Updated News From Kaup

ಪಾಂಗಾಳ : ಆರೂಢ ಪ್ರಶ್ನೆಯಲ್ಲಿ ಗೋಚರಿಸಿತು ಪ್ರಾಚೀನ ಲಕ್ಷ್ಮೀನಾರಾಯಣ ವಿಗ್ರಹ

Posted On: 10-12-2021 08:14PM

ಕಾಪು : ಪಾಂಗಾಳ ಶ್ರೀ ಬ್ರಹ್ಮಲಿಂಗೇಶ್ವರ ಆದಿ ಆಲಡೆಯಲ್ಲಿ ಜೀರ್ಣೋದ್ಧಾರ ಕೆಲಸದ ಪೂರ್ವಭಾವಿಯಾಗಿ ಆರೂಢ ಪ್ರಶ್ನೆಯನ್ನು ನವೆಂಬರ್ 5 ರಂದು ಮಂಗಳೂರಿನ ಪ್ರಸಿದ್ಧ ಜ್ಯೋತಿಷ್ಯರಾದ ಶಶಿ ಕುಮಾರ್ ಪಂಡಿತ್ ಇವರ ನೇತೃತ್ವದಲ್ಲಿ , ಕ್ಷೇತ್ರದ ತಂತ್ರಿಗಳಾದ ಉಂಡಾರು ನಾಗರಾಜ ತಂತ್ರಿಗಳ ಉಪಸ್ಥಿತಿಯಲ್ಲಿ ಇರಿಸಲಾಗಿತ್ತು. ಇಟ್ಟಂತಹ ಪ್ರಶ್ನೆಯಲ್ಲಿ ಅಚ್ಛರಿಯ ವಿಷಯವೊಂದು ಗೋಚರವಾಗಿದೆ. ಸ್ಥಳದ ಚರಿತ್ರೆಯ ಬಗ್ಗೆ ಜಾಗದ ಬಗ್ಗೆ ವಿಮರ್ಶೆ ಮಾಡಿದ ಜ್ಯೋತಿಷ್ಯರು ಒಂದು ಅಚ್ಚರಿಯ ಸಂಗತಿಯನ್ನು ತಿಳಿಸಿದ್ದರು.ಅದೇನೆಂದರೆ ಈ ಪಾಂಗಾಳ ಆಲಡೆಯ ನೈರುತ್ಯ ಭಾಗದಲ್ಲಿ ಸರಿ ಸುಮಾರು ನೂರು ಮೀಟರ್ ನ ಅಂತರದಲ್ಲಿ ಪ್ರಾಚೀನ ಕಾಲದಲ್ಲಿ ಒಂದು ಮಠವಿತ್ತು,ಅದರಲ್ಲಿ ಅನೇಕ ವೈಷ್ಣವ ಸಂಬಂಧಿ ವಿಗ್ರಹಗಳ ಅವಶೇಷಗಳು,ತೀರ್ಥ ಬಾವಿ ಇದ್ದು ಇದೀಗ ಆ ಮಠವು ಸಂಪೂರ್ಣವಾಗಿ ನಾಶವಾಗಿದ್ದು ಅಲ್ಲಿನ ಎಲ್ಲಾ ಆರಾಧನಾ ವಸ್ತುಗಳು ಮಣ್ಣಿನಲ್ಲಿ ಅವಶೇಷವಾಗಿದೆ ,ಮಾತ್ರವಲ್ಲದೆ ಆ ಜಾಗದಲ್ಲಿ ಇದ್ದಂತಹ ಒಂದು ವಿಷ್ಣು ಸಾನಿಧ್ಯವು ಪಾಂಗಾಳ ಆಲಡೆಯಲ್ಲಿ ನಿಗೂಢವಾದ ರೀತಿಯಲ್ಲಿ ಬಂದು ಸೇರಿದ್ದು ಕ್ಷೇತ್ರಕ್ಕೆ ಬರುವ ಭಕ್ತ ಜನರ ಅಭೀಷ್ಟಗಳನ್ನು ಈ ಸಾನಿಧ್ಯವು ಮೂಲ ಬೆರ್ಮೆರ ಸಾನಿಧ್ಯದ ಜೊತೆಗೆ ನಿಂತು ಈಡೇರಿಸುತ್ತಿದೆ.

ಕರ್ನಾಟಕ ಸೊಸೈಟಿಸ್ ರಿಜಿಸ್ಟ್ರೇಷನ್ ಆಕ್ಟ್ 1960ರ ಅಡಿಯಲ್ಲಿ ನೋಂದಾಣಿಗೊಂಡ ‘ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ’ ಬಂಟಕಲ್ಲು

Posted On: 10-12-2021 08:07PM

ಕಾಪು : ಆಟೋರಿಕ್ಷಾ ಚಾಲಕರ ಮತ್ತು ಮಾಲಕರ ಸಂಘ (ರಿ.), ಬಂಟಕಲ್ಲು ಇದರ ಸಾಮಾನ್ಯ ಸಭೆ ಹಾಗೂ ಕರ್ನಾಟಕ ಸೋಸೈಟಿಸ್ ರಿಜಿಸ್ಟ್ರೇಷನ್ ಆಕ್ಟ್ 1960ರ ಅಡಿಯಲ್ಲಿ ನೋಂದಾಣಿಗೊಂಡ ಪ್ರಮಾಣ ಪತ್ರ ಹಸ್ತಾಂತರಿಸುವ ಕಾರ್ಯಕ್ರಮ ಡಿಸೆಂಬರ್ 7ರಂದು 92,ಹೇರೂರಿನ ಶ್ರೀ ಗುರುರಾಘವೇಂದ್ರ ಸಮಾಜಸೇವಾ ಮಂದಿರದಲ್ಲಿ ಸಂಘದ ಅಧ್ಯಕ್ಷರಾದ ಮಂಜುನಾಥ ಪೂಜಾರಿಯವರ ಅಧ್ಯಕ್ಷತೆಯಲ್ಲಿ ನೆರವೇರಿತು.

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಒಂದು ದಿನದ ಪೈತಾನ್ ಪ್ರೋಗ್ರಾಮಿಂಗ್ ಕಾರ್ಯಗಾರ

Posted On: 10-12-2021 08:03PM

ಶಿರ್ವ: ಇಂದು ಆಧುನಿಕ ತಂತ್ರಜ್ಞಾನದ ಅಭಿವೃದ್ಧಿಯಿಂದ ಎಲ್ಲಾ ಕ್ಷೇತ್ರಗಳಲ್ಲಿ ಕಂಪ್ಯೂಟರ್ ತಂತ್ರಾಂಶವನ್ನು ವಿನ್ಯಾಸಗೊಳಿಸಿ ವಿವಿಧ ಅಪ್ಲಿಕೇಶನ್ಗಳನ್ನು ರೂಪಿಸುವಲ್ಲಿ ಪೈತನ್ ಪ್ರೋಗ್ರಾಮ್ ಒಂದು ವಿಶಿಷ್ಟತೆಯನ್ನು ಹೊಂದಿದೆ . ಸ್ಮಾರ್ಟ್ ಫೋನ್ ಅಂತ ಸಾಧನೆಗಳನ್ನು ಪ್ರತಿಯೊಬ್ಬರು ಸುಲಭವಾಗಿ ಸದ್ಬಳಕೆ ಮತ್ತು ಸಮರ್ಪಕ ಕಾರ್ಯನಿರ್ವಹಣೆ ಮಾಡಲು ಇಂತಹ ತಾಂತ್ರಿಕತೆ ಅಗತ್ಯವಾಗಿದೆ ಎಂದು ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಡಾ|ನಾಗರಾಜ್ ಭಟ್ ಅವರು ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗ ಹಾಗೂ ಬಂಟಕಲ್ಲು ಶ್ರೀ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್,ಪರಸ್ಪರ ಒಡಂಬಡಿಕೆಯ ಅನ್ವಯ ಕಾಲೇಜಿನ ದೃಶ್ಯ-ಶ್ರಾವ್ಯ ಕೊಠಡಿಯಲ್ಲಿ ಏರ್ಪಡಿಸಿದ ಒಂದು ದಿನದ ಪೈತಾನ್ ಪ್ರೋಗ್ರಾಮಿಂಗ್ ಕಾರ್ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಚಿತ್ರನಟ ಸುದೀಪ್ ಭೇಟಿ

Posted On: 09-12-2021 09:16PM

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಚಿತ್ರನಟ ಸುದೀಪ್ ಗುರುವಾರ ಸಂಜೆ ಭೇಟಿ ನೀಡಿ, ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಸೇನಾ ಹೆಲಿಕಾಪ್ಟರ್ ದುರ್ಘಟನೆಯಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಕಾಪು ಬ್ಲಾಕ್ ಕಾಂಗ್ರೆಸ್ ದಕ್ಷಿಣ, ಹಿಂದುಳಿದ ವರ್ಗಗಳ ಘಟಕ

Posted On: 09-12-2021 09:11PM

ಕಾಪು : ಕಾಪು ಬ್ಲಾಕ್ ಕಾಂಗ್ರೆಸ್ ದಕ್ಷಿಣ ಹಾಗೂ ಕಾಪು ಬ್ಲಾಕ್ ಹಿಂದುಳಿದ ವರ್ಗಗಳ ಘಟಕದ ವತಿಯಿಂದ ತಮಿಳ್ ನಾಡು ಕುನೂರ್ ಸಮೀಪ ನಡೆದ ವಾಯುಪಡೆಯ ಹೆಲಿಕಾಪ್ಟರ್ ದುರ್ಘಟನೆಯಲ್ಲಿ ದುರ್ಮರಣ ಹೊಂದಿದಂತಹ ಜನರಲ್ ಬಿಪಿನ್ ರಾವತ್ ಹಾಗೂ ಇತರ 12ಮಂದಿಯ ಆತ್ಮ ಶಾಂತಿಗಾಗಿ ಶ್ರದ್ಧಾಂಜಲಿ ಸಭೆಯು ನಡೆಯಿತು.

ಅಂತರ್ ರಾಜ್ಯ ಕಳ್ಳರ ಬಂಧನ : ಚಿನ್ನದ ಒಡವೆಗಳ ವಶ

Posted On: 09-12-2021 04:57PM

ಸುರತ್ಕಲ್ : ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಚ್ ಪಿ ಸಿ ಎಲ್ ರಸ್ತೆ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ರಾಜನ್ ಎಂಬುವವನನ್ನು ಸುರತ್ಕಲ್ ಠಾಣಾ ಪೊಲೀಸರು ವಶಕ್ಕೆ ಪಡೆದು ವಿಚಾರಿಸಿದಾಗ ಕುಳಾಯಿ, ಕಾನ, ಹೊಸಬೆಟ್ಟು, ಕಡಂಬೋಡಿ ಕಡೆಗಳಲ್ಲಿ 2021 ನೇ ಇಸವಿಯ ಮನೆ ಕಳವು ಪ್ರಕರಣಗಳಲ್ಲಿ 4 ಪ್ರಕರಣಗಳ ಚಿನ್ನದ ಒಡವೆಗಳನ್ನು ಕಳವು ಮಾಡಿದ ಬಗ್ಗೆ ಮಾಹಿತಿಯನ್ನು ನೀಡಿದ ಮೇರೆಗೆ ಆರೋಪಿಯನ್ನು ದಸ್ತಗಿರಿ ಮಾಡಲಾಗಿತ್ತು.

ಪಡುಬಿದ್ರಿ : ರಾಜ್ಯಮಟ್ಟದ ಹೊರಾಂಗಣ ಬ್ಯಾಡ್ಮಿಂಟನ್ ಪಂದ್ಯಾಕೂಟ ಸ್ಮ್ಯಾಷಸ್೯ ಟ್ರೋಫಿ - 2021

Posted On: 09-12-2021 11:30AM

ಪಡುಬಿದ್ರಿ : ಸ್ಮ್ಯಾಷರ್ಸ್ ವೆಲ್‌ಫೇರ್‌ ಹಾಗೂ ಸ್ಪೋರ್ಟ್ಸ್ ಕ್ಲಬ್‌ ಬೇಂಗ್ರೆ ಪಡುಬಿದ್ರಿ, ನ್ಯಾಷನಲ್ ಇನ್ವೆಸ್ಟ್ಮೆಂಟ್ ಹೋಲ್ಡಿಂಗ್ ಕಂಪನಿ ಲಿ. ಒಮನ್ ಪ್ರಾಯೋಜಕತ್ವದಲ್ಲಿ ಅಧ್ಯಕ್ಷರಾದ ರಮೀಝ್ ಹುಸೇನ್ ಸಾರಥ್ಯದಲ್ಲಿ, ಗೌರವಾಧ್ಯಕ್ಷರಾದ ಮಹಮ್ಮದ್ ಕೌಸರ್ ಮಾರ್ಗದರ್ಶನದಲ್ಲಿ ಸಂಸ್ಥೆಯ ವಾರ್ಷಿಕೋತ್ಸವದ ಅಂಗವಾಗಿ ಹಾಗೂ ಬಡಕುಟುಂಬದ ವೈದ್ಯಕೀಯ ಸಹಾಯಾರ್ಥವಾಗಿ ರಾಜ್ಯಮಟ್ಟದ ಹೊರಾಂಗಣ ಬ್ಯಾಡ್ಮಿಂಟನ್ ಪಂದ್ಯಾಕೂಟ ಸ್ಮ್ಯಾಷಸ್೯ ಟ್ರೋಫಿ - 2021 ಡಿಸೆಂಬರ್ 11, ಶನಿವಾರ ಸಂಜೆ 8 ಗಂಟೆಗೆ ಪಡುಬಿದ್ರಿ ಬೇಂಗ್ರೆ ರಸ್ತೆಯ ಸ್ಮ್ಯಾಷರ್ಸ್ ಗೌಂಡ್ ಇಲ್ಲಿ ನಡೆಯಲಿದೆ.

ಬೆಳದಿಂಗಳ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಅಮಿತಾಂಜಲಿ ಕಿರಣ್ ಆಯ್ಕೆ

Posted On: 09-12-2021 11:01AM

ಉಡುಪಿ : ಡಾ. ಶಿವರಾಮ ಕಾರಂತ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯಿತಿ, ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ನಡೆಯುವ ಉಡುಪಿ ಜಿಲ್ಲೆಯ ಬೆಳದಿಂಗಳ ಸಾಹಿತ್ಯ ಸಮ್ಮೇಳನ ಚಿನಂಪ-2021ರ ಸಮ್ಮೇಳನಾಧ್ಯಕ್ಷೆಯಾಗಿ ಅಮಿತಾಂಜಲಿ ಕಿರಣ್ ಆಯ್ಕೆಯಾಗಿದ್ದಾರೆ.

ಡಾ. ಅರುಣ್ ಉಳ್ಳಾಲ್ ಇವರಿಗೆ ನಾರಾಯಣಗುರು ಸಂಶೋಧನಾ ಪ್ರಶಸ್ತಿ

Posted On: 09-12-2021 10:35AM

ಮಂಗಳೂರು : ಇಲ್ಲಿನ ವಿಶ್ವವಿದ್ಯಾನಿಲಯದ ಬ್ರಹ್ಮಶ್ರೀ ನಾರಾಯಣ ಗುರು ಅಧ್ಯಯನ ಪೀಠದ ವತಿಯಿಂದ 2021ರಿಂದ ಆರಂಭಗೊಂಡ 'ನಾರಾಯಣ ಗುರು ಸಂಶೋಧನಾ ಪ್ರಶಸ್ತಿ'ಗೆ ಉಪನ್ಯಾಸಕ, ಸಂಶೋಧಕ, ತುಳು, ಕನ್ನಡ ವಾಗ್ಮಿ ಡಾ. ಅರುಣ್ ಉಳ್ಳಾಲ್ ಇವರು ಆಯ್ಕೆಯಾಗಿದ್ದಾರೆ.

ಕುವೈಟ್‌ : ರಕ್ತದಾನ ಶಿಬಿರ

Posted On: 09-12-2021 09:47AM

ಕುವೈಟ್ : ಕನ್ನಡ ನಟ ಹಾಗೂ ಸಮಾಜ ಸೇವಕ ಪುನೀತ್ ರಾಜ್‌ಕುಮಾರ್ ಅವರ ಜೀವನ ಮತ್ತು ಕಾರ್ಯಗಳನ್ನು ಸ್ಮರಿಸಿ, ಗೌರವಿಸುವ ಸಲುವಾಗಿ ಕುವೈಟ್‌ನ ಭಾರತೀಯ ಪ್ರವಾಸಿ ಪರಿಷತ್ (ಬಿಪಿಪಿ) ಕರ್ನಾಟಕ ವಿಭಾಗ ಮತ್ತು ಬಿಡಿಕೆ ಕುವೈಟ್ ಜಂಟಿಯಾಗಿ ರಕ್ತದಾನ ಶಿಬಿರವನ್ನು ಆಯೋಜಿಸಿತು.