Updated News From Kaup

ಹಿಂದು ಜಾಗರಣ ವೇದಿಕೆ ಮುದರಂಗಡಿ ಘಟಕದ ವತಿಯಿಂದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ಯೋಧರಿಗೆ ಶ್ರದ್ಧಾಂಜಲಿ ಸಮರ್ಪಣೆ

Posted On: 15-12-2021 07:47PM

ಕಾಪು : ಹಿಂದು ಜಾಗರಣ ವೇದಿಕೆ ಮುದರಂಗಡಿ ಘಟಕದ ವತಿಯಿಂದ, ಮುದರಂಗಡಿ, ವಿದ್ಯಾನಗರ ಶ್ರೀ ದುರ್ಗ ಮಂದಿರದಲ್ಲಿ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಮಡಿದ ದೇಶದ ಮಹಾನ್ ದಂಡನಾಯಕ ಸಿಡಿಎಸ್ ಬಿಪಿನ್ ರಾವತ್ ಹಾಗು ವೀರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ರಸ್ತೆ ಮಧ್ಯ ಕಂಬ ? ತೆರವಿಗೆ ಆದೇಶ

Posted On: 14-12-2021 04:56PM

ಕಾಪು : ರಸ್ತೆ ಮಧ್ಯ ಕಂಬ ?ಸಾಮಾಜಿಕ ಜಾಲತಾಣಗಳಲ್ಲಿ ಕಂಡು ಬರುತ್ತಿದ್ದ ದೃಶ್ಯ ಕಾಪು ತಾಲ್ಲೂಕಿನಲ್ಲಿ ನಡೆದಿದೆ. ಈ ರಸ್ತೆ ಮೂಡುಬೆಳ್ಳೆ ಮತ್ತು ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಸೇರಿದ್ದಾಗಿದೆ. ಕುತೂಹಲಿಗರಾದ ಕೆಲವೊಂದು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಈ ದೃಶ್ಯ ಹಬ್ಬಿಸಿದ್ದಾರೆ.

ಮಂಗಳೂರು : ಮಾರಣಾಂತಿಕ ಹಲ್ಲೆ ಐವರ ಬಂಧನ

Posted On: 14-12-2021 02:19PM

ಮಂಗಳೂರು : ಇಲ್ಲಿನ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೊಂಡಂತಿಲ ಗ್ರಾಮ ಪಡು ಎಂಬಲ್ಲಿ ಡಿಸೆಂಬರ್ 10ರಂದು 7:30 ಗಂಟೆಗೆ ಮಂಗಳೂರು ತಾಲೂಕು, ಅಡ್ಯಾರ್ ಪದವು ಗ್ರಾಮದ ನಿವಾಸಿಯಾದ ಮೊಹಮ್ಮದ್ ರಿಯಾಜ್ ಎಂಬುವವರು ತಮ್ಮ ಕಾರಿನಲ್ಲಿ ತಮ್ಮ ಮನೆಯ ಕಡೆಗೆ ತೆರಳುತ್ತಿರುವಾಗ 7 ರಿಂದ 8 ಜನ ಆರೋಪಿಗಳು ಮೋಟಾರು ಸೈಕಲ್ ಮತ್ತು ಒಂದು ವಾಹನವನ್ನು ರಸ್ತೆಗೆ ಅಡ್ಡವಾಗಿ ನಿಲ್ಲಿಸಿ, ಕಾರನ್ನು ತಡೆದು ನಿಲ್ಲಿಸಿ, ಕಾರಿನ ಹೆಡ್ ಲೈಟ್, ಬಂಪರ್ ಗೆ ಕ್ರಿಕೇಟ್ ಬ್ಯಾಟ್ ಮತ್ತು ಕಬ್ಬಿಣದ ರಾಡ್ ನಿಂದ ಹೊಡೆದು ಜಖಂಗೊಳಿಸಿ ನಂತರ ಕಾರಿನಲ್ಲಿದ್ದ ಮೊಹಮ್ಮದ್ ರಿಯಾಜ್ ನನ್ನು ಕಾರಿನಿಂದ ಎಳೆದು ಹೊರಕ್ಕೆ ತಂದು ಕೈಯಲ್ಲಿದ್ದ ಬ್ಯಾಟ್, ರಾಡ್ ಮತ್ತು ಬೀಯರ್ ಬಾಟಲಿಗಳಿಂದ ತಲೆಗೆ, ಬಲ ಕಣ್ಣಿಗೆ, ಬಲ ಹುಬ್ಬುಗಳಿಗೆ ಬಲವಾಗಿ ಹೊಡೆದು ಗಂಭೀರ ಸ್ವರೂಪದ ರಕ್ತಗಾಯವನ್ನುಂಟು ಮಾಡಿ, ಕೊಲೆ ಮಾಡಲು ಪ್ರಯತ್ನಿಸಿರುತ್ತಾರೆ.

109 ವರ್ಷಗಳ ಇತಿಹಾಸವಿರುವ ಕುಕ್ಕೆಹಳ್ಳಿ ಬಜೆ - ತಂಗಾಣ ಶ್ರೀ ವರ್ತೆ ಕಲ್ಕುಡ ದೈವಗಳಿಗೆ ಕಾಲಾವಧಿ ನೆಮೋತ್ಸವ

Posted On: 13-12-2021 10:23PM

ಉಡುಪಿ : ಡಿಸೆಂಬರ್ 16 ರ ಗುರುವಾರ ಸಂಜೆ 6 ಗಂಟೆಗೆ ಭಜನಾ ಸೇವೆಯಿಂದ ಕಾರ್ಯಕ್ರಮ ಮೊದಲ್ಗೊಂಡು ಸಂಜೆ 7 ಗಂಟೆಗೆ ಅನ್ನಸಂತರ್ಪಣೆ ತದನಂತರ ರಾತ್ರಿ 8 ಗಂಟೆಗೆ ಹೂವಿನ ಪೂಜೆ ಹಾಗೂ ರಾತ್ರಿ 9 ಗಂಟೆಯಿಂದ ವರ್ತೆ ಕಲ್ಕುಡ ದೈವಗಳಿಗೆ ಸಿರಿ ಸಿಂಗಾರದ ಕಾಲಾವಧಿ ನೆಮೋತ್ಸವ ನಡೆಯಲಿದೆ.

ಏಕೊನೊಮಿಕ್ ಗ್ರೂಪ್ ಸೊಸೈಟಿ ಆಫ್ ಇಂಡಿಯಾ ನವದೆಹಲಿಯಿಂದ ನೀಡಲ್ಪಡುವ ಪ್ರಶಸ್ತಿಗೆ ದಿವಾಕರ ಬಿ ಶೆಟ್ಟಿ ಕಳತ್ತೂರು, ಮೊಹಮ್ಮದ್ ಫಾರೂಕ್ ಚಂದ್ರನಗರ, ದಿವಾಕರ ಡಿ ಶೆಟ್ಟಿ ಆಯ್ಕೆ

Posted On: 13-12-2021 06:55PM

ಕಾಪು : ಏಕೊನೊಮಿಕ್ ಗ್ರೂಪ್ ಸೊಸೈಟಿ ಆಫ್ ಇಂಡಿಯಾ ನವದೆಹಲಿ ಇವರು ನೀಡಲಿರುವ ರಾಷ್ಟ್ರೀಯ ಪ್ರತಿಷ್ಠಿತ ಪ್ರಶಸ್ತಿಗೆ ಕಾಪು ಪರಿಸರದ ನಿಸ್ವಾರ್ಥ ಸಮಾಜ ಸೇವಕರಾದ ಜನಸಂಪರ್ಕ ಜನಸೇವಾ ವೇದಿಕೆ ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ ಕಳತ್ತೂರು ಇವರನ್ನು ಗ್ಲೋರಿ ಆಫ್ ಇಂಡಿಯಾ ಅವಾರ್ಡ್, 2021ರ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರ ಇವರನ್ನು ಏಶಿಯ ಫೆಸಿಫಿಕ್ ಗೋಲ್ಡ್ ಸ್ಟಾರ್ ಅವಾರ್ಡ್ ಹಾಗೂ ಉಭಯ ವೇದಿಕೆ ಸಂಚಾಲಕರು ಕೃಷಿಕರು, ಸಮಾಜ ಸೇವಕರು ಆದ ದಿವಾಕರ ಡಿ ಶೆಟ್ಟಿ ಸ್ಟಾರ್ ಆಫ್ ಏಶಿಯ ಅವಾರ್ಡ್ ಇವರ ಸಮಾಜ ಸೇವೆಯನ್ನು ಗುರುತಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಮಂಗಳೂರು : ಸ್ಕೂಟರ್ ನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

Posted On: 13-12-2021 06:48PM

ಮಂಗಳೂರು : ಇಲ್ಲಿನ ಹೊರವಲಯದ ಉಳ್ಳಾಲದ ಬಗಂಬಿಲ ಬಳಿ ಗಾಂಜಾ ಸಾಗಾಟದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ.

ಕಿನ್ನಿಗೋಳಿ : ಚಪ್ಪಲಿ ತೋರಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಮಾಲಿಕ ; ಪೋಲಿಸ್ ವಶ

Posted On: 12-12-2021 11:01PM

ಮುಲ್ಕಿ : ಮುಲ್ಕಿ ಠಾಣಾ ವ್ಯಾಪ್ತಿಯ ತಾಳಿಪಾಡಿ ಗ್ರಾಮದ ಕಿನ್ನಿಗೋಳಿಯ ಚಪ್ಪಲಿ ಅಂಗಡಿಗೆ ಮಹಿಳಾ ಗ್ರಾಹಕಿಯೊಬ್ಬರು ಚಪ್ಪಲಿ ಖರೀದಿಗಾಗಿ ಹೋದ ಸಮಯ ಅಂಗಡಿಯಲ್ಲಿದ್ದ ಅಂಗಡಿ ಮಾಲಿಕರು ಮಹಿಳಾ ಗ್ರಾಹಕಿಗೆ ವಿವಿಧ ಚಪ್ಪಲಿಗಳನ್ನು ತೋರಿಸಿದ್ದು ಮಹಿಳಾ ಗ್ರಾಹಕಿಗೆ ಅವರು ತೋರಿಸಿದ ಚಪ್ಪಲಿ ಇಷ್ಟವಾಗದೇ ಇದ್ದಾಗ ಅಂಗಡಿ ಮಾಲಕರು ಬೇರೆ ಚಪ್ಪಲಿಗಳನ್ನು ತೋರಿಸುವುದಾಗಿ ತಿಳಿಸಿ ಮಹಿಳಾ ಗ್ರಾಹಕಿಯನ್ನು ಅಂಗಡಿಯ ಒಳಗಿದ್ದ ಇನ್ನೊಂದು ಕಂಪಾರ್ಟ್ ಮೆಂಟ್ ಗೆ ಕರೆಸಿಕೊಂಡು ಮಹಿಳಾ ಗ್ರಾಹಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಅಜಾಗರೂಕತೆಯ ಚಾಲನೆ : ಮಾರುತಿ ಕಾರಿಗೆ ಇಂಟ್ರಾ ವಾಹನ ಢಿಕ್ಕಿ

Posted On: 12-12-2021 10:49PM

ಕಟಪಾಡಿ : ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾಪು ಕಡೆಗೆ ಬರುತ್ತಿದ್ದ ಮಾರುತಿ ಕಾರಿಗೆ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟಾಟಾ ಇಂಟ್ರಾ ವಾಹನ ಹಿಂಬದಿಗೆ ಢಿಕ್ಕಿಯಾದ ಪರಿಣಾಮ ಓರ್ವನಿಗೆ ತೀವ್ರತರದ ಗಾಯವಾಗಿ, ಕಾರು ಸಂಪೂರ್ಣ ಜಖಂಗೊಂಡ ಪ್ರಕರಣ ಪಾಂಗಾಳ ಜನಾರ್ಧನ ದೇವಸ್ಥಾನದ ಸಮೀಪ ನಡೆದಿದೆ.

ತುಳುಕೂಟ ಉಡುಪಿ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಫಾರೂಕ್ ಚಂದ್ರನಗರ ಇವರಿಗೆ ಸನ್ಮಾನ

Posted On: 12-12-2021 05:23PM

ಉಡುಪಿ : ತುಳುಕೂಟ (ರಿ.) ಉಡುಪಿ ವತಿಯಿಂದ ಕರ್ನಾಟಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಮೊಹಮ್ಮದ್ ಫಾರೂಕ್ ಚಂದ್ರನಗರರವನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಚಿತ್ರ ಕಲಾವಿದ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಗಣೇಶ್ ಪಂಜಿಮಾರ್ ಅವರಿಗೆ ನಾನಿಲ್ತಾರ್ ಕುಲಾಲ ಸಂಘದಿಂದ ಸನ್ಮಾನ

Posted On: 12-12-2021 04:50PM

ಕಾಪು : ಚಿತ್ರಕಲೆಯಲ್ಲಿ ವಿಶಿಷ್ಟ ಸಾಧನೆಗೈದ ವಿಕಲ ಚೇತನ ಶಿರ್ವ ಭಾಗದ ಪ್ರತಿಭೆ ಗಣೇಶ್ ಪಂಜಿಮಾರ್ ಅವರನ್ನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದುದಕ್ಕಾಗಿ ಇಂದು ನಾನಿಲ್ತಾರ್ ಸಂಘದ ಸರ್ವ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಸನ್ಮಾನಿಸಲಾಯಿತು.