Updated News From Kaup

ಬಾಡಿಗೆ ಮನೆ ತೆರವಲ್ಲಿ ಮಧ್ಯಸ್ಥಿಕೆ ವಹಿಸಿದ ಕಾರಣಕ್ಕೆ ವ್ಯಕ್ತಿಯೋರ್ವರಿಗೆ ತಂಡದಿಂದ ಹಲ್ಲೆ, ಕೊಲೆ ಯತ್ನ

Thumbnail
Posted On: 02 Feb 2022, 08:29 PM

ಸುರತ್ಕಲ್ : ಇಲ್ಲಿನ ಠಾಣಾ ವ್ಯಾಪ್ತಿಯ ಕಾಟಿಪಳ್ಳ ಗ್ರಾಮದಲ್ಲಿ ಯುವಕರಿಬ್ಬರು ತಾವು ವಾಸವಿದ್ದ ಬಾಡಿಗೆ ಮನೆ ತೆರವಲ್ಲಿ ಮಧ್ಯಸ್ಥಿಕೆ ವಹಿಸಿದ್ದಾರೆ ಎಂಬ ಕಾರಣದಿಂದ ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸುರತ್ಕಲ್ ಠಾಣೆಯಲ್ಲಿ ದಾಖಲಾಗಿದೆ. ಮೊಹಮ್ಮದ್ ಅನಾಸ್ ರವರು ಫೆಬ್ರವರಿ 1ರಂದು ರಾತ್ರಿ 11-45ರ ಸುಮಾರಿಗೆ ತಮ್ಮ ಪರಿಚಯದ ಅಬೂಬಕರ್ ಮತ್ತು ಹ್ಯಾರಿಸ್ ರವರ ಬಳಿ ಅವರ ಮನೆಯ ಮುಂದೆ ನಿಂತು ಮಾತನಾಡುತ್ತಿರುವ ಸಮಯ ಆರೋಪಿಗಳಾದ ಚಾರು, ರವೂಫ್, ಅಕಿ, ಮುಸ್ತಫಾ @ ಅಪ್ಪು ಮತ್ತು ಇತರರೊಂದಿಗೆ ಸಮಾನ ಉದ್ದೇಶದಿಂದ ಮಾರಕಾಸ್ತ್ರಗಳೊಂದಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿದ್ದಾರೆ ಎಂದು ದೂರು ನೀಡಿದ್ದಾರೆ. ಈ ಬಗ್ಗೆ ಸುರತ್ಕಲ್ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.

ಮಾಚಿದೇವರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Thumbnail
Posted On: 01 Feb 2022, 09:04 PM

ಉಡುಪಿ : ಮಡಿವಾಳ ಮಾಚಿದೇವರಂತಹ ಮಹಾನ್ ಪುರುಷರ ತತ್ವ, ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಕರೆ ನೀಡಿದರು. ಅವರು ಇಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮದಲ್ಲಿ, ಮಡಿವಾಳ ಮಾಚಿದೇವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. 12 ನೇ ಶತಮಾನದಲ್ಲಿಯೇ ಸಮಾಜದಲ್ಲಿ ನಡೆಯುತ್ತಿದ್ದ ಶೋಷಣೆಯ ವಿರುದ್ಧ ಧ್ವನಿ ಎತ್ತಿದ್ದ ಮಡಿವಾಳ ಮಾಚಿದೇವ ಅವರು, ಮಹಿಳೆಯರಿಗೆ ಸಮಾನತೆ ಕಲ್ಪಿಸಬೇಕೆಂಬ ಅರಿವಿನ ಸಂದೇಶವನ್ನು ನೀಡಿದ್ದರು. ಪ್ರಕೃತಿ ಸೊಬಗನ್ನು ಸಂರಕ್ಷಿಸುವ ಬಗ್ಗೆ ಸಾರಿದ್ದ ಅವರು ಉತ್ತಮ ಪ್ರಕೃತಿಯನ್ನು ಉಳಿಸಿಕೊಂಡರೆ ಅದು ನಮ್ಮನ್ನು ರಕ್ಷಿಸುತ್ತದೆ ಎಂದಿದ್ದರು. ಇದು ಸರ್ವಕಾಲಿಕ್ಕೂ ಹಾಗೂ ಪ್ರಸ್ತುತವಾಗಿದೆ ಎಂದರು. ಮಡಿವಾಳ ಮಾಚಿದೇವರು ಕಾಯಕ, ನಿಷ್ಠೆಗೆ ಹೆಚ್ಚಿನ ಮಹತ್ವ ನೀಡಿದ್ದು, ಅವರ ಸಂದೇಶಗಳನ್ನು ನಮ್ಮ ದೈನಂದಿನ ಕಾರ್ಯದಲ್ಲಿ ಹಾಗೂ ಕರ್ತವ್ಯದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಜಿಲ್ಲಾ ರಜಕ ಯಾನೆ ಮಡಿವಾಳ ಸಂಘದ ಅಧ್ಯಕ್ಷ ಪ್ರದೀಪ್ ಸಾಗರ್ ಮಾತನಾಡಿ, 12 ನೇ ಶತಮಾನದಲ್ಲಿ ಬಸವಣ್ಣನ ಸಮಕಾಲೀನರಾಗಿದ್ದ ಮಡಿವಾಳ ಮಾಚಿದೇವರು ಅನುಭವ ಮಂಟಪದಲ್ಲಿ ಸಹಾ ಭಾಗಿಯಾಗಿದ್ದರು. ಬದುಕಿಗೆ ಸಾತ್ವಿಕತೆ ನೀಡಿ ಸತ್ಯ, ಶುದ್ಧ ಕಾಯಕ ಕೊಟ್ಟವರಾಗಿದ್ದರು. ಅರಸುತನ ಮೇಲಲ್ಲ ಅಗಸತನ ಕೀಳಲ್ಲ ಎಂಬುವುದನ್ನು ಸಾರಿದ್ದ ಅವರು, ಸಮಾಜದಲ್ಲಿನ ಅಸ್ಪೃಶ್ಯತೆಯ ವಿರುದ್ಧ ಸಮರ ಸಾರಿ, ವಚನ ಸಾಹಿತ್ಯದ ಸಂರಕ್ಷಣೆಗೆ ಮುಂದಾಗಿದ್ದರು ಎಂದರು. ಇದೇ ಸಂದರ್ಭದಲ್ಲಿ ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಿ, ಸರಕಾರದ ಸೌಲಭ್ಯಗಳನ್ನು ಒದಗಿಸಬೇಕೆಂಬ ಮನವಿಯನ್ನು ಜಿಲ್ಲಾಡಳಿತದ ಮೂಲಕ ಸರಕಾರಕ್ಕೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್, ವಾರ್ತಾಧಿಕಾರಿ ಬಿ. ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿದ್ದರು.

ಶಿರ್ವ : ಉದ್ಯೋಗಾಧಾರಿತ ಕೌಶಲ್ಯಾಭಿವೃದ್ಧಿ ತರಬೇತಿ, ಜಾಗೃತಿ

Thumbnail
Posted On: 31 Jan 2022, 05:41 PM

ಶಿರ್ವ:ಪ್ರಸ್ತುತ ದಿನದಿಂದ ದಿನಕ್ಕೆ ಉದ್ಯೋಗಕ್ಕಾಗಿ ಪೈಪೋಟಿ ಹೆಚ್ಚುತ್ತಿದ್ದು, ನಿವೇಶನ ನೀಡುವುದು ಸವಾಲಿನ ಕೆಲಸವಾಗಿ ಪರಿಣಮಿಸಿದೆ. ವಿದ್ಯಾರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಜೊತೆಗೆ ಹಳೆದು ಉನ್ನತ ಉದ್ಯೋಗಗಳಿಗೆ ಸಜ್ಜುಗೊಳಿಸುವುದುರಲ್ಲಿ ತರಬೇತಿ ಮತ್ತು ಜೀವನದ ವಿವಿಧ ಕೌಶಲ್ಯಗಳ ಸರಿಯಾದ ಮಾಹಿತಿ,ಮಾರ್ಗದರ್ಶನ ನೀಡುವುದರಲ್ಲಿ ಸಂಸ್ಥೆಯ ಜೊತೆಗೆ ಹೆತ್ತವರು ಹಾಗೂ ಪೋಷಕರ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಶಿರ್ವ ಸಂತ ಮೇರಿ ಕಾಲೇಜಿನ ಗಣಕ ವಿಜ್ಞಾನ ವಿಭಾಗ ಹಾಗೂ ಮಿಜಾರು ಮೈಟ್ ಕಾಲೇಜಿನ ಒಡಂಬಡಿಕೆ ಅನ್ವಯ ಏರ್ಪಡಿಸಿದ ಉದ್ಯೋಗಾಧಾರಿತ ಕೌಶಲ್ಯಾಭಿವೃದ್ಧಿ ತರಬೇತಿ, ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಿಜಾರು ಕಾಲೇಜಿನ ಪ್ರಾಧ್ಯಾಪಕ ಪ್ರೊ. ಜಯದೇವ ಪ್ರಸಾದ ಮೊಳೆಯಾರ ಮಾತನಾಡಿದರು. ಈ ಕಾರ್ಯಗಾರದಲ್ಲಿ ಮಿಜಾರು ಮೈಟ್ ಕಾಲೇಜಿನ ಪ್ರಾಧ್ಯಾಪಕ ವರುಣರವರು ಸಂಪನ್ಮೂಲ ವ್ಯಕ್ತಿಗಳಾಗಿ, ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಯ ಮೂಲಕ ವೃತ್ತಿಪರ ಸಂದರ್ಶನಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಿದರು. ಈ ಕಾರ್ಯಕ್ರಮದಲ್ಲಿ ಉಪನ್ಯಾಸಕ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಹಾಗೂ ಐಟಿ ಕ್ಲಬ್ ನಿರ್ದೇಶಕ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್, ಪ್ರಕಾಶ್, ಅಕ್ಷತಾ ರಾಜ್ , ದಿವ್ಯಶ್ರೀ , ಅಕ್ಷತಾ, ಬಿಸಿಎ ವಿಭಾಗದ ಒಟ್ಟು 121 ವಿದ್ಯಾರ್ಥಿಗಳು ಅಧ್ಯಾಪಕ ವೃಂದ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು.

