Updated News From Kaup

ಸಾಲದ ಹೊರೆ : ಯುವಕ ಆತ್ಮಹತ್ಯೆ

Thumbnail
Posted On: 10 Jan 2022, 04:59 PM

ಮುಲ್ಕಿ : ಸಾಲದ ಹೊರೆಯಿಂದ ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ ಯುವಕನೋರ್ವ ಕೆಲಸದ ಸಂದರ್ಭ ಕಚೇರಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸನ್ ರೈಸ್ ಕಾರ್ಪೋರೇಷನ್ ಕುಳಾಯಿ ಇಲ್ಲಿ ಉದ್ಯೋಗಿಯಾಗಿದ್ದ ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯ ಸುಶಾಂತ್ (26) ಎಂಬಾತ ಆನ್ ಲೈನ್ ಸಾಲದ ಹೊರೆಯಿಂದ ಅದನ್ನು ಪಾವತಿಸಲಾಗದೆ ಕೆಲಸದ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಯವಿಟ್ಟು ಕ್ಷಮಿಸಿ ನನಗೆ ಯಾರ ನಂಬಿಕೆಯನ್ನು ಉಳಿಸಲಾಗಲಿಲ್ಲ. ಹಣದ ವಿಷಯದಲ್ಲಿ ತೊಂದರೆಯಾಗಿದೆ. ಆನ್ ಲೈನ್ ಸಾಲದವರು ಕರೆ ಮಾಡಿದರೆ ನಿಧನನಾಗಿದ್ದಾನೆ ಎಂದು ತಿಳಿಸಿ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಶರಣಾಗಿದ್ದಾನೆ.

ದೊಡ್ಡನಗುಡ್ಡೆ : ಪಂಚ ಜುಮಾದಿ ದೈವಸ್ಥಾನದ ವಠಾರದ ಸ್ವಚ್ಛತಾ ಕಾರ್ಯಕ್ರಮ

Thumbnail
Posted On: 09 Jan 2022, 10:13 PM

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಉಡುಪಿ ಮಣಿಪಾಲ ವಲಯ, ಶಿವಳ್ಳಿ ಎ ಕಾರ್ಯಕ್ಷೇತ್ರ, ಪ್ರಜ್ಞಾ ಒಕ್ಕೂಟದ ವತಿಯಿಂದ ದೊಡ್ಡನಗುಡ್ಡೆ ಪಂಚ ಜುಮಾದಿ ದೈವಸ್ಥಾನದ ವಠಾರದಲ್ಲಿ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಪಂಚ ಜುಮಾದಿ ದೈವಸ್ಥಾನದ ಗುರಿಕಾರರು ನಿತಿನ್ ಪೂಜಾರಿ, ಹಾಗೂ ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ (ರಿ.) ಉಡುಪಿ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಹಾಗೂ ಪಂಚ ಜುಮಾದಿ ದೈವಸ್ಥಾನದ ಪ್ರಧಾನ ಅರ್ಚಕರಾದ ವಿನೋದ್ ಶೆಟ್ಟಿ ಹಾಗೂ ದೈವಸ್ಥಾನದ ಟ್ರಸ್ಟಿ ಸದಸ್ಯರಾದ ನಿತ್ಯಾನಂದ ಜೋಗಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಜ್ಯೋತಿ ಹರಿಣಾಕ್ಷಿ, ಸೇವಪ್ರತಿನಿಧಿ ಪ್ರೀತಿ ಉಪಸ್ಥಿತರಿದ್ದರು.

