Updated News From Kaup

ಪಾಂಗಾಳ ಗುಡ್ಡೆ ಬ್ರಹ್ಮ ಬೈದೇರುಗಳ ಗರಡಿಯಲ್ಲಿ ಹರಕೆಯ ಹೂವಿನ ಪೂಜೆ ಸಲ್ಲಿಸಿದ ಸಚಿವ ಸುನೀಲ್ ಕುಮಾರ್

Thumbnail
Posted On: 27 Mar 2022, 10:38 PM

ಕಟಪಾಡಿ : ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಇಂಧನ ಇಲಾಖೆಯ ಸಚಿವರಾದ ಸುನೀಲ್ ಕುಮಾರ್ ಹಾಗೂ ಅವರ ಕುಟುಂಬಸ್ಥರು ಮಾಚ್೯ 27 ರಂದು ಪಾಂಗಾಳ ಗುಡ್ಡೆ ಬ್ರಹ್ಮ ಬೈದೇರುಗಳ ಗರಡಿಯಲ್ಲಿ ಹರಕೆಯ ಹೂವಿನ ಪೂಜೆಯನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಜಯ ಡಿ ಅಮೀನ್, ಶೇಖರ್ ಜಿ ಅಮೀನ್, ಸುಧಾಕರ್ ಡಿ ಅಮೀನ್, ಗರಡಿಯ ಚಾಕರಿ ವರ್ಗ, ಪಕ್ಷದ ಪ್ರಮುಖರು, ಮತ್ತಿತರರು ‌ಉಪಸ್ಥಿತರಿದ್ದರು.

ಅವರಾಲು : ಧೂಮಾವತಿ ದೈವಸ್ಥಾನ - ವರ್ಷಾವಧಿ ನೇಮೋತ್ಸವ

Thumbnail
Posted On: 27 Mar 2022, 06:12 PM

ಹೆಜಮಾಡಿ : ಅವರಾಲು ಶ್ರೀ ಧೂಮಾವತಿ ದೈವಸ್ಥಾನದ ವರ್ಷಾವಧಿ ನೇಮೋತ್ಸವವು ಮಾಚ್೯ 29 ಮತ್ತು 30 ರಂದು ಜರಗಲಿದೆ. ಮಾಚ್೯ 29ರಂದು ಬೆಳಿಗ್ಗೆ ಗಂಟೆ 9 ಕ್ಕೆ ಸ್ಥಳ ಶುದ್ಧಿ, ನವಕ ಕಲಶಾಭಿಷೇಕ, ಗಂಟೆ 11ಕ್ಕೆ ಚಪ್ಪರ ಆರೋಹಣ, ಮಧ್ಯಾಹ್ನ 1ಕ್ಕೆ ಅನ್ನಸಂತರ್ಪಣೆ, ಸಂಜೆ ಗಂಟೆ 6ಕ್ಕೆ ಭಂಡಾರ ಇಳಿಯುವುದು, ರಾತ್ರಿ 8ಕ್ಕೆ ಅನ್ನಸಂತರ್ಪಣೆ, ರಾತ್ರಿ 10ರಿಂದ ಗಡುವಾಡು ಸ್ಥಳದಲ್ಲಿ ಶ್ರೀ ಉಳ್ಳಾಯ, ಕೊಡಮಣಿತ್ತಾಯ, ಜಾರಂದಾಯ ಹಾಗೂ ಬಂಟ ದೈವಗಳ ನೇಮೋತ್ಸವ ಜರಗಲಿದೆ. ಮಾಚ್೯ 30 ರಂದು ರಾತ್ರಿ 7ಕ್ಕೆ ಆದಿ ಜನಾರ್ಧನ ಮಕ್ಕಳ ಕುಣಿತ ಭಜನಾ ಮಂಡಳಿ ಶಿಮಂತೂರು ಇವರ ವತಿಯಿಂದ ಕುಣಿತ ಭಜನಾ ಕಾರ್ಯಕ್ರಮ, ರಾತ್ರಿ 8ಕ್ಕೆ ಅನ್ನಸಂತರ್ಪಣೆ, ರಾತ್ರಿ 10ರಿಂದ ಶ್ರೀ ಧೂಮಾವತಿ ಬಂಟ ದೈವಗಳ ನೇಮೋತ್ಸವ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಇನ್ನಂಜೆಯಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ವತಿಯಿಂದ ಸಂತಸದ ಶಿಬಿರ - ಸುದರ್ಶನ ಕ್ರಿಯಾ, ಯೋಗ, ಪ್ರಾಣಯಾಮ, ಧ್ಯಾನ, ಜ್ಞಾನಗಳ ಸುಂದರ ಮಿಶ್ರಣ

Thumbnail
Posted On: 25 Mar 2022, 10:36 PM

ಕಾಪು : ಜೀವನದಲ್ಲಿ ಸಂತೋಷ, ಯಶಸ್ವಿ ಮತ್ತು ಆರೋಗ್ಯವಾಗಿರಬೇಕೆನ್ನುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ವತಿಯಿಂದ ಸಂತಸದ ಶಿಬಿರ (ಸುದರ್ಶನ ಕ್ರಿಯಾ, ಯೋಗ, ಪ್ರಾಣಯಾಮ, ಧ್ಯಾನ, ಜ್ಞಾನಗಳ ಸುಂದರ ಮಿಶ್ರಣ) ಮಾಚ್೯ 28 ರಿಂದ ಏಪ್ರಿಲ್‌ 2ರವರೆಗೆ ಬೆಳಿಗ್ಗೆ ಘಂಟೆ 5 ರಿಂದ 7ರವರೆಗೆ ಇನ್ನಂಜೆ ಶಾಲೆಯ ಹತ್ತಿರದ ದಾಸ ಭವನದಲ್ಲಿ ನಡೆಯಲಿದೆ. ತಕ್ಷಣವೇ ಈ ಶಿಬಿರದಲ್ಲಿ ನೋಂದಾಯಿಸಿ, ಭಾಗವಹಿಸಿ ಜ್ಞಾನದ ಅನುಭವವನ್ನು ಪಡೆದುಕೊಳ್ಳಲು ಸಂಘಟಕರು ವಿನಂತಿಸಿದ್ದಾರೆ. (ವಿ.ಸೂ. : ಶಿಬಿರಾರ್ಥಿಗಳು ಬರುವಾಗ ಬೆಡ್‌ಶೀಟ್ ಮತ್ತು ಕುಡಿಯಲು ನೀರು ತರಬೇಕಾಗಿ ವಿನಂತಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9980915511

ಹೆಜಮಾಡಿ : ಸುರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆಗೆ ಚಾಲನೆ

Thumbnail
Posted On: 22 Mar 2022, 12:03 PM

ಹೆಜಮಾಡಿ : ಸುರತ್ಕಲ್‌ನ ಎನ್.ಐ.ಟಿ.ಕೆ. ಬಳಿಯ ಟೋಲ್ ಗೇಟನ್ನು ಶೀಘ್ರವಾಗಿ ತೆರವುಗೊಳಿಸುವಂತೆ ಆಗ್ರಹಿಸಿ ಮಾಚ್೯ 22ರಂದು ಬೃಹತ್ ಪಾದಯಾತ್ರೆಗೆ ವಿವಿಧ ಪಕ್ಷ, ಸಂಘ-ಸಂಸ್ಥೆ ಮತ್ತು ಸಂಘಟನೆಗಳ ಮುಖಂಡರ ಸಮ್ಮುಖದಲ್ಲಿ ಹೆಜಮಾಡಿ ಟೋಲ್ ಗೇಟ್ ಬಳಿ ಚಾಲನೆ ನೀಡಲಾಯಿತು. ಹೆಜಮಾಡಿ ಟೋಲ್ ಗೇಟ್ ನಿಂದ ಆರಂಭವಾಗಿ ಸುರತ್ಕಲ್ ಟೋಲ್ ಗೇಟ್ ವರೆಗೆ ಪಾದಯಾತ್ರೆಯು ಸಾಗಲಿದೆ. ಸುಮಾರು ಸಾವಿರಾರು ಮಂದಿಯಷ್ಟು ಸೇರಿದ ಪ್ರತಿಭಟನಾಕಾರರು, ಸಂಸದರು ಮತ್ತು ಶಾಸಕರ ವಿರುದ್ಧ ಘೋಷಣೆಯನ್ನು ಕೂಗಿ ಸುರತ್ಕಲ್ ಟೋಲ್ ತೆರವುಗೊಳಿಸಲು ವಿಳಂಬಿಸಿದ್ದಲ್ಲಿ ಮುಂದೆ ನಡೆಯ ಬಹುದಾದ ದುರಂತಕ್ಕೆ ನೀವೇ ಜವಾಬ್ದಾರಿ ಆಗಲಿದ್ದೀರಿ ಎಂಬುದಾಗಿ ಎಚ್ಚರಿಸಿದ್ದಾರೆ. ಈ ಸಂದರ್ಭದಲ್ಲಿ ವಿವಿಧ ಸಂಘಸಂಸ್ಥೆಗಳ ಪ್ರಮುಖರು, ರಾಜಕೀಯ ನಾಯಕರು, ನಾಗರಿಕರು ಉಪಸ್ಥಿತರಿದ್ದರು.

ರೋಟರಿ ಸಮುದಾಯ ದಳ ಇನ್ನಂಜೆಯಿಂದ ಇನ್ನಂಜೆ ಪ್ರಾಥಮಿಕ ಆರೋಗ್ಯ ಉಪಕೇಂದ್ರಕ್ಕೆ ಬಿ. ಪಿ. ಆಪರೇಟರ್ ಕೊಡುಗೆ

Thumbnail
Posted On: 21 Mar 2022, 01:26 PM

ಕಾಪು : ರೋಟರಿ ಸಮುದಾಯ ದಳ ಇನ್ನಂಜೆ ಇವರ ವತಿಯಿಂದ ಮಾಲಿನಿ ಶೆಟ್ಟಿ ಇನ್ನಂಜೆ ಇವರ ಪ್ರಾಯೋಜಕತ್ವದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಉಪ ಕೇಂದ್ರವಾದ ಇನ್ನಂಜೆಗೆ ಬಿ. ಪಿ. ಆಪರೇಟರನ್ನು ಪ್ರೈಮರಿ ಹೆಲ್ತ್ ಆಫೀಸರ್ ಶಕುಂತಲಾ ಇವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ರೋಟರಿ ಸಮುದಾಯ ದಳದ ಅಧ್ಯಕ್ಷರಾದ ಪ್ರಶಾಂತ್ ಶೆಟ್ಟಿ, ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕಾ ಆಚಾರ್ಯ, ಪಂಚಾಯತ್ ಕಾರ್ಯದರ್ಶಿಯಾದ ಚಂದ್ರಶೇಖರ್ ಸಾಲಿಯಾನ್, ಸದಸ್ಯರಾದ ದಿವೇಶ್ ಶೆಟ್ಟಿ, ಕಮ್ಯುನಿಟಿ ಹೆಲ್ತ್ ಆಫೀಸರ್ ದೀಪಕ್, ರೋಟರಿ ಸಮುದಾಯ ದಳ ಸದಸ್ಯರುಗಳಾದ ಆದ ವಜ್ರೇಶ್ ಆಚಾರ್ಯ, ಗಣೇಶ್ ಆಚಾರ್ಯ ಮತ್ತು ಜೇಸುದಾಸ್ ಸೋನ್ಸ್ ಉಪಸ್ಥಿತರಿದ್ದರು.

ಕಾಪು: ಗುಜರಿ ಅಂಗಡಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ - ಇಬ್ಬರ ಮೃತ್ಯು, ಮೂವರು ಗಂಭೀರ

Thumbnail
Posted On: 21 Mar 2022, 01:01 PM

ಕಾಪು : ಇಲ್ಲಿನ ಮಲ್ಲಾರು ಸಲಫಿ ಮಸೀದಿ ಸಮೀಪಗುಜರಿ ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನಪ್ಪಿ ಮೂವರು ಗಂಭೀರ ಗಾಯಗೊಂಡ ಘಟನೆ ಮಾಚ್೯ 21ರಂದು ನಡೆದಿದೆ. ಮೃತರನ್ನು ರಜಾಕ್ ಮಲ್ಲಾರ್ ಮತ್ತು ರಜಬ್ ಚಂದ್ರನಗರ ಎಂದು ಗುರುತಿಸಲಾಗಿದೆ. ಅಂಗಡಿಯಲ್ಲಿ ಗುಜರಿಗೆ ಬಂದಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ಅವಘಡ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದಾರೆ, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಗುಜರಿ ಅಂಗಡಿಯಲ್ಲಿ ಇರಿಸಲಾದ ಹಳೆಯ ಪ್ರಿಜ್ ಸೇರಿದಂತೆ ಗುಜರಿ ಸಾಮಗ್ರಿಗಳು ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸುಟ್ಟು ಕರಕಲಾಗಿದ್ದು, ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಬೆಂಕಿಗಾಹುತಿಯಾಗಿವೆ. ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಕಾಪು ಪೊಲೀಸರು ಧಾವಿಸಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಮಟ್ಟಾರು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ - ದಶಮಾನೋತ್ಸವದ ಪ್ರಯುಕ್ತ ಬೃಹತ್ ಸ್ವಚ್ಛತಾ ಜನಜಾಗೃತಿ ಅಭಿಯಾನ

Thumbnail
Posted On: 20 Mar 2022, 10:29 PM

ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ದಶಮಾನೋತ್ಸವದ ಪ್ರಯುಕ್ತ ಬೃಹತ್ ಸ್ವಚ್ಛತಾ ಜನಜಾಗೃತಿ ಅಭಿಯಾನ ಕಾರ್ಯಕ್ರಮ ಜರಗಿತು. ಶಿರ್ವ ಗ್ರಾಮ ಪಂಚಾಯತ್ ಸದಸ್ಯರಾದ ದೇವದಾಸ್ ನಾಯಕ್, ಆಶಾ ಆಚಾರ್ಯ, ಮಮತಾ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ವಿಶ್ವ ಹಿಂದೂ ಪರಿಷದ್ ಕಾಪು ತಾಲೂಕು ಅಧ್ಯಕ್ಷರಾದ ಜಯಪ್ರಕಾಶ್ ಪ್ರಭು, ಮಟ್ಟಾರು ಘಟಕ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಉಪಾಧ್ಯಕ್ಷ ಜಗದೀಶ ಆಚಾರ್ಯ, ಸಂಚಾಲಕ ವಿಶ್ವನಾಥ ಆಚಾರ್ಯ, ಗ್ರಾಮ ಪಂಚಾಯತ್ ಸದಸ್ಯರಾದ ಸುರೇಶ್ ನಾಯಕ್, ರಾಜೇಶ್ ನಾಯ್ಕ್, ವಿಶ್ವ ಹಿಂದೂ ಪರಿಷದ್ ಬಜರಂಗದಳದ ಕಾರ್ಯಕರ್ತರು ಮತ್ತು ನಾಗರಿಕರು ಪಾಲ್ಗೊಂಡಿದ್ದರು. ಅಟ್ಟಿಂಜ ಸೇತುವೆಯಿಂದ ಮಟ್ಟಾರು ಯು.ಬಿ.ಎಂ.ಸಿ ಶಾಲೆಯ ವರೆಗೆ ಸ್ವಚ್ಛತೆ ಮಾಡಲಾಯಿತು.

ಶ್ರೀ ದೇವಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಕಾಪು -ಪಡು ವತಿಯಿಂದ ಜರಗಲಿರುವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Thumbnail
Posted On: 20 Mar 2022, 11:53 AM

ಕಾಪು : ಕಾಪು -ಪಡು ಇಲ್ಲಿನ ಶ್ರೀ ದೇವಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಇದರ ಆಶ್ರಯದಲ್ಲಿ ಏಪ್ರಿಲ್ 16, ಶನಿವಾರ ಮಧ್ಯಾಹ್ನ 12: 30ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ, ರಾತ್ರಿ 8 ಗಂಟೆಗೆ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ಸಭಾ ಕಾರ್ಯಕ್ರಮ ಮತ್ತು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಯಕ್ಷಗಾನ ಮಂಡಳಿ ಇವರಿಂದ ಸಾರ್ವಜನಿಕ ಹರಕೆಯ ಯಕ್ಷಗಾನ ಬಯಲಾಟ ಶ್ರೀ ಶನೀಶ್ವರ ಮಹಾತ್ಮೆ ಜರಗಲಿದೆ. ಈ ಪ್ರಯುಕ್ತ ಮಾಚ್೯ 20 ರಂದು ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭ ಶ್ರೀ ದೇವಿ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಕ್ಲಬ್ ಅಧ್ಯಕ್ಷ ಅನಿಲ್ ಕುಮಾರ್ , ಹೊಸ ಮಾರಿಗುಡಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯಾ, ಜೀರ್ಣೋದ್ದಾರದ ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಯೋಗೀಶ್ ವಿ ಶೆಟ್ಟಿ ಬಾಲಾಜಿ, ಪುರಸಭಾ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ ಮತ್ತು ಕ್ಲಬ್ ನ ಕೋಶಾಧಿಕಾರಿ ಅನಿಲ್ ಕುಮಾರ್ ಪಾಡಿಮನೆ ಹಾಗೂ ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

ರೋಟರಿ ಕಲ್ಯಾಣಪುರ : ಕರಾವಳಿಯಿಂದ ಕಾಶ್ಮೀರಕ್ಕೆ ಕಾಲ್ನಡಿಗೆಯಲ್ಲಿ ಕ್ರಮಿಸಿ ಹುಲಿವೇಷದ ಸಾಂಸ್ಕೃತಿಕ ಸೊಗಡನ್ನು ಪ್ರದರ್ಶಿಸಿದ ಹರ್ಷೆಂದ್ರ ಆಚಾರ್ಯಗೆ ಸನ್ಮಾನ

Thumbnail
Posted On: 20 Mar 2022, 09:23 AM

ಉಡುಪಿ : ಉಡುಪಿ ಕರಾವಳಿಯಿಂದ ಭಾರತದ ತುತ್ತ ತುದಿಯ ಕಾಶ್ಮೀರದವರೆಗೆ ಒಂಟಿಯಾಗಿ ಕಾಲ್ನಡಿಗೆಯಲ್ಲಿ ಪ್ರಯಾಣಿಸಿ, ಅಲ್ಲಿ ಹುಲಿವೇಷದ ಸಾಂಸ್ಕೃತಿಕ ಸೊಗಡನ್ನು ಪ್ರದರ್ಶನಗೈದು ಮೆಚ್ಚುಗೆ ಗಳಿಸಿದ ವಿಶೇಷ ವ್ಯಕ್ತಿತ್ವದ ಹರ್ಷೆಂದ್ರ ಆಚಾರ್ಯ ಎಮ್ ಜಡ್ಡು ಬ್ರಹ್ಮಾವರ ಇವರನ್ನು ರೋಟರಿ ಕ್ಲಬ್ ಕಲ್ಯಾಣಪುರದ ವತಿಯಿಂದ ಇತ್ತೀಚೆಗೆ ಗುರುತಿಸಿ ಅಭಿನಂದಿಸಲಾಯಿತು. ಉಡುಪಿಯಿಂದ ಬಹುತೇಕ ರಾಜ್ಯಗಳ ಕರಾವಳಿ ಪ್ರದೇಶದಲ್ಲಿ ಹಾದು ಹೋಗುವ ಹೆದ್ದಾರಿ ಮಾರ್ಗಗಳ ಮುಖೇನ ದಿನಕ್ಕೆ ಸರಿ ಸುಮಾರು ಬೆಳಗಿನ 6 ಘಂ. ಯಿಂದ ಸಂಜೆ 6. ಘಂಟೆ ಯವರೆಗೆ ಕಾಲ್ನಡಿಗೆಯಲ್ಲಿ ಸಾಗುವ ಮೂಲಕ ಕಾಶ್ಮೀರವನ್ನು ಯಶಸ್ವಿಯಾಗಿ ತಲುಪಿ ಕಿರಿಯ ವಯಸ್ಸಿನ ಇವರ ಸಾಧನೆ ಅತ್ಯಂತ ಶ್ಲಾಘನೀಯ. ಸನ್ಮಾನ ಸ್ವೀಕರಿಸಿದ ಇವರು, ತನ್ನ ಮುಂದಿನ ದಿನಗಳಲ್ಲಿ ರಸ್ತೆ ಮಾರ್ಗವಾಗಿ ಸೈಕ್ಲಿಂಗ್ ಮೂಲಕ ಉಡುಪಿಯಿಂದ ಸಿಂಗಾಪುರಕ್ಕೆ ಪ್ರಯಾಣ ಬೆಳೆಸುವ ಯೋಜನೆಗೆ, ಸಿದ್ದತೆ ಹಾಗೂ ಅಭ್ಯಾಸಕ್ಕೆ ಪ್ರೋತ್ಸಾಹ ಮಾಡುತ್ತಿರುವ ಕ್ಲಬ್ ನ ಸದಸ್ಯರು ಗಳಿಗೆ ಕ್ರತಜ್ಞತೆ ಸಲ್ಲಿಸಿದರು. ಅಧ್ಯಕ್ಷರಾದ ಶಂಭು ಶಂಕರ್, ಕಾರ್ಯದರ್ಶಿ ಪ್ರಕಾಶ್, ನಿಕಟಪೂರ್ವ ಜಿಲ್ಲಾ ಗವರ್ನರ್ ರಾಜಾರಾಂ ಭಟ್, ವಲಯ ಸೇನಾನಿ ಬ್ರಯಾನ್ ಡಿಸೋಜ, ಮಾಜಿ ಸಹಾಯಕ ಗವರ್ನರ್ ಎಮ್ ಮಹೇಶ್ ಕುಮಾರ್ ನಿಯೋಜಿತ ಅಧ್ಯಕ್ಷೆ ಶಾರ್ಲೆಟ್ ಲೂವಿಸ್ ಮತ್ತಿತರ ರೋಟರಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಲೆನ್ ಲೂವಿಸ್ ಕಾರ್ಯಕ್ರಮ ನಿರೂಪಿಸಿದರು.

ಪ್ರೊಫೆಸರ್ ಮೇಟಿ ಮುದಿಯಪ್ಪ ವಿಧಿವಶ

Thumbnail
Posted On: 18 Mar 2022, 05:23 PM

ಉಡುಪಿ : ಉತ್ತಮ ಸಾಹಿತಿ , ರಂಗನಟ, ಶಿಕ್ಷಕ , ಭಾಷಣಕಾರ, ಪರಿಸರ ಪ್ರೇಮಿ, ಸಂಘಟಕ ,ಚಲನ ಚಿತ್ರ ನಟ ಪೊ. ಮೇಟಿ ಮುದಿಯಪ್ಪ ಅಲ್ಪ ಕಾಲದ ಅಸೌಖ್ಯದಿಂದ ವಿಧಿವಶರಾಗಿದ್ದಾರೆ. ವೃತ್ತಿಯಲ್ಲಿ ಶಿಕ್ಷಕ ಕಳೆದ ೩೫ ವರುಷಗಳಿಂದ ಶಿಷ್ಯರ ಮೆಚ್ಚಿನ ಗುರುಗಳಾಗಿ ಸೇವೆ ಸಲ್ಲಿಸಿದ್ದು ಈಗಲೂ ಹೋದಕಡೆಗಳೆಲ್ಲ ಶಿಷ್ಯವೃಂದ ಇವರನ್ನು ಗೌರವಿಸುವುದು ಇವರ ಜನಪ್ರಿಯತೆಗೆ ಸಾಕ್ಷಿ. ತಮ್ಮ ಸರಳ ಗುಣ ದಿಂದ ಎಲ್ಲರೊಂದಿಗೆ ಬೆರೆಯುವ ಮೇಟಿ ಯವರು  ಕಿರಿಯರೆಂಬ ಬೇಧ ಭಾವವಿಲ್ಲದೆ ಪ್ರತಿಭೆಗೆ ಮನ್ನಣೆ ಹಾಗು ಪ್ರೋತ್ಸಾಹ  ಕೊಡುವ ಸ್ನೇಹ ಜೀವಿ. ಸದಾ ಹಸನ್ಮುಖಿ ತಮ್ಮ  ವಿಶಿಷ್ಟ ಪೋಷಾಕಿನಿಂದ ನೆನಪಿನಲ್ಲಿ ಉಳಿಯುತ್ತಾರೆ. ಹಲವಾರು ಸಂಘ ಸಂಸ್ಥೆಯ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ ಇವರು ಮಾನವೀಯ ಮೌಲ್ಯಗಳಿಗೆ ಪ್ರಾಧಾನ್ಯತೆ ಕೊಟ್ಟಿದ್ದು  ಬಹಳಷ್ಟು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸಾಹಿತ್ಯ ಲೋಕಕ್ಕೆ ತಮ್ಮದೆ ಆದ ಕೊಡುಗೆ ನೀಡಿದ ಮೇಟಿಯವರ ಹಲವಾರು ಕೃತಿಗಳು ಲೋಕಾರ್ಪಣೆ ಗೊಂಡಿದೆ . ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಕೂಡ ಇವರು ಗಮನಾರ್ಹ ಕಾರ್ಯಕ್ರಮಗಳನ್ನು ಮಾಡಿದ್ದಾರೆ . ಉಧ್ಘೋಷ , ಕಡಲಾಳದ ಮುತ್ತು ನನ್ನೊಳಗಿನ ಕವಿತೆ ,ಮಾನವೀಯತೆಯ ಸುತ್ತ ಮುತ್ತ , ಕಡ್ಯಾವ ನೆನಪು  ಇವರ ಕೃತಿಗಳಲ್ಲಿ ಕೆಲವು. ಹೈದರಾಬಾದ್ ಕರ್ನಾಟಕದಿಂದ ಬಂದು  ರಂಗದ ಬಗ್ಗೆ ಇರುವ ಪ್ರಾವಿಣ್ಯತೆಯಿಂದ ಉಡುಪಿಯ ಪ್ರತಿಷ್ಠಿತ ರಂಗಭೂಮಿ (ರಿ )  ನಡೆಸುವ ರಾಜ್ಯ ಮಟ್ಟದ ಕನ್ನಡ ನಾಟಕ ಸ್ಪರ್ಧೆಯ ತೀರ್ಪುಗಾರರಲ್ಲಿ ಓರ್ವರಾಗಿ ಭಾಗವಹಿಸಿದ ನಂತರ ರಂಗಭೂಮಿ (ರಿ.) ಉಡುಪಿಯ ಖಾಯಂ ಸದಸ್ಯರಾದದ್ದು ವಿಶೇಷ. 1985 ರಿಂದ ರಂಗಭೂಮಿ (ರಿ.) ಉಡುಪಿಯ ಒಡನಾಡಿಯಾಗಿದ್ದು  ಅಂದಿನಿಂದ ಇಂದಿನವರೆಗೂ ರಂಗಚಟುವಟಿಕೆಯಲ್ಲಿ  ತನ್ನನ್ನು ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದಾರೆ. ಸ್ವತಃ ನಟನಾಗಿದ್ದ  ಮೇಟಿಯವರು ರಂಗಭೂಮಿ(ರಿ.)  ಉಡುಪಿಯ ನಾಟಕಗಳಾದ ನಾಗಮಂಡಲ,ಗಾಂಧಿ ನಗರ ,ಚಮ್ಮಾರನ ಚಾಲಾಕಿ ಹೆಂಡತಿ,ಹೇಮಂತ ,ಸೂರ್ಯ ಶಿಕಾರಿ, ಪರಿಹಾರ  ಹೀಗೆ ಹಲವಾರು ನಾಟಕಗಳಲ್ಲಿ ನಟಿಸಿದ್ದಾರೆ  ಹಾಗೂ ರಾಜ್ಯದ ಹೊರರಾಜ್ಯದಲ್ಲಿ ನಡೆದ ಪ್ರದರ್ಶನಗಳಲ್ಲಿ ರಂಗಭೂಮಿ (ರಿ.) ಉಡುಪಿಯನ್ನು ಪ್ರತಿನಿಧಿಸಿದ್ದಾರೆ .ಮೂರು ದಶಕಕ್ಕೂ ಹೆಚ್ಚು ಉಡುಪಿಯ ರಂಗಭೂಮಿಯ  ಜೊತೆ ಜೊತೆಯಾಗಿ ನಡೆದಿದ್ದು  ಹಲವಾರು ಸಲ  ರಂಗಭೂಮಿ ಕಾರ್ಯಕ್ರಮಕ್ಕೆ ಸಂಚಾಲಕರಾಗಿ  ಕಾರ್ಯಕ್ರಮವನ್ನು ಚೆಂದಗಾಣಿಸಿ ಕೊಟ್ಟಿದ್ದಾರೆ. ಸಾಮಾನ್ಯ ಸದಸ್ಯರಾಗಿ , ಕಾರ್ಯಕಾರಿ ಮಂಡಳಿಯ ಸದಸ್ಯರಾಗಿ, ಜೊತೆ ಕಾರ್ಯದರ್ಶಿಗಳಾಗಿ ತನಗೆ ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿ ರಂಗಭೂಮಿ ಸಾಗಿ ಬಂದ ದಾರಿಯಲ್ಲಿ  ತಮ್ಮ ಹೆಜ್ಜೆ ಗುರುತನ್ನೂ ಮೂಡಿಸಿರುತ್ತಾರೆ.