Updated News From Kaup
ವರುಣ ಆಳ್ವರನ್ನು ಅಭಿನಂದಿಸಿದ ಕಮಿಷನರ್
Posted On: 13 Jan 2022, 05:05 PM
ಮಂಗಳೂರು : ಮೊಬೈಲ್ ಹಾಗೂ ಇತರ ವಸ್ತುಗಳನ್ನು ದರೋಡೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನು ಪೊಲೀಸ್ ಕಮೀಷನರ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವರುಣ ಆಳ್ವ ARSI ಇವರು ಬೆನ್ನಟ್ಟಿ, ಆರೋಪಿಗಳನ್ನು ಪತ್ತೆ ಹಚ್ಚಿ ಅವರಲ್ಲಿದ್ದ ಸೊತ್ತುಗಳನ್ನು ವಶಕ್ಕೆ ಪಡೆಯುವಲ್ಲಿ ಶ್ಲಾಘನೀಯ ಕರ್ತವ್ಯವನ್ನು ನಿರ್ವಹಿಸಿರುವ ಹಿನ್ನೆಲೆಯಲ್ಲಿ ಪೋಲಿಸ್ ಕಮಿಷನರ್ ಶಶಿಕುಮಾರ್ ಅಭಿನಂದಿಸಿದರು. ಸಿನಿಮೀಯ ಶೈಲಿಯಲ್ಲಿ ಆರೋಪಿಯನ್ನು ಹಿಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕಳ್ಳನನ್ನು ಸೀನಿಮಿಯ ರೀತಿಯಲ್ಲಿ ಬೆನ್ನಟ್ಟಿ ಹಿಡಿದ ಮಂಗಳೂರು ಪೊಲೀಸ್
Posted On: 13 Jan 2022, 12:43 PM
ದಿನಾಂಕ 12/01/2022 ರಂದು ಮಧ್ಯಾಹ್ನದ ಸಮಯದಲ್ಲಿ ನೆಹರೂ ಮೈದಾನದ ಪರಿಸರದಲ್ಲಿ ಇಬ್ಬರು ವ್ಯಕ್ತಿಗಳು ಬೊಬ್ಬೆ ಹೊಡೆದು ಓಡುತ್ತಾ ಪರಿಸರದ ಸಾರ್ವಜನಿಕರಿಗೆ ಆತಂಕ ಹಾಗೂ ವಾಹನ ಸಂಚಾರಕ್ಕೆ ಅಡ್ಡಿ ಉಂಟು ಮಾಡುತ್ತಾ ಪರಾರಿಯಾಗಲು ಯತ್ನಿಸಿದಾಗ ಪೊಲೀಸ್ ಕಮಿಷನರ್ ಕಛೇರಿಯಲ್ಲಿದ್ದ ಸಿಬ್ಬಂದಿ ಹಾಗೂ ಸಂಚಾರಿ ಪೊಲೀಸ್ ಸಿಬ್ಬಂದಿಗಳು ಅವರನ್ನು ಬೆನ್ನಟ್ಟಿ ಹಿಡಿದು ವಿಚಾರಿಸಿದಾಗ ಬಿಹಾರಿ ಮೂಲದ ವ್ಯಕ್ತಿಯ ಮೊಬೈಲ್ ಹಾಗೂ ಇತರ ವಸ್ತುಗಳನ್ನು ಮೂವರು ವ್ಯಕ್ತಿಗಳು ದರೋಡೆ ಮಾಡಿ ಪರಾರಿಯಾಗಿರುತ್ತಾರೆ ಎಂದು ತಿಳಿಸಿದಾಗ ಅಲ್ಲೇ ಇದ್ದ ಆರೋಪಿ ಶಮಂತ್ (20 ವರ್ಷ) ನನ್ನು ವಶಕ್ಕೆ ಪಡೆದು, ಅವನ ಮುಖಾಂತರ ಆತನ ಇತರ ಸಹಚರರ ಮಾಹಿತಿ ಪಡೆದು, ತಕ್ಷಣವೇ ರೈಲ್ವೇ ನಿಲ್ದಾಣ ಹಾಗೂ ಹಂಪನಕಟ್ಟೆ ಪರಿಸರದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಇನ್ನೊಬ್ಬ ಆರೋಪಿ ಹರೀಶ್ ಪೂಜಾರಿ (32 ವರ್ಷ) ನನ್ನು ವಶಕ್ಕೆ ಪಡೆಯಲಾಯಿತು. ಆತನ ಜೊತೆ ಇದ್ದ ಇನ್ನೊಬ್ಬ ಆರೋಪಿ ರಾಜೇಶ್ ಎಂಬವನು ಪರಾರಿಯಾಗಿರುತ್ತಾನೆ. ಪರಾರಿಯಾಗಿರುವ ಆರೋಪಿಯ ಬಗ್ಗೆ ಮಾಹಿತಿ ಲಭ್ಯವಾಗಿರುತ್ತದೆ. ದರೋಡೆ ನಡೆಸಿದ ಸೊತ್ತುಗಳಾದ ಸ್ಯಾಮ್ಸಂಗ್ ಮೊಬೈಲ್ ಫೋನನ್ನು ಆರೋಪಿಗಳಿಂದ ವಶಕ್ಕೆ ಪಡೆಯಲಾಗಿರುತ್ತದೆ. ಆರೋಪಿಗಳು 1) ಹರೀಶ್ ಪೂಜಾರಿ (32 ವರ್ಷ), ಪಾಲನೆ, ನೀರುಮಾರ್ಗ, ಕುಡುಪು, ಮಂಗಳೂರು. 2) ಶಮಂತ್ (20 ವರ್ಷ), ಅತ್ತಾವರ, ಬಾಬುಗುಡ್ಡೆ, ಮಂಗಳೂರು.
ಹೊಸಮಾರಿಗುಡಿ ನವನಿರ್ಮಾಣ : ಆರ್ಥಿಕ ಕ್ರೋಡಿಕರಣಕ್ಕೆ ಆರ್ಥಿಕ ಸಮಿತಿಯ ಸಮಾಲೋಚನಾ ಸಭೆ
Posted On: 12 Jan 2022, 10:11 PM
ಕಾಪು : ಇಲ್ಲಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ಆರ್ಥಿಕ ಸಮಿತಿಯ ಪದಾಧಿಕಾರಿಗಳ ಮತ್ತು ಒಂಬತ್ತು ತಂಡಗಳ ಸಂಚಾಲಕರ ಸಭೆಯು ಜನವರಿ 11ರಂದು ಜರುಗಿತು. ಸಭೆಯನ್ನುದ್ದೇಶಿಸಿ ಮಾತನಾಡಿದ ಆರ್ಥಿಕ ಸಮಿತಿಯ ಪ್ರಧಾನ ಸಂಚಾಲಕರಾದ ಉದಯ ಸುಂದರ್ ಶೆಟ್ಟಿಯವರು ದೇವಿಯ ಅಭಯ ವಾಕ್ಯದಂತೆ ಪ್ರತಿಯೊಬ್ಬರ ಮನೆ- ಮನಗಳಿಗೆ ಸುದ್ದಿ ತಲುಪಿಸುವುದು ನಮ್ಮೆಲ್ಲರ ಮಹತ್ತರ ಜವಾಬ್ದಾರಿಯಾಗಿದೆ. ಇದಕ್ಕಾಗಿ ನಾವೆಲ್ಲರೂ ಐಕ್ಯ ಮತದಿಂದ ಪ್ರತಿಯೊಬ್ಬ ಭಕ್ತರನ್ನು ಸಂಪರ್ಕಿಸಿ ಸುದ್ದಿ ತಲುಪಿಸಿ ದೇಗುಲದ ನವನಿರ್ಮಾಣಕ್ಕೆ ಶ್ರಮಿಸಬೇಕಿದೆ ಎಂದರು. ಈ ಸಂದರ್ಭದಲ್ಲಿ ದೇವಳದ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಕೆ.ವಾಸುದೇವ ಶೆಟ್ಟಿ, ಗೌರವಾಧ್ಯಕ್ಷರಾದ ಮನೋಹರ್ ಶೆಟ್ಟಿ, ಗೌರವ ಸಲಹೆಗಾರರಾದ ನಿರ್ಮಲ್ ಕುಮಾರ್ ಹೆಗ್ಡೆ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್. ವಿ. ಶೆಟ್ಟಿ ಬಾಲಾಜಿ, ಆರ್ಥಿಕ ಸಮಿತಿಯ ಮುಖ್ಯ ಸಂಚಾಲಕರಾದ ರತ್ನಾಕರ ಹೆಗ್ಡೆ ಕಲ್ಯಾ ಬೀಡು, ರಮೇಶ್ ಶೆಟ್ಟಿ ಕೊಲ್ಯ, ಸಂದೀಪ್ ಶೆಟ್ಟಿ ಮುಂಬೈ (ಶಿರ್ವ), ರವಿರಾಜ್ ಶೆಟ್ಟಿ ಮತ್ತು ಒಂಬತ್ತು ತಂಡಗಳ ಮುಖ್ಯ ಸಂಚಾಲಕರು ಹಾಗೂ ಸಂಚಾಲಕರುಗಳು ಉಪಸ್ಥಿತರಿದ್ದರು.
ಉಡುಪಿ : ರಾಷ್ಟ್ರೀಯ ಯುವ ದಿನಾಚರಣೆ
Posted On: 12 Jan 2022, 08:59 PM
ಉಡುಪಿ :- ಸ್ವಾಮಿ ವಿವೇಕಾನಂದರ ಆದಶ೯ಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ .ಮನೋಬಲ, ದೇಹಬಲ ಅದೇ ರೀತಿ ಶಿಸ್ತು ಅವಕಾಶ ಹಾಗೂ ಸೇವಾ ಮನೋಭಾವ ಗಳ ಬಗ್ಗೆ ಸ್ವಾಮೀಜಿಯವರು ನಮಗೆ ಹೇಳಿದ್ದಾರೆ ಅದನ್ನು ಅಳವಡಿಸಿಕೊಳ್ಳಿ ಎಂದು ಜೇಸಿಐ ಉಡುಪಿ ಸಿಟಿ ಅಧ್ಯಕ್ಷ ಡಾII ವಿಜಯ್ ನೆಗಳೂರು ಹೇಳಿದರು. ಅವರು ಜನವರಿ 12 ರಂದು ಕ್ರಿಶ್ಚಿಯನ್ ಪ.ಪೂ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಯುವ ದಿನ ಸ್ವಾಮಿ ವಿವೇಕಾನಂದ ಜಯಂತಿ ಕಾಯ೯ಕ್ರಮದಲ್ಲಿ ಮಾತನಾಡಿದರು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಶ್ವೇತಾ ಶ್ರೀನಿವಾಸ್ ವಹಿಸಿದ್ದರು. ಈ ಸಂದಭ೯ದಲ್ಲಿ ವಿದ್ಯಾಥಿ೯ಗಳಿಗೆ ಭಾಷಣ ಸ್ಪರ್ಧೆ ನಡೆಯಿತು. ವೇದಿಕೆಯಲ್ಲಿ ಪೂವ೯ ವಲಯ ಉಪಾಧ್ಯಕ್ಷ ರಾಘವೇಂದ್ರ ಪ್ರಭು ಕವಾ೯ಲು, ಕಿರಣ್ ಭಟ್, ಸಂದೀಪ್ ಕುಮಾರ್, ವೀಕ್ಷಿತ್ ಪೂಜಾರಿ, ಡಾII ಸಮದುಡು ಮತ್ತಿತರರು ಉಪಸ್ಥಿತರಿದ್ದರು. ಉಪನ್ಯಾಸಕ ನಾಗರಾಜ್ ನಿರೂಪಿಸಿ, ವಂದಿಸಿದರು.
ಶಿರ್ವ : ಎಮ್ ಎಸ್ ಆರ್ ಎಸ್ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ
Posted On: 12 Jan 2022, 08:52 PM
ಶಿರ್ವ : ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜು ಶಿರ್ವ ಇಲ್ಲಿಯ ವಿದ್ಯಾರ್ಥಿ ಸಂಘವನ್ನು ಉಡುಪಿ ಜಿಲ್ಲೆ ಜೆಡಿಎಸ್ ಪಕ್ಷದ ಅಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿ, ಕಾಪು ಉದ್ಘಾಟಿಸಿ, ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ನಯನಾ ಎಂ.ಪಕ್ಕಳ ವಹಿಸಿದ್ದರು. ಈ ಸಂದರ್ಭ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಹೇಮಲತಾ ಶೆಟ್ಟಿ, ವಿದ್ಯಾರ್ಥಿಗಳಾದ ಗಣೇಶ್, ಆಕಾಶ್ ಶೆಟ್ಟಿ, ವಿಜಯಲಕ್ಷ್ಮಿ, ಆಡಳಿತ ಮಂಡಳಿ, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
25 ಸಾವಿರ ಮೌಲ್ಯದ ಹಸುವೊಂದನ್ನು ಯಶೋಧ ಆಚಾರ್ಯರಿಗೆ ನೀಡಿದ ದಾನಿಗಳು
Posted On: 12 Jan 2022, 07:47 PM
ಕಾರ್ಕಳ : ಕಾರ್ಕಳ ಮಿಯಾರು ಕಜೆ ಎಂಬಲ್ಲಿಯ ಯಶೋಧ ಆಚಾರ್ಯ ಕುಟುಂಬಕ್ಕೆ ಸೇರಿದ 16 ಗೋವುಗಳನ್ನು ಒಂದುವರೆ ವರುಷದ ಅವಧಿಯಲ್ಲಿ ಗೋ ಕಳ್ಳರು ಕದ್ದೊಯ್ದಿದ್ದು, ಸಂಕಷ್ಟದಲ್ಲಿರುವ ಮಹಿಳೆಯ ಕುಟುಂಬಕ್ಕೆ ಸ್ಪಂದಿಸಿ ಹಲವರು ಗೋವು,ಮೇವುಗಳನ್ನು ನೀಡಿ ಸ್ಪಂದಿಸುತ್ತಿದ್ದಾರೆ. ಗುರುವಾರ ಕಾಪು ತಾಲೂಕು ಇನ್ನಂಜೆ ಗ್ರಾಮ ಪಂಚಾಯತ್ ಸದಸ್ಯ ರಾಜೇಶ್ ಆಚಾರ್ಯ ಓಂ ಸಾಯಿ ಪಾಂಗಾಳ ಅವರು ಸುಮಾರು 25 ಸಾವಿರ ಕ್ರಯದ ಹಸುವೊಂದನ್ನು ದಾನವಾಗಿ ನೀಡಿದರು. ಜತೆಗೆ ಮೇವು, ಹಿಂಡಿಗಳನ್ನು ನೀಡಿ ಸಹಕರಿಸಿದರು. ಗೋವುಗಳನ್ನೇ ಆಧಾರವಾಗಿರಿಸಿಕೊಂಡು ಬದುಕು ಕಟ್ಟಿಕೊಂಡ ಬಡ ಮಹಿಳೆ ಗೋವುಗಳನ್ನು ಕಳೆದುಕೊಂಡು ತೀರಾ ಸಂಕಷ್ಟದಲ್ಲಿದೆ. ಇಂತಹ ಕುಟುಂಬಕ್ಕೆ ನೆರವು ನೀಡುವಲ್ಲಿ ನಾವೆಲ್ಲರು ಕೈ ಜೋಡಿಸಬೇಕಿದೆ ಎಂದು ಹೇಳಿ ಹಾರೈಸಿದರು. ಈ ಸಂದರ್ಭ ಪ್ರವೀಣ್ ಶೆಟ್ಟಿ ಕಾರ್ಕಳ, ರಾಘವೇಂದ್ರ ಅಮೀನ್, ಅಜಿತ್ ಮೆಂಡನ್, ಪ್ರಸಾದ್ ಪೂಜಾರಿ, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಕೇಶ್ ಕುಂಜೂರು ಮೊದಲಾದವರು ಉಪಸ್ಥಿತರಿದ್ದರು.
ವಿವೇಕಾನಂದರ ಚಿಂತನೆಗಳಿಂದ ಯುವ ಜನತೆ ಸ್ಫೂರ್ತಿ ಪಡೆಯಬೇಕು : ರಘುಪತಿ ಭಟ್
Posted On: 12 Jan 2022, 07:11 PM
ಉಡುಪಿ : ಯುವ ಜನತೆ ವಿವೇಕಾನಂದರ ಚಿಂತನೆಗಳಿಂದ ಪೇರಿತರಾಗಿ ಸ್ಫೂರ್ತಿ ಪಡೆದು ನಾಗರೀಕ ಸೇವಾ ವಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಉಡುಪಿ ಶಾಸಕ ರಘುಪತಿ ಭಟ್ ಹೇಳಿದರು. ಅವರು ಇಂದು, ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾಲೇಜು ಶಿಕ್ಷಣ ಇಲಾಖೆ, ನೆಹರೂ ಯುವ ಕೇಂದ್ರ, ಸಾರ್ವಜನಿಕ ಶಿಕ್ಷಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ವಾರ್ತಾ ಮತ್ತು ಪ್ರಸಾರ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯುವ ಸ್ಪಂದನ ಉಡುಪಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು (ಲೀಡ್ ಕಾಲೇಜು), ಡಾ.ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು, ಪೂರ್ಣಪ್ರಜ್ಞ ಕಾಲೇಜು, ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜು ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು, ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ, ಸೈಂಟ್ ಮೇರಿಸ್ ಕಾಲೇಜು ಶಿರ್ವ ಹಾಗೂ ಮಾಧವ ಪೈ ಮೆಮೋರಿಯಲ್ ಕಾಲೇಜು ಮಣಿಪಾಲ ಇವರ ಸಹಯೋಗದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ ಹಾಗೂ ಆಜಾದ ಕಾ ಅಮೃತ ಮಹೋತ್ಸವದ ಅಂಗವಾಗಿ ನಡೆದ ಯುವ ಸಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು. ಜಿಲ್ಲೆಯ ಯುವ ಜನತೆ ಬುದ್ಧಿವಂತರಾಗಿದ್ದರೂ ಸಹ ನಾಗರೀಕ ಸೇವೆಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿಲ್ಲ. ಯುವ ಜನತೆಗೆ ನಾಗರೀಕ ಸೇವಾ ಪರೀಕ್ಷೆ ಕುರಿತಂತೆ ಜಿಲ್ಲಾಡಳಿತದ ಮೂಲಕ ತರಬೇತಿ ಕಾರ್ಯಕ್ರಮ ಆಯೋಜಿಸಿದ್ದು, ಯುವ ಜನತೆ ಇದರ ಸದುಪಯೋಗ ಪಡೆದುಕೊಂಡು, ನಾಗರೀಕ ಸೇವೆಯ ಮೂಲಕ ವಿವೇಕಾನಂದರ ಆಶಯದಂತೆ ಉತ್ತಮ ಸಮಾಜ, ಸದೃಢ ದೇಶ ನಿರ್ಮಾಣಕ್ಕೆ ತಮ್ಮ ಕೊಡುಗೆ ನೀಡಬೇಕು ಎಂದು ರಘುಪತಿ ಭಟ್ ಹೇಳಿದರು. ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ತಾನು ನಾಗರೀಕ ಸೇವಾ ಪರೀಕ್ಷೆ ಎದುರಿಸಲು ವಿವೇಕಾನಂದರ ಚಿಂತನೆಗಳೇ ಪ್ರೇರಣೆ. ವಿವೇಕಾನಂದರ ನಿನ್ನನ್ನು ನೀನು ನಂಬು ಹಾಗೂ ಎದ್ದೇಳು ಗುರಿ ಮುಟ್ಟುವವರೆಗೆ ನಿಲ್ಲದಿರು ಎಂಬ ಸ್ಫೂರ್ತಿದಾಯಕ ಆದರ್ಶದ ಮಾತುಗಳು ಸರ್ವಕಾಲಕ್ಕೂ ಸಮ್ಮತವಾಗಿವೆ. ಜಿಲ್ಲೆಯ ಯುವಜನತೆಯು ಜಿಲ್ಲಾಡಳಿತದ ಎಲ್ಲಾ ಕಾರ್ಯಗಳಿಗೆ ಉತ್ತಮ ಸಹಕಾರ ನೀಡುತ್ತಿದ್ದು, ಕ್ಲೀನ್ ಇಂಡಿಯಾ ಮತ್ತು ಫಿಟ್ ಇಂಡಿಯಾ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿ ಆಯೋಜಿಸಲು ಸಹಕಾರ ನೀಡಿದ್ದಾರೆ. ಜಿಲ್ಲಾಡಳಿತ ಕೂಡಾ ಜಿಲ್ಲೆಯ ಯುವ ಜನತೆಗೆ ನಾಗರೀಕ ಸೇವಾ ಪರೀಕ್ಷೆಗೆ ಉಚಿತ ತರಬೇತಿ ಆಯೋಜಸಿದ್ದು, ಇತ್ತೀಚೆಗೆ ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 500 ಕ್ಕೂ ಹೆಚ್ಚು ಯುವಜನರಿಗೆ ಉದ್ಯೋಗ ದೊರಕಿಸಲಾಗಿದೆ. ಕೋವಿಡ್-19 ಎದುರಿಸಲು ಯುವ ಜನತೆಯ ಸಹಕಾರ ಅಗತ್ಯವಾಗಿದ್ದು, ಎಲ್ಲಾ ಯುವ ಜನರು 100% 2 ಡೋಸ್ ಕೋವಿಡ್ ಲಸಿಕೆ ಪಡೆಯಬೇಕು ಎಂದರು. ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಮಾತನಾಡಿ, ಯುವ ಜನತೆ ವಿವೇಕಾನಂದರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಯಶಸ್ವಿಯಾಗಬೇಕು ಎಂದರು. ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದ, ಅಜ್ಜರಕಾಡು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ ಶೆಟ್ಟಿ, ವಿವೇಕಾನಂದ ಅವರು ರಾಷ್ಟçದ ಯುವಜನತೆಯ ಐಕಾನ್ ಆಗಿದ್ದಾರೆ. ದೇಶದ ಒಟ್ಟು ಜನಸಂಖ್ಯೆಯ 62.5% ರಷ್ಟಿರುವ ಯುವ ಜನತೆ, ವಿವೇಕಾನಂದರ ಆಶಯದಂತೆ ವೈಚಾರಿಕ ಚಿಂತನೆ ಮತ್ತು ವೈಜ್ಞಾನಿಕ ಮನೋಭಾವ ಹಾಗೂ ಆತ್ಮವಿಶ್ವಾಸ ಬೆಳೆಸಿಕೊಂಡು, ದೇಶದ ಬಗ್ಗೆ ಚಿಂತನೆ ನಡೆಸಿದ್ದಲ್ಲಿ ಸಮೃದ್ಧ, ಸದೃಢ, ಸಶಕ್ತ ಭಾರತ ನಿರ್ಮಾಣ ಸಾಧ್ಯವಾಗಲಿದೆ ಎಂದರು. ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು. ನೆಹರು ಯುವ ಕೇಂದ್ರದ ಸಮನ್ವಯಾಧಿಕಾರಿ ವಿಲ್ಫೆçಡ್ ಡಿಸೋಜಾ ಸ್ವಾಗತಿಸಿದರು. ಪ್ರಾಧ್ಯಾಪಕ ರಾಜೇಂದ್ರ ನಿರೂಪಿಸಿ, ವಂದಿಸಿದರು. ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಗರ್ಭಪೂರ್ವ ಹಾಗೂ ಪ್ರಸವಪೂರ್ವ ಲಿಂಗ ಪತ್ತೆ ಶಿಕ್ಷಾರ್ಹ ಅಪರಾಧ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.
Posted On: 12 Jan 2022, 07:06 PM
ಉಡುಪಿ : ಗರ್ಭಪೂರ್ವ ಹಾಗೂ ಪ್ರಸವಪೂರ್ವ ಲಿಂಗ ಪತ್ತೆ ಮಾಡುವುದು ಅಪರಾಧವಾಗಿದ್ದು, ಇಂತಹ ಪ್ರಕರಣಗಳು ಕಂಡುಬಂದಲ್ಲಿ ಅವರುಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಕಾಯಿದೆ ಬಗ್ಗೆ ಜಿಲ್ಲೆಯ ಸ್ಕ್ಯಾನಿಂಗ್ ಸೆಂಟರ್ಗಳ ಮಾಲೀಕರು ಮತ್ತು ವೈದ್ಯರಿಗೆ ಏರ್ಪಡಿಸಿದ ಅರಿವು ಮೂಡಿಸುವ ಕಾರ್ಯಗಾರದಲ್ಲಿ ಮಾತನಾಡಿದರು. ಸಮಾಜದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಸಮತೋಲನ ಕಾಯ್ದುಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಇವುಗಳಲ್ಲಿ ಏರುಪೇರಾದರೆ ಅನೇಕ ಬದಲಾವಣೆಗಳು ಸಮಾಜದಲ್ಲಿ ಉಂಟಾಗುತ್ತವೆ. ಪ್ರಸ್ತುತ ಸಾಲಿನಲ್ಲಿ ಜಿಲ್ಲೆಯಲ್ಲಿ 1000 ಗಂಡು ಮಕ್ಕಳಿದ್ದಾರೆ. 935 ಹೆಣ್ಣುಮಕ್ಕಳ ಸಂಖ್ಯೆಯಿದೆ ಎಂದರು. ಪ್ರಸವಪೂರ್ವ ಲಿಂಗ ಪತ್ತೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಅಂತಹ ಆರೋಪಿಗಳಿಗೆ 10 ವರ್ಷ ಜೈಲು ಹಾಗೂ ದಂಡ ವಿಧಿಸಲಾಗುವುದು ಎಂದ ಅವರು ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಸರ್ಕಾರ ಸೂಚಿಸಿರುವ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಒಂದೊಮ್ಮೆ ಪಾಲಿಸದಿದ್ದಲ್ಲಿ ಅಂತಹವರ ನೊಂದಣಿಯನ್ನು ರದ್ದುಪಡಿಸಲಾಗುವುದು ಎಂದರು. ಸ್ಕ್ಯಾನಿಂಗ್ ಸೆಂಟರ್ಗಳಲ್ಲಿ ಸಾರ್ವಜನಿಕರಿಗೆ ಎದ್ದು ಕಾಣುವ ರೀತಿಯಲ್ಲಿ ಭ್ರೂಣ ಲಿಂಗ ಪತ್ತೆ ಹಚ್ಚಿದಲ್ಲಿ ಆಗುವ ಶಿಕ್ಷೆಯ ಬಗ್ಗೆ ಸೂಚನಾ ಫಲಕಗಳನ್ನು ತಪ್ಪದೇ ಅಳವಡಿಸಬೆಕು. ಸ್ಕಾö್ಯನಿಂಗ್ ಕಾರ್ಯವನ್ನು ಕೈಗೊಳ್ಳುವ ವೈದ್ಯರ ಸಲಹಾ ಚೀಟಿ ಹೊಂದಿದಲ್ಲಿ ಮಾತ್ರ ಸ್ಕ್ಯಾನಿಂಗ್ ಕಾರ್ಯವನ್ನು ಮಾಡಬೇಕು ಎಂದರು. 18 ವರ್ಷದ ಒಳಗಿನವರು ಗರ್ಭಧಾರಣೆಯಾಗಿ ಅಥವಾ ಇನ್ನಿತರೆ ಕಾರಣಗಳಿಂದ ಪರೀಕ್ಷೆಗೆ ಬಂದಲ್ಲಿ ಅವರುಗಳಿಗೆ ಸ್ಕ್ಯಾನಿಂಗ್ ಕಾರ್ಯ ಕೈಗೊಳ್ಳಬೇಕು. ಗರ್ಭಧಾರಣೆಯಾಗಿರುವ ಬಗ್ಗೆ ಕಂಡುಬಂದಲ್ಲಿ, ಮಾಹಿತಿಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ನೀಡಬೇಕು ಎಂದರು. ಜಿಲ್ಲೆಯಲ್ಲಿ ಹಾಲಿ 75 ಸ್ಕ್ಯಾನಿಂಗ್ ಸೆಂಟರ್ಗಳು ಕಾರ್ಯನಿರ್ವಹಿಸುತ್ತಿವೆ ಎಂದ ಅವರು, ಪ್ರತಿವರ್ಷ ನಿಗಧಿತ ಕಾಲಾವಧಿಯೊಳಗೆ ಅನುಮತಿಯನ್ನು ನವೀಕರಣಗೊಳಿಸಿಕೊಳ್ಳಬೇಕು. ಪರೀಕ್ಷೆ ಮಾಡುವ ತಜ್ಷರು ಬದಲಾವಣೆ ಆದಾಗ ಸಹ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದರು. ಕಾರ್ಯಾಗಾರದಲ್ಲಿ ಜಿಲ್ಲಾ ಪಿ.ಸಿ.ಪಿ.ಎನ್.ಡಿ.ಟಿ. ಸಲಹಾ ಸಮಿತಿ ಅಧ್ಯಕ್ಷ ಡಾ.ಪ್ರತಾಪ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮರಾವ್, ಜಿಲ್ಲೆಯ ವಿವಿಧ ಸ್ಕ್ಯಾನಿಂಗ್ ಸೆಂಟರ್ಗಳ ಮಾಲೀಕರು ಮತ್ತು ವೈದ್ಯರು ಉಪಸ್ಥಿತರಿದ್ದರು. ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಕಾಯಿದೆ ಬಗ್ಗೆ ವಕೀಲೆ ಮೇರಿ ಶ್ರೇಷ್ಠ ಉಪನ್ಯಾಸ ನೀಡಿದರು.
ಮೊಬೈಲ್ನಲ್ಲಿ ಲೋನ್ ಆ್ಯಪ್ ಗಳನ್ನು ಬಳಸುವಾಗ ಜಾಗೃತರಾಗಿ ; ಪೋಲೀಸ್ ಇಲಾಖೆಯಿಂದ ಎಚ್ಚರಿಕೆ
Posted On: 12 Jan 2022, 07:00 PM
ಮಂಗಳೂರು : ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ಸುಶಾಂತ ಕುಮಾರ್ (26) ಎನ್ನುವಾತ ತಾನು ಕೆಲಸ ಮಾಡುವ ಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಆತನು ತನ್ನ ಡೆತ್ನೋಟ್ನಲ್ಲಿ ಸಾಲ ಮಾಡಿರುವುದಾಗಿ ಹಾಗೂ ಆನ್ಲೈನ್ ಲೋನ್ ಬಗ್ಗೆ ನಮೂದಿಸಿದ್ದು, ಆನ್ಲೈನ್ ಲೋನ್ ಆ್ಯಪ್ ನವರು ಕಿರುಕುಳ ನೀಡಿದ್ದು ಎಂದು ನಮೂದಿಸಿದ್ದ ಈ ಬಗ್ಗೆ ಸುರತ್ಕಲ್ ಠಾಣೆ ಪ್ರಕರಣ ದಾಖಲಾಗಿರುತ್ತದೆ. ಇದೀಗ ಸಾರ್ವಜನಿಕರು ಅಂತಹ ಆ್ಯಪ್ ಗಳ ಬಗ್ಗೆ ಜಾಗರೂಕರಾಗಿರಬೇಕೆಂದು ಎಚ್ಚರಿಸಿದ್ದಾರೆ. ಲೋನ್ ಆ್ಯಪ್ ಪ್ರಾರಂಭದಲ್ಲಿ ಚೈನದಲ್ಲಿ ಆರಂಭವಾಗಿದ್ದು, ನ್ಯೂಯ್ಡ ಲೋನ್ ಆ್ಯಪ್ ಎನ್ನುವ ಆ್ಯಪ್ ಕೂಡ ಚಾಲನೆಯಲ್ಲಿ ಇತ್ತು. ಅಂದರೆ ಈ ಆ್ಯಪ್ನ್ನು ಇನ್ಸ್ಟಾಲ್ ಮಾಡುವಾಗ ಬತ್ತಲೆ ಫೋಟೋವನ್ನು ಪಡೆಯುತ್ತಿದ್ದು, ಒಂದು ವೇಳೆ ಸರಿಯಾಗಿ ಲೋನ್ ಕಟ್ಟದಿದ್ದರೆ ಬೇರೆಯವರಿಗೆ ಕಳುಹಿಸುವುದಾಗಿಯೂ ಹೆದರಿಸುತ್ತಿದ್ದರು. ಭಾರತದಲ್ಲಿ ಸುಮಾರು 600ಕ್ಕಿಂತ ಹೆಚ್ಚು ಲೋನ್ ಆ್ಯಪ್ಗಳು ಇದ್ದು, ಇವುಗಳಿಗೆ ಯಾವುದೇ ಆರ್ಬಿಐನಿಂದ ಮಾನ್ಯತೆ ಇರುವುದಿಲ್ಲ. ಇವುಗಳು ಪ್ಲೇಸ್ಟೋರ್ನಲ್ಲಿ ಡೌನ್ಲೋಡ್ ಮಾಡುವಂತ ಆ್ಯಪ್ ಆಗಿದ್ದು, ಇನ್ಸ್ಟಾಲ್ ಮಾಡುವಾಗ ಅನೇಕ ಅನುಮತಿಯನ್ನು ಕೇಳುತ್ತಾರೆ. ಉದಾಹರಣೆಗೆ ಕಾಂಟಾಕ್ಟ್, ವಿಡಿಯೋ ಫೋಟೋ ಕ್ಯಾಮಾರ ಇತ್ಯಾದಿಗಳಿಗೆ ಅನುಮತಿಯನ್ನು ಕೇಳುತ್ತಾರೆ. ಎಲ್ಲಾದಕ್ಕೂ ಎಸ್ ಎಸ್ ಹಾಕಿ ಇನ್ ಸ್ಟಾಲ್ ಮಾಡಿದ ನಂತರ ಸಣ್ಣ ಪ್ರಮಾಣದ ಸಾಲ ಅಂದರೆ ರೂ 3000/- ಅಥವಾ 5000/- ಹಣ ನೀಡುತ್ತಾರೆ. ನಂತರ ಸಾಲವನ್ನು ಹಿಂತಿರುಗಿಸುವಾಗ 30 ರಿಂದ 60 % ಬಡ್ಡಿಯನ್ನು ವಿಧಿಸಿ ಸಾಲ ಚುಕ್ತ ಮಾಡಲು ಹೇಳುತ್ತಾರೆ. ಒಂದು ವೇಳೆ ಸಾಲವನ್ನು ಹಿಂದುರಿಗಿಸಲು ಇದ್ದಲ್ಲಿ ಅವರ ಕಾಂಟಾಕ್ಟ್, ನಂಬ್ರಗೆ ಪೋನ್ ಮಾಡಿ ಲೋನ್ ಪಡೆದವರ ಬಗ್ಗೆ ಹೇಳುವುದಾಗಿಯೂ, ಯಾವುದಾದರೂ ಫೋಟೋ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಡುವುದಾಗಿ ಹೆದರಿಸುತ್ತಾರೆ. ಕ್ರೇಡಿಟ್ ರೇಟ್ ಕಡಿಮೆಯಾಗುತ್ತದೆ. ನಿಮ್ಮ ಮೇಲೆ 420, ಚೀಟಿಂಗ್ ಕೇಸ್ ಬುಕ್ ಮಾಡುವುದಾಗಿ ಹೇಳುತ್ತಾರೆ. ಕೆಲವೊಮ್ಮೆ ಪ್ರಕರಣ ದಾಖಲಾಗಿವೆ ಎಂದು ಹೇಳಿ ನಕಲಿ ಎಫ್ಐಆರ್ಯನ್ನು ಕಳಿಸುತ್ತಾರೆ. ನಿಮಗೆ ಇನ್ನು ಮುಂದೆ ಯಾವುದೇ ಬ್ಯಾಂಕಿನ ಸಾಲ ಸಿಗುವುದಿಲ್ಲ ಎಂದು ಹೆದರಿಸುತ್ತಾರೆ. ಸಾರ್ವಜನಿಕರು ಇಂತಹ ಲೋನ್ ಆ್ಯಪ್ನ್ನು ಡೌನ್ಲೋಡ್ ಮಾಡಬಾರದು ಇತರ ಯಾವುದೇ ಆ್ಯಪ್ ಡೌನ್ಲೋಡ್ ಮಾಡಿದರೂ ಕೂಡ ನಿಮ್ಮ ಮೊಬೈಲ್ ಕಾಂಟ್ಯಾಕ್ಟ್, ವಿಡಿಯೋ, ಫೋಟೋಸ್ ನೋಡಲು ಅನುಮತಿಯನ್ನು ನೀಡಬಾರದು. ಯಾವುದೇ ಲೋನ್ ಆ್ಯಪ್ ನ್ನು ಇನ್ ಸ್ಟಾಲ್ ಮಾಡುವಾಗ ಎಸ್ ಎಸ್ ಎಂದು ಎಲ್ಲಾದಕ್ಕೂ ಅನುಮತಿ ನೀಡಿ ತೊಂದರೆಯಲ್ಲಿ ಸಿಕ್ಕಿಹಾಕಿಕೊಳ್ಳಬಾರದು. ಅತ್ಯಂತ ಕಡಿಮೆ ಸಾಲವನ್ನು ನೀಡಿ ದುಬಾರಿ ಹಣವನ್ನು ಪಡೆಯುವುದು. ಒಂದು ವೇಳೆ ಲೋನ್ ಕಟ್ಟದಿದ್ದಲ್ಲಿ ನಿಮ್ಮ ಮೊಬೈಲ್ನಲ್ಲಿರುವ ಎಲ್ಲಾ ಮಾಹಿತಿಯನ್ನು ಇಟ್ಟುಕೊಂಡು ಹೆದರಿಸುವ ಮತ್ತು ಬ್ಲಾಕ್ಮೇಲ್ ಮಾಡಿ ಹಣವನ್ನು ವಸೂಲು ಮಾಡುತ್ತಿದ್ದು ಸಾರ್ವಜನಿಕರು ಜಾಗ್ರತೆ ವಹಿಸಬೇಕು ಎಂದು ಪೋಲಿಸ್ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮದುವೆಯ ವಾಹನದಂತೆ ಸಿಂಗರಿಸಿ ಗೋವುಗಳ ಅಕ್ರಮ ಸಾಗಾಟ ; 16 ಗೋವುಗಳ ರಕ್ಷಣೆ
Posted On: 12 Jan 2022, 05:06 PM
ಕಾಪು : ಬಜರಂಗದಳ ಮತ್ತು ಕಾಪು-ಶಿರ್ವ ಪೋಲೀಸರ ಕಾರ್ಯಾಚರಣೆಯಲ್ಲಿ ಇನ್ನೋವ ಕಾರು ಮತ್ತು ಪಿಕಪ್ ವಾಹನದಲ್ಲಿ ಅಕ್ರಮವಾಗಿ ಕದ್ದೊಯ್ಯುತ್ತಿದ್ದ 16 ಗೋವುಗಳ ರಕ್ಷಣೆ ಮಾಡಲಾಗಿದೆ. ಈ ಸಂದರ್ಭ ಎರಡು ದನ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ. ಪೋಲೀಸರ ಮತ್ತು ಹಿಂದೂ ಕಾರ್ಯಕರ್ತರ ಕಣ್ಣು ತಪ್ಪಿಸಲು ಗೋ ಕಳ್ಳತನದ ವಾಹನವನ್ನು ಮದುವೆಯ ವಾಹನದಂತೆ ಸಿಂಗರಿಸಲಾಗಿತ್ತು. ಅತಿ ವೇಗವಾಗಿ ಚಲಾಯಿಸುತ್ತಿದ್ದ ಇನ್ನೋವ ಮತ್ತು ಪಿಕಪ್ ವಾಹನವನ್ನು ಬಜರಂಗದಳದ ಕಾರ್ಯಕರ್ತರು ತಮ್ಮ ವಾಹನಗಳನ್ನು ಅಡ್ಡ ಇಟ್ಟು ವಾಹನವನ್ನು ವಶಪಡಿಸಿಕೊಳ್ಳಲಾಗಿತ್ತು.
