Updated News From Kaup

ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ನಟ ಪುನೀತ್ ರಾಜ್‌ಕುಮಾರ್‌ ಗೆ ನುಡಿನಮನ

Posted On: 22-11-2021 12:40PM

ಕಟಪಾಡಿ : ಇಲ್ಲಿನ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಇಂದು ಬೆಳಗ್ಗೆ ಕ್ಷೇತ್ರಾಡಳಿತ ಮಂಡಳಿಯ ವತಿಯಿಂದ ಇತ್ತೀಚೆಗೆ ಅಗಲಿರುವ ನಟ ಪುನೀತ್ ರಾಜ್‌ಕುಮಾರ್‌ ಅವರಿಗೆ ನುಡಿನಮನ ಕಾರ್ಯಕ್ರಮ ಜರಗಿತು.

ಶ್ರೀ ಧೂಮಾವತಿ ದೈವಸ್ಥಾನ, ಅವರಾಲು ಮಟ್ಟು 4ನೇ ವರ್ಷದ ವಾರ್ಷಿಕ ಭಜನಾ ಮಂಗಲೋತ್ಸವ

Posted On: 21-11-2021 06:43PM

ಪಡುಬಿದ್ರಿ : ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಶ್ರೀ ಧೂಮಾವತಿ ದೈವಸ್ಥಾನ, ಅವರಾಲು ಮಟ್ಟು ಇಲ್ಲಿನ 4ನೇ ವರ್ಷದ ವಾರ್ಷಿಕ ಭಜನಾ ಮಂಗಲೋತ್ಸವಕ್ಕೆ ಅವರಾಲು ಕಂಕಣಗುತ್ತು ಗುತ್ತಿನಾರ್‌ ಕೃಷ್ಣ ಶೆಟ್ಟಿ ಜ್ಯೋತಿ ಬೆಳಗುವಿಕೆಯ ಮೂಲಕ ಚಾಲನೆ ನೀಡಿದರು.

ಲಸಿಕಾ ಮಿತ್ರರ ಮೂಲಕ ಜಿಲ್ಲೆಯಲ್ಲಿ ಶೇ.100 ಲಸಿಕೆ ನೀಡುವ ಗುರಿ

Posted On: 21-11-2021 06:29PM

ಉಡುಪಿ : ಜಿಲ್ಲೆಯಲ್ಲಿ 18ರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲು 9,99,000 ಗುರಿ ನಿಗಧಿಪಡಿಸಿದ್ದು, ಇದುವರೆಗೆ 1ನೇ ಡೋಸ್ ಲಸಿಕೆಯನ್ನು 9,24,639 (92.56%) ಜನರಿಗೆ ನೀಡಲಾಗಿದೆ ಹಾಗೂ ಇವರಲ್ಲಿ ಈಗಾಗಲೇ 6,11,569 (61.22%) ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಕೋವಿಡ್ ಸಂಭಾವ್ಯ 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಪರಿಣಾಮ ಉಂಟಾಗುವ ಸಾಧ್ಯತೆ ಇದ್ದು, 18 ರ್ಷ ಮೇಲ್ಪಟ್ಟವರಲ್ಲಿ ಲಸಿಕೆ ಪಡೆಯದವರಿಗೆ ಕೋವಿಡ್ ಕಾಯಿಲೆ ಬರುವ ಸಾಧ್ಯತೆ ಹೆಚ್ಚಾಗಿದ್ದು ಎರಡನ್ನೂ ತಡೆಗಟ್ಟಲು 18 ರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಉದ್ದೇಶದಿಂದ ಲಸಿಕಾ ಮಿತ್ರರು ನವೆಂಬರ್ 22 ರಿಂದ 30 ರವರಗೆ ಜಿಲ್ಲೆಯ ಪ್ರತೀ ಮನೆಗಳನ್ನು ಭೇಟಿ ನೀಡುವ ಮೂಲಕ ,ಲಸಿಕೆ ಪಡೆದಿರುವ ಮತ್ತು ಪಡೆಯದಿರುವವರ ಬಗ್ಗೆ ಪರಿಶೀಲನೆ ನಡೆಸಲಿದ್ದು,ಲಸಿಕೆ ಪಡೆಯದವರಿಗೆ ಲಸಿಕೆ ನೀಡುವುದರ ಮೂಲಕ ಶೇ.100 ಗುರಿ ಸಾಧಿಸಲು ಯೋಜನೆ ರೂಪಿಸಿದೆ.

