Updated News From Kaup

ಕಾಪು : ಜನತಾದಳದ ವಿಜೇತ ಅಭ್ಯರ್ಥಿ ಉಮೇಶ್ ಕರ್ಕೇರರಿಗೆ ಅಭಿನಂದನಾ ಸಮಾರಂಭ

Posted On: 13-01-2022 10:37PM

ಕಾಪು : ಇಲ್ಲಿನ ಪುರಸಭಾ ಚುನಾವಣೆಯಲ್ಲಿ ಜನತಾದಳ (ಜಾತ್ಯತೀತ)ಪಕ್ಷದ ವಿಜೇತ ಅಭ್ಯರ್ಥಿ ಉಮೇಶ್ ಕರ್ಕೇರರವರಿಗೆ ಅಭಿನಂದನಾ ಸಮಾರಂಭ ಹಾಗೂ ಪಕ್ಷದ ಅಭ್ಯರ್ಥಿಯಾಗಿ ಇತರೆ ವಾಡ್೯ಗಳಲ್ಲಿ ಸ್ಪರ್ಧಿಸಿದ ಅಭ್ಯರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಮತ್ತು ನಾಗರಿಕರಿಗೆ ಕೃತಜ್ಞತೆ ಸಲ್ಲಿಸುವ ಸಮಾರಂಭವು ಜನವರಿ 12ರಂದು ಕೊಂಬಗುಡ್ಡೆ ವಾರ್ಡಿನಲ್ಲಿ ನಡೆಯಿತು.

ಉದ್ಯಾವರ : ಶ್ರೀ ವಿಠೋಬ ರುಖುಮಾಯಿ ನಾರಾಯಣಗುರು ಮಂದಿರದ 77ನೇ ವಾರ್ಷಿಕ ಮಂಗಲೋತ್ಸವ

Posted On: 13-01-2022 08:50PM

ಉದ್ಯಾವರ : ಇಲ್ಲಿನ ಬಿಲ್ಲವ ಮಹಾಜನ ಸಂಘ (ರಿ.) ಇದರ ಶ್ರೀ ವಿಠೋಬ ರುಖುಮಾಯಿ ನಾರಾಯಣಗುರು ಮಂದಿರದಲ್ಲಿ 77ನೇ ವಾರ್ಷಿಕ ಮಂಗಲೋತ್ಸವವು ಜರಗಲಿದೆ.

