Updated News From Kaup
ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ 7 ದಿನಗಳ ಹೋಂ ಕ್ವಾರಂಟೈನ್ ಕಡ್ಡಾಯ : ಕೇಂದ್ರ ಸರಕಾರದ ಆದೇಶ, ಜನವರಿ 11ರಿಂದ ಅನ್ವಯ
Posted On: 07-01-2022 06:55PM
ಬೆಂಗಳೂರು : ದೇಶದಲ್ಲಿ ಕೊರೋನಾ ಜೊತೆಗೆ ಒಮಿಕ್ರಾನ್ ದಿನೇ ದಿನೇ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆ ಕೇಂದ್ರ ಸರ್ಕಾರ ಅನೇಕ ಕಠಿಣ ಕ್ರಮಗಳನ್ನು ಜಾರಿಗೊಳಿಸುತ್ತಿದೆ. ಇದೀಗ ಕೇಂದ್ರ ಸರಕಾರ ವಿದೇಶದಿಂದ ಭಾರತಕ್ಕೆ ಆಗಮಿಸುವಎಲ್ಲಾ ವಿದೇಶಿ ಪ್ರಯಾಣಿಕರಿಗೆ 7 ದಿನಗಳ ಹೋಂ ಕ್ವಾರಂಟೈನ್ ಕಡ್ಡಾಯಗೊಳಿಸಿದೆ. ಈ ಕುರಿತುಪರಿಷ್ಕೃತ ಮಾರ್ಗಸೂಚಿ ಹೊರಡಿಸಿರುವ ಕೇಂದ್ರ ಸರ್ಕಾರ, ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರು ಆರ್ ಟಿ ಪಿಸಿಆರ್ ಪರೀಕ್ಷೆಗೆ ಒಳಪಟ್ಟು, ನೆಗೆಟಿವ್ ದೃಢಪಟ್ಟರೂ 7 ದಿನಗಳ ಕಡ್ಡಾಯ ಹೋಂ ಕ್ವಾರಂಟೈನ್ ಆಗುವಂತೆ ಆದೇಶಿಸಿದೆ.
ನೊಂದ ಮಹಿಳೆಯರು ಉಚಿತ ಸಹಾಯವಾಣಿ ಸಂಖ್ಯೆ 181 ಸಂಪರ್ಕಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 07-01-2022 06:37PM
ಉಡುಪಿ : ವಿವಿಧ ಕಾರಣಗಳಿಂದ ನೊಂದ ಮಹಿಳೆಯರು ತಮ್ಮ ಸಮಸ್ಯೆಗಳ ಬಗ್ಗೆ 24x7 ಕಾರ್ಯನಿರ್ವಹಿಸುವ ಉಚಿತ ದೂರವಾಣಿ ಸಂಖ್ಯೆ 181 ನ್ನು ಸಂಪರ್ಕಿಸಿ ತಮ್ಮ ದೂರುಗಳು ಸಲ್ಲಿಸಿ, ಅಗತ್ಯ ನೆರವು ಪಡೆಯುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಬಾಲಕಿಗೆ ಲೈಂಗಿಕ ಕಿರುಕುಳ ಆರೋಪಿಯ ಬಂಧನ
Posted On: 07-01-2022 05:08PM
ಮಂಗಳೂರು : ಯುವಕನೋರ್ವ ನೆರೆಮನೆಯ 4ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಉರ್ವ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಳತ್ತೂರು ಪುಂಚಲಕಾಡು ಆಟೋ ರಿಕ್ಷಾ ನಿಲ್ದಾಣಕ್ಕೆ ನಾಮಫಲಕ ಅಳವಡಿಕೆ
Posted On: 04-01-2022 02:02PM
ಕಾಪು: ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಂಚಲಕಾಡು ಇಲ್ಲಿಯ ರಿಕ್ಷಾ ನಿಲ್ದಾಣಕ್ಕೆ ಹೊಸ ನಾಮ ಫಲಕ ಅಳವಡಿಸಲಾಯಿತು.
ಜಿಲ್ಲೆಯಲ್ಲಿ 4 ದಿನದಲ್ಲಿ 60,000 ಮಕ್ಕಳಿಗೆ ಕೋವಿಡ್ ಲಸಿಕೆ : ಶಾಸಕ ರಘುಪತಿ ಭಟ್
Posted On: 03-01-2022 06:16PM
ಉಡುಪಿ : ಜಿಲ್ಲೆಯಲ್ಲಿ 15 ರಿಂದ 18 ವರ್ಷದೊಳಗಿನ ಸುಮಾರು 60,000 ಮಕ್ಕಳಿಗೆ ಕೋವಿಡ್-19 ಲಸಿಕೆಯನ್ನು 4 ದಿನಗಳಲ್ಲಿ ಸಂಪೂರ್ಣವಾಗಿ ನೀಡುವ ಗುರಿ ಹೊಂದಲಾಗಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಇಂದು ನಗರದ ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ, 15 ರಿಂದ 18 ವರ್ಷಗೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಆಸಕ್ತಿಯುತ ಕ್ಷೇತ್ರದಲ್ಲಿ ಉದ್ಯೋಗ ಪಡೆಯಿರಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 03-01-2022 06:12PM
ಉಡುಪಿ : ಉದ್ಯೋಗಾಕಾಂಕ್ಷಿಗಳು ತಮಗೆ ಆಸಕ್ತಿಯಿರುವ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲು ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಹೇಳಿದರು. ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲಭಿವೃಧ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ್ ಆಚರಣೆ ಪ್ರಯುಕ್ತ ಆಯೋಜಿಸಿದ್ದ ಸಂಜೀವಿನಿ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪರ್ಯಾಯೋತ್ಸವ ಸುವ್ಯವಸ್ಥಿತವಾಗಿ ನಡೆಸಲು ಎಲ್ಲಾ ಕ್ರಮ ಕೈಗೊಳ್ಳಿ : ಸಚಿವ ಸುನಿಲ್ ಕುಮಾರ್
Posted On: 03-01-2022 05:35PM
ಉಡುಪಿ : ಪರ್ಯಾಯ ಕಾರ್ಯಕ್ರಮಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಜಿಲ್ಲಾಡಳಿತದ ವತಿಯಿಂದ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವುದರೊಂದಿಗೆ ಕಾರ್ಯಕ್ರಮವು ಅತ್ಯಂತ ಸುವ್ಯವಸ್ಥಿತವಾಗಿ ನಡೆಯಲು ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಸೂಚನೆ ನೀಡಿದರು. ಅವರು ಇಂದು ,ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಶ್ರೀಕೃಷ್ಣ ಮಠದ ಪರ್ಯಾಯ ಕುರಿತಂತೆ ನಡೆದ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಳ್ಳಾಲ : ಐಸಿಸ್ ಸಂಪರ್ಕದ ಹಿನ್ನೆಲೆ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಮಗನ ಸೊಸೆಯ ಬಂಧನ
Posted On: 03-01-2022 05:09PM
ಮಂಗಳೂರು: ಐಸಿಸ್ ಉಗ್ರರೊಂದಿಗೆ ಸಂಬಂಧದ ಆರೋಪದಡಿ ಮಾಜಿ ಶಾಸಕ ಬಿ.ಎಂ. ಇದಿನಬ್ಬ ಅವರ ಮಗ ಬಿ.ಎಂ ಬಾಷಾ ಅವರ ಸೊಸೆ ದೀಪ್ತಿ ಮಾರ್ಲ ಅಲಿಯಾಸ್ ಮರಿಯಂ ಅವರನ್ನು ರಾಷ್ಟ್ರೀಯ ತನಿಖಾದಳ (ಎನ್ಐಎ) ಇಂದು ಉಳ್ಳಾಲದ ಮನೆಯಿಂದ ಬಂಧಿಸಿದೆ.
ಶಿರ್ವ : ಉಚಿತ ಹೃದಯ ತಪಾಸಣಾ ಶಿಬಿರ
Posted On: 03-01-2022 04:46PM
ಶಿರ್ವ : ಶಿವ೯ದಲ್ಲಿ , ಪ್ರಸ್ತುತ ಆರೋಗ್ಯ ಸಂಬಂಧಿ ವಿಚಾರದಲ್ಲಿ ಸದಾ ಎಚ್ಚರಿಕೆಯಿಂದ ಇರುವ ಅನಿವಾಯ೯ತೆ ಮತ್ತು ಅಗತ್ಯತೆ ಇಂದುನಮ್ಮ ಮುಂದಿದೆ. ಇಂದಿನ ಜೀವನ ಶೈಲಿ ಮತ್ತು ಆಹಾರ ಪದ್ಧತಿಯಿಂದ ಅಬಾಲ ವೃದ್ಧರಾದಿಯಾಗಿ ಸಾವು ಸಂಭವಿಸುತ್ತದೆ ಈ ನಿಟ್ಟಿನಲ್ಲಿ ಸೂಕ್ತ ಸಮಯದಲ್ಲಿ ಆರೋಗ್ಯ ವಂತ ಜನರು ಕೂಡ ತಮ್ಮ ಆರೋಗ್ಯವನ್ನು ತಜ್ಞ ವೈದ್ಯರಿಂದ ಸಕಾಲದಲ್ಲಿ ಪರೀಕ್ಷಿಸಿ ಹೃದಯದ ರೋಗಗಳಿಂದ ತಮ್ಮನ್ನು ರಕ್ಷಣೆ ಮಾಡಿಸಿಕೊಳ್ಳುವುದು ಬಹಳ ಮಹತ್ವದ ವಿಚಾರವಾಗಿದೆ ಎಂದು ಲಯನ್ಸ್ ಕ್ಲಬ್ ಶಿವ೯, ಸಂತ ಮೇರಿ ಮಹಾವಿದ್ಯಾಲಯ ಶಿವ೯,ಸಂತ ಮೇರಿ ಪಿಯು ಕಾಲೇಜು ಹಳೆವಿದ್ಯಾಥಿ೯ ಸಂಘ,ಸ್ತೃೀ ಸಂಘಟನೆ ಶಿವ೯,ಕಸ್ತೂರಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ , ಮಣಿಪಾಲ್ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ ಹೃದಯ ತಪಾಸಣಾ ಕಾಯ೯ಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ ಸಂತ ಮೇರಿ ಸಮೂಹ ಸಂಸ್ಥೆಗಳ ಸಂಚಾಲಕರಾದ ಅತೀ ವಂದನೀಯ ಧರ್ಮ ಗುರುಗಳು ಅಲೆಕ್ಸಾಂಡರ್ ಡೆನಿಸ್ ಡೇಸಾರವರು ಕಾರ್ಯಕ್ರಮ ಉದ್ಘಾಟನೆ ಮಾಡಿ ಆಶೀರ್ವಚನ ನೀಡಿದರು.
ಸಂತ ಮೇರಿ ಮಹಾವಿದ್ಯಾಲಯದಲ್ಲಿ ಲಸಿಕಾ ಅಭಿಯಾನ
Posted On: 03-01-2022 01:36PM
ಶಿರ್ವ:ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿವಿಧ ಘಟಕಗಳಾದ ಎನ್ಸಿಸಿ, ಎನ್ಎಸ್ಎಸ್, ಯೂತ್ ರೆಡ್ ಕ್ರಾಸ್, ರೋವರ್ಸ-ರೇಂಜರ್ಸ್, ಉಡುಪಿ ಜಿಲ್ಲಾಡಳಿತ, ಆರೋಗ್ಯ ಇಲಾಖೆ, ಜಿಲ್ಲಾ ಸರ್ಕಾರಿ ಆಸ್ಪತ್ರೆ, ಉಡುಪಿ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಶಿರ್ವ ಜಂಟಿಯಾಗಿ ಕಾಲೇಜಿನ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಲಸಿಕಾ ಅಭಿಯಾನವನ್ನು ಕಾಲೇಜಿನ ದೃಶ್ಯ ಶ್ರವ್ಯ ಕೊಠಡಿಯಲ್ಲಿ ಆಯೋಜಿಸಲಾಯಿತು.
