Updated News From Kaup
ಜಿಲ್ಲೆಯ ಅಭಿವೃದ್ದಿಯಲ್ಲಿ ಯುವ ಜನತೆಯ ಪಾತ್ರ ಮಹತ್ವವಾದುದು : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
Posted On: 28-11-2021 11:27AM
ಉಡುಪಿ : ಜಿಲ್ಲೆಯ ಅಭಿವೃದ್ದಿಗೆ ಯುವಜನತೆ ನೀಡುವ ಸಹಕಾರ ಅತ್ಯಂತ ಮಹತ್ವವಾಗಿದ್ದು, ಜಿಲ್ಲೆಯಲ್ಲಿನ ವಿವಿಧ ಯೋಜನೆಗಳ ಪ್ರಗತಿಗೆ ಯುವಜನತೆ ಉತ್ತಮ ಸಹಕಾರ ನೀಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಶನಿವಾರ ಉಡುಪಿ ಪುರಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ,ಉಡುಪಿ, ಐಕ್ಯುಎಸಿ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಇವರ ಸಹಕಾರದೊಂದಿಗೆ ನಡೆದ ,ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ 73ನೇ ಎನ್.ಸಿ.ಸಿ ದಿನಾಚರಣೆ
Posted On: 28-11-2021 11:16AM
ಶಿರ್ವ: ಇಂದು ಯುವಜನರಲ್ಲಿ ದೇಶಭಕ್ತಿ, ಶಿಸ್ತು, ಸಮಯ ಪ್ರಜ್ಞೆ ಮೂಡಿಸುವ ಸಂಘಟನೆಗಳಲ್ಲಿ ವಿಶ್ವದ ಅತಿ ದೊಡ್ಡ ಯುವ ಸಂಘಟನೆಯಾದ ನ್ಯಾಷನಲ್ ಕೆಡೆಟ್ ಕಾರ್ಪ್ಸ್(ಎನ್.ಸಿ.ಸಿ) ಒಂದಾಗಿದೆ. ಯುವಜನರಲ್ಲಿ ರಾಷ್ಟ್ರಪ್ರೇಮ,ಸಮಾಜ ಸೇವಾಗುಣಗಳನ್ನು, ತಮ್ಮ ವ್ಯಕ್ತಿತ್ವ ವಿಕಸನ,ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಮಾತ್ರವಲ್ಲದೆ ಉತ್ತಮ ಉದ್ಯೋಗ ಅವಕಾಶಗಳನ್ನು ಪಡೆದುಕೊಳ್ಳಲು ಎನ್.ಸಿ.ಸಿ ಸಹಕಾರಿ. ಇಂದು ಬಹಳಷ್ಟು ಪ್ರಮುಖರು ಎನ್.ಸಿ.ಸಿಯ ಹಳೆವಿದ್ಯಾರ್ಥಿಗಳು ಆಗಿರುವುದು ಗಮನಾರ್ಹ ಎಂದು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕಾಲೇಜಿನ ಭೂ ಯುವ ಸೇನಾ ದಳದಿಂದ ಏರ್ಪಡಿಸಿದ 73ನೇ ಎನ್.ಸಿ.ಸಿಯ ದಿನಾಚರಣೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿ ಎಲ್ಲರಿಗೂ ಶುಭಹಾರೈಸಿದರು.
ಪಡುಬೆಳ್ಳೆ : ಶ್ರೀ ನಾರಾಯಣಗುರು ಪ್ರೌಢಶಾಲೆಯಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಸೈಬರ್ ಜಾಗೃತ ದಿವಸ್ ಕಾರ್ಯಕ್ರಮ
Posted On: 28-11-2021 11:09AM
ಕಟಪಾಡಿ : ಶ್ರೀ ನಾರಾಯಣಗುರು ಪ್ರೌಢಶಾಲೆ ಪಡುಬೆಳ್ಳೆ ಇಲ್ಲಿ ಲಯನ್ಸ್ ಕ್ಲಬ್ ಬಂಟಕಲ್ ಬಿಸಿರೋಡ್ ಮತ್ತು ಲಯನ್ಸ್ ಕ್ಲಬ್ ಬಂಟಕಲ್ ಜಾಸ್ಮಿನ್ ಇವರ ಸಂಯುಕ್ತಾಶ್ರಯದಲ್ಲಿ ಸೈಬರ್ ಜಾಗೃತ ದಿವಸ್ ಕಾರ್ಯಕ್ರಮ ಜರಗಿತು.
ಕಲ್ಲುಗುಡ್ಡೆ : ಸಾರ್ವಜನಿಕ ಶ್ರೀ ಪಂಚದೈವಿಕ ನಾಗಬ್ರಹ್ಮಸ್ಥಾನದಲ್ಲಿ ದೀಪಸಂಭ್ರಮ, ಭಜನೆ ಸಂಪನ್ನ
Posted On: 28-11-2021 10:56AM
ಕಾಪು : ಸಾರ್ವಜನಿಕ ಶ್ರೀ ಪಂಚದೈವಿಕ ನಾಗಬ್ರಹ್ಮಸ್ಥಾನ ಕುಂಜ ಕಲ್ಲುಗುಡ್ಡೆ ಕ್ಷೇತ್ರದಲ್ಲಿ ನ.26 ಶುಕ್ರವಾರ ದೀಪಸಂಭ್ರಮ ಮತ್ತು ಭಜನಾ ಕಾರ್ಯಕ್ರಮ ಸಂಪನ್ನಗೊಂಡಿತು.
ಡಿಸೆಂಬರ್ 1 : ಕಳತ್ತೂರು ಪುಂಚಲಕಾಡು ಚಚ್೯ಗೆ ಸುವರ್ಣ ಮಹೋತ್ಸವದ ಸಂಭ್ರಮ
Posted On: 26-11-2021 10:59PM
ಕಾಪು :ಕುತ್ಯಾರು ಭಾಗದ ಕಳತ್ತೂರು ಚರ್ಚ್ ಐವತ್ತನೇ ವರ್ಷದ ಸುವರ್ಣ ಮಹೋತ್ಸವದ ಸಂಭ್ರಮದಲ್ಲಿದ್ದು ಡಿಸೆಂಬರ್ ತಿಂಗಳ ಒಂದರಂದು ಚರ್ಚ್ನಲ್ಲಿ ಅನೇಕ ಕಾರ್ಯಕ್ರಮಗಳು ನಡೆಯಲಿವೆ.
ಕುಲಾಲ ಚಾವಡಿಯಿಂದ ಧನ ಸಹಾಯ
Posted On: 26-11-2021 10:48PM
ಕಾಪು : ಕೈ ಹಿಡಿದ ಪತಿಯಿಂದ ಪರಿತ್ಯಕ್ತರಾಗಿ ತವರು ಮನೆ ಸೇರಿದ್ದ ಸುನೀತಾರ ಬದುಕಿಗೆ ಕಾಡಿದ ಹೃದ್ರೋಗದ ಖಾಯಿಲೆಯು ಅವರನ್ನು ಹಣ್ಣುಗಾಯಿ ನೀರುಗಾಯಿ ಮಾಡಿತ್ತು. ದೈಹಿಕ ಮಾನಸಿಕ ನೋವನ್ನು ಅವುಡುಗಚ್ಚಿ ಸಹಿಸಿಕೊಂಡರೂ ದೇಹಕ್ಕಂಟಿದ ಖಾಯಿಲೆಯ ಚಿಕಿತ್ಸೆಗೆ ತಗಲುವ ವೆಚ್ಚಕ್ಕೇನು ಎಂಬುವುದು ಅವರ ನಿತ್ಯ ಕಾಡುವ ಚಿಂತೆಯಾಗಿತ್ತು. ಅನಾಥೋ ದೈವ ರಕ್ಷಕ ಅನ್ನುವಂತೆ ಆ ಕ್ಷಣಕ್ಕೆ ಅವರಿಗೆ ಕಂಡಿದ್ದು ಕುಲಾಲ ಚಾವಡಿಯ ಸಹೃದಯಿಗಳು.
ಜಿಲ್ಲಾಮಟ್ಟದ ದೂರ ಸಂಪರ್ಕ ಸಮನ್ವಯ ಸಮಿತಿ ಸಭೆ - ನೆಟ್ವರ್ಕ್ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ
Posted On: 26-11-2021 06:18PM
ಉಡುಪಿ : ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ಮೊಬೈಲ್ ನೆಟ್ವರ್ಕ್ ಸಮಸ್ಯೆಯನ್ನು ಶೀಘ್ರದಲ್ಲಿ ಪರಿಹರಿಸುವಂತೆ ಜಿಲ್ಲೆಯಲ್ಲಿನ ವಿವಿಧ ಮೊಬೈಲ್ ಸಂಸ್ಥೆಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಗುರುವಾರ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ನಡೆದ, ಜಿಲ್ಲಾಮಟ್ಟದ ದೂರ ಸಂಪರ್ಕ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ: ಕಡತಗಳ ಶೀಘ್ರ ವಿಲೇವಾರಿಗೆ ಜಿಲ್ಲಾಧಿಕಾರಿ ಆದೇಶ
Posted On: 26-11-2021 06:11PM
ಉಡುಪಿ : ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಜಿಲ್ಲೆಯ ಎಲ್ಲಾ ಕಚೇರಿಗಳ ಕಡತಗಳನ್ನು ಕಾಲಮಿತಿಯಲ್ಲಿ ಶೀಘ್ರದಲ್ಲಿ ವಿಲೇವಾರಿ ಮಾಡುವಂತೆ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ, ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆ ಬೋಧಿಸಿ, ನಂತರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾಧಿಕಾರಿಗಳಿಂದ ಸಂವಿಧಾನ ಪೀಠಿಕೆ ಬೋಧನೆ
Posted On: 26-11-2021 06:05PM
ಉಡುಪಿ : ಸಂವಿಧಾನ ದಿನದ ಅಂಗವಾಗಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್ನಲ್ಲಿ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ಸಂವಿಧಾನ ದಿನದ ಪೀಠಿಕೆಯನ್ನು ಬೋಧಿಸಿದರು.
ನಿರಂತರ ಪರಿಶ್ರಮದಿಂದ ಕಲಾಸಾಧನೆ ಸಾಧ್ಯ: ಡಾ. ಗಣೇಶ್ ಗಂಗೊಳ್ಳಿ ಅಭಿಮತ
Posted On: 26-11-2021 05:45PM
ಕಾಪು : ಕಲೆಯು ಯಾವಾಗಲೂ ಓರ್ವ ಸಾಧಕನ ಸ್ವತ್ತು. ತನ್ನ ಆಯ್ದ ಕ್ಷೇತ್ರದಲ್ಲಿ ಸಾಧನೆಗೈಯಲು ಶೃದ್ಧೆ, ಸತತ ಪರಿಶ್ರಮ, ಆತ್ಮವಿಶ್ವಾಸ ಹಾಗೂ ವಿನಮ್ರತೆ ಅಗತ್ಯ. ಜೀವನದಲ್ಲಿ ಬರುವ ಅಡೆತಡೆಗಳನ್ನೆದುರಿಸಿ ಸಾಧನೆಯ ಹಾದಿಯಲ್ಲಿ ದೃಢ ಸಂಕಲ್ಪದೊಂದಿಗೆ ಹೆಜ್ಜೆಯಿಡಬೇಕು. ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಸೂರ್ಯ ಚೈತನ್ಯ ಸಂಸ್ಥೆಯ ಪ್ರಯತ್ನ ಶ್ಲಾಘನೀಯ ಎಂದು ಕನ್ನಡ ಜಾನಪದ ಪರಿಷತ್ ನ ಉಡುಪಿ ಜಿಲ್ಲಾಧ್ಯಕ್ಷ , ಖ್ಯಾತ ಜಾನಪದ ಗಾಯಕ ಡಾ. ಗಣೇಶ್ ಗಂಗೊಳ್ಳಿ ಹೇಳಿದರು. ಅವರು ಕುತ್ಯಾರು ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ ವತಿಯಿಂದ ನಡೆದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.
