Updated News From Kaup

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಬ್ರಹ್ಮಕಲಶಾಭಿಷೇಕ ಸಂಪನ್ನ

Posted On: 05-03-2025 11:08PM

ಕಾಪು : ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಮಾರಿಯಮ್ಮನ ಬ್ರಹ್ಮಕಲಶಾಭಿಷೇಕವು ವಿಜ್ರಂಭಣೆಯಿಂದ ಭಕ್ತರ ಸಮ್ಮುಖದಲ್ಲಿ ಬುಧವಾರ ಸಂಪನ್ನಗೊಂಡಿತು.

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ : ಉಚ್ಚಂಗಿ ಬ್ರಹ್ಮಕಲಶಾಭಿಷೇಕ ; ಧಾರ್ಮಿಕ ಕಾರ್ಯಗಳು ಸಂಪನ್ನ

Posted On: 04-03-2025 08:10PM

ಕಾಪು : ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಜರುಗುತ್ತಿರುವ 8ನೇ ದಿನದಂದು ಉಚ್ಚಂಗಿ ಬ್ರಹ್ಮಕಲಶಾಭಿಷೇಕ ಸಹಿತ ಧಾರ್ಮಿಕ ಕಾರ್ಯಗಳು ಸಂಪನ್ನಗೊಂಡವು.

ಭಕ್ತಿ ಮತ್ತು ಶೃದ್ಧೆಯಿಂದ ಮಾಡುವ ಕಾರ್ಯಕ್ಕೆ ದೇವರ ಅನುಗ್ರಹ ಪ್ರಾಪ್ತಿ : ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ

Posted On: 04-03-2025 08:04PM

ಕಾಪು : ದುಷ್ಟ ಶಕ್ತಿಗಳನ್ನು ನಾಶ ಮಾಡಿ ಶಿಷ್ಟರನ್ನು ಸದಾ ರಕ್ಷಿಸುವ ತಾಯಿ ಮಾರಿಯಮ್ಮ. ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಅದ್ಭುತವಾದ ಸೇವೆ ನಡೆಯುತ್ತಿದೆ. ದೇವಸ್ಥಾನದ ಮರದ ಕೆಲಸ, ಶಿಲಾ ಕೆಲಸಗಳು ಅದ್ಭುತವಾಗಿವೆ. ಇದು ಶ್ರದ್ಧೆಯಿಂದ ಮಾಡಿದ ಕೆಲಸ ಆಗಿದೆ. ಭಕ್ತಿ ಮತ್ತು ಶೃದ್ಧೆಯಿಂದ ಮಾಡುವ ಕಾರ್ಯಕ್ಕೆ ದೇವರ ಅನುಗ್ರಹವೂ ಪ್ರಾಪ್ತಿಯಾಗುತ್ತದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ರಾಜರ್ಷಿ ಡಾ.ಡಿ.ವೀರೇಂದ್ರ ಹೆಗ್ಗಡೆ ನುಡಿದರು. ಅವರು ಮಂಗಳವಾರ ಕಾಪು ಶ್ರೀಹೊಸ ಮಾರಿಗುಡಿ ನೂತನ ದೇವಸ್ಥಾನದಲ್ಲಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ಪುನ:ಪ್ರತಿಷ್ಠಾಪನಾಪೂರ್ವಕ ಸಹಸ್ರ ಕುಂಭಾಭಿಷೇಕ ಪ್ರಯುಕ್ತ ಜರುಗುತ್ತಿರುವ 8ನೇ ದಿನದ ಧಾರ್ಮಿಕ ಅನುಷ್ಠಾನಗಳ ಶುಭಾವಸರದಲ್ಲಿ ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ನಂತರ ಜರುಗಿದ ಧಾರ್ಮಿಕ ಸಭಾಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದರು.

ಕಾಪು ಶ್ರೀ ಹೊಸ ಮಾರಿಗುಡಿ ದೇವಳಕ್ಕೆ ಆಗಮಿಸಿದ ನವಕುಂಭಗಳಲ್ಲಿ ಪೂಜೆಗೊಂಡ ಗಂಗಾಜಲ

Posted On: 03-03-2025 07:28PM

ಕಾಪು : ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಳಕ್ಕೆ ಕಾಪು ಶ್ರೀ ಲಕ್ಷ್ಮಿ ಜನಾರ್ಧನ ದೇವರ ಸನ್ನಿಧಾನದಲ್ಲಿ ನವಕುಂಭಗಳಲ್ಲಿ ಪೂಜೆಗೊಂಡ ಗಂಗಾಜಲವನ್ನು ಪೂರ್ಣಕುಂಭದ ಮೆರವಣಿಗೆಯೊಂದಿಗೆ ಸೋಮವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಳಕ್ಕೆ ತರಲಾಯಿತು.

ಭಾರತದ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾ‌ರ್ ಯಾದವ್ ದಂಪತಿ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ

Posted On: 02-03-2025 04:26PM

ಕಾಪು : ಭಾರತ ಟಿ20 ಕ್ರಿಕೆಟ್ ತಂಡದ ನಾಯಕ ಸೂರ್ಯಕುಮಾ‌ರ್ ಯಾದವ್ ಮತ್ತು ಅವರ ಪತ್ನಿ ಕಾಪು ಮೂಲದ ದೇವಿಷಾ ಶೆಟ್ಟಿ ಅವರು ರವಿವಾರ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ ನೀಡಿದರು.

ಅಲ್ಪಸಂಖ್ಯಾತ ಕಾರ್ಯಕರ್ತರಿಗೆ ಸರ್ಕಾರ, ಪಕ್ಷದಲ್ಲಿ ಸೂಕ್ತ ಸ್ಥಾನ ಮಾನಕ್ಕಾಗಿ ಉಪಮುಖ್ಯಮಂತ್ರಿಗೆ ಮನವಿ

Posted On: 02-03-2025 04:06PM

ಕಾಪು : ಕೆಪಿಸಿಸಿ ರಾಜ್ಯಾದ್ಯಕ್ಷರು,ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳಾದ ಡಿ ಕೆ ಶಿವಕುಮಾರ್ ರವರು ಉಡುಪಿ ಜಿಲ್ಲೆಗೆ ಆಗಮಿಸಿದ ಸಂಧರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿದಾಗ ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್ ರವರ ನೇತೃತ್ವದಲ್ಲಿ ಜಿಲ್ಲೆಯ ಪಕ್ಷದ ಅಲ್ಪಸಂಖ್ಯಾತ ಕಾರ್ಯಕರ್ತರಿಗೆ ಸರ್ಕಾರದಲ್ಲಿ ಹಾಗೂ ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡಬೇಕೆಂದು ಮನವಿ ನೀಡಲಾಯಿತು.

ಕಾಪು : ಧರ್ಮದಿಂದಲೇ ವಿಶ್ವಕ್ಕೆ ಶಾಂತಿ - ಡಿ.ಕೆ.ಶಿವಕುಮಾರ್

Posted On: 02-03-2025 03:40PM

ಕಾಪು : ಕಾಪು ಮಾರಿಯಮ್ಮ ದೇವರ ಗದ್ದುಗೆ ಪ್ರತಿಷ್ಠಾನೆಯ ಮೊದಲ ಪ್ರಸಾದ ಸಿಕ್ಕಿದ್ದು ನನ್ನ ಭಾಗ್ಯ. ಸರಕಾರದ ಹಣವಿಲ್ಲದೆ ಭಕ್ತರು ಸ್ವ ಇಚ್ಛೆಯಿಂದ ನೀಡಿದ ಹಣದಲ್ಲಿ ಇಷ್ಟು ದೊಡ್ಡ ದೇವಳ ಕಟ್ಟಿದ್ದು ಅದ್ಭುತ. ಕಷ್ಟ ದೂರ ಮಾಡಿ, ರಕ್ಷಿಸುವ ಸನ್ನಿಧಾನ ಕಾಪು. ಇಲ್ಲಿ ಜಾತಿ ಇಲ್ಲ. ಎಲ್ಲರೂ ಮಾನವ ಜಾತಿ. ಧರ್ಮ ಎದ್ದು ಕಾಣುತ್ತಿದೆ. ಧರ್ಮದಿಂದಲೇ ವಿಶ್ವಕ್ಕೆ ಶಾಂತಿ. ಎಲ್ಲರಿಗೂ ಒಳಿತಾಗಲಿ ಎಂದು ಕರ್ನಾಟಕ ಸರಕಾರದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಅವರು ಆದಿತ್ಯವಾರ ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಶ್ರೀ ಮಾರಿಯಮ್ಮ ದೇವರ ಮಹಾಸ್ವರ್ಣಪೀಠದೊಂದಿಗೆ (ಗದ್ದಿಗೆ) ವ್ಯಸ್ತಾಂಗಸಮಸ್ತನ್ಯಾಸಪೂರ್ವಕ ಶ್ರೀ ಮಾರಿಯಮ್ಮನ ಪ್ರತಿಷ್ಠೆ, ಶ್ರೀ ಉಚ್ಚಂಗಿದೇವಿಯ ಸ್ವರ್ಣ ಪೀಠದೊಂದಿಗೆ ವ್ಯಸ್ತಾಂಗಸಮಸ್ತನ್ಯಾಸಪೂರ್ವಕ ಶ್ರೀ ಉಚ್ಚಂಗಿದೇವಿಯ ಪ್ರತಿಷ್ಠೆಯಲ್ಲಿ ಪಾಲ್ಗೊಂಡ ಬಳಿಕ ಜರಗಿದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಾಗಸ್ವರ ವಾದಕ ಸುನಿಲ್ ಸೇರಿಗಾರ ಸೂಡ, ಬಹುಮುಖ ಪ್ರತಿಭೆ ಕು. ಶ್ರೀನಿಧಿ ಪಾನಾರ ಇವರಿಗೆ ಸನ್ಮಾನ

Posted On: 28-02-2025 01:30PM

ಕಾಪು : ಶಿರ್ವ ಸಮೀಪದ ಪಳ್ಳಿ ಶ್ರೀಕ್ಷೇತ್ರ ಅಡಪಾಡಿ ಉಮಾಮಹೇಶ್ವರ, ಶ್ರೀದುರ್ಗಾಪರಮೇಶ್ವರೀ ದೇವೀ ಸನ್ನಿಧಿಯಲ್ಲಿ ಜರುಗುತ್ತಿರುವ ಮಹಾಶಿವರಾತ್ರಿ, ಮತ್ತು ರಥೋತ್ಸವ ಸಂದರ್ಭದಲ್ಲಿ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯೋತ್ಸವ ಜಿಲ್ಲಾ ಪ್ರಶಸ್ತಿ ವಿಜೇತ ಖ್ಯಾತ ಸ್ಯಾಕ್ಸೋಫೋನ್ ಹಾಗೂ ನಾಗಸ್ವರ ವಾದಕ ಸುನಿಲ್ ಸೇರಿಗಾರ ಸೂಡ ಮತ್ತು ಕ್ಷೇತ್ರದ ದೈವ ನರ್ತಕ ರವಿ ಪಾನಾರ ಪಡ್ಡಂ ಇವರ ಪುತ್ರಿ ಬಹುಮುಖ ಪ್ರತಿಭಾ ಸಂಪನ್ನೆ ಯಕ್ಷಗಾನ, ಭರತನಾಟ್ಯ, ಕರಾಟೆಪಟು ಕು. ಶ್ರೀನಿಧಿ ಪಾನಾರ ಇವರನ್ನು ಕ್ಷೇತ್ರದ ವತಿಯಿಂದ ಧರ್ಮದರ್ಶಿಗಳಾದ ಪುಂಡಲೀಕ ನಾಯಕ್ ಇವರು ಸನ್ಮಾನಿಸಿದರು.

ಸಮಾಜ ಸೇವಾ ವೇದಿಕೆ ಕಾಪು ಅಧ್ಯಕ್ಷ ಡಾ.ಯು.ಎಂ ಫಾರೂಕ್ ಚಂದ್ರನಗರ ಇವರಿಗೆ ಸನ್ಮಾನ

Posted On: 27-02-2025 11:02AM

ಕಾಪು : ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮದಲ್ಲಿ ಸಮಾಜ ಸೇವಾ ವೇದಿಕೆ ಕಾಪು ಅಧ್ಯಕ್ಷರಾದ ಡಾ.ಯು.ಎಂ ಫಾರೂಕ್ ಚಂದ್ರನಗರ ಇವರನ್ನು ಸನ್ಮಾನಿಸಲಾಯಿತು.

ಕಾಪು ಶ್ರೀ ಹೊಸ ಮಾರಿಗುಡಿ ಪ್ರತಿಷ್ಠಾ ಬ್ರಹ್ಮಲಕಶೋತ್ಸವ : ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

Posted On: 25-02-2025 10:27PM

ಕಾಪು : ಭಾರತದಲ್ಲಿ ಸಮುದಾಯಕ್ಕಿಂತ ಮೀರಿದ್ದು ಧರ್ಮ. ಹಿಂದು ಧರ್ಮ ದೇಶಕ್ಕೆ ಅವಶ್ಯಕ. ತಾಯಿ ಸ್ವರೂಪಿಯಾದ ಮಾರಿಯಮ್ಮ ದೊಡ್ಡ ಶಕ್ತಿ. ತಾಯಿಯನ್ನು ನೋಡಲು ಗರ್ಭ ಗುಡಿಗೆ ಪ್ರವೇಶ ಮಾಡಿ ಸಮೀಪದಿಂದ ನೋಡುವ ಭಾಗ್ಯ ಸಮಾನತೆಯ ಪ್ರತೀಕವಾಗಿದೆ ಎಂದು ಬೆಳಗಾವಿಯ ಹಿರೇಮಠ ಹುಕ್ಕೇರಿ ಶ್ರೀ ಗುರು ಶಾಂತೇಶ್ವರ ಸಂಸ್ಥಾನದ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದಶ್ರೀರು. ಅವರು ಮಂಗಳವಾರ ಸಂಜೆ ಕಾಪು ಶ್ರೀ ಹೊಸ ಮಾರಿಗುಡಿ ದೇವಳದ ಪ್ರತಿಷ್ಠಾ ಬ್ರಹ್ಮಲಕಶೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವದಿಸಿದರು.