Updated News From Kaup
ವಿಶ್ವ ಹಿಂದು ಪರಿಷದ್ ಬಜರಂಗದಳ ಕೊಡಿಬೆಟ್ಟು ಘಟಕದಿಂದ ಪಾದಯಾತ್ರೆ - ನಮ್ಮ ನಡಿಗೆ ಅಮ್ಮನೆಡೆಗೆ
Posted On: 03 Feb 2022, 10:05 PM
ಎಲ್ಲೂರು : ವೀರಾಂಜನೇಯ ದೇವರಿಗೆ ಬೆಳ್ಳಿಯ ಕವಚ ಸಮರ್ಪಣೆ
Posted On: 03 Feb 2022, 09:56 PM
ಕಾಪು : ಮಹತೋಭಾರ ಶ್ರೀ ವಿಶ್ವೇಶ್ವರ ದೇವಸ್ಥಾನ, ಎಲ್ಲೂರು ಇಲ್ಲಿ ಫೆಬ್ರವರಿ 5, ಶನಿವಾರ ಬೆಳಗ್ಗೆ 10.30ಕ್ಕೆ ಶ್ರೀ ವೀರಾಂಜನೇಯ ದೇವರ ಸನ್ನಿಧಿಯಲ್ಲಿ ಕೆ. ಲಕ್ಷ್ಮೀನಾರಾಯಣ ರಾವ್ ಮತ್ತು ಸಹೋದರರು, ಪಡುಕುದುರೆ ಇವರು ಸೇವಾ ರೂಪದಲ್ಲಿ ಶ್ರೀ ವೀರಾಂಜನೇಯ ದೇವರಿಗೆ ಬೆಳ್ಳಿಯ ಕವಚ ಸಮರ್ಪಣೆ ಮಾಡಲಿದ್ದಾರೆ. ಈ ಪುಣ್ಯಕಾರ್ಯದಲ್ಲಿ ಭಕ್ತಾದಿಗಳು ಭಾಗವಹಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ರಮವಾಗಿ ಸಾಗಿಸುತ್ತಿದ್ದ ದನದ ಮಾಂಸ ವಶ ; ನಾಲ್ವರ ದಸ್ತಗಿರಿ
Posted On: 03 Feb 2022, 05:17 PM
ಮಂಗಳೂರು : ಕಾಸರಗೋಡು ಕಡೆಯಿಂದ ಉಳ್ಳಾಲಕ್ಕೆ ಅಕ್ರಮವಾಗಿ ಇಂದು ಬೆಳಿಗ್ಗೆ 7ಗಂಟೆಗೆ ಮಾರುತಿ ಈಕೋ ಕಾರಿನಲ್ಲಿ ಸಾಗಾಟ ಮಾಡುತ್ತಿದ್ದ 1 ಕ್ವಿಂಟಲ್ 60 ಕೆ ಜಿ ದನದ ಮಾಂಸವನ್ನು ಪತ್ತೆ ಹಚ್ಚಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಸರಗೋಡು ತಾಲೂಕು ಬಂದ್ಯೋಡು ಎಂಬಲ್ಲಿನ ಮೊಹಮ್ಮದ್ ಎಂಬವರಿಂದ ದನವನ್ನು ಖರೀದಿಸಿ ಅವರ ಮನೆಯಲ್ಲೇ ದನವನ್ನು ಕಡಿದು ಮಾಂಸ ಮಾಡಿ ಉಳ್ಳಾಲಕ್ಕೆ ತಂದು ಯುಸಿ ಇಬ್ರಾಹಿಂ ಕೋಡಿ ಎಂಬವರ ಕೋಡಿ ಮತ್ತು ಮುಕ್ಕಚ್ಚೇರಿಯಲ್ಲಿರುವ ಬೀಫ್ ಸ್ಟಾಲ್ ನಲ್ಲಿ ಮಾರಾಟ ಮಾಡುವುದಾಗಿದೆ. ಈಕೋ ಕಾರಿನಲ್ಲಿ ದನದ ಮಾಂಸ ಮೂರು ತಲೆಗಳು ದನದ ಚರ್ಮಗಳು ಪತ್ತೆ ಯಾಗಿರುತ್ತದೆ. ಈ ಪ್ರಕಾರಣದಲ್ಲಿ ನಾಲ್ಕು ಜನ ಆರೋಪಿಗಳಾದ ಮಂಗಳೂರಿನ ಚೆಂಬುಗುಡ್ಡೆ ಪೆರ್ಮನ್ನೂರಿನ ಹುಸೇನ್ (24), ಮಂಜಿಲ್ ಕೋಡಿ ಉಳ್ಳಾಲದ ಮಹಮ್ಮದ್ ಮುಜಾಂಬಿಲ್ (25), ಮಂಜಿಲ್ ಕೋಡಿ ಉಳ್ಳಾಲದ ಮಹಮ್ಮದ್ ಅಮೀನ್ (21), ಕೋಡಿ ಉಳ್ಳಾಲದ ಸೋಹೈಬ್ ಅಕ್ತರ್ (22) ದಸ್ತಗಿರಿ ಮಾಡಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ಅಂದಾಜು ರೂಪಾಯಿ 3,10,000/- ಆಗಿರುತ್ತದೆ. ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಮ್ ಶಂಕರ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ರವರಾದ ದಿನೇಶ್ ಕುಮಾರ್ ಬಿ ಪಿ ರವರ ಮಾರ್ಗದರ್ಶನದಲ್ಲಿ ನಗರ ಅಪರಾಧ ಪತ್ತೆ ವಿಭಾಗದ ಪೋಲಿಸು ನಿರೀಕ್ಷಕರಾದ ಮಹೇಶ್ ಪ್ರಸಾದ್ ರವರ ನೇತೃತ್ವದಲ್ಲಿ ಪಿ ಎಸ್ ಐ ರಾಜೇಂದ್ರ, ಎ ಎಸ್ ಐ ಮೋಹನ್ ಸಿಬಂದಿಗಳಾದ ಸುಬ್ರಹ್ಮಣ್ಯ ಕೆ. ಎನ್, ಮಣಿ ಎಂ. ಎನ್, ಅಬ್ದುಲ್ ಜಬ್ಬಾರ್, ಸುನಿಲ್ ಕುಮಾರ್ ಹಾಗೂ ಎ ಆರ್ ಎಸ್ ಐ ತೇಜ ಕುಮಾರ್ ಭಾಗವಸಿದ್ದರು.
ಬಹುಮುಖ ಪ್ರತಿಭೆ ರಶ್ಮಿ ಸನಿಲ್ ಗೆ ಆದಿಗ್ರಾಮೋತ್ಸವ ಯುವ ಸಿರಿ ಗೌರವ
Posted On: 03 Feb 2022, 10:53 AM
ಮಂಗಳೂರು : ಕಾರ್ಕಳದ ಅಜೆಕಾರ್ ನಲ್ಲಿ ಡಾ || ಶೇಖರ್ ಅಜೆಕಾರ್ ಇವರು ಕಳೆದ 23 ವರುಷಗಳಿಂದ ನಡೆಸಿಕೊಂಡು ಬರುತ್ತಿರುವ ಆದಿ ಗ್ರಾಮೋತ್ಸವ ಎಂಬ ಕಾರ್ಯಕ್ರಮವು ಜನವರಿ 25ರಂದು ಜರುಗಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ತಲ್ಲೂರು ಶಿವರಾಮ ಶೆಟ್ಟಿ, ಅಧ್ಯಕ್ಷರು ತಲ್ಲೂರು ಫ್ಯಾಮಿಲಿ ಟ್ರಸ್ಟ್ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವನಾಥ ಶೆಣೈ ಉಡುಪಿ,ಗೌರವಾಧ್ಯಕ್ಷರು ವಿಶ್ವ ಸಂಸ್ಕೃತಿ ಪ್ರತಿಷ್ಠಾನ ಇವರು ವಹಿಸಿದ್ದರು. ಧರ್ಮದರ್ಶಿ ಹರಿಕೃಷ್ಣ ಪುನರೂರು ಇವರು ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭ ಹಲವಾರು ಗಣ್ಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಇನ್ಫೋಸಿಸ್ ಉದ್ಯೋಗಿ ಮಂಗಳೂರಿನ ರಶ್ಮಿ ಸನಿಲ್ ಇವರಿಗೆ ಬಹುಮುಖ ಪ್ರತಿಭೆಗಾಗಿ ಆದಿಗ್ರಾಮೋತ್ಸವ ಯುವಸಿರಿ ಗೌರವ ನೀಡಿ ಸನ್ಮಾನಿಸಲಾಯಿತು.
ತೀವ್ರ ನಿಗಾ ಘಟಕದಲ್ಲಿರುವ ಪ್ರಖ್ಯಾತ್ ಇನ್ನಂಜೆ ; ದಾನಿಗಳ ಸಹಕಾರದ ನಿರೀಕ್ಷೆಯಲ್ಲಿ
Posted On: 03 Feb 2022, 12:25 AM
ಆತ್ಮೀಯ ಓದುಗರೇ ಇನ್ನಂಜೆಯ ದಡ್ಡು ನಿವಾಸಿ ಪ್ರಖ್ಯಾತ್ ಇವರು ಸೆರೆಬ್ರಲ್ ವೆನಸ್ ಸೈನಸ್ ಥ್ರಂಬೋಸಿಸ್ (CVST) ನಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಮಣಿಪಾಲದ KMC ಆಸ್ಪತ್ರೆಯಲ್ಲಿ ದಾಖಲಾಗಿರುವ ಇವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯನ್ನು ಪಡೆಯತ್ತಿದ್ದಾರೆ... ಆರ್ಥಿಕವಾಗಿ ಸಂಕಷ್ಟದಲ್ಲಿರುವ ಇವರ ಕುಟುಂಬಕ್ಕೆ ಚಿಕಿತ್ಸಾ ವೆಚ್ಚವನ್ನು ಭರಿಸುವುದು ಕಷ್ಟಸಾಧ್ಯ. ಹಾಗಾಗಿ ಇವರ ಕುಟುಂಬಸ್ಥರು ದಾನಿಗಳ ಸಹಾಯ ಹಸ್ತದ ನಿರೀಕ್ಷೆಯಲ್ಲಿದ್ದು ನಮ್ಮ ಕಾಪು ವೆಬ್ ನ್ಯೂಸ್ ಓದುಗರು, ದಾನಿಗಳು ಪ್ರಖ್ಯಾತ್ ತಮ್ಮ ಮನೆ ಮಗನೆಂದು ತಿಳಿದು ಕೈಲಾದ ಆರ್ಥಿಕ ಸಹಾಯವನ್ನು ಇವರ ತಾಯಿಯ ಈ ಕೆಳಗಿನ ಬ್ಯಾಂಕ್ ಖಾತೆಗೆ ಜಮೆ ಮಾಡಬೇಕಾಗಿ ವಿನಂತಿ. ಬ್ಯಾಂಕ್ ಖಾತೆಯ ವಿವರ ಈ ಕೆಳಗಿನಂತಿದೆ. Name : GULABI Bank : CANARA BANK Branch : Shankarapura A/c. No. 02382210015675 IFSC : CNRB0000636
ಡಾ| ಕೆ. ಪ್ರಭಾಕರ್ ಶೆಟ್ಟಿ ವೈಕುಂಠ ಸಮಾರಾಧನೆ - ಸಾವಿರಕ್ಕೂ ಅಧಿಕ ಮಂದಿ ಭಾಗಿ
Posted On: 02 Feb 2022, 08:39 PM
ಕಾಪು : ಇತ್ತೀಚಿಗೆ ನಿಧನರಾದ ಜನಾನುರಾಗಿ ವೈದ್ಯ, ಶಿಕ್ಷಣತಜ್ಞ ಡಾ| ಕೆ. ಪ್ರಭಾಕರ ಶೆಟ್ಟಿಯವರ ವೈಕುಂಠ ಸಮಾರಾಧನೆಯು ಇಂದು ಕಾಪು ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದ ಸಭಾಂಗಣದಲ್ಲಿ ಜರಗಿತು. ಈ ಸಂದರ್ಭ ಜರಗಿದ ಶ್ರದ್ಧಾಂಜಲಿ ಸಭೆ ಹಾಗೂ ನುಡಿನಮನ ಕಾರ್ಯಕ್ರಮದಲ್ಲಿ ಪ್ರಭಾಕರ ಶೆಟ್ಟಿಯವರ ಅಸಂಖ್ಯಾತ ಅಭಿಮಾನಿಗಳು ಭಾಗಿಯಾಗಿದ್ದರು.
ಬಾಡಿಗೆ ಮನೆ ತೆರವಲ್ಲಿ ಮಧ್ಯಸ್ಥಿಕೆ ವಹಿಸಿದ ಕಾರಣಕ್ಕೆ ವ್ಯಕ್ತಿಯೋರ್ವರಿಗೆ ತಂಡದಿಂದ ಹಲ್ಲೆ, ಕೊಲೆ ಯತ್ನ
Posted On: 02 Feb 2022, 08:29 PM
ಸುರತ್ಕಲ್ : ಇಲ್ಲಿನ ಠಾಣಾ ವ್ಯಾಪ್ತಿಯ ಕಾಟಿಪಳ್ಳ ಗ್ರಾಮದಲ್ಲಿ ಯುವಕರಿಬ್ಬರು ತಾವು ವಾಸವಿದ್ದ ಬಾಡಿಗೆ ಮನೆ ತೆರವಲ್ಲಿ ಮಧ್ಯಸ್ಥಿಕೆ ವಹಿಸಿದ್ದಾರೆ ಎಂಬ ಕಾರಣದಿಂದ ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸುರತ್ಕಲ್ ಠಾಣೆಯಲ್ಲಿ ದಾಖಲಾಗಿದೆ. ಮೊಹಮ್ಮದ್ ಅನಾಸ್ ರವರು ಫೆಬ್ರವರಿ 1ರಂದು ರಾತ್ರಿ 11-45ರ ಸುಮಾರಿಗೆ ತಮ್ಮ ಪರಿಚಯದ ಅಬೂಬಕರ್ ಮತ್ತು ಹ್ಯಾರಿಸ್ ರವರ ಬಳಿ ಅವರ ಮನೆಯ ಮುಂದೆ ನಿಂತು ಮಾತನಾಡುತ್ತಿರುವ ಸಮಯ ಆರೋಪಿಗಳಾದ ಚಾರು, ರವೂಫ್, ಅಕಿ, ಮುಸ್ತಫಾ @ ಅಪ್ಪು ಮತ್ತು ಇತರರೊಂದಿಗೆ ಸಮಾನ ಉದ್ದೇಶದಿಂದ ಮಾರಕಾಸ್ತ್ರಗಳೊಂದಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಸುರತ್ಕಲ್ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.
ಮಾಚಿದೇವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 01 Feb 2022, 09:04 PM
ಉಡುಪಿ : ಮಡಿವಾಳ ಮಾಚಿದೇವರಂತಹ ಮಹಾನ್ ಪುರುಷರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಕರೆ ನೀಡಿದರು. ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ, ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. 12 ನೇ ಶತಮಾನದಲ್ಲಿಯೇ ಸಮಾಜದಲ್ಲಿ ನಡೆಯುತ್ತಿದ್ದ ಶೋಷಣೆಯ ವಿರುದ್ಧ ಧ್ವನಿ ಎತ್ತಿದ್ದ ಮಡಿವಾಳ ಮಾಚಿದೇವ ಅವರು, ಮಹಿಳೆಯರಿಗೆ ಸಮಾನತೆ ಕಲ್ಪಿಸಬೇಕೆಂಬ ಅರಿವಿನ ಸಂದೇಶವನ್ನು ನೀಡಿದ್ದರು. ಪ್ರಕೃತಿ ಸೊಬಗನ್ನು ಸಂರಕ್ಷಿಸುವ ಬಗ್ಗೆ ಸಾರಿದ್ದ ಅವರು ಉತ್ತಮ ಪ್ರಕೃತಿಯನ್ನು ಉಳಿಸಿಕೊಂಡರೆ ಅದು ನಮ್ಮನ್ನು ರಕ್ಷಿಸುತ್ತದೆ ಎಂದಿದ್ದರು. ಇದು ಸರ್ವಕಾಲಿಕ್ಕೂ ಹಾಗೂ ಪ್ರಸ್ತುತವಾಗಿದೆ ಎಂದರು. ಮಡಿವಾಳ ಮಾಚಿದೇವರು ಕಾಯಕ, ನಿಷ್ಠೆಗೆ ಹೆಚ್ಚಿನ ಮಹತ್ವ ನೀಡಿದ್ದು, ಅವರ ಸಂದೇಶಗಳನ್ನು ನಮ್ಮ ದೈನಂದಿನ ಕಾರ್ಯದಲ್ಲಿ ಹಾಗೂ ಕರ್ತವ್ಯದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಜಿಲ್ಲಾ ರಜಕ ಯಾನೆ ಮಡಿವಾಳ ಸಂಘದ ಅಧ್ಯಕ್ಷ ಪ್ರದೀಪ್ ಸಾಗರ್ ಮಾತನಾಡಿ, 12 ನೇ ಶತಮಾನದಲ್ಲಿ ಬಸವಣ್ಣನ ಸಮಕಾಲೀನರಾಗಿದ್ದ ಮಡಿವಾಳ ಮಾಚಿದೇವರು ಅನುಭವ ಮಂಟಪದಲ್ಲಿ ಸಹಾ ಭಾಗಿಯಾಗಿದ್ದರು. ಬದುಕಿಗೆ ಸಾತ್ವಿಕತೆ ನೀಡಿ ಸತ್ಯ, ಶುದ್ಧ ಕಾಯಕ ಕೊಟ್ಟವರಾಗಿದ್ದರು. ಅರಸುತನ ಮೇಲಲ್ಲ ಅಗಸತನ ಕೀಳಲ್ಲ ಎಂಬುವುದನ್ನು ಸಾರಿದ್ದ ಅವರು, ಸಮಾಜದಲ್ಲಿನ ಅಸ್ಪೃಶ್ಯತೆಯ ವಿರುದ್ಧ ಸಮರ ಸಾರಿ, ವಚನ ಸಾಹಿತ್ಯದ ಸಂರಕ್ಷಣೆಗೆ ಮುಂದಾಗಿದ್ದರು ಎಂದರು. ಇದೇ ಸಂದರ್ಭದಲ್ಲಿ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಿ, ಸರಕಾರದ ಸೌಲಭ್ಯಗಳನ್ನು ಒದಗಿಸಬೇಕೆಂಬ ಮನವಿಯನ್ನು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ವಾರ್ತಾಧಿಕಾರಿ ಬಿ. ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿದ್ದರು.
ಶಿರ್ವ : ಉದ್ಯೋಗಾಧಾರಿತ ಕೌಶಲ್ಯಾಭಿವೃದ್ಧಿ ತರಬೇತಿ, ಜಾಗೃತಿ
Posted On: 31 Jan 2022, 05:41 PM
ಶಿರ್ವ:ಪ್ರಸ್ತುತ ದಿನದಿಂದ ದಿನಕ್ಕೆ ಉದ್ಯೋಗಕ್ಕಾಗಿ ಪೈಪೋಟಿ ಹೆಚ್ಚುತ್ತಿದ್ದು, ನಿವೇಶನ ನೀಡುವುದು ಸವಾಲಿನ ಕೆಲಸವಾಗಿ ಪರಿಣಮಿಸಿದೆ. ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಜೊತೆಗೆ ಹಳೆದು ಉನ್ನತ ಉದ್ಯೋಗಗಳಿಗೆ ಸಜ್ಜುಗೊಳಿಸುವುದುರಲ್ಲಿ ತರಬೇತಿ ಮತ್ತು ಜೀವನದ ವಿವಿಧ ಕೌಶಲ್ಯಗಳ ಸರಿಯಾದ ಮಾಹಿತಿ,ಮಾರ್ಗದರ್ಶನ ನೀಡುವುದರಲ್ಲಿ ಸಂಸ್ಥೆಯ ಜೊತೆಗೆ ಹೆತ್ತವರು ಹಾಗೂ ಪೋಷಕರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಹಾಗೂ ಮಿಜಾರು ಮೈಟ್ ಕಾಲೇಜಿನ ಒಡಂಬಡಿಕೆ ಅನ್ವಯ ಏರ್ಪಡಿಸಿದ ಉದ್ಯೋಗಾಧಾರಿತ ಕೌಶಲ್ಯಾಭಿವೃದ್ಧಿ ತರಬೇತಿ, ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಿಜಾರು ಕಾಲೇಜಿನ ಪ್ರಾಧ್ಯಾಪಕ ಪ್ರೊ. ಜಯದೇವ ಪ್ರಸಾದ ಮೊಳೆಯಾರ ಮಾತನಾಡಿದರು. ಈ ಕಾರ್ಯಗಾರದಲ್ಲಿ ಮಿಜಾರು ಮೈಟ್ ಕಾಲೇಜಿನ ಪ್ರಾಧ್ಯಾಪಕ ವರುಣರವರು ಸಂಪನ್ಮೂಲ ವ್ಯಕ್ತಿಗಳಾಗಿ, ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಯ ಮೂಲಕ ವೃತ್ತಿಪರ ಸಂದರ್ಶನಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಐಟಿ ಕ್ಲಬ್ ನಿರ್ದೇಶಕ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್, ಪ್ರಕಾಶ್, ಅಕ್ಷತಾ ರಾಜ್ , ದಿವ್ಯಶ್ರೀ , ಅಕ್ಷತಾ, ಬಿಸಿಎ ವಿಭಾಗದ ಒಟ್ಟು 121 ವಿದ್ಯಾರ್ಥಿಗಳು ಅಧ್ಯಾಪಕ ವೃಂದ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.
ಹೆಜಮಾಡಿ : ಬೀಚ್ ಸ್ವಚ್ಛತೆ, ಜಲ ಜಾಗೃತಿ ಅಭಿಯಾನದ ತರಬೇತಿ ಕಾರ್ಯಕ್ರಮ
Posted On: 30 Jan 2022, 10:59 PM
ಹೆಜಮಾಡಿ : ಭಾರತ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಉಡುಪಿ ಮತ್ತು ಗ್ರಾಮ ಪಂಚಾಯತ್, ಹೆಜಮಾಡಿ, ಕರಾವಳಿ ಯುವಕ-ಯುವತಿ ವೃಂದ (ರಿ.) ಹೆಜಮಾಡಿ, ವಿಜಯಾ ಕಾಲೇಜು, ಮುಲ್ಕಿ ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಎನ್ಸಿಸಿ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ, ಯೂತ್ ರೆಡ್ ಕ್ರಾಸ್ ಘಟಕ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹೆಜಮಾಡಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ಹಾಗೂ ಯುವ ಜನತೆಗೆ ಜಲ ಜಾಗೃತಿ ಅಭಿಯಾನದ ತರಬೇತಿ ಕಾರ್ಯಕ್ರಮ ಹೆಜಮಾಡಿಯ ಅಮಾವಾಸ್ಯೆ ಕರಿಯ ಕಡಲ ಕಿನಾರೆಯಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್. ಮೆಂಡನ್ ನಿರ್ವಹಿಸಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಂಘಟನೆಗಳ ಕಾರ್ಯ ಶ್ಲಾಘನೀಯ ಎಂದರು. ಅಭಿಯಾನಕ್ಕೆ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು ಚಾಲನೆ ನೀಡಿದರು. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ, ರಾಜ್ಯ ಸಂಪನ್ಮೂಲ ವ್ಯಕ್ತಿ ಮತ್ತು ತರಬೇತುದಾರಾದ ಜೋಸಫ್ ಜಿ. ಎಮ್ ರಬೆಲ್ಲೊ ಜಲ ಜಾಗೃತಿ ಬಗ್ಗೆ ಮಾಹಿತಿ ನೀಡಿದರು. ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ ಹೆಜಮಾಡಿ, ಸದಸ್ಯರಾದ ಹೇಮಾನಂದ ಪುತ್ರನ್, ಪಾಂಡುರಂಗ ಕರ್ಕೇರ ,ಲೀಲೇಶ್ ಸುವರ್ಣ, ರೇಷ್ಮಾ ಮೆಂಡನ್,ಉಡುಪಿ ನೆಹರು ಯುವ ಕೇಂದ್ರದ ಅಧಿಕಾರಿ ವಿಲ್ಫ್ರೆಡ್ ಡಿಸೋಜ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್, ಮುಲ್ಕಿ ವಿಜಯ ಕಾಲೇಜಿನ ಪ್ರಾಧ್ಯಾಪಕ ವೆಂಕಟೇಶ್ ಭಟ್, ಮೀನುಗಾರ ಮುಖಂಡ ನಾರಾಯಣ ಕೆ. ಮೆಂಡನ್, ಹೆಜಮಾಡಿ ಕರಾವಳಿ ಯುವಕ-ಯುವತಿ ವೃಂದದ ಅಧ್ಯಕ್ಷರುಗಳಾದ ಅಶೋಕ್ ವಿ ಕೆ, ಪವಿತ್ರಾ ಗಿರೀಶ್ ಮುಂತಾದವರು ಉಪಸ್ಥಿತರಿದ್ದರು.