ಎಲ್ಲೂರು : ಚಿಣ್ಣರೇ ಉದ್ಘಾಟಿಸಿದ ಚಿಣ್ಣರ ಕಲರವ

Posted On: 21-11-2021 01:56PM

ಕಾಪು : ಎಲ್ಲೂರು ಗ್ರಾಮದ ಕುಂಜೂರು ಶ್ರೀ ದುರ್ಗಾ ದೇವಸ್ಥಾದಲ್ಲಿ ಸ್ಥಳೀಯ ದುರ್ಗಾ ಮಿತ್ರ ಮಂಡಳಿ , ದುರ್ಗಾ ಸೇವಾ ಸಮಿತಿಯ ಆಶ್ರಯದಲ್ಲಿ ಚಿಣ್ಣರಿಗಾಗಿ ಸಂಯೋಜಿಸಲ್ಪಟ್ಟ 'ಚಿಣ್ಣರ ಕಲರವ' ಕಾರ್ಯಕ್ರಮವನ್ನು ಚಿಣ್ಣರೇ ಉದ್ಘಾಟಿಸಿದರು.

ರೋಟರಿ ಶಂಕರಪುರಕ್ಕೆ ರೋಟರಿ ಜಿಲ್ಲೆ 3182 ರ ಜಿಲ್ಲಾ ಗವರ್ನರ್ ಭೇಟಿ

Posted On: 21-11-2021 12:40PM

ಕಟಪಾಡಿ : ರೋಟರಿ ಶಂಕರಪುರಕ್ಕೆ ರೋಟರಿ ಜಿಲ್ಲೆ 3182 ರ ಜಿಲ್ಲಾ ಗವರ್ನರ್ ಎಮ್ ಜಿ ರಾಮಚಂದ್ರ ಮೂರ್ತಿ ಇವರು ಅಧಿಕೃತ ಭೇಟಿ ನೀಡಿ ಹಲವಾರು ಸಮಾಜ ಮುಖಿ ಕಾರ್ಯಕ್ರಮವನ್ನು ವೀಕ್ಷಿಸಿ ಉದ್ಘಾಟಿಸಿದರು.

ಉಡುಪಿ ಜಿಲ್ಲಾ ಯುವ ಜನತಾದಳದ ಅಧ್ಯಕ್ಷರಾಗಿ ಸಂಜಯ್ ಕುಮಾರ್ ಆಯ್ಕೆ.

Posted On: 20-11-2021 10:42PM

ಉಡುಪಿ : ಜನತಾದಳ( ಜಾತ್ಯತೀತ) ಉಡುಪಿ ಜಿಲ್ಲಾ ಯುವ ಜನತಾದಳದ ಅಧ್ಯಕ್ಷರನ್ನಾಗಿ ಸಂಜಯ ಕುಮಾರ್ ರವರನ್ನು ಜಿಲ್ಲಾಧ್ಯಕ್ಷರಾದ ಯೋಗಿಶ್ ವಿ ಶೆಟ್ಟಿಯವರು ನೇಮಕ ಮಾಡಿರುತ್ತಾರೆ.

ಮೂಲಿಕೆ ವೆಂಕಣ್ಣ ಕವಿ ,ಫಣಿಯಪ್ಪಯ್ಯ ಅವರ ಯಕ್ಷಗಾನ ಪ್ರಸಂಗಗಳ ಬಿಡುಗಡೆ

Posted On: 20-11-2021 03:18PM

ಮೂಲ್ಕಿ : ಇಲ್ಲಿಯ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶುಕ್ರವಾರ ಶಿರೂರಿನ ಫಣಿಗಿರಿ ಪ್ರತಿಷ್ಠಾನದ ಉದ್ಘಾಟನೆ, ಮೂಲಿಕೆಯ ವೆಂಕಣ್ಣ ಕವಿ ವಿರಚಿತ 'ಮಾನಸ ಚರಿತ್ರೆ' ಹಾಗೂ ಶಿರೂರು ಫಣಿಯಪ್ಪಯ್ಯ ವಿರಚಿತ 'ವಾಜಿಗ್ರಹಣ ಅಥವಾ ಯೌವನಾಶ್ವ ಕಾಳಗ' ಯಕ್ಷಗಾನ ಪ್ರಸಂಗಗಳ ಬಿಡುಗಡೆ ನೆರವೇರಿತು. ಯಕ್ಷಗಾನ ವಿದ್ವಾಂಸ ,ಸಾಹಿತಿ ,ಛಾಂದಸ, ದಾಸಸಾಹಿತ್ಯದ ಬಗ್ಗೆ ಅಧ್ಯಯನ ನಡೆಸಿರುವ ,ಯಕ್ಷಗಾನ ಅಷ್ಣಾವಧಾನಿ , ಬಹುಶ್ರುತ ವಿದ್ವಾಂಸ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ ಅವರು ಮೂಲ್ಕಿಯ ವೆಂಕಟರಮಣ ದೇವಸ್ಥಾನದಲ್ಲಿದ್ದು ಮೂಲಿಕೆಯ ವೆಂಕಣ್ಣಕವಿ(೧೭೫೦ - ೧೮೩೦)ರಚಿಸಿದ್ದ 'ಮಾನಸ ಚರಿತ್ರೆ' ಯಕ್ಷಗಾನ ಪ್ರಸಂಗ ಪಠ್ಯವನ್ನು ತಾಡವಾಲೆ ಹಾಗೂ ಕೈಬರಹದಲ್ಲಿದ್ದುದನ್ನು ಸ್ವೀಕರಿಸಿ ಶುದ್ಧಪ್ರತಿಯಾಗಿ ಸಂಸ್ಕರಿಸಿ ಸಂಪಾದಿಸಿದ್ದರು.ಮೂಲ ತಾಳವಾಡೆ ಹಾಗೂ‌ ಕೈಬರಹ ಪ್ರತಿಗಳು ಶಿರೂರಿನ ಫಣಿಯಪ್ಪಯ್ಯ ಅವರ ಮನೆಯ ಗ್ರಂಥಭಂಡಾರದಿಂದ ಲಭಿಸಿತ್ತು.

ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘ ಪಡು ಕುತ್ಯಾರು : ವಾರ್ಷಿಕ ಮಹೋತ್ಸವ ಸಂಪನ್ನ

Posted On: 20-11-2021 02:14PM

ಕಾಪು : ಉಡುಪಿ ಜಿಲ್ಲೆಯ ಕಾಪು ತಾಲೂಕು, ಪಡುಕುತ್ಯಾರು ಗ್ರಾಮದ ಶ್ರೀ ದುರ್ಗಾಮಂದಿರದಲ್ಲಿ ಶುಕ್ರವಾರ, ವಾರ್ಷಿಕ ಮಹೋತ್ಸವ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆಯು ಪರಮಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ದಿವ್ಯ ಅನುಗ್ರಹದೊಂದಿಗೆ ಜರಗಿತು.

ಕೋವಿಡ್ ಅವಧಿಯಲ್ಲಿ ಮಕ್ಕಳ ಮೇಲಿನ ದುಷ್ಪರಿಣಾಮಗಳಿಗೆ ಸೂಕ್ತ ನೆರವು : ನ್ಯಾ.ಶರ್ಮಿಳಾ

Posted On: 19-11-2021 10:04PM

ಉಡುಪಿ : ಕೋವಿಡ್-19 ಅವಧಿಯಲ್ಲಿ ಮಕ್ಕಳ ಮೇಲಾಗಿರುವ ವಿವಿಧ ದುಷ್ಪರಿಣಾಮಗಳ ಕುರಿತು, ಮಕ್ಕಳ ಮೂಲಕವೇ ತಿಳಿದು, ಅವುಗಳಿಗೆ ಸೂಕ್ತ ನೆರವು ಹಾಗೂ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಹೇಳಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಯುನಿಸೆಫ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ರಾಜ್ಯ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ, ಕೋವಿಡ್-19 ಅವಧಿಯಲ್ಲಿ ಮಕ್ಕಳ ಮೇಲಾಗಿರುವ ದುಷ್ಪರಿಣಾಮಗಳ ಕುರಿತ ಮಕ್ಕಳ ಸಾರ್ವಜನಿಕ ಅಹವಾಲು ವಿಚಾರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಜಿಲ್ಲಾಧಿಕಾರಿಗಳಿಂದ ಐಕ್ಯತಾ ಪ್ರಮಾಣ ವಚನ ಬೋಧನೆ

Posted On: 19-11-2021 09:57PM

ಉಡುಪಿ : ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ಎಲ್ಲಾ ಅಧಿಕಾರಿ ಸಿಬ್ಬಂದಿಗಳಿಗೆ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನ ಬೋಧಿಸಿದರು.