Updated News From Kaup

ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಉಡುಪಿ : ವಾರ್ಷಿಕ ಸಾಮಾನ್ಯ ಸಭೆ

Posted On: 01-12-2021 05:40PM

ಉಡುಪಿ : ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಉಡುಪಿ, ಇದರ 2020 - 2021ನೇ ಸಾಲಿನ 19ನೇ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ನವೆಂಬರ್ 28, ಭಾನುವಾರ ಬಿಲ್ಲವರ ಸೇವಾ ಸಂಘ (ರಿ), ಬನ್ನಂಜೆ ಉಡುಪಿ ಇದರ ಶಿವಗಿರಿ ಸಭಾಂಗಣದಲ್ಲಿ ಜರುಗಿತು.

700ಕ್ಕೂ ಅಧಿಕ ಮಕ್ಕಳ ಪಾಲಿಗೆ ಅನ್ನದಾತ, ನಿತ್ಯ ಅನ್ನದಾನ ಸೇವೆಯಲ್ಲಿ ತೊಡಗಿರುವ ಕೆ. ಪಿ. ಶ್ರೀನಿವಾಸ ತಂತ್ರಿ

Posted On: 01-12-2021 04:25PM

ಸಂಪಾದಿಸಿದ ಹಣವನ್ನು ಖರ್ಚು ಮಾಡದೇ ಬ್ಯಾಂಕ್ ನಲ್ಲಿ ಕೋಟ್ಯಂತರ ಹಣವನ್ನು ಭದ್ರವಾಗಿ ಇಟ್ಟವರ ನಡುವೆ ದೇವರಿಂದ ಪಡೆದದ್ದು ದೇವರಂತಹ ಮಕ್ಕಳಿಗೆ ಕೊಡೋಣ ಎನ್ನುವ ಇಚ್ಛೆಯುಳ್ಳ ವ್ಯಕ್ತಿ ಕೆ.ಪಿ. ಶ್ರೀನಿವಾಸ ತಂತ್ರಿ.

ಕಾಪು : ಪುನೀತ್ ರಾಜ್ ಕುಮಾರ್ ರವರ ಸ್ಮರಣಾರ್ಥ -ಅಪ್ಪು ಟ್ರೋಫಿ 2021

Posted On: 30-11-2021 08:43PM

ಕಾಪು : ಅಪ್ಪು ಟ್ರೋಫಿ 2021 ಪುನೀತ್ ರಾಜ್ ಕುಮಾರ್ ರವರ ಸ್ಮರಣಾರ್ಥವಾಗಿ ಕಾಪು ಪುರಸಭೆ ವ್ಯಾಪ್ತಿ, ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿ, ಇನ್ನಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಆಟಗಾರರಿಗಾಗಿ ಕಾಪು ಪ್ರೀಮಿಯರ್ ಲೀಗ್ 2021 ಕ್ರಿಕೆಟ್ ಪಂದ್ಯಾಟವು ಡಿಸೆಂಬರ್ 5 ರಂದು ಕಾಪುವಿನ ದಂಡತೀರ್ಥ ಶಾಲೆಯ ಮೈದಾನದಲ್ಲಿ ನಡೆಯಲಿದೆ.

ಬಿಜೆಪಿ ಪಕ್ಷದಿಂದ ಕಾಪು ವಿಧಾನಸಭಾ ಕ್ಷೇತ್ರಾದ್ಯಂತ ವಿಧಾನ ಪರಿಷತ್ ಚುನಾವಣಾ ಸರಣಿ ಸಭೆಗಳು

Posted On: 29-11-2021 10:10PM

ಕಾಪು : ಬಿಜೆಪಿ ಪಕ್ಷದಿಂದ ಕಾಪುವಿಧಾಸಭಾ ಕ್ಷೇತ್ರಾದ್ಯಂತ ವಿಧಾನ ಪರಿಷತ್ ಚುನಾವಣಾ ಪೂರ್ವಭಾವಿಯಾಗಿ ಸರಣಿ ಸಭೆಗಳು ನಡೆದವು.

ಆಳ್ವಾಸ್ ನಿಂದ ಕೆಸರ್ಡ್ ಒಂಜಿ ದಿನ : ಕೃಷಿ ಸಾಧಕರಾದ ರಾಜು ಗೌಡ, ವಾರಿಜ ಮಿಜಾರು ಅವರಿಗೆ ಸನ್ಮಾನ

Posted On: 29-11-2021 09:54PM

ಮೂಡುಬಿದಿರೆ : ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯ ಮಿಜಾರು ಇದರ ಮಾಹಿತಿ ತಂತ್ರಜ್ಞಾನ ವಿಭಾಗದ ವತಿಯಿಂದ ಕೆಸರ್‌ಡ್ ಒಂಜಿ ದಿನ -2021 ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ಮಿಜಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಎದುರು ಭಾಗದ ಗದ್ದೆಯಲ್ಲಿ ನಡೆಯಿತು. ಕೃಷಿ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಪ್ರಗತಿಪರ ಕೃಷಿಕರಾದ ರಾಜು ಗೌಡ ಅರೆಮಜಲು ಪಲ್ಕೆ ಮತ್ತು ಕೃಷಿ ಕಾರ್ಮಿಕೆ ವಾರಿಜ ಮಿಜಾರು ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.

ಪೆರ್ಡೂರು ಅಲಂಗಾರು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ಕಾಯಿದ ಪೂಜೆ

Posted On: 29-11-2021 09:48PM

ಪೆರ್ಡೂರು : ಪೆರ್ಡೂರು ಅಲಂಗಾರು ಶ್ರೀ ಬ್ರಹ್ಮಬೈದರ್ಕಳ ಗರಡಿಯಲ್ಲಿ ವರ್ಷಂಪ್ರತಿ ಜರಗುವ ಕಾಯಿದ ಪೂಜೆಯು ಡಿಸೆಂಬರ್‌ 2 ರಂದು ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಡಿಸೆಂಬರ್ 4 : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪೆರಂಪಳ್ಳಿ - ವಾರ್ಷಿಕ ದೀಪೋತ್ಸವ, ಭಜನಾ ಕಾರ್ಯಕ್ರಮ, ತುಳಸಿ ಸಂಕೀರ್ತನೆ

Posted On: 29-11-2021 06:50PM

ಉಡುಪಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಪೆರಂಪಳ್ಳಿಯ ವಾರ್ಷಿಕ ದೀಪೋತ್ಸವ ಡಿಸೆಂಬರ್ 4, ಶನಿವಾರದಂದು ಜರಗಲಿದೆ.

ಯುವಜನರ ಆರೋಗ್ಯಪೂರ್ಣ ಮನಸ್ಸಿಗಾಗಿ ಯೋಗ - ಇದೇ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ಮಂತ್ರ - ಡಾ| ಹೆರಾಲ್ಡ್ ಐವನ್ ಮೋನಿಸ್

Posted On: 29-11-2021 06:36PM

ಶಿರ್ವ: ಯೋಗದಿಂದ ದೇಹ ಮತ್ತು ಮನಸ್ಸನ್ನು ನಿಯಂತ್ರಿಸಿಕೊಳ್ಳುವ ಮೂಲಕ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದೆಂದು ಶಿರ್ವ ವಲಯ ಪತಂಜಲಿ ಯೋಗ ಸಮಿತಿಯ ಯೋಗಗುರುಗಳಾದ ರಂಜಿತ್ ಪುನರ್ ರವರು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ಮತ್ತು ಫಿಟ್ನೆಸ್ ಸೆಲ್ ಹಾಗೂ ಎನ್.ಸಿ.ಸಿ ಸಂಯುಕ್ತವಾಗಿ ಏರ್ಪಡಿಸಿದ ಯೋಗ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉದ್ಘಾಟಿಸಿ ಮಾತನಾಡಿದರು.

ಬಂಟಕಲ್‍ನಲ್ಲಿ ಕನ್ನಡ ಜಾನಪದ ರಾಜ್ಯೋತ್ಸವ, ವಿವಿಧ ಸಾಧಕರಿಗೆ ಸನ್ಮಾನ

Posted On: 28-11-2021 11:54AM

ಕಾಪು : ನಮ್ಮ ನಾಡಿನ ಪುರಾತನ ಸಾಂಪ್ರದಾಯಿಕ ಜನಪದ ಸೊಬಗು ಇಂದಿನ ಯುವಪೀಳಿಗೆಗೆ ಕಟ್ಟುಕತೆಯಂತೆ ಭಾಸವಾಗಬಹುದು. ಆದರೆ ಜಾನಪದ ಎಂಬುದು ವಾಸ್ತವ ಸತ್ಯವಾಗಿದೆ. ಕುದುರೆ ರೇಸ್‍ನಂತಹ ಜೂಜಾಟವನ್ನು ನಿಲ್ಲಿಸದೆ ಜನರ ಮನೋರಂಜನಾ ಜಾನಪದ ಕ್ರೀಡೆಗಳಾದ ಕೋಳಿಅಂಕ, ಕಂಬಳದಂತಹ ಕ್ರೀಡೆಗಳನ್ನು ನಿರ್ಬಂಧಿಸಲು ಪ್ರಯತ್ನ ಪಡುವುದು ದುರಂತವಾಗಿದೆ. ಇದಕ್ಕೆ ಜಾನಪದ ಪರಿಷತ್ ನಂತಹ ಸಂಘಟನೆಗಳು ಸರಕಾರವನ್ನು ಪ್ರಶ್ನಿಸಬೇಕಾಗಿದೆ ಎಂದು ಬಂಟಕಲ್ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕಾರ್ಯದರ್ಶಿ ರತ್ನಕುಮಾರ್ ತಿಳಿಸಿದ್ದಾರೆ. ಅವರು ಕನ್ನಡ ಜಾನಪದ ಪರಿಷತ್ ಬೆಂಗಳೂರು, ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕ, ಕನ್ನಡ ಜಾನಪದ ಪರಿಷತ್ ಕಾಪು ತಾಲೂಕು ಘಟಕ ಮತ್ತು ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ಬಂಟಕಲ್ ಇವರ ಸಂಯುಕ್ತ ಆಶ್ರಯದಲ್ಲಿ ಶನಿವಾರ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಕನ್ನಡ ಜಾನಪದ ರಾಜ್ಯೋತ್ಸವ-2021 ಕಾರ್ಯಕ್ರಮವನ್ನು ಉದ್ಘಾಟಿಸಿ, ವಿವಿಧ ಸಾಧಕರನ್ನು ಗೌರವಿಸಿ ಮಾತನಾಡಿದರು. ಪ್ರಸ್ತುತ ಜಾನಪದದ ಬಗ್ಗೆ ಮಕ್ಕಳಿಗೆ ತಿಳಿಸುವ ಅನಿವಾರ್ಯತೆಯಿದೆ. ಅದರ ಆಳ, ಅರಿವಿನ ಸಂಶೋಧನೆಗಳಾಗಬೇಕಾಗಿದ್ದು,ಜಾನಪದ ದಾಖಲೀಕರಣ ಪ್ರಕ್ರಿಯೆಗಳಿಗೆ ನಮ್ಮ ಸಂಸ್ಥೆ ಸದಾ ಪ್ರೋತ್ಸಾಹಿಸಲಿದೆ ಎಂದರು.

ಶಿರ್ವ ಮಹಿಳಾ ಮಂಡಲ ವತಿಯಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಣೇಶ್ ಪಂಜಿಮಾರ್ ಗೆ ಸನ್ಮಾನ

Posted On: 28-11-2021 11:32AM

ಕಾಪು :ವಿಶೇಷ ಚೇತನ ಪ್ರತಿಭೆ ಗಣೇಶ್ ಪಂಜಿಮಾರ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸಲುವಾಗಿ ಶನಿವಾರ ಶಿರ್ವ ಮಹಿಳಾ ಮಂಡಲ (ರಿ.) ಇದರ ಸರ್ವ ಪದಾಧಿಕಾರಿಗಳು ಗಣೇಶ್ ಪಂಜಿಮಾರ್ ಅವರ ಮನೆಗೆ ಆಗಮಿಸಿ ಪ್ರೀತಿ ಪೂರ್ವಕವಾಗಿ ಸನ್ಮಾನಿಸಿದರು.