿ.ಪಿ.ಶೆಟ್ಟಿ ಅವರು ಮಾತನಾಡಿ, ಇಂತಹ ಸಂಘ ಸಂಸ್ಥೆಗಳು ನಮ್ಮಲ್ಲಿ ಕೂಡಿ ಬಾಳುವ, ಸೌಹಾರ್ದತೆಯಿಂದ ಬದುಕುವ ಅವಕಾಶವನ್ನು ಕಲ್ಪಿಸಿ ಕೊಡುತ್ತವೆ. ನಮ್ಮೊಳಗೆ ಸುಪ್ತವಾಗಿರುವ ಪ್ರತಿಭೆಯನ್ನು ಹೊರಗೆಡಹಲು ವೇದಿಕೆಯನ್ನು ಕಲ್ಪಿಸಿ ಕೊಡುತ್ತವೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಹಿರಿಯ ನಿವೃತ್ತ ಆರೋಗ್ಯ ಸಹಾಯಕಿ ವಿಜಯಾ ಕುಮಾರಿ, ನಿವೃತ್ತ ಆಶಾ ಕಾರ್ಯಕರ್ತೆ ಉಷಾ ಭಟ್, ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಮಾಲತಿ ಭಟ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಇನ್ನಂಜೆ ಮಹಿಳಾ ಮಂಡಳಿಯ ಅಧ್ಯಕ್ಷೆ ಶ್ವೇತಾ.ಎಲ್.ಶೆಟ್ಟಿ ಅವರು ಪ್ರಾಸ್ತಾವನೆಗೈದು, ಸ್ವಾಗತಿಸಿದರು. ಅನಿತಾ ಮಥಾಯಸ್ ಆಟಿ ತಿಂಗಳ ವಿಶೇಷ ತಿನಿಸುಗಳನ್ನು ತಯಾರಿಸಿದವರ ಪಟ್ಟಿಯನ್ನು ವಾಚಿಸಿದರು. ಪುಷ್ಪಾ ರವೀಂದ್ರ ಶೆಟ್ಟಿ,ಟ್ರೀಜಾ ಮಚಾದೋ ಹಾಗೂ ರೇಖಾ .ಆರ್.ಶೆಟ್ಟಿ ಅವರು ಸನ್ಮಾನಿತರ ನ್ನು ಪರಿಚಯಿಸಿದರು. ಮಹಿಳಾ ಮಂಡಳಿಯ ಕಾರ್ಯದರ್ಶಿ ಸಿಲ್ವಿಯಾ ಕ್ಯಾಸ್ತಲಿನೋ ವಂದಿಸಿ, ಸೀಮಾ ಮಾರ್ಗರೇಟ್ ಡಿ'ಸೋಜ ಕಾರ್ಯಕ್ರಮ ನಿರ್ವಹಿಸಿದರು. ಉಡುಪಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಉಪಾಧ್ಯಕ್ಷರಾದ ಗೀತಾ ವಾಗ್ಳೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲರಿಗೂ ಆಟಿ ತಿಂಗಳ ವಿಶಿಷ್ಟ ಹಾಗೂ ಸಾಂಪ್ರದಾಯಿಕ ತಿನಿಸುಗಳನ್ನು ಉಣಬಡಿಸಲಾಯಿತು.
ಪಡುಬಿದ್ರಿ : ನಗದು ಇದ್ದ ಪಸ್೯ ವಾರೀಸುದಾರರಿಗೆ ಹಸ್ತಾಂತರಿಸಿದ ಹೋಂ ಗಾಡ್ಸ್೯
Posted On: 02 Aug 2025, 02:44 PM
ಪಡುಬಿದ್ರಿ : ಇಲ್ಲಿನ ಜಂಕ್ಷನ್ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದ ಗೃಹ ರಕ್ಷಕ ದಳದ ಮಹಿಳಾ ಸಿಬ್ಬಂದಿಗಳು ಪಡುಬಿದ್ರಿ ಪೇಟೆ ಭಾಗದಲ್ಲಿ ದೊರೆತ ರೂ.15 ಸಾವಿರ ನಗದು ಇದ್ದ ಪರ್ಸನ್ನು ಅದರ ವಾರಿಸುದಾರರಿಗೆ ಹಸ್ತಾಂತರಿಸಿದ ಘಟನೆ ಶನಿವಾರ ಬೆಳಿಗ್ಗೆ ಘಟಿಸಿದೆ. ಪಡುಬಿದ್ರಿ ಜಂಕ್ಷನ್ ನಲ್ಲಿ ನಿತ್ಯವೂ ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸುತ್ತಿರುವ ಪಡುಬಿದ್ರಿ ಗೃಹ ರಕ್ಷಕ ದಳದ ಸಿಬ್ಬಂದಿಗಳಾದ ಅಮಿತಾ, ಸುಜಾತಾರವರವರಿಗೆ ಕರ್ತವ್ಯದಲ್ಲಿದ್ದ ಸಂದರ್ಭ ದೊರೆತ ಪರ್ಸನ್ನು ತೆರೆದು ನೋಡಿದಾಗ ನಗದು, ಜೊತೆಗೆ ಪಾನ್ ಕಾಡ್೯ ಇದ್ದು ಅದರಲ್ಲಿದ್ದ ಫೋನ್ ನಂಬರ್ಗೆ ಫೋನ್ ಮಾಡಿ ವಿಚಾರಿಸಿ ಅದರ ವಾರಿಸುದಾರರಿಗೆ ಹಸ್ತಾಂತರಿಸಿದ್ದಾರೆ. ಅವರ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಶ್ಲಾಘನೆ ವ್ಯಕ್ತವಾಗಿದೆ.
ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ : ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರ
Posted On: 01 Aug 2025, 07:33 PM
ಕಾಪು : ತಾಲೂಕಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ಶುಕ್ರವಾರ ಬೆಳಿಗ್ಗೆ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು. ಈ ಸಂದರ್ಭದಲ್ಲಿ ದೇವಳದ ಸೇವೆಗಳ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ನವದುರ್ಗಾ ಲೇಖನ ಯಜ್ಞ ಪುಸ್ತಕವನ್ನು ಪಡೆದುಕೊಂಡರು. ತಾನು ಹಾಗೂ ಕುಟುಂಬದ ಎಲ್ಲ ಸದಸ್ಯರು ಈ ಲೇಖನವನ್ನು ಬರೆದು ಶ್ರೀ ಕ್ಷೇತ್ರಕ್ಕೆ ಶಾಶ್ವತ ಪೂಜೆಯೊಂದಿಗೆ ಸಮರ್ಪಿಸಲಿದ್ದೇವೆ ಎಂದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅವರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಸದಸ್ಯ ರವೀಂದ್ರ ಮಲ್ಲಾರ್, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಕೆ.ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಕಡಲ್ ಫಿಶ್ ಸ್ಪೋರ್ಟ್ಸ್ ಅಕಾಡೆಮಿ & ಚಾರಿಟೇಬಲ್ ಟ್ರಸ್ಟ್ ಪಡುಬಿದ್ರಿ : ವೈದ್ಯಕೀಯ ಚಿಕಿತ್ಸೆಗೆ ನೆರವು
Posted On: 01 Aug 2025, 07:19 PM
ಪಡುಬಿದ್ರಿ : ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿರುವ ಪಲಿಮಾರು ಪಟ್ಟಿಗೇರಿ ನಿವಾಸಿ ಗಣೇಶ್ ಪೂಜಾರಿಯವರ ವೃೆದ್ಯಕೀಯ ಚಿಕಿತ್ಸೆಗಾಗಿ ಕಡಲ್ ಫಿಶ್ ಸ್ಪೋರ್ಟ್ಸ್ & ಚಾರಿಟೇಬಲ್ ಟ್ರಸ್ಟ್ (ರಿ.) ವತಿಯಿಂದ ಸಹಾಯಧನವನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಚೇತನ್ ಪಡುಬಿದ್ರಿ, ತುಳುನಾಡ ಕಲಾವಿದರು (ರಿ.) ಪಡುಬಿದ್ರಿ ಅಧ್ಯಕ್ಷರಾದ ಸಂತೋಷ್ ಪಡುಬಿದ್ರಿ, ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ.) ರಾಜ್ಯಾಧ್ಯಕ್ಷರಾದ ರಚನ್ ಸಾಲ್ಯಾನ್, ಸ್ಥಳೀಯರಾದ ಗುರುಪ್ರಸಾದ್ ಪೂಜಾರಿ, ಮಹೇಶ್ ಪೂಜಾರಿ, ರಫೀಕ್ ಪಲಿಮಾರು ಉಪಸ್ಥಿತರಿದ್ದರು.
ಮಾನವಾಧಿಕಾರ ಮಹಿಳಾ ಹಾಗೂ ಬಾಲವಿಕಾಸ ಸಂಘಟನೆಯ ಉಡುಪಿ ಜಿಲ್ಲಾಧ್ಯಕ್ಷರಾಗಿ ಸ್ಮಿತಾ ಸುಧೀರ್ ಸುವರ್ಣ
Posted On: 31 Jul 2025, 07:51 PM
ಕಾಪು : ಮಾನವಾಧಿಕಾರ ಮಹಿಳಾ ಹಾಗೂ ಬಾಲವಿಕಾಸ ಸಂಘಟನೆ ಇದರ ಉಡುಪಿ ಜಿಲ್ಲಾಧ್ಯಕ್ಷರಾಗಿ ತುಳು ಚಿತ್ರನಟಿ ಶ್ರೀಮತಿ ಸ್ಮಿತಾ ಸುಧೀರ್ ಸುವರ್ಣ ಇವರು ನಿಯುಕ್ತಿಗೊಂಡಿದ್ದಾರೆ. ಇವರನ್ನು ಸಂಸ್ಥೆಯ ಕರ್ನಾಟಕ ರಾಜ್ಯಾಧ್ಯಕ್ಷರಾದ ರಾಘವೇಂದ್ರ ಶೆಟ್ಟಿಯವರು ನಿಯುಕ್ತಿಗೊಳಿಸಿದ್ದಾರೆ.
ಕಾಪು : ಕಳತ್ತೂರು ಅಯ್ಯಣ್ಣ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ
Posted On: 31 Jul 2025, 07:47 PM
ಕಾಪು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಕಾಪು ತಾಲೂಕು ವತಿಯಿಂದ ಪಡು ಕಳತ್ತೂರು ಶ್ರೀ ಅಯ್ಯಣ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ನೆರವೇರಿತು. ಶಾಲಾ ಸಂಚಾಲಕ ಪ್ರವೀಣ್ ಗುರ್ಮೆ ಮಾತನಾಡಿ, ಸುತ್ತಮುತ್ತಲಿನ ಪರಿಸರವನ್ನು ನಾವು ಕಾಪಾಡಿಕೊಂಡು ಬಂದಲ್ಲಿ ಮಾತ್ರ ಪರಿಸರದ ಅರಿವು ಮೂಡಲು ಸಾಧ್ಯ. ಮರಗಿಡಗಳನ್ನ ಬೆಳೆಸುವುದು, ನೀರನ್ನು ಉಳಿಸುವುದು, ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡುವ ಅತ್ಯಗತ್ಯ ಇದೆ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುತ್ಯಾರು ಪಂಚಾಯತ್ ಅಧ್ಯಕ್ಷ ಜನಾರ್ದನ ಆಚಾರ್ಯ ವಹಿಸಿದ್ದರು. ಒಕ್ಕೂಟದ ಅಧ್ಯಕ್ಷರಾದ ಹರೀಶ್ ಕುಲಾಲ್, ಶಾಲಾ ಮುಖ್ಯ ಶಿಕ್ಷಕಿ ಶಾಂಭವಿ ಆಚಾರ್ಯ, ಪದಾಧಿಕಾರಿ ಪ್ರದೀಪ್, ಕೃಷಿ ಮೇಲ್ವಿಚಾರಕರಾದ ದೇವೇಂದ್ರ, ಅಧ್ಯಾಪಕ ವೃಂದ, ಶಾಲಾ ಮಕ್ಕಳು ಉಪಸ್ಥಿತರಿದ್ದರು. ಶಾಲೆಯ ಆವರಣದಲ್ಲಿ ಗಿಡ ನಾಟಿ ಮಾಡಿ, ಪರಿಸರ ಗೀತೆ, ಪ್ರಭಂದ ಸ್ಪರ್ಧೆ, ಎಲೆ ಗುರುತಿಸುವಿಕೆ, ವಿಜೇತ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.
ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ : ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್.
Posted On: 31 Jul 2025, 06:36 PM
ಪಡುಬಿದ್ರಿ : ಮನುಷ್ಯ ತನ್ನ ಸ್ವಾರ್ಥಕ್ಕಾಗಿ ರಸ್ತೆ, ಕಾಂಕ್ರೀಟ್ ಕಟ್ಟಡ ನಿರ್ಮಾಣ ಮಾಡಿ ಪ್ರಕೃತಿಯಲ್ಲಿ ಅಸಮತೋಲನ ಉಂಟಾಗಿ ಗುಡ್ಡ ಕುಸಿತ ಮತ್ತು ಪ್ರಕೃತಿ ವಿಕೋಪಗಳು ಸಂಭವಿಸುತ್ತಿದೆ. ಇದರಿಂದ ಆತಂಕದ ವಾತವರಣ ಸೃಷ್ಟಿಯಾಗುತ್ತಿದೆ. ಇದಕ್ಕೆ ಪರ್ಯಾಯವಾಗಿ ಒಂದು ದಿನ ಗಿಡ ನೆಟ್ಟು ವರ್ಷಪೂರ್ತಿ ಸಂರಕ್ಷಿಸಿಕೊಂಡು ಬರುವುದು. ನಾವು ನೆಟ್ಟ ಗಿಡ ಭವಿಷ್ಯತ್ತಿನಲ್ಲಿ ಮನುಷ್ಯ ಹಾಗೂ ಪ್ರಾಣಿ ಪಕ್ಷಿಗಳಿಗೆ ಗಾಳಿ ,ಅಹಾರ ಪೂರೃೆಸುವಂತಿರ ಬೇಕು. ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ಹೇಳಿದರು. ಅವರು ಪಡುಬಿದ್ರಿ ರೋಟರಿ ಕ್ಲಬ್ ಮತ್ತು ಹಸಿರು ಸೇನೆ ಹೆಜಮಾಡಿ ಹಾಗೂ ಪಡುಬಿದ್ರಿ ಪೋಲಿಸ್ ಠಾಣೆ ವತಿಯಿಂದ ಹೆಜಮಾಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಹಾಗೂ ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು. ಪ್ರಕೃತಿ ಉಳಿಸುವ ನಿಟ್ಟಿನಲ್ಲಿ ಪ್ರತಿದಿನ ಗಿಡಮರಗಳೊಂದಿಗೆ ಹೆಜ್ಜೆ ಹಾಕಬೇಕು. ಮರಗಳಿಲ್ಲದೆ ನಮ್ಮ ಜೀವನ ಅಸಾಧ್ಯ. ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳಲು ಮತ್ತು ಮುಂದಿನ ಪೀಳಿಗೆಗೆ ಆರೋಗ್ಯಕರ ಪರಿಸರವನ್ನು ಬಿಟ್ಟುಹೋಗಲು ಮರಗಳನ್ನು ಸಂರಕ್ಷಿಸುವುದು ಅಗತ್ಯ ಎಂದು ಪಡುಬಿದ್ರಿ ಪೋಲಿಸ್ ಠಾಣಾಧಿಕಾರಿ ಶಕ್ತಿವೇಲು ಹೇಳಿದರು. ಹೆಜಮಾಡಿ ಹಸಿರು ಸೇನೆ ಸಂಚಾಲಕ ಶೇಖರ್ ಹೆಜ್ಮಾಡಿ ಪ್ರಸ್ತಾವಿಕವಾಗಿ ಮಾತನಾಡಿದರು. ರೋಟರಿ ಅಧ್ಯಕ್ಷ ಸುನಿಲ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲರಾಗಿ ಪದನ್ನೋತಿ ಹೊಂದಿದ ಡಾ. ವಿನ್ಸೆಂಟ್ ರವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹೆಜಮಾಡಿ ಮಹಾಲಿಂಗೇಶ್ವರ ದೇವಸ್ಥಾನದ ಅಡಳಿತ ಮೊಕ್ತೇಸರ ದಯಾನಂದ ಹೆಜ್ಮಾಡಿ, ಕಾಲೇಜು ಪ್ರಭಾರ ಪ್ರಾಂಶುಪಾಲ ಡಾ. ವಿನ್ಸೆಂಟ್, ಶಾಲಾ ಮುಖ್ಯೋಪಾಧ್ಯಾಯಿನಿ ಸಂಪಾವತಿ, ಹಸಿರು ಸೇನೆ ಕಾರ್ಯದರ್ಶಿ ಕೇಶವ್ ಸಾಲ್ಯಾನ್, ರೋಟರಿ ಸದಸ್ಯರಾದ ಗಣೇಶ್ ಆಚಾರ್ಯ ಎರ್ಮಾಳ್, ಗೀತಾ ಅರುಣ್, ಹೇಮಲತಾ ಸುವರ್ಣ, ಶೋಭಾ ಚಂದ್ರಶೇಖರ್, ಗಣೇಶ್ ಶೆಟ್ಟಿಗಾರ್ ಉಪಸ್ಥಿತರಿದ್ದರು. ಸುನಿಲ್ ಕುಮಾರ್ ಸ್ವಾಗತಿಸಿ, ಕಾರ್ಯದರ್ಶಿ ಪವನ್ ಸಾಲ್ಯಾನ್ ವಂದಿಸಿ, ಸಂತೋಷ್ ಪಡುಬಿದ್ರಿ ನಿರೂಪಿಸಿದರು.
ಕಾಪು : ಘಂಟಾನಾದ ಸೇವೆಯಲ್ಲಿ ಇಷ್ಟಾರ್ಥ ಸಿದ್ಧಿ - ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು
Posted On: 31 Jul 2025, 04:31 PM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನಕ್ಕೆ ಸಾಗರ ಕ್ಷೇತ್ರದ ಶಾಸಕ ಗೋಪಾಲ ಕೃಷ್ಣ ಬೇಳೂರು ಕುಟುಂಬ ಸಮೇತರಾಗಿ ಭೇಟಿ ನೀಡಿದರು. ಕುಟುಂಬದ ಎಲ್ಲಾ ಸದಸ್ಯರು ನವದುರ್ಗಾ ಲೇಖನ ಯಜ್ಞದ ಸಂಕಲ್ಪವನ್ನು ಮಾಡಿದರು. ಪತ್ನಿ ರಂಜಿತಾ ರಾಧಾ ದೇವಿಗೆ ಸೀರೆ ಮತ್ತು ಬಾಗಿನ ನೀಡಿದರು. ಪುತ್ರ ವಿಹಾನ್ ಕಾರ್ಣಿಕ್ ಜೊತೆಗಿದ್ದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನಲ್ಲಿ ಪ್ರಾರ್ಥಿಸಿ "ಅಮ್ಮನ ಅನುಗ್ರಹ ಪ್ರಸಾದ" ನೀಡಿ ಗೌರವಿಸಿದರು. ಈ ಸಂದರ್ಭ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ನಾಗರಪಂಚಮಿಯ ಪರ್ವಕಾಲದಲ್ಲಿ ಕಾಪು ಮಾರಿಯಮ್ಮನ ಸನ್ನಿದಾನಕ್ಕೆ ಬಂದಿದ್ದೇನೆ. ಎಲ್ಲಾ ಸೇವೆಯನ್ನು ಮಾಡುವ ಜೊತೆಗೆ ವಿಶೇಷವಾಗಿ ಘಂಟಾನಾದ ಸೇವೆಯನ್ನು ಮಾಡಿದೆನು. ಇಲ್ಲಿನ ಬೃಹತ್ ಘಂಟೆಯನ್ನು ಬಾರಿಸುವ ಮೂಲಕ ನನ್ನ ಬೇಡಿಕೆಯನ್ನು ಈಡೇರಿಸುವಂತೆ ಕೇಳಿಕೊಂಡಿದ್ದೇನೆ ಎಂದರು. ಅಯೋಧ್ಯೆಯಲ್ಲಿ ದೇಶದ ಪ್ರಥಮ ಬೃಹತ್ ಗಾತ್ರದ ಘಂಟೆ ಇದ್ದರೇ, ಎರಡನೇಯದ್ದು ಉಡುಪಿಯ ಕಾಪುವಿನಲ್ಲಿ ಇರುವಂತದ್ದು. ಘಂಟಾನಾದ ಅದ್ಭುತವಾಗಿದೆ, ಕಂಪನಾಂಶಗಳನ್ನು ಕೇಳುತ್ತಿದ್ದರೇ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ಹೇಳಿದರು. ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಮತ್ತು ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ. ಶೆಟ್ಟಿ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಬೆಳಪು ದೇವಿಪ್ರಸಾದ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಸದಸ್ಯ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಮಾಧವ ಆರ್. ಪಾಲನ್, ಗೌರವ ಸಲಹೆಗಾರ ನಿರ್ಮಲ ಕುಮಾರ್ ಹೆಗ್ಡೆ ಉಪಸ್ಥಿತರಿದ್ದರು.
ಶ್ರೀ ನಾರಾಯಣ ಗುರು ಯುವ ವೇದಿಕೆ ಉಡುಪಿ : 'ಕೋಟಿ ಚೆನ್ನಯೆರ್' ನಾಟಕ ಯಶಸ್ವಿ ಪ್ರದರ್ಶನ
Posted On: 30 Jul 2025, 11:13 AM
ಉದ್ಯಾವರ : ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಉಡುಪಿ, ಇವರು ಸಾದರಪಡಿಸಿದ ರಂಗ ಕೇಸರಿ ರಮೇಶ್ ರೈ ಕುಕ್ಕುವಳ್ಳಿ ಸಾರಥ್ಯದಲ್ಲಿ ಪ್ರಕೃತಿ ಕಲಾವಿದರು ಕುಡ್ಲ ಅಭಿನಯಿಸಿದ, ಭಕ್ತಿ ಪ್ರಧಾನ ತುಳು ನಾಟಕ ಬಿರ್ದ್'ದ ಬೀರೆರ್ 'ಕೋಟಿ ಚೆನ್ನಯೆರ್' ನಿರೀಕ್ಷೆಗೂ ಮೀರಿ ಯಶಸ್ವಿಯಾಯಿತು. ಸಾವಿರಕ್ಕೂ ಅಧಿಕ ಕಲಾಭಿಮಾನಿಗಳಿಂದ ಉದ್ಯಾವರದ ಕ್ಸೇವಿಯರ್ ಸಭಾಭವನವು ತುಂಬಿತ್ತು. ಇದೇ ಸಂದರ್ಭದಲ್ಲಿ ಶ್ರೀ ನಾರಾಯಣ ಗುರು ಯುವ ವೇದಿಕೆ (ರಿ) ಉಡುಪಿ ಇದರ ನೇತೃತ್ವದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶ ಸಾರುವ ಉದ್ಯಾನವನದ ನೀಲ ನಕ್ಷೆಯನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಅನಾವರಣಗೊಳಿಸಿದರು. ಉದ್ಯಾನವನಕ್ಕಾಗಿ ಕಡೆಕಾರಿನಲ್ಲಿ ಸರಕಾರಿ ಭೂಮಿ ಮಂಜೂರಾತಿಗೆ ಸರಕಾರಕ್ಕೆ ಮಾಜಿ ಸಚಿವರ ಮೂಲಕ ಸಂಘಟನೆ ಮನವಿ ಸಲ್ಲಿಸಿತು. ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಮಾತನಾಡಿ, ಕಳೆದ ಹಲವಾರು ವರ್ಷಗಳಿಂದ ಈ ಸಂಘಟನೆ ಮಾಡುವ ಕೆಲಸದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷ ಪ್ರವೀಣ್ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ್ ಹೇರೂರು, ಶ್ರೀ ನಾರಾಯಣ ಗುರು ಯುವ ವೇದಿಕೆಯ ಗೌರವಾಧ್ಯಕ್ಷ ಸದಾಶಿವ ಅಮೀನ್ ಕಟ್ಟೆಗುಡ್ಡೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ದಿವಾಕರ್ ಕುಂದರ್, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಗಿರೀಶ್ ಕುಮಾರ್ ಉದ್ಯಾವರ, ಶ್ರೇಯಸ್ ಕೋಟ್ಯಾನ್, ಶ್ರೀ ನಾರಾಯಣ ಗುರು ಯುವ ವೇದಿಕೆಯ ಅಧ್ಯಕ್ಷ ಮಿಥುನ್ ಅಮೀನ್, ಭೂ ನ್ಯಾಯ ಮಂಡಳಿ ಸದಸ್ಯ ರೊಯ್ಸ್ ಫೆರ್ನಾಂಡಿಸ್, ಪ್ರಮುಖರಾದ ದಿವಾಕರ್ ಬೊಳ್ಜೆ, ಶಬರೀಶ್ ಸುವರ್ಣ, ಸಚಿನ್ ಸಾಲ್ಯಾನ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು. ದಿವಾಕರ್ ಕಡೆಕಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಯುವವಾಹಿನಿ ಪಡುಬಿದ್ರಿ ಘಟಕದ ಅಧ್ಯಕ್ಷರಾಗಿ ವಿಧಿತ್ ಪೂಜಾರಿ ಕರ್ನಿರೆ ಆಯ್ಕೆ
Posted On: 30 Jul 2025, 11:09 AM
ಪಡುಬಿದ್ರಿ : ಯುವವಾಹಿನಿ ಪಡುಬಿದ್ರಿ ಘಟಕದ 2025 -26ನೇ ವರ್ಷದ ಅಧ್ಯಕ್ಷರಾಗಿ ವಿಧಿತ್ ಪೂಜಾರಿ ಕರ್ನಿರೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನಿಖಿಲ್ ಪೂಜಾರಿ, 2 ನೇ ಉಪಾಧ್ಯಕ್ಷರಾಗಿ ಸುಜಾತ ಪ್ರಸಾದ್, ಕಾರ್ಯದರ್ಶಿಯಾಗಿ ಭಾಸ್ಕರ್ ಎನ್ ಅಂಚನ್, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಕರ್ನಿರೆ, ಕೋಶಾಧಿಕಾರಿಯಾಗಿ ತುಳಸಿ, ಸಂಘಟನಾ ಕಾರ್ಯದರ್ಶಿಯಾಗಿ ಅಂಕಿತ್ ಮುದರಂಗಡಿ, ವ್ಯಕ್ತಿತ್ವ ವಿಕಸನ ರಾಜೇಶ್ವರಿ ಅವಿನಾಶ್, ನಾರಾಯಣ ಗುರು ತತ್ವ ಪ್ರಚಾರ ಹರೀಶ್ ಕೋಟ್ಯಾನ್, ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಪೂರ್ಣಿಮಾ ವಿಧಿತ್, ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕರು ಶ್ರವಣ್ ಕುಮಾರ್, ಸಮಾಜ ಸೇವಾ ನಿರ್ದೇಶಕರು ರಾಜೇಶ್ ಕೆ ಪಲಿಮಾರು, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ಲಾವಣ್ಯ, ವಿದ್ಯಾರ್ಥಿ ಸಂಘಟನೆ ಕಾರ್ತಿಕ್ ಮತ್ತು ಸುದೀಪ್, ಮಹಿಳಾ ಸಂಘಟನೆ ಲತಾ ವಸಂತ್, ಪ್ರಚಾರ ನಿರ್ದೇಶಕರು ದೀಪಕ್ ಕರ್ನಿರೆ, ವಿದ್ಯಾ ನಿಧಿ ನಿರ್ದೇಶಕರಾಗಿ ಜೆನಿತ ಪಲಿಮಾರು ಆಯ್ಕೆಯಾಗಿದ್ದಾರೆ.