ಇನ್ನಂಜೆ : ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

Thumbnail
Posted On: 09 Jan 2022, 10:05 PM

ಕಾಪು : ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್, ಸರಕಾರಿ ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ, ಯುವತಿ ಮಂಡಲ (ರಿ.) ಇನ್ನಂಜೆ, ಬಿಲ್ಲವ ಸಂಘ (ರಿ.)ಇನ್ನಂಜೆ , ಜೆಸಿಐ ಶಂಕರಪುರ, ರಿಕ್ಷಾ ಚಾಲಕರು ಮತ್ತು ಮಾಲಕರು ಶಂಕರಪುರ, ಯುವ ಸೇನಾ ಮಡುಂಬು ಇವರ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವು ಇನ್ನಂಜೆಯ ದಾಸ ಭವನದಲ್ಲಿ ಜರಗಿತು. ಕಾರ್ಯಕ್ರಮವನ್ನು ರಾಘವೇಂದ್ರ ರಾವ್ ಎರ್ಮಾಳ್ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ಗೆಸ್ಟ್ ರಿಲೇಷನ್ ಮ್ಯಾನೇಜರ್ ರಾಘವೇಂದ್ರ ನಾಯಕ್ ಅಜೆಕಾರ್ ರಕ್ತದಾನದ ಮಹತ್ವ ಮತ್ತು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ಸೌಲಭ್ಯಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಸರಕಾರಿ ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ ಇದರ ಬ್ಲಡ್ ಬ್ಯಾಂಕ್ ಮೆಡಿಕಲ್ ಆಫೀಸರ್ ಡಾ.ವೀಣಾ ರಕ್ತದಾನದ ಬಗೆಗಿನ ತಪ್ಪು ಕಲ್ಪನೆಗಳ ಬಗ್ಗೆ ತಿಳಿಸಿದರು. ಯುವತಿ ಮಂಡಲದ ಗೌರವ ಸಲಹೆಗಾರರಾದ ಶ್ವೇತ ಎಲ್ ಶೆಟ್ಟಿ ಸಂದರ್ಭೋಚಿತವಾಗಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಸತೀಶ್ ಎನ್. ಪೂಜಾರಿ, ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ನ ಸೇಲ್ಸ್ ಮ್ಯಾನೇಜರ್ ಆಗಿರುವ ನಿತಿನ್ ಶೇಟ್, ಬಿಲ್ಲವ ಸಂಘ ಇನ್ನಂಜೆ ಅಧ್ಯಕ್ಷರಾದ ಸದಾಶಿವ ಪೂಜಾರಿ, ಶಂಕರಪುರ ರಿಕ್ಷಾ ಚಾಲಕರು ಮತ್ತು ಮಾಲಕರು ಸಂಘದ ಅಧ್ಯಕ್ಷರಾದ ಕರುಣಾಕರ ದೇವಾಡಿಗ, ಜೆಸಿಐ ಶಂಕರಪುರ ಜಾಸ್ಮಿನ್ ಅಧ್ಯಕ್ಷರಾದ ಜಗದೀಶ್ ಅಮೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಯುವತಿ ಮಂಡಲದ ಅಧ್ಯಕ್ಷರಾದ ಆಶಾ ನಾಯಕ್ ಸ್ವಾಗತಿಸಿ, ಸ್ಥಾಪಕಾಧ್ಯಕ್ಷರಾದ ಸುಮಲತಾ ಕಾರ್ಯಕ್ರಮ ನಿರೂಪಿಸಿ, ಲಕ್ಷ್ಮೀ ನಾಯಕ್ ವಂದಿಸಿದರು.

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಕ್ಯಾಂಪಸ್ ಸಂದರ್ಶನ

Thumbnail
Posted On: 08 Jan 2022, 07:35 PM

ಶಿರ್ವ: ಶಿರ್ವ ಸಂತ ಮೇರಿ ಕಾಲೇಜಿನಲ್ಲಿ ಜನವರಿ 13ರಂದು ಮಂಗಳೂರಿನ ಪ್ರತಿಷ್ಠಿತ ದಿಯಾ ಸಿಸ್ಟಮ್ ಸಂಸ್ಥೆ(ಗ್ಲೋಟಚ್ ಟೆಕ್ನಾಲಜೀಸ್)ಯು ನೇರ ನೇಮಕಾತಿ ಕ್ಯಾಂಪಸ್ ಸಂದರ್ಶನವನ್ನು ನಡೆಸಲು ಉದ್ದೇಶಿಸಿದೆ. ಈಗಾಗಲೇ ಬಿಸಿಎ, ಬಿಎಸ್ಸಿ (ಸಿ. ಎಸ್),ಬಿಇ( ಸಿವಿಲ್ ಮತ್ತು ಮೆಕಾನಿಕಲ್ ಹೊರತುಪಡಿಸಿ), ಬಿಕಾಂ( ಕಂಪ್ಯೂಟರ್ ಅಪ್ಲಿಕೇಶನ್), ಡಿಪ್ಲೋಮಾ( ಸಿ ಎಸ್),ಎಂಎಸ್ಸಿ, ಎಂಸಿಎ ಮುಗಿಸಿಕೊಂಡಿರುವ ಅಭ್ಯರ್ಥಿಗಳಿಗೆ ಪೂರ್ವಹ್ನ 9.00 ಗಂಟೆಗೆ ಕಾಲೇಜಿನ ಫಾ. ಹೆನ್ರಿ ಕ್ಯಾಸ್ಟಲಿನೊ ಸಭಾಂಗಣದಲ್ಲಿ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಆಧಾರ್ ಕಾರ್ಡ್, ಮೂಲ ಅಂಕಪಟ್ಟಿ, ಪದವಿ ಪ್ರಮಾಣ ಪತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7975230201ಗೆ ಸಂಪರ್ಕಿಸಬಹುದು ಮತ್ತು ಈ ಲಿಂಕಿನ ಮೂಲಕ CLICK HERE.. ನೋಂದಾಯಿಸಿಕೊಳ್ಳಬಹುದು ಎಂದು ಪ್ರಾಂಶುಪಾಲರು ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ದ.ಕ ಮತ್ತು ಉಡುಪಿ ಜಿಲ್ಲೆಯ ನ್ಯಾಯಬೆಲೆ ಅಂಗಡಿಯಲ್ಲಿ ಸಿಗಲಿದೆ ಕುಚ್ಚಲಕ್ಕಿ‌

Thumbnail
Posted On: 08 Jan 2022, 06:00 PM

ಮಂಗಳೂರು : ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೈತರು ಬೆಳೆಯುತ್ತಿರುವ, ಸ್ಥಳೀಯ ಕುಚ್ಚಲಕ್ಕಿ ಪ್ರಭೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ (MSP) ಖರೀದಿ ಮಾಡಿ ಪಡಿತರದ ಮೂಲಕ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ವಿತರಿಸಲು ಕೇಂದ್ರ ಸರಕಾರ ಅನುಮೋದನೆ ನೀಡಿದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕರು ಪಡಿತರದ ಮೂಲಕ ಕುಚ್ಚಲ್ಲಕ್ಕಿಯನ್ನು ವಿತರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳಲ್ಲಿ ಬೇಡಿಕೆಯನ್ನು ಸಲ್ಲಿಸಿದ್ದರು. ಈ ಕುರಿತಂತೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರು, ಕೇಂದ್ರದ ಸದರಿ ಇಲಾಖಾ ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದು ಮೇಲ್ಕಂಡ ಬೇಡಿಕೆಯನ್ನು ಅನುಮೋದಿಸುವಂತೆ ಕೋರಿದ್ದರು. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಮನವಿಯನ್ನು ಪರಿಗಣಿಸಿದ ಪಿಯೂಷ್ ಗೋಯಲ್ ಅವರು ಜನವರಿ 06ರಂದು ಕೇಂದ್ರ ಸಚಿವೆ, ಶೋಭಾ ಕರಂದ್ಲಾಜೆಯವರಿಗೆ ಪತ್ರ ಬರೆದು, ಮೇಲ್ಕಾಣಿಸಿದ ಕುಚ್ಚಲಕ್ಕಿ ಪ್ರಭೇಧಗಳನ್ನು MSP ಮೂಲಕ ಖರೀದಿ ಮಾಡಿ ಪಡಿತರದ ಮೂಲಕ ವಿತರಿಸಲು ರಾಜ್ಯ ಸರಕಾರಕ್ಕೆ ಅನುಮತಿ ನೀಡಿರುವುದಾಗಿ ತಿಳಿಸಿದ್ದಾರೆ. ಕೇಂದ್ರದ ಈ ಅನುಮತಿಯೊಂದಿಗೆ ಉಡುಪಿ-ದಕ್ಷಿಣ ಕನ್ನಡದ ರೈತರ ಕೃಷಿ ಉತ್ಪಾದನೆಗೆ ಇನ್ನು ಹೆಚ್ಚಿನ ಪ್ರೋತ್ಸಾಹ ಸಿಕ್ಕಿದಂತಾಗಿದೆ. ಉಡುಪಿ-ದಕ್ಷಿಣ ಕನ್ನಡ ಜಿಲ್ಲೆಯ ಸಾರ್ವಜನಿಕರ ಬೇಡಿಕೆಯಾದ ಪಡಿತರದಲ್ಲಿ ಕುಚ್ಚಲಕ್ಕಿ ವಿತರಿಸುವ ಬೇಡಿಕೆಗೆ ಪುಷ್ಟಿ ಸಿಕ್ಕಿದೆ. ಸ್ಥಳೀಯ ರೈತರ ಹಾಗೂ ಸಾರ್ವಜನಿಕರ ಬಹುಕಾಲದ ಬೇಡಿಕೆಯನ್ನು ಈಡೇರಿಸಿದಂತಾಗಿದೆ.

ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ, ಶಂಕರಪುರ : 36ನೇ ವರ್ಷದ ವಾರ್ಷಿಕ ಮಹಾಪೂಜೆ

Thumbnail
Posted On: 08 Jan 2022, 02:59 PM

ಕಾಪು : ಚಂದ್ರಹಾಸ ಗುರುಸ್ವಾಮಿಯವರ ಮಾರ್ಗದರ್ಶನದಲ್ಲಿ ಇಂದು ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ, ಶಂಕರಪುರದಲ್ಲಿ 36ನೇ ವರ್ಷದ ವಾರ್ಷಿಕ ಮಹಾಪೂಜೆಯು ಜರಗಿತು. ‌ ಇದರ ಪ್ರಯುಕ್ತ ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಅನ್ನಸಂತರ್ಪಣೆ ಹಾಗೂ ರಾತ್ರಿ ಗಂಟೆ 8.00ಕ್ಕೆ ಶಂಕರಪುರ ಅಯ್ಯಪ್ಪ ಶಿಬಿರದಲ್ಲಿ ನಡೆಯುವ ಪಡಿಪೂಜೆ ಮತ್ತು ಮಹಾಪೂಜೆ ಜರಗಲಿದೆ ಎಂದು ಶ್ರೀ ಅಯ್ಯಪ್ಪ ಭಕ್ತವೃಂದ ಶಂಕರಪುರ – ಮುಂಬಯಿ ಪ್ರಕಟನೆಯಲ್ಲಿ ತಿಳಿಸಿದರು.

ಅವರಾಲು : 11ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Thumbnail
Posted On: 08 Jan 2022, 12:44 PM

ಪಡುಬಿದ್ರಿ : ಫಲಿಮಾರು ವ್ಯಾಪ್ತಿಯ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅವರಾಲು, ಅಡ್ಕ ಇವರ ವತಿಯಿಂದ 11ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಜನವರಿ 14, ಶುಕ್ರವಾರ ಜರಗಲಿದೆ. ಅಂದು ಬೆಳಿಗ್ಗೆ 6.30ರಿಂದ ಸ್ಥಳ ಶುದ್ಧಿ, ಕಲಶ ಪ್ರತಿಷ್ಠೆ ಸಹಸ್ರ ನಾಮಾರ್ಚನೆ, ಗಣಹೋಮ, ಬೆಳಿಗ್ಗೆ 9ಕ್ಕೆ ಶ್ರೀ ಸತ್ಯನಾರಾಯಣ ಪೂಜೆ ಪ್ರಾರಂಭ ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಮಧ್ಯಾಹ್ನ 12.30 ರಿಂದ ದುರ್ಗಾದೇವಿ ಮಹಿಳಾ ಭಜನಾ ಮಂಡಳಿ ಇವರಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ 1ರಿಂದ ಸಾರ್ವಜನಿಕ ಅನ್ನಸಂತರ್ಪಣೆ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಹೆಜಮಾಡಿ : ಶ್ರೀ ಬ್ರಹ್ಮಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವಕ್ಕೆ ಶಾಸಕರ ಭೇಟಿ

Thumbnail
Posted On: 08 Jan 2022, 11:12 AM

ಹೆಜಮಾಡಿ : ಇಲ್ಲಿನ ಶ್ರೀ ಬ್ರಹ್ಮಬೈದರ್ಕಳ ಗರಡಿಯ ವಾರ್ಷಿಕ ನೇಮೋತ್ಸವಕ್ಕೆ ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಆಗಮಿಸಿ ದೈವದ ಗಂಧ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭ ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಾಣೇಶ್ ಹೆಜಮಾಡಿ, ಗರಡಿಯ ಆಡಳಿತ ಮಂಡಳಿಯ ಪ್ರಮುಖರು, ಊರ - ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಜನಪ್ರತಿನಿಧಿಗಳ ಮೌನ - ತುಳುನಾಡಿನ ದೈವಾರಾಧನೆಯ ಆಚರಣೆ, ನಂಬಿಕೆಯನ್ನು ಮುಗಿಸುವ ಹುನ್ನಾರವೇ ?

Thumbnail
Posted On: 07 Jan 2022, 10:41 PM

ಉಡುಪಿ : ಸರಕಾರದ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ಆದೇಶದಿಂದ ದೈವಾರಾಧಕರಿಗೆ ಸಮಸ್ಯೆಯಾಗಿದ್ದು ಇದನ್ನು ಕೂಡಲೇ ಪರಿಹರಿಸುವಂತೆ ಸರಕಾರ, ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳ ಗಮನ ಸೆಳೆಯುವ ನಿಟ್ಟಿನಲ್ಲಿ ಅಖಿಲ ಭಾರತ ದೈವಾರಾಧಕರ ಒಕ್ಕೂಟ ಉಡುಪಿ - ಮಂಗಳೂರು ಇವರ ವತಿಯಿಂದ ಪಾಂಗಾಳ ಗುಡ್ಡೆಗರಡಿಯಲ್ಲಿ ಸಮಾಲೋಚನಾ ಸಭೆ ಜರಗಿತು. ಈ ಸಂದರ್ಭ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಪಾಂಗಾಳ ಗುಡ್ಡೆ ಗರಡಿಮನೆ ಸುಧಾಕರ ಡಿ. ಅಮೀನ್ ದೈವಾರಾಧನೆ ಕ್ಷೇತ್ರವನ್ನು ಅವಲಂಭಿಸಿರುವ ಎಲ್ಲಾ ವರ್ಗದವರೂ ಕೊರೊನಾ‌ ಕಾರಣದಿಂದಾಗಿ ಎರಡು ವರ್ಷಗಳಿಂದ ಸಂಕಷ್ಟಕ್ಕೆ ಸಿಲುಕಿದ್ದು, ಈ‌ ಪರಿಸ್ಥಿತಿ ಇದೀಗ ಮೂರ‌ನೇ ವರ್ಷಕ್ಕೆ ಕಾಲಿಟ್ಟಿದೆ. ದೈವಾರಾಧನೆಯ ಎಲ್ಲಾ ಆಚರಣೆಗಳೂ ಹಿಂದಿನಂತೆಯೇ ನಡೆಯುವಂತಾಗಲು ಅವಕಾಶ ಮಾಡಿ ಕೊಡುವಂತೆ ಜಿಲ್ಲೆಯ ಎಲ್ಲಾ‌ ಜನಪ್ರತಿನಿಧಿಗಳ ಬೆಂಬಲ ಪಡೆದು, ಅಧಿಕಾರಿ ವರ್ಗ ಮತ್ತು ಸರಕಾರಕ್ಕೆ ನಮ್ಮ ಬೇಡಿಕೆಗಳ ಬಗ್ಗೆ ಮನವಿ ನೀಡಬೇಕಿದೆ ಎಂದರು. ಅಖಿಲ ಭಾರತ ದೈವಾರಾಧಕರ ಒಕ್ಕೂಟದ ಉಪಾಧ್ಯಕ್ಷ ಯೋಗಿಶ್ ಪೂಜಾರಿ, ಕುಕ್ಕೆಹಳ್ಳಿ ಕೊರಗಜ್ಜ ದೇವಸ್ಥಾನದ ಮುಖ್ಯಸ್ಥ ಕೃಷ್ಣ ಕುಲಾಲ್, ಕಾರ್ಕಳ ದೈವಾರಾಧಕರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ಮಾಳ, ಬೈರಂಪಳ್ಳಿ ಭೂತರಾಜ ದೇವಸ್ಥಾನದ ಮುಖ್ಯಸ್ಥ ಪ್ರವೀಣ್ ಶೆಟ್ಟಿ, ಹಿರಿಯಡಕ ಕಲ್ಕುಡ ದೈವಸ್ಥಾನದ ಮುಖ್ಯಸ್ಥ ಸುಧಾಕರ ಶೆಟ್ಟಿ ತಂಗಣ, ಹೆಬ್ರಿ ಘಟಕದ ಅಧ್ಯಕ್ಷ ಸುಕುಮಾರ್ ಪೂಜಾರಿ, ಕಾರ್ಕಳ ದೈವಾರಾಧಕರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ಮಾಳ, ದೊಡ್ಡಣ್ಣಗಯಡ್ಡೆ ಪಂಚ ಜುಮಾದಿ ದೇವಸ್ಥಾನದ ಗುರಿಕಾರ ನಿತಿನ್ ಪೂಜಾರಿ, ಪಾಣಾರ ಸಂಘದ ಜಿಲ್ಲಾಧ್ಯಕ್ಷ ಪಾಂಡು ಪಾಣಾರ, ಪಂಬದ ಸಮುದಾಯದ ಮುಖಂಡ ಮಾಧವ ಪಂಬದ, ನಲಿಕೆ ಸಮುದಾಯದ ಮುಖಂಡ ನಾರಾಯಣ ಪಾಣಾರ, ದೇವಾಡಿಗ ಸಮುದಾಯದ ಮುಖಂಡ ಉದಯ ಶೇರಿಗಾರ್ ಅಲೆವೂರು, ಪರವ ಸನುದಾಯದ ಮುಖಂಡ ನರಸಿಂಹ ಪರವ ಮೊದಲಾದವರು ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಉಡುಪಿ, ಕಾರ್ಕಳ, ಹೆಬ್ರಿ, ಕಾಪು, ಬ್ರಹ್ಮಾವರ ತಾಲೂಕಿನ ವಿವಿಧೆಡೆಗಳ ದೈವಾರಾಧಕ ಸಂಘಟನೆಯ ಪದಾಧಿಕಾರಿಗಳು, ದೈವಾರಾಧಕರು, ಸಮುದಾಯಗಳ ಮುಖಂಡರು ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು. ತುಳುನಾಡ ದೈವಾರಾಧಕರ ಸಂಘದ ಜಿಲ್ಲಾಧ್ಯಕ್ಷ ವಿನೋದ್ ಶೆಟ್ಟಿ ಸ್ವಾಗತಿಸಿ, ಪ್ರಸ್ತಾವನೆಗೈದು, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವೀಕೆಂಡ್ ಕಫ್ಯೂ೯: ಬಂಟಕಲ್ಲು ಅಯ್ಯಪ್ಪ ಶಿಬಿರದಲ್ಲಿ ಜರಗಲಿದ್ದ ಮಹಾಪೂಜೆ, ಅನ್ನಸಂತರ್ಪಣೆ, ಶನಿಕಥಾ ಪಾರಾಯಣವು ಸೋಮವಾರಕ್ಕೆ ಮುಂದೂಡಿಕೆ

Thumbnail
Posted On: 07 Jan 2022, 08:17 PM

ಕಾಪು : ಸಾರ್ವಜನಿಕ ಗಣೇಶೋತ್ಸವ ವೇದಿಕೆ, ಬಂಟಕಲ್ಲು ಇಲ್ಲಿನ ಅಯ್ಯಪ್ಪ ಶಿಬಿರದಲ್ಲಿ ಜನವರಿ 6 ಮತ್ತು 7ರಂದು ನಡೆಯುವ ಕಾರ್ಯಕ್ರಮಗಳು ಎಂದಿನಂತೆ ಜರಗಿದೆ. ಶನಿವಾರ ಮತ್ತು ಭಾನುವಾರ ವೀಕೆಂಡ್ ಕಫ್ಯೂ೯ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಿ, ಶನಿವಾರದ ಜರಗಲಿದ್ದ ಅಯ್ಯಪ್ಪಸ್ವಾಮಿ ಮಹಾಪೂಜೆ, ಅನ್ನಸಂತರ್ಪಣೆ ಮತ್ತು ಶನಿಕಥಾ ಪಾರಾಯಣವು ಜನವರಿ 10, ಸೋಮವಾರ ಮಧ್ಯಾಹ್ನ ನಡೆಯಲಿದೆ. ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಭಾಗವಹಿಸಿ, ಅಯ್ಯಪ್ಪ ಸ್ವಾಮಿಯ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.