ಹೆಜಮಾಡಿ : ಬೀಚ್ ಸ್ವಚ್ಛತೆ, ಜಲ ಜಾಗೃತಿ ಅಭಿಯಾನದ ತರಬೇತಿ ಕಾರ್ಯಕ್ರಮ

Thumbnail
Posted On: 30 Jan 2022, 10:59 PM

ಹೆಜಮಾಡಿ : ಭಾರತ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಉಡುಪಿ ಮತ್ತು ಗ್ರಾಮ ಪಂಚಾಯತ್, ಹೆಜಮಾಡಿ, ಕರಾವಳಿ ಯುವಕ-ಯುವತಿ ವೃಂದ (ರಿ.) ಹೆಜಮಾಡಿ, ವಿಜಯಾ ಕಾಲೇಜು, ಮುಲ್ಕಿ ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಎನ್‌ಸಿಸಿ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ, ಯೂತ್ ರೆಡ್ ಕ್ರಾಸ್ ಘಟಕ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹೆಜಮಾಡಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ಹಾಗೂ ಯುವ ಜನತೆಗೆ ಜಲ ಜಾಗೃತಿ ಅಭಿಯಾನದ ತರಬೇತಿ ಕಾರ್ಯಕ್ರಮ ಹೆಜಮಾಡಿಯ ಅಮಾವಾಸ್ಯೆ ಕರಿಯ ಕಡಲ ಕಿನಾರೆಯಲ್ಲಿ ಜರಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್. ಮೆಂಡನ್ ನಿರ್ವಹಿಸಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಸಂಘಟನೆಗಳ ಕಾರ್ಯ ಶ್ಲಾಘನೀಯ ಎಂದರು. ಅಭಿಯಾನಕ್ಕೆ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು ಚಾಲನೆ ನೀಡಿದರು. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ, ರಾಜ್ಯ ಸಂಪನ್ಮೂಲ ವ್ಯಕ್ತಿ ಮತ್ತು ತರಬೇತುದಾರಾದ ಜೋಸಫ್ ಜಿ. ಎಮ್ ರಬೆಲ್ಲೊ ಜಲ ಜಾಗೃತಿ ಬಗ್ಗೆ ಮಾಹಿತಿ ನೀಡಿದರು. ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ ಹೆಜಮಾಡಿ, ಸದಸ್ಯರಾದ ಹೇಮಾನಂದ ಪುತ್ರನ್, ಪಾಂಡುರಂಗ ಕರ್ಕೇರ ,ಲೀಲೇಶ್ ಸುವರ್ಣ, ರೇಷ್ಮಾ ಮೆಂಡನ್,ಉಡುಪಿ ನೆಹರು ಯುವ ಕೇಂದ್ರದ ಅಧಿಕಾರಿ ವಿಲ್ಫ್ರೆಡ್ ಡಿಸೋಜ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ನೀತಾ ಗುರುರಾಜ್, ಮುಲ್ಕಿ ವಿಜಯ ಕಾಲೇಜಿನ ಪ್ರಾಧ್ಯಾಪಕ ವೆಂಕಟೇಶ್ ಭಟ್, ಮೀನುಗಾರ ಮುಖಂಡ ನಾರಾಯಣ ಕೆ. ಮೆಂಡನ್, ಹೆಜಮಾಡಿ ಕರಾವಳಿ ಯುವಕ-ಯುವತಿ ವೃಂದದ ಅಧ್ಯಕ್ಷರುಗಳಾದ ಅಶೋಕ್ ವಿ ಕೆ, ಪವಿತ್ರಾ ಗಿರೀಶ್ ಮುಂತಾದವರು ಉಪಸ್ಥಿತರಿದ್ದರು.

ಇನ್ನಂಜೆ : ಮುದ್ದು ಪೂಜಾರಿ ಕಲ್ಲಿ ಮಾರು ನಿಧನ

Thumbnail
Posted On: 30 Jan 2022, 10:35 PM

ಕಾಪು : ಇನ್ನಂಜೆ ಬಿಲ್ಲವ ಸೇವಾ ಸಂಘದ ಹಿರಿಯರಾದ ಮುದ್ದು ಪೂಜಾರಿ ಕಲ್ಲಿ ಮಾರು ಇನ್ನಂಜೆ ಇವರು ಇಂದು ದೈವಾದೀನರಾಗಿದ್ದಾರೆ. ಮೃತರು ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