ಮಕರ ಸಂಕ್ರಮಣ ಆಧ್ಯಾತ್ಮಿಕ ಪುಣ್ಯಕಾಲ - ದೇವಯಾನದ ಆರಂಭ

Posted On: 13-01-2022 06:39PM

ಸಾಂಸ್ಕೃತಿಕ ಸಂಭ್ರಮಗಳಿಗೆ ಕಾಂತಿ ಹೆಚ್ಚುವ, ಧಾರ್ಮಿಕ ಆಚರಣೆಗಳಿಗೆ ಪ್ರಶಸ್ತವೆನಿಸುವ, ಆಧ್ಯಾತ್ಮಿಕವಾಗಿ ’ಪುಣ್ಯಕಾಲ’ ಎಂದು ನಂಬಲಾಗುವ ’ಉತ್ತರಾಯಣ’ವು ಮಕರ ಸಂಕ್ರಮಣದಿಂದ ಆರಂಭವಾಗುತ್ತದೆ. ಮಿಥುನ ಮಾಸ ಕಳೆದು ಕರ್ಕಾಟಕ ಮಾಸ ಪ್ರಾರಂಭವಾಗುವಾಗ ದಕ್ಷಿಣಾಯನ ಮೊದಲಿಡುತ್ತದೆ. ಆರು ತಿಂಗಳ ಬಳಿಕ ಧನುರಾಶಿಯಿಂದ ಸೂರ‍್ಯ ಮಕರ ರಾಶಿಗೆ ಪ್ರವೇಶಿಸುತ್ತಿರುವಂತೆಯೇ ಉತ್ತರಾಯಣ ಸನ್ನಿಹಿತವಾಗುತ್ತದೆ. ದಕ್ಷಿಣಾಯನವು ’ಪಿತೃಯಾನ’ವೆಂದೂ, ಉತ್ತರಾಯಣವು ’ದೇವಯಾನ’ವೆಂದೂ ವಿಭಾಗಿಸಲ್ಪಟ್ಟಿವೆ. ಉಪನಿಷತ್ತು, ಭಗವದ್ಗೀತೆ, ಮಹಾಭಾರತಗಳಲ್ಲಿ ದೇವಯಾನದ ಉಲ್ಲೇಖವಿದೆ. ಪ್ರಾಶಸ್ತ್ಯದ ವಿವರಣೆ ಇದೆ. ಭೀಷ್ಮರಂತಹ ಮಹನೀಯರು ಶರಶಯ್ಯೆಯಲ್ಲಿ ಮಲಗಿಯೇ ತನ್ನ ನಿಷ್ಕ್ರಮಣಕ್ಕೆ ಉತ್ತರಾಯಣವನ್ನು ನಿರೀಕ್ಷಿಸುತ್ತಾ ಕಾಲ ಕಳೆದರು. ಪ್ರಕೃತಿಯ ರಮ್ಯಾದ್ಭುತ ಸ್ಥಿತ್ಯಂತರಗಳನ್ನು ಗಮನಿಸುತ್ತಲೇ ತನ್ನ ಬದುಕಿಗೊಂದು ಸುಂದರ ಸಂವಿಧಾನವನ್ನು ರೂಪಿಸಿಕೊಂಡ ಮಾನವ ಈ ನಿಷ್ಕರ್ಷೆಗೆ ಶತಮಾನ ಶತಮಾನಗಳಷ್ಟು ದೀರ್ಘ ಅವಧಿಯಲ್ಲಿ ಅಧ್ಯಯನ (ಗಮನಿಸಿ ಪಡೆದ ಅನುಭವ) ನಡೆಸಿರಬೇಕು, ಕೊನೆಗೊಂದು ನಿರ್ಧಾರಕ್ಕೆ ಬಂದಿರಬೇಕು. ಆದರೆ ಕಾಲಗಣನೆಗೆ ವ್ಯವಸ್ಥೆ ಒದಗಿದರೂ ಕಾಲದ ಗತಿಯನ್ನು ನಿರ್ಧರಿಸಲಾಗದೆ, ಪಥವನ್ನು ನಿಖರವಾಗಿ ನಿರೀಕ್ಷಿಸಲಾಗದೆ, ’ಕಾಲಯ ತಸ್ಮೈ ನಮಃ’ ಎಂದಿರಬೇಕು. ಎಲ್ಲ ಕಾಲವು ಸಂದರ್ಭಾನುಸಾರ, ಸಂಭವ ವಿಧಾನದಿಂದ ಪ್ರಶಸ್ತವೇ ಆದರೂ ಕೆಲವು ತಿಂಗಳು, ಪರ್ವ ದಿನಗಳು, ಸಂಕ್ರಮಣ, ಅಮಾವಾಸ್ಯೆ, ಹುಣ್ಣಿಮೆಗಳು ಹೆಚ್ಚು ಪ್ರಶಸ್ತವೆಂದು ನಮ್ಮ ಪೂರ್ವಸೂರಿಗಳು ನಿರ್ಧರಿಸಿದ ಆಚರಣೆಗಳಿರುತ್ತವೆ ಅಥವಾ ಸಂಭ್ರಮದ ಹಬ್ಬಗಳಿರುತ್ತವೆ. ಭೂಮಿ, ಆಕಾಶ ಈ ನಡುವೆ ಹೇಗೆ ಪ್ರಕೃತಿಯನ್ನು ಅನುಸರಿಸುತ್ತಾ ಮಾನವನು ಭೂಮಿಯನ್ನು ವಾಸಯೋಗ್ಯವಾಗುವಂತೆ ಬಳಸಿಕೊಂಡನೊ ಅಂತೆಯೇ ಆಕಾಶವನ್ನು ಗಮನಿಸುತ್ತಾ ನಿತ್ಯ ಉದಯಿಸಿ ಅಸ್ತಮಿಸುವ ಸೂರ‍್ಯನನ್ನು ತಲೆಎತ್ತಿ ನೋಡುತ್ತಲೆ ಖಗೋಳ ಜ್ಞಾನವನ್ನು ಪಡೆದ. ಈ ನಿರಂತರ ಅಧ್ಯಯನವೇ ಆದಿಮದಿಂದ ಶಿಷ್ಟದವರೆಗೆ ಸಾಗಿ ಬಂದು ಮನುಕುಲದ ವ್ಯವಸ್ಥಿತ ಜೀವನ ವಿಧಾನ ಸ್ಥಾಯಿಯಾಯಿತು ಎನ್ನಬಹುದು.

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕ್ಯಾಂಪಸ್ ಸಂದರ್ಶನ ಕಾರ್ಯಕ್ರಮ

Posted On: 13-01-2022 06:29PM

ಶಿರ್ವ: ಮಂಗಳೂರಿನ ಪ್ರತಿಷ್ಠಿತ ದಿಯಾ ಸಿಸ್ಟಮ್ ಸಂಸ್ಥೆ(ಗ್ಲೋಟಚ್ ಟೆಕ್ನಾಲಜೀಸ್) ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವೂ ಈಗಾಗಲೇ ಬಿಸಿಎ, ಬಿಎಸ್ಸಿ (ಸಿ.ಎಸ್),ಬಿಇ(ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ(ಸಿಎಸ್),ಎಂಎಸ್ಸಿ (ಸಿಎಸ್), ಎಂಸಿಎ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ,ವೃತ್ತಿ ಸಮಾಲೋಚನೆ ಮತ್ತು ನಿಯೋಜನೆ ಕೋಶ ವತಿಯಿಂದ ಜನವರಿ 13 ರಂದು ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ನಡೆಯಿತು.

ವರುಣ ಆಳ್ವರನ್ನು ಅಭಿನಂದಿಸಿದ ಕಮಿಷನರ್

Posted On: 13-01-2022 05:05PM

ಮಂಗಳೂರು : ಮೊಬೈಲ್ ಹಾಗೂ ಇತರ ವಸ್ತುಗಳನ್ನು ದರೋಡೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನು ಪೊಲೀಸ್ ಕಮೀಷನರ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವರುಣ ಆಳ್ವ ARSI ಇವರು ಬೆನ್ನಟ್ಟಿ, ಆರೋಪಿಗಳನ್ನು ಪತ್ತೆ ಹಚ್ಚಿ ಅವರಲ್ಲಿದ್ದ ಸೊತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಶ್ಲಾಘನೀಯ ಕರ್ತವ್ಯವನ್ನು ನಿರ್ವಹಿಸಿರುವ ಹಿನ್ನೆಲೆಯಲ್ಲಿ ಪೋಲಿಸ್ ಕಮಿಷನರ್ ಶಶಿಕುಮಾರ್ ಅಭಿನಂದಿಸಿದರು.

ಕಳ್ಳನನ್ನು ಸೀನಿಮಿಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಮಂಗಳೂರು ಪೊಲೀಸ್

Posted On: 13-01-2022 12:43PM

ದಿನಾಂಕ 12/01/2022 ರಂದು ಮಧ್ಯಾಹ್ನದ ಸಮಯದಲ್ಲಿ ನೆಹರೂ ಮೈದಾನದ ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಬೊಬ್ಬೆ ಹೊಡೆದು ಓಡುತ್ತಾ ಪರಿಸರದ ಸಾರ್ವಜನಿಕರಿಗೆ ಆತಂಕ ಹಾಗೂ ವಾಹನ ಸಂಚಾರಕ್ಕೆ ಅಡ್ಡಿ ಉಂಟು ಮಾಡುತ್ತಾ ಪರಾರಿಯಾಗಲು ಯತ್ನಿಸಿದಾಗ ಪೊಲೀಸ್ ಕಮಿಷನರ್ ಕಛೇರಿಯಲ್ಲಿದ್ದ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸ್ ಸಿಬ್ಬಂದಿಗಳು ಅವರನ್ನು ಬೆನ್ನಟ್ಟಿ ಹಿಡಿದು ವಿಚಾರಿಸಿದಾಗ ಬಿಹಾರಿ ಮೂಲದ ವ್ಯಕ್ತಿಯ ಮೊಬೈಲ್ ಹಾಗೂ ಇತರ ವಸ್ತುಗಳನ್ನು ಮೂವರು ವ್ಯಕ್ತಿಗಳು ದರೋಡೆ ಮಾಡಿ ಪರಾರಿಯಾಗಿರುತ್ತಾರೆ ಎಂದು ತಿಳಿಸಿದಾಗ ಅಲ್ಲೇ ಇದ್ದ ಆರೋಪಿ ಶಮಂತ್‌ (20 ವರ್ಷ) ನನ್ನು ವಶಕ್ಕೆ ಪಡೆದು, ಅವನ ಮುಖಾಂತರ ಆತನ ಇತರ ಸಹಚರರ ಮಾಹಿತಿ ಪಡೆದು, ತಕ್ಷಣವೇ ರೈಲ್ವೇ ನಿಲ್ದಾಣ ಹಾಗೂ ಹಂಪನಕಟ್ಟೆ ಪರಿಸರದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಇನ್ನೊಬ್ಬ ಆರೋಪಿ ಹರೀಶ್ ಪೂಜಾರಿ (32 ವರ್ಷ) ನನ್ನು ವಶಕ್ಕೆ ಪಡೆಯಲಾಯಿತು. ಆತನ ಜೊತೆ ಇದ್ದ ಇನ್ನೊಬ್ಬ ಆರೋಪಿ ರಾಜೇಶ್ ಎಂಬವನು ಪರಾರಿಯಾಗಿರುತ್ತಾನೆ. ಪರಾರಿಯಾಗಿರುವ ಆರೋಪಿಯ ಬಗ್ಗೆ ಮಾಹಿತಿ ಲಭ್ಯವಾಗಿರುತ್ತದೆ. ದರೋಡೆ ನಡೆಸಿದ ಸೊತ್ತುಗಳಾದ ಸ್ಯಾಮ್‌ಸಂಗ್ ಮೊಬೈಲ್ ಫೋನನ್ನು ಆರೋಪಿಗಳಿಂದ ವಶಕ್ಕೆ ಪಡೆಯಲಾಗಿರುತ್ತದೆ.

ಹೊಸಮಾರಿಗುಡಿ ನವನಿರ್ಮಾಣ : ಆರ್ಥಿಕ ಕ್ರೋಡಿಕರಣಕ್ಕೆ ಆರ್ಥಿಕ ಸಮಿತಿಯ ಸಮಾಲೋಚನಾ ಸಭೆ

Posted On: 12-01-2022 10:11PM

ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ಆರ್ಥಿಕ ಸಮಿತಿಯ ಪದಾಧಿಕಾರಿಗಳ ಮತ್ತು ಒಂಬತ್ತು ತಂಡಗಳ ಸಂಚಾಲಕರ ಸಭೆಯು ಜನವರಿ 11ರಂದು ಜರುಗಿತು.

ಉಡುಪಿ : ರಾಷ್ಟ್ರೀಯ ಯುವ ದಿನಾಚರಣೆ

Posted On: 12-01-2022 08:59PM

ಉಡುಪಿ :- ಸ್ವಾಮಿ ವಿವೇಕಾನಂದರ ಆದಶ೯ಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ .ಮನೋಬಲ, ದೇಹಬಲ ಅದೇ ರೀತಿ ಶಿಸ್ತು ಅವಕಾಶ ಹಾಗೂ ಸೇವಾ ಮನೋಭಾವ ಗಳ ಬಗ್ಗೆ ಸ್ವಾಮೀಜಿಯವರು ನಮಗೆ ಹೇಳಿದ್ದಾರೆ ಅದನ್ನು ಅಳವಡಿಸಿಕೊಳ್ಳಿ ಎಂದು ಜೇಸಿಐ ಉಡುಪಿ ಸಿಟಿ ಅಧ್ಯಕ್ಷ ಡಾII ವಿಜಯ್ ನೆಗಳೂರು ಹೇಳಿದರು. ಅವರು ಜನವರಿ 12 ರಂದು ಕ್ರಿಶ್ಚಿಯನ್ ಪ.ಪೂ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಯುವ ದಿನ ಸ್ವಾಮಿ ವಿವೇಕಾನಂದ ಜಯಂತಿ ಕಾಯ೯ಕ್ರಮದಲ್ಲಿ ಮಾತನಾಡಿದರು.

ಶಿರ್ವ : ಎಮ್ ಎಸ್ ಆರ್ ಎಸ್ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Posted On: 12-01-2022 08:52PM

ಶಿರ್ವ : ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜು ಶಿರ್ವ ಇಲ್ಲಿಯ ವಿದ್ಯಾರ್ಥಿ ಸಂಘವನ್ನು ಉಡುಪಿ ಜಿಲ್ಲೆ ಜೆಡಿಎಸ್ ಪಕ್ಷದ ಅಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ, ಕಾಪು ಉದ್ಘಾಟಿಸಿ, ಶುಭಹಾರೈಸಿದರು.

25 ಸಾವಿರ ಮೌಲ್ಯದ ಹಸುವೊಂದನ್ನು ಯಶೋಧ ಆಚಾರ್ಯರಿಗೆ ನೀಡಿದ ದಾನಿಗಳು

Posted On: 12-01-2022 07:47PM

ಕಾರ್ಕಳ : ಕಾರ್ಕಳ ಮಿಯಾರು ಕಜೆ ಎಂಬಲ್ಲಿಯ ಯಶೋಧ ಆಚಾರ್ಯ ಕುಟುಂಬಕ್ಕೆ ಸೇರಿದ 16 ಗೋವುಗಳನ್ನು ಒಂದುವರೆ ವರುಷದ ಅವಧಿಯಲ್ಲಿ ಗೋ ಕಳ್ಳರು ಕದ್ದೊಯ್ದಿದ್ದು, ಸಂಕಷ್ಟದಲ್ಲಿರುವ ಮಹಿಳೆಯ ಕುಟುಂಬಕ್ಕೆ ಸ್ಪಂದಿಸಿ ಹಲವರು ಗೋವು,ಮೇವುಗಳನ್ನು ನೀಡಿ ಸ್ಪಂದಿಸುತ್ತಿದ್ದಾರೆ.