Updated News From Kaup

ಕಾಪು ಶ್ರೀ ಹೊಸ ಮಾರಿಗುಡಿ : ಪ್ರತಿಷ್ಠಾ ಬ್ರಹ್ಮಲಕಶೋತ್ಸವಕ್ಕೆ ಚಾಲನೆ

Posted On: 25-02-2025 04:38PM

ಕಾಪು : ಸಂಪೂರ್ಣ ಶಿಲಾಮಯದೊಂದಿಗೆ ನಿರ್ಮಾಣಗೊಂಡ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಮಂಗಳವಾರ ಬೆಳಿಗ್ಗೆ ಪ್ರತಿಷ್ಠಾ ಬ್ರಹ್ಮಲಕಶೋತ್ಸವಕ್ಕೆ ಚಾಲನೆ ನೀಡಲಾಯಿತು.

ಶ್ರೀ ದೈವರಾಜ ಕೋರ್ದ್ದಬ್ಬು ದೈವಸ್ಥಾನ ಮೂಡುಕರೆ ಹೆಜಮಾಡಿ : ನೂತನ ಸಮಿತಿಯ ಪದಾಧಿಕಾರಿಗಳ ಆಯ್ಕೆ

Posted On: 24-02-2025 10:44PM

ಹೆಜಮಾಡಿ : ಶ್ರೀ ದೈವರಾಜ ಕೋರ್ದ್ದಬ್ಬು ದೈವಸ್ಥಾನ ಮೂಡುಕರೆ ಹೆಜಮಾಡಿ ಇದರ ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ಸುಧೀಶ್ ಜೆ ಶೆಟ್ಟಿ ಮಟ್ಟಿಮನೆ ಹೆಜಮಾಡಿ ಆಯ್ಕೆಯಾಗಿದ್ದಾರೆ.

ಶಿರ್ವ : ಮಣಿಪುರ ಕೂಡುರಸ್ತೆಯಲ್ಲಿ ವೈಜ್ಞಾನಿಕ ಮಾದರಿಯ ರೋಟರಿ ಸರ್ಕಲ್ ಉದ್ಘಾಟನೆ

Posted On: 24-02-2025 05:06PM

ಶಿರ್ವ : ಮಣಿಪುರ ರೋಟರಿ ಸಂಸ್ಥೆಯ ವತಿಯಿಂದ ಅಂತಾರಾಷ್ಟ್ರೀಯ ರೋಟರಿಯ 121ನೇ ಸಂಸ್ಥಾಪನಾ ದಿನಾಚರಣೆಯ ಪ್ರಯುಕ್ತ ಮಣಿಪುರ ಪೇಟೆಯಲ್ಲಿ ವೈಜ್ಞಾನಿಕ ಮಾದರಿಯಲ್ಲಿ ನಿರ್ಮಿಸಿದ ರೋಟರಿ ಶಾಂತಿ ವೃತ್ವನ್ನು ರೋಟರಿ ಅ. ಜಿಲ್ಲೆ 3182 ಇದರ ಜಿಲ್ಲಾ ಗವರ್ನರ್ ಸಿಎ.ದೇವ್‌ಆನಂದ್ ಉದ್ಘಾಟಸಿದರು. ಈ ಸಂದರ್ಭ ಅವರು ಮಾತನಾಡಿ, ರೋಟರಿಯ ಜಿಲ್ಲಾಯೋಜನೆ ರಸ್ತೆ ಸುರಕ್ಷಾ ಜಾಗೃತಿ ಹಾಗೂ ರೋಟರಿ ವರ್ಚಸ್ಸನ್ನು ವೃದ್ಧಿಸುವ ನಿಟ್ಟಿನಲ್ಲಿ ಕೈಗೊಂಡ ಅತ್ಯುತ್ತಮ ಕಾರ್ಯ ಇದಾಗಿದ್ದು, ಮೂರು ಪ್ರಮುಖ ರಸ್ತೆಗಳು ಕೂಡುವ ಈ ಭಾಗದಲ್ಲಿ ರಸ್ತೆಗೆ ಬೆಳಕು, ರಸ್ತೆ ಸೂಚನಾ ಫಲಕಗಳು ಹಾಗೂ ಸಿಸಿ ಕ್ಯಾಮರಾಗಳನ್ನು ಅಳವಡಿಸುವ ಮೂಲಕ ಸಾರ್ವಜನಿಕರಿಗೆ ಪ್ರಯೋಜನವಾಗುವ ಸ್ತುತ್ಯ ಕಾರ್ಯವನ್ನು ಮಾಡಿದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಫೆ.25 ರಿಂದ ಮಾ.5 : ಕಾಪುವಿನ ಅಮ್ಮನ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Posted On: 24-02-2025 04:41PM

ಕಾಪು : ಸಂಪೂರ್ಣ ಶಿಲಾಮಯವಾಗಿ ನಿರ್ಮಾಣಗೊಂಡಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆಬ್ರವರಿ 25 ರಿಂದ ಮಾರ್ಚ್ 5 ವರೆಗೆ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಜರಗಲಿದ್ದು, ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಡಾ.ಕೆ‌. ಪ್ರಕಾಶ್ ಶೆಟ್ಟಿ ಹೇಳಿದರು. ಅವರು ಕಾಪುವಿನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಪ್ರತಿನಿತ್ಯ ಬೆಳಿಗ್ಗೆ ಕ್ಷೇತ್ರದ ತಂತಿವರ್ಯರು, ಅರ್ಚಕರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು, ಅನ್ನಸಂತರ್ಪಣೆ, ಸಂಜೆ ಸಾಂಸ್ಕೃತಿಕ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.

ಜಯ ಪೂಜಾರಿ ಮತ್ತು ಸಂಕ್ರಿ ಜೆ. ಪೂಜಾರಿ ದಂಪತಿ ವೈವಾಹಿಕ ಜೀವನದ ಸುವರ್ಣ ಮಹೋತ್ಸವ

Posted On: 24-02-2025 07:39AM

ಉಡುಪಿ : ಹೋಟೆಲ್ ಶ್ರೀ ಜಯದುರ್ಗಾ ಬೋರ್ಡಿಂಗ್ ಮತ್ತು ಲಾಡ್ಜಿಂಗ್ ಮಾಲಕ ಜಯ ಪೂಜಾರಿ ಮತ್ತು ಸಂಕ್ರಿ ಜೆ. ಪೂಜಾರಿ ದಂಪತಿ ವೈವಾಹಿಕ ಜೀವನದ ಸುವರ್ಣ ಮಹೋತ್ಸವವನ್ನು ಸ್ಪಂದನ ದಿವ್ಯಾಂಗರ ಸಂರಕ್ಷಣ ಸಂಸ್ಥೆಯಲ್ಲಿ ನಡೆಯಿತು.

ಕಾಪು : ಪರಿವಾರ ನಾಯಕ ಸಮಾಜದ ವತಿಯಿಂದ ಹಸಿರು ಹೊರೆಕಾಣಿಕೆ

Posted On: 24-02-2025 07:35AM

ಕಾಪು : ಕಾಪುವಿನ ಅಮ್ಮನ ಬ್ರಹ್ಮಕಲಶೋತ್ಸಕ್ಕೆ ಕಾಪು ತಾಲೂಕಿನ ಪರಿವಾರ ನಾಯಕ ಸಮಾಜದ ವತಿಯಿಂದ ಪಯ್ಯಾರು ಕಾಂತನಾಧಿಕಾರಿ ಧೂಮಾವತಿ ಧೈವಸ್ಥಾನದಿಂದ ಹಸಿರು ಹೊರೆಕಾಣಿಕೆಯನ್ನು ಶ್ರೀ ದೇವಳಕ್ಕೆ ಸಮರ್ಪಿಸಲಾಯಿತು.

ಕಾಪು ಶ್ರೀ ಹೊಸ ಮಾರಿಗುಡಿ : ಉತ್ತರ ವಾಹಿನಿ ಹೊರೆಕಾಣಿಕೆ ಸಮರ್ಪಣೆ 

Posted On: 24-02-2025 07:26AM

ಕಾಪು : ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಫೆ. 25 ರಿಂದ ಮಾರ್ಚ್ 5ರವರೆಗೆ ಜರಗಲಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಉಡುಪಿ ಜಿಲ್ಲೆಯ ವಿವಿಧ ಭಾಗಗಳಿಂದ ಸಮರ್ಪಿಸಿದ ಉತ್ತರವಾಹಿನಿ ಹೊರೆಕಾಣಿಕೆ ಮೆರವಣಿಗೆಗೆ ರವಿವಾರ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಡಾ.ಎಮ್.ಎನ್.ರಾಜೇಂದ್ರ ಕುಮಾರ್ ಅವರು  ಪಾಂಗಾಳ ಸೇತುವೆ ಬಳಿ ಚಾಲನೆ ನೀಡಿದರು.

ಬೆಳ್ಳೆ ಗ್ರಾಮ ಪಂಚಾಯತಿಯಲ್ಲಿ ರೋಜ್ ಗಾರ್ ದಿನಾಚರಣೆ

Posted On: 21-02-2025 07:51PM

ಶಿರ್ವ : ಬೆಳ್ಳೆ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರೋಜ್ ಗಾರ್ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಶ್ರೀನಿವಾಸ ರಾವ್ ಮುಖ್ಯ ಅತಿಥಿಯಾಗಿ ಮಾತನಾಡಿ ಗ್ರಾಮ ಪಂಚಾಯತ್ ಜೊತೆಗೆ ಸಮುದಾಯ ಸಂಘಟಿತವಾಗಿ ಭಾಗಿಯಾದರೆ ಉದ್ಯೋಗ ಖಾತರಿ ಯೋಜನೆಯ ಮುಖಾಂತರ ಸಾಕಷ್ಟು ವೈಯಕ್ತಿಕ ಮತ್ತು ಸಮುದಾಯದ ಅಭಿವೃದ್ಧಿಯನ್ನು ಮಾಡಬಹುದೆಂದು ಮತ್ತು ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳು ಪ್ರತೀ ಗ್ರಾಮ ಮಟ್ಟದಲ್ಲಿ ನಡೆದಾಗ ಅಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಸಮುದಾಯದೊಂದಿಗೆ ಉತ್ತಮ ಬಾಂಧವ್ಯಗಳು ಬೆಸೆಯುತ್ತವೆ ಎಂದು ತಿಳಿಸಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವರವರು ಮಾತನಾಡಿ ಗ್ರಾಮ ಪಂಚಾಯತ್ ಆಡಳಿತ ಮತ್ತು ಸಿಬ್ಬಂದಿ ಉತ್ತಮ ಬಾಂಧವ್ಯದಿಂದ ಕರ್ತವ್ಯ ನಿರ್ವಹಿಸುತ್ತಿದ್ದು, ಗ್ರಾಮ ಪಂಚಾಯತ್ ಉತ್ತಮ ಪ್ರಗತಿ ಸಾಧಿಸುತ್ತಿದೆ ಎಂದು ಹೇಳಿದರು.

ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಸರ್ವೇಶ್ ಭಟ್ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Posted On: 21-02-2025 10:39AM

ಉಡುಪಿ : ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ, ಮೈಸೂರು ನಡೆಸಿದ ಭರತನಾಟ್ಯ ವಿದ್ವತ್ ಪೂರ್ವ ಪರೀಕ್ಷೆಯಲ್ಲಿ ಸರ್ವೇಶ್ ಭಟ್ ಶೇ.83.8% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ಭರತನಾಟ್ಯ ಅಂತಿಮ ವಿದ್ವತ್ ಪರೀಕ್ಷೆಯಲ್ಲಿ ಯಶಸ್ವಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Posted On: 21-02-2025 10:36AM

ಉಡುಪಿ : ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾನಿಲಯ, ಮೈಸೂರು ನಡೆಸಿದ ಭರತನಾಟ್ಯ ಅಂತಿಮ ವಿದ್ವತ್ ಪರೀಕ್ಷೆಯಲ್ಲಿ ಕು.ಯಶಸ್ವಿ ಶೇ.82.4 ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.