ಕೆಎಸ್ಎಸ್ಎಪಿ ಮಂಗಳೂರು ಆಶ್ರಯದಲ್ಲಿ ಕೆ.ಎಸ್.ನರಸಿಂಹಸ್ವಾಮಿ ಜನ್ಮದಿನದ ಅಂಗವಾಗಿ ಮಲ್ಲಿಗೆ ಕಂಪು, ವಿಚಾರ ಗೋಷ್ಠಿ, ಕವಿಗೋಷ್ಠಿ

Thumbnail
Posted On: 30 Jan 2022, 07:08 PM

ಮಂಗಳೂರು : ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಆಶ್ರಯದಲ್ಲಿ ರಾಣಿ ಪುಷ್ಪಲತಾ ದೇವಿ ಸಾರಥ್ಯದಲ್ಲಿ ಕನ್ನಡದ ಅದ್ವಿತೀಯ ಪ್ರೇಮ ಕವಿ ಕೆ.ಎಸ್.ನರಸಿಂಹಸ್ವಾಮಿ ಜನ್ಮದಿನದ ಅಂಗವಾಗಿ "ಮಲ್ಲಿಗೆ ಕಂಪು, ವಿಚಾರ ಗೋಷ್ಠಿ ಮತ್ತು ಕವಿಗೋಷ್ಠಿ ನಗರದ ಮಹಿಳಾ ಪದವಿಪೂರ್ವ ಕಾಲೇಜಿನ ಸರಸ್ವತಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ಕನ್ನಡ ಕಟ್ಟೆ ಅಧ್ಯಕ್ಷ ಡಾ.ಎಂ.ಅಣ್ಣಯ್ಯ ಕುಲಾಲ್ ಉಲ್ತೂರು ಮಾತನಾಡಿ " ಅನೇಕರು ಪ್ರಾಸ ಇರಬೇಕು ಎಂಬ ಕಾರಣಕ್ಕೆ ಏನೆಲ್ಲಾ ಶಬ್ದಗಳನ್ನು ಬಳಸಿ ಕವನಗಳನ್ನು ಕಟ್ಟುತ್ತಾರೆ ಆದ್ರೆ ಕವನಗಳು ಮನಸ್ಸಿನ ಭಾವನೆಯಿಂದ ಹುಟ್ಟಬೇಕು ಆಗ ಮಲ್ಲಿಗೆ ಕಂಪಿನಂತ ಸಾಹಿತ್ಯ ಪ್ರಕಾರ ಸಾದ್ಯ" ಎಂದು ಹೇಳಿದ ಅವರು ಕೆ.ಎಸ್.ನರಸಿಂಹಸ್ವಾಮಿ ತನ್ನ ಹೃದಯದ ಭಾವನೆಗಳಿಗೆ ಅಕ್ಷರ ರೂಪ ನೀಡಿರುದರಿಂದ ಇಂದಿಗೂ ಎಂದಿಂದಿಗೂ ಮೈಸೂರು ಮಲ್ಲಿಗೆ ಕಂಪು ಜೀವಂತವಾಗಿ ಇರುತ್ತದೆ ಎಂದು ಹೇಳಿದರು. ಉಪನ್ಯಾಸಕ ಮತ್ತು ಕವಿ ಡೊಂಬ್ಬಯ್ಯ ಇಡ್ಕಿದು ಮಾತನಾಡಿ ಕೆ.ಎಸ್.ನರಸಿಂಹಸ್ವಾಮಿಯವರದು ಪ್ರೇಮ ಗೀತೆ ಅಲ್ಲ. ದಾಂಪತ್ಯ ಗೀತೆ ಪ್ರೇಮದ ಚಿತ್ರಣವನ್ನು ಆದರ್ಶಿ ಕರಿಸಿರುವ ಜತೆಗೆ ಮನುಷ್ಯ ಸಹಜ ಭಾವನೆಗಳ ಬೆಲೆಯನ್ನು ಎತ್ತಿ ಹಿಡಿದ ಶ್ರೇಯಸ್ಸು ಅವರದು. ಅವರ ಪ್ರಕಾರ ಬದುಕಿನಲ್ಲಿ ಇರುವುದು ಸುಖವೊಂದೆ. ದು:ಖ ಎಂಬುವುದಿಲ್ಲ ಎಂಬುದು ಅವರ ನಿಲುವು. ಅವರ ಕವನಗಳು ಸಮಾಜದ ಕೌಟುಂಬಿಕ ಜೀವನದಲ್ಲಿ ಆದ ಮುಖ್ಯ ಬದಲಾವಣೆ ಯನ್ನು ಸೂಚಿಸುತ್ತದೆ ಎಂದರು. ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸತ್ವ ತತ್ವ ಭರಿತವಾಗಿ ಕವನ ಹುಟ್ಟುವ ಬಗೆಯ ವಿಶ್ಲೇಷಣೆ ಮಾಡುತ್ತಾ ಕವನ ಹುಟ್ಟದೇ ಬರೆಯಲಾಗದು. ಕಥೆ ಕಟ್ಟದೇ ಹುಟ್ಟಲಾರದು ಎಂದರು. ಕವಿಗಳ ಕವನದ ಸಾಧಕ ಬಾಧಕ ಚುಟುಕು ವಿಮರ್ಶೆ ಮಾಡಿದ ಚಿದಂಬರ ಬೈಕಂಪಾಡಿ ಕವಿಗಳಿಗೆ ಉತ್ತಮ ಮಾರ್ಗದರ್ಶನ ಮಾಡಿದರು. ಡಾ. ಸುರೇಶ್ ನೆಗಳಗುಳಿ, ಎನ್ಎಸ್.ಸಿ.ಡಿ.ಎಫ್ ಅಧ್ಯಕ್ಷ ಗಂಗಾಧರ್ ಗಾಂಧಿ, ಕವಿಗೋಷ್ಠಿಯ ಸಂಚಾಲಕಿ ಶಾಂತ ಪುತ್ತೂರು, ಪಿ.ವಿ.ಪ್ರದೀಪ್ ಕುಮಾರ್ ಹಾಗೂ ಖ್ಯಾತ ಸಾಹಿತಿ ಲಕ್ಷಣ್ ರಾವ್ ಉಪಸ್ಥಿತರಿದ್ದರು. ಕೆಎಸ್ಎಸ್ಎಪಿ ಅಧ್ಯಕ್ಷೆ ರಾಣಿ ಪುಷ್ಪಲತಾದೇವಿ ಸ್ವಾಗತಿಸಿದರು. ಕವಿಗಳಾದ ಡಾ. ವಾಣಿಶ್ರೀ ಕಾಸರಗೋಡು, ಗೀತಾ ಲಕ್ಷ್ಮೀಶ, ವಾಣಿ ಲೋಕಯ್ಯ, ರೇಮಂಡ್ ಡಿ ಕೂನ ತಾಕೊಡೆ, ಹಿತೇಶ್ ಕುಮಾರ್, ಕಾಸರಗೋಡು, ರೇಖಾ ಸುದೇಶ ರಾವ್, ಸೌಮ್ಯಾಗೋಪಾಲ್, ಶಿವರಾಜ್ ದೇವರ ಗುಡಿ, ಗೋಪಾಲಕೃಷ್ಣ ಶಾಸ್ತ್ರಿ, ಪ್ರೇಮಾ ಮುಲ್ಕಿ, ತಲ್ಲೂರು ಶರಣ, ಉಮೇಶ್ ಶಿರಿಯಾ, ದಿಯಾ ಉದಯ್ ಡಿ.ಯು, ಮರವಂತೆ ಪ್ರಕಾಶ ಪಡಿಯಾರ, ಅನುರಾಧಾ ರಾಜೀವ್ ಸುರತ್ಕಲ್, ಗುರುರಾಜ್ ಎಂ ಆರ್, ನವೀನ ಕುಲಾಲ್ ಚಿಪ್ಪಾರು, ಕು .ಸುಹಾನ ಸಯ್ಯದ್, ಬದ್ರುದ್ದೀನ್ ಕುಳೂರು, ಸೌಮ್ಯಾ ಆರ್ ಶೆಟ್ಟಿ, ಮಾನಸ ಪ್ರವೀಣ್ ಮೂಡು ಬಿದಿರೆ, ಮಹಮ್ಮದ್ ಮನ್ಸೂರ್ ಮುಲ್ಕಿ, ಬಾಲಕೃಷ್ಣ ಕೇಪುಳು, ಜಯಾನಂದ ಪೆರಾಜೆ, ಸುಮಂಗಳಾ ದಿನೇಶ್ ಶೆಟ್ಟಿ ಕುಂಪಲ, ಜಯಲಕ್ಷ್ಮಿ ಶರತ್ ಶೆಟ್ಟಿ ಕತ್ತರಿಕೋಡಿ, ಉಮೇಶ ಕಾರಂತ, ಲತೀಶ್ ಎಂ ಸಂಕೊಲಿಗೆ, ಸಂಭ್ರಮ ಕರ‍್ತಿಕ್ ಭಟ್, ಸೋಮಲಿಂಗ ಎಚ್ ಹಿಪ್ಪರಗಿ, ಮನೋಜ್ ಕುಮಾರ್ ಶಿರ‍್ಲ, ಶಿವಪ್ರಸಾದ್ ಕೊಕ್ಜಡ, ನಾರಾಯಣ ಕುಂಬ್ರ, ವಿಂಧ್ಯಾ ಎಸ್ ರೈ, ಗಳಿಂದ ಕವನ ವಾಚನ ನಡೆದುವು. ರಶ್ಮಿ ಸನಿಲ್ ರವರು ಕರ‍್ಯಕ್ರಮ ನಿರೂಪಿಸಿದರು. ಬಳಿಕ ಸಕಲ ಕವಿಗಳಿಗೂ ಅಭಿನಂದನಾ ಪತ್ರ ಸಹಿತ ಕೃತಿಗಳನ್ನು ನೀಡಲಾಯಿತು.

ಉಡುಪಿ- ದ.ಕ ಜಿಲ್ಲೆಯಲ್ಲಿ 1400 ಕಿಂಡಿ ಅಣೆಕಟ್ಟು ನಿರ್ಮಾಣ : ಸಚಿವ ಮಾಧುಸ್ವಾಮಿ

Thumbnail
Posted On: 30 Jan 2022, 06:49 PM

ಉಡುಪಿ : ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳಲ್ಲಿ 1400 ಕಿಂಡಿ ಅಣೆಕಟ್ಟುಗಳನ್ನು ಗುರುತಿಸಲು ಸ್ಥಳಗಳನ್ನು ಗುರುತಿಸಲಾಗಿದ್ದು ಈ ವರ್ಷ ಇದಕ್ಕಾಗಿ 500 ಕೋಟಿ ರೂ ಗಳನ್ನು ಬಿಡುಗಡೆ ಮಾಡಿ ಕಾರ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ರಾಜ್ಯದ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದರು. ಅವರು ಇಂದು ಹೆಬ್ರಿ ತಾಲೂಕಿನ ಶಿವಪುರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 560 ಲಕ್ಷ ರೂ ವೆಚ್ಚದಲ್ಲಿ 4 ಕಿಂಡಿ ಅಣೆಕಟ್ಟುಗಳನ್ನು ಕಾಮಗಾರಿಗಳನ್ನು ಉದ್ಘಾಟಿಸಿ ಮಾತನಾಡಿದರು. ಉಡುಪಿ ಮತ್ತು ದ.ಕನ್ನಡ ಜಿಲ್ಲೆಗಳಲ್ಲಿ ಹರಿದು ಸಮುದ್ರ ಸೇರುವ ನೀರನ್ನು ತಡೆದು ಕೃಷಿ, ಕುಡಿಯುವ ನೀರಿನ ಉದ್ದೇಶಕ್ಕೆ ಬಳಸಲು ಅನುಕೂಲವಾಗುವಂತೆ ಪಶ್ಚಿಮ ವಾಹಿನಿ ಯೋಜನೆಯನ್ನು ಬಜೆಟ್ ನಲ್ಲಿ ಘೋಷಿಸಿದ್ದು , 1400 ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲು ಸ್ಥಳ ಗುರುತಿಸಲಾಗಿದೆ. ಇದರಿಂದ ಈ ಭಾಗದಲ್ಲಿ ಅಂರ್ತಜಲ ವೃದ್ಧಿಯ ಜೊತೆಗೆ ,ಮಣ್ಣಿನ ಫಲವತ್ತತೆ ವೃಧ್ದಿ ಸಹ ಸಾಧ್ಯವಾಗಲಿದೆ ಎಂದು ಸಚಿವರು, ರಾಜ್ಯದಲ್ಲಿ ನೀರು ಹರಿಯುವ ಹಳ್ಳಗಳಲ್ಲಿ ಶೇಖರಣೆಯಾಗುವ ಹೂಳು ತೆಗೆಯಲೂ ಸಹ ಯೋಜನೆ ರೂಪಿಸಲಾಗುವುದು ಹೇಳಿದರು ಈ ಭಾಗದ ಡ್ರೀಮ್ಡ್ ಅರಣ್ಯ ಸಮಸ್ಯೆಗೆ ಸಂಬಂದಿಸಿದಂತೆ ಈಗಾಗಲೇ ರಾಜ್ಯದಲ್ಲಿ 7.70 ಲಕ್ಷ ಹೆಕ್ಟೇರ್ ಭೂಮಿಯನ್ನು ಡ್ರೀಮ್ಡ್ ವ್ಯಾಪ್ತಿಯಿಂದ ಕೈಬಿಡುವಂತೆ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಾಗಿದೆ. ಈ ಭೂಮಿಯನ್ನು ಅರ್ಹ ಭೂ ರಹಿತರಿಗೆ ನೀಡಲಾಗುವುದು ಎಂದು ಸಚಿವರು, ಈಗಾಗಲೇ ಅರಣ್ಯ ವ್ಯಾಪ್ತಿಯಲ್ಲಿನ ಸಣ್ಣ ಹಿಡುವಳಿದಾರರು ಮತ್ತು ಮನೆ ಕಟ್ಟಿಕೊಂಡಿರುವವರು ಎದುರಿಸುತ್ತಿರುವ ಡ್ರೀಮ್ಡ್ ಅರಣ್ಯದ ಸಮಸ್ಯೆ ಶೀಘ್ರದಲ್ಲಿ ಬಗೆಹರಿಯಲಿದೆ ಎಂದು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಮಾತನಾಡಿ, ಈ ಭಾಗದಲ್ಲಿ ಅಂರ್ತಜಲ ವೃದ್ಧಿಗೆ ಕಿಂಡಿ ಅಣೆಕಟ್ಟುಗಳನ್ನು ನಿರ್ಮಿಸಲಾಗುತ್ತಿದ್ದು, 2018 ರಿಂದ 2023 ರ ಅವಧಿಯೊಳಗೆ 100 ಕಿಂಡಿ ಅಣೆಕಟ್ಟು ನಿರ್ಮಿಸುವ ಯೋಜನೆಯಿದೆ ಎಂದು ಅವರು, ಡ್ರೀಮ್ಡ್ ಫಾರೆಸ್ಟ್ ನಿಂದ ಈ ಭಾಗದಲ್ಲಿ ಅಭಿವೃದ್ದಿ ಕುಂಠಿತವಾಗಿದ್ದು, ಪ್ರಸ್ತುತ ಸರಕಾರ ಡ್ರೀಮ್ಡ್ ಫಾರೆಸ್ಟ್ ನಿಂದ ಭೂಮಿಯನ್ನು ಕೈಬಿಡುವ ಕುರಿತಂತೆ ಸುಪ್ರೀಂಕೋಟ್ ಗೆ ಅಫಿಡವಿಟ್ ಸಲ್ಲಿಸಿದ್ದು, ಈ ಬಗ್ಗೆ ಶೀಘ್ರದಲ್ಲಿ ಸರ್ಕಾರದ ಸುತ್ತೋಲೆ ಆಗಲಿದೆ, ಜನರ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ ಎಂದರು. ಶಿವಪುರ ಗ್ರಾಮದ ದೇವಸ್ಥಾನಬೆಟ್ಟು ನಲ್ಲಿ 150 ಲಕ್ಷ ರೂ, ಪುತ್ತಿಬೆಟ್ಟು ನಲ್ಲಿ 150 ಲಕ್ಷ ರೂ , ಮುಕ್ಕಾಣಿ ಗೋನುಮಾರು ನಲ್ಲಿ 155 ಲಕ್ಷ ರೂ, ಕುಂಟೆಬೆಟ್ಟು ನಲ್ಲಿ 105 ಲಕ್ಷ ರೂ ಸೇರಿದಂತೆ ಒಟ್ಟು 560 ಲಕ್ಷ ರೂ ಗಳ ಕಿಂಡಿ ಆಣೆಕಟ್ಟು ಕಾಮಗಾರಿಗಳನ್ನು ಸಚಿವ ಮಾಧುಸ್ವಾಮಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಶಿವಪುರ ಗ್ರಾಮ ಪಂಚಾಯತ್ ಅಧ್ಯಕ್ಷ ಶೇಖರ್ ಶೆಟ್ಟಿ, ವರಂಗ ಗ್ರಾ.ಪಂ.ಅಧ್ಯಕ್ಷೆ ಉಷಾ ಹೆಬ್ಬಾರ್, ಸಣ್ಣ ನೀರಾವರಿ ಇಲಾಖೆ ಮುಖ್ಯ ಕಾರ್ಯದರ್ಶಿ ಮೃತ್ಯುಂಜಯ ಸ್ವಾಮಿ , ಮೆಸ್ಕಾಂನ ನಿರ್ದೇಶಕ ದಿನೇಶ್ ಪೈ ಮತ್ತಿತರರು ಉಪಸ್ಥಿತರಿದ್ದರು.

ಗೋವುಗಳ ಕಳ್ಳ ಸಾಗಾಣಿಕೆ ; ರಕ್ಷಣೆ : ಹಿಂದೂ ಸಂಘಟನೆಯ ಮಾಹಿತಿ, ಪೊಲೀಸರ ಕಾರ್ಯಾಚರಣೆ

Thumbnail
Posted On: 30 Jan 2022, 04:48 PM

ಕಾರ್ಕಳ : ಗೋವುಗಳ ಕಳ್ಳ ಸಾಗಾಣಿಕೆಯ ಬಗ್ಗೆ ಹಿಂದೂ ಸಂಘಟನೆಯ ಕಾರ್ಯಕರ್ತರ ಖಚಿತ ಮಾಹಿತಿಯನ್ನು ಆಧರಿಸಿ ಅಜೆಕಾರು ಠಾಣೆ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಹಲವಾರು ಗೋವುಗಳನ್ನು ರಕ್ಷಿಸಿದ ಘಟನೆ ನಡೆದಿದೆ. ಉದ್ಯಾವರ ಪಿತ್ರೋಡಿಯ ಚೇತು ಯಾನೆ ಚೇತನ್ ಎಂಬುವವನು ಗೋವುಗಳ ಸಾಗಾಟದ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಈ ಸಂದರ್ಭ ವಾಹನದಲ್ಲಿದ್ದ ಗೋವುಗಳನ್ನು ರಕ್ಷಿಸಲಾಗಿದೆ.

ಶಿರ್ವ :ಗ್ರಾಮ ಒನ್ ಉದ್ಘಾಟನೆ

Thumbnail
Posted On: 30 Jan 2022, 02:21 PM

ಶಿರ್ವ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಯೋಜನೆಯು ಶಿರ್ವ ಗ್ರಾಮದ ವ್ಯಾಪ್ತಿಯಲ್ಲಿ ಉದ್ಘಾಟನೆಗೊಂಡಿತು. 750ಕ್ಕೂ ಹೆಚ್ಚಿನ ಸೇವೆಗಳನ್ನು ಒಳಗೊಂಡ ಗ್ರಾಮ ಒನ್ ಕೇಂದ್ರವಾಗಿದ್ದು ಆಧಾರ್ , ಇ-ಸ್ಟ್ಯಾಂಪ್ ಹಾಗು ಸೇವಾ ಸಿಂಧುವಿನ ಎಲ್ಲ ಸೇವೆಗಳನ್ನು ಗ್ರಾಮೀಣ ಭಾಗದ ನಾಗರಿಕರಿಗೆ ಹಲವು ಸೇವೆಗಳನ್ನು ಒದಗಿಸುವ ಸೇವಾ ವೇದಿಕೆಯಾಗಿದೆ. ಕಾರ್ಯಕ್ರಮವನ್ನು ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೆ ಆರ್ ಪಾಟ್ಕರ್ ಉದ್ಘಾಟಿಸಿದರು . ಮುಖ್ಯ ಅಥಿತಿಗಳಾಗಿ ಶಿರ್ವ ಗ್ರಾಮ ಪಂಚಾಯತ್ ಗ್ರಾಮ ಲೆಕ್ಕಾಧಿಕಾರಿ ವಿಜಯ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನಂತ ಪದ್ಮನಾಭ ನಾಯಕ್, ಕಟ್ಟಡ ಮಾಲೀಕರಾದ ಸ್ಟಾನ್ಲಿ ಡಯಾಸ್, ರವಿರಾಜ್ ಸಾಲ್ಯಾನ್ ಮಲ್ಪೆ, ಹಿರಿಯ ವಿ.ಎಲ್. ಇ. ಉಡುಪಿ,ಶಿರ್ವ ಗ್ರಾಮ ಒನ್ ವ್ಯವಸ್ಥಾಪಕರಾದ ಪ್ರಜ್ವಲ್ ಬಿ ಕುಲಾಲ್ ಹಾಗೂ ಮತ್ತಿತರು ಉಪಸ್ಥಿತರಿದ್ದರು.

ಹೆಜಮಾಡಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ಹಾಗೂ ಯುವ ಜನತೆಗೆ ಜಲ ಜಾಗೃತಿ ಅಭಿಯಾನದ ತರಬೇತಿ ಕಾರ್ಯಕ್ರಮ

Thumbnail
Posted On: 29 Jan 2022, 07:49 PM

ಹೆಜಮಾಡಿ : ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಉಡುಪಿ ಮತ್ತು ಗ್ರಾಮ ಪಂಚಾಯತ್, ಹೆಜಮಾಡಿ, ಕರಾವಳಿ ಯುವಕ-ಯುವತಿ ವೃಂದ (ರಿ.) ಹೆಜಮಾಡಿ, ವಿಜಯಾ ಕಾಲೇಜು, ಮುಲ್ಕಿ ಇದರ ರಾಷ್ಟ್ರೀಯ ಸೇವಾ ಯೋಜನೆ ಘಟಕ, ಎನ್‌ಸಿಸಿ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕ, ಯೂತ್ ರೆಡ್ ಕ್ರಾಸ್ ಘಟಕ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹೆಜಮಾಡಿ ಬೀಚ್ ಸ್ವಚ್ಛತಾ ಕಾರ್ಯಕ್ರಮ ಹಾಗೂ ಯುವ ಜನತೆಗೆ ಜಲ ಜಾಗೃತಿ ಅಭಿಯಾನದ ತರಬೇತಿ ಕಾರ್ಯಕ್ರಮ ಜನವರಿ 30, ಆದಿತ್ಯವಾರ ಬೆಳಿಗ್ಗೆ ಗಂಟೆ 9ಕ್ಕೆ ಹೆಜಮಾಡಿಯ ಅಮಾವಾಸ್ಯೆ ಕರಿಯ ಕಡಲ ಕಿನಾರೆಯಲ್ಲಿ ಜರಗಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್. ಮೆಂಡನ್ ಮಾಡಲಿದ್ದು, ಅಭಿಯಾನಕ್ಕೆ ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಸದಾಶಿವ ಪ್ರಭು ಚಾಲನೆ ನೀಡಲಿದ್ದಾರೆ. ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ, ರಾಜ್ಯ ಸಂಪನ್ಮೂಲ ವ್ಯಕ್ತಿ ಮತ್ತು ತರಬೇತುದಾರಾದ ಜೋಸಫ್ ಜಿ. ಎಮ್ ರಬೆಲ್ಲೊ, ವಿವಿಧ ಕ್ಷೇತ್ರದ ಗಣ್ಯರು, ರಾಜಕೀಯ ಮುಖಂಡರು, ಸಂಘಸಂಸ್ಥೆಗಳ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.