Updated News From Kaup

ವಿವೇಕಾನಂದರ ಚಿಂತನೆಗಳಿಂದ ಯುವ ಜನತೆ ಸ್ಫೂರ್ತಿ ಪಡೆಯಬೇಕು : ರಘುಪತಿ ಭಟ್

Posted On: 12-01-2022 07:11PM

ಉಡುಪಿ : ಯುವ ಜನತೆ ವಿವೇಕಾನಂದರ ಚಿಂತನೆಗಳಿಂದ ಪೇರಿತರಾಗಿ ಸ್ಫೂರ್ತಿ ಪಡೆದು ನಾಗರೀಕ ಸೇವಾ ವಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದರು. ಅವರು ಇಂದು, ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾಲೇಜು ಶಿಕ್ಷಣ ಇಲಾಖೆ, ನೆಹರೂ ಯುವ ಕೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ವಾರ್ತಾ ಮತ್ತು ಪ್ರಸಾರ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು (ಲೀಡ್ ಕಾಲೇಜು), ಡಾ.ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಪೂರ್ಣಪ್ರಜ್ಞ ಕಾಲೇಜು, ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜು ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ, ಸೈಂಟ್ ಮೇರಿಸ್ ಕಾಲೇಜು ಶಿರ್ವ ಹಾಗೂ ಮಾಧವ ಪೈ ಮೆಮೋರಿಯಲ್ ಕಾಲೇಜು ಮಣಿಪಾಲ ಇವರ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಹಾಗೂ ಆಜಾದ ಕಾ ಅಮೃತ ಮಹೋತ್ಸವದ ಅಂಗವಾಗಿ ನಡೆದ ಯುವ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗರ್ಭಪೂರ್ವ ಹಾಗೂ ಪ್ರಸವಪೂರ್ವ ಲಿಂಗ ಪತ್ತೆ ಶಿಕ್ಷಾರ್ಹ ಅಪರಾಧ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.

Posted On: 12-01-2022 07:06PM

ಉಡುಪಿ : ಗರ್ಭಪೂರ್ವ ಹಾಗೂ ಪ್ರಸವಪೂರ್ವ ಲಿಂಗ ಪತ್ತೆ ಮಾಡುವುದು ಅಪರಾಧವಾಗಿದ್ದು, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಅವರುಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಕಾಯಿದೆ ಬಗ್ಗೆ ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್ಗಳ ಮಾಲೀಕರು ಮತ್ತು ವೈದ್ಯರಿಗೆ ಏರ್ಪಡಿಸಿದ ಅರಿವು ಮೂಡಿಸುವ ಕಾರ್ಯಗಾರದಲ್ಲಿ ಮಾತನಾಡಿದರು.

ಮೊಬೈಲ್ನಲ್ಲಿ ಲೋನ್ ಆ್ಯಪ್ ಗಳನ್ನು ಬಳಸುವಾಗ ಜಾಗೃತರಾಗಿ ; ಪೋಲೀಸ್ ಇಲಾಖೆಯಿಂದ ಎಚ್ಚರಿಕೆ

Posted On: 12-01-2022 07:00PM

ಮಂಗಳೂರು : ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಸುಶಾಂತ ಕುಮಾರ್ (26) ಎನ್ನುವಾತ ತಾನು ಕೆಲಸ ಮಾಡುವ ಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಆತನು ತನ್ನ ಡೆತ್‌ನೋಟ್‌ನಲ್ಲಿ ಸಾಲ ಮಾಡಿರುವುದಾಗಿ ಹಾಗೂ ಆನ್‌ಲೈನ್‌ ಲೋನ್ ಬಗ್ಗೆ ನಮೂದಿಸಿದ್ದು, ಆನ್‌ಲೈನ್ ಲೋನ್ ಆ್ಯಪ್ ನವರು ಕಿರುಕುಳ ನೀಡಿದ್ದು ಎಂದು ನಮೂದಿಸಿದ್ದ ಈ ಬಗ್ಗೆ ಸುರತ್ಕಲ್ ಠಾಣೆ ಪ್ರಕರಣ ದಾಖಲಾಗಿರುತ್ತದೆ. ಇದೀಗ ಸಾರ್ವಜನಿಕರು ಅಂತಹ ಆ್ಯಪ್ ಗಳ ಬಗ್ಗೆ ಜಾಗರೂಕರಾಗಿರಬೇಕೆಂದು ಎಚ್ಚರಿಸಿದ್ದಾರೆ.

ಮದುವೆಯ ವಾಹನದಂತೆ ಸಿಂಗರಿಸಿ ಗೋವುಗಳ ಅಕ್ರಮ ಸಾಗಾಟ ; 16 ಗೋವುಗಳ ರಕ್ಷಣೆ

Posted On: 12-01-2022 05:06PM

ಕಾಪು : ಬಜರಂಗದಳ ಮತ್ತು ಕಾಪು-ಶಿರ್ವ ಪೋಲೀಸರ ಕಾರ್ಯಾಚರಣೆಯಲ್ಲಿ ಇನ್ನೋವ ಕಾರು ಮತ್ತು ಪಿಕಪ್ ವಾಹನದಲ್ಲಿ ಅಕ್ರಮವಾಗಿ ಕದ್ದೊಯ್ಯುತ್ತಿದ್ದ 16 ಗೋವುಗಳ ರಕ್ಷಣೆ ಮಾಡಲಾಗಿದೆ.

ಆದಿಶಕ್ತಿ ಮಹಿಳಾ ಸಹಕಾರಿ ಸಂಘ ಮೂಡುಸಗ್ರಿ, ಉಡುಪಿ ವತಿಯಿಂದ ಸುಮಾ ನಾಯ್ಕ್ ರಿಗೆ ಸನ್ಮಾನ

Posted On: 12-01-2022 04:24PM

ಉಡುಪಿ : ಆದಿಶಕ್ತಿ ಮಹಿಳಾ ಸಹಕಾರಿ ಸಂಘ ಮೂಡುಸಗ್ರಿ ಉಡುಪಿ ಇದರ ಎರಡನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ನಗರ ಪ್ರಾಧಿಕಾರದ ಸದಸ್ಯರಾದ ಸುಮಾ ನಾಯ್ಕ್ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.

ಕಾಪು ಕುಲಾಲ ಯುವ ವೇದಿಕೆ ವತಿಯಿಂದ ಚಿಕಿತ್ಸೆಗೆ ನೆರವು

Posted On: 12-01-2022 12:03PM

ಕಾಪು : ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಕಾಪುವಿನ ಸಾಂತೂರು ಗ್ರಾಮದ ಕಾಂಜರಕಟ್ಟೆಯಲ್ಲಿ ವಾಸವಾಗಿರುವ ಯೋಗೀಶ್ ಕುಲಾಲ್ ಅವರ ಚಿಕಿತ್ಸೆಗೆ ಸಹಾಯ ಮಾಡುವಂತೆ ಅನೇಕ ವಾಟ್ಸಪ್ ಗ್ರೂಪ್ನಲ್ಲಿ ಹಂಚಿ ನೆರವಿಗಾಗಿ ವಿನಂತಿ ಮಾಡಲಾಗಿತ್ತು.

ಹಿಂದೂ ದೈವ ದೇವರುಗಳ ಅವಹೇಳನಗೈದವರ ವಿರುದ್ಧ ಸಾಮೂಹಿಕ ಪ್ರಾರ್ಥನೆ

Posted On: 12-01-2022 11:40AM

ಉಡುಪಿ :ವಿಶ್ವ ಹಿಂದೂ ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ವತಿಯಿಂದ ಕಳೆದ ಹಲವಾರು ಸಮಯಗಳಿಂದ ಹಿಂದೂ ದೈವ ದೇವರುಗಳ ಬಗ್ಗೆ ಅಪಹಾಸ್ಯ ಮತ್ತು ವಿಕೃತಿಯಾಗಿ ಅಶ್ಲೀಲವಾಗಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಬಿಂಬಿಸುತ್ತಿರುವ ಮತ್ತು ಕೊರಗಜ್ಜ ದೈವ ದೇವರ ವೇಷ ಧರಿಸಿ ಅವಮಾನ ಮಾಡಿರುವವರ ವಿರುದ್ಧ ಉಡುಪಿಯ ಬೊಬ್ಬರ್ಯ ಕಾಂತೇರಿ ಜುಮಾದಿ ಕಲ್ಕುಡ ಕೊರಗಜ್ಜ ಪರಿವಾರ ದೈವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.

ಲಾಕ್ ಡೌನ್ ಹಾಗೂ ನೈಟ್ ಕರ್ಫ್ಯೂ ಸಮಸ್ಯೆ : ದೈವಾರಾಧಕರ ಒಕ್ಕೂಟದಿಂದ ಸಚಿವ ಸುನಿಲ್ ಕುಮಾರ್ ಮತ್ತು ಶಾಸಕ ರಘುಪತಿ ಭಟ್ ರವರಿಗೆ ಮನವಿ

Posted On: 11-01-2022 02:24PM

ಉಡುಪಿ : ದೈವಾರಾಧಕರ ಒಕ್ಕೂಟ ಉಡುಪಿ ಮಂಗಳೂರು ಹಾಗೂ ಹೋರಾಟ ಸಮಿತಿ ವತಿಯಿಂದ ಇಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ, ಕಾರ್ಕಳ ಶಾಸಕರಾದ ಸುನಿಲ್ ಕುಮಾರ್ ಮತ್ತು ಉಡುಪಿ ಶಾಸಕರಾದ ರಘುಪತಿ ಭಟ್ ಅವರನ್ನು ಭೇಟಿಯಾಗಿ ಈ ವರ್ಷದ ಮೂರನೇ ಬಾರಿಯ ಲಾಕ್ ಡೌನ್ ಹಾಗೂ ನೈಟ್ ಕರ್ಫ್ಯೂನಿಂದ ಪ್ರಸ್ತುತ ದಿವಸಗಳಲ್ಲಿ ದೈವಾರಾಧಕರಿಗೆ ಆಗುತ್ತಿರುವ ಸಮಸ್ಯೆಗಳನ್ನು ಅವರೊಂದಿಗೆ ತಿಳಿಸಿ ಮನವಿ ಸಲ್ಲಿಸಲಾಯಿತು.

ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡುವ ಕಾರ್ಯಕ್ರಮಕ್ಕೆ ಚಾಲನೆ

Posted On: 10-01-2022 08:11PM

ಉಡುಪಿ : ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳು ಸಹ ಕೋವಿಡ್ -19 ಮುನ್ನೆಚ್ಚರಿಕಾ ಡೋಸ್ ತಪ್ಪದೇ ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಉಡುಪಿ ಜಿಲ್ಲೆ ಸಹಯೋಗದಲ್ಲಿ, ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬೋವಿ ಜನಾಂಗಕ್ಕೆ ಪ. ಜಾತಿ ಪ್ರಮಾಣಪತ್ರ ನೀಡುವ ಬಗ್ಗೆ ಪರಿಶೀಲನೆ : ಸಚಿವ ಕೋಟ

Posted On: 10-01-2022 08:05PM

ಉಡುಪಿ: ಜಿಲ್ಲೆಯಲ್ಲಿನ ಬೋವಿ ಜನಾಂಗದವರಿಗೆ ಪ.ಜಾತಿ ಪ್ರಮಾಣ ಪತ್ರ ನೀಡಲು ಇರುವ ಸಮಸ್ಯೆಗಳ ಬಗ್ಗೆ ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳ ಸಭೆಯು, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.