Updated News From Kaup
ಜನವರಿ 2 : ಫಲಿಮಾರಿನಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
Posted On: 18-12-2021 03:02PM
ಫಲಿಮಾರು : ಹೊಯ್ಗೆ ಫ್ರೆಂಡ್ಸ್, ಹೊಯ್ಗೆ (ರಿ.) ಫಲಿಮಾರು, ಶ್ರೀ ದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಜನವರಿ 2ರ ಆದಿತ್ಯವಾರ ಬೆಳಿಗ್ಗೆ 8 ರಿಂದ ಅಪರಾಹ್ನ ಗಂಟೆ 2ರ ವರೆಗೆ ಫಲಿಮಾರಿನ ಗಣೇಶ ಮಂಟಪದಲ್ಲಿ ಜರಗಲಿದೆ.
ಬಾಲ ಕಾರ್ಮಿಕ, ಕಿಶೋರ ಕಾರ್ಮಿಕ ಪದ್ಧತಿ ಕುರಿತು ಹೆಚ್ಚಿನ ಅರಿವು ಮೂಡಿಸಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 18-12-2021 10:33AM
ಉಡುಪಿ : ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ದುಷ್ಪರಿಣಾಮಗಳ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳಲ್ಲಿ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ, ಜಿಲ್ಲಾಡಳಿತ, ಜಿಲ್ಲಾಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ಧತಿ ನಿಷೇಧದ ಕುರಿತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಯಲ್ಲಿ ಜನಜಾಗೃತಿ ಮೂಡಿಸುವ ಸಲುವಾಗಿ ಆಟೋ ಪ್ರಚಾರದ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.
ಪಡುಬಿದ್ರಿ : ಪಡುಹಿತ್ಲು ಶ್ರೀ ಜಾರಂದಾಯ ಬಂಟ ದೈವಸ್ಥಾನದಲ್ಲಿ ವರ್ಷಾವಧಿ ನೇಮೋತ್ಸವ
Posted On: 17-12-2021 06:18PM
ಪಡುಬಿದ್ರಿ : ಇಲ್ಲಿನ ಪಡುಹಿತ್ಲು ಶ್ರೀ ಜಾರಂದಾಯ ಬಂಟ ದೈವಸ್ಥಾನದಲ್ಲಿ ಶ್ರೀ ಮೈಸಂದಾಯ, ಶ್ರೀ ಜಾರಂದಾಯ ಬಂಟ, ಶ್ರೀ ಧೂಮಾವತಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ಡಿಸೆಂಬರ್ 21ನೇ ಮಂಗಳವಾರ ಮತ್ತು 22ನೇ ಬುಧವಾರ ನಡೆಯಲಿದೆ.
ಎಡ್ಮೇರು : ನಿಸರ್ಗ ಯುವಕ ಮಂಡಲದ 20ನೇ ವಾರ್ಷಿಕೋತ್ಸವ
Posted On: 17-12-2021 04:27PM
ಕಾಪು : ಇಲ್ಲಿಯ ಮೂಡುಬೆಳ್ಳೆಯ ಎಡ್ಮೇರು ನಿಸರ್ಗ ಯುವಕ ಮಂಡಲದ 20ನೇ ವಾರ್ಷಿಕೋತ್ಸವದ ಪ್ರಯುಕ್ತ ಡಿಸೆಂಬರ್ 17, ಶುಕ್ರವಾರ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 10 ರಗಂಟೆಯವರೆಗೆ ಉಡುಪಿ, ದ.ಕ. ಜಿಲ್ಲೆಯ ಆಯ್ದ ತಂಡಗಳಿಂದ ಕಟ್ಟಿಂಗೇರಿ ಸುಭಾಶ್ಚಂದ್ರ ಹೆಗ್ಡೆ ಇವರ ಸಾರಥ್ಯದಲ್ಲಿ ಎಡ್ಮೇರು ನಾಲ್ಕು ಬೀದಿ ಜಂಕ್ಷನ್ ನಲ್ಲಿ 'ನಿಸರ್ಗ ತೆಲಿಪಾಲೆ' ಎಂಬ ಹಾಸ್ಯ ಕಾರ್ಯಕ್ರಮ ಸ್ಪರ್ಧೆ ಜರಗಲಿದೆ.
ಕಾಪು ಪುರಸಭಾ ಚುನಾವಣೆ - ಟಿಕೆಟ್ ಹಂಚಿಕೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ
Posted On: 17-12-2021 01:24PM
ಕಾಪು : ಇಲ್ಲಿನ ಪುರಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳ ಟಿಕೆಟ್ ಹಂಚಿಕೆ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಾಮಾನ್ಯವಾಗಿ ಜಾತಿವಾರು ಲೆಕ್ಕಾಚಾರದಲ್ಲಿ ಟಿಕೆಟ್ ಹಂಚಿಕೆ ಪ್ರಕ್ರಿಯೆಯು ನಡೆಯುತ್ತದೆ. ಇದಕ್ಕೆ ವ್ಯತಿರಿಕ್ತವಾಗಿ ಕೆಲವು ಕಡೆ ಪಕ್ಷವು ನಡೆದುಕೊಂಡಿದೆ ಎಂದು ಸಾರ್ವಜನಿಕರ ಅಭಿಪ್ರಾಯವಾಗಿದೆ.
ಕಾಪು ಪುರಸಭಾ ಚುನಾವಣೆ : ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದಿಂದ ಇಬ್ಬರು ಅಭ್ಯರ್ಥಿಗಳು ಕಣಕ್ಕೆ
Posted On: 17-12-2021 12:38PM
ಕಾಪು : ಜನಕಲ್ಯಾಣದ ಬಗ್ಗೆ ತನ್ನದೇ ಆದ ದೂರದೃಷ್ಟಿಯನ್ನು ಹೊಂದಿ, ಚುನಾವಣೆಯಲ್ಲಿ ವಾಮಮಾರ್ಗಗಳನ್ನು ಅನುಸರಿಸದೇ ಜನರ ಭಾವುಕತೆಗೆ ಮಹತ್ವ ನೀಡಿ ಮೌಲ್ಯಗಳಿಗೆ ಬದ್ಧವಾಗಿ ಸ್ಪರ್ಧಿಸಿ, ಕಾಪು ಪುರಸಭೆ ಆಗುವುದಕ್ಕಿಂತ ಮೊದಲು ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತಿಗಳಲ್ಲಿ ಸ್ಪರ್ಧಿಸಿ ಜಯಗಳಿಸಿ, ಜನಸೇವೆ ಮಾಡಿದ ಹಿನ್ನೆಲೆಯ ವ್ಯಕ್ತಿಗಳನ್ನು ಸ್ಪರ್ಧಾ ಕಣಕ್ಕೆ ಇಳಿಸುವ ನಿಟ್ಟಿನಲ್ಲಿ ಈ ಬಾರಿ ಕಾಪು ಪುರಸಭಾ ಚುನಾವಣೆಯಲ್ಲಿ ಎರಡು ಸ್ಥಾನಗಳಿಗೆ ಸ್ಪರ್ಧಿಸಲು ತೀರ್ಮಾನಿಸಲಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಉದ್ಯಾವರ ತಿಳಿಸಿದರು. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ಪಕ್ಷದ ವತಿಯಿಂದ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಕಾಪು : ಜನತಾದಳದ ಚುನಾವಣಾ ಪ್ರಚಾರ ಕಚೇರಿ ಉದ್ಘಾಟನೆ, ಪುರಸಭಾ ಚುನಾವಣಾ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ
Posted On: 17-12-2021 08:56AM
ಕಾಪು : ಉಡುಪಿ ಜಿಲ್ಲೆಯ, ಕಾಪು ವಿಧಾನಸಭಾ ಕ್ಷೇತ್ರದ ಕಾಪು ಪುರಸಭೆ ವ್ಯಾಪ್ತಿಯ ಜನತಾದಳ(ಜಾತ್ಯತೀತ) ಪಕ್ಷದ ಚುನಾವಣಾ ಪ್ರಚಾರ ಕಚೇರಿಯನ್ನು ಕಾಪು ಮಹಾಬಲ ಮಾಲ್ ನ 2ನೇ ಮಹಡಿಯಲ್ಲಿ ಡಿಸೆಂಬರ್ 15ರಂದು, ಪಕ್ಷದ ನಾಯಕರಾದ ಪರಮೇಶ್ವರಪ್ಪ, ಮತ್ತು ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು.
ನಾನಿಲ್ತಾರ್ ಕುಲಾಲ ಸಂಘದ ವಾರ್ಷಿಕ ಸಭೆಯಲ್ಲಿ ತೆರೆಮರೆಯ ನಿಸ್ವಾರ್ಥ ಸಮಾಜ ಸೇವಕ ಸಂತೋಷ್ ಕುಲಾಲ್ ಪದವು ಇವರಿಗೆ ಸನ್ಮಾನ
Posted On: 15-12-2021 08:32PM
ಕಾರ್ಕಳ : ಸಾಮಾಜಿಕ ಜಾಲತಾಣ ಎಂಬುದು ಬರಿ ಮನೋರಂಜನೆ ಸೀಮಿತವಲ್ಲ ಅಲ್ಲಿ ಕೆಲವೊಂದು ಕುಟುಂಬಕ್ಕೆ ಸಹಾಯ ಮಾಡಬಹುದು ಎನ್ನುವ ಸಂತೋಷ್ ಕುಲಾಲ್ ಪದವು ಇವರ ವಾಟ್ಸಾಪ್ ಗ್ರೂಪ್ ಸದ್ದಿಲ್ಲದೇ ಹಲವು ಕುಟುಂಬಕ್ಕೆ ಆಸರೆ ಆಗಿದೆ. ತೆರೆಮರೆಯ ಇವರ ಕಾರ್ಯವನ್ನು ಗುರುತಿಸಿ ನಾನಿಲ್ತಾರ್ ಕುಲಾಲ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸನ್ಮಾನಿಸಲಾಯಿತು.
ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ರೋಟರಾಕ್ಟ್ ಕ್ಲಬ್ ಪದಗ್ರಹಣ
Posted On: 15-12-2021 08:11PM
ಉಡುಪಿ : ಕಲ್ಯಾಣಪುರ ರೋಟರಿ ಕ್ಲಬ್ ಪ್ರವರ್ತಿತ ರೋಟರಾಕ್ಟ್ ಕ್ಲಬ್ ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಇತ್ತೀಚೆಗೆ ಕಾಲೇಜಿನ ಸಭಾಂಗಣದಲ್ಲಿ ನೆರವೇರಿತು.
ಮಂಗಳೂರು ನಗರ ಪೊಲೀಸ್ ವತಿಯಿಂದ ಪರಿವರ್ತನಾ ಸಭೆ
Posted On: 15-12-2021 07:51PM
ಮಂಗಳೂರು : ಇಲ್ಲಿನ ನಗರ ಪೊಲೀಸ್ ವತಿಯಿಂದ ಪರಿವರ್ತನಾ ಸಭೆಯು ಡಿಸೆಂಬರ್ 16, ಬೆಳಿಗ್ಗೆ 11.30ಕ್ಕೆ ಶ್ರೀ ಟಿ.ವಿ. ರಮಣ ಪೈ ಕನ್ವೆನ್ಶನ್ ಸೆಂಟರ್ ಇಲ್ಲಿ ಜರಗಲಿದೆ.
