Updated News From Kaup
ಎರಡು ರಾಷ್ಟ್ರೀಯ ಪಕ್ಷಗಳ ಹಣ ಬಲದಿಂದ ಕೆಲವು ಕ್ಷೇತ್ರಗಳಲ್ಲಿ ಅಲ್ಪ ಮತಗಳಿಂದ ಸೋಲು ; ಮತದಾರ ಬಾಂಧವರಿಗೆ ಧನ್ಯವಾದಗಳು : ಯೋಗೀಶ್ ವಿ. ಶೆಟ್ಟಿ
Posted On: 30-12-2021 07:14PM
ಕಾಪು : ಇಲ್ಲಿನ ಪುರಸಭಾ ಚುನಾವಣೆಯಲ್ಲಿ ಜನತಾದಳ(ಜಾತ್ಯತೀತ) 7 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದೆವು, ನಾಲ್ಕುಕಡೆ ನಾವು ಗೆಲುವಿನ ನಿರೀಕ್ಷೆಯಲ್ಲಿದ್ದೆವು, ಆದರೆ ಎರಡು ರಾಷ್ಟ್ರೀಯ ಪಕ್ಷಗಳ ಹಣ ಬಲದಿಂದ ಕೆಲವು ಕ್ಷೇತ್ರಗಳಲ್ಲಿ ಅಲ್ಪ ಮತಗಳಿಂದ ಸೋತಿದ್ದೇವೆ.
ನಾಳೆ : Itsoksupport ಫೇಸ್ಬುಕ್ ಪೇಜ್ನಲ್ಲಿಆರ್ ಜೆ ಎರಾಲ್ ರಿಂದ ಸುಮತಾ ನಾಯಕ್ ಅಮ್ಮುಂಜೆ ಸಂದರ್ಶನ
Posted On: 30-12-2021 06:58PM
ಉಡುಪಿ : ಮಾನಸಿಕ ಆರೋಗ್ಯ, ಸಂಬಂಧಗಳಲ್ಲಿ ಜೀವಂತಿಕೆ, ಉತ್ತಮ ಆರೋಗ್ಯ ಹಾಗೂ ಮಕ್ಕಳ ಆರೋಗ್ಯಕರ ಬೆಳವಣಿಗೆ ಈ ವಿಚಾರದಲ್ಲಿ ಸಾಮಾಜಿಕ ಕ್ರಾಂತಿಯನ್ನು ಮಾಡುತ್ತಿದ್ದಾರೆ ಸುಮತಾ ನಾಯಕ್ ಅಮ್ಮುಂಜೆ.
ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಆದಿಉಡುಪಿ : ಬೈದಶ್ರೀ ವಾರ್ಷಿಕ ಶ್ರೇಷ್ಠ ಪ್ರಶಸ್ತಿ ಪ್ರದಾನ, 'ದೇಯಿ ಬೈದೆದಿ' ಪುಸ್ತಕ, ಭಾವಚಿತ್ರ ಬಿಡುಗಡೆ, ಗರೋಡಿ ಪೂ ಪೂಜಾನೆಕಾರರ ಸಮ್ಮೇಳನ, ಸಮ್ಮಾನ
Posted On: 30-12-2021 06:46PM
ಉಡುಪಿ : ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ (ರಿ.) ಆದಿಉಡುಪಿ ಇವರು ಕೊಡಮಾಡುವ ಬೈದಶ್ರೀ ವಾರ್ಷಿಕ ಶ್ರೇಷ್ಠ ಪ್ರಶಸ್ತಿ ಪ್ರದಾನ ಸಮಾರಂಭವು ಬೈದಶ್ರೀಯಲ್ಲಿ ಜರಗಿತು.
ಶಂಕರಪುರ : ಸೌಹಾರ್ದತೆ ಮೆರೆದ ಅಯ್ಯಪ್ಪ ಭಕ್ತರು
Posted On: 30-12-2021 06:20PM
ಶಿರ್ವ : ಶಂಕರಪುರ ಸೈಂಟ್ ಜಾನ್ಸ್ ಚರ್ಚಿನ ವಾರ್ಷಿಕ ಜಾತ್ರಾ ಮಹೋತ್ಸವದ ಸಂದರ್ಭ ಮುಂಬೈನ ಚಂದ್ರಹಾಸ ಗುರುಸ್ವಾಮಿ ಶಿಷ್ಯರು ಚರ್ಚಿಗೆ ಹೋಗಿ ಕ್ಯಾಂಡಲ್ ಹೊತ್ತಿಸಿ ಪ್ರಾರ್ಥಿಸಿದರು.
ಕಾಪು ಪುರಸಭಾ ಚುನಾವಣಾ ಫಲಿತಾಂಶ : ಬಿಜೆಪಿಗೆ ಒಲಿದ ಗದ್ದುಗೆ
Posted On: 30-12-2021 10:52AM
ಕಾಪು : ಎರಡು ರಾಷ್ಟ್ರೀಯ ಪಕ್ಷಗಳ ನಡುವಿನ ಜಿದ್ದಾಜಿದ್ದಿನ ಕಣವಾಗಿದ್ದ ಕಾಪು ಪುರಸಭೆಯ ಫಲಿತಾಂಶ ಪ್ರಕಟವಾಗಿದೆ.
ಕರ್ನಾಟಕ ಬಂದ್ ಗೆ ಸಹಕರಿಸಲು ರಿಕ್ಷಾ ಚಾಲಕರ ಸಂಘ, ರಿಕ್ಷಾ ಚಾಲಕರಿಗೆ ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕದ ಮನವಿ
Posted On: 29-12-2021 08:42PM
ಉಡುಪಿ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಯನ್ನು ಹಾಗೂ ಬೆಳಗಾವಿಯಲ್ಲಿ ಎಮ್ ಇಎಸ್ ಸಂಘಟನೆ ಕನ್ನಡ ಬಾವುಟವನ್ನು ಸುಟ್ಟು ಮತ್ತು ಬೆಂಗಳೂರಿನ ಶಿವಾಜಿನಗರದಲ್ಲಿ ಶಿವಾಜಿ ಪ್ರತಿಮೆಯನ್ನು ಭಗ್ನಗೊಳಿಸಿರುವ ಕಿಡಿಗೇಡಿಗಳ ವಿರುದ್ಧ ಡಿಸೆಂಬರ್ 31ರಂದು ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕವು ಕರ್ನಾಟಕ ಬಂದ್ ಗೆ ಕರೆನೀಡಿದ್ದು ಈ ಪ್ರತಿಭಟನೆಗೆ ಸಂಪೂರ್ಣ ಸಹಕಾರ ನೀಡಬೇಕೆಂದು ರಿಕ್ಷಾ ಚಾಲಕರ ಸಂಘಕ್ಕೆ ಮನವಿ ಮಾಡಿದ್ದಾರೆ.
ಮಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ, ಪುನರ್ವಸತಿ ಅಧಿನಿಯಮದ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆ
Posted On: 29-12-2021 07:02PM
ಉಡುಪಿ : ಮಾನ್ಯುಯಲ್ ಸ್ಕ್ಯಾವೆಂಜರ್ ಪದ್ಧತಿಯು ಅತ್ಯಂತ ಹೇಯ ಪದ್ಧತಿಯಾಗಿದ್ದು, ಈ ಬಗ್ಗೆ ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾಲೋನಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅರಿವು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ, ಮಾನ್ಯುಯಲ್ ಸ್ಕ್ಯಾವೆಂಜರ್ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮದ ಜಿಲ್ಲಾ ಮಟ್ಟದ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುವೆಂಪು ಅವರ ವಿಶ್ವಮಾನವ ಸಂದೇಶ ನಿತ್ಯ ಸತ್ಯ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 29-12-2021 06:48PM
ಉಡುಪಿ : ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶ ಎಲ್ಲಾ ಕಾಲಕ್ಕೂ ಪ್ರಸ್ತುತವಾಗಿದ್ದು, ನಿತ್ಯ ಸತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ, ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ನಡೆದ ವಿಶ್ವ ಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ, ಕುವೆಂಪು ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.
ಮಾರ್ನಮಿಕಟ್ಟೆ ಕೊರಗಜ್ಜನ ಕಾಣಿಕೆ ಹುಂಡಿಗೆ ಕಾಂಡೋಮ್ ಹಾಕಿದ ವ್ಯಕ್ತಿಯ ಬಂಧನ
Posted On: 29-12-2021 06:05PM
ಮಂಗಳೂರು : ಮಾರ್ನಮಿಕಟ್ಟೆ ಕೊರಗಜ್ಜನ ಕಟ್ಟೆಯ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಮೂಲದ ಪ್ರಸ್ತುತ ಮಂಗಳೂರಿನ ಕೋಟೇಕಾರು ನಿವಾಸಿಯಾಗಿರುವ ದೇವದಾಸ್ ದೇಸಾಯಿ (62)ನನ್ನು ವಶಕ್ಕೆ ಪಡೆಯಲಾಗಿದೆ.
ಶಂಕರಪುರ ಡಿಜಿಟಲ್ ಸೇವಾ ಕೇಂದ್ರ : ಕರ್ತವ್ಯ ನಿರ್ವಹಣೆಗೆ ಜನ ಬೇಕಾಗಿದ್ದಾರೆ
Posted On: 28-12-2021 09:32PM
ಕಾಪು : ಸರಕಾರದ ಯೋಜನೆಗಳನ್ನು ಜನ ಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯ ಸಲ್ಲಿಸುತ್ತಿರುವಲ್ಲಿ ಶಂಕರಪುರದ ಡಿಜಿಟಲ್ ಸೇವಾ ಕೇಂದ್ರವು ಒಂದಾಗಿದೆ